Chandrayaan 3: ದೇಗುಲ ಭೇಟಿ ಕುರಿತು ಇಸ್ರೋ ಅಧ್ಯಕ್ಷ ಸೋಮನಾಥ್‌ ಮೊದಲ ಪ್ರತಿಕ್ರಿಯೆ; ಕುಹಕಿಗಳಿಗೆ ಕುಟುಕಿದ್ದು ಹೀಗೆ... - Vistara News

ದೇಶ

Chandrayaan 3: ದೇಗುಲ ಭೇಟಿ ಕುರಿತು ಇಸ್ರೋ ಅಧ್ಯಕ್ಷ ಸೋಮನಾಥ್‌ ಮೊದಲ ಪ್ರತಿಕ್ರಿಯೆ; ಕುಹಕಿಗಳಿಗೆ ಕುಟುಕಿದ್ದು ಹೀಗೆ…

Chandrayaan 3: ಚಂದ್ರಯಾನ 3 ಯಶಸ್ವಿಯಾಗಿ, ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾದ ಬೆನ್ನಲ್ಲೇ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಅವರು ತಿರುವನಂತಪುರಂನಲ್ಲಿರುವ ಭದ್ರಕಾಳಿ ದೇವಾಲಯಕ್ಕೆ ಭೇಟಿ ನೀಡಿದರು.

VISTARANEWS.COM


on

S Somanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಚಂದ್ರಯಾನ 3 ಮಿಷನ್‌ (Chandrayaan 3) ಯಶಸ್ವಿ ಬಳಿಕ ಇದೇ ಮೊದಲ ಬಾರಿಗೆ ತವರು ರಾಜ್ಯ ಕೇರಳಕ್ಕೆ ಭೇಟಿ ನೀಡಿದ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌ (S Somanath) ಅವರು ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು ಭದ್ರಕಾಳಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದಾದ ಬಳಿಕ ದೇವಾಲಯಕ್ಕೆ ಭೇಟಿ ನೀಡುವ ಕುರಿತು ಅವರು ಸ್ಪಷ್ಟನೆ ನೀಡಿದರು. ಹಾಗೆಯೇ, “ಸತ್ವಕ್ಕಾಗಿ ವಿಜ್ಞಾನ, ಅಂತಃಸತ್ವಕ್ಕಾಗಿ ದೇವಾಲಯ” ಎಂದು ಹೇಳುವ ಮೂಲಕ ಕುಹಕವಾಡುವವರಿಗೆ ಪರೋಕ್ಷವಾಗಿಯೇ ಚಾಟಿ ಬೀಸಿದರು.

“ನಾನೊಬ್ಬ ಪರಿಶೋಧಕ. ನಾನು ಚಂದ್ರನ ಕುರಿತು ಸಂಶೋಧನೆ, ಅಧ್ಯಯನ ಮಾಡುತ್ತೇನೆ. ಹಾಗೆಯೇ, ನನ್ನೊಳಗಿನ ಅಂತಃಸತ್ವವನ್ನೂ ಹುರಿಗೊಳಿಸುತ್ತೇನೆ. ನಾನು ವಿಜ್ಞಾನ ಹಾಗೂ ಅಧ್ಯಾತ್ಮವನ್ನೂ ಅನ್ವೇಷಿಸುತ್ತೇನೆ. ಹಾಗಾಗಿ, ದೇವಾಲಯಗಳಿಗೆ ಭೇಟಿ ನೀಡುತ್ತೇನೆ, ಧಾರ್ಮಿಕ ಪುಸ್ತಕಗಳನ್ನು ಓದುತ್ತೇನೆ. ಆ ಮೂಲಕ ನಮ್ಮ ಅಸ್ತಿತ್ವ ಹಾಗೂ ಬ್ರಹ್ಮಾಂಡದ ಪಯಣದ ಕುರಿತು ತಿಳಿದುಕೊಳ್ಳಲು ಯತ್ನಿಸುತ್ತೇನೆ” ಎಂದು ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು.

“ನಾವು ಹೊರಗಿನ ಪ್ರಪಂಚದಲ್ಲಿ ಏನು ಮಾಡುತ್ತೇವೆ, ಯಾವ ಸಂಶೋಧನೆ, ಅಧ್ಯಯನ ಕೈಗೊಳ್ಳುತ್ತೇವೆ ಎಂಬುದು ಎಷ್ಟು ಮುಖ್ಯವೋ, ನಮ್ಮ ಆಂತರ್ಯದ ಭಾವನೆಗಳಿಗೂ ಕಿವಿ ಕೊಡುವುದು, ಆಂತರ್ಯದ ಶೋಧನೆಗೆ ಸಮಯ ನೀಡುವುದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಹಾಗಾಗಿಯೇ ನಾನು ಬಾಹ್ಯ ಪ್ರಪಂಚಕ್ಕೆ ವಿಜ್ಞಾನವನ್ನು ನೆಚ್ಚಿಕೊಂಡಿದ್ದರೆ, ಆಂತರಿಕ ಪ್ರಪಂಚಕ್ಕೆ ದೇವಾಲಯಗಳ ಮೊರೆ ಹೋಗುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: Chandrayaan 3: ಚಂದ್ರನ ಗೆದ್ದ ಭಾರತ, ಬಾಹ್ಯಾಕಾಶ ಆಸಕ್ತರ ಮನ ಗೆದ್ದ ವಿಸ್ತಾರ ನ್ಯೂಸ್‌

ಜುಲೈ 14ರಂದು ಚಂದ್ರಯಾನ 3 ರಾಕೆಟ್‌ ಉಡಾವಣೆಗೂ ಮೊದಲು ಇಸ್ರೋ ವಿಜ್ಞಾನಿಗಳು ತಿರುಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಇದಕ್ಕೆ ಕೆಲವೊಂದಿಷ್ಟು ಬುದ್ಧಿಜೀವಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ವಿಜ್ಞಾನಿಗಳಾಗಿ ವಿಜ್ಞಾನದಲ್ಲಿ ನಂಬಿಕೆ ಇಡಬೇಕು ಎಂದೆಲ್ಲ ಹೇಳಿದ್ದರು. ಆದರೂ, ವಿಜ್ಞಾನಿಗಳ ನಂಬಿಕೆ, ಆಚರಣೆ ಪರವಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚಂದ್ರಯಾನ 3 ಮಿಷನ್‌ ಆಗಸ್ಟ್‌ 23ರಂದು ಯಶಸ್ವಿಯಾಗಿದ್ದು, ಭಾನುವಾರ (ಆಗಸ್ಟ್‌ 27) ಸೋಮನಾಥ್‌ ಅವರು ತಿರುವನಂತಪುರಂ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Voter ID: ಮತದಾನ ಮಾಡಲು ವೋಟರ್ ಐಡಿ ಕಡ್ಡಾಯವಾಗಿದೆ. ಆದರೆ ವೋಟರ್ ಐಡಿ ಇಲ್ಲದೇ ಇದ್ದರೂ ಚಿಂತೆ ಬೇಡ. ಕೆಲವೊಂದು ದಾಖಲೆಗಳನ್ನು ತೋರಿಸಿ ಮತ ಚಲಾಯಿಸಬಹುದು. ಆ ದಾಖಲೆಗಳು ಯಾವುದು ಗೊತ್ತೇ? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Koo

ಬೆಂಗಳೂರು: ಲೋಕಸಭಾ ಚುನಾವಣೆ- 2024ರ (Lok Sabha election 2024) ಅಂಗವಾಗಿ ರಾಜ್ಯದಲ್ಲಿ (karnataka) ಏಪ್ರಿಲ್ 26ರಂದು ಮತದಾನ (voting) ನಡೆಯಲಿದ್ದು, ಈ ಸಂದರ್ಭದಲ್ಲಿ ಮತದಾರರ ಗುರುತು ಚೀಟಿಯನ್ನು (voter id) ಪ್ರತಿಯೊಬ್ಬ ಅರ್ಹ ಮತದಾರನೂ ಹೊಂದಿರಲೇಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ (Voter ID) ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.

ಮತದಾರರ ಗುರುತು ಚೀಟಿಯು ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮತದಾರನ ಗುರುತು, ವಾಸಸ್ಥಳ, ಜನನ ಮತ್ತು ಇತರ ವಿವರಗಳನ್ನು ದೃಢೀಕರಿಸುವ ಇದು ಮಹತ್ವದ ಅಧಿಕೃತ ದಾಖಲೆಗಳಲ್ಲಿ ಒಂದಾಗಿದೆ.
ಮತದಾನವು ನಮ್ಮ ಮೂಲಭೂತ ಹಕ್ಕು ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಜವಾಬ್ದಾರಿಯಾಗಿದೆ. ಇದಕ್ಕಾಗಿ ವೋಟರ್ ಐಡಿ ಬಹಳ ಮುಖ್ಯವಾದ ದಾಖಲೆಯಾಗಿದೆ. ಯಾಕೆಂದರೆ ಅದನ್ನು ಹೊಂದಿರುವವರ ಗುರುತು ಮತ್ತು ವಿವರಗಳನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

ಯಾರು ಅರ್ಹರು?

ಭಾರತದ ಚುನಾವಣಾ ಆಯೋಗದ ಪ್ರಕಾರ ನಾಗರಿಕರು ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಮತದಾರರಾಗಲು ಅರ್ಹರಾಗಿರುತ್ತಾರೆ. 18 ವರ್ಷ ವಯಸ್ಸಿನ ಪ್ರತಿಯೊಬ್ಬ ನಾಗರಿಕರು ಯಾವುದಾದರೂ ನಿರ್ಧಿಷ್ಟ ಕಾರಣದಿಂದ ಅನರ್ಹಗೊಳಿಸದ ಹೊರತು ಮತದಾರರ ಗುರುತು ಚೀಟಿ ಪಡೆಯಲು ದಾಖಲಾತಿ ನಡೆಸಲು ಅರ್ಹರಾಗಿರುತ್ತಾರೆ.
ಅರ್ಹ ಮತದಾರನ ಸಾಮಾನ್ಯ ನಿವಾಸದ ಸ್ಥಳದಲ್ಲಿ ಮಾತ್ರ ನೋಂದಣಿ ಮಾಡಿಸಬಹುದು ಹಾಗೂ ಒಂದೇ ಸ್ಥಳದಲ್ಲಿ ಮಾತ್ರ ನೋಂದಣಿ ಸಾಧ್ಯ.


ಸಾಗರೋತ್ತರ ಭಾರತೀಯರ ಪಾಸ್‌ಪೋರ್ಟ್‌ನಲ್ಲಿನೀಡಿರುವ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಾರೆ ಎಂದು ಪರಿಗಣಿಸಲಾಗುತ್ತದೆ. ಆದರೆ ಮತದಾರರು ತಮ್ಮ ಮನೆಯ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಲಾಗುವುದು.

ವೋಟರ್ ಐಡಿ ಇಲ್ಲದೆ ಮತ ಚಲಾಯಿಸಬಹುದೇ?

ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಅಗತ್ಯವಿದೆ. ಮತ ಚಲಾಯಿಸಲು ಚುನಾವಣಾ ಆಯೋಗ ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಅಧಿಕೃತ ಗುರುತಿನ ಯಾವುದೇ ಒಂದು ದಾಖಲೆಯನ್ನು ಒದಗಿಸಬೇಕು.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿದ ಸೂಚನೆಗಳ ಪ್ರಕಾರ ಮತದಾರರ ಗುರುತಿನ ಚೀಟಿ ಇಲ್ಲದೆಯೂ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರೆಗೆ ಮತ ಚಲಾಯಿಸಲು ಮತದಾರರು ಅರ್ಹನಾಗಿರುತ್ತಾರೆ.


ಹೆಸರಿದೆಯೇ ಪರಿಶೀಲಿಸಿ

ಮತದಾನ ಪ್ರಕ್ರಿಯೆಯಲ್ಲಿ (ಇಸಿಐ) ಪಾಲ್ಗೊಳ್ಳುವ ಮೊದಲು ಭಾರತದ ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಪರಿಶೀಲಿಸಬೇಕು. ಮತಪತ್ರವನ್ನು ಚಲಾಯಿಸುವ ಮೊದಲು ಈ ಪಟ್ಟಿಯನ್ನು ಪರಿಶೀಲಿಸುವುದು ನಿರ್ಣಾಯಕವಾಗಿದೆ ಏಕೆಂದರೆ ಅದರಲ್ಲಿ ನೀವು ಮತ ಚಲಾಯಿಸುವ ಅರ್ಹತೆಯನ್ನು ದೃಢೀಕರಿಸುತ್ತದೆ.

ಮತದಾರರ ಗುರುತಿನ ಚೀಟಿಯನ್ನು ಹೊಂದಿಲ್ಲದಿದ್ದರೆ ಚುನಾವಣಾ ಆಯೋಗವು ಗೊತ್ತುಪಡಿಸಿದ ಪರ್ಯಾಯ ದಾಖಲೆಗಳನ್ನು ಮತದಾರರು ಬಳಸಬಹುದು.

ಇತರ ದಾಖಲೆ ಯಾವುದು?

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಗುರುತಿಗಾಗಿ ಎಪಿಕ್ ಅಥವಾ ಮತದಾರರ ಐಡಿ ಹೊಂದಿಲ್ಲದಿದ್ದರೆ ಸಾರ್ವತ್ರಿಕ ಚುನಾವಣೆಯ ವೇಳೆ ವೋಟರ್ ಐಡಿ ಇಲ್ಲದೆಯೇ ಮತವನ್ನು ಚಲಾಯಿಸಲು ಬಳಸಬಹುದಾದ ದಾಖಲೆಗಳು ಇಂತಿವೆ.

ಆಧಾರ್ ಕಾರ್ಡ್, MNREGA ಜಾಬ್ ಕಾರ್ಡ್, ಬ್ಯಾಂಕ್/ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು, ಕಾರ್ಮಿಕ ಸಚಿವಾಲಯದ ಯೋಜನೆಯಡಿ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಿಗೆ, ಪ್ಯಾನ್ ಕಾರ್ಡ್, NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಪಬ್ಲಿಕ್ ಲಿಮಿಟೆಡ್ ಕಂಪೆನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿಗಳು/ ಎಂಎಲ್‌ಎಗಳು/ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು, ವಿಶಿಷ್ಟ ಅಂಗವೈಕಲ್ಯ ಐಡಿ (UDID) ಕಾರ್ಡ್ ಗಳನ್ನು ದಾಖಲೆಯಾಗಿ ಮತದಾನದ ವೇಳೆ ಗುರುತು ಚೀಟಿಯಾಗಿ ಮತದಾನ ಕೇಂದ್ರದಲ್ಲಿ ತೋರಿಸಬಹುದಾಗಿದೆ.

ನೋಂದಣಿ ಸ್ಥಿತಿ ಪರಿಶೀಲನೆ ಹೇಗೆ?

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸಿಕೊಂಡರೆ ಮಾತ್ರ ಮತ ಚಲಾಯಿಸಬಹುದು. ಪಟ್ಟಿಯಲ್ಲಿ ಹೆಸರು ಇದೆಯೇ, ಇಲ್ಲವೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ https://electoralsearch.eci.gov.in ಗೆ ಲಾಗಿನ್ ಆಗಿ ನೋಡಬಹುದು. ಅಲ್ಲದೇ ಮತದಾರರ ಸಹಾಯವಾಣಿ 1950ಕ್ಕೆ ಕರೆಯೂ ಪರಿಶೀಲನೆ ನಡೆಸಬಹುದಾಗಿದೆ.

Continue Reading

ರಾಜಕೀಯ

Himanta Biswa Sarma: ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಜನರಿಗೆ ಹೆಚ್ಚು ಸೂಕ್ತ: ಹಿಮಂತ ಬಿಸ್ವಾ ಶರ್ಮಾ

Himanta Biswa Sarma: ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಸಂಭಾವ್ಯ ಉಮೇದುವಾರಿಕೆ ಕುರಿತು ಮಾತನಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಹಾಗೂ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

VISTARANEWS.COM


on

By

Himanta Biswa Sarma
Koo

ಅಸ್ಸಾಂ: ಕಾಂಗ್ರೆಸ್ (congress) ಪಕ್ಷ ಪಾಕಿಸ್ತಾನದಲ್ಲಿ (pakistan) ಚುನಾವಣೆ (election) ಗೆಲ್ಲುವ ತಯಾರಿ ಮಾಡಿದಂತಿದೆ. ರಾಹುಲ್ ಗಾಂಧಿ (rahul gandhi) ಅವರು ಪ್ರಧಾನಿ (PM) ಅಭ್ಯರ್ಥಿಯಾಗಲು ಸೂಕ್ತವೇ ಎಂದು ಪ್ರಶ್ನಿಸಿರುವ ಅಸ್ಸಾಂ (assam) ಮುಖ್ಯಮಂತ್ರಿ (cm) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಸಂಭಾವ್ಯ ಉಮೇದುವಾರಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಪಪ್ಪುಗೆ ಉತ್ತಮ ಅಭ್ಯರ್ಥಿ ಎಂದು ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆ ಭಾರತಕ್ಕಿಂತ ಪಾಕಿಸ್ತಾನದ ಹಿತಾಸಕ್ತಿಗಳೊಂದಿಗೆ ಹೆಚ್ಚು ಹೊಂದಿಕೆಯಾಗಿದೆ. ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲುವ ರೀತಿಯಲ್ಲಿ ಸಿದ್ಧವಾಗಿದೆ. ನಾವು ಪ್ರಣಾಳಿಕೆಯನ್ನು ಓದಿದ್ದೇವೆ ಮತ್ತು ಓದಿದ ಅನಂತರ ಈ ಪ್ರಣಾಳಿಕೆಯು ಪಾಕಿಸ್ತಾನಕ್ಕೆ ಹೆಚ್ಚು ಮತ್ತು ಭಾರತಕ್ಕೆ ಕಡಿಮೆ ಎಂದು ತೀರ್ಮಾನಿಸಿದೆವು ಎಂದು ತಿಳಿಸಿದರು.

ಇದನ್ನೂ ಓದಿ: LoK Sabha Election 2024: ಚೊಂಬು ಆರೋಪಕ್ಕೆ ಚಿಪ್ಪು ಕೊಟ್ಟ ಬಿಜೆಪಿ! ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಪೋಸ್ಟರ್‌ ಬಿಡುಗಡೆ!

ದೇಶದ ಆರ್ಥಿಕತೆ ನಾಶಪಡಿಸುವ ಗುರಿ

ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಸಂಪನ್ಮೂಲಗಳನ್ನು ಕಸಿದುಕೊಂಡು ದೇಶದ ಆರ್ಥಿಕತೆಯನ್ನು ನಾಶಪಡಿಸುವ ಪ್ರಣಾಳಿಕೆಯನ್ನು ಮಾಡಿದೆ. ಆದ್ದರಿಂದ ನಾವು ಕಾಂಗ್ರೆಸ್ ಪ್ರಣಾಳಿಕೆಯನ್ನು ಸರಿಯಾದ ರೀತಿಯಲ್ಲಿ ವ್ಯಾಖ್ಯಾನಿಸಿದ್ದೇವೆ ಮತ್ತು ನಾನು ಈ ಪ್ರಣಾಳಿಕೆಯು ತುಷ್ಟೀಕರಣವಲ್ಲದೆ ಬೇರೇನೂ ಅಲ್ಲ ಎಂಬುದನ್ನು ತೋರಿಸಲು ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕುವುದಾಗಿ ಹೇಳಿದರು.

ಲೋಕಸಭೆ ಚುನಾವಣೆ 2024ರ ಪ್ರಯುಕ್ತ ಕಾಂಗ್ರೆಸ್ ಪಕ್ಷವು ತನ್ನ ‘ನ್ಯಾಯ ಪತ್ರ’ ಚುನಾವಣಾ ಪ್ರಣಾಳಿಕೆಯನ್ನು ಏಪ್ರಿಲ್ 5ರಂದು ಬಿಡುಗಡೆ ಮಾಡಿತು. ಇದರ ಕುರಿತು ಪ್ರಧಾನಮಂತ್ರಿಯವರು ಸರಿಯಾಗಿ ಹೇಳಿದ್ದಾರೆ. ಈ ದೇಶದ ಸಂಪನ್ಮೂಲಗಳಲ್ಲಿ ಎಲ್ಲರಿಗೂ ಹಕ್ಕಿದೆ ಎಂದು ಹೇಳಿದ್ದರು. ಆದರೆ ದೇಶದ ಸಂಪನ್ಮೂಲಗಳಲ್ಲಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಮೊದಲ ಹಕ್ಕು ಎಂದು ಹೇಳಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಉತ್ತರಿಸಬೇಕು, ನಾವಲ್ಲ. ಈ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ವಿವರಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ನ ಪ್ರಣಾಳಿಕೆಯು “ತಾಯಿ ಮತ್ತು ಸಹೋದರಿಯರ ಚಿನ್ನ” ತೆಗೆದುಕೊಂಡು ಆ ಸಂಪತ್ತನ್ನು ಹಂಚುವ ಬಗ್ಗೆ ಮಾತನಾಡುತ್ತದೆ ಎಂದು ಪ್ರಧಾನಿ ಮೋದಿ ಏಪ್ರಿಲ್ 21ರಂದು ನಡೆದ ರಾಲಿಯಲ್ಲಿ ಹೇಳಿದ ಅನಂತರ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಮೋದಿ ಏನು ಹೇಳಿದ್ದರು?

ಏಪ್ರಿಲ್ 21ರಂದು ನಡೆದ ರಾಲಿಯಲ್ಲಿಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನ ಪ್ರಣಾಳಿಕೆಯು ತಾಯಿ ಮತ್ತು ಸಹೋದರಿಯರ ಚಿನ್ನ ತೆಗೆದುಕೊಂಡು ಆ ಸಂಪತ್ತನ್ನು ಹಂಚುವ ಬಗ್ಗೆ ಮಾತನಾಡುತ್ತದೆ. ಅವರ ಮಂಗಳಸೂತ್ರವೂ ಅದರಲ್ಲಿ ಸೇರಿದೆ. ಚಿನ್ನದ ಬೆಲೆಯ ಪ್ರಶ್ನೆಯಲ್ಲ, ಅದು ಅವಳ ಜೀವನದ ಕನಸುಗಳಿಗೆ ಸಂಬಂಧಿಸಿದೆ. ಅದನ್ನು ನಿಮ್ಮ ಪ್ರಣಾಳಿಕೆಯಲ್ಲಿ ಕಸಿದುಕೊಳ್ಳುವ ಬಗ್ಗೆ ಹೇಗೆ ಮಾತನಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಅವರ ಸರ್ಕಾರವಾಗಿದ್ದಾಗ, ದೇಶದ ಸಂಪತ್ತಿನ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ. ಸಂಪತ್ತನ್ನು ಯಾರಿಗೆ ಹಂಚುತ್ತೀರಿ, ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚುತ್ತೀರಿ, ನಿಮ್ಮ ದುಡಿಮೆಯ ಹಣವನ್ನು ನುಸುಳುಕೋರರಿಗೆ ಹಂಚುತ್ತೀರಿ ಎಂದು ಹೇಳಿದ್ದರು. ಇದು ಸ್ವೀಕಾರಾರ್ಹವೇ? ತಾಯಿಯ, ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕಿ, ಆನಂತರ ಸಂಪತ್ತಿನ ಮೊದಲ ಹಕ್ಕು ಮುಸಲ್ಮಾನರದ್ದು ಎಂದು ಹೇಳಿದವರಿಗೆ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆ ಹೇಳುತ್ತಿದೆ ಎಂದು ಹೇಳಿದ್ದರು.

2006ರ ಡಿಸೆಂಬರ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಲ್ಪಸಂಖ್ಯಾತರು ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲು ಹಕ್ಕು ಪಡೆಯಬೇಕು ಎಂದು ಹೇಳಿರುವುದನ್ನು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದರು.

Continue Reading

ದೇಶ

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

Bridge Collapse: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ರಾತ್ರಿ ಕುಸಿದಿದೆ. ಬಲವಾದ ಗಾಳಿ ಬೀಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಚ್ಚರಿ ಎಂದರೆ ಸೇತುವೆ ಕುಸಿಯುವ ಕೇವಲ ಒಂದು ನಿಮಿಷದ ಮೊದಲು ಸುಮಾರು 65 ಜನರಿದ್ದ ಮದುವೆ ಬಸ್‌ ಈ ಸೇತುವೆಯ ಕೆಳಗಿನಿಂದ ಹಾದು ಹೋಗಿತ್ತು.

VISTARANEWS.COM


on

Bridge Collapse
Koo

ಹೈದರಾಬಾದ್‌: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ರಾತ್ರಿ ಕುಸಿದಿದೆ (Bridge Collapse). ಸುಮಾರು 100 ಅಡಿ ಅಂತರದ ಎರಡು ಕಂಬಗಳ ನಡುವಿನ ಭಾಗ ರಾತ್ರಿ 9.45ರ ಸುಮಾರಿಗೆ ಬೀಸಿದ ಬಲವಾದ ಗಾಳಿಗೆ ಕುಸಿದು ಬಿದ್ದಿದೆ. ಸೇತುವೆಯ ಉಳಿದ ಭಾಗವೂ ಕುಸಿಯುವ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ತಪ್ಪಿದ ಭಾರೀ ದೊಡ್ಡ ದುರಂತ

ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ. ʼʼಸೇತುವೆ ಕುಸಿಯುವ ಕೇವಲ ಒಂದು ನಿಮಿಷದ ಮೊದಲು ಸುಮಾರು 65 ಜನರಿದ್ದ ಮದುವೆ ಬಸ್‌ ಈ ಸೇತುವೆಯ ಕೆಳಗಿನಿಂದ ಹಾದು ಹೋಗಿತ್ತುʼʼ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮನೇರ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸುಮಾರು ಒಂದು ಕಿಲೋ ಮೀಟರ್ ಉದ್ದದ ಸೇತುವೆ ನಿರ್ಮಾಣಕ್ಕೆ 2016ರಲ್ಲಿ ಅಂದಿನ ತೆಲಂಗಾಣ ವಿಧಾನಸಭಾ ಸ್ಪೀಕರ್ ಎಸ್.ಮಧುಸೂದನ ಚಾರಿ ಮತ್ತು ಸ್ಥಳೀಯ ಶಾಸಕ ಪುಟ್ಟ ಮಧು ಚಾಲನೆ ನೀಡಿದ್ದರು. ಆದರೆ ಇನ್ನೂ ಅದು ಪೂರ್ಣಗೊಂಡಿಲ್ಲ. ಈ ಸೇತುವೆ ನಿರ್ಮಾಣಕ್ಕೆ ಸುಮಾರು 49 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮಂಥಣಿ, ಪರಕಲ್ ಮತ್ತು ಜಮ್ಮಿಕುಂಟಾ ಎಂಬ ಮೂರು ಪಟ್ಟಣಗಳ ನಡುವಿನ ಅಂತರವನ್ನು ಸುಮಾರು 50 ಕಿ.ಮೀ.ನಷ್ಟು ಕಡಿಮೆ ಮಾಡಲು ಈ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಒಂದು ವರ್ಷದಲ್ಲಿ ಅಂದರೆ 2017ರಲ್ಲಿಯೇ ಕಾಮಗಾರಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿತ್ತು. ಸರ್ಕಾರವು ಬಾಕಿ ಹಣವನ್ನು ಪಾವತಿಸದ ಕಾರಣ ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಅಚ್ಚರಿ ಎಂದರೆ ಇದೇ ಗುತ್ತಿಗೆದಾರ ವೇಮುಲವಾಡದಲ್ಲಿ ಸೇತುವೆಯನ್ನು ನಿರ್ಮಿಸಿದ್ದರು. ಅದು 2021ರಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿತ್ತು.

ಐದು ವರ್ಷಗಳಿಂದ ಸ್ಥಳೀಯರು ಸೇತುವೆಯ ಕೆಳಗೆ ಮಣ್ಣಿನ ರಸ್ತೆಯನ್ನು ಬಳಸುತ್ತಿದ್ದಾರೆ. ʼʼಸೇತುವೆ ಕಾಮಗಾರಿ ಶೇ. 60ರಷ್ಟೂ ಪೂರ್ಣಗೊಳ್ಳದ ಕಾರಣ ಕಳೆದ ವರ್ಷ ಹೆಚ್ಚುವರಿಯಾಗಿ 11 ಕೋಟಿ ರೂ. ಸೇರಿಸಲಾಗಿತ್ತು. ಆದರೂ ಕಾಮಗಾರಿ ನಡೆಯಲಿಲ್ಲʼʼ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲ್ಟಿಮೋರ್‌ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ

ಕ್ರಿಸ್‌ಮಸ್‌ ಆಚರಣೆಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕುಸಿತ

ಕೇರಳದಲ್ಲಿ ಕ್ರಿಸ್‌ಮಸ್‌ ಆಚರಣೆಗೆಂದು ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕುಸಿದು ಎಂಟು ಮಂದಿ ಗಾಯಗೊಂಡ ಘಟನೆ ಡಿಸೆಂಬರ್‌ನಲ್ಲಿ ನಡೆದಿತ್ತು. ತಿರುವನಂತಪುರಂ ಜಿಲ್ಲೆಯ ಪೂವರ್‌ ಪ್ರದೇಶದಲ್ಲಿ ಡಿಸೆಂಬರ್‌ 25ರ ರಾತ್ರಿ ಕ್ರೈಸ್ತ ಸಮುದಾಯದ ನೂರಾರು ಜನ ಕ್ರಿಸ್‌ಮಸ್‌ ಆಚರಣೆಗೆಂದು ಒಂದೆಡೆ ಸೇರಿದ್ದರು. ಇದೇ ವೇಳೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಕುಸಿದ ಕಾರಣ ಎಂಟು ಮಂದಿ ಗಾಯಗೊಂಡಿದ್ದರು.

ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಮೇಲೆ ಹೆಚ್ಚಿನ ಜನ ನಿಂತಿದ್ದ ಕಾರಣ ಈ ದುರಂತ ಸಂಭವಿಸಿತ್ತು. ಏಕಾಏಕಿ ಸೇತುವೆ ಕುಸಿದ ಕಾರಣ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್‌ ವ್ಯವಸ್ಥೆ ಮಾಡುವ ಜತೆಗೆ ಜನರನ್ನು ರಕ್ಷಿಸಿದರು ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Dimond Smuggling: ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

dimond smuggling
Koo

ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದದ ವಜ್ರಗಳ ಹರಳುಗಳು (Diamond Smuggling) ಪತ್ತೆಯಾಗಿವೆ. ಅದರ ಮೌಲ್ಯ 6.48 ಕೋಟಿ ರೂಪಾಯಿ ಎಂದು ಮೌಲ್ಯ ಮಾಪನ ಮಾಡಲಾಗಿದೆ. ಅರೋಪಿ ಸಮೇತ ಅಧಿಕಾರಿಗಳು ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯನ್ನು ವಿವರಿಸಿದ ಅಧಿಕಾರಿಯೊಬ್ಬರು ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು/ ಅವುಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂತು ಎಂದು ಹೇಳಿದ್ದಾರೆ.

ಅದೇ ರೀತಿ ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಗೊತ್ತಾಯಿತು ಎಂದು ಅವರು ಹೇಳಿದ್ದಾರೆ.

ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆದು 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ನಂತರ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ರೆಸ್ಟೊರೆಂಟ್ ಮಾಲೀಕನ ನೆರವು

ಇದೇ ರೀತಿಯ ಘಟನೆಯಲ್ಲಿ, ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್​ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್​ನಲ್ಲಿ ತನ್ನ ಬೆಲ್ಟ್​​ನಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಇದನ್ನೂ ಓದಿ: Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

ನಿರ್ಗಮನ ಪ್ರದೇಶದಲ್ಲಿ ಚಿನ್ನವನ್ನು ಸ್ವೀಕರಿಸುವುದು ಮತ್ತು ಅದನ್ನು ಹೊರಗಿನ ದಂಧೆಯ ಸದಸ್ಯರಿಗೆ ಹಸ್ತಾಂತರಿಸುವುದು ಅವನ ಪಾತ್ರವಾಗಿತ್ತು. ಅವರು ಬಾಂದ್ರಾ ಟಿ ಜಂಕ್ಷನ್ನಲ್ಲಿ ನೂರುಲ್ ಹಸನ್ ಜೆ ಮತ್ತು ಕಲಂದರ್ ಅಝರುದ್ದೀನ್ ಎಂಬುವರಿಗೆ ಸರಕುಗಳನ್ನು ಹಸ್ತಾಂತರಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಸ್ಜಿದ್ ಬಂದರ್ ನ ಹೋಟೆಲ್ ಸ್ಟಾರ್ ನಲ್ಲಿ ತಂಗಿದ್ದ ನೂರುಲ್ ಮತ್ತು ಕಲಂದರ್ ಅವರು ಮೊಹಮ್ಮದ್ ಅಲಿ ರಸ್ತೆಯ ಆಂಥೋನಿ ಎಂಬುವರಿಗೆ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅವರು ಪ್ರತಿ ವಿತರಣೆಗೆ 3 ಲಕ್ಷ ರೂ.ಗಳನ್ನು ಪಡೆದರು, ಅದರಲ್ಲಿ 1.8 ಲಕ್ಷ ರೂ.ಗಳನ್ನು ಕಳ್ಳಸಾಗಣೆಗೆ ಸಹಾಯ ಮಾಡಿದ್ದಕ್ಕಾಗಿ ಪಾಂಡಿಯನ್ ಗೆ ಪಾವತಿಸುತ್ತಿದ್ದರು.

Continue Reading
Advertisement
Latest4 mins ago

Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Road Accident
ಕರ್ನಾಟಕ5 mins ago

Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

Himanta Biswa Sarma
ರಾಜಕೀಯ9 mins ago

Himanta Biswa Sarma: ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಜನರಿಗೆ ಹೆಚ್ಚು ಸೂಕ್ತ: ಹಿಮಂತ ಬಿಸ್ವಾ ಶರ್ಮಾ

Dungarees Fashion In Summer
ಫ್ಯಾಷನ್9 mins ago

Dungarees Fashion In Summer: ಬೇಸಿಗೆ ಸೀಸನ್‌ನಲ್ಲಿ ಹೀಗಿರಲಿ ಲೈಟ್‌ವೈಟ್‌ ಡಂಗ್ರೀಸ್‌ ಕಾಂಬಿನೇಷನ್‌

Voting awareness programme in Shira
ತುಮಕೂರು12 mins ago

Lok Sabha Election 2024: ಶಿರಾದಲ್ಲಿ ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ

Suresh Raina
ಪ್ರಮುಖ ಸುದ್ದಿ12 mins ago

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Karnataka Weather Forecast
ಮಳೆ16 mins ago

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Bridge Collapse
ದೇಶ27 mins ago

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

dimond smuggling
ದೇಶ45 mins ago

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Tongue Reveals Health
ಆರೋಗ್ಯ45 mins ago

Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌