Chikkodi-Sadalga election Results: ಗಣೇಶ್ ಹುಕ್ಕೇರಿ ಗೆಲುವಿನ ನಾಗಾಲೋಟ, ನಡೆಯದ 'ಕತ್ತಿ' ಆಟ! - Vistara News

ಕರ್ನಾಟಕ

Chikkodi-Sadalga election Results: ಗಣೇಶ್ ಹುಕ್ಕೇರಿ ಗೆಲುವಿನ ನಾಗಾಲೋಟ, ನಡೆಯದ ‘ಕತ್ತಿ’ ಆಟ!

Chikkodi-Sadalga election Results: ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಗಣೇಶ್ ಹುಕ್ಕೇರಿಯ ಗೆಲುವಿನ ನಾಗಾಲೋಟ ಮುಂದುವರಿದಿದೆ.

VISTARANEWS.COM


on

Ganesh Hukkeri won the chikkodi sadalga constituency
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಕರ್ನಾಟಕ: ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರಗಳ ಪೈಕಿ ಚಿಕ್ಕೋಡಿ- ಸದಲಗಾ ಕ್ಷೇತ್ರವೂ ಒಂದು. ಇಲ್ಲಿ ಕಾಂಗ್ರೆಸ್ ಪಾರಪತ್ಯವನ್ನು ಸಾಧಿಸಿದೆ. ಹಾಲಿ ಶಾಸಕ ಗಣೇಶ್ ಹುಕ್ಕೇರಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಮೇಶ್ ಕತ್ತಿ ವಿರುದ್ಧ ಗಣೇಶ್ ಅವರು ಭರ್ಜರಿ 78509 ಮತಗಳ ಅಂತರದಿಂದ ಗೆದ್ದಿದ್ದಾರೆ. ರಮೇಶ್ ಕತ್ತಿ ಅವರು 49,840 ಮತಗಳನ್ನು ಪಡೆದುಕೊಂಡರೆ, ಗಣೇಶ್ ಹುಕ್ಕೇರಿ ಅವರು 1,28,349 ಮತಗಳನ್ನು ಸಂಪಾದಿಸಿದ್ದಾರೆ. ಈ ಮೂಲಕ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದ್ದಾರೆ(Chikkodi-Sadalga election Results).

2023ರ ಚುನಾವಣೆಯ ಅಭ್ಯರ್ಥಿಗಳು

ಕಾಂಗ್ರೆಸ್‌ನಿಂದ ಹಾಲಿ ಶಾಸಕ ಗಣೇಶ್ ಹುಕ್ಕೇರಿ ಕಣದಲ್ಲಿದ್ದರು. ಬಿಜೆಪಿಯು ರಮೇಶ್ ಕತ್ತಿ ಅವರಿಗೆ ಟಿಕೆಟ್ ನೀಡಿದ್ದರೆ, ಜೆಡಿಎಸ್‌ನಿಂದ ಸುಹಾಸ್ ಸದಾಶಿವ ವಾಳ್ಕೆ ಅವರು ಸ್ಪರ್ಧಿಸಿದ್ದರು.

ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ; ರೇಣುಕಾಚಾರ್ಯಗೆ ಸೋಲಿನ ನೋವು

2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?

ಕಾಂಗ್ರೆಸ್‌ನ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಅವರ ಪುತ್ರ ಗಣೇಶ್ ಹುಕ್ಕೇರಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾಸಾಹೇಬ್ ಜೊಲ್ಲೆ ಅವರು ಪರಾಭವಗೊಂಡರು. ಗಣೇಶ್ ಹುಕ್ಕೇರಿ 91467 ಮತಗಳನ್ನು ಪಡೆದುಕೊಂಡರೆ, 1056 ಮತಗಳ ಅಂತದಿಂದ ಪ್ರಚಂಡ ಗೆಲುವು ಸಾಧಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Modi in Karnataka: ನಾಳೆ (ಏಪ್ರಿಲ್‌ 20) ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka today Massive rally in Chikkaballapur and roadshow in Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಕರ್ನಾಟಕ

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Water Crisis: ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ ಮೂಲಕ ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಪೂರೈಕೆ ಮಾಡಲು ಜಲಮಂಡಳಿ ಕ್ರಮ ಕೈಗೊಂಡಿದೆ. ಹೆಸರಘಟ್ಟ ಕೆರೆಯಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ನೀರು ಹರಿಸಲಾಗುತ್ತದೆ.

VISTARANEWS.COM


on

Koo

ಬೆಂಗಳೂರು: ಬೇಸಿಗೆ ನೀರಿನ ಸಮಸ್ಯೆ ನಡುವೆ(Water Crisis) ಬೆಂಗಳೂರಿನ 110 ಹಳ್ಳಿಗಳ ಜನಕ್ಕೆ ಜಲಮಂಡಳಿ ಗುಡ್ ನ್ಯೂಸ್ ಕೊಟ್ಟಿದೆ. ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ (Soladevanahalli pumping station) ಪುನಶ್ಚೇತನ ಮಾಡಿ, ಮುಂದಿನ ವಾರದಿಂದ ಹೆಸರಘಟ್ಟ ಕೆರೆ ನೀರು ಸಂಸ್ಕರಿಸಿ ಪೂರೈಕೆ ಮಾಡಲು ಜಲಮಂಡಳಿ ಮುಂದಾಗಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ನೀರು ಪೂರೈಕೆಗೆ ಜಲಮಂಡಳಿ ಹೊಸ ಯೋಜನೆಗಳನ್ನು ಕೈಗೊಳ್ಳುತ್ತಾ ಇದೆ. ಅದರಲ್ಲಿ ಪ್ರಮುಖವಾಗಿ ಜಲಮಂಡಳಿ ಹೊಸ ಸಾಹಸಕ್ಕೆ ಮುಂದಾಗಿದ್ದು, ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ ಮೂಲಕ ಬೆಂಗಳೂರಿನ 110 ಹಳ್ಳಿಗಳಿಗೆ ನೀರು ಪೂರೈಕೆ ಮಾಡಲು ಕ್ರಮ ಕೈಗೊಂಡಿದೆ. ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಿಂದ 1896ರಲ್ಲಿ ಬೆಂಗಳೂರು ನಗರದ ಹಲವು ಭಾಗಕ್ಕೆ ಅರ್ಕಾವತಿ ನದಿ ನೀರನ್ನು ಹೆಸರಘಟ್ಟ ಕೆರೆ ಮೂಲಕ ಪೂರೈಕೆ ಮಾಡಲಾಗಿತ್ತು. ನಂತರ ಪಂಪ್ ಸ್ಟೇಷನ್ ಶಿಥಿಲಾವಸ್ಥೆ ತಲುಪಿತ್ತು. ಈಗ ಜಲಮಂಡಳಿ ಸೋಲದೇವನಹಳ್ಳಿಯ ಪಂಪಿಂಗ್ ಸ್ಟೇಷನ್ ಅನ್ನು ಪುನಶ್ಚೇತನ ಮಾಡಿ ಹೆಸರಘಟ್ಟದ ಕೆರೆ ನೀರನ್ನು ಸಂಸ್ಕರಿಸಿ ಬೆಂಗಳೂರಿನ 110 ಹಳ್ಳಿಗಳು ಸೇರಿದಂತೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೂ ನೀರಿನ ಭಾಗ್ಯ ನೀಡೋದಕ್ಕೆ ಮುಂದಾಗಿದೆ.

ಇನ್ನು ನಗರಕ್ಕೆ ನೀರು ಹರಿಸಲು ಸದ್ಯ ಹೆಸರಘಟ್ಟ ಕೆರೆಯಲ್ಲಿ ಸುಮಾರು 1.3 ಟಿಎಂಸಿ ಯಷ್ಟು ನೀರು ಲಭ್ಯವಿದೆ. ಇದಕ್ಕೆ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಲ್ಲಿ ಸಂಸ್ಕರಣೆ ಮಾಡಿ, ಎಂ.ಇ.ಐ ಲೇಔಟ್‌ನಲ್ಲಿರುವ ಜಲಸಂಗ್ರಾಹಾರಕ್ಕೆ ಪಂಪ್‌ ಮಾಡಲಾಗುವುದು. ಇಲ್ಲಿನಿಂದ ಅಗತ್ಯವಿರುವಂತಹ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ಹಾಗೂ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡುವುದು ಇದರ ಉದ್ದೇಶವಾಗಿದೆ. ಸದ್ಯ ಇತರೆ ಕೆಲಸ ಕಾರ್ಯಗಳಿಗೆ ಮೊದಲ ಹಂತದಲ್ಲಿ ನೀರು ನೀಡಲಾಗುತ್ತೆ. ನಂತರ ನೀರಿನು ಲ್ಯಾಬ್ ಟೆಸ್ಟ್ ಗೆ ಕಳುಹಿಸಿ ವರದಿ ಬಂದ ನಂತರ ಕೂಡಿಯೋದಕ್ಕೂ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ತಿಳಿಸಿದ್ದಾರೆ.

ಇದನ್ನೂ ಓದಿ | Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

ಇನ್ನು ಮುಂದಿನ ವಾರದೋಳಗೆ ಸಿದ್ಧತೆ ಪೂರ್ಣಗೊಳಿಸಲು ಸೂಚಿಸಿದ್ದು, ಇದಕ್ಕೆ ಬೇಕಾದ ಅಗತ್ಯ ತಯಾರಿಗಳನ್ನು ಅಧಿಕಾರಿಗಳು ಮಾಡಿಕೊಳ್ಳುತ್ತಾ ಇದ್ದಾರೆ. ಈಗಾಗಿ ಏಪ್ರಿಲ್ 20 ಬಳಿಕ ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್‌ನಿಂದ ನೀರು ಪೂರೈಕೆ ಆಗಲಿದ್ದು, ಇದ್ದು ನಗರದ ಯಾವೆಲ್ಲ ಏರಿಯಾಗಳಿಗೆ ನೀರು ಪೂರೈಕೆ ಆಗಲಿದೆ ಕಾದು ನೋಡಬೇಕಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

ಗೃಹ ಸಚಿವರು ಈ ಕುರಿತು ಪ್ರತಿಕ್ರಿಯೆ ನೀಡುತ್ತ, “ನೇಹಾ ಕೊಲೆ ಆಕಸ್ಮಿಕ. ಆಕೆಯೂ ಆರೋಪಿಯೂ ಪ್ರೀತಿಸುತ್ತಿದ್ದರು. ಆಕೆ ನಿರಾಕರಿಸಿದ್ದರಿಂದ ಕೊಲೆ ಮಾಡಿದ್ದಾನೆ” ಎಂದು ಹಗುರವಾದ ಹೇಳಿಕೆ ನೀಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ. ಆಕಸ್ಮಿಕ ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಇಂಥ ಅಪರಾಧಗಳು ಆಕಸ್ಮಿಕವಾಗಿ ಆಗುವುದಿಲ್ಲ. ಗೃಹ ಸಚಿವರು ಹಾಗೂ ಪೊಲೀಸರು ರಾಜ್ಯದ ಕಾನೂನು ಸುವ್ಯವಸ್ಥೆಯತ್ತ ಗಂಭೀರ ಗಮನ ನೆಟ್ಟಿದ್ದಾರೆಯೇ ಎಂದು ಪ್ರಶ್ನಿಸುವಂತಾಗಿದೆ.

VISTARANEWS.COM


on

Neha Hiremttt
Koo

ಬೆಳಗಿ ಬಾಳಬೇಕಾದ ಕುಡಿಯೊಂದು ಯವ್ವನದಲ್ಲೇ ಕಮರಿಹೋಗಿದೆ. ಬೆಳಗಾವಿ ಮೂಲದ ಯುವತಿಯೊಬ್ಬಳನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ ಎಂಬಾಕೆಯನ್ನು ಫಯಾಜ್ ಎನ್ನುವವನು ಕೊಂದು ಹಾಕಿದ್ದಾನೆ. ಈ ಹಿಂದೆ ನೇಹಾ ಓದುತ್ತಿದ್ದ ಕಾಲೇಜಿನಲ್ಲಿ ಈಕೆಯ ಸಹಪಾಠಿಯಾಗಿದ್ದ ಈತ, ತನ್ನ ಪ್ರೀತಿಯನ್ನು ಆಕೆ ತಿರಸ್ಕರಿಸಿದ್ದರಿಂದ ರೊಚ್ಚಿಗೆದ್ದಿದ್ದ. ಬಿಸಿಎಯಲ್ಲಿ ಫೇಲ್ ಆಗಿದ್ದ ಈತನ ಯಾವ ʼಕಲ್ಯಾಣ ಗುಣʼ ನೋಡಿ ಆಕೆ ತನ್ನನ್ನು ಪ್ರೀತಿಸಬೇಕು ಎಂದುಕೊಂಡಿದ್ದನೋ ಗೊತ್ತಿಲ್ಲ. ನಿನ್ನೆ ಏಕಾಏಕಿ ಅವಳು ಓದುತ್ತಿದ್ದ ಕಾಲೇಜಿಗೆ ಬಂದು, ಕ್ಯಾಂಪಸ್‌ನಲ್ಲಿಯೇ ಆಕೆಯನ್ನು ಇರಿದು ಕೊಂದಿದ್ದಾನೆ. ಕೊಲೆ ಮಾಡಿದ ರೀತಿಯೂ ಬೆಚ್ಚಿ ಬೀಳಿಸುವಂತಿದೆ. ಒಂಬತ್ತು ಬಾರಿ ಚಾಕುವಿನಿಂದ ಇರಿದ ಈತ, ನೋವಿನಿಂದ ಆಕೆ ನರಳಾಡುತ್ತಿದ್ದರೂ, ಆಕೆ ಕೊನೆಯುಸಿರು ಎಳೆದದ್ದನ್ನು ಖಚಿತಪಡಿಸಿಕೊಂಡೇ ಅಲ್ಲಿಂದ ತೆರಳಿದ್ದಾನೆ. ಅಂದ ಮೇಲೆ ಆತನಲ್ಲಿ ಇದ್ದುದು ಪ್ರೀತಿಯಲ್ಲ, ಕ್ರೌರ್ಯ ಮಾತ್ರ. ಪ್ರೇಮ ಎಂದೂ ಇಂಥ ವಿಕೃತಿಯನ್ನು ತಾಳಲು ಸಾಧ್ಯವಿಲ್ಲ.

ಘಟನೆಯನ್ನು ಖಂಡಿಸಿ, ಎಂದಿನಂತೆ, ಹಿಂದೂ ಸಂಘಟನೆಗಳು ಬೀದಿಗಿಳಿದಿವೆ. ಹುಡುಗಿಯ ಮೂಲ ಊರಾದ ಮುನವಳ್ಳಿಯಲ್ಲಿ ಮೂರು ದಿನಗಳ ಕಾಲ ಬಂದ್‌ ಸಾರಲಾಗಿದೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ. ಬಿಜೆಪಿ ಮುಖಂಡರು ಸಂತ್ರಸ್ತ ಯುವತಿಯ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಬೇಕು ಎಂದು ಪೊಲೀಸರನ್ನು ಹೆಚ್ಚಿನವರು ಆಗ್ರಹಿಸಿದ್ದಾರೆ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಿಎಂ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ʼಬಿಜೆಪಿ ಇದನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆʼ ಎಂದು ಆರೋಪಿಸುವುದು ಸುಲಭ; ಆದರೆ ಇಷ್ಟಾದರೂ ಪ್ರತಿಭಟನೆಯ ಧ್ವನಿ ಎಬ್ಬಿಸದೇ ಹೋದರೆ, ಪೊಲೀಸರು ಹಾಗೂ ಆಡಳಿತದಲ್ಲಿ ಇರುವವರು ಇದನ್ನು ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇತ್ತೇ? ರಾಜ್ಯದಲ್ಲಿ ಪ್ರತಿದಿನ ಹಲವಾರು ಕೊಲೆಗಳಾಗುತ್ತವೆ. ನಿನ್ನೆಯಂತೂ ಗದಗದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಯ ಕೊಲೆಯಾಗಿದೆ. ಪೊಲೀಸರು ತಮ್ಮದೇ ವೇಗದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಪ್ರಕರಣದ ಗಂಭೀರತೆಯನ್ನು ಆಡಳಿತಕ್ಕೆ ಮುಟ್ಟಿಸಿ, ತನಿಖೆ- ವಿಚಾರಣೆ- ಶಿಕ್ಷೆ ತೀವ್ರಗತಿಯಲ್ಲಿ ನಡೆಯುವಂತೆ ಮಾಡುವುದಂತೂ ಈ ಮೂಲಕ ಸಾಧ್ಯವಿದೆ.

ಇಂಥ ಅಪರಾಧಗಳ ಮೂಲದಲ್ಲಿ ಏನಿರುತ್ತದೆ? ಇನ್ನೊಬ್ಬ ವ್ಯಕ್ತಿಯನ್ನು ಕೊಲ್ಲುವುದು ಇಷ್ಟೊಂದು ಸುಲಭವೇ? ತನ್ನ (ವಿಕೃತ)ಪ್ರೇಮವನ್ನು ತಿರಸ್ಕರಿಸಿದಳೆಂದು ಯುವತಿಯೊಬ್ಬಳನ್ನು ಕೊಲ್ಲುವ ಈ ಮನಸ್ಥಿತಿ ಎಷ್ಟು ವಿಕೃತವಾದುದು ಎಂಬುದನ್ನು ಮತ್ತೆ ಹೇಳಬೇಕಿಲ್ಲ. ತನಗೆ ದೊರೆಯದ ಯುವತಿ ಇನ್ಯಾರಿಗೂ ದೊರೆಯುವುದು ಬೇಡ, ಆಕೆ ಬದುಕುವುದೂ ಬೇಡ ಎನ್ನುವುದು ಬಣ್ಣಿಸಲೂ ಮಾತುಗಳಿಲ್ಲದ ನೀಚತನ. ಇದು ಅಪರೂಪದಲ್ಲಿ ಅಪರೂಪದ ದುಷ್ಕೃತ್ಯ. ಈತನಿಗೆ ಗಲ್ಲು ಶಿಕ್ಷೆ ಆಗಲೇಬೇಕಿದೆ. ಈತನ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಪೊಲೀಸರು ಕಲೆಹಾಕಿ ನ್ಯಾಯಾಲಯದಲ್ಲಿ ಗಟ್ಟಿಯಾಗಿ ವಾದ ಮಂಡಿಸಲು ಪೂರಕವಾಗಿ ಕೆಲಸ ಮಾಡಿದರೆ ಮಾತ್ರ ಇದು ಸಾಧ್ಯ.

ಇದರ ಜೊತೆಗೆ ಮತಾಂಧತೆಯೂ ಸೇರಿದಂತಿದೆ. ಇದು ಒಬ್ಬ ವ್ಯಕ್ತಿಯ ಮನಸ್ಥಿತಿ ಮಾತ್ರವೇ ಅಲ್ಲ; ಹೀಗೆ ಸಮಾಜದಲ್ಲಿ ಭಯ ಉತ್ಪಾದಿಸುವ ಸಂಘಟನೆಗಳ ವರ್ತನೆಯೂ ಹೀಗೇ ಇರುತ್ತದೆ. ಈತನ ಹಿಂದೆ ಇನ್ಯಾರದಾದರೂ ಕೈವಾಡವಿದೆಯೇ ಎಂಬ ಕೋನದಲ್ಲಿ ಕೂಡ ತನಿಖೆ ನಡೆಸುವುದು ಒಳಿತು. ಈತನ ಕೃತ್ಯವನ್ನು ನೋಡಿದರೆ ಇದು ʼಲವ್‌ ಜಿಹಾದ್‌ ಕೊಲೆʼ ಆಗಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

ಇದರ ಜೊತೆಗೆ ಕಾನೂನು ಸುವ್ಯವಸ್ಥೆಯ ಪ್ರಶ್ನೆಯೂ ತಳುಕು ಹಾಕಿಕೊಂಡಿದೆ. ಗೃಹ ಸಚಿವರು ಈ ಕುರಿತು ಪ್ರತಿಕ್ರಿಯೆ ನೀಡುತ್ತ, “ನೇಹಾ ಕೊಲೆ ಆಕಸ್ಮಿಕ. ಆಕೆಯೂ ಆರೋಪಿಯೂ ಪ್ರೀತಿಸುತ್ತಿದ್ದರು. ಆಕೆ ನಿರಾಕರಿಸಿದ್ದರಿಂದ ಕೊಲೆ ಮಾಡಿದ್ದಾನೆ” ಎಂದು ಹಗುರವಾದ ಹೇಳಿಕೆ ನೀಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ. ಆಕಸ್ಮಿಕ ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಇಂಥ ಅಪರಾಧಗಳು ಆಕಸ್ಮಿಕವಾಗಿ ಆಗುವುದಿಲ್ಲ. ಅದರ ಹಿಂದೆ ತರ್ಕಬದ್ಧ ಯೋಜನೆ ಇರುತ್ತದೆ. ಆದ್ದರಿಂದ ಈತ ಗರಿಷ್ಠ ಶಿಕ್ಷೆಗೆ ಅರ್ಹ. ಗೃಹ ಸಚಿವರು ಹಾಗೂ ಪೊಲೀಸರು ರಾಜ್ಯದ ಕಾನೂನು ಸುವ್ಯವಸ್ಥೆಯತ್ತ ಗಂಭೀರ ಗಮನ ನೆಟ್ಟಿದ್ದಾರೆಯೇ? ಈ ಪ್ರಶ್ನೆಯನ್ನು ಅವರು ಉತ್ತರಿಸಬೇಕಿದೆ. ಅಪರಾಧಗಳು ಸಂಭವಿಸದಂತೆ ಕಠಿಣ ಕಾನೂನು ಸುವ್ಯವಸ್ಥೆಯನ್ನು ಜಾರಿಯಲ್ಲಿಡುವುದೇ ಅಪರಾಧಗಳನ್ನು ತಡೆಯುವ ಸುಲಭ ವಿಧಾನ. ಇಂಥ ಅಪರಾಧಗಳು ಇನ್ನು ಘಟಿಸದಿರಲಿ.

Continue Reading

ಕರ್ನಾಟಕ

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Operation Hasta: ಅಫಜಲಪುರ ಮಾಜಿ ಶಾಸಕ, ಸಚಿವ ಮಾಲೀಕಯ್ಯ ಗುತ್ತೇದಾರ್‌, ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

VISTARANEWS.COM


on

Operation Hasta
Koo

ಬೆಂಗಳೂರು: ಅಫಜಲಪುರ ಮಾಜಿ ಶಾಸಕ, ಸಚಿವ ಮಾಲೀಕಯ್ಯ ಗುತ್ತೇದಾರ್‌, ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಬೆಂಬಲಿಗರು ಶುಕ್ರವಾರ ಕಾಂಗ್ರೆಸ್‌ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ (Operation Hasta) ಸೇರಿದ್ದಾರೆ.

ಮಾಜಿ ಸಚಿವ ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಉಂಟಾದ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಕಾಂಗ್ರೆಸ್‌ಗೆ ಮರಳಿದ್ದಾರೆ. ಹಾಗೆಯೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಪಕ್ಷದಿಂದ ದೂರ ಉಳಿದಿದ್ದ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ಇದೀಗ ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ.

ಬಿಜೆಪಿ ಬಗ್ಗೆ ಮಾಲೀಕಯ್ಯ ಗುತ್ತೇದಾರ್ ಅಸಮಾಧಾನ ಯಾಕೆ?

ಸಹೋದರ ನಿತಿನ್ ಗುತ್ತೇದಾರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ನಡುವಿನ ಸಂಬಂಧ ಮೊದಲಿನಿಂದಲೂ ಎಣ್ಣೆ ಶೀಗೇಕಾಯಿ ಆಗಿತ್ತು. ಒಬ್ಬರು ಒಂದು ಪಕ್ಷದಲ್ಲಿದ್ದರೆ ಮತ್ತೊಬ್ಬರು ಆ ಪಕ್ಷವನ್ನು ತೊರೆಯುತ್ತಾರೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಿತಿನ್‌ ಗುತ್ತೇದಾರ್‌ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಇದರಿಂದ ಮಾಲೀಕಯ್ಯ ಗುತ್ತೇದಾರ್‌ ಸೋಲು ಕಾಣಬೇಕಾಯಿತು. ಈಗ ಈಚೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿತಿನ್‌ ಗುತ್ತೇದಾರ್‌ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇದು ಮಾಲೀಕಯ್ಯ ಅವರ ಕಣ್ಣನ್ನು ಕೆಂಪಗಾಗಿಸಿತ್ತು.

ಇದನ್ನೂ ಓದಿ: Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

ನಿತಿನ್‌ ಬಿಜೆಪಿ ಸೇರ್ಪಡೆ ಸಂಬಂಧ ಮಾಲೀಕಯ್ಯ ಗುತ್ತೇದಾರ್‌ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2018ರ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಗೆಲ್ಲಬೇಕಿತ್ತು. ನಿತಿನ್‌ ಮತ್ತು ಕೆಲವು ಬಿಜೆಪಿ ಮುಖಂಡರು ನನಗೆ ಮೋಸ ಮಾಡಿದರು. 2023ರಲ್ಲಿ ನಿತಿನ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ನನ್ನನ್ನು ಸೋಲಿಸಿದ್ದಾನೆ. ಈಗ ಆತನಿಂದ ಕೋಟಿ ಕೋಟಿ ಹಣ ಪಡೆದು ಅವನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್‌ ಗಂಭೀರ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

Continue Reading
Advertisement
Modi in Karnataka today Massive rally in Chikkaballapur and roadshow in Bengaluru
Lok Sabha Election 202412 mins ago

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Kids Sleep
ಲೈಫ್‌ಸ್ಟೈಲ್12 mins ago

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ6 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ6 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ7 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ7 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ7 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 20247 hours ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ15 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌