BBK SEASON 10: ಎರಡನೇ ರನ್ನರ್ ಅಪ್‌ ‘ಸಿಂಹಿಣಿ’ ಸಂಗೀತಾ ಶೃಂಗೇರಿ; ಕೊನೆಯ ಹಂತದಲ್ಲಿ ಎಡವಿದ ಪ್ರಬಲ ಸ್ಪರ್ಧಿ - Vistara News

ಬಿಗ್ ಬಾಸ್

BBK SEASON 10: ಎರಡನೇ ರನ್ನರ್ ಅಪ್‌ ‘ಸಿಂಹಿಣಿ’ ಸಂಗೀತಾ ಶೃಂಗೇರಿ; ಕೊನೆಯ ಹಂತದಲ್ಲಿ ಎಡವಿದ ಪ್ರಬಲ ಸ್ಪರ್ಧಿ

BBK SEASON 10: ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ಮೂರನೇ ಸ್ಥಾನಿಯಾಗಿ (ಎರಡನೇ ರನ್ನರ್‌ ಅಪ್‌) ಸಂಗೀತಾ ಶೃಂಗೇರಿ ಆಯ್ಕೆಯಾಗಿದ್ದಾರೆ.

VISTARANEWS.COM


on

sangeetha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (BBK SEASON 10)ರಲ್ಲಿ ಮೂರನೇ ಸ್ಥಾನಿಯಾಗಿ (ಎರಡನೇ ರನ್ನರ್‌ ಅಪ್‌) ಸಂಗೀತಾ ಶೃಂಗೇರಿ ಆಯ್ಕೆಯಾಗಿದ್ದಾರೆ. ಮೊದಲಿನಿಂದಲೂ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಸಂಗೀತಾ ಶೃಂಗೇರಿ ಅವರು ವಿನ್ನರ್‌ ಆಗುತ್ತಾರೆ ಎಂದು ಎಲ್ಲರೂ ಲೆಕ್ಕ ಹಾಕಿದ್ದರು. ಆದರೆ ಇದೀಗ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಬಿಗ್‌ಬಾಸ್ ಸೀಸನ್‌ನ ‘ಸಿಂಹಿಣಿ’ ಎಂದೇ ಪ್ರಸಿದ್ಧರಾಗಿದ್ದ ಸಂಗೀತಾ, ತಮ್ಮ ನೇರ ಮಾತು, ದಿಟ್ಟ ನಿಲುವಿನಿಂದ ಜನರ ಮೆಚ್ಚುಗೆ ಗಳಿಸಿದ್ದರು. ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್‌ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯ ವೇದಿಕೆಗೆ ಕರೆತಂದರು. ಮುಖ್ಯವೇದಿಕೆಯಲ್ಲಿ ನಿಂತಿದ್ದ ಮೂವರು ಸ್ಪರ್ಧಿಗಳ ಮುಖದಲ್ಲಿ ಆತಂಕ ಎದ್ದು ಕಾಣಿಸುತ್ತಿತ್ತು. ಸ್ಪರ್ಧಿಗಳ ಮುಖದಲ್ಲಿಯಷ್ಟೇ ಅಲ್ಲ, ವೇದಿಕೆಯ ಪಕ್ಕ ಕೂತ ಹಿಂದಿನ ಸ್ಪರ್ಧಿಗಳು, ಎದುರಿನಲ್ಲಿನ ಪ್ರೇಕ್ಷರು ಎಲ್ಲರ ಮುಖದಲ್ಲಿಯೂ ಆತಂಕ ಎದ್ದು ಕಾಣಿಸುತ್ತಿತ್ತು. ಎಲ್ಲರ ಊಹೆಯನ್ನು ಬ್ರೇಕ್‌ ಮಾಡಿ ಹೊರಗೆ ಬಿದ್ದಿದ್ದು ಸಂಗೀತಾ ಶೃಂಗೇರಿ!

ಸಂಗೀತಾ ಶೃಂಗೇರಿ!

ಬಿಗ್‌ಬಾಸ್‌ ಸೀಸನ್‌ 10 ಪ್ರಾರಂಭವಾಗುವುದಕ್ಕೂ ಹಿಂದೆ ಈ ಹೆಸರು ಕೇಳಿದಾಗ ಮನಸಲ್ಲಿ ಎರಡು ಬಗೆಯ ಚಿತ್ರಗಳು ಮೂಡುತ್ತಿತ್ತು. ಒಂದು, ಪೌರಾಣಿಕ ಧಾರಾವಾಹಿಯೊಂದರ ದೇವಿ ಪಾತ್ರದ ಸೌಮ್ಯಮುಖ. ಇನ್ನೊಂದು ‘ಚಾರ್ಲಿ 777’ ಸಿನಿಮಾದ ನಾಯಕಿಯ ಮುಗ್ಧ ಮುಖ. ಮೆಲುವಾಗಿ ಮಾತಾಡುವ, ಮಿತವಾಗಿ ನಗುವ ಈ ಹುಡುಗಿ ಬಿಗ್‌ಬಾಸ್‌ ಮನೆಗೆ ಬಂದಾಗ ಪ್ರೇಕ್ಷಕರ ಹುಬ್ಬುಗಳು ಮೇಲೇರಿದ್ದವು. ಆದರೆ ಬಿಗ್‌ಬಾಸ್‌ ಸೀಸನ್‌ 10 ಮುಗಿದ ಈ ಕ್ಷಣದಲ್ಲಿ ಅದೇ ‘ಸಂಗೀತಾ ಶೃಂಗೇರಿ’ ಎಂಬ ಹೆಸರು ಕೇಳಿದರೆ ಮನಸಲ್ಲಿ ಮೂಡುವ ಚಿತ್ರಗಳು ಒಂದೆರಡಲ್ಲ; ನೂರಾರು! ಅದರಲ್ಲಿಯೂ ಮೇಲೆ ಹೇಳಿದ ಎರಡು ಬಗೆಯ ಚಿತ್ರಗಳಂತೂ ಕಾಣಿಸುವುದೇ ಇಲ್ಲ.

ಅಸಮರ್ಥೆಯಾಗಿ ಚಿಂತಿತ ಮುಖದಲ್ಲಿ ಕೂತಿದ್ದ ಹುಡುಗಿ (https://go.jc.fm/fRhd/uccqjsn2), ಆತ್ಮವಿಶ್ವಾಸದ ಗಟ್ಟಿ ವ್ಯಕ್ತಿತ್ವದ ಹುಡುಗಿ, ಕೋಪದಲ್ಲಿ ಕಿಡಿಕಾರುತ್ತ ನಿಂತಿರುವ ಹುಡುಗಿ, ದುಃಖದಲ್ಲಿ ಒಬ್ಬಂಟಿಯಾಗಿ ಕೂತು ಬಿಕ್ಕಿ ಬಿಕ್ಕಿ ಅಳುತ್ತಿರುವ ಹುಡುಗಿ, ಆಟದಲ್ಲಿ ಜೀವಕೊಟ್ಟು ಆಡುವ ಜಿದ್ದಿನ ಹುಡುಗಿ, ಮುಖದ ಎದುರೇ ಮಾತಾಡಿ ಜಗಳಕ್ಕೆ ನಿಲ್ಲುವ ಜಗಳಗಂಟಿ ಹುಡುಗಿ, ಸ್ನೇಹದ ಹೆಗಲಿಗೆ ಒರಗುವ ಮುಗುಳುನಗೆಯ ಹುಡುಗಿ, ತಂತ್ರಗಾರಿಕೆಯ ಜಾಣ ಹುಡುಗಿ, ತನ್ನ ಸ್ನೇಹಿತರಿಂದಾದ ಸಣ್ಣ ನೋವನ್ನೂ ಸಹಿಸಿಕೊಳ್ಳದ ಹಟಮಾರಿ ಹುಡುಗಿ… ಟಿಕೆಟ್‌ ಟು ಫಿನಾಲೆ ವಾರದಲ್ಲಿ ಗೆದ್ದು ಮೊದಲು ಫಿನಾಲೆ ವಾರಕ್ಕೆ ಕಾಲಿಟ್ಟ ಮೊದಲ ಸ್ಪರ್ಧಿ (https://go.jc.fm/fRhd/5sp80ru9), ಅಬ್ಬಾ! ನೂರು ದಿನಗಳನ್ನು ದಾಟಿದ ಈ ಬಿಗ್‌ಬಾಸ್‌ ಮನೆಯಲ್ಲಿ ನೂರಾರು ನೆನಪುಗಳ ಚಿತ್ರವನ್ನು ಮೂಡಿಸಿದ ಹುಡುಗಿ ಈ ಸಂಗೀತಾ ಶೃಂಗೇರಿ.

ಸಂಗೀತಾ ಅವರ ಬಿಗ್‌ಬಾಸ್‌ ಜರ್ನಿಯನ್ನು ಕೆಲವೇ ಸಾಲುಗಳಲ್ಲಿ ಹಿಡಿದಿಡಲು ಸಾಧ್ಯವೇ ಇಲ್ಲ. ಅಷ್ಟೊಂದು ಏರಿಳಿತಗಳು, ಅಷ್ಟೊಂದು ತಿರುವುಗಳು, ಅಷ್ಟೊಂದು ಅಚ್ಚರಿಗಳು ಅವರ ಈ ಪ್ರಯಾಣದಲ್ಲಿ ತುಂಬಿಕೊಂಡಿವೆ. ಹಲವು ಸಲ ಅವರು ಈ ಪ್ರಯಾಣವನ್ನು ಮೊಟಕುಗೊಳಿಸಿ ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ಹೇಳಿದ್ದರು. ಒಮ್ಮೆಯಂತೂ ಅವರಿಗಾದ ಗಾಯದಿಂದಾಗಿ ಅನಿವಾರ್ಯವಾಗಿ ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗಿ ಆಸ್ಪತ್ರೆಗೆ ದಾಖಲಾಗಬೇಕಾಯ್ತು. ಆದರೆ ಇಂದು ಅವನ್ನೆಲ್ಲ ನೆನಪಿಸಿಕೊಂಡರೆ ಸಂಗೀತಾ, ‘ನಾನೆಂಥ ಅನುಭವವನ್ನು ಮಿಸ್ ಮಾಡಿಕೊಳ್ಳುತ್ತಿದ್ದೆ’ ಎಂದು ಉದ್ಘರಿಸಿದ್ದಾರೆ.

‘ಕೋಟಿ ಕೊಟ್ಟರೂ ನಾನು ಬಿಗ್‌ಬಾಸ್‌ಗೆ ಹೋಗಲ್ಲ’ ಎಂದು ಹಿಂದೊಮ್ಮೆ ಹೇಳಿದ್ದ ಸಂಗೀತಾ, ಈಗ ಕೋಟಿ ಕೊಟ್ಟರೂ ಸಿಗದ ಅನುಭವದ ಮೂಟೆಯನ್ನು ಹೊತ್ತುಕೊಂಡು ಬಿಗ್‌ಬಾಸ್‌ ಮನೆಯಿಂದ ಹೊರಬಂದಿದ್ದಾರೆ. ಅವರ ಜರ್ನಿಯ ಕೆಲವು ಮುಖ್ಯ ಸಂಗತಿಗಳನ್ನು ಕಟ್ಟಿಕೊಡುವ ಪ್ರಯತ್ನ ಜಿಯೊಸಿನಿಮಾ ಇಲ್ಲಿ ಮಾಡುತ್ತಿದೆ.

ಸಗಣಿ ನೀರಿನ ಸ್ನಾನ!

ಅಸಮರ್ಥಳಾಗಿ ಬಿಗ್‌ಬಾಸ್ ಮನೆಯೊಳಗೆ ಕಾಲಿಟ್ಟ ಸಂಗೀತಾ ಮೊದಲ ವಾರದಲ್ಲಿಯೇ ಸಾಕಷ್ಟು ವಿರೋಧ ಎದುಸಿರಬೇಕಾಯ್ತು. ಮನೆಯ ನಿಯಮವನ್ನು ಉಲ್ಲಂಘನೆ ಮಾಡಿ ಸೋಪಾದ ಮೇಲೆ ಕೂತಿದ್ದು ವಿನಯ್ ಅವರ ಜೊತೆಗೆ ಘರ್ಷಣೆಗೆ ಮೂಲವಾಯ್ತು. ಇದೇ ವಿಷಯ ವಾರದ ಕೊನೆಯ ಎಲಿಮಿನೇಷನ್‌ನಲ್ಲಿಯೂ ಪ್ರತಿಧ್ವನಿಸಿತು. ಅದೇ ವಾರದಲ್ಲಿ ಸಂಗೀತಾ ಅವರಿಗೆ ಸಗಣಿನೀರಿಸ ಸ್ನಾನವೂ ಆಯಿತು. ಆ ಘಟನೆ ಅವರನ್ನು ಕುಗ್ಗಿಸಲಿಲ್ಲ. ಬದಲಿಗೆ ಸಿಡಿದು ಪುಟಿದೇಳುವಂತೆ ಮಾಡಿತು.

ಅಲ್ಲಿಂದ ಮುಂದೆ ಸಂಗೀತಾ ಹಿಂತಿರುಗಿ ನೋಡಿದ್ದೇ ಇಲ್ಲ. ಮೊದಲ ದಿನ ಸಂಗೀತಾ ಕಿಚ್ಚನ ಜತೆ ವೇದಿಕೆ ಹಂಚಿಕೊಂಡಾಗ, ‘ನಾನು ತುಂಬ ಕಾಮ್ ಕೂಲ್ಕ ಹುಡುಗಿಯ ಪಾತ್ರದಲ್ಲಿಯೇ ಕಾಣಿಸಿಕೊಂಡಿದ್ದೀನಿ. ಆದರೆ ನಾನೆಷ್ಟು ಬೋಲ್ಡ್ ಅನ್ನುವುದನ್ನು ಜನರು ಬಿಗ್‌ಬಾಸ್ ಮನೆಯಲ್ಲಿ ನೋಡುತ್ತಾರೆ’ ಎಂದು ಹೇಳಿಕೊಂಡಿದ್ದರು. ಅದನ್ನು ಅಕ್ಷರಶಃ ಸಾಧಿಸಿದ್ದಾರೆ ಸಂಗೀತಾ. ಹಾಗಾಗಿ ಸಗಣಿನೀರಿನಲ್ಲಿ ಸ್ನಾನ ಮಾಡಿದ್ದು ಅವರ ಬಿಗ್‌ಬಾಸ್ ಜರ್ನಿಗೆ ಒಳ್ಳೆಯ ಆರಂಭವನ್ನೇ ಒದಗಿಸಿತು ಎನ್ನಬಹುದು.

ಫನ್‌ಫ್ರೈಡೆಯಲ್ಲಿ ಮಿಂಚಿದ ಸಂಗೀತಾ

ಪ್ರತಿ ಶುಕ್ರವಾರ ಬರುತ್ತಿದ್ದ ಫನ್‌ಪ್ರೈಡೆ ಟಾಸ್ಕ್‌ಗಳಲ್ಲಿ ಸಂಗೀತಾ ಹಲವು ಬಾರಿ ಮಿಂಚಿದ್ದಾರೆ. ಅದರಲ್ಲಿಯೂ ‘ಚಂಡ ಮಾರುತ’ ಟಾಸ್ಕ್‌ನಲ್ಲಿ ಸಂಗೀತಾ ಮತ್ತು ಕಾರ್ತಿಕ್ ಸೇರಿ ಗೆಲುವಿನ ನಗೆ ಬೀರಿದ್ದೊಂದು ಗಮನಾರ್ಹ ಗಳಿಗೆ. (https://go.jc.fm/fRhd/bgurnbah) ಅಂತಿಮ ಘಟ್ಟದಲ್ಲಿ ವಿನಯ್ ಮತ್ತು ತುಕಾಲಿ ಸಂತೋಷ್ ಅವರು ಎದುರಾದಾಗ, ಸಂಗೀತಾ, ಕಾರ್ತಿಕ್ ಜತೆಗೂಡಿ ತುಂಬ ಚೆನ್ನಾಗಿ ಆಡಿ ಗೆಲುವು ದಾಖಲಿಸಿದ್ದರು.

ಟಾಸ್ಕ್‌ಗಳಲ್ಲಿ ಸೂಪರ್ ಪವರ್‌

ಎರಡನೇ ವಾರದಲ್ಲಿ ಸಂಗೀತಾ ಇದ್ದ ರಣಶಕ್ತಿ ತಂಡ, ವಿನಯ್ ಅವರಿದ್ದ ಮಾಣಿಕ್ಯ ತಂಡದ ವಿರುದ್ಧ ಸೋತಿತ್ತು. ಆ ಸಮಯದಲ್ಲಿ ವಿನಯ್ ಮತ್ತು ಸಂಗೀತಾ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಬಿರುಕು ಹಲವು ವಾರಗಳ ಕಾಲ ಉರಿಯುತ್ತಲೇ ಹೋಗಿತ್ತು.

ಬ್ಯಾಂಗಲ್‌ ಕ್ವೀನ್

ಹಳ್ಳಿ ಟಾಸ್ಕ್‌ ಈ ಸೀಸನ್‌ ಅತಿ ಹೆಚ್ಚು ಸದ್ದು ಮಾಡಿದ ಕೆಲವು ಗಳಿಗೆಳಲ್ಲಿ ಹಳ್ಳಿ ಟಾಸ್ಕ್‌ ಕೂಡ ಒಂದು. ಮನೆಯೊಳಗೆ ಹಳ್ಳಿಯ ವಾತಾವರಣವನ್ನು ಸೃಷ್ಟಿ ಮಾಡಿ ಎರಡು ಕುಟುಂಬಗಳಾಗಿ ಮನೆಯ ಸದಸ್ಯರನ್ನು ವಿಂಗಡಿಸಲಾಗಿತ್ತು. ಅವರ ನಡುವೆ ವಿವಿಧ ಟಾಸ್ಕ್‌ಗಳನ್ನು ನೀಡಲಾಗಿತ್ತು. ಈ ಸಂದರ್ಭದಲ್ಲಿ ವಿನಯ್ ಒಂದು ಕುಟುಂಬದ ಯಜಮಾನನಾಗಿದ್ದರೆ, ಇನ್ನೊಂದು ಕುಟುಂಬಕ್ಕೆ ಸಂಗೀತಾ ಯಜಮಾನ್ತಿಯಾಗಿದ್ದರು. (https://go.jc.fm/fRhd/bk942i1p) ಈ ಸಂದರ್ಭದಲ್ಲಿ ವಿನಯ್ ಮತ್ತು ಕಾರ್ತಿಕ್ ನಡುವೆ ಜಗಳ ನಡೆದಿತ್ತು. ಆ ಸಂದರ್ಭದಲ್ಲಿ ವಿನಯ್, ‘ನಾವೇನು ಬಳೆ ತೊಟ್ಕೊಂಡು ಕೂತಿಲ್ಲ’ ಎಂದು ಮಾತಾಡಿದ್ದರು. ಇದರಿಂದ ಸಿಟ್ಟಿಗೆದ್ದ ಸಂಗೀತಾ ಅವರ ಮಾತನ್ನು ಪ್ರತಿಭಟಿಸಿದ್ದಲ್ಲದೇ ಉಳಿದ ಟಾಸ್ಕ್‌ಗಳನ್ನು ಕೈ ತುಂಬ ಬಳೆ ತೊಟ್ಟುಕೊಂಡೇ ಆಡಿದ್ದರು. ಹಾಗೂ ವಿನಯ್ ಅವರಿಗೆ ‘ಬಳೆ ತೊಟ್ಕೊಂಡಿದೀನಿ ಬಳೆ’ ಎಂದು ಕೈಯೆತ್ತಿ ತೋರಿಸಿದ್ದರು ಕೂಡ. ಬಳೆಯ ಕುರಿತ ತಪ್ಪು ಮಾತುಗಳಿಗೆ ಸಂಗೀತಾ ನೀಡಿದ ಉತ್ತರ ಮನೆಯೊಳಗಷ್ಟೇ ಅಲ್ಲ, ಮನೆಯ ಹೊರಗೂ ಸಾಕಷ್ಟು ಚರ್ಚೆಗೆ ಒಳಗಾಗಿತ್ತು. ವಿನಯ್ ಆಡಿದ ಮಾತಿನ ಬಗ್ಗೆ, ಅದಕ್ಕೆ ಸಂಗೀತಾ ಕೊಟ್ಟ ಉತ್ತರದ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬಂದಿದ್ದವು. ಇದು ಸಂಗೀತಾ ಅವರ ಗಟ್ಟಿ ಮತ್ತು ದಿಟ್ಟ ವ್ಯಕ್ತಿತ್ವವನ್ನು ತೆರೆದಿಟ್ಟಿತ್ತು.

ಆ ವಾರಾಂತ್ಯದ ಪಂಚಾಯ್ತಿಯಲ್ಲಿ ಕಿಚ್ಚ ವಿನಯ್ ಮಾತುಗಳಿಗೆ ತರಾಟೆ ತೆಗೆದುಕೊಂಡಿದ್ದಲ್ಲದೆ, ಸಂಗೀತಾ ಅವರ ದಿಟ್ಟ ವರ್ತನೆಯನ್ನು ಪ್ರಶಂಸಿಸಿದ್ದರು. (https://go.jc.fm/fRhd/e3969xjh) ಅಲ್ಲದೇ ಆ ವಾರದ ಕಿಚ್ಚನ ಚಪ್ಪಾಳೆಯನ್ನು ‘ಬಳೆ’ಗೇ ನೀಡಿದ್ದರು. ಸಂಗೀತಾ ಕೈಯಲ್ಲಿನ ಬಳೆಯ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೆ, ಹಲವು ಸೆಲೆಬ್ರಿಟಿಗಳ ಪೇಜುಗಳಲ್ಲಿ ಕಾಣಿಸಿಕೊಂಡಿತ್ತು. ಇದೊಂದೇ ಸಂದರ್ಭವಲ್ಲ. ತಮ್ಮ ಅಭಿಪ್ರಾಯಗಳನ್ನು ತಿಳಿಸುವ ಯಾವುದೇ ಸಂದರ್ಭಗಳಲ್ಲಿ ಸಂಗೀತಾ ಯಾವತ್ತೂ ಹಿಂಜರಿಕೆಗೆ ತೋರಿಸಿದ್ದಿಲ್ಲ. ರಿಸ್ಕ್‌ ತೆಗೆದುಕೊಳ್ಳಲು ಹಿಂದೆಮುಂದೆ ನೋಡಿದ್ದಿಲ್ಲ. ಹಾಗಾಗಿಯೇ ಸಂಗೀತಾ ಬಹುತೇಕ ಎಲ್ಲ ವಾರಗಳಲ್ಲಿಯೂ ನಾಮಿನೇಷನ್ ಲೀಸ್ಟ್‌ನಲ್ಲಿ ಇದ್ದೇ ಇರುತ್ತಿದ್ದರು. ಆದರೆ ಅದನ್ನೆಲ್ಲ ಗಣನೆಗೇ ತೆಗೆದುಕೊಳ್ಳದ ಅವರು, ತಮ್ಮ ಆಟವನ್ನು ಆಡುತ್ತ, ತಮಗೆ ಅನಿಸಿದ್ದನ್ನು ಹೇಳುತ್ತಲೇ ಇದ್ದರು.

ಕಣ್ಣಿಗಾದ ಗಾಯ

ಈ ಸೀಸನ್‌ನ ಇನ್ನೊಂದು ಬಹುದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಸಂದರ್ಭವೆಂದರೆ ರಕ್ಕಸ ಮತ್ತು ಗಂಧರ್ವರ ಟಾಸ್ಕ್‌. ಟಾಸ್ಕ್‌ ಎಂಬುದು ಸೇಡಿನ ರೀತಿ ಬದಲಾಗಿ ಮನೆಯ ವಾತಾವರಣವೂ ಪೂರ್ತಿ ಬದಲಾಗಿಬಿಟ್ಟ ವಾರವದು. ಆ ವಾರದಲ್ಲಿ ಇನ್ನೊಂದು ವಿಷಾದನೀಯ ಘಟನೆಯೂ ನಡೆಯಿತು. ಕುರ್ಚೆಯಲ್ಲಿ ಕೂರಿಸಿ ಮುಖಕ್ಕೆ ನೀರು ಸೋಕುವ ಟಾಸ್ಕ್‌ನಲ್ಲಿ, ಸಂಗೀತಾ ಮತ್ತು ಪ್ರತಾಪ್ ಇಬ್ಬರಿಗೂ ಕಣ್ಣಿಗೆ ಹಾನಿಯಾಗಿ ಆಸ್ಪತ್ರೆಗೆ ಸೇರುವಂತಾಗಿತ್ತು. ಇದರಿಂದ ಹಲವು ದಿನಗಳ ಕಾಲ ಸಂಗೀತಾ ಮತ್ತು ಪ್ರತಾಪ್ ಇಬ್ಬರೂ ಆಸ್ಪತ್ರೆಯಲ್ಲಿ ಕಳೆಯುವಂತಾಗಿತ್ತು. ಹಾಗೆ ಹೊರಗೆ ಹೋದ ಸಂಗೀತಾ ವಾಪಸ್ ಬರುತ್ತಾರೋ ಇಲ್ಲವೋ ಎಂದು ಎಲ್ಲರೂ ಅಂದುಕೊಳ್ಳುತ್ತಿರುವಾಗಲೇ ಕಪ್ಪು ಕನ್ನಡಕ ತೊಟ್ಟ ಸಂಗೀತಾ ಮತ್ತು ಪ್ರತಾಪ್‌ ರೀ ಎಂಟ್ರಿ ಕೊಟ್ಟಿದ್ದರು. (https://go.jc.fm/fRhd/bmxm83je) ಹಾಗೆಯೇ ಹಿಂದೆಂದಿಗಿಂತ ಹೆಚ್ಚಿನ ಉತ್ಸಾಹದೊಂದಿಗೆ, ಹಟದೊಂದಿಗೆ ಮನೆಗೆ ಬಂದಿದ್ದರು. ಅದನ್ನು ತಮ್ಮ ಆಟಗಳಲ್ಲಿ ತೋರಿಸಿಯೂ ಕೊಟ್ಟರು. ಹಲವು ಸಂದರ್ಭದಲ್ಲಿ ಇಡೀ ಮನೆಯ ಎಲ್ಲರನ್ನೂ ಎದುರುಹಾಕಿಕೊಂಡು ಒಬ್ಬಂಟಿಯಾಗಿದ್ದ ಸಂದರ್ಭವೂ ಸಾಕಷ್ಟಿವೆ. ಆ ಸಂದರ್ಭದಲ್ಲಿಯೂ ಸಂಗೀತಾ ಹಿಂಜರಿಕೆ ತೋರಿದ್ದಿಲ್ಲ.

ಸ್ನೇಹ-ದ್ರೋಹಗಳ ಏರಿಳಿತ

ಮೊದಲ ವಾರದಲ್ಲಿ ಅಸಮರ್ಥರ ಗುಂಪಿನಲ್ಲಿದ್ದ ಸಂಗೀತಾ, ತನಿಷಾ ಮತ್ತು ಕಾರ್ತಿಕ್ ಈ ಮೂವರೂ ಸಾಕಷ್ಟು ಆಪ್ತರಾದರು. ತ್ರಿಕೋನ ಸ್ನೇಹ ಹಲವು ವಾರಗಳ ಕಾಲ ಅಬಾಧಿತವಾಗಿ ಉಳಿದಿತ್ತು. ಈ ಸ್ನೇಹಸಂಬಂಧದಲ್ಲಿಯೂ ಸಂಗೀತಾ ಅವರ ವ್ಯಕ್ತಿತ್ವದ ಆಯಾಮಗಳು ಬಿಚ್ಚಿಕೊಂಡವು. ಲುಡೊ ಟಾಸ್ಕ್‌ನಲ್ಲಿ ಸಂಗೀತಾಳನ್ನು ಉಳಿಸುವ ಅವಕಾಶ ಇದ್ದಾಗಲೂ ಸೇವ್ ಮಾಡದಿರುವುದು ಸಂಗೀತಾ ಅವರಲ್ಲಿ ಅಸಮಧಾನ ಹುಟ್ಟಿಸಿತ್ತು. ಅದನ್ನು ಅವರು ನೇರವಾಗಿಯೇ ಹೇಳಿಕೊಂಡಿದ್ದರು ಕೂಡ. ಆ ಹಂತದಲ್ಲಿ ಕಾರ್ತೀಕ್ ಮತ್ತು ಸಂಗೀತಾ ಮಧ್ಯ ಸಣ್ಣ ಬಿರುಕು ಕಾಣಿಸಿಕೊಂಡಿತ್ತು. ‘ನಾನು ಯಾರನ್ನೂ ಅಷ್ಟಾಗಿ ನಂಬುವುದಿಲ್ಲ. ಯಾರನ್ನಾದರೂ ನಂಬಿದ್ದೇನೆ ಅಂದರೆ ಅವರಿಂದ ಬೆಂಬಲವನ್ನು ನಿರೀಕ್ಷಿಸುತ್ತೇನೆ’ ಎಂಬುದು ಸಂಗೀತಾ ನಿಲುವು. ಇದು ಕೆಲವೊಮ್ಮೆ ಕಿರಿಕಿರಿ ಹುಟ್ಟಿಸಿದ್ದೂ ಇದೆ. ಆದರೆ ಆ ಸ್ವಭಾವದಿಂದ ಬಹುಬೇಗ ಹೊರಬಂಧ ಸಂಗೀತಾ ಸ್ವತಂತ್ರವಾಗಿ ಆಡಲು, ಇರಲು ಪ್ರಾರಂಭಿಸಿದ್ದರು. ಹಾಗಾಗಿಯೇ ಎಲ್ಲರ ಜೊತೆಗೂ ಸ್ನೇಹದಿಂದಲೂ ಇರುತ್ತಲೂ, ಅಷ್ಟೇ ನೇರವಾಗಿ ಜಗಳವಾಡಲೂ ಅವರಿಗೆ ಸಾಧ್ಯವಾಗುತ್ತಿತ್ತು.

ಕೊನೆಯ ವಾರದಲ್ಲಿ ವಾಲ್‌ ಆಫ್‌ ಮೆಮೊರಿ ನೋಡಿದರೆ ಸಂಗೀತಾ ಎಂಥ ನೆನಪುಗಳನ್ನು ಮನೆಯೊಳಗೆ ಕಟ್ಟಿಕೊಂಡಿದ್ದಾರೆ ಎಂಬುದು ಗೊತ್ತಾಗುವಂತಿತ್ತು. ಆರಂಭದ ದಿನಗಳಲ್ಲಿ ಸಂಗೀತಾ ಅವರನ್ನು ದ್ವೇಷಿಸುತ್ತಿದ್ದ ನಮೃತಾ ಕೊನೆಕೊನೆಯ ದಿನಗಳಲ್ಲಿ ಅವರ ಸ್ನೇಹಿತೆಯಾಗಿದ್ದು, ‘ನಾನು ನಿಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೆ’ ಎಂದು ಉದ್ಘರಿಸಿದ್ದೇ ಸಂಗೀತಾ ಅವರ ವ್ಯಕ್ತಿತ್ವಕ್ಕೆ ಸಾಕ್ಷಿ. ಸ್ನೇಹಕ್ಕೆ ಜತೆಯಾಗಿ ನಿಲ್ಲುತ್ತಿದ್ದ ಅವರು ನಂಬಿಕೆದ್ರೋಹವನ್ನು ಎಂದಿಗೂ ಸಹಿಸಿಕೊಂಡಿಲ್ಲ. ಹಿಂದೊಂದು ಮುಂದೊಂದು ಮಾತಾಡುವವರನ್ನು ದೂರವೇ ಇಟ್ಟುಕೊಂಡು ಬಂದರು.
ಕಾರ್ತಿಕ್ ಜೊತೆಗೆ ಸ್ನೇಹ ಮುರಿದುಕೊಂಡ ನಂತರ ‘ನಾನೆಂದಿಗೂ ಅವರನ್ನು ಕ್ಷಮಿಸಲಾರೆ’ ಎಂದು ಒಂದಲ್ಲ ಹಲವು ಬಾರಿ ಹೇಳಿಯೂ ಅವರು ಕಾರ್ತಿಕ್ ಅವರನ್ನು ಕ್ಷಮಿಸಿದರು. ಫಿನಾಲೆ ವೀಕ್‌ನಲ್ಲಿ ಕಾರ್ತಿಕ್, ಸಂಗೀತಾಗೆ ಪತ್ರ ಬರೆದಾಗ, ಸಂಗೀತಾ ಮನಸಾರೆ ಮೆಚ್ಚಿಕೊಂಡು, ತಾನೂ ಪತ್ರ ಬರೆದಿದ್ದಲ್ಲದೇ ಜರ್ಕೀನ್ ಮತ್ತು ಲಿಪ್‌ಸ್ಟಿಕ್‌ ಅನ್ನು ಉಡುಗೊರೆಯಾಗಿ ಕೊಟ್ಟಿದ್ದರು. (https://go.jc.fm/fRhd/x6fv4ihm) ವಿನಯ್ ಜೊತೆಗೂ ಮುನಿಸನ್ನು ಮರೆತು ಸ್ನೇಹದಿಂದ ಉಳಿದಿದ್ದರು.

ಪ್ರತಾಪ್ ಜತೆಗಿನ ಸಹೋದರತ್ವ

‘ಪ್ರತಾಪ್ ಕಂಡರೆ ನನಗೆ ನನ್ನ ಅಣ್ಣನೇ ನೆನಪಾಗುತ್ತಾನೆ. ಸದಾ ಮನಸೊಳಗೆ ಮುಚ್ಚಿಟ್ಟುಕೊಂಡು ಕೊನೆಗೆ ಒಮ್ಮೆಲೇ ಸ್ಫೋಟಗೊಳ್ಳುತ್ತಾನೆ. ಬಿಗ್‌ಬಾಸ್‌ ಮನೆಯೊಳಗೆ ನನ್ನ ಜರ್ನಿಗೂ ಪ್ರತಾಪ್ ಜರ್ನಿಗೂ ಸಾಕಷ್ಟು ಸಾಮ್ಯತೆಗಳಿವೆ’ ಎಂದು ಸಂಗೀತಾ ಹಲವು ಬಾರಿ ಹೇಳಿದ್ದಾರೆ. ಪ್ರತಾಪ್‌ ರೂಪದಲ್ಲಿ ನನಗೊಬ್ಬ ತಮ್ಮ ಸಿಕ್ಕಿದ್ದಾನೆ ಎಂದು ಹೇಳಿದ್ದಷ್ಟೇ ಅಲ್ಲ, ಅವಕಾಶ ಸಿಕ್ಕಾಗೆಲ್ಲ ಪ್ರತಾಪ್‌ ಅವರಿಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ ಸಂಗೀತಾ. ಒಂದು ಹಂತದಲ್ಲಿ ಪ್ರತಾಪ್, ಸಂಗೀತಾ ಅವರನ್ನು ಆಟದಿಂದ ಹೊರಗೆ ಹಾಕಿದ್ದರೂ ಸಂಗೀತಾ, ಪ್ರತಾಪ್‌ಗೆ ನೀಡುವ ಬೆಂಬಲ ನಿಲ್ಲಿಸಲಿಲ್ಲ.

ಹೀಗೆ ಹಲವು ಏರಿಳಿತಗಳುಳ್ಳ ಸಂಗೀತಾ, ಬಿಗ್‌ಬಾಸ್ ಜರ್ನಿಯಲ್ಲಿ ಸಾಕಷ್ಟು ಏರಿಳಿತಗಳು ಇದ್ದಿದ್ದಂತೂ ನಿಜ. ಆದರೆ ಈ ಏರಿಳಿತಗಳನ್ನು ಹಾದುಬಂದ ಅವರು ಇನ್ನಷ್ಟು ಗಟ್ಟಿಗೊಳ್ಳುತ್ತಲೇ ಬಂದರು. ಹಾಗಾಗಿಯೇ ಫಿನಾಲೆ ವೀಕ್‌ನ ಆರು ಸ್ಪರ್ಧಿಗಳಲ್ಲಿ ಎಲ್ಲರಿಗಿಂತ ಮೊದಲು ಕಾಲಿಡಲು ಅವರಿಗೆ ಸಾಧ್ಯವಾಗಿದ್ದು (https://go.jc.fm/fRhd/0npc69a5). ಅವರನ್ನೂ ದ್ವೇಷಿಸುವವರೂ ಅವರ ಸಾಮರ್ಥ್ಯವನ್ನು ಮೆಚ್ಚಿಕೊಳ್ಳುವಂತೆ ಬೆಳೆದಿದ್ದು ಸಂಗೀತಾ ಅವರ ಶಕ್ತಿ. 2ನೇ ರನ್ನರ್ ಅಪ್ ಆಗಿ ಆಯ್ಕೆಯಾದ ಸಂಗೀತಾ ಶೃಂಗೇರಿ ಅವರಿಗೆ 7 ಲಕ್ಷ ರೂ. ಬಹುಮಾನ ಲಭಿಸಲಿದೆ.

ಅವರ ಈ ಏರಿಳಿತಗಳ ಪ್ರಯಾಣವನ್ನು ಜಿಯೊ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇದನ್ನೂ ಓದಿ: BBK SEASON 10: ಬಿಗ್‌ಬಾಸ್ ಕನ್ನಡ ಸೀಸನ್‌ 10ರ ಅವಿಸ್ಮರಣೀಯ ಗಳಿಗೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav Buys Mercedes G Wagon
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
Congress MLA
ಪ್ರಮುಖ ಸುದ್ದಿ1 min ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 202417 mins ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ28 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್30 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ40 mins ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್1 hour ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ1 hour ago

Girl Saved Mother: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯ ಜೀವ ಕಾಪಾಡಿತು ಪುತ್ರಿ ಶಾಲೆಯಲ್ಲಿ ಕಲಿತ ಪಾಠ!

ವಿದೇಶ1 hour ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್2 hours ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202419 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ23 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌