BBK SEASON 10: ಬಿಗ್‌ಬಾಸ್‌ ಪಯಣ ಸ್ಮರಣೀಯ; ತುಕಾಲಿ ಸಂತೋಷ್ - Vistara News

ಬಿಗ್ ಬಾಸ್

BBK SEASON 10: ಬಿಗ್‌ಬಾಸ್‌ ಪಯಣ ಸ್ಮರಣೀಯ; ತುಕಾಲಿ ಸಂತೋಷ್

BBK SEASON 10: ಬಿಗ್‌ಬಾಸ್‌ನ ಐದನೇ ರನ್ನರ್ ಅಪ್ ಆಗಿ ಹೊಮ್ಮಿರುವ ತುಕಾಲಿ ಅವರೊಂದಿಗೆ ಜಿಯೊಸಿನಿಮಾ ಜತೆಗೆ ನಡೆಸಿದ ಸಂದರ್ಶನ ಇಲ್ಲಿದೆ.

VISTARANEWS.COM


on

tukali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10(BBK SEASON 10)ರಲ್ಲಿ ಎಲ್ಲ ಸ್ಪರ್ಧಿಗಳ ನಗುವಿನ ಮೊತ್ತ ತೆಗೆದರೆ ಅದರ ಬಹುಪಾಲು ತುಕಾಲಿ ಸಂತೋಷ್ ಅವರಿಗೆ ಹೋಗುತ್ತದೆ. ಅಷ್ಟೇ ಅಲ್ಲ, ಮನೆಯೊಳಗಿನ ಭಿನ್ನಾಭಿಪ್ರಾಯಗಳ ಮೂಲಗಳನ್ನು ಹುಡುಕಿಕೊಂಡು ಹೋದರೆ ಅದರಲ್ಲಿಯೂ ತುಕಾಲಿ ಸಂತೋಷ್ ಅವರ ಕೊಡುಗೆ ಸಣ್ಣದಲ್ಲ! ಹೀಗೆ ನಗುನಗಿಸುತ್ತಲೇ ಚಾಣಾಕ್ಷ ತಂತ್ರವನ್ನೂ ಹೆಣೆಯುವ ವ್ಯಕ್ತಿತ್ವ ತುಕಾಲಿ ಸಂತೋಷ್ ಅವರದ್ದು. ಬಿಗ್‌ಬಾಸ್‌ನ ಐದನೇ ರನ್ನರ್ ಅಪ್ ಆಗಿ ಹೊಮ್ಮಿರುವ ತುಕಾಲಿ ಅವರಿಂದಿಗೆ ಜಿಯೊಸಿನಿಮಾ ಜತೆಗೆ ನಡೆಸಿದ ಸಂದರ್ಶನ ಇಲ್ಲಿದೆ. https://go.jc.fm/fRhd/z4rcg0tk

ಈ ಸೀಸನ್‌ನಲ್ಲಿ ಟಾಪ್‌ 6 ಫಿನಾಲೆ ಕಂಟೆಸ್ಟೆಟ್ಸ್‌ಗಳಲ್ಲಿ ನಾನೂ ಒಬ್ಬ. ಐದನೇ ರನ್ನರ್ ಅಪ್ ಆಗಿದ್ದೇನೆ. ನಿಮ್ಮೆಲ್ಲರ ಪ್ರೀತಿಯಿಂದ ನಾನು ಈ ಜಾಗದಲ್ಲಿದ್ದೀನಿ. ಸಿಕ್ಕಾಪಟ್ಟೆ ಎಕ್ಸೈಟ್‌ಮೆಂಟ್ ಇದೆ. ನಾನು ಮನೆಗೆ ಹೋಗುವಾಗಲೇ ಅಂದುಕೊಂಡಿದ್ದೆ. ಶೋ ಮುಗಿಯುವ ದಿನವೇ ಮನೆಯಿಂದ ಹೊರಗೆ ಬರಬೇಕು ಅಂತ. ಹಾಗೇ ಆಗಿದೆ. ಗ್ರ್ಯಾಂಡ್ ಫಿನಾಲೆ ದಿನ ವೇದಿಕೆಯ ಮೇಲಿಂದ ಬೀಳ್ಕೊಟ್ಟು ಅಲ್ಲಿಂದ ಹೋಗಿದ್ದೇನೆ. ತುಂಬ ಖುಷಿಯಾಗುತ್ತಿದೆ ಎಂದು ವಿವರಿಸಿದ್ದಾರೆ.

ಬಿಗ್‌ಬಾಸ್ ಮನೆಯಲ್ಲಿ ಪ್ರತಿಯೊಂದೂ ವಿಷಯವೂ ಸವಾಲೇ. ಆ ಎಲ್ಲ ಸವಾಲುಗಳನ್ನು ಎದುರಿಸಿ ಫಿನಾಲೆಯವರೆಗೆ ಬಂದು ಕಾಮಿಡಿಯಲ್ಲಿ ನನ್ನದೇ ಆದ ಛಾಪು ಮೂಡಿಸಿದ್ದೀನಿ. ಫೆವರೆಟ್ ಮೊಮೆಂಟ್‌ ಅಂದ್ರೆ ಬಿಗ್‌ಬಾಸ್‌ ಮನೆಯಲ್ಲಿ ಮಾತ್ರೆ ತಂದುಕೊಡುತ್ತಿದ್ದದ್ದು. ಇನ್ಮೇಲಿಂದ ‘ಮಾತ್ರೆ ತಂದ್ಕೊಡೋರು ಯಾರೋ ಅಣ್ಣಾ… ಯಾರೋ ಅಣ್ಣಾ… ಚಪಾತಿ ಒತ್ಕೊಡೋರು ಯಾರೋ ಅಣ್ಣಾ… ಯಾರೋ ಅಣ್ಣಾ…’ ಅಂತ ಹಾಡುವಂತಾಗಿದೆ. ತಿಂದ್ಯಾ ಮಲಗಿದ್ಯಾ ಏನು ಮಾಡ್ದೆ ಅಂತೆಲ್ಲ ಕೇಳೋರು ಯಾರೂ ಇಲ್ಲ ಇನ್ಮೇಲೆ. ಬಿಗ್‌ಬಾಸ್‌ ಮನೆಯಲ್ಲಿ ಅಲಾರ್ಮ್‌ ರೀತಿಯಲ್ಲಿ ಒಂದು ಹಾಡು ಬರುತ್ತಿತ್ತು. ನಿದ್ದೆಗಣ್ಣಲ್ಲಿದ್ರೂ ಆ ಹಾಡು ಕೇಳಿದ ತಕ್ಷಣ ರಪ್ ಅಂತ ಎಚ್ಚರ ಆಗಿಬಿಡುತ್ತದೆ. ಅದನ್ನು ತುಂಬ ಮಿಸ್ ಮಾಡ್ಕೋತೀನಿ. ಹಾಗೆಯೇ ಎಲ್ಲ ಸ್ಪರ್ಧಿಗಳನ್ನೂ ಮಿಸ್ ಮಾಡ್ಕೋತೀನಿ ಎಂದು ಸಂತು ಅವರು ಭಾವುಕರಾಗಿ ತಿಳಿಸಿದ್ದಾರೆ.

ನನ್ನ ಹೆಂಡತಿ ಯಾವ್ದೋ ಲೆಟರ್ ಬರ್ದಿದಾಳೆ ಅಂತ ಹೇಳಿ ತಲೆಮೇಲೆ ಡಬ್ಬ ಇಟ್ಕೊಂಡು ಟಾಸ್ಕ್‌ ಗೆದ್ದೆ. ಆ ಲೆಟರ್‌ ಬಂದ್ಮೇಲೆ ಗೊತ್ತಾಯ್ತು, ಏನೇನು ಬರ್ದವ್ಳೆ ಅಂತ. ಈ ನೂರಾ ಹನ್ನೊಂದು ದಿನಗಳಲ್ಲಿ ಮಿಸ್ ಮಾಡ್ಕೊಳ್ಳೋದು ತುಂಬ ಇದೆ. ಎಲ್ಲವನ್ನೂ ಮಿಸ್ ಮಾಡ್ಕೋತೀನಿ. ಆ ಮೆಮರಿ ಬರೀಬೇಕು ಅಂದ್ರೆ ನೂರಾ ಹನ್ನೊಂದು ಪಿಚ್ಚರ್ ಸ್ಟೋರಿ ಹೇಳ್ಬೇಕಾಗತ್ತೆ. ಈ ಸಲದ ಸೀಸನ್‌ನಲ್ಲಿ ಕಾರ್ತಿಕ್‌ ಹೀರೊ. ಪ್ರತಾಪ್‌ ಪೋಷಕ ನಟ. ಸಂಗೀತಾ ಶೃಂಗೇರಿ ಆ ಸಿನಿಮಾದ ಹೀರೊಯಿನ್ ಇದ್ದ ಹಾಗೆ. ಹೀರೊ ಹಿರೊಯಿನ್ ಇದ್ದಮೇಲೆ ವಿನಯ್ ವಿಲನ್ ಆಗಿರಲೇಬೇಕಲ್ಲಾ… ವರ್ತೂರು ಸಂತೋಷಣ್ಣ ನ್ಯಾಯ ಕೊಡುವ ದೇವರ ಥರ. ಕರ್ಣನ ಥರ. ಅವರ ಬಗ್ಗೆ ಹೇಳೋಕೆ ಒಂದಾ ಎರಡಾ ಇರೋದು… ತುಂಬ ಹೇಳಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: BBK SEASON 10: ಬಿಗ್‌ಬಾಸ್‌ ಮನೆಯಿಂದ ಜೀವನ ಪಾಠ ಕಲಿತೆ; ಸಂಗೀತಾ ಮನದಾಳ

ಈ ನೂರಾ ಹನ್ನೊಂದು ದಿನಗಳ ಮೆಮರಿಯನ್ನು ಒಂದೇ ಸಾಲಿನಲ್ಲಿ ಹೇಳಬೇಕು ಅಂದ್ರೆ, ‘ನೆನಪುಗಳ ಮಾತು ಮಧುರ…’ ಬಿಗ್‌ಬಾಸ್ ಐ ಮಿಸ್ ಯೂ… ಐ ಲವ್ ಯೂ… ನಿಮ್ಮ ಧ್ವನಿ ನನ್ನನ್ನು ತುಂಬ ಎಚ್ಚರಗೊಳಿಸುತ್ತಿತ್ತು. ಒಂದು ಅಶರೀರವಾಣಿ ನಮ್ಮನ್ನೆಲ್ಲ ಕಂಟ್ರೋಲ್ ಮಾಡಿತು ಅಂದ್ರೆ ನೀವು ಎಷ್ಟು ಸ್ಟ್ರಾಂಗ್ ಇರಬೇಕು. ನಿಮ್ಮ ಮೆಂಟಾಲಿಟಿ ಎಷ್ಟು ಸ್ಟ್ರಾಂಗ್ ಇರಬೇಕು. ನಿಮ್ಮ ಮನಸ್ಸು ಎಂಥದ್ದಿರಬೇಕು. ನನಗೆ ಇದ್ದ ಆಸೆಗಳನ್ನು ಬಿಗ್‌ಬಾಸ್‌ ಪೂರೈಸಿದ್ದಾರೆ. ನಾನು ಅಂದುಕೊಂಡಿದ್ದೆಲ್ಲ ಕೊಟ್ಟಿದೀರಾ… ಅದಕ್ಕಿಂತ ಹೆಚ್ಚು ಕೊಟ್ಟಿದೀರಾ… ನಾನು ನಕ್ಕಾಗ ನೀವೂ ನಕ್ಕಿದೀರಾ… ನೋವಲ್ಲಿ ನೋವು ಪಟ್ಕೊಂಡಿದೀರಾ. ನನ್ನ ಜೀವಮಾನದಲ್ಲಿ ಬಿಗ್‌ಬಾಸ್ ಅನ್ನೋದು ಒಂದು ಇತಿಹಾಸ ಎಂದು ಸಂತೋಷ್‌ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Kiccha Sudeep: ಬಿಗ್‌ಬಾಸ್‌ಗೆ ಕಿಚ್ಚ ಸುದೀಪ್ ವಿದಾಯ; ಇದೊಂದೆ ರೀಸನ್‌ಗೆ ಹೊರಬಂದ್ರಾ ಬಾದ್‌ ಶಾ

Kiccha Sudeep: ಕಿಚ್ಚ ಸುದೀಪ್‌ ಬಿಗ್‌ಬಾಸ್‌ಗೆ ಗುಡ್‌ಬೈ ಹೇಳುತ್ತಿದ್ದಾರೆ. ಬಿಗ್‌ಬಾಗ್‌ ಸೀಸನ್‌ 11 ನನ್ನ ಕಡೆಯ ನಿರೂಪಣೆ ಆಗಿದೆ ಎಂದು ಎಕ್ಸ್‌ ಮಾಡಿದ್ದಾರೆ. ಇಷ್ಟಕ್ಕೂ ಸುದೀಪ್‌ ಹೀಗೆ ಹೇಳಲು ಅಸಲಿ ಕಾರಣ ಏನು. ಅದ್ಯಾವ ರೀಸನ್‌ಗೆ ಬಿಗ್‌ಬಾಸ್‌ ಮನೆಯಿಂದ ಹೊರ ಬರುತ್ತಿದ್ದಾರೆ?

VISTARANEWS.COM


on

By

This will be my last season as a host for BBK By Kichcha Sudeepa
Koo

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶುರುವಾಗುವ ಮೊದಲೇ ಕಿಚ್ಚ ಸುದೀಪ್‌ (Kiccha Sudeep) ಈ ಬಾರಿ ನಿರೂಪಣೆ ಮಾಡುವುದಿಲ್ಲ ಎನ್ನಲಾಗಿತ್ತು. ಆದರೆ ವಾಪಸ್‌ ಅವರ ಸಾರಥ್ಯದಲ್ಲೇ ಬಿಗ್‌ ಬಾಸ್‌ ಸೀಸನ್‌ 11 ಅದ್ಧೂರಿಯಾಗಿ ಆರಂಭಗೊಂಡಿತ್ತು. ಆದರೆ ಇದೇ ಬಿಗ್‌ಬಾಗ್‌ ವೀಕ್ಷಕರಿಗೆ ಹಾಗೂ ಅಭಿಮಾನಿಗಳಿಗೆ ಸುದೀಪ್‌ ಶಾಕ್‌ ಕೊಟ್ಟಿದ್ದಾರೆ. ಬಿಗ್​ಬಾಸ್​ಗೆ ಬಾದ್ ಶಾ ಕಿಚ್ಚ ಸುದೀಪ್ ವಿದಾಯ ಹೇಳುತ್ತಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಕನ್ನಡ ಕಿರುತೆರೆಯ ಬಿಗೆಸ್ಟ್‌ ರಿಯಾಲಿಟಿ ಶೋ ಬಿಗ್‌ಬಾಸ್ 11ನೇ ಸೀಸನ್‌ಗೆ (Bigg Boss Kannada) ಕಿಕ್ ಸ್ಟಾರ್ಟ್ ಸಿಕ್ಕಿದೆ. ಕನ್ನಡ ಟೆಲಿವಿಷನ್ ಲೋಕದಲ್ಲಿ ದೊಡ್ಮನೆಯ ಕಲರವ ಶುರುವಾಗಿದೆ. ಭಿನ್ನ -ವಿಭಿನ್ನ ಹದಿನೇಳು ಸ್ಪರ್ಧಿಗಳು ಈ ಬಾರಿಯ ಕನ್ನಡ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟು ಗೇಮ್‌ ಆಡ್ತಿದ್ದಾರೆ. ಇಷ್ಟು ದಿನದಿಂದ ಒಂದು ಲೆಕ್ಕ ಈಗಿನಿಂದ ಇನ್ನೊಂದು ಲೆಕ್ಕವನ್ನು ಬಿಗ್ ಬಾಸ್ ಶುರುಮಾಡಿದ್ದು, ಸ್ವರ್ಗ- ನರಕದ ಆಟವಾಡುತ್ತಿರುವಾಗಲೇ ಕಿಚ್ಚ ಸುದೀಪ್‌ ಶಾಕ್‌ ಸ್ಟೇಟ್‌ಮೆಂಟ್‌ ಕೊಟ್ಟಿದ್ದಾರೆ. ಬಿಗ್‌ ಬಾಸ್‌ 11 ನನ್ನ ಕೊನೆಯ ಸೀಸನ್‌ ಎಂದು ಹೇಳಿದ್ದಾರೆ.

ಬಿಗ್‌ಬಾಸ್‌ ಸೀಸನ್‌ 11ಕ್ಕೂ ಉತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು, ಈ ಕಾರ್ಯಕ್ರಮಕ್ಕೆ ಹಾಗೂ ನನಗೆ ತೋರಿದ ಪ್ರೀತಿಗೆ ಇದು ಸಾಕ್ಷಿಯಾಗಿದೆ. ಒಟ್ಟಿಗೆ 10 + 1 ಸೀಸನ್‌ ಸೇರಿ 11 ವರ್ಷಗಳ ಉತ್ತಮ ಪ್ರಯಾಣವಾಗಿದೆ. ಬಿಗ್‌ಬಾಸ್‌ನ ನಿರೂಪಕನಾಗಿ ಇದು ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ಈ ನಿರ್ಧಾರವನ್ನು ಕಲರ್ಸ್‌ ಸಂಸ್ಥೆ ಮತ್ತು ಇಷ್ಟು ವರ್ಷಗಳು ಬಿಗ್‌ಬಾಸ್‌ನನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್‌ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಸಹ ನಿಮ್ಮೆಲ್ಲರನ್ನೂ ಅತ್ಯುತ್ತಮವಾಗಿ ರಂಜಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಸುದೀಪ್ ಬಿಗ್ ಬಾಸ್ ತೊರೆಯುತ್ತಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸುದೀಪ್‌ ಟ್ವೀಟ್‌ ಮಾಡಿರುವುದು ಎಲ್ಲೆಡೆ ವೈರಲ್‌ ಆಗಿದೆ. ಹಿಂದೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಿಚ್ಚ ಸುದೀಪ್‌ ಬಿಗ್‌ಬಾಗ್‌ ಕಾರ್ಯಕ್ರಮದಿಂದ ಹೊರ ಬರುತ್ತಾರೆ ಎನ್ನಲಾಗಿತ್ತು. ಅವರ ಜಾಗಕ್ಕೆ ನಟ ರಮೇಶ್ ಅರವಿಂದ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರು ಹೋಸ್ಟ್‌ ಮಾಡಲಿದ್ದಾರೆ ಎನ್ನಲಾಗಿತ್ತು. ರಮೇಶ್‌ ಅರವಿಂದ ವೀಕೆಂಡ್ ವಿತ್ ರಮೇಶ್ ಮತ್ತು ಕೋಟ್ಯಾಧಿಪತಿ, ಮಹಾನಟಿ ಶೋ ಮೂಲಕ ವೀಕ್ಷಕರನ್ನು ತಲುಪಿದ್ದರು.

Continue Reading

ಬೆಂಗಳೂರು

Bigg Boss Kannada : ಸ್ವರ್ಗ- ನರಕಕ್ಕೆ ಎಂಟ್ರಿ ಕೊಟ್ಟ ಸ್ಪರ್ಧಿಗಳು; ಬಿಗ್‌‌ ಬಾಸ್‌ ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್

Bigg Boss Kannada : ಬಿಗ್‌ಬಾಸ್‌ ಸೀಸನ್‌ 11ರ ಸ್ವರ್ಗ- ನರಕದ ಆಟದಕ್ಕೆ ಸ್ಪರ್ಧಿಗಳು ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದ್ದಾರೆ. ಬಿಗ್‌ಬಾಸ್‌ ಮನೆಯಲ್ಲಿ ನಟ ದರ್ಶನ್‌ ಫಾಲೋವರ್ಸ್ ಇದ್ದು, ದರ್ಶನ್‌ ಬಗ್ಗೆ ಚರ್ಚೆಯಾಗುತ್ತಾ ಎಂಬ ಕುತೂಹಲ ಮೂಡಿದೆ.

VISTARANEWS.COM


on

By

Bigg Boss season 11 The real game starts today
Koo

ಬೆಂಗಳೂರು: ಕನ್ನಡ ಕಿರುತೆರೆಯ ಬಿಗೆಸ್ಟ್‌ ರಿಯಾಲಿಟಿ ಶೋ ಬಿಗ್‌ಬಾಸ್ 11ನೇ ಸೀಸನ್‌ಗೆ (Bigg Boss Kannada) ಕಿಕ್ ಸ್ಟಾರ್ಟ್ ಸಿಕ್ಕಿದೆ. ಕನ್ನಡ ಟೆಲಿವಿಷನ್ ಲೋಕದಲ್ಲಿ ದೊಡ್ಮನೆಯ ಕಲರವ ಮತ್ತೆ ಶುರುವಾಗಿದೆ. ಭಿನ್ನ -ವಿಭಿನ್ನ ಹದಿನೇಳು ಸ್ಪರ್ಧಿಗಳು ಈ ಬಾರಿಯ ಕನ್ನಡ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟು ದಿನದಿಂದ ಒಂದು ಲೆಕ್ಕ ಈಗಿನಿಂದ ಇನ್ನೊಂದು ಲೆಕ್ಕವನ್ನು ಬಿಗ್ ಬಾಸ್ ಶುರುಮಾಡಿದ್ದು, ಸ್ವರ್ಗ- ನರಕದ ಆಟಕ್ಕೆ ಸ್ಪರ್ಧಿಗಳು ನಿನ್ನೆ ಭಾನುವಾರ ಗ್ರಾಂಡ್ ಎಂಟ್ರಿ (bigg boss kannada season 11) ಕೊಟ್ಟಿದ್ದಾರೆ.

ದೊಡ್ಮನೆಯ ರಂಗಿನಾಟಕ್ಕೆ ಬಣ್ಣದ ಲೋಕದಿಂದ ಮಾತ್ರವಲ್ಲದೇ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೆ ಚಾಪು ಮೂಡಿಸಿ ಫೇಮಸ್‌ ಆಗಿರುವ ಕಂಟೆಸ್ಟೆಂಟ್ಸ್ ಎಂಟ್ರಿ ಕೊಟ್ಟಿದ್ದಾರೆ. ಮೊದಲಿಗೆ ಕಿರುತೆರೆ ನಟಿ ಭವ್ಯಾ ಗೌಡ ಎಂಟ್ರಿ ಕೊಟ್ಟರೆ, ನಂತರ ಒಬ್ಬೊಬ್ಬರಾಗೆ ಕೆಲವರು ಸ್ವರ್ಗಕ್ಕೆ, ಮತ್ತೆ ಕೆಲವರು ನರಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮೈ ತುಂಬಾ ಚಿನ್ನವನ್ನು ಹಾಕಿಕೊಂಡ ಗೋಲ್ಡ್ ಸುರೇಶ್, ಫೇಸ್‌ಬುಕ್ ಲಾಯರ್ ಜಗದೀಶ್, ಹಿಂದುತ್ವವಾದಿ ಚೈತ್ರಾ ಕುಂದಾಪುರ, ಹೀಗೆ ಭಿನ್ನ-ವಿಭಿನ್ನ ವ್ಯಕ್ತಿತ್ವದ ಸ್ಪರ್ಧಿಗಳನ್ನು ಬಿಗ್ ಬಾಸ್ 11ನೇ ಸೀಸನ್ ಮನೆಯೊಳಗೆ (bigg boss kannada season 11 grand opening) ಕಾಲ್ಟಿಟ್ಟಿದ್ದಾರೆ.

Bigg Boss season 11 The real game starts today
Bigg Boss season 11 The real game starts today

ಸ್ವರ್ಗ- ನರಕದ ಆಟಕ್ಕೆ ರೆಡಿಯಾದ ಕಂಟೆಸ್ಟೆಂಟ್ಸ್

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎರಡು ಮನೆಗಳನ್ನು ಮಾಡಲಾಗಿದೆ. ಬಿಗ್‌ ಮನೆಗೆ ಗ್ರ್ಯಾಂಡ್ ವೆಲ್ಕಮ್ ಪಡೆದುಕೊಂಡ ಹದಿನೇಳು ಸ್ಪರ್ಧಿಗಳಲ್ಲಿ ಒಬ್ಬೊಬ್ಬರಾಗೆ ಸ್ವರ್ಗ- ನರಕದ ಆಟಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ವರ್ಗಕ್ಕೆ ಭವ್ಯ, ಯಮುನಾ, ಧನರಾಜ್, ಗೌತಮಿ, ಧರ್ಮ ಕೀರ್ತಿ, ಲಾಯರ್ ಜಗದೀಶ್, ತ್ರಿವಿಕ್ರಮ್, ಹಂಸ, ಐಶ್ವರ್ಯ ಹಾಗೂ ಉಗ್ರಂ ಮಂಜು ಎಂಟ್ರಿ ಕೊಟ್ಟಿದ್ದಾರೆ. ಇನ್ನು ನರಕಕ್ಕೆ ಅನುಷಾ ರೈ, ಶಿಶಿರ್, ಮಾನಸ, ಗೋಲ್ಡ್ ಶಶಿ, ಚೈತ್ರ, ಮೋಕ್ಷಿತ ಹಾಗು ರಂಜಿತ್ ಎಂಟ್ರಿ ಕೊಟ್ಟಿದ್ದಾರೆ. ಸ್ವರ್ಗ ಹಾಗೂ ನರಕದ ಆಟಕ್ಕೆ ಕಂಟೆಸ್ಟೆಂಟ್ಸ್ ತುದಿಗಾಲಲ್ಲಿ ನಿಂತಿದ್ದು, 17 ಜನ ಬಿಗ್ ಬಾಸ್ ಸ್ಪರ್ಧಿಗಳಲ್ಲಿ ನಾಲ್ವರು ದರ್ಶನ್ ಆಪ್ತರಾಗಿರುವುದು (bigg boss kannada season 11 timings) ವಿಶೇಷ.

ಬಿಗ್ ಬಾಸ್ ಸೀಸನ್ 10 ಕಾಂಟ್ರವರ್ಸಿ ಮೂಲಕವೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿತ್ತು. ಸೀಸನ್ 11 ಬಿಗ್ ಬಾಸ್ ವೀಕ್ಷಕರಿಗೆ ಬೆಟ್ಟದಷ್ಟು ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ ಅಂದರೆ ತಪ್ಪಾಗಲ್ಲ. ಹಲವು ಕಾಂಟ್ರವರ್ಸಿಗಳ ಮೂಲಕವೇ ಕಳೆದ ಸೀಸನ್ ಸ್ಪರ್ಧಿಗಳು ನೇಮ್ ಆ್ಯಂಡ್ ಫೇಮ್ ಗಿಟ್ಟಿಸಿಕೊಂಡಿದ್ದರು. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಇನ್ನೆಷ್ಟು ಕಾಂಟ್ರವರ್ಸಿ ಕ್ರಿಯೇಟ್ ಆಗುತ್ತೆ ಎಂದು ಬಿಗ್ ಬಾಸ್ ವೀಕ್ಷಕರು ಕಾಯ್ತಾ ಇದ್ದಾರೆ. ಇನ್ನು ದೊಡ್ಮನೆಯಲ್ಲಿರುವ ನಟ ದರ್ಶನ್‌ ಫಾಲೋವರ್ಸ್‌ನಿಂದ ಈ ಬಾರಿಯ ಬಿಗ್ ಬಾಸ್ ಸಖತ್ ಕಿಕ್ ಕೊಡಲಿದೆ ಎಂದು ಹೇಳಲಾಗುತ್ತಿದೆ.

ದೊಡ್ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್


ಹದಿನೇಳು ಸ್ಪರ್ಧಿಗಳಲ್ಲಿ ನಾಲ್ವರು ಕಂಟೆಸ್ಟೆಂಟ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ. ದರ್ಶನ್ ಅವರ ಹೆಸರನ್ನು ಹಗಲಿರುಳು ಜಪ ಮಾಡುವ ಈ ನಾಲ್ವರು, ಸುದೀಪ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ದೊಡ್ಮನೆಯಲ್ಲಿ ಹಿಂದೆಂದೂ ಈ ತರಹದ ಕಾಕತಾಳೀಯ ಆಗಿರಲಿಲ್ಲ. ಆದರೆ ಈ ಬಾರಿ ನಿಜವಾಗಿದೆ. ಆ ನಾಲ್ಕು ಜನ ಸ್ಪರ್ಧಿಗಳು ಪ್ರತಿನಿತ್ಯ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಜಪ ಮಾಡಿದರೂ ಕೂಡ ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಕೆಲವು ದರ್ಶನ್ ಆಪ್ತರು ವೇದಿಕೆ ಮೇಲೆ ದಚ್ಚು ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಈ ನಾಲ್ವರಿಂದ ಬಿಗ್ ಬಾಸ್ ಮನೆಯಲ್ಲೂ ದರ್ಶನ್ ಬಗ್ಗೆ ಚರ್ಚೆಯಾಗುತ್ತಾ ಅಂತ ಬಿಗ್ ಬಾಸ್ ವೀಕ್ಷಕರಿಗೆ ಕುತೂಹಲ ಕ್ರಿಯೇಟ್ ಆಗಿದೆ.

ಮುಂದಿನ ನೂರು ದಿನಗಳವರೆಗೆ ದರ್ಶನ್ ವಿಚಾರ ಒಂಟಿ ಮನೆಯಲ್ಲಿ ಕೇಳಿ ಬಂದರೆ, ದರ್ಶನ್ ವಿಚಾರವನ್ನು ಸುದೀಪ್ ಗಮನಿಸಿ ವಾರಾಂತ್ಯದಲ್ಲಿ ಯಾವ ರೀತಿ ಮಾತನಾಡುತ್ತಾರೆ ಎಂಬುದು ಸದ್ಯ ಬಿಗ್ ಬಾಸ್ ವೀಕ್ಷಕರಲ್ಲಿ ಹಾಟ್ ಟಾಪಿಕ್ ಆಗಿ ಚರ್ಚೆಯಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಿಗ್ ಬಾಸ್

Bigg Boss Kannada: ಲೀಕ್‌ ಆಯ್ತು ಬಿಗ್‌ ಬಾಸ್‌ ಪ್ರೋಮೊ ಶೂಟ್‌ ಫೋಟೊ; ನಿರೂಪಕನ ಫೇಸ್‌ ರಿವೀಲ್‌!

Bigg Boss Kannada: ಈ ಮುಂಚೆ ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗಿತ್ತು. ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿತ್ತು.ಆದರೆ ಈಗ ಪ್ರೋಮೊ ಶೂಟ್‌ ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Bigg Boss Kannada promo shoot leak sudeep anchor
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಮುಕ್ತಾಯವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಆಗೋದು ಗ್ಯಾರಂಟಿ ಆಗಿದೆ ಸದ್ದಿಲ್ಲದೇ ಪ್ರೋಮೊ ಚಿತ್ರೀಕರಣ ಮಾಡಲಾಗಿದೆ. ಮತ್ತೊಮ್ಮೆ ಸುದೀಪ್ ವೀಕೆಂಡ್‌ನಲ್ಲಿ ಮನೆ ಮನೆಯ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ. ಆಗಸ್ಟ್ ಕೊನೆ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಗ್‌ಬಾಸ್ ಕನ್ನಡ-11 ಮೊದಲ ಪ್ರೋಮೊ ಬಿಡುಗಡೆ ಆಗಲಿದೆ.

ಈ ಮುಂಚೆ ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗಿತ್ತು. ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿತ್ತು.ಆದರೆ ಈಗ ಪ್ರೋಮೊ ಶೂಟ್‌ ಫೋಟೊಗಳು ವೈರಲ್‌ ಆಗಿವೆ.

ಸುದೀಪ್ ಸ್ಟೈಲಿಶ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೋಮೊಗೆ ಸಂಬಂಧಿಸಿದಂತೆ ಒಂದಷ್ಟು ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.ಸೀಸನ್‌ನಿಂದ ಸೀಸನ್‌ಗೆ ಸುದೀಪ್ ಸಂಭಾವನೆ ಕೂಡ ಹೆಚ್ಚಾಗಿದೆ. ಇನ್ನು ಕಿಚ್ಚ ಬಹಳ ಇಷ್ಟಪಟ್ಟು ಶೋ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 27 ಅಥವಾ ಅಕ್ಟೋಬರ್ 5ರಂದು ಬಿಗ್‌ಬಾಸ್ ಕನ್ನಡ-11 ಆರಂಭವಾಗಲಿದೆ. ಯೂಟ್ಯೂಬರ್ ವರ್ಷಾ ಕಾವೇರಿ, ಕಿರುತೆರೆ ನಟ ವರುಣ್ ಆರಾಧ್ಯ, ತುಕಾಲಿ ಸಂತು ಪತ್ನಿ ಮಾನಸ, ನಟ ಸುನೀಲ್ ರಾವ್, ಮೋಕ್ಷಿತಾ ಪೈ, ದಿವ್ಯಾ ವಸಂತ ಹೀಗೆ ಹಲವರ ಹೆಸರುಗಳು ಈ ಬಾರಿ ದೊಡ್ಮನೆಗೆ ಹೋಗಲು ಕೇಳಿಬರುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್‌ ಬಾಸ್‌ ಆಫರ್‌ ಬಂದಿದ್ದು ನಿಜ ಎಂದ ನಟಿ ಜ್ಯೋತಿ ರೈ! ಆದರೆ…..

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

Continue Reading

ಬಿಗ್ ಬಾಸ್

Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು? 

Bigg boss Hindi: ಇದೀಗ ಬಿಗ್ ಬಾಸ್ 18ನೇ ಆವೃತ್ತಿ ರಿಯಾಲಿಟಿ ಶೋವನ್ನು ನಟ ಸಲ್ಮಾನ್ ಖಾನ್ನ ಡೆಸಿಕೊಡಲಿದ್ದಾರೆ. ಜತೆಗೆ ಸ್ಪರ್ಧಿಗಳು ಯಾರೆಲ್ಲ ಎಂಬ ಸಂಭಾವ್ಯ ಪಟ್ಟಿ ಹೊರ ಬಿದ್ದಿದೆ.

VISTARANEWS.COM


on

Bigg boss Hindi list of contestants
Koo

ಬೆಂಗಳೂರು: ಈ ವರ್ಷ, ನಟ ಅನಿಲ್ ಕಪೂರ್ ಅವರು ಸಲ್ಮಾನ್ ಖಾನ್ ಬದಲಿಗೆ ಬಿಗ್ ಬಾಸ್ ಹಿಂದಿ (Bigg boss Hindi) OTT ಯ (Bigg Boss OTT 3) ಮೂರನೇ ಸೀಸನ್‌ನ ನಿರೂಪಕರಾಗಿದ್ದರು. ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕಿದೆ. ಬಿಗ್‌ ಬಾಸ್‌ ಸೀಸನ್‌ 18ನೇ ಆವೃತ್ತಿಗೆ ಸಲ್ಮಾನ್‌ ಅವರೇ ಹೋಸ್ಟ್‌ ಮಾಡಬೇಕು ಎಂದು ಪ್ರೇಕ್ಷಕರು ಕಮೆಂಟ್‌ ಮೂಲಕ ವ್ಯಕ್ತಪಡಿಸಿದ್ದರು. ಇದೀಗ ಬಿಗ್ ಬಾಸ್ 18ನೇ ಆವೃತ್ತಿ ರಿಯಾಲಿಟಿ ಶೋವನ್ನು ನಟ ಸಲ್ಮಾನ್ ಖಾನ್ನ ಡೆಸಿಕೊಡಲಿದ್ದಾರೆ. ಜತೆಗೆ ಸ್ಪರ್ಧಿಗಳು ಯಾರೆಲ್ಲ ಎಂಬ ಸಂಭಾವ್ಯ ಪಟ್ಟಿ ಹೊರ ಬಿದ್ದಿದೆ.

ಬಾಲಿವುಡ್ ನಟಿ ಇಶಾ ಕೋಪಿಕ್ಕರ್ 18ನೇ ಆವೃತ್ತಿ ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ.ಇಶಾ ಹೊರತಪಡಿಸಿದರೆ ಹಲವು ಹೆಸರು ಕೇಳಿಬರುತ್ತಿದೆ. ಈ ಪೈಕಿ ಸಂಭಾವ್ಯ ಸ್ಪರ್ಧಿಗಳ ಲಿಸ್ಟ್‌ನಲ್ಲಿ ನಟನೆಯಿಂದ ದೂರ ಉಳಿದಿರುವ ಸಮೀರಾ ರೆಡ್ಡಿ ಹೆಸರು ಮುಂಚೂಣಿಯಲ್ಲಿದೆ. ಹಿಂದಿ ಸೀರಿಯಲ್ ನಟ ಶೋಯಿಬ್ ಇಬ್ರಾಹಂ, ನಟಿ ಕಾಶಿಶ್ ಕಪೂರ್, ನಟ ಝ್ಯಾನ್ ಸೈಫಿ, ಪೂಜಾ ಶರ್ಮಾ, ಶೀಝಾನ್ ಖಾನ್, ದಲ್ಜಿತ್ ಕೌರ್ ಸಂಭಾವ್ಯ ಸ್ಪರ್ಧಿಗಳಾಗಿದ್ದಾರೆ. ಬಾಲಿವುಡ್ ಹಿರಿಯ ನಟಿ ರೇಖಾ ಈ ಬಾರಿಯಾ ಹಿಂದಿ ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಸೆಲೆಬ್ರೆಟಿ ಚಾಯ್‌ವಾಲ ಡೋಲಿ ಚಾಯ್‌ವಾಲ ಈ ಬಾರಿಯ ಬಿಗ್ ಬಾಸ್‌ಗೆ ಆಹ್ವಾ ನೀಡಲಾಗಿದೆ ಎನ್ನಲಾಗುತ್ತಿದೆ. ಸಂಭಾವ್ಯ ಪಟ್ಟಿಯಲ್ಲಿ ಈ ಡೋಲಿ ಚಾಯ್‌ವಾಲ್ ಹೆಸರು ಮುಂಚೂಣಿಯಲ್ಲಿದೆ. ಸೋಶಿಯಲ್ ಮೀಡಿಯಾ ಸ್ಟಾರ್ ಫೈಸಲ್ ಶೇಕ್, ಫುಕ್ರಾ ಇನ್ಸಾನ್ ಯೂಟ್ಯೂಬರ್ ಅಭಿಷೇಕ್ ಮಲ್ಹನ್, ಟಿವಿ ನಟಿ ನುಸ್ರತ್ ಜಹಾನ್, ನಟಿ ದೀಪಿಕಾ ಆರ್ಯ ಸಂಭಾವ್ಯ ಸ್ಪರ್ಧಿಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ.ಕಾಮಿಡಿಯನ್ ಹರ್ಷಾ ಬೆನಿವಾಲ್, ಟಿವಿ ನಟಿ ಸುರ್ಭಿ ಜ್ಯೋತಿ, ನಟ ಕರನ್ ಪಟೇಲ್, ನಟ ಅಲೈಸ್ ಕೌಶಿಕ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ: Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

ಹಿಂದಿಯ ಬಿಗ್ ಬಾಸ್ 17ನೇ (Bigg Boss 17)ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು,ಬಿಗ್ ಬಾಸ್ 17 ಗೆದ್ದಿರುವ ಮುನಾವರ್ ಫರೂಖಿ ಅವರಿಗೆ ಟ್ರೋಫಿ ದೊರೆತಿದ್ದು, ಜತೆಗೆ 50 ಲಕ್ಷ ರೂ. ಬಹುಮಾನ ಕೊಡ ನೀಡಲಾಗಿತ್ತು.

Continue Reading
Advertisement
Dina bhavishya
ಭವಿಷ್ಯ4 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ19 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು22 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ22 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು1 ದಿನ ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ1 ದಿನ ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ3 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು3 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌