Pramila Jayapal | ಭಾರತಕ್ಕೆ ವಾಪಸ್ ಹೋಗಿ! ಇಂಡಿಯನ್ ಅಮೆರಿಕನ್ ಮಹಿಳಾ ಸಂಸದೆಗೆ ಧಮ್ಕಿ! - Vistara News

ಪ್ರಮುಖ ಸುದ್ದಿ

Pramila Jayapal | ಭಾರತಕ್ಕೆ ವಾಪಸ್ ಹೋಗಿ! ಇಂಡಿಯನ್ ಅಮೆರಿಕನ್ ಮಹಿಳಾ ಸಂಸದೆಗೆ ಧಮ್ಕಿ!

ಅಮೆರಿಕದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದವರ ವಿರುದ್ಧ ದ್ವೇಷ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಂಗ್ರೆಸ್ ಸದಸ್ಯ ಪ್ರಮೀಳಾ ಜಯಪಾಲ್ (Pramila Jayapal)ಅವರಿಗೆ ಭಾರತಕ್ಕೆ ಹೋಗಿ ಎಂದು ಧಮ್ಕಿ ಹಾಕಲಾಗಿದೆ.

VISTARANEWS.COM


on

Pramila Jaypal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ‘ಪಾಕಿಸ್ತಾನಕ್ಕೆ ಹೋಗಿ…..’ ಎಂದು ಕೆಲವರು ಭಾರತದಲ್ಲಿ ಆಗಾಗ ಹೇಳುವುದನ್ನು ನೀವು ಕೇಳಿಯೇ ಇರುತ್ತೀರಿ! ಈ ಇಂಥದ್ದೇ ದ್ವೇಷದ ಮಾತುಗಳ ಟ್ರೆಂಡ್ ಅಮೆರಿಕದಲ್ಲಿ ಶುರುವಾಗಿದೆ. ಇಂಡಿಯನ್ ಅಮೆರಿಕನ್ ಮಹಿಳಾ ಸಂಸದೆ ಪ್ರಮೀಳಾ ಜಯಪಾಲ್(Pramila Jayapal) ಅವರಿಗೆ ಅಲ್ಲಿನ ಕೆಲವರು ಫೋನ್ ಮಾಡಿ, ಭಾರತಕ್ಕೆ ಹೊರಟು ಹೋಗಿ ಎಂದು ಬೆದರಿಕೆ ಹಾಕಿದ್ದಾರೆ! ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದವರ ವಿರುದ್ಧ ಈ ರೀತಿಯ ದ್ವೇಷದ ಪ್ರಕರಣಗಳು ಹೆಚ್ಚಾಗುತ್ತಿವೆ!

ಇಂಡಿಯನ್-ಅಮೆರಿಕನ್ ಕಾಂಗ್ರೆಸ್‌ವುಮನ್ ಪ್ರಮೀಳಾ ಜಯಪಾಲ್ ಅವರಿಗೆ ಭಾರತಕ್ಕೆ ಹೋಗಿ ಎಂದು ಧಮ್ಕಿ ಹಾಕಲಾಗಿದೆ. ಚೆನ್ನೈ ಮೂಲದ ಪ್ರಮೀಳಾ ಅವರು ಅಮೆರಿಕದ ಕಾಂಗ್ರೆಸ್‌ನ ಸದಸ್ಯರಾಗಿದ್ದಾರೆ. ಫೋನ್ ಕರೆ ಮಾಡಿದ ವ್ಯಕ್ತಿಯೊಬ್ಬ, ನಿಮ್ಮ ದೇಶಕ್ಕೆ ವಾಪಸ್ ಹೋಗಿ ಎಂದು ಆವಾಜ್ ಹಾಕಿದ್ದಾನೆ. ಒಟ್ಟು ಈ ರೀತಿಯ ಐದು ಆಡಿಯೋ ಟೇಪ್‌ಗಳಿವೆ.

ಎಲ್ಲ ಮೆಸೇಜ್‌ಗಳಲ್ಲಿ ಅಶ್ಲೀಲ ಮತ್ತು ನಿಂದನೆಯ ಪದಗಳನ್ನು ಬಳಸಲಾಗಿದೆ. ಒಂದು ಆಡಿಯೋ ಮೆಸೇಜ್‌ನಲ್ಲಿ ಭಾರತಕ್ಕೆ ಹೊರಟು ಹೋಗುವಂತೆ ಹೇಳಿದ್ದಾನೆ. 55 ವರ್ಷದ ಜಯಪಾಲ್ ಅವರು, ಅಮೆರಿಕದ ಜನಪ್ರತಿನಿಧಿಗಳ ಸಭೆಯಲ್ಲಿ ಸಿಯಟಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಇದೇ ರೀತಿಯ ಘಟನೆ ಈ ಹಿಂದೆಯೂ ಜಯಪಾಲ್ ಅವರು ಎದುರಿಸಿದ್ದಾರೆ. ಪಿಸ್ತೂಲ್ ಹಿಡಿದುಕೊಂಡಿದ್ದ ವ್ಯಕ್ತಿಯೊಬ್ಬ ಜಯಪಾಲ್ ಮನೆ ಎದುರು ಬಂದು ಕೂಗಾಡಿದ್ದ, ಆಗ ಪೊಲೀಸರು ಈ ವ್ಯಕ್ತಿಯನ್ನು ಬಂಧಿಸಿ ಆತನನ್ನು ಬ್ರೆಟ್ ಫಾರ್ಸೆಲ್ ಎಂದು ಗುರುತಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಜನರ ವಿರುದ್ಧ ಅಪರಾಧ ಪ್ರಕರಣಗಳು ಅಮೆರಿಕದಲ್ಲಿ ಹೆಚ್ಚುತ್ತಿವೆ. ಸೆಪ್ಟೆಂಬರ್ 1ರಂದು ಇಂಡಿಯನ್-ಅಮೆರಿಕನ್ ವ್ಯಕ್ತಿಯೊಬ್ಬನಿಗೆ ಕ್ಯಾಲಿಫೋರ್ನಿಯಾದಲ್ಲಿ ವ್ಯಕ್ತಿಯೊಬ್ಬ ಡರ್ಟಿ ಹಿಂದೂ ಮತ್ತು ಅಸಹ್ಯಕರ ನಾಯಿ ಎಂದು ಜರೆದಿದ್ದು ಸುದ್ದಿಯಾಗಿತ್ತು. ಆಗಸ್ಟ್ 26ರಂದು ಇಂಥದ್ದೇ ಘಟನೆ ನಡೆದ ಬಗ್ಗೆ ವರದಿಯಾಗಿತ್ತು.

ಇದನ್ನೂ ಓದಿ | Vedant Patel | ಭಾರತೀಯ ಮೂಲದ ವೇದಾಂತ್ ಪಟೇಲ್ ಸಾಧನೆಗೆ ಮತ್ತೊಂದು ಗರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

Pralhad Joshi: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್​​ಗೆ ಹೋಗೋ ಅವಶ್ಯಕತೆಯಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ ಅಷ್ಟೇ ಎಂದು ಜೋಶಿ ಆರೋಪಿಸಿದರು.

VISTARANEWS.COM


on

pralhad Joshi
Koo

ಹುಬ್ಬಳ್ಳಿ: ರಾಜ್ಯಕ್ಕೆ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಹಿಂದಿನ ಯುಪಿಎ ಅವಧಿಗಿಂತ ಶೇಕಡಾ 40ರಷ್ಟು ಹೆಚ್ಚುವರಿ ಅನುದಾನ ನೀಡಿದೆ. ಹಾಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಶೇ.51ರಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್​​ಗೆ ಹೋಗೋ ಅವಶ್ಯಕತೆಯಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ ಅಷ್ಟೇ ಎಂದು ಜೋಶಿ ಆರೋಪಿಸಿದರು.

ಎನ್​ಡಿಎ ಅವಧಿಯಲ್ಲಿ ಶೇಕಡಾ 51ರಷ್ಟು ಅನುದಾನ

ಎನ್​​ಡಿಎ ಅವಧಿಯ 2014ರಿಂದ 23ರವರೆಗೆ ಮೋದಿ ಸರ್ಕಾರ ರಾಜ್ಯಕ್ಕೆ 30,951 ಕೋಟಿ ಬರ ಪರಿಹಾರ ಕೊಟ್ಟಿದೆ. ಎನ್​​ಡಿಆರ್​ಎಫ್​ 11482 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ತಿಳಿಸಿದರು. ಯುಪಿಎ ಅವಧಿ 2009 ರಿಂದ 2013ರವರೆಗೆ 15,541 ಕೋಟಿ ಕೊಟ್ಟಿದ್ದರು. ಒಟ್ಟು 44638 ಕೋಟಿ ಕೇಳಿದ್ದರೆ, ಎನ್​​ಡಿಆರ್​ಎಫ್​ನಲ್ಲಿ 3500 ಕೋಟಿ ರೂ. ಬಿಡುಗಡೆ ಮಾಡಿದ್ದರು ಎಂದರು.

ಯುಪಿಎ ಅವಧಿಯಲ್ಲಿ ಕೇವಲ 10 ರಿಂದ 11 ಪರ್ಸೆಂಟ್ ಅನುದಾನ ಬಿಡುಗಡೆ ಆಗಿದ್ದರೆ, ನಮ್ಮ NDA ಕಾಲದಲ್ಲಿ 51 ಪರ್ಸೆಂಟ್ ಬರ ಪರಿಹಾರ ನೀಡಿದ್ದೇವೆ ಎಂದು ಸಚಿವ ಪ್ರಲ್ಹಾದ ಜೋಶಿ ವಿವರಿಸಿದರು.

ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ?

ಶಿರಸಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ಮೋದಿ ರಿಎಂಟ್ರಿ (Modi in Karnataka) ಕೊಟ್ಟಿದ್ದಾರೆ. ಈಗಾಗಲೇ ಬೆಳಗಾವಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿ ಬೃಹತ್‌ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶಕ್ಕೆ ಸಂಬಂಧಪಟ್ಟಂತೆ ಪೊಲೀಸರ ಮೇಲೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗದಂತೆ ತಡೆಯಲು ರಾಜ್ಯ ಸರ್ಕಾರ ನಿಮಗೆ ನಿರ್ದೇಶನ ಕೊಟ್ಟಿದೆಯೇ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಶಿರಸಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ವಿಐಪಿ ಗೇಟ್ ಮುಖಾಂತರ ವೇದಿಕೆಯತ್ತ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು ಆಗಮಿಸುತ್ತಿದ್ದರು. ಈ ವೇಳೆ ಭದ್ರತೆ ತಪಾಸಣೆ ಹಿನ್ನೆಲೆಯಲ್ಲಿ ಕೆಲವರು ಪೊಲೀಸರು ತಡೆದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಗೇರಿ, ತಪಾಸಣೆ ಹೆಸರಲ್ಲಿ ಜನರನ್ನು ಏಕೆ ತಡಿಯುತ್ತಿದ್ದೀರಿ? ಕಾರ್ಯಕ್ರಮ ಯಶಸ್ವಿಯಾಗಬಾರದು ಎಂದು ರಾಜ್ಯ ಸರ್ಕಾರ ಹೇಳಿದೆಯಾ ಎಂದು ತರಾಟೆಗೆ ತಗೆದುಕೊಂಡರು.

ಬಳಿಕ ಪೊಲೀಸರಿಗೆ ಬ್ಯಾರಿಕೇಡ್ ಸರಿಸಲು ಹೇಳಿ ಜನರನ್ನು ಒಳಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಕಳುಹಿಸಿದರು. ಜನರನ್ನು ವೇದಿಕೆ ಮುಂದೆ ಕಳುಹಿಸಿದ ಬಳಿಕ ತಾವು ವೇದಿಕೆಗೆ ಬಂದರು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

Continue Reading

Lok Sabha Election 2024

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

If Congress comes to power all your assets will belong to Government says PM Narendra Modi
Koo

ಬೆಳಗಾವಿ: ಎಲ್ಲಿಯವರೆಗೆ ನಿಮ್ಮ ನರೇಂದ್ರ ಮೋದಿ (PM Narendra Modi) ಬದುಕಿರುತ್ತಾರೋ ಅಲ್ಲಿಯವರೆಗೂ ಕಾಂಗ್ರೆಸ್‌ ಕುಕೃತ್ಯಕ್ಕೆ ಅವಕಾಶ ಕೊಡಲ್ಲ. ನಿಮ್ಮ ಮಂಗಳಸೂತ್ರ, ನಿಮ್ಮ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕೊಡಲ್ಲ. ಪೂರ್ವಜರ ಆಸ್ತಿಗಳಿಗೆ ತೆರಿಗೆ (Tax on ancestral properties) ಹಾಕುತ್ತೇವೆ, ಕಾನೂನು ತರುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಕೆಡುತ್ತದೆ. ನಿಮ್ಮ ವಂಶಸ್ಥರು ಮಾಡಿರುವ ಆಸ್ತಿಯನ್ನು ಈ ಕಾಂಗ್ರೆಸಿಗರು ವಾಪಸ್ ಪಡೆಯುತ್ತಾರಂತೆ. ನೀವು ಕೂಡಿಟ್ಟಿರೋ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ಕೊಡಲು ಆಗುವುದಿಲ್ಲ. ನಿಮ್ಮ ಆಸ್ತಿಗೆ ಶೇಕಡಾ 55ರಷ್ಟು ತೆರಿಗೆ ವಿಧಿಸಿ ಆಸ್ತಿಯನ್ನು ಹೊಡೆಯುವುದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವೋಟ್ ಬ್ಯಾಂಕ್‌ ಭದ್ರ ಮಾಡಿಕೊಳ್ಳಲು ಕಾಂಗ್ರೆಸ್‌ನಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆ ರೀತಿ ಆಗಲು ನೀವು ಬಿಡುತ್ತೀರಾ ಎಂದು ಕರ್ನಾಟಕದ ಎಲ್ಲ ಜನರಿಗೆ ನಾನು ಕೇಳುತ್ತಿದ್ದೇನೆ. ಆ ರೀತಿಯ ಕಾನೂನು ತರಲು ಹೊರಟಿರುವ ಕಾಂಗ್ರೆಸ್‌ಗೆ ಅಧಿಕಾರ ಕೊಡುತ್ತೀರಾ? ಇಂಥ ಕಾಂಗ್ರೆಸಿಗರನ್ನು ಹುಡುಕಿ ಹುಡುಕಿ ದೂರ ಇಡಿ ಎಂದು ಮನವಿ ಮಾಡಿದರು.

ಇಷ್ಟೆಲ್ಲ ಅನ್ಯಾಯ ಮಾಡುವ ಕಾಂಗ್ರೆಸ್‌ಗೆ ಜನ ಪಾಠ ಕಲಿಸಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಹೆಣ್ಣು ಮಕ್ಕಳ ಹತ್ಯೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ನಡೆದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಬೆಳಗಾವಿ ದಲಿತ ಮಹಿಳೆ ಬೆತ್ತಲೆ ಪ್ರಕರಣ ಪ್ರಸ್ತಾಪ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿ ದೌರ್ಜನ್ಯ ಎಸೆಗಲಾಗಿದೆ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಿಎಫ್‌ಐ ಆತಂಕವಾದಿ ಸಂಘಟನೆಯನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಪಿಎಫ್‌ಐ, ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಆದರ್ಶಗಳ ಪ್ರೇರಣೆಯೊಂದಿಗೆ ಬಿಜೆಪಿ ಆಡಳಿತವು ನಡೆಯುತ್ತಿದೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಇದೆ, ಮಕ್ಕಳು ಅಲ್ಲಿ ಓದುತ್ತಿದ್ದಾರೆ. ನಿಮ್ಮ ಕನಸುಗಳೇ ಮೋದಿ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Narendra Modi: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ,

VISTARANEWS.COM


on

Congress ties with Aurangzeb supporters and Girls killed under his rule says Narendra Modi
Koo

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆದರೂ ಸಹ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಿಎಫ್‌ಐ ಆತಂಕವಾದಿ ಸಂಘಟನೆಯನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಪಿಎಫ್‌ಐ, ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ನಿಮ್ಮ ಆಸ್ತಿ ಮೇಲೆ ಕಣ್ಣಿಟ್ಟ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯಲ್ಲವೂ ಅನ್ಯರ ಪಾಲಾಗುತ್ತದೆ. ನೀವು ಮಾಡಿಟ್ಟ ಮನೆ, ಆಸ್ತಿ, ಚಿನ್ನ ಎಲ್ಲವೂ ಅನ್ಯರ ಪಾಲಾಗಿದೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಗೆಡುತ್ತದೆ. ಅವರು ದಿಲ್ಲಿಯಲ್ಲಿ ಆಡಳಿತಕ್ಕೆ ಬಂದರೆ ನಿಮ್ಮ ಆಸ್ತಿಯನ್ನು ವಶಕ್ಕೆ ಪಡೆಯುತ್ತದೆ. ನೀವು ನಿಮ್ಮ ಮಕ್ಕಳಿಗಾಗಿ ಪೈಸೆ ಪೈಸೆ ಕೂಡಿಟ್ಟು ಮಾಡಿದ ಆಸ್ತಿಯಲ್ಲಿ ಶೇಕಡಾ 55 ಪರ್ಸೆಂಟ್‌ ಅನ್ನು ಕಾಂಗ್ರೆಸ್‌ ವಶಕ್ಕೆ ಪಡೆಯಲಿದೆ. ಈ ಮೂಲಕ ನಿಮ್ಮ ಆಸ್ತಿಯು ನಿಮ್ಮ ಮಕ್ಕಳಿಗೆ ಸಿಗುವುದಿಲ್ಲ. ಹೀಗಾಗಿ ನಿಮ್ಮ ಆಸ್ತಿಯ ಬಹುದೊಡ್ಡ ಪಾಲು ಕಾಂಗ್ರೆಸ್‌ ಸರ್ಕಾರದ್ದಾಗುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇರ ವಾಗ್ದಾಳಿ ನಡೆಸಿದರು.

Continue Reading

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading
Advertisement
Priyanka Gandhi Rahul Gandhi
ದೇಶ29 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್36 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ36 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 202438 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ1 hour ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ1 hour ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್2 hours ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್2 hours ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ2 hours ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 202438 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌