Weather alert | ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸೈಕ್ಲೋನ್ ಎಫೆಕ್ಟ್, ಬೆಂಗಳೂರು ಕೂಲ್‌ - Vistara News

ಪ್ರಮುಖ ಸುದ್ದಿ

Weather alert | ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸೈಕ್ಲೋನ್ ಎಫೆಕ್ಟ್, ಬೆಂಗಳೂರು ಕೂಲ್‌

ಬಂಗಾಳ ಕೊಲ್ಲಿ ವಾಯುಭಾರ ಕುಸಿತದ ಎಫೆಕ್ಟ್ ಬೆಂಗಳೂರಿಗೂ ತಟ್ಟಿದ್ದು, ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ನಿನ್ನೆಯಿಂದ ನಗರದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.

VISTARANEWS.COM


on

bangalore cool
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾಳ ಕೊಲ್ಲಿ ವಾಯುಭಾರ ಕುಸಿತದ ಎಫೆಕ್ಟ್ ಬೆಂಗಳೂರಿಗೂ ತಟ್ಟಿದ್ದು, ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ನಿನ್ನೆಯಿಂದ ನಗರದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.

ಸೋಮವಾರ ಬೆಳಗ್ಗೆಯಿಂದ ಮತ್ತೆ ಚಳಿ, ಮೋಡ ಕವಿದ ವಾತಾವರಣ ಹಬ್ಬಿದೆ. ಡಿಸೆಂಬರ್‌ನ ಚಳಿ ಈಗಾಗಲೇ ರಾಜಧಾನಿಯಲ್ಲಿ ಪಾರಮ್ಯ ಮೆರೆದಿದ್ದು, ಅದರ ಜತೆಗೆ ಸೈಕ್ಲೋನ್‌ ಎಫೆಕ್ಟ್‌ ಕೂಡ ಸೇರಿಕೊಂಡು ಹಿಲ್‌ ಸ್ಟೇಶನ್‌ ಥರದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯ ಸಾಧ್ಯತೆ ಇದೆ. ತುಂತುರು ಮಳೆಯಿಂದ, ಭಾರಿ ಮಳೆ ಸಾಧ್ಯತೆಯಿದೆ. ಚಳಿ, ಮೋಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Art Exhibition | ಹವಾಮಾನ ಬದಲಾವಣೆ ಕುರಿತ ಕಲಾ ಪ್ರದರ್ಶನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Fantasy Gaming: ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ ಎಂದು ಓಜಾ ಹೇಳಿದ್ದಾನೆ.

VISTARANEWS.COM


on

Fantasy Gaming
Koo

ಬೆಂಗಳೂರು: ಅದೃಷ್ಟ ಯಾವಾಗ ಬಾಗಿಲು ಬಡಿದು ಮನೆಯೊಳಗೆ ನುಗ್ಗುತ್ತದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಯಾಕೆಂದರೆ ಅದು ಅನಿರೀಕ್ಷಿತ, ಅಚ್ಚರಿ ಮತ್ತು ಅಪರೂಪ. ಇಂಥದ್ದೇ ಒಬ್ಬ ಅದೃಷ್ಟ ಶಾಲಿಯ ಪರಿಚಯವನ್ನು ನಿಮಗೆ ಮಾಡಿಸಬೇಕಾಗಿದೆ. ಅವರೇ ಬಿಹಾರದ ದೀಪು ಓಜಾ. ಭಾನುವಾರ ನಡೆದ ಕೆಕೆಆರ್ ಮತ್ತು ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಗೇಮಿಂಗ್ ಅಪ್ಲಿಕೇಶನ್​ನಲ್ಲಿ (Fantasy Gaming) ಐಪಿಎಲ್ ಫ್ಯಾಂಟಸಿ ಗೇಮಿಂಗ್ (Fantasy Gaming) ಆಡುವ ಮೂಲಕ ಬಿಹಾರದ ಅರ್ರಾ ಜಿಲ್ಲೆಯ ಕೊಹ್ಡಾ ಗ್ರಾಮದ ಈತ 1.5 ಕೋಟಿ ರೂಪಾಯಿ ಬಹುಮಾನ ಗೆದ್ದಿದ್ದಾನೆ. ಅವರು ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿ ಅದೃಷ್ಟಶಾಲಿ ಎನಿಸಿಕೊಂಡಿದ್ದಾರೆ. ಅಂದ ಹಾಗೆ ಓಜಾ 8 ನೇ ತರಗತಿಯಲ್ಲಿ ಫೇಲ್​, ಹಾಗೂ ಕಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಾನೆ. ಕ್ರಿಕೆಟ್​ನ ಗಂಧ ಗಾಳಿ ಗೊತ್ತಿಲ್ಲ.

ಕ್ರಿಕೆಟ್ ಬಗ್ಗೆ ನನಗೆ ಏನೂ ತಿಳಿದಿಲ್ಲ ಎಂಬುದಾಗಿ ಓಜಾ ಹೇಳಿದ್ದಾನೆ. ನನಗೆ ಬೇರೆ ಕೆಲಸವಿಲ್ಲದ ಕಾರಣ ಆಕಸ್ಮಿಕವಾಗಿ ತಂಡವನ್ನು ಆಯ್ಕೆ ಮಾಡಿದೆ ಎಂದಿದ್ದಾನೆ. “ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ. ಹೀಗಾಗಿ ತಂಡವನ್ನು ರಚಿಸಿದೆ. ಇದು ಕೆಕೆಆರ್ ಮತ್ತು ಆರ್​​ಸಿಬಿ ನಡುವಿನ ಪಂದ್ಯ ಎಂದು ಎಂದು ಓಜಾ ಹೇಳಿದ್ದಾನೆ.

ಇದನ್ನೂ ಓದಿ: Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

ಸಿಕ್ಕಿರುವ ದುಡ್ಡನ್ನು ಏನು ಮಾಡಬೇಕೆಂದು ಆತ ಇನ್ನೂ ನಿರ್ಧರಿಸಿಲ್ಲವಂತೆ. ಅಂದ ಹಾಗೆ ಫ್ಯಾಂಟಿಸಿ ಗೇಮ್​ಗಳು ಲೀಗ್​ ಕ್ರಿಕೆಟ್​ ಬೆಳವಣಿಗೆ ಬಳಿಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕ್ರಿಕೆಟ್​ ನೋಡುವ ಜತೆಗೆ ಆಟ ಆರಂಭಕ್ಕೆ ಮೊದಲು ತಂಡಗಳನ್ನು ರಚಿಸಿ ಬಹುಮಾನಗಳನ್ನು ಗೆಲ್ಲುತ್ತಿದ್ದಾರೆ. ಫ್ಯಾಂಟಸಿ ಗೇಮ್​ಗಳು ಒಂದರ್ಥದಲ್ಲಿ ಬದಲಾದ ಜಗತ್ತಿನಲ್ಲಿ ಹೊಸ ಸ್ಪರ್ಧಾ ವೇದಿಕೆಯಾಗಿದೆ. ಆದರೆ, ಅಪಾಯಕಾರಿಯೂ ಹೌದು. ಆ್ಯಪ್​​ಗಳಲ್ಲಿ ಆಡುವಾಗ ಅದಕ್ಕಾಗಿ ನಿರ್ದಿಷ್ಟ ಮೊತ್ತವನ್ನು ಕಷ್ಟಬೇಕಾಗುತ್ತದೆ. ಒಂದರ್ಥದಲ್ಲಿ ಕಾನೂನುಬದ್ಧ ಜೂಜು. ಹಣದಾಸೆಗೆ ಬೀಳುವ ಕೆಲವರು ಇದೇ ವೇದಿಕೆಗಳ ಮೂಲಕ ಲಕ್ಷಾಂತರ ರೂಪಾಯಿ ನಷ್ಟ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಆಗಿವೆ. ಮದ್ಯಪಾನದ ರೀತಿಯಲ್ಲಿಯೇ ಫ್ಯಾಂಟಸಿ ಗೇಮ್​ಗಳ ಜಾಹೀರಾತು ನೀಡುವಾಗ ಮುಂದಾಗುವ ಅಪಾಯಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.

Rohit Sharma : ಇಶಾನ್​ ಕಿಶನ್ ಜತೆ ಮಗುವಿನಂತೆ ಕ್ರಿಕೆಟ್​ ಆಡಿದ ರೋಹಿತ್​ ಶರ್ಮಾ

ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (Rajastan Royals ) ಮತ್ತು ಮುಂಬೈ ಇಂಡಿಯನ್ಸ್ (Mumbai Indians ) ನಡುವಿನ ಬಹುನಿರೀಕ್ಷಿತ ಐಪಿಎಲ್​ 2024ರ (IPL 2024) ಮುಖಾಮುಖಿಗೆ ಸಿದ್ಧತೆ ನಡೆಸುವ ವೇಳೆ ರೋಹಿತ್ ಶರ್ಮಾ (Rohit Sharma) ಅವರ ಬ್ಯಾಟಿಂಗ್​ ನೆಟ್ಟಿಗರ ಗಮನ ಸೆಳೆದಿದೆ. ಅವರ ಇಶಾನ್ ಕಿಶನ್​ಗೆ ವಿಕೆಟ್​ಕೀಪಿಂಗ್​ ಅಭ್ಯಾಸ ಮಾಡಲು ಮಕ್ಕಳಂತೆ ಬ್ಯಾಟ್ ಹಿಡಿದು ಬೀಸಿದ ಪ್ರಸಂಗ ನಡೆಯಿತು. ಏಪ್ರಿಲ್ 22 ರ ಸೋಮವಾರ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಮುಖಾಮುಖಿಗೆ ಮುಂಚಿತವಾಗಿ ಇವರಿಬ್ಬರು ಕ್ಯಾಚಿಂಗ್ ಅಭ್ಯಾಸದಲ್ಲಿ ತೊಡಗಿದ್ದರು. ಅದು ಸಣ್ಣ ಮಕ್ಕಳು ಆಡುವಂತೆ ಕಂಡು ಬಂತು.

ಮುಂಬೈ ಇಂಡಿಯನ್ಸ್ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರೋಹಿತ್ ಶರ್ಮಾ ಇಶಾನ್ ಕಿಶನ್ ಅವರ ವಿಕೆಟ್ ಕೀಪಿಂಗ್ ಕೌಶಲವನ್ನು ಹೆಚ್ಚಿಸಲು ಬ್ಯಾಟ್​ನಿಂದ ಸಣ್ಣ ಸಣ್ಣ ಹೊಡೆತಗಳನ್ನು ಹೊಡೆಯುತ್ತಿದ್ದರು. ಅದನ್ನು ಇಶಾನ್​ ಹಿಡಿಯುತ್ತಿದ್ದರು. ಈ ಅಭ್ಯಾಸದಿಂದ ಇಬ್ಬರಿಗೂ ಸಾಕಷ್ಟು ಲಾಭವಾಗುತ್ತದೆ.

ಇಶಾನ್ ರೋಹಿತ್ ಕಡೆಗೆ ಚೆಂಡುಗಳನ್ನು ಎಸೆದಾಗ ಇಬ್ಬರು ಆಟಗಾರರ ನಡುವಿನ ಸ್ನೇಹವು ಸ್ಪಷ್ಟವಾಯಿತು. ರೋಹಿತ್ ಶರ್ಮಾ ಕಿಶನ್​​ಗೆ ಕಡಿಮೆ ಅಂತರ ಕ್ಯಾಚ್​ಗಳನ್ನು ನೀಡುವಲ್ಲಿ ಅತಿ ಹೆಚ್ಚು ಉತ್ಸಾ ಹ ತೋರಿದ್ದರು. ಹಿರಿಯ ಆಟಗಾರರು ಯುವ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುವ ಇಂತಹ ನಿದರ್ಶನಗಳು ಮುಂಬೈ ಇಂಡಿಯನ್ಸ್ ನಂಥ ತಂಡಗಳಲ್ಲಿ ಮಾತ್ರ ಕಾಣಿಸುತ್ತದೆ. ಉಳಿದಂತೆ ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿ ಇಂಥದ್ದಕ್ಕೆಲ್ಲ ನೆರವಾಗುತ್ತಾರೆ.

Continue Reading

ವಿಜ್ಞಾನ

Zero Shadow Day: ನಾಳೆ ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Zero Shadow Day: ಎಲ್ಲರೂ ನಮ್ಮನ್ನು ತೊರೆದರೂ ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತು ನಾಳೆ ಕೆಲವು ನಿಮಿಷಗಳ ಮಟ್ಟಿಗೆ ಬೆಂಗಳೂರಿಗರ ಪಾಲಿಗೆ ಸುಳ್ಳಾಗಲಿದೆ. ಅಂದರೆ ಮಧ್ಯಾಹ್ನ ನೆರಳೇ ಮೂಡುವುದಿಲ್ಲ. ಇದನ್ನು ʼಶೂನ್ಯ ನೆರಳಿನ ದಿನʼ ಎನ್ನುತ್ತಾರೆ. ಇದು ಯಾಕೆ ಸಂಭವಿಸುತ್ತದೆ? ಏನಿದರ ವೈಶಿಷ್ಟ್ಯ? ಮುಂತಾದ ವಿವರ ಇಲ್ಲಿದೆ.

VISTARANEWS.COM


on

Zero Shadow Day
Koo

ಬೆಂಗಳೂರು: ನಾಳೆ (ಏಪ್ರಿಲ್‌ 24) ಬೆಂಗಳೂರಿಗರು ವಿಶಿಷ್ಟ ವಿದ್ಯಾಮಾನವೊಂದಕ್ಕೆ ಸಾಕ್ಷಿಯಾಗಲಿದ್ದಾರೆ. ಪ್ರತಿ ಕ್ಷಣವೂ ನಿಮ್ಮೊಂದಿಗೆ ಇರುವ ನೆರಳು ಕೆಲ ಹೊತ್ತು ನಿಮ್ಮನ್ನು ಬಿಟ್ಟು ದೂರ ಹೋಗಲಿದೆ. ಅಂದರೆ ಯಾವುದೇ ಲಂಬ ವಸ್ತುವೂ ನೆರಳನ್ನು ಹೊಂದಿರುವುದಿಲ್ಲ! ಇದನ್ನೇ ʼಶೂನ್ಯ ನೆರಳಿನ ದಿನʼ (Zero Shadow Day) ಎಂದು ಕರೆಯುತ್ತಾರೆ. ಇದು ಹೇಗೆ ರೂಪುಗೊಳ್ಳುತ್ತದೆ? ಏನಿದರ ವೈಶಿಷ್ಟ್ಯ ? ಮುಂತಾದ ನಿಮ್ಮ ಕುತೂಹಲಗಳಿಗೆ ಇಲ್ಲಿದೆ ಉತ್ತರ.

ಮಧ್ಯಾಹ್ನ 12.17ರಿಂದ 12.23ರ ನಡುವೆ ಈ ವಿದ್ಯಾಮಾನ ಸಂಭವಿಸಲಿದ್ದು, ಈ ವೇಳೆ ಸೂರ್ಯನ ಸ್ಥಾನವು ನಿಖರವಾಗಿ ಉತ್ತುಂಗದಲ್ಲಿರುತ್ತದೆ. ಹೀಗಾಗಿ ಎಲ್ಲ ವಸ್ತುಗಳ ನೆರಳು ಕಣ್ಮರೆಯಾಗುತ್ತದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಈ ಸಂದರ್ಭಕ್ಕಾಗಿ ತನ್ನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಏನಿದು ʼಶೂನ್ಯ ನೆರಳಿನ ದಿನʼ ?

ಸೂರ್ಯನು ಮಧ್ಯಾಹ್ನ ನಡು ನೆತ್ತಿಯ ಮೇಲಿರುವಾಗ ಲಂಬವಾಗಿರುವ ವಸ್ತುವಿಗೆ ಸ್ವಲ್ಪ ಮಾತ್ರವಾದರೂ ನೆರಳು ಇದ್ದೇ ಇರುತ್ತದೆ. ಆದರೆ ನಾಳೆ ಅಂಥ ಯಾವುದೇ ನೆರಳು ಇರುವುದಿಲ್ಲ. ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ.

ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಮತ್ತು ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ. ಈ ಪರಿಭ್ರಮಣ ಚಲನೆಯಿಂದಾಗಿ, ಒಂದು ಶೂನ್ಯ ನೆರಳು ದಿನವು ಉತ್ತರಾಯಣದಲ್ಲಿ (ಸೂರ್ಯ ಉತ್ತರದ ಕಡೆಗೆ ಚಲಿಸುವಾಗ) ಬರುತ್ತದೆ ಮತ್ತು ಇನ್ನೊಂದು ದಕ್ಷಿಣಾಯನದಲ್ಲಿ (ಸೂರ್ಯನು ದಕ್ಷಿಣಕ್ಕೆ ಚಲಿಸುವಾಗ) ಬರುತ್ತದೆ. 23.5 ಡಿಗ್ರಿ ಉತ್ತರ ಮತ್ತು 23.5 ಡಿಗ್ರಿ ದಕ್ಷಿಣ ಅಕ್ಷಾಂಶಗಳ ನಡುವೆ ವಾಸಿಸುವ ಜನರಿಗೆ, ಸೂರ್ಯನ ಅವನತಿಯು ಅವರ ಅಕ್ಷಾಂಶಕ್ಕೆ ಎರಡು ಬಾರಿ ಸಮನಾಗಿರುತ್ತದೆ.

ಮಹತ್ವ

ಇದು ಸೂರ್ಯನ ನಿಖರವಾದ ಸ್ಥಾನವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಜತೆಗೆ ವಿಜ್ಞಾನಿ ಮತ್ತು ಖಗೋಳಶಾಸ್ತ್ರಜ್ಞರಿಗೆ ಸೂರ್ಯನ ಬೆಳಕಿನ ನಡವಳಿಕೆ ಮತ್ತು ಭೂಮಿಯ ವಾತಾವರಣದ ಮೇಲೆ ಅದು ಬೀರುವ ಪರಿಣಾಮಗಳ ಬಗ್ಗೆ ಸಂಶೋಧನೆ ನಡೆಸಲು ಅವಕಾಶವನ್ನು ಕಲ್ಪಿಸುತ್ತದೆ. ಸಾಮಾನ್ಯವಾಗಿ ಶೂನ್ಯ ನೆರಳು ಸುಮಾರು ಒಂದೂವರೆ ನಿಮಿಷ ಕಾಲ ಅನುಭವಕ್ಕೆ ಬರುತ್ತದೆ.

ಎಲ್ಲೆಲ್ಲಿ , ಯಾವಾಗ?

ಶೂನ್ಯ ನೆರಳಿನ ದಿನ ದೇಶದ ವಿವಿಧ ನಗರಗಳಲ್ಲಿ ವರ್ಷದಲ್ಲಿ ಎರಡು ಬಾರು ಅನುಭವಕ್ಕೆ ಬರುತ್ತದೆ. ಅದು ಯಾವಾಗ ಎನ್ನುವ ವಿವರ ಇಲ್ಲಿದೆ.

  • ಕನ್ಯಾಕುಮಾರಿ: ಏಪ್ರಿಲ್ 10 ಮತ್ತು ಸೆಪ್ಟೆಂಬರ್ 1 (ಮಧ್ಯಾಹ್ನ: 12.21, 12.22)
  • ಬೆಂಗಳೂರು: ಏಪ್ರಿಲ್ 24 ಮತ್ತು ಆಗಸ್ಟ್ 18 (ಮಧ್ಯಾಹ್ನ: 12.17, 12.25)
  • ಹೈದರಾಬಾದ್: ಮೇ 9 ಮತ್ತು ಆಗಸ್ಟ್ 5 (ಮಧ್ಯಾಹ್ನ: 12.12, 12.19)
  • ಮುಂಬೈ: ಮೇ 15 ಮತ್ತು ಜೂನ್ 27 (ಮಧ್ಯಾಹ್ನ: 12.34, 12.45)
  • ಭೋಪಾಲ್: ಜೂನ್ 13 ಮತ್ತು ಜೂನ್ 28 (ಮಧ್ಯಾಹ್ನ: 12.20, 12.23)

ಇದನ್ನೂ ಓದಿ: Chandrayaan-3 mission: ಇಸ್ರೋದ ಚಂದ್ರಯಾನ-3 ಟೀಮ್‌ಗೆ ಅಮೆರಿಕದ ಪ್ರಶಸ್ತಿ: ʼಸ್ಫೂರ್ತಿʼ ಎಂದ ಸ್ಪೇಸ್‌ ಫೌಂಡೇಶನ್

Continue Reading

ಕ್ರೀಡೆ

Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

Mohammad Rizwan: ಮೊಹಮ್ಮದ್ ರಿಜ್ವಾನ್, ಟಿ20 ಐನಲ್ಲಿ ವೇಗವಾಗಿ 3000 ರನ್ ಗಳಿಸಿದ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಾದಿಯಲ್ಲಿ ಅವರು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ರಿಜ್ವಾನ್ 2 92 ನೇ ಟಿ 20 ಅಂತರರಾಷ್ಟ್ರೀಯ ಪಂದ್ಯ ಮತ್ತು 79 ನೇ ಇನ್ನಿಂಗ್ಸ್​ನಲ್ಲಿ ಈ ವೈಯಕ್ತಿಕ ಮೈಲಿಗಲ್ಲನ್ನು ತಲುಪಿದ್ದಾರೆ. 81 ಇನ್ನಿಂಗ್ಸ್​​ಗಳಲ್ಲಿ 3000 ಟಿ 20 ರನ್ ಗಳಿಸಿದ ವೈಟ್-ಬಾಲ್ ನಾಯಕ ಬಾಬರ್ ಅಜಮ್ ಅವರನ್ನೂ 31 ವರ್ಷದ ಆಟಗಾರ ಹಿಂದಿಕ್ಕಿದ್ದಾರೆ.

VISTARANEWS.COM


on

Mohammad Rizwan
Koo

ಬೆಂಗಳೂರು: ಪಾಕಿಸ್ತಾನದ ಮಾಜಿ ಟಿ 20 ಐ ಮಾಜಿ ನಾಯಕ ಹಾಗೂ ವೇಗದ ಬೌಲರ್​​ ಶಾಹೀನ್ ಅಫ್ರಿದಿ ತಂಡದ ಸಹ ಆಟಗಾರ ಮೊಹಮ್ಮದ್ ರಿಜ್ವಾನ್ ಅವರನ್ನು ಟಿ 20 ಕ್ರಿಕೆಟ್ನ ಬ್ರಾಡ್ಮನ್ ಎಂದು ಹೊಗಳಿರುವುದು ನೆಟ್ಟಿಗರ ಪಾಲಿಗೆ ತಮಾಷೆಯ ಸುದ್ದಿಯಾಗಿ ಪರಿವರ್ತನೆಗೊಂಡಿದೆ. ಸೋಶೀಯಲ್​ ಮೀಡಿಯಾಗಳಲ್ಲಿ ಇದನ್ನು ವರ್ಷದ ಜೋಕ್ ಎಂದರೆ ಕರೆದರೆ ಕೆಲವರು ಬಿದ್ದು ಬಿದ್ದು ನಗುತ್ತಿದ್ದಾರೆ.

ಏಪ್ರಿಲ್ 21 ರಂದು ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ 20 ಐ ಸರಣಿಯ 3 ನೇ ಪಂದ್ಯದಲ್ಲಿ ರಿಜ್ವಾನ್ ಕ್ರಿಕೆಟ್​ ಚುಟುಕು ಸ್ವರೂಪದಲ್ಲಿ 3000 ರನ್ ಪೂರೈಸಿದ್ದಾರೆ. ಹೀಗಾಗಿ ಅಫ್ರಿದಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಭಯಂಕರ ಹೇಳಿಕೆ ನೀಡಿದ್ದಾರೆ. ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ನಡೆದ 2ನೇ ಟಿ 20 ಪಂದ್ಯದಲ್ಲಿ ಪಾಕ್ ತಂಡ ಗೆದ್ದಿತ್ತು. ಆದರೆ, 3ನೇ ಪಂದ್ಯವನ್ನು 7 ವಿಕೆಟ್​ಗಳಿಂದ ಕಳೆದುಕೊಂಡಿತ್ತು.

“ಟಿ20 ಕ್ರಿಕೆಟ್​ನ ಬ್ರಾಡ್ಮನ್ ಮತ್ತು ಟಿ 20ಐನಲ್ಲಿ 3,000 ರನ್ ಗಳಿಸಿದ ಪಾಕಿಸ್ತಾನದ ಸೂಪರ್​ಮ್ಯಾನ್​ ಮೊಹಮ್ಮದ್ ರಿಜ್ವಾನ್ ಅವರಿಗೆ ಅಭಿನಂದನೆಗಳು! 🏏🌟 ನಿಮ್ಮ ಪ್ರಭಾವವು ಆಟದ ರೀತಿಯನ್ನು ಪರಿವರ್ತಿಸಿದೆ ಮತ್ತು ಟೀಕಾಕಾರರನ್ನು ಮೌನಗೊಳಿಸಿದೆ. ಬೆಳೆಯುತ್ತಲೇ ಇರಿ, ಚಾಂಪಿಯನ್! ನೀವು ಅನೇಕರಿಗೆ ಸ್ಫೂರ್ತಿಯಾಗಿದ್ದೀರಿ” ಎಂದು ಶಾಹೀನ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಈ ಪೋಸ್ಟ್​​ ತಮಾಷೆಯ ಸಂಗತಿಯಾಗಿ ಮಾರ್ಪಟ್ಟಿದೆ.

ಮೊಹಮ್ಮದ್ ರಿಜ್ವಾನ್, ಟಿ20 ಐನಲ್ಲಿ ವೇಗವಾಗಿ 3000 ರನ್ ಗಳಿಸಿದ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಾದಿಯಲ್ಲಿ ಅವರು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ರಿಜ್ವಾನ್ 2 92 ನೇ ಟಿ 20 ಅಂತರರಾಷ್ಟ್ರೀಯ ಪಂದ್ಯ ಮತ್ತು 79 ನೇ ಇನ್ನಿಂಗ್ಸ್​ನಲ್ಲಿ ಈ ವೈಯಕ್ತಿಕ ಮೈಲಿಗಲ್ಲನ್ನು ತಲುಪಿದ್ದಾರೆ. 81 ಇನ್ನಿಂಗ್ಸ್​​ಗಳಲ್ಲಿ 3000 ಟಿ 20 ರನ್ ಗಳಿಸಿದ ವೈಟ್-ಬಾಲ್ ನಾಯಕ ಬಾಬರ್ ಅಜಮ್ ಅವರನ್ನೂ 31 ವರ್ಷದ ಆಟಗಾರ ಹಿಂದಿಕ್ಕಿದ್ದಾರೆ.

ರೆಕಾರ್ಡ್​ ಮಾತ್ರ, ಗೆಲುವು ಇಲ್ಲ

ಮೊಹಮ್ಮದ್ ರಿಜ್ವಾನ್ ಮತ್ತು ಪಾಕಿಸ್ತಾನ ಇಬ್ಬರಿಗೂ ರಾತ್ರಿ ಅಂತಿಮವಾಗಿ ಉತ್ತಮವಾಗಿ ಕೊನೆಗೊಳ್ಳಲಿಲ್ಲ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ತಮ್ಮ 3000 ನೇ ಟಿ 20 ರನ್ ತಲುಪಿದ ಕೂಡಲೇ ಗಾಯಗೊಂಡರು. ಪಾಕಿಸ್ತಾನ 178 ರನ್ ಗಳಿಸಿದ್ದ ಮೊದಲ ಇನಿಂಗ್ಸ್​​ನಲ್ಲಿ 21 ಎಸೆತಗಳಲ್ಲಿ 22 ರನ್ ಗಳಿಸಿದ ನಂತರ ರಿಜ್ವಾನ್ ಡ್ರೆಸ್ಸಿಂಗ್ ರೂಮ್​ಗೆ ಮರಳಿದರು. ಪ್ರತಿಯಾಗಿ ಆಡಿದ ಮೈಕೆಲ್ ಬ್ರೇಸ್ವೆಲ್ ನೇತೃತ್ವದ ನ್ಯೂಜಿಲ್ಯಾಂಡ್ ತಂಡ 19 ನೇ ಓವರ್​ನ ಎರಡನೇ ಎಸೆತದಲ್ಲಿ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು.

ಇದನ್ನೂ ಓದಿ : Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

ರಿಜ್ವಾನ್ ತನ್ನ ವೃತ್ತಿಜೀವನದಲ್ಲಿ ಬ್ರಾಡ್ಮನ್ ಹೊಂದಿದ್ದ ಸರಾಸರಿಗೆ ಹತ್ತಿರದಲ್ಲಿಯೂ ಇಲ್ಲ. ಹಾಗಿರುವಾಗ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಶಾಹೀನ್ ಅವರನ್ನು ಪ್ರಶ್ನಿಸಿದ್ದಾರೆ. ರಿಜ್ವಾನ್​ ಅವರನ್ನು ಬ್ರಾಡ್ಮನ್ ಎಂದು ಕರೆಯಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ.

ಬಾಬರ್ ಅಜಮ್ ಅವರನ್ನು ಮತ್ತೆ ನೇಮಕ ಮಾಡಲು ಪಿಸಿಬಿ ಕಳೆದ ತಿಂಗಳು ಅವರನ್ನು ನಾಯಕತ್ವದಿಂದ ವಜಾಗೊಳಿಸಿದ ನಂತರ ಕೆಲವು ಅಭಿಮಾನಿಗಳು ಅವರ ಮಾನಸಿಕ ಸ್ಥಿರತೆಯ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ. ಹೀಗಾಗಿಯೇ ಶಾಹೀನ್ ರಿಜ್ವಾನ್ ಅವರನ್ನು ಟಿ 20 ಕ್ರಿಕೆಟ್​​ ಬ್ರಾಡ್ಮನ್ ಎಂದು ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

Lok Sabha Election 2024

Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

Lok Sabha Election 2024: ಜಾತಿ ಗಣತಿಯನ್ನು ಇಡೀ ದೇಶದಲ್ಲಿ ನಡೆಸುತ್ತೇವೆ. ಯಾವ ಸಮುದಾಯದವರು ಎಷ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳುತ್ತೇವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸುತ್ತೇವೆ. ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ. ಕೃಷಿಗಾಗಿ ಹೊಸ ನೀತಿ ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

VISTARANEWS.COM


on

Lok Sabha Election 2024 Priyanka Gandhi announces constitutional amendment
Koo

ಚಿತ್ರದುರ್ಗ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈಗ ಪ್ರಿಯಾಂಕಾ ಗಾಂಧಿ (Priyanka Gandhi) ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಸಂವಿಧಾನ ತಿದ್ದುಪಡಿ (Constitutional Amendment) ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಜಾತಿ ಗಣತಿಯನ್ನು ಇಡೀ ದೇಶದಲ್ಲಿ ನಡೆಸುತ್ತೇವೆ. ಯಾವ ಸಮುದಾಯದವರು ಎಷ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳುತ್ತೇವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸುತ್ತೇವೆ. ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ. ಕೃಷಿಗಾಗಿ ಹೊಸ ನೀತಿ ಮಾಡುತ್ತೇವೆ ಎಂದು ಹೇಳಿದರು.

ಬಂಡವಾಳಶಾಹಿಗಳಿಗೆ ದೇಶದ ಆಸ್ತಿ ಮಾರಾಟ

ದೇಶದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ನಾನು ಮಾತನಾಡುತ್ತೇನೆ. ದೇಶದಲ್ಲಿ ಎರಡು ಸತ್ಯಗಳಿವೆ. ಒಂದು, ನೀವು ಬೆಲೆ ಏರಿಕೆಯಿಂದ ಕಷ್ಟ ಪಡುತ್ತಿದ್ದೀರಿ. ಮತ್ತೊಂದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾತನಾಡುವುದಾಗಿದೆ ಎಂದು ಮಾಧ್ಯಮಗಳು ಹೇಳುತ್ತಿರುವುದು. ಆದರೆ, ದೇಶದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆಗಳಿವೆ. ದೊಡ್ಡ ದೊಡ್ಡ ಮಾತುಗಳನ್ನು ಮೋದಿ ಆಡಿದ್ದರು. ಹೆಣ್ಣುಮಕ್ಕಳು ಹಬ್ಬ ಹರಿ ದಿನ ಮಾಡಲು ಕಷ್ಟ ಪಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಕಷ್ಟಪಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲದರಲ್ಲೂ ಬೆಲೆ ಏರಿಕೆ ಆಗಿದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ, ಜಿಎಸ್‌ಟಿಯಿಂದ ಜನ ಕಷ್ಟದಲ್ಲಿ ಇದ್ದಾರೆ. ದೇಶದ ಆಸ್ತಿಯನ್ನು ಬಂಡವಾಳಶಾಹಿಗಳಿಗೆ ಮೋದಿ ಮಾರಾಟ ಮಾಡುತ್ತಿದ್ದಾರೆ. ಅವರಿಗೆ 16 ಲಕ್ಷ ಕೋಟಿ ಸಬ್ಸಿಡಿ ಕೊಟ್ಟಿದ್ದಾರೆ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಬಿಜೆಪಿಗೆ ಚಂದಾ ಕೊಟ್ಟಿರುವ ಐಟಿ ದಾಳಿಗೊಳಪಟ್ಟ ಕಂಪನಿಗಳು

ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದಾರೆ. ಒಬ್ಬರು ಸಿಎಂ, ಇನ್ನೊಬ್ಬರು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ್ದಾರೆ. ಚುನಾವಣಾ ಬಾಂಡ್‌ಗಳ ಮೂಲಕ ಹಗರಣ ಮಾಡಿದ್ದಾರೆ. ದಾನ ಮಾಡಿದವರ ಹೆಸರು ಯಾರಿಗೂ ಗೊತ್ತಾಗುವುದಿಲ್ಲ. ಹೆಸರು ಮುಚ್ಚಿಡುವುದು ಸರಿಯಲ್ಲ, ಬಹಿರಂಗಗೊಳಿಸಿ ಎಂದು ಕೋರ್ಟ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಯಾರ ಬಳಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಲಿಸ್ಟ್ ಹೊರಗೆ ಬಂದ ಮೇಲೆ ಗೊತ್ತಾಯಿತು. ಯಾವ ಕಂಪನಿಗಳ ಮೇಲೆ ದಾಳಿಯಾಗಿತ್ತೋ ಆ ಕಂಪನಿಗಳು ದಾನ ಕೊಟ್ಟಿವೆ. ಕಪ್ಪು ಹಣ ತರಲು ನೋಟು ರದ್ದು ಮಾಡಿದ್ದಾಗಿ ಹೇಳಿದ್ದರು. ಆ ಸಂದರ್ಭದಲ್ಲಿ ನೀವು ಕಷ್ಟ ಪಟ್ಟಿದ್ದೀರಿ. ಆದರೆ, ಅದೇ ಸಮಯದಲ್ಲಿ ಕಪ್ಪು ಹಣವನ್ನು ವೈಟ್ ಮಾಡಿಕೊಂಡರು. ಅವರ ತಪ್ಪು ಮುಚ್ಚಿಕೊಳ್ಳಲು ವಿಪಕ್ಷದವರು ಭ್ರಷ್ಟರು ಎಂದು ಕರೆಯುತ್ತಿದ್ದಾರೆ. ದೇಶವನ್ನು ಆರ್ಥಿಕವಾಗಿ ಹಾಳು ಮಾಡುತ್ತಿದ್ದಾರೆ. ಚುನಾವಣೆ ಬಂದಾಗ ಜಾತಿ, ಧರ್ಮದ ಬಗ್ಗೆ ಮಾತನಾಡಿ ಗಮನವನ್ನು ಬೇರೆ ಕಡೆ ಸೆಳೆಯುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

ಸಂವಿಧಾನ ಬದಲಾವಣೆ ಮಾತನಾಡುವ ಬಿಜೆಪಿ ನಾಯಕರು

ನಿಮ್ಮ ಕಷ್ಟದ ಬಗ್ಗೆ ಮಾತನಾಡದ ನರೇಂದ್ರ ಮೋದಿ ಅವರು, 400 ಹೆಚ್ಚು ಸ್ಥಾನ ಕೊಡಿ, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದರ ಅರ್ಥವೇನು? ಜನರೇ ಸಾರ್ವಭೌಮರು ಎಂದು ಸಂವಿಧಾನ ಹೇಳಿದೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಿಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

ಸುಳ್ಳು ಬಿಟ್ಟರೆ ಬೇರೇನನ್ನೂ ಹೇಳಿಲ್ಲ

ದೇಶದಲ್ಲಿ ಜನರ ಕಷ್ಟಗಳು ದೊಡ್ಡದಾಗಿವೆ. ನೀವು ಎಷ್ಟು ಸಂಘರ್ಷ ಮಾಡುತ್ತಿದ್ದೀರ ಎಂಬುದು ನರೇಂದ್ರ ಮೋದಿ ಅವರಿಗೆ ಗೊತ್ತಿಲ್ಲ. ಒಂದು ಕಾಲದಲ್ಲಿ ಪ್ರಧಾನ ಮಂತ್ರಿಗಳು ನಿಮ್ಮ ಹಳ್ಳಿ, ನಿಮ್ಮ ಮನೆಗಳಿಗೆ ಬರುತ್ತಿದ್ದರು. ಒಂದು ಕಾಲದಲ್ಲಿ ದೇಶದ ನಾಯಕರು ಸೇವಾ ಮನೋಭಾವದಿಂದ ಇರುತ್ತಿದ್ದರು. ಆದರೆ, ಇಂದಿನ ನಾಯಕನ ಬಳಿ ಅಹಾಂಕರ ಕಾಣುತ್ತಿದೆ. ಮೋದಿ ಸರ್ಕಾರ ಸುಳ್ಳು ಬಿಟ್ಟರೆ ಬೇರೆ ಏನನ್ನೂ ಹೇಳಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಬರ ಪರಿಹಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದು ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಕಳಸಾ ಬಂಡೂರಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಭದ್ರಾ ಯೋಜನೆಗೆ ಹಣ ಕೊಟ್ಟಿಲ್ಲ. ಕರ್ನಾಟಕಕ್ಕೆ ಯಾಕೆ ಮೋದಿ ಹೀಗೆ ಮಾಡುತ್ತಿದ್ದಾರೆ? ಯಾವ ರಾಜ್ಯದಲ್ಲಿ ಅವರಿಗೆ ಅಧಿಕಾರ ಇರುವುದದಿಲ್ಲವೋ ಅಲ್ಲಿ ಹಣ ಕೊಡೋದಿಲ್ಲ. ಕೇವಲ ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಮಾತ್ರ ಹಣ ಕೊಡಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

ಅಗ್ನಿಪಥ್‌ಗೆ ಬ್ರೇಕ್‌

ಗ್ಯಾರಂಟಿ ಯೋಜನೆಯಿಂದ ನಿಮ್ಮ ಬದುಕು ಬದಲಾಗಿಲ್ಲವಾ? ಸುಧಾರಣೆಯಾಗಿಲ್ಲವಾ ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ನ್ಯಾಯ ಪತ್ರವನ್ನು ಬಿಡುಗಡೆ ಮಾಡಿದೆ. ನಮ್ಮ ಪಕ್ಷ ಅಧಿಕಾರಿಕ್ಕೆ ಬಂದರೆ ವರ್ಷಕ್ಕೆ ಒಂದು ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ. ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಶೇಕಡಾ 50ರಷ್ಟನ್ನು ಮಹಿಳೆಯರಿಗೆ ಮೀಸಲಿಡುತ್ತೇವೆ. ಆರೋಗ್ಯ ವಿಮೆ, ಅಂಗನವಾಡಿ ಕಾರ್ಯಕರ್ತರ ಸಂಬಳವನ್ನು ಹೆಚ್ಚಳ ಮಾಡುತ್ತೇವೆ. ಶಿಕ್ಷಣಕ್ಕೆ ಸಾಲ ಕೊಡುತ್ತೇವೆ, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಾಲ ಕೊಡುತ್ತೇವೆ. ನರೇಂದ್ರ ಮೋದಿ ಸರ್ಕಾರದಲ್ಲಿ ಎಷ್ಟು ಉದ್ಯೋಗ ಖಾಲಿ ಇದೆಯೋ ಅಷ್ಟನ್ನೂ ಭರ್ತಿ ಮಾಡುತ್ತೇವೆ. ಅಗ್ನಿಪಥ್ ನಿಲ್ಲಿಸಿ ಹಿಂದಿನ ರೀತಿಯಲ್ಲಿ ನೇಮಕಾತಿ ಮಾಡುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.

Continue Reading
Advertisement
Fantasy Gaming
ಕ್ರೀಡೆ18 mins ago

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Shivasharane Akkamahadevi Jayanti Celebration and Shivanubhava programme at Soraba
ಶಿವಮೊಗ್ಗ18 mins ago

Shivamogga News: ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆ, ಚಿಂತನೆ ಸರ್ವಕಾಲಕ್ಕೂ ಪ್ರಸ್ತುತ: ಶ್ರೀ ಸಿದ್ದ ವೃಷಭೇಂದ್ರ ಸ್ವಾಮೀಜಿ

World Book and Copyright Day celebration at Kottur
ವಿಜಯನಗರ20 mins ago

Vijayanagara News: ಕೊಟ್ಟೂರಿನಲ್ಲಿ ವಿಶ್ವ ಪುಸ್ತಕ, ಕೃತಿ ಸ್ವಾಮ್ಯ ದಿನ ಆಚರಣೆ

Minister Sharanbassappa Gowda Darshanpur Election campaign
ಯಾದಗಿರಿ21 mins ago

Lok Sabha Election 2024: ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯನ್ನು ಗೆಲ್ಲಿಸಿ: ಸಚಿವ ದರ್ಶನಾಪುರ

Viral News
ವೈರಲ್ ನ್ಯೂಸ್24 mins ago

Viral News: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ; ಅಂಗಡಿ ಮಾಲೀಕ ಅರೆಸ್ಟ್‌

DK ShivaKumar
ಕರ್ನಾಟಕ33 mins ago

DK Shivakumar: ಮತದಾರರಿಗೆ ಬೆದರಿಕೆ ಪ್ರಕರಣ; ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಡಿಕೆಶಿ ಅರ್ಜಿ

Zero Shadow Day
ವಿಜ್ಞಾನ44 mins ago

Zero Shadow Day: ನಾಳೆ ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Mohammad Rizwan
ಕ್ರೀಡೆ46 mins ago

Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

bike taxi services
ಬೆಂಗಳೂರು1 hour ago

Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

Lok Sabha Election 2024 Priyanka Gandhi announces constitutional amendment
Lok Sabha Election 20241 hour ago

Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌