BBK SEASON 10: ಬಿಗ್‌ಬಾಸ್‌ ಮನೆಯಿಂದ ಜೀವನ ಪಾಠ ಕಲಿತೆ; ಸಂಗೀತಾ ಮನದಾಳ - Vistara News

ಬಿಗ್ ಬಾಸ್

BBK SEASON 10: ಬಿಗ್‌ಬಾಸ್‌ ಮನೆಯಿಂದ ಜೀವನ ಪಾಠ ಕಲಿತೆ; ಸಂಗೀತಾ ಮನದಾಳ

BBK SEASON 10: ಬಿಗ್‌ಬಾಸ್‌ ಸೀಸನ್‌ 10ರ ಎರಡನೇ ರನ್ನರ್‌ ಅಪ್‌ ಸಂಗೀತಾ ಶೃಂಗೇರಿ. ಏಕೈಕ್‌ ಮಹಿಳಾ ಫೈನಲಿಸ್ಟ್‌ ಆಗಿದ್ದ ಅವರು ಬಿಗ್‌ಬಾಸ್‌ ಜರ್ನಿ ಬಗ್ಗೆ ಏನು ಹೇಳಿದ್ದಾರೆ ಎನ್ನುವುದನ್ನು ನೋಡೋಣ.

VISTARANEWS.COM


on

sangeetha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿಟ್ಟ ಹುಡುಗಿ, ಗಟ್ಟಿ ವ್ಯಕ್ತಿತ್ವದ ಸಂಗೀತಾ ಶೃಂಗೇರಿ ಬಿಗ್‌ಬಾಸ್‌ ಈ ಸೀಸನ್‌ನ (BBK SEASON 10) ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮನೆಯೊಳಗೆ ಕಾಣಿಸುತ್ತಿದ್ದ ಹಾಗೆಯೇ ಹೊರಗೂ ಅವರದ್ದು ನೇರ ಮಾತು, ದಿಟ್ಟ ವ್ಯಕ್ತಿತ್ವ. ಜಿಯೊಸಿನಿಮಾಗೆ ಅವರು ನೀಡಿದ ಸಂದರ್ಶನದಲ್ಲಿಯೂ ಆ ನೇರವಂತಿಕೆಯ ಕಿಡಿ ಕಾಣಿಸುತ್ತದೆ. ಅವರ ಜತೆಗಿನ ಸಂದರ್ಶನದ ಪೂರ್ಣಪಾಠ ಇಲ್ಲಿದೆ: https://go.jc.fm/fRhd/gcru6u5j

ತುಂಬಾ ಅಂದ್ರೆ ತುಂಬ ಖುಷಿಯಾಗ್ತಿದೆ. ಬಿಗ್‌ಬಾಸ್ ಕನ್ನಡ 10ನೇ ಸೀಸನ್‌ನ ಸೆಕೆಂಡ್ ರನ್ನರ್ ಅಪ್ ನಾನು. ಇಲ್ಲಿವರೆಗೂ ನನ್ನ ನೋಡ್ತಾನೇ ಬಂದಿದೀರಾ… ಇನ್ಮುಂದೆ ನನ್ನ ಲೈವ್ ನೋಡಕ್ಕಾಗಲ್ಲ. ಹಾಗಾಗಿ ನನ್ನನ್ನು ನೂರ ಹನ್ನೆರಡು ದಿನಗಳವರೆಗೆ ನೇರವಾಗಿ ತೋರಿಸಿ, ಎಲ್ಲಜನರ ಜೊತೆಗೆ ಸಂಪರ್ಕದಲ್ಲಿ ಇರಿಸಿದ್ದಕ್ಕೆ ನಾನು ಜಿಯೊಸಿನಿಮಾಗೆ ಥ್ಯಾಂಕ್ಸ್ ಹೇಳಲೇಬೇಕು. ಈ ಸಲ ಒಂದು ಹೊಸ ಅನಭವ ಇತ್ತು. ಫಿನಾಲೆ ವಾರದಲ್ಲಿ ಆರು ಸ್ಪರ್ಧಿಗಳಿದ್ದರು. ಐದಲ್ಲ. ಆರರಿಂದ ಟಾಪ್‌ 5 ಸೆಲೆಕ್ಟ್ ಆದಾಗಲೂ ಸಾಕಷ್ಟು ಎಕ್ಸೈಟ್‌ಮೆಂಟ್ ಇತ್ತು. ನರ್ವಸ್‌ನೆಸ್ ಕೂಡ ಇತ್ತು. 4ರಿಂದ 3ಬಂದ ನಂತರ ಸುದೀಪ್ ಅವರೇ ಮನೆಯೊಳಗೆ ಬಂದು ನಮ್ಮನ್ನು ಕರೆದುಕೊಂಡು ಹೋದರು. ಇದು ನನ್ನ ಬದುಕಿನಲ್ಲಿಯೇ ಅತ್ಯುತ್ತಮ ಅನುಭವ. ವೇದಿಕೆಯ ಮೇಲೆ ಮೂರು ಬಾಕ್ಸ್‌ಗಳಿದ್ದವು. ಆ ಬಾಕ್ಸ್‌ನಲ್ಲಿ ಒಂದು ರೆಡ್ ಆಗತ್ತೆ ಅಂತ ಹೇಳಿದ್ರು. ಅದು ನನ್ನ ಎಕ್ಸಿಟ್‌, ಸೆಕೆಂಡ್ ರನ್ನರ್ ಅಪ್ ಆಗಿ.
ವಿನ್ನರ್ ಆಗಕ್ಕೆ ಆಗ್ಲಿಲ್ಲ ಅಂತ ಬೇಜಾರಿದೆ. ಆದರೂ ನಾನು ಖುಷಿಯಾಗಿದ್ದೇನೆ. ಯಾಕೆಂದರೆ ಈ ಜರ್ನಿ ಎಷ್ಟು ಅದ್ಭುತವಾಗಿತ್ತು ಅಂದರೆ ನಾನು ತುಂಬ ತುಂಬ ಸ್ಟ್ರಾಂಗ್ ಆಗಿದ್ದೇನೆ ಎಂದು ಸಂಗೀತಾ ಮಾತು ಆರಂಭಿಸಿದರು.

ಜೀವನದಲ್ಲಿ ಸುಮಾರು ಸಮಸ್ಯೆಗಳು ಬರುತ್ತವೆ. ಓಡಿ ಹೋಗಬೇಕು ಅನಿಸುತ್ತದೆ. ನಾನು ಈ ಮನೆಯಲ್ಲಿ ಕಲಿತಿರುವ ಒಂದು ಸಂಗತಿ ಏನೆಂದರೆ ಬಿಟ್ಟು ಕೊಡಬೇಡ; ಆಶಾವಾದಿಯಾಗಿರು ಎನ್ನುವುದು. ಈ ಹೋಪ್ ಅನ್ನುವುದನ್ನು ನಾನು ಮುಂದೆಯೂ ಕ್ಯಾರಿ ಮಾಡ್ತೀನಿ. ಈ ಮನೆಯಲ್ಲಿ ಸಾಕಷ್ಟು ಕಲಿತಿದ್ದೀನಿ. ಬದುಕಿನಲ್ಲಿಯೂ ಸಾಕಷ್ಟು ಕಲಿಯುವುದಿದೆ. ನಾನು ಯಾವತ್ತೂ ಸಮಸ್ಯೆಗಳಿಂದ ಓಡಿಹೋಗುವುದಿಲ್ಲ. ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮ ವಿಶ್ವಾಸದಿಂದ ಹೇಳಿದ್ದಾರೆ.

ಮನೆಯೊಳಗೆ ಎಲ್ಲರೂ ಅವರವರ ಗೇಮ್‌ ಅನ್ನು ಜೆನ್ಯೂನ್ ಆಗಿಯೇ ಆಡಿದ್ದೇನೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ನಾನು ನನ್ನ ಗೇಮ್‌ ಅನ್ನು ಗೇಮ್‌ ಅಂತಷ್ಟೇ ಆಡಿಲ್ಲ, ಅದನ್ನು ಬದುಕಿದ್ದೀನಿ. ಬೇರೆಯವರ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ. ನನ್ನ ಗೇಮ್ ಬಗ್ಗೆಯಷ್ಟೇ ನಾನು ಹೇಳಬಹುದು. ಯಾಕೆಂದರೆ ಅಲ್ಲಿ ಉಳಿದುಕೊಳ್ಳಬೇಕು ಅಂದರೆ ಎಲ್ಲರೂ ಅವರವರ ವ್ಯಕ್ತಿತ್ವವನ್ನು ತೋರಿಸಿಕೊಳ್ಳಬೇಕಾಗುತ್ತದೆ. ಯಾರಾದರೂ ಫೇಕ್ ಆಗಿರಲು ಸಾಧ್ಯ ಎಂದು ನನಗೆ ಅನಿಸುತ್ತಿಲ್ಲ. ಅದರಲ್ಲಿಯೂ ಓಪನ್ ನಾಮಿನೇಷನ್ ಎಂದು ಬಿಗ್‌ಬಾಸ್ ಮಾಡಿದ್ದು ತುಂಬ ಒಳ್ಳೆಯದು. ಈ ಸೀಸನ್‌ನಲ್ಲಿ ಯಾವಾಗಲೂ ಕನ್ಫೆಷನ್ ರೂಮಿಗೆ ಹೋಗಿ ಗೊತ್ತಾಗದೆ ಇರುವ ಹಾಗೆ ನಾಮಿನೇಷನ್ ನಡೆಯಲೇ ಇಲ್ಲ ಎಂದು ತಿಳಿಸಿದ್ದಾರೆ.

ಫೇಕ್ ಆಗಿ ಇರಲೇ ಇಲ್ಲ

ಎಲ್ಲಕ್ಕಿಂತ ಈ ಸಲದ ಸೀಸನ್‌ ಯಾಕೆ ವಿಭಿನ್ನ ಆಗಿತ್ತು ಅಂದ್ರೆ ಯಾರೂ ಫೇಕ್ ಆಗಿ ಇರಲೇ ಇಲ್ಲ. ಕಳೆದ ಸೀಸನ್‌ನಲ್ಲಿ ಯಾರು ಯಾರಿಗೆ ವೋಟ್ ಮಾಡಿದ್ದಾರೆ ಎಂದು ಗೊತ್ತೇ ಆಗುತ್ತಿರಲಿಲ್ಲ. ಆದರೆ ಈ ಬಾರಿ ಮುಖದ ಮೇಲೇ ಹೇಳುವುದರಿಂದ ನಮಗೂ ಗೊತ್ತಿರುತ್ತಿತ್ತು. ಇವರಿಗೆ ನಾವು ಇಷ್ಟ, ಇವರಿಗೆ ಇಷ್ಟ ಇಲ್ಲ ಅಂತ. ಹಾಗಾಗಿ ಪ್ರೇಕ್ಷಕರಿಗೂ ಐಡಿಯಾ ಇರ್ತಿತ್ತು. ಅಲ್ಲದೆ ಪ್ರತಿ ಸಲ ಟಾಸ್ಕ್ ಕೊಡುವಾಗಲೂ ತುಂಬ ಕ್ರಿಯೇಟೀವ್ ಆಗಿ ವ್ಯಕ್ತಿತ್ವವನ್ನು ಹೈಲೈಟ್ ಮಾಡುವ ರೀತಿಯಲ್ಲಿ ಟಾಸ್ಕ್‌ ಕೊಡುತ್ತಿದ್ದರು. ಒಂದೊಂದು ವಾರ ಆಗುತ್ತಿರುವ ಹಾಗೆ ಎಲ್ಲರ ವ್ಯಕ್ತಿತ್ವದ ಒಂದೊಂದು ಛಾಯೆ ಎದ್ದು ಕಾಣಿಸುತ್ತಿತ್ತು. ಇದೇ ಕಾರಣಕ್ಕೆ ಈ ಸೀಸನ್ ತುಂಬ ವಿಭಿನ್ನವಾಗಿತ್ತು ಅನಿಸುತ್ತದೆ ಎಂದು ಸಂಗೀತ ವಿವರಿಸಿದ್ದಾರೆ.

ತಮ್ಮ ಪ್ರತಾಪ್‌ ಬಗ್ಗೆ…

ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮನ ಬಾಂಡ್‌ ಎಂದು ಎಲ್ಲರೂ ಹೇಳ್ತಾರೆ. ನಮ್ಮ ನಡುವೆ ತುಂಬ ಆಳವಾದ ಫ್ರೆಂಡ್‌ಶಿಪ್‌ ಮೊದಲಿನಿಂದಲೂ ಇತ್ತು. ಮೊದಲಿನಿಂದಲೂ ಅವನ ನಾನು ಸಪೋರ್ಟ್ ಮಾಡ್ತಾ ಬಂದಿದ್ದೆ. ನಡುವೆ ಕೆಲವು ಕಾಲ ಮನಸ್ತಾಪ ಬಂದಿತ್ತು. ಆದರೆ ಕೊನೆಗೆ ಸರಿಹೋಯ್ತು. ಮನಸ್ತಾಪ ಬಂದರೂ ನಾವು ಸರಿಹೋದೆವು. ಯಾಕೆಂದರೆ ನಮ್ಮ ಬಾಂಡಿಂಗ್ ಹಾಗಿತ್ತು. ಆ ಪ್ರೀತಿ ಯಾವತ್ತೂ ಕಡಿಮೆ ಆಗಿಲ್ಲ. ನನಗೆ ಫ್ರೆಂಡ್‌ಶಿಪ್‌ ಆಗೋದು ತುಂಬ ಕಷ್ಟ. ಈ ಮನೆಯಲ್ಲಿ ಪ್ರಾರಂಭದಲ್ಲಿಯೇ ಕಾರ್ತಿಕ್ ಮತ್ತು ತನಿಷಾ ಜತೆಗೆ ಫ್ರೆಂಡ್‌ಶಿಪ್‌ ಆಯ್ತು. ಸಡನ್ ಆಗಿ ಆದ ಫ್ರೆಂಡ್‌ಶಿಪ್‌ ಅಷ್ಟೇ ಸಡನ್ ಆಗಿ ಹೋಗುವ ಸಾಧ್ಯತೆಯೂ ಇರುತ್ತವೆ. ಹಾಗೇ ಆಯ್ತು. ನನ್ನದು ಮತ್ತು ಅವರದು ಕೆಲವು ಚಕಮಕಿ ನಡೆಯಿತು. ಅದು ಕೊನೆಯವರೆಗೂ ಮುಂದುವರಿಯಿತು. ಅವರ ಕಡೆಯಿಂದ ಸರಿಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದನ್ನು ಒಪ್ಪಿಕೊಳ್ಳಲು ನಾನು ಸಿದ್ಧಳಿಲ್ಲ. ಯಾಕೆಂದರೆ ನಾನು ಅಲ್ಲಿ ಬರೀ ಗೇಮ್ ಆಡ್ತಾ ಇರ್ಲಿಲ್ಲ. ನನಗೆ ಬೇಜಾರಾಯ್ತು, ಹರ್ಟ್‌ ಆಯ್ತು ಅಂದರೆ ಅವರನ್ನು ಮಾತಾಡಿಸಲು ತುಂಬ ಕಷ್ಟವಾಗುತ್ತದೆ. ಅದನ್ನೆಲ್ಲ ಬದಿಗಿಟ್ಟು ಅವರನ್ನು ವಿನ್ನರ್ ಅಂತ ನೋಡಿದಾಗ, ಖಂಡಿತ ಅವರು ಅವ್ರ ಗೇಮ್ ಅನ್ನು ತುಂಬ ಚೆನ್ನಾಗಿ ಆಡಿದಾರೆ. ಅವರಿಗೆ ಕಂಗ್ರಾಜುಲೇಷನ್ಸ್ ಹೇಳ್ತೀನಿ ಎಂದು ಹೇಳಿದ್ದಾರೆ.

ವಿನಯ್ ನಾನು ಈ ಮೊದಲು ಒಂದು ಧಾರಾವಾಹಿಯಲ್ಲಿ ನಟಿಸಿದ್ದೆವು. ಅಲ್ಲಿಯೂ ನನಗೂ ಅವರಿಗೂ ಸುಮಾರು ಗಲಾಟೆಗಳು ನಡೆದಿದ್ದವು. ಆದರೆ ಅವ್ರು ಸಹಜವಾಗಿ ಒಳ್ಳೆಯವರು. ಒಳ್ಳೆಯ ವ್ಯಕ್ತಿತ್ವದವರು. ಸ್ವಲ್ಪ ಗಲಾಟೆಗಳು ಆಗ್ತವೆ. ನಾನೂ ಸ್ವಲ್ಪ ನೇರ ವ್ಯಕ್ತಿತ್ವದವಳು. ಮುಖದ ಮೇಲೇ ಹೇಳುತ್ತೇನೆ. ಹಾಗಾಗಿಯೇ ಸ್ವಲ್ಪ ಗಲಾಟೆಗಳು ನಡೆಯುತ್ತಿತ್ತು. ಅದೇ ರೀತಿ ಮನೆಯಲ್ಲಿಯೂ ಗಲಾಟೆಗಳು ಆಗಿವೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕು ಅಂದರೆ, ಪರಸ್ಪರರ ಬಗ್ಗೆ ನಮಗೆ ಗೌರವ ಇದೆ. ಅದು ಯಾವತ್ತೂ ಇರುತ್ತದೆ ಎಂದು ಭಾವಿಸುತ್ತೇನೆ ಎಂದು ಸಂಗೀತಾ ಅಭಿಪ್ರಾಯ ಪಟ್ಟಿದ್ದಾರೆ.

ಮುಂದಿನ ದಿನಗಳಲ್ಲಿ ಫ್ರೆಂಡ್‌ಶಿಪ್‌ ಮುಂದುವರಿಯುವ ಬಗ್ಗೆ…

ಮುಂದಿನ ದಿನಗಳಲ್ಲಿ ಫ್ರೆಂಡ್‌ಶಿಪ್‌ ಹೇಗೆ ಮುಂದುವರಿಯುತ್ತದೆ ಎಂದು ಹೇಳುವುದು ಕಷ್ಟ. ಯಾಕೆಂದರೆ ನಾನು ಈಗಷ್ಟೇ ನೂರ ಹನ್ನೆರಡು ದಿನಗಳನ್ನು ಕಳೆದು ಹೊರಗೆ ಬರ್ತಿದೀನಿ. ಮನೆಯವರನ್ನು, ಸ್ನೇಹಿತರನ್ನು, ಜನರನ್ನು ಭೇಟಿಯಾಗಬೇಕು. ಹೊರಗೆ ಏನು ನಡೆಯತ್ತಿದೆ ಎಂದು ತಿಳಿದುಕೊಳ್ಳಬೇಕು. ಮನೆಯೊಳಗೆ ಒಂದು ಗೇಮ್ ಆಡ್ತಿದ್ವಿ ಅಂದುಕೊಂಡು, ಅಲ್ಲಿನ ಪ್ರೆಸ್ಟ್ರೇಷನ್, ಕೋಪ, ಸಿಟ್ಟು ಎಲ್ಲವನ್ನೂ ಅಲ್ಲೇ ಬಿಟ್ಟು ಹೊರಗೆ ಹೊಸ ಜೀವನ ಶುರುವಾಗಬಹುದು. ನೋಡಬೇಕು.

ಫನ್‌ ಫ್ರೈಡೆ ಟಾಸ್ಕ್‌ಗಳು ಇಷ್ಟ

ಜಿಯೊಸಿನಿಮಾ ಫನ್‌ ಫ್ರೈಡೆ ಟಾಸ್ಕ್‌ಗಳು ನನಗೆ ಇಷ್ಟ. ಕೆಲವು ಇಟ್ಟಿಗೆಗಳನ್ನು ಇಟ್ಟುಕೊಂಡು ಪಾಸ್ ಮಾಡಿಕೊಂಡು ಹೋಗುವ ಟಾಸ್ಕ್‌ ನಂಗೆ ತುಂಬ ಇಷ್ಟವಾಗಿತ್ತು. ಅದರಲ್ಲಿ ನಾನು ಗೆದ್ದಿದ್ದೇನೆ ಕೂಡ. ಪ್ರತಿ ಸಲ ಜಿಯೊಸಿನಿಮಾ ಟಾಸ್ಕ್‌ಗೆ ಕಾಯುತ್ತಿದ್ದೆವು. ಮ್ಯೂಸಿಕಲ್ ಪಾಟ್‌ ಕೂಡ ಇಷ್ಟವಾಗಿತ್ತು. ಅದರಲ್ಲಿ ನಾನು ಪೌಲ್ ಮಾಡಿದೆ. ಆದರೆ ಹೇಳಲಿಲ್ಲ. ಆದರೂ ನಾನೇ ಒಪ್ಪಿಕೊಂಡು ಹೊರಗೆ ಬಂದಿದ್ದೆ. ಬಿಗ್‌ಬಾಸ್‌ ಮನೆ ನಾನು ತುಂಬ ಅಂದ್ರೆ ತುಂಬ ನೊಂದುಕೊಂಡಿದ್ದ ಜಾಗ. ಯಾವಾಗ ಹೊರಗಡೆ ಬರ್ತೀನೋ ಅಂತ ಕಾಯ್ತಿದ್ದೆ. ಯಾಕೆಂದರೆ ಕೊನೆಯ ಕೆಲವು ವಾರಗಳನ್ನು ಬಿಟ್ಟರೆ ಉಳಿದೆಲ್ಲ ದಿನಗಳಲ್ಲಿ ಇಡೀ ಮನೆಯೇ ನನ್ನ ವಿರುದ್ಧವಿತ್ತು. ಎಲ್ಲರ ಎದುರಿನಲ್ಲಿಯೂ ನಾನು ಪ್ರೂವ್ ಮಾಡಿಕೊಳ್ಳಬೇಕಾಗುತ್ತಿತ್ತು. ಈಗ ಆ ಬಾತ್‌ರೂಮ್‌ ಏರಿಯಾ ಮತ್ತು ಟ್ರಿಯನ್ನು ಮಿಸ್ ಮಾಡ್ಕೋತೀನಿ. ಎಲ್ಲದಕ್ಕಿಂತ ಹೆಚ್ಚಾಗಿ ಮಿರರ್ ಅನ್ನು ಮಿಸ್ ಮಾಡ್ಕೋತೀನಿ. ನನ್ನ ಅರ್ಧ ಜರ್ನಿ ನಾನು ಅದರ ಜತೆಗೇ ಕಳೆದಿದ್ದೇನೆ. ಅಲ್ಲಿರುವ ದೇವಿ ವಿಗ್ರಹವನ್ನು ಮಿಸ್ ಮಾಡ್ಕೋತೀನಿ. ಅದರಿಂದ ತುಂಬ ಶಕ್ತಿ ಪಡೆದುಕೊಂಡಿದ್ದೇನೆ ಎಂದು ಸಂಗೀತಾ ಭಾವುಕರಾದರು.

ಇದನ್ನೂ ಓದಿ: BBK SEASON 10: ʻವಿಟಿʼಯಲ್ಲಿ ಕಾಣಿಸಿಲ್ಲ ಇಶಾನಿ, ರಕ್ಷಕ್‌; ಕಿರಿಕ್‌ಗೆ ತಕ್ಕ ಶಾಸ್ತಿ ಇದು ಅಂದ್ರು ವೀಕ್ಷಕರು!

ನನಗೆ ಬಿಗ್‌ಬಾಸ್‌ ಮನೆಯ ಧ್ವನಿಯ ಮೇಲೆ ಎಷ್ಟು ಕ್ರಶ್ ಇತ್ತು ಎಂದರೆ ಕೊನೆಯ ಗಳಿಗೆಯಲ್ಲಿಯೂ ಅವರಿಗೆ ಏನಾದ್ರೂ ಮಾತಾಡಿ ಬಿಗ್‌ಬಾಸ್ ಎಂದು ಕೇಳಿಕೊಳ್ಳುತ್ತಿದ್ದೆ. ಅಲ್ಲದೆ ನಾನು ಯಾವಾಗ ಕುಗ್ಗಿದ್ದೆನೋ ಆಗೆಲ್ಲ ಬಿಗ್‌ಬಾಸ್ ನನಗೆ ಅಕ್ಷರಶಃ ತುಂಬ ಸಪೋರ್ಟ್‌ ಮಾಡಿದ್ದಾರೆ. ನನ್ನ ಇಡೀ ಜರ್ನಿಯಲ್ಲಿ ಅವರ ಸಪೋರ್ಟ್‌ ತುಂಬ ಇದೆ. ಅದನ್ನು ನಾನು ಎಂದೆಂದಿಗೂ ಮರೆಯಲ್ಲ ಎಂದು ಸಂಗೀತಾ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading
Advertisement
Shah Rukh Khan and Anirudh Ravichander to team up for King
ಬಾಲಿವುಡ್7 mins ago

Shah Rukh Khan: ಶಾರುಖ್‌ ಹೊಸ ಸಿನಿಮಾಗಾಗಿ ಕೈ ಜೋಡಿಸಿದ ಅನಿರುದ್ಧ್ ರವಿಚಂದರ್!

Air India
ದೇಶ11 mins ago

Air India: ಟಗ್ ಟ್ರ್ಯಾಕ್ಟರ್‌ಗೆ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಡಿಕ್ಕಿ; ತಪ್ಪಿದ ಭಾರೀ ದೊಡ್ಡ ದುರಂತ

PM Narendra Modi
ದೇಶ12 mins ago

PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

Student Death
ಬೆಂಗಳೂರು ಗ್ರಾಮಾಂತರ15 mins ago

Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

Dengue awareness rally in Hosapete
ವಿಜಯನಗರ32 mins ago

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Modi v/s Rahul
ರಾಜಕೀಯ38 mins ago

Modi v/s Rahul: ರಾಹುಲ್‌ ಗಾಂಧಿ ಆಸ್ತಿ ಪ್ರಧಾನಿ ಮೋದಿಗಿಂತ ಎಷ್ಟು ಪಟ್ಟು ಹೆಚ್ಚು ಗೊತ್ತೆ?

gold rate today adah
ಚಿನ್ನದ ದರ49 mins ago

Gold Rate Today: ಇಳಿಯಿತು ಚಿನ್ನದ ಬೆಲೆ; ಬಂಗಾರದ ಗ್ರಾಹಕರಿಗೆ ತುಸು ನಿಟ್ಟುಸಿರು; ದರ ಹೀಗಿದೆ

MDH, Everest Spices
ವಿದೇಶ55 mins ago

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

Virat Kohli
ಕ್ರೀಡೆ58 mins ago

Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

dhruva sarja support C Cinema Kanda Kanda Video Song Release
ಸ್ಯಾಂಡಲ್ ವುಡ್1 hour ago

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ23 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌