Air India | ಏರ್‌ ಇಂಡಿಯಾದಲ್ಲಿ ವಿಸ್ತಾರ, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಲೀನ ಶೀಘ್ರ - Vistara News

ಪ್ರಮುಖ ಸುದ್ದಿ

Air India | ಏರ್‌ ಇಂಡಿಯಾದಲ್ಲಿ ವಿಸ್ತಾರ, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಲೀನ ಶೀಘ್ರ

ಏರ್‌ ಇಂಡಿಯಾದಲ್ಲಿ ಟಾಟಾ ಸಮೂಹದ ವಿಸ್ತಾರ ಏರ್‌ಲೈನ್‌, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಶೀಘ್ರ ವಿಲೀನವಾಗಲಿದೆ. (Air India) ವಿಸ್ತಾರ ಏರ್‌ಲೈನ್‌ ಬ್ರಾಂಡ್‌ ಅನ್ನು ಟಾಟಾ ಸಮೂಹ ಕೈಬಿಡುವ ಸಾಧ್ಯತೆ ಇದೆ.

VISTARANEWS.COM


on

air india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಏರ್‌ ಇಂಡಿಯಾದಲ್ಲಿ ಟಾಟಾ ಸಮೂಹದ ವಿಸ್ತಾರ ಏರ್‌ಲೈನ್‌, (Air India ) ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಶೀಘ್ರದಲ್ಲಿಯೇ ವಿಲೀನವಾಗಲಿದೆ. ವಿಸ್ತಾರ ಏರ್‌ಲೈನ್‌ ಬ್ರಾಂಡ್‌ ಅನ್ನು ಟಾಟಾ ಸಮೂಹ ಕೈ ಬಿಡುವ ಸಾಧ್ಯತೆ ಇದೆ.

ಟಾಟಾ ಸಮೂಹದ ಪ್ರವರ್ತಕ ಸಂಸ್ಥೆಯಾಗಿರುವ ಟಾಟಾ ಟ್ರಸ್ಟ್‌ ಈ ಪ್ರಕ್ರಿಯೆಯನ್ನು ಆರಂಭಿಸಿದೆ. ವಿಸ್ತಾರ ಏರ್‌ಲೈನ್‌ ಅನ್ನು ಟಾಟಾ ಸಮೂಹವು ಸಿಂಗಾಪುರ ಏರ್‌ಲೈನ್ಸ್‌ ಜತೆ ಜಂಟಿ ಸಹಭಾಗಿತ್ವದಲ್ಲಿ ನಡೆಸುತ್ತಿದೆ. ಇದೀಗ ವಿಲೀನ ಕುರಿತು ಸರಣಿ ಮಾತುಕತೆ ಆರಂಭವಾಗಿದೆ. ಇನ್ನೊಂದು ವಾರದಲ್ಲಿ ಅಧಿಕೃತ ಘೋಷಣೆಯಾಗುವ ನಿರೀಕ್ಷೆ ಇದೆ.

ವಿಲೀನದ ಬಳಿಕ ಏರ್‌ ಇಂಡಿಯಾ ಮಾರುಕಟ್ಟೆ ಪಾಲು ಮತ್ತು ವಿಮಾನಗಳ ಗಾತ್ರದ ದೃಷ್ಟಿಯಿಂದ ದೇಶದ ಎರಡನೇ ಅತಿ ದೊಡ್ಡ ಏರ್‌ಲೈನ್‌ ಎನ್ನಿಸಲಿದೆ. ಏರ್‌ ಇಂಡಿಯಾ ಈ ವಿಲೀನದ ನಂತರ ಕಡಿಮೆ ದರದ ಸೇವೆ ಒದಗಿಸುವ ಏರ್‌ಲೈನ್‌ ಮತ್ತು ಪೂರ್ಣ ಪ್ರಮಾಣದ ಏರ್‌ಲೈನ್‌ ಅನ್ನು ಹೊಂದಲಿದೆ. ಏರ್‌ ಇಂಡಿಯಾ ಬತ್ತಳಿಕೆಯಲ್ಲಿ ವಿಮಾನಗಳ ಸಂಖ್ಯೆ 233ಕ್ಕೆ ಏರಿಕೆಯಾಗಲಿದೆ.

ವಿಸ್ತಾರ ಏರ್‌ಲೈನ್‌ನ ಮಾತೃಸಂಸ್ಥೆಯಾದ ಟಾಟಾ ಎಸ್‌ಐಎ ಏರ್‌ಲೈನ್ಸ್‌ನಲ್ಲಿ 49% ಷೇರುಗಳನ್ನು ಒಳಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಯಿಂದ ಆಕ್ಷೇಪ!; ವಿಡಿಯೊ ಇದೆ

Lok Sabah Election: ಪ್ರಣೀತಿ ಶಿಂಧೆ ಅವರು 2003-2004ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ. ಅವರು ಸೋಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದಾರೆ. ಲೋಕಸಭೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಸೋಲಾಪುರದಲ್ಲಿ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

VISTARANEWS.COM


on

lok sabha Election
Koo

ಮುಂಬಯಿ: ಮಹಾರಾಷ್ಟ್ರದ ಸೋಲಾಪುರದಲ್ಲಿ (Lok Sabha Election) ಕಾಂಗ್ರೆಸ್ ಅಭ್ಯರ್ಥಿ ಪ್ರಣೀತಿ ಶಿಂಧೆ ಪರ ಬಾಲಿವುಡ್ ಬಾದ್​ ಶಾ ಶಾರುಖ್ ಖಾನ್ (Shah Rukh Khan) ಅವರನ್ನೇ ಹೋಲುವ ವ್ಯಕ್ತಿಯೊಬ್ಬರು ಪ್ರಚಾರ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು. ಕಾಂಗ್ರೆಸ್ ಪಕ್ಷದ ‘ಹಗರಣ’ ಎಂದು ಕರೆದಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಚುನಾವಣಾ ಆಯೋಗ ಮತ್ತು ಶಾರುಖ್ ಖಾನ್ ಅವರನ್ನು ಟ್ಯಾಗ್ ಮಾಡಿ ಪ್ರಚಾರದ ಬಗ್ಗೆ ಕೆಲವು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ . “ಕಾಂಗ್ರೆಸ್ ಪಕ್ಷವು ಜನರನ್ನು ನಾಚಿಕೆಯಿಲ್ಲದೆ ಮತ್ತು ಬಹಿರಂಗವಾಗಿ ಮೂರ್ಖರನ್ನಾಗಿಸಲು ಮುಂದಾಗಿದೆ.. ನಕಲಿ ಸಮೀಕ್ಷೆಗಳನ್ನು ಹರಡುವುದು, ಭಾರತ ವಿರೋಧಿ ನಿರೂಪಣೆಗಳನ್ನು ರಚಿಸುವುದು, ಎಐ ಬಳಸಿ ಸೆಲೆಬ್ರಿಟಿಗಳ ಡೀಪ್ ಫೇಕ್​​ಗಳನ್ನು ನಿರ್ಮಿಸುತ್ತದೆ. ಈ ಪಕ್ಷವು ಈಗಾಗಲೇ ಇವಿಎಂಗಳನ್ನು ದೂಷಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ವರದಿಗಳ ಪ್ರಕಾರ ಇದು ಶಾರುಖ್ ಖಾನ್ ಅವರ ಹೋಲುವ ಇಬ್ರಾಹಿಂ ಖಾದ್ರಿ ಎಂಬುವರು ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಇಬ್ರಾಹಿಂ ಖಾದ್ರಿ ಶಾರುಖ್ ಖಾನ್ ಅವರ ತದ್ರೂಪಿ ಎಂದೇ ಪ್ರಸಿದ್ದರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಅಭಿಮಾನಿಗಳನ್ನು ಹೊಂದಿದ್ದಾರೆ. ಶಾರುಖ್​ ಖಾನ್​ ಅವರ ರಯೀಸ್ ಸಿನಿಮಾ ಬಿಡುಗಡೆಯಾದಾಗ ಗುಜರಾತ್ ಮೂಲದ ಇಬ್ರಾಹಿಂ ಖಾದ್ರಿ ಖ್ಯಾತಿ ಪಡೆದುಕೊಂಡಿದ್ದರು. ಏಕೆಂದರೆ ಶಾರುಖ್​ ಅವರೊಂದಿಗಿನ ಖಾದ್ರಿ ಅವರ ಹೋಲಿಕೆ ಈ ವೇಳೆ ಗಮನಕ್ಕೆ ಬಂದಿತ್ತು. ಖಾದ್ರಿ ಶಾರುಖ್​ ಅವರಂತೆಯೇ ಮಾತನಾಡುವ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾರೆ. ಶಾರುಖ್ ಅವರ ಸಿಗ್ನೇಚರ್ ಸ್ಟೈಲ್​ಗಳನ್ನು ನಕಲ ಮಾಡುತ್ತಾರೆ. ಅವರ ನೃತ್ಯ ಚಲನೆಗಳನ್ನೂ ಅನುಕರಣೆ ಮಾಡುತ್ತಾರೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಶಾರುಖ್ ಅವರ ತದ್ರೂಪಿ ಖಾದರ್​ ಪೋನಿಟೈಲ್ ಹೊಂದಿದ್ದಾರೆ. ಜನರತ್ತ ಕೈ ಬೀಸುತ್ತಾ ತೆರೆದ ವಾಹನದಲ್ಲಿ ಸಾಗಿದ್ದಾರೆ. ಆವಾಹನದಲ್ಲಿ ರಾಹುಲ್ ಗಾಂಧಿ, ಪ್ರಣೀತಿ ಶಿಂಧೆ ಅವರ ಭಾವಚಿತ್ರವಿರುವ ಕಾಂಗ್ರೆಸ್ ಬ್ಯಾನರ್ ಇತ್ತು.

ಪ್ರಣೀತಿ ಶಿಂಧೆ ಅವರು 2003-2004ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ. ಅವರು ಸೋಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದಾರೆ. ಲೋಕಸಭೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಸೋಲಾಪುರದಲ್ಲಿ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. 2019 ರಲ್ಲಿ ಸುಶೀಲ್ ಶಿಂಧೆ ಸೋಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಜೈಸಿದ್ದೇಶ್ವರ ಸ್ವಾಮಿ ವಿರುದ್ಧ ಸೋತಿದ್ದರು. ಈ ಬಾರಿ ಸುಶೀಲ್ ಶಿಂಧೆ ಅವರ ಪುತ್ರಿಯ ವಿರುದ್ಧ ಬಿಜೆಪಿ ರಾಮ್ ಸಾತ್ಪುತೆ ಅವರನ್ನು ಕಣಕ್ಕಿಳಿಸಿದೆ. ರಾಮ್ ಅವರು ಮಹಾರಾಷ್ಟ್ರದ ಮಾಲ್ಶಿರಾಸ್ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ವೀಡಿಯೊ ವೈರಲ್ ಆಗಿತ್ತು.

Continue Reading

ಪ್ರಮುಖ ಸುದ್ದಿ

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Narayana Murthy : ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

VISTARANEWS.COM


on

Narayana Murthy
Koo

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರ ಮೊಮ್ಮಗ ಏಕಾಗ್ರ ರೋಹನ್ ಕೇವಲ ಐದು ತಿಂಗಳ ವಯಸ್ಸಿನಲ್ಲಿ ಇನ್ಫೋಸಿಸ್​ ಸಂಸ್ಥೆಯಿಂದ 4.2 ಕೋಟಿ ರೂ.ಗಳ ಲಾಭಾಂಶವನ್ನು ಪಡೆದುಕೊಂಡಿದ್ದಾರೆ. ನಾರಾಯಣ ಮೂರ್ತಿ ಅವರು ಕಳೆದ ತಿಂಗಳು ಇನ್ಫೋಸಿಸ್​​ನ 240 ಕೋಟಿ ಮೌಲ್ಯದ 15 ಲಕ್ಷ ಷೇರುಗಳನ್ನು (0.04% ಪಾಲನ್ನು ಪುಟ್ಟ ಬಾಲಕನಿಗೆ ನೀಡಿದ್ದರು. ಆ ಷೇರುಗಳಿಗೆ ಈಗ ದೊಡ್ಡ ಮೊತ್ತದ ಡಿವಿಡೆಂಡ್​ ಸಿಕ್ಕಿದೆ.

ಎಕ್ಸ್​ಚೇಂಜ್​ ಫೈಲಿಂಗ್ ಪ್ರಕಾರ, ಏಕಾಗ್ರ ಇನ್ಫೋಸಿಸ್​ನ 15,00,000 ಷೇರುಗಳನ್ನು ಹೊಂದಿದ್ದಾನೆ. ಈ ವ್ಯವಹಾರವನ್ನು “ಆಫ್-ಮಾರ್ಕೆಟ್” ನಡೆಸಲಾಯಿತು ಎಂದು ಫೈಲಿಂಗ್ ಬಹಿರಂಗಪಡಿಸಿದೆ.

ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

ಶೇಕಡಾ 30ರಷ್ಟು ಲಾಭ ಹೆಚ್ಚಳ

ಇನ್ಫೋಸಿಸ್ ನಾಲ್ಕನೇ ತ್ರೈಮಾಸಿಕದಲ್ಲಿ ಲಾಭದಲ್ಲಿ 30% ಹೆಚ್ಚಳವನ್ನು ಘೋಷಿಸಿದೆ. ಕಳೆದ ವರ್ಷದ 6,128 ಕೋಟಿ ರೂ.ಗೆ ಹೋಲಿಸಿದರೆ 7,969 ಕೋಟಿ ರೂ.ಗೆ ತಲುಪಿದೆ. ಆದಾಯವು 37,923 ಕೋಟಿ ರೂ.ಗೆ ಸ್ವಲ್ಪ ಏರಿಕೆ ಕಂಡಿದೆ. ಮಾರ್ಚ್ 2024 ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ, ಒಟ್ಟು ಲಾಭವು 8.9% ರಷ್ಟು ಏರಿಕೆಯಾಗಿ 26,233 ಕೋಟಿ ರೂ.ಗೆ ತಲುಪಿದೆ/ ಕಾರ್ಯಾಚರಣೆಗಳಿಂದ ವಾರ್ಷಿಕ ಆದಾಯವು 4.7% ರಷ್ಟು ಏರಿಕೆಯಾಗಿ 1,53,670 ಕೋಟಿ ರೂ.ಗೆ ತಲುಪಿದೆ. ಇನ್ಫೋಸಿಸ್ ಮಂಡಳಿಯು 2024ರ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 20 ರೂ.ಗಳ ಅಂತಿಮ ಲಾಭಾಂಶ ಶಿಫಾರಸು ಮಾಡಿದೆ. ಜೊತೆಗೆ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಲಾಭಾಂಶವನ್ನು ಶಿಫಾರಸು ಮಾಡಿದೆ. ಹೆಚ್ಚುವರಿಯಾಗಿ, ಇನ್ಫೋಸಿಸ್ ಜರ್ಮನಿಯ ಇನ್-ಟೆಕ್ ಸಂಸ್ಥೆಯನ್ನು 450 ಮಿಲಿಯನ್ ಯುರೋಗಳ ಒಪ್ಪಂದದಲ್ಲಿ ಸ್ವಾಧೀನಪಡಿಸಿಕೊಳ್ಳಲು ಯೋಜಿಸಿದೆ.

ಇದನ್ನೂ ಓದಿ: CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

ಮುಂದಿನ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ 1-3% ಆದಾಯದ ಬೆಳವಣಿಗೆಯನ್ನು ನಿರೀಕ್ಷಿಸುತ್ತದೆ. ಸಂಶೋಧನಾ ಸಂಸ್ಥೆ ಮೋತಿಲಾಲ್ ಓಸ್ವಾಲ್ ಪ್ರಕಾರ, 2025ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಆದಾಯ ನಿರೀಕ್ಷೆಗಿಂತ ಕಡಿಮೆಯಾಗಿದೆ. ಆದರೆ ಇನ್ಫೋಸಿಸ್ ಮಧ್ಯಮಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂದು ಅವರು ಊಹೆ ಮಾಡಿದ್ದಾರೆ. ಇನ್ಫೋಸಿಸ್ 2025 ರ ಹಣಕಾಸು ವರ್ಷದ ನಂತರ ವೇಗವಾಗಿ ಬೆಳೆಯಲು ಪ್ರಾರಂಭಿಸಬಹುದು ಎಂದು ಹೇಳಿದೆ. ಟಿಸಿಎಸ್​ನಂತ ಕಂಪನಿಗಳಿಗೆ ಹೋಲಿಸಿದರೆ ಇನ್ಪೋಸಿಸ್​ ಷೇರುಗಳು ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಬಿಸಿನೆಸ್ ಟುಡೇ ವರದಿ ಮಾಡಿದೆ.

Continue Reading

ರಾಜಕೀಯ

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Neha Murder Case: ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಆರ್.‌ ಆಶೋಕ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Neha Murder case Congress creates jihadi Karnataka R Ashok
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಕೊಲೆ (Neha Murder Case) ಮಾಡಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಆರ್. ಅಶೋಕ್‌ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು.

ಇದನ್ನು ಲವ್‌ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತನಾಡುತ್ತಿದ್ದಾರೆ. ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಲವ್‌ ಜಿಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌

ಲವ್‌ ಜಿಹಾದ್‌, ಕೊಲೆ, ಗಲಭೆ ಮಾಡುವವರಿಗೆ ಮಾಡುವವರಿಗೆ ಪಾಸ್‌ಪೋರ್ಟ್‌ ಹಾಗೂ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್‌ ಸ್ಪೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ರಾಮೋತ್ಸವದಲ್ಲಿ ಜೈ ಶ್ರೀರಾಮ್‌ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು. ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಗದಗದಲ್ಲಿ ಒಂದೇ ಕುಟುಂಬದ ಕೊಲೆಯಾಗಿದೆ. ಕುಣಿಗಲ್‌ನಲ್ಲಿ ಬಿಜೆಪಿ ಬೆಂಬಲಿಗನ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಚಿತ್ರನಟಿಗೆ ಹಲ್ಲೆ ಮಾಡಲಾಗಿದೆ. ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್‌ ಕಿತ್ತುಹಾಕುವ ಕೆಲಸ ನಡೆದಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ಏನೂ ಮಾಡಿಲ್ಲ. ಓಲೈಕೆ ರಾಜಕಾರಣ ಪರಾಕಾಷ್ಠೆಗೆ ತಲುಪಿದೆ ಎಂದು ದೂರಿದರು.

ಕಾಂಗ್ರೆಸ್‌ನ ಹೊಸ ತೆರಿಗೆ

ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದು, ಒಬ್ಬ ಬಿಲ್ಡರ್‌ 7-8 ಕೋಟಿ ರೂ. ಕಾಂಗ್ರೆಸ್‌ಗೆ ಕೊಡಬೇಕಿದೆ. ಇದೇ ಕಾಂಗ್ರೆಸ್‌ನ ಹೊಸ ತೆರಿಗೆ. ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳನ್ನು ತೆರಿಗೆಯ ಮೂಲಕವೇ ನೀಡಲಾಗುತ್ತಿದೆ. ಯಾವುದೇ ಯೋಜನೆಯನ್ನು ಜೇಬಿನಿಂದ ನೀಡುತ್ತಿಲ್ಲ. ಇದರಿಂದ ಸಂಗ್ರಹವಾದ ಹಣವನ್ನು ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಜೆಸಿಬಿಯಲ್ಲಿ ಅಗೆಯುವಂತೆ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

ಕಾಂಗ್ರೆಸ್‌ ಕೋಟ್ಯಂತರ ಜನರಿಗೆ ಚೊಂಬು ನೀಡಿದೆ. 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿ ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಲಾಗಿದೆ. ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್‌ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ ಎಂದರು.

ಕಾಂಗ್ರೆಸ್‌ಗೆ ಸವಾಲು

ದೇಶ ಆಳಿದ ಹಾಗೂ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್‌ ಸರ್ಕಾರ ಏನು ಕೊಡುಗೆ ನೀಡಿದೆ ಎನ್ನುವುದನ್ನು ತಿಳಿಸಲಿ. ಈ ಬಾರಿ ಕರ್ನಾಟಕದ ಜಿಡಿಪಿ ದೇಶದ ಜಿಡಿಪಿಗಿಂತ ಕಡಿಮೆಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಏನು ಎನ್ನುವುದನ್ನು ಬಜೆಟ್‌ನಲ್ಲಿ ತಿಳಿಸಿಲ್ಲ. ಈ ಬಾರಿಯ ಆದಾಯ ತೀವ್ರವಾಗಿ ಇಳಿಕೆಯಾಗಿದೆ. ಅಭಿವೃದ್ಧಿ ಕಾರ್ಯಗಳು ಇಲ್ಲವಾಗಿರುವುದರಿಂದ ಜಿಡಿಪಿ ಬೆಳೆಯುವುದಿಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

Lok Sabha Election 2024

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

VVPAT Verification: ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ.

VISTARANEWS.COM


on

evm vvpat verification lok sbha election 2024
Koo

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

Continue Reading
Advertisement
Karnataka Weather Forecast
ಮಳೆ59 seconds ago

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

lok sabha Election
ಪ್ರಮುಖ ಸುದ್ದಿ24 mins ago

Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಯಿಂದ ಆಕ್ಷೇಪ!; ವಿಡಿಯೊ ಇದೆ

Road accident between bike and Bolero near Mudgal Two dead
ಕರ್ನಾಟಕ25 mins ago

Road Accident: ಮುದ್ಗಲ್‌ ಬಳಿ ಬೈಕ್‌ – ಬುಲೇರೋ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Wedding Saree Selection
ಫ್ಯಾಷನ್29 mins ago

Wedding Saree Selection: ಮದುವೆ ಸೀರೆಗಳನ್ನು ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಸೀರೆ ಎಕ್ಸ್‌ಫರ್ಟ್‌ಗಳ ಟಿಪ್ಸ್

ಶಿವಮೊಗ್ಗ39 mins ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Wipro Q4 Results
ವಾಣಿಜ್ಯ42 mins ago

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Fraud Case in Bengaluru
ಬೆಂಗಳೂರು58 mins ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ59 mins ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Narayana Murthy
ಪ್ರಮುಖ ಸುದ್ದಿ60 mins ago

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Neha Murder case Congress creates jihadi Karnataka R Ashok
ರಾಜಕೀಯ1 hour ago

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ2 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ13 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌