Gyanvapi mosque case: ಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇ ವರದಿ ಬಹಿರಂಗಕ್ಕೆ ಕೋರ್ಟ್ ಒಪ್ಪಿಗೆ - Vistara News

ದೇಶ

Gyanvapi mosque case: ಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇ ವರದಿ ಬಹಿರಂಗಕ್ಕೆ ಕೋರ್ಟ್ ಒಪ್ಪಿಗೆ

Gyanvapi mosque case: ವಾರಾಣಸಿಯ ಜ್ಞಾನವಾಪಿ ಮಸೀದಿ ಹಿಂದೂ ದೇವಾಲಯವಾಗಿದೆ ಎಂದು ಹಿಂದೂಗಳು ಕೋರ್ಟ್‌ ಮೆಟ್ಟಿಲೇರಿದ್ದಾರೆ.

VISTARANEWS.COM


on

Gnanavapi Masjid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜ್ಞಾನವಾಪಿ ಮಸೀದಿ (Gyanvapi mosque case) ಸಂಕೀರ್ಣ ಕುರಿತಾದ ಭಾರತೀಯ ಪುರಾತತ್ವ ಸಮೀಕ್ಷೆ ವರದಿಯನ್ನು (ASI survey report) ಸಾರ್ವಜನಿಕಗೊಳಿಸಲು ಮತ್ತು ಹಿಂದೂ ಹಾಗೂ ಮುಸ್ಲಿಮ್ ಕಕ್ಷಿದಾರರಿಗೆ ಒದಗಿಸಲು ವಾರಾಣಸಿ ಜಿಲ್ಲಾ ನ್ಯಾಯಾಲಯವು (Varanasi District court) ಅವಕಾಶವನ್ನು ಕಲ್ಪಿಸಿದೆ ಎಂದು ಉಭಯ ಪಕ್ಷಗಳ ಕಕ್ಷಿದಾರರು ತಿಳಿಸಿದ್ದಾರೆ.

2023ರ ಡಿಸೆಂಬರ್‌ ತಿಂಗಳಲ್ಲಿ ಎಎಸ್‌ಐ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಾಚೀನ ಕಾಲದ ಹಿಂದೂ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಾಣ ಮಾಡಲಾಗಿದೆಯೇ ಎಂಬುದನ್ನು ಖಚಿತಪಡಿಸಲು ಸಮೀಕ್ಷೆ ಕೈಗೊಳ್ಳುವಂತೆ ನ್ಯಾಯಾಲಯವು ಎಎಸ್‌ಐ ಆದೇಶಿಸಿತ್ತು.

ಭಾರತೀಯ ಪುರಾತತ್ವ ಇಲಾಖೆ ಸಿದ್ಧಪಡಿಸಿರುವ ವರದಿ ಒದಗಿಸುವಂತೆ ಹಿಂದೂ ಮತ್ತು ಮುಸ್ಲಿಮ್ ಕಕ್ಷಿದಾರರು ಅರ್ಜಿ ಸಲ್ಲಿಸಬೇಕು. ಬಳಿಕ ವರದಿಯನ್ನು ನೀಡಲಾಗುವುದು ಎಂದು ನ್ಯಾಯಾಲಯವು ಹೇಳಿದೆ ಎಂದು ಈ ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಅಂಜಮನ್ ಇಂತೇಜಾಮಿಯಾ ಮಸೀದಿ ಕಮಿಟಿಯನ್ನು ಪ್ರತಿನಿಧಿಸುವ ವಕೀಲ ಮುಮ್ತಾಜ್ ಅಹ್ಮದ್ ಅವರು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಿಂದೂ ಅರ್ಜಿದಾರರನ್ನು ಪ್ರತಿನಿಧಿಸುವ ವಕೀಲ ವಿಷ್ಣು ಶಂಕರ್ ಜೈನ್, ಬುಧವಾರ ವಿಚಾರಣೆ ನಡೆದಿದೆ. ಪ್ರಕರಣದಲ್ಲಿ ಕಕ್ಷಿದಾರರಿಗೆ ದೃಢೀಕರಿಸಿದ ಹಾರ್ಡ್ ಕಾಪಿ ಲಭ್ಯವಾಗುವಂತೆ ಕಕ್ಷಿದಾರರ ನಡುವೆ ತಿಳುವಳಿಕೆಯನ್ನು ಪಡೆಯಲಾಯಿತು. ಈ ಕುರಿತು ನ್ಯಾಯಾಲಯ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ. ಕೋರ್ಟ್ ತನ್ನ ಆದೇಶದಲ್ಲಿ ಏನು ಹೇಳುತ್ತದೆ ಎಂಬುದನ್ನು ಕಾದು ನೋಡಬೇಕು. ಕಕ್ಷಿದಾರರಿಗೆ ಪ್ರಮಾಣೀಕೃತ ಪ್ರತಿಗಳನ್ನು ನೀಡಲು ನ್ಯಾಯಾಲಯವು ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಸೈಬರ್ ಅಪರಾಧಗಳ ಬೆದರಿಕೆಯಿಂದಾಗಿ ಸಾಫ್ಟ್ ಕಾಪಿಗಳನ್ನು ನೀಡಲಾಗುವುದಿಲ್ಲ ಎಂದು ಎಎಸ್ಐ ಹೇಳಿದೆ. ಹಾಗಾಗಿ, ನ್ಯಾಯಾಲಯದ ಆದೇಶದ ಬಳಿಕ ನಾವು ವರದಿಯ ಪ್ರತಿಗಾಗಿ ಅರ್ಜಿ ಸಲ್ಲಿಸುತ್ತೇವೆ ಎಂದು ವಕೀಲ ವಿಷ್ಣು ಶಂಕರ್ ಜೈನ್ ಅವರು ಹೇಳಿದರು.

2022ರ ಮೇ 16ರಂದು ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿಯ ವೀಡಿಯೊಗ್ರಾಫಿಕ್ ಸಮೀಕ್ಷೆಯನ್ನು ಸ್ಥಳೀಯ ನ್ಯಾಯಾಲಯ ನೇಮಿಸಿದ ಆಯೋಗವು ತನ್ನ ಪೂರ್ಣಗೊಳಿಸಿದೆ. ಪೂರ್ಣಗೊಳಿಸಿದೆ. ಮಸೀದಿಯು ಹಿಂದೂ ದೇವಾಲಯದಲ್ಲಿ ನಿರ್ಮಿಸಲಾಗಿದೆ. ಶಿವಲಿಂಗ ಎಂದು ಹೇಳಲಾಗುವ ರಚನೆಯ ಮಸೀದಿಯ ಒಳಗೆ ಇದೆ ಎಂದು ಹಿಂದೂಗಳು ವಾದಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲಿ ಮಂದಿರ: ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್‌ ಅಸ್ತು, ಮುಸ್ಲಿಮರ 5 ಅರ್ಜಿ ವಜಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Everest Spices Row: ಎವರೆಸ್ಟ್ ಜೊತೆಗೆ, ʼMDH’ ಎಂದು ಜನಪ್ರಿಯವಾಗಿರುವ ಮಹಾಶಿಯಾನ್ ಡಿ ಹಟ್ಟಿಯ ಮಸಾಲೆಗಳು ಸಹ ವಿವಾದದಲ್ಲಿ ಸಿಲುಕಿಕೊಂಡಿವೆ. MDH ನವದೆಹಲಿ ಮೂಲದ ಭಾರತೀಯ ಮಸಾಲೆ ಉತ್ಪಾದಕ ಮತ್ತು ಮಾರಾಟಗಾರ. ಎವರೆಸ್ಟ್ ನಂತರ ಇದು ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿದೊಡ್ಡ ಮಸಾಲೆ ಬ್ರಾಂಡ್.

VISTARANEWS.COM


on

MDH everest spices row
Koo

ಹೊಸದಿಲ್ಲಿ: ಕ್ಯಾನ್ಸರ್ (Cancer) ಉಂಟುಮಾಡುವ ಕೀಟನಾಶಕ (pesticide) ಅಂಶಗಳನ್ನು ಹೊಂದಿರುವ ಕಾರಣಕ್ಕಾಗಿ ಸಿಂಗಾಪುರ (Singapore) ಮತ್ತು ಹಾಂಕಾಂಗ್‌ಗಳಲ್ಲಿ (Hongkong) ಆಹಾರ ನಿಗಾ ಸಂಸ್ಥೆಗಳ ತೀವ್ರ ನಿಗಾಕ್ಕೆ (Spices Row) ಕಾರಣವಾಗಿರುವ ಭಾರತೀಯ ಮೂಲದ ಎವರೆಸ್ಟ್‌ (Everest spices) ಮಸಾಲೆ ಉತ್ಪನ್ನಗಳ ಕಂಪನಿ, ಇದೀಗ ತಮ್ಮ ಉತ್ಪನ್ನಗಳು ಬ್ಯಾನ್‌ (ban) ಆಗಿಲ್ಲ ಎಂದಿವೆ. ಭಾರತೀಯ ಮಸಾಲೆ ಮಂಡಳಿ ಮತ್ತು ಎಫ್‌ಎಸ್‌ಎಸ್‌ಎಐನಂತಹ ಶಾಸನಬದ್ಧ ಸಂಸ್ಥೆಗಳು ನಿಗದಿಪಡಿಸಿದ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದ್ದೇವೆ ಎಂದು ಕಂಪನಿ ಹೇಳಿದೆ.

ಎರಡೂ ದೇಶಗಳಲ್ಲಿ ತಮ್ಮ ಮಸಾಲೆಗಳನ್ನು ನಿಷೇಧಿಸಲಾಗಿಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. ಕಂಪನಿಯು ತನ್ನ ಎಲ್ಲಾ ಉತ್ಪನ್ನಗಳನ್ನು ರವಾನೆ ಮಾಡುವ ಮೊದಲು ಮತ್ತು ರಫ್ತು ಮಾಡುವ ಮೊದಲು ಕಟ್ಟುನಿಟ್ಟಾದ ತಪಾಸಣೆಗೆ ಒಳಪಡಿಸುತ್ತೇವೆ ಎಂದು ಹೇಳಿದೆ. ಪ್ರತಿ ಸಾಗಣೆಯೂ ಭಾರತೀಯ ಮಸಾಲೆ ಮಂಡಳಿಯಿಂದ ಗುಣಮಟ್ಟದ ತಪಾಸಣೆಗೆ ಒಳಗಾಗುತ್ತದೆ. ಪ್ರಸ್ತುತ ಸಮಸ್ಯೆಯ ನಿವಾರಣೆಗೆ ಅಧಿಕೃತ ಸಂವಹನಕ್ಕಾಗಿ ಕಾಯುತ್ತಿದ್ದು, ನಮ್ಮ ಗುಣಮಟ್ಟ ನಿಯಂತ್ರಣ ತಂಡವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದಿದೆ.

ತಮ್ಮ ಮಸಾಲೆಗಳನ್ನು ಸಿಂಗಾಪುರ ಅಥವಾ ಹಾಂಕಾಂಗ್‌ನಲ್ಲಿ ನಿಷೇಧಿಸಲಾಗಿಲ್ಲ ಎಂದು ಎವರೆಸ್ಟ್‌ನ ವಕ್ತಾರರು ತಿಳಿಸಿದ್ದಾರೆ. “ಸಿಂಗಾಪುರದ ಆಹಾರ ಸುರಕ್ಷತಾ ಪ್ರಾಧಿಕಾರವು ಹಾಂಕಾಂಗ್‌ನ ಉತ್ಪನ್ನ ವಾಪಸಾತಿ ಎಚ್ಚರಿಕೆಯನ್ನು ಉಲ್ಲೇಖಿಸಿದೆ ಮತ್ತು ಹೆಚ್ಚಿನ ತಪಾಸಣೆಗಾಗಿ ಉತ್ಪನ್ನವನ್ನು ಮರುಪಡೆಯಲು ಮತ್ತು ತಾತ್ಕಾಲಿಕವಾಗಿ ಹಿಡಿದಿಡಲು ನಮ್ಮ ಸಿಂಗಾಪುರ್ ಆಮದುದಾರರನ್ನು ಕೇಳಿದೆ” ಎಂದು ವಕ್ತಾರರು ಸ್ಪಷ್ಟಪಡಿಸಿದರು.

ದಿವಂಗತ ವಾದಿಲಾಲ್ ಭಾಯ್ ಶಾ ಸ್ಥಾಪಿಸಿದ 57 ವರ್ಷ ಹಳೆಯ ಮಸಾಲೆ ಬ್ರಾಂಡ್ ಎವರೆಸ್ಟ್‌ ಕಂಪನಿಯು ಶುದ್ಧ ಮತ್ತು ಮಿಶ್ರಿತ ಮಸಾಲೆಗಳ ಭಾರತದ ಅತಿದೊಡ್ಡ ತಯಾರಕ. ಜಾಗತಿಕವಾಗಿ 80ಕ್ಕೂ ಹೆಚ್ಚು ದೇಶಗಳಲ್ಲಿ ಚಲಾವಣೆಯಲ್ಲಿದೆ.

ಎವರೆಸ್ಟ್ ಜೊತೆಗೆ, ʼMDH’ ಎಂದು ಜನಪ್ರಿಯವಾಗಿರುವ ಮಹಾಶಿಯಾನ್ ಡಿ ಹಟ್ಟಿಯ ಮಸಾಲೆಗಳು ಸಹ ವಿವಾದದಲ್ಲಿ ಸಿಲುಕಿಕೊಂಡಿವೆ. MDH ನವದೆಹಲಿ ಮೂಲದ ಭಾರತೀಯ ಮಸಾಲೆ ಉತ್ಪಾದಕ ಮತ್ತು ಮಾರಾಟಗಾರ. ಎವರೆಸ್ಟ್ ನಂತರ ಇದು ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿದೊಡ್ಡ ಮಸಾಲೆ ಬ್ರಾಂಡ್.

ವಿವಾದ ಏನು?

ಹಾಂಕಾಂಗ್ ಮತ್ತು ಸಿಂಗಾಪುರಗಳು ಭಾರತೀಯ ಬ್ರಾಂಡ್‌ಗಳಾದ ಎಂಡಿಹೆಚ್ ಮತ್ತು ಎವರೆಸ್ಟ್‌ನ ನಾಲ್ಕು ಮಸಾಲೆ ಉತ್ಪನ್ನಗಳ ಮಾರಾಟದ ಮೇಲೆ ನಿರ್ಬಂಧಗಳನ್ನು ವಿಧಿಸಿವೆ. ಇವುಗಳಲ್ಲಿ ನಿಗದಿತ ಮಿತಿಯನ್ನು ಮೀರಿ ಕೀಟನಾಶಕ ʼಎಥಿಲೀನ್ ಆಕ್ಸೈಡ್ʼ ಇದೆ ಎಂದು ಆರೋಪಿಸಲಾಗಿದೆ. ಹಾಂಕಾಂಗ್‌ನ ಆಹಾರ ಸುರಕ್ಷತೆ ಕೇಂದ್ರ (CFS) ಗ್ರಾಹಕರನ್ನು ಈ ಉತ್ಪನ್ನಗಳನ್ನು ಖರೀದಿಸದಂತೆ ಮತ್ತು ವ್ಯಾಪಾರಿಗಳನ್ನು ಮಾರಾಟ ಮಾಡದಂತೆ ಕೇಳಿಕೊಂಡಿದೆ. ಸಿಂಗಾಪುರ್ ಫುಡ್ ಏಜೆನ್ಸಿ, ಈ ಮಸಾಲೆಗಳನ್ನು ಮರುಪಡೆಯಲು ಕಂಪನಿಗೆ ನಿರ್ದೇಶಿಸಿದೆ.

ಸಿಂಗಾಪುರವು ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ಹಿಂಪಡೆದಿದೆ. MDHನ ಮದ್ರಾಸ್ ಕರಿ ಪೌಡರ್ (ಮದ್ರಾಸ್ ಮೇಲೋಗರ ಮಸಾಲೆ ಮಿಶ್ರಣ), ಎವರೆಸ್ಟ್ ಫಿಶ್ ಕರಿ ಮಸಾಲಾ, MDH ಸಾಂಬಾರ್ ಮಸಾಲಾ ಮಿಶ್ರಿತ ಮಸಾಲಾ ಪೌಡರ್ ಮತ್ತು MDH ಕರಿ ಪುಡಿ ಮಿಶ್ರಿತ ಮಸಾಲಾ ಪೌಡರ್ ಅನ್ನು ಖರೀದಿಸದಂತೆ ಹಾಂಕಾಂಗ್ ಗ್ರಾಹಕರನ್ನು ಕೇಳಿದೆ.

ಈಗ ಭಾರತದಲ್ಲಿ ಪರೀಕ್ಷೆ

ಇದರ ನಡುವೆ, ಭಾರತದಲ್ಲಿ ಮಾರಾಟವಾಗುವ ಮಸಾಲೆಗಳ ಗುಣಮಟ್ಟವನ್ನು ಪರಿಶೀಲಿಸಲು ಆಹಾರ ಸುರಕ್ಷತಾ ನಿಯಂತ್ರಕ ಎಫ್‌ಎಸ್‌ಎಸ್‌ಎಐ (FSSAI) ಮುಂದಾಗಿದೆ. ಸಿಂಗಾಪುರ ಮತ್ತು ಹಾಂಕಾಂಗ್‌ಗಳು ಎತ್ತಿರುವ ಕಾಳಜಿಯ ಹಿನ್ನೆಲೆಯಲ್ಲಿ, ದೇಶದಾದ್ಯಂತ MDH ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್‌ಗಳ ಪುಡಿ ರೂಪದ ಮಸಾಲೆಗಳ ಮಾದರಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.

“ಪ್ರಸ್ತುತ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, FSSAI ಎಮ್‌ಡಿಹೆಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್‌ಗಳ ಮಸಾಲೆಗಳ ಮಾದರಿಗಳನ್ನು ಮಾರುಕಟ್ಟೆಯಿಂದ ತೆಗೆದುಕೊಳ್ಳುತ್ತಿದೆ. ಅವುಗಳು ಎಫ್‌ಎಸ್‌ಎಸ್‌ಎಐ ಮಾನದಂಡಗಳನ್ನು ಪೂರೈಸುತ್ತವೆಯೇ ಎಂದು ಪರಿಶೀಲಿಸುತ್ತಿದೆ” ಎಂದು ಸರ್ಕಾರಿ ಮೂಲ ತಿಳಿಸಿದೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ರಫ್ತು ಮಾಡುವ ಮಸಾಲೆಗಳ ಗುಣಮಟ್ಟವನ್ನು ನಿಯಂತ್ರಿಸುವುದಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ FSSAI, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನದ ಗುಣಮಟ್ಟವನ್ನು ಪರಿಶೀಲಿಸಲು ಮಾರುಕಟ್ಟೆಯಿಂದ ನಿಯಮಿತವಾಗಿ ಮಸಾಲೆಗಳ ಮಾದರಿಗಳನ್ನು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: Everest Spices: ಸಿಂಗಾಪುರ ಬಳಿಕ ಹಾಂಕಾಂಗ್‌ನಲ್ಲೂ ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ ಬ್ಯಾನ್!

Continue Reading

ಪ್ರಮುಖ ಸುದ್ದಿ

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Patanjali Case: ನ್ಯಾಯಾಲಯವು ಈ ಹಿಂದೆ ರಾಮ್‌ದೇವ್ ಮತ್ತು ಬಾಲಕೃಷ್ಣ ಸಲ್ಲಿಸಿದ್ದ ಕ್ಷಮೆ ಅರ್ಜಿಯನ್ನು ತಿರಸ್ಕರಿಸಿತ್ತು. “ಅದು ಹೃದಯಪೂರ್ವಕವಾಗಿಲ್ಲ” ಮತ್ತು “ತುಟಿಯ ಮೇಲಿನ ಮಾತು” ಎಂದು ಪೀಠ ಹೇಳಿತ್ತು. ಏಪ್ರಿಲ್ 16ರಂದು ನಡೆದ ವಿಚಾರಣೆಯಲ್ಲಿ, ಇಬ್ಬರೂ ಇಂದು ನೇರವಾಗಿ ಹಾಜರಾಗಲು ಮತ್ತು ಕ್ಷಮೆಯಾಚಿಸಲು ಆದೇಶಿಸಿತ್ತು.

VISTARANEWS.COM


on

baba ramdev supreme court
Koo

ಹೊಸದಿಲ್ಲಿ: ತಪ್ಪುದಾರಿಗೆಳೆಯುವ ಜಾಹೀರಾತು (Advertisements) ಪ್ರಕರಣದಲ್ಲಿ ಪತಂಜಲಿ ಆಯುರ್ವೇದ (Patanjali Ayurved) ಸಂಸ್ಥೆ ಹಾಗೂ ಅದರ ಸಂಸ್ಥಾಪಕರಾದ ಬಾಬಾ ರಾಮ್‌ದೇವ್‌ (Baba Ramdev) ಅವರನ್ನು ಕಳೆದೊಂದು ತಿಂಗಳಿನಿಂದ ಹಿಗ್ಗಾಮುಗ್ಗಾ ತರಾಟೆಗೆ (Patanjali Case) ತೆಗೆದುಕೊಳ್ಳುತ್ತಿರುವ ಸುಪ್ರೀಂ ಕೋರ್ಟ್ (Supreme court), ಇಂದು ಮತ್ತೆ ಆ ಕೆಲಸವನ್ನು ಮುಂದುವರಿಸಿದೆ. ಪತಂಜಲಿ ಪತ್ರಿಕೆಗಳಲ್ಲಿ ಪ್ರಕಟಿಸಿರುವ ಕ್ಷಮಾಯಾಚನೆಯ (Apology) ಗಾತ್ರವು “ಅದರ ಉತ್ಪನ್ನಗಳ ಪೂರ್ಣ ಪುಟದ ಜಾಹೀರಾತುಗಳ ಗಾತ್ರದಲ್ಲೇ ಇದೆಯೇ?” ಎಂದು ಪ್ರಶ್ನಿಸಿದೆ. ಸರಿಪಡಿಸಿ ದೊಡ್ಡ ಗಾತ್ರದಲ್ಲಿ ಮರಳಿ ಪ್ರಕಟಿಸುವಂತೆ ತಾಕೀತು ಮಾಡಿದೆ.

ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ನ್ಯಾಯಾಲಯದ ಮುಂದೆ ಹೊಸದಾಗಿ ಅವರಿಬ್ಬರ ಕ್ಷಮಾಪಣೆಯನ್ನು ಮಂಡಿಸಿದ್ದಾರೆ. “ನಿನ್ನೆಯಷ್ಟೇ ಏಕೆ ಕ್ಷಮೆಯಾಚಿಸಲಾಯಿತು? ಮತ್ತು ಅದನ್ನು ಯಾಕೆ ಮೊದಲೇ ಮಾಡಲಿಲ್ಲ?” ಎಂದು ಪೀಠ ಕೇಳಿದೆ. ಕ್ಷಮಾಪಣೆಯನ್ನು ₹10 ಲಕ್ಷ ವೆಚ್ಚದಲ್ಲಿ 67 ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ ಎಂದು ರೋಹಟಗಿ ಹೇಳಿದರು. “ಕ್ಷಮೆಯಾಚನೆಯನ್ನು ದೊಡ್ಡದಾಗಿ ಪ್ರಕಟಿಸಲಾಗಿದೆಯೇ? ನಿಮ್ಮ ಹಿಂದಿನ ಜಾಹೀರಾತುಗಳಂತೆಯೇ ಅದೇ ಫಾಂಟ್ ಮತ್ತು ಗಾತ್ರದಲ್ಲಿ ಇದೆಯೇ?” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಪ್ರಶ್ನಿಸಿದ್ದಾರೆ. “ಕಂಪನಿಯು ಇದಕ್ಕಾಗಿ ಲಕ್ಷಗಳಲ್ಲಿ ಖರ್ಚು ಮಾಡಿದೆ” ಎಂದು ರೋಹಟಗಿ ಹೇಳಿದಾಗ, ನ್ಯಾಯಾಲಯವು “ಅದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಉತ್ತರಿಸಿತು.

ಪತಂಜಲಿ ವಿರುದ್ಧದ ಪ್ರಕರಣ ಹೂಡಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ವಿರುದ್ಧ ₹1000 ಕೋಟಿ ದಂಡ ಹಾಕಲು ಕೋರಿದ ಅರ್ಜಿಯೊಂದನ್ನು ಸ್ವೀಕರಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದ್ದು, “ಇದು ನಕಲಿ ಅರ್ಜಿಯೇ? ನಮಗೆ ಅನುಮಾನವಿದೆ” ಎಂದಿದೆ. “ತಮ್ಮ ಕಕ್ಷಿದಾರರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರೋಹಟಗಿ ಅವರು ಒತ್ತಿ ಹೇಳಿದರು.

ಪತ್ರಿಕೆಗಳಲ್ಲಿ ದೊಡ್ಡ ಕ್ಷಮಾಪಣೆಯನ್ನು ಪ್ರಕಟಿಸುವುದಾಗಿ ಬಾಬಾ ರಾಮ್‌ದೇವ್ ಹೇಳಿದ ನಂತರ ಸುಪ್ರೀಂ ಕೋರ್ಟ್ ಪ್ರಕರಣವನ್ನು ಒಂದು ವಾರಕ್ಕೆ ಮುಂದೂಡಿದೆ. ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆಗೆ ಗಂಟೆಗಳ ಮೊದಲು, ಪತಂಜಲಿ ಆಯುರ್ವೇದ್ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಕ್ಷಮೆಯಾಚಿಸಿದೆ. ನ್ಯಾಯಾಲಯದ ಬಗ್ಗೆ ತನಗೆ ಹೆಚ್ಚಿನ ಗೌರವವಿದೆ ಮತ್ತು ತಪ್ಪುಗಳು ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದೆ.

ಪತಂಜಲಿ ಸಂಸ್ಥಾಪಕರಾದ ಯೋಗ ಗುರು ರಾಮ್‌ದೇವ್ ಮತ್ತು ಅವರ ಸಹಾಯಕ ಬಾಲಕೃಷ್ಣ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಕಾಯಿಲೆಗಳನ್ನು ಕಂಪನಿಯ ಉತ್ಪನ್ನಗಳು ಗುಣಪಡಿಸುತ್ತವೆ ಎಂದು ಸಾರುವ ಜಾಹೀರಾತುಗಳನ್ನು ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿ ವೈದ್ಯಕೀಯ ಸಂಘ ಕೋರ್ಟ್‌ಗೆ ಹೋಗಿತ್ತು. ನ್ಯಾಯಾಲಯವು ಈ ಹಿಂದೆ ರಾಮ್‌ದೇವ್ ಮತ್ತು ಬಾಲಕೃಷ್ಣ ಸಲ್ಲಿಸಿದ್ದ ಕ್ಷಮೆ ಅರ್ಜಿಯನ್ನು ತಿರಸ್ಕರಿಸಿತ್ತು. “ಅದು ಹೃದಯಪೂರ್ವಕವಾಗಿಲ್ಲ” ಮತ್ತು “ತುಟಿಯ ಮೇಲಿನ ಮಾತು” ಎಂದು ಪೀಠ ಹೇಳಿತ್ತು. ಏಪ್ರಿಲ್ 16ರಂದು ನಡೆದ ವಿಚಾರಣೆಯಲ್ಲಿ, ಇಬ್ಬರೂ ಇಂದು ನೇರವಾಗಿ ಹಾಜರಾಗಲು ಮತ್ತು ಕ್ಷಮೆಯಾಚಿಸಲು ಆದೇಶಿಸಿತ್ತು.

ರಾಷ್ಟ್ರೀಯ ಹಿಂದಿ ದೈನಿಕದಲ್ಲಿ ಸಣ್ಣದಾಗಿ ಪ್ರಕಟವಾದ ಜಾಹೀರಾತಿನಲ್ಲಿ, ಪತಂಜಲಿಯು ಸುಪ್ರೀಂ ಕೋರ್ಟ್‌ನ ಬಗ್ಗೆ ತಾವು ಅತ್ಯಂತ ಗೌರವವನ್ನು ಹೊಂದಿದ್ದೇವೆ ಎಂದು ಹೇಳಿದೆ. “ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮತ್ತು ಪತ್ರಿಕಾಗೋಷ್ಠಿಗಳನ್ನು ನಡೆಸುವಲ್ಲಿ ಮಾಡಿದ ತಪ್ಪುಗಳಿಗಾಗಿ ನಾವು ನಮ್ಮ ಹೃತ್ಪೂರ್ವಕ ಕ್ಷಮೆಯಾಚಿಸುತ್ತೇವೆ. ಈ ತಪ್ಪನ್ನು ಪುನರಾವರ್ತಿಸದಿರಲು ನಾವು ಬದ್ಧರಾಗಿದ್ದೇವೆ” ಎಂದು ಜಾಹೀರಾತು ಹೇಳಿದೆ.

ಕಳೆದ ವಾರ ವಿಚಾರಣೆಯ ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ರಾಮ್‌ದೇವ್, “ನಾನು ಮಾಡಬೇಕಾಗಿದ್ದನ್ನು ಹೇಳಿದ್ದೇನೆ, ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದರು. ರಾಮ್‌ದೇವ್ ಮತ್ತು ಬಾಲಕೃಷ್ಣ ಅವರ ಹಿಂದಿನ ಕ್ಷಮೆಯಾಚನೆಯನ್ನು ತಿರಸ್ಕರಿಸಿದ ನ್ಯಾಯಾಲಯವು ಪತ್ರಗಳನ್ನು ಮೊದಲು ಮಾಧ್ಯಮಗಳಿಗೆ ಕಳುಹಿಸಲಾಗಿದೆ ಎಂದು ಗಮನಿಸಿತ್ತು. “ವಿಷಯವು ನ್ಯಾಯಾಲಯದ ಮೆಟ್ಟಿಲೇರುವವರೆಗೂ, ಅಫಿಡವಿಟ್‌ಗಳನ್ನು ನಮಗೆ ಕಳುಹಿಸಬೇಕಿಲ್ಲ ಎಂದು ಆರೋಪಿಗಳು ಕಂಡುಕೊಂಡರು. ಅವರು ಪ್ರಚಾರವನ್ನು ಸ್ಪಷ್ಟವಾಗಿ ನಂಬುತ್ತಾರೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹೇಳಿದ್ದಾರೆ.

ಪೀಠದಲ್ಲಿದ್ದ ನ್ಯಾಯಮೂರ್ತಿ ಎ. ಅಮಾನುಲ್ಲಾ ಅವರು, “ಕ್ಷಮಾಪಣೆ ಸಲ್ಲಿಸುವುದು ಸಾಕಾಗುವುದಿಲ್ಲ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ನೀವು ಪರಿಣಾಮಗಳನ್ನು ಅನುಭವಿಸಲೇಬೇಕು” ಎಂದು ಎಚ್ಚರಿಸಿದ್ದರು.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪತಂಜಲಿ ತಪ್ಪು ಮಾಡಿದ್ರೆ 1000 ಕೋಟಿ ದಂಡ ಹಾಕಿ; ಆದ್ರೆ ವೈದ್ಯರಿಗೆ ಯಾವ ಶಿಕ್ಷೆ? ಬಾಬಾ ರಾಮದೇವ ಕೆಂಡ

Continue Reading

Latest

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Voter Slip by Mobile: ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಮತದಾರರ ಮಾಹಿತಿ ಸ್ಲಿಪ್ ಇನ್ನೂ ಸಿಕ್ಕಿಲ್ಲ ಎನ್ನುವ ಚಿಂತೆ ಬೇಡ. ಮೊಬೈಲ್, ಲ್ಯಾಪ್ ಟಾಪ್ ನಲ್ಲಿ ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆ 2024ರ (Lok Sabha Election 2024) ಪ್ರಯುಕ್ತ ರಾಜ್ಯದಲ್ಲಿ (karnataka) ಇದೇ ತಿಂಗಳ 26ರಂದು ಮೊದಲ ಹಂತದ ಮತದಾನ (voting) ನಡೆಯಲಿದೆ. ಭಾರತೀಯ ಚುನಾವಣಾ ಆಯೋಗ (Election Commission of India) ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ನೋಂದಾಯಿತ ಮತದಾರರಿಗೆ (Voter Slip by Mobile) ಮತದಾರರ ಮಾಹಿತಿ ಸ್ಲಿಪ್ (VIS) ಅನ್ನು ಮುದ್ರಿಸಿ ಕಳುಹಿಸುತ್ತಿದೆ.

ಒಂದು ವೇಳೆ ಈ ಸ್ಲಿಪ್ ಸಿಕ್ಕಿಲ್ಲದಿದ್ದರೆ ಚಿಂತೆ ಬೇಡ. ನೀವೇ ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಅರಿವಿಲ್ಲದವರಿಗೆ ಮತದಾರರ ಚೀಟಿ ಅಥವಾ ವಿಐಎಸ್ ಎನ್ನುವುದು ಇಐಸಿಯಿಂದ ಚುನಾವಣೆಗೆ ಮುಂಚಿತವಾಗಿ ಅಗತ್ಯ ವಿವರಗಳ ಬಗ್ಗೆ ಮತದಾರರಿಗೆ ತಿಳಿಸಲು ನೀಡಿದ ದಾಖಲೆಯಾಗಿದೆ.

ಇದನ್ನೂ ಓದಿ: Amit Shah: ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ; ಒಂದೇ ಕ್ಷೇತ್ರದಲ್ಲಿ ಕ್ಯಾಂಪೇನ್!‌

ವಿಐಎಸ್ ಎಂದರೆ ಏನು?

ಸ್ಲಿಪ್ ಹೆಸರು, ವಯಸ್ಸು, ಲಿಂಗ, ಅಸೆಂಬ್ಲಿ ಕ್ಷೇತ್ರ ಮತ್ತು ಪ್ರಮುಖವಾಗಿ ಮತಗಟ್ಟೆ ಸ್ಥಳ, ಕೊಠಡಿ ಸಂಖ್ಯೆ, ಮತದಾನದ ದಿನಾಂಕ ಮತ್ತು ಹೆಚ್ಚಿನ ವಿವರಗಳನ್ನು ಇದು ಒಳಗೊಂಡಿರುತ್ತದೆ. ಇದರೊಂದಿಗೆ ಮತದಾರರ ವಿವರಗಳನ್ನು ತ್ವರಿತವಾಗಿ ಪರಿಶೀಲಿಸಲು ಕ್ಯೂಆರ್ ಕೋಡ್ ಅನ್ನು ಸಹ ಇದು ಒಳಗೊಂಡಿದೆ.

ಈವರೆಗೆ ಮತದಾರರ ಮಾಹಿತಿ ಸ್ಲಿಪ್ ಸಿಗದೇ ಇದ್ದರೆ ಮತದಾನದ ದಿನಾಂಕದ ಮೊದಲು ಅದನ್ನು ಖಂಡಿತಾ ಸ್ವೀಕರಿಸುತ್ತೀರಿ. ಇಲ್ಲವಾದರೆ ಚುನಾವಣಾ ಆಯೋಗದ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮತ್ತು ಅಧಿಕೃತ ವೆಬ್‌ಸೈಟ್ ನಿಂದ ತಕ್ಷಣವೇ ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.


ಫೋನ್‌ನಲ್ಲಿ ಪಡೆಯುವುದು ಹೇಗೆ?

ಫೋನ್‌ನಲ್ಲಿ ಮತದಾರರ ಮಾಹಿತಿ ಸ್ಲಿಪ್ ಅಥವಾ ವಿಐಎಸ್ ಅನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂಬುದರ ಕುರಿತು ಹಂತ-ಹಂತದ ಮಾಹಿತಿ ಇಲ್ಲಿದೆ.

  • – ಮೊಬೈಲ್ ಅಪ್ಲಿಕೇಶನ್ ಬಳಸಿ ಮತದಾರರ ಮಾಹಿತಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದಕ್ಕಾಗಿ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ ತೆರೆದು ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.
  • – ಡೌನ್‌ಲೋಡ್ “E-EPIC” ಆಯ್ಕೆಯನ್ನು ಟ್ಯಾಪ್ ಮಾಡಿ. ನೋಂದಾಯಿತ ಫೋನ್ ಸಂಖ್ಯೆ, ಪಾಸ್‌ವರ್ಡ್ ಮತ್ತು ಒಟಿಪಿ ಬಳಸಿ ಲಾಗಿನ್ ಮಾಡಿ. ಈಗಾಗಲೇ ನೋಂದಾಯಿಸದಿದ್ದರೆ ಮತದಾರ ಐಡಿ ಕಾರ್ಡ್‌ನಲ್ಲಿ ಇರುವ ಎಪಿಕ್ ಸಂಖ್ಯೆಯನ್ನು ನಮೂದಿಸಿ. ಪರ್ಯಾಯವಾಗಿ ಅಪ್ಲಿಕೇಶನ್ ಉಲ್ಲೇಖ ಸಂಖ್ಯೆಯನ್ನು ಬಳಸಿಕೊಂಡು ಮತದಾರರ ಮಾಹಿತಿ ಸ್ಲಿಪ್ ಅನ್ನು ನೋಡಬಹುದು.
  • – ಇದರ ಅನಂತರ ನಿಮ್ಮ ವೋಟರ್ ಸ್ಲಿಪ್ ವಿವರಗಳನ್ನು ಕಾಣಬಹುದು. ಅದರ ಮೇಲೆ ಟ್ಯಾಪ್ ಮಾಡಿ ಮತ್ತು ವಿಐಸಿ ಡಾಕ್ಯುಮೆಂಟ್ ತೆರೆಯಲು ಒಟಿಪಿಯನ್ನು ಮತ್ತೆ ನಮೂದಿಸಿ. ಬಳಿಕ ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.


ವೆಬ್‌ಸೈಟ್ ನಲ್ಲಿ ಹೇಗೆ?

https://voters.eci.gov.in/ ತೆರೆದು ಫೋನ್ ನಂಬರ್, ಪಾಸ್‌ವರ್ಡ್ ಮತ್ತು ಒಟಿಪಿ ಬಳಸಿ ಲಾಗಿನ್ ಮಾಡಿ. ವೆಬ್‌ಸೈಟ್‌ಗೆ ಹೊಸಬರಾಗಿದ್ದರೆ ಮೊದಲು ನೊಂದಾಯಿಸಿಕೊಳ್ಳಿ.

ಡೌನ್‌ಲೋಡ್ E-EPIC ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಬಳಿಕ ಮತದಾರರ ಗುರುತಿನ ಚೀಟಿಯಲ್ಲಿರುವ EPIC ಸಂಖ್ಯೆಯನ್ನು ನಮೂದಿಸಿ.

ಒಮ್ಮೆ ಇದನ್ನು ಮಾಡಿದ ಅನಂತರ, ವಿಐಸಿ ಜೊತೆಗೆ E-EPIC ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಒಮ್ಮೆ E-EPIC ಅನ್ನು ಹೊಂದಿದ್ದರೆ ಸಂಪೂರ್ಣ ಪುಟವನ್ನು ಅಥವಾ ವಿಐಸಿ ಪುಟವನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ. ಮತ ಚಲಾಯಿಸಲು ಇದನ್ನು ನಿಮ್ಮೊಂದಿಗೆ ಮತಗಟ್ಟೆಗೆ ಕೊಂಡೊಯ್ಯಬಹುದಾಗಿದೆ.

Continue Reading

ಪ್ರಮುಖ ಸುದ್ದಿ

Balakot Airstrike: ನಮ್ಮ ಯೋಧರ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆ ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Balakot Airstrike: ಭಾರತೀಯ ವಾಯುಪಡೆಯ (ಐಎಎಫ್) ಮಾಜಿ ಮುಖ್ಯಸ್ಥ ಮತ್ತು ಇದೀಗ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕನಾಗಿರುವ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ (ನಿವೃತ್ತ) ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆ ವಿರುದ್ಧ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ದೃಢವಾದ ನಿಲುವನ್ನು ಶ್ಲಾಘಿಸಿದ್ದಾರೆ.

VISTARANEWS.COM


on

balakot airstrike RKS bhadauria
Koo

ಹೊಸದಿಲ್ಲಿ: ಪಾಕಿಸ್ತಾನದ ವಾಯುಪಡೆ (Pakistan Airforce) ಮತ್ತು ಸೇನೆಯ ರಕ್ಷಣೆಯನ್ನೂ ಭೇದಿಸಿ ಭಾರತದ ವಾಯುಪಡೆ (Indian Airforce) ಬಾಲಾಕೋಟ್ ವೈಮಾನಿಕ ದಾಳಿಯನ್ನು (Balakot Airstrike) ನಡೆಸಿತು. ದಾಳಿಯಲ್ಲಿ ಭಾರತದ ಸೈನ್ಯಕ್ಕೆ ಯಾವುದೇ ನಷ್ಟವೂ ಉಂಟಾಗಿರಲಿಲ್ಲ ಎಂದು ಮಾಜಿ ಐಎಎಫ್ (IAF) ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ (RKS Bhadauria) ಹೇಳಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ಮಾಜಿ ಮುಖ್ಯಸ್ಥ ಮತ್ತು ಇದೀಗ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕನಾಗಿರುವ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ (ನಿವೃತ್ತ) ಹೀಗೆ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆ ವಿರುದ್ಧ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ದೃಢವಾದ ನಿಲುವನ್ನು ಶ್ಲಾಘಿಸಿದ್ದಾರೆ.

ಉತ್ತರ ಪ್ರದೇಶದ ಫತೇಪುರ್ ಸಿಕ್ರಿಯಲ್ಲಿ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಬದೌರಿಯಾ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ಸ್ಪಷ್ಟ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸರ್ಜಿಕಲ್ ಸ್ಟ್ರೈಕ್‌ಗಳು ಸೇರಿದಂತೆ ಭಯೋತ್ಪಾದಕ ಘಟನೆಗಳಿಗೆ ತ್ವರಿತ ಪ್ರತಿಕ್ರಿಯೆ ನೀಡಲಾಗುತ್ತಿದೆ ಎಂದರು.

“ಬಿಜೆಪಿ ಅಧಿಕಾರಕ್ಕೆ ಬಂದಾಗ, ಪ್ರಧಾನಿ ಮೋದಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ಸ್ಪಷ್ಟ ನೀತಿಯನ್ನು ಪ್ರತಿಪಾದಿಸಿದರು. ಭಯೋತ್ಪಾದನೆಯ ಘಟನೆ ಸಂಭವಿಸಿದಾಗ ಮತ್ತು ದುಷ್ಕರ್ಮಿಗಳು ಗಡಿಯುದ್ದಕ್ಕೂ ಅಡಗಿಕೊಂಡಾಗ, ಎಲ್ಒಸಿಯಾದ್ಯಂತ ಸರ್ಜಿಕಲ್ ಸ್ಟ್ರೈಕ್ ಮಾಡಲಾಯಿತು. ಪುಲ್ವಾಮಾ ಭಯೋತ್ಪಾದಕ ದಾಳಿ ಸಂಭವಿಸಿದಾಗ, ಲಾಂಚ್‌ಪ್ಯಾಡ್‌ಗಳು ಗಡಿಯಾಚೆ ಹೋಗಿ ಹುಡುಕಿದವು. ಆ ಸಮಯದಲ್ಲಿ ಅದು ಒಂದು ಪ್ರಮುಖ ಹೆಜ್ಜೆ ಮತ್ತು ಬಲವಾದ ಸಂದೇಶವಾಗಿತ್ತು” ಎಂದವರು ಹೇಳಿದರು.

“ನಾವು ನಡೆಸಿದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನದ ವಾಯುಸೇನೆ ಮತ್ತು ಸೇನೆಯ ರಕ್ಷಣೆಯನ್ನು ಭೇದಿಸಿ ನಾವು ಹೋದೆವು. ಆದರೆ ನಾವು ಯಾವುದೇ ನಷ್ಟವನ್ನು ಅನುಭವಿಸಲಿಲ್ಲ. ಅದು ಯಶಸ್ವಿ ಕಾರ್ಯಾಚರಣೆಯಾಗಿತ್ತು. ನಾವು ಪ್ರತಿ ಸನ್ನಿವೇಶಕ್ಕೂ ಸಿದ್ಧರಿದ್ದೇವೆ. ಯಾರೇ ಆಗಲಿ ನಮ್ಮ ದೇಶದಲ್ಲಿ ಭಯೋತ್ಪಾದನೆಯನ್ನು ಹರಡಿದರೆ, ಅವರು ಎಲ್ಲಿ ಅಡಗಿಕೊಂಡರೂ ಅವರನ್ನು ಗುರಿಯಾಗಿಸಿ ಹೊಡೆಯುತ್ತೇವೆ. ಇದರ ಅರ್ಥ ಸ್ಪಷ್ಟವಾಗಿದೆ- ಉಗ್ರವಾದಕ್ಕೆ ನಮ್ಮದು ಶೂನ್ಯ ಸಹಿಷ್ಣುತೆ, ನಾವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ” ಎಂದು ಮಾಜಿ ಐಎಎಫ್ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಹೇಳಿದ್ದಾರೆ.

ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಭದೌರಿಯಾ, ದಾಳಿಯ ನಂತರ ಗಡಿಯುದ್ದಕ್ಕೂ ಭೂಗತವಾಗಿರುವ ಲಾಂಚ್‌ಪ್ಯಾಡ್‌ಗಳನ್ನು ತಟಸ್ಥಗೊಳಿಸುವಲ್ಲಿ ಯಶಸ್ವಿ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು. ಭಾರತದ ಕಡೆಯಿಂದ ಯಾವುದೇ ನಷ್ಟವಾಗದಂತೆ ಪಾಕಿಸ್ತಾನದ ವಾಯುಪಡೆ ಮತ್ತು ಸೇನೆಯ ರಕ್ಷಣೆಯನ್ನು ಭೇದಿಸುವ ಮೂಲಕ ಇದನ್ನು ಕಾರ್ಯಗತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Balakot Airstrike Anniversary: ಬಾಲಾಕೋಟ್ ಏರ್‌ಸ್ಟ್ರೈಕ್‌ಗೆ 4 ವರ್ಷ, ಪಾಕ್‌ನ ಉಗ್ರರ ಶಿಬಿರಗಳು ಧ್ವಂಸ! ಅಂದು ಏನೆಲ್ಲ ನಡೆಯಿತು?

Continue Reading
Advertisement
MDH everest spices row
ದೇಶ29 seconds ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ11 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ11 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ12 mins ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು16 mins ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest21 mins ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Lok Sabha Election 2024 KP Nanjundi resigns from Legislative Council
Lok Sabha Election 202441 mins ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ47 mins ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Bengaluru Karaga 2024
ಬೆಂಗಳೂರು54 mins ago

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

balakot airstrike RKS bhadauria
ಪ್ರಮುಖ ಸುದ್ದಿ1 hour ago

Balakot Airstrike: ನಮ್ಮ ಯೋಧರ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆ ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು20 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು23 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌