BBK SEASON 10: ಫಿನಾಲೆ ವೇದಿಕೆಯಿಂದ ಹೊರಬಿದ್ದ ವರ್ತೂರು ಸಂತೋಷ್‌ - Vistara News

ಬಿಗ್ ಬಾಸ್

BBK SEASON 10: ಫಿನಾಲೆ ವೇದಿಕೆಯಿಂದ ಹೊರಬಿದ್ದ ವರ್ತೂರು ಸಂತೋಷ್‌

BBK SEASON 10: ಹಲವು ವಿಶೇಷತೆಗಳೊಂದಿಗೆ ಆರಂಭವಾದ ಈ ಕೊನೆಯ ಹಂತದಲ್ಲಿದೆ. ಈ ಫಿನಾಲೆ ವೇದಿಕೆಯಲ್ಲಿ ಇದೀಗ ವರ್ತೂರು ಸಂತೋಷ್‌ ಔಟ್‌ ಆಗಿದ್ದಾರೆ. ಅಂದರೆ ನಾಲ್ಕನೇ ರನ್ನರ್‌ ಅಪ್‌ ಆಗಿ ವರ್ತೂರ್‌ ಸಂತೋಷ್‌ ಆಯ್ಕೆಯಾಗಿದ್ದಾರೆ.

VISTARANEWS.COM


on

varthur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಲವು ವಿಶೇಷತೆಗಳೊಂದಿಗೆ ಆರಂಭವಾದ ಈ ಬಾರಿಯ ಬಿಗ್‌ಬಾಸ್‌ ಕನ್ನಡ ಸೀಸನ್‌ 10 (BBK SEASON 10) ಕೊನೆಯ ಹಂತದಲ್ಲಿದೆ. ಈ ಫಿನಾಲೆ ವೇದಿಕೆಯಲ್ಲಿ ಇದೀಗ ವರ್ತೂರು ಸಂತೋಷ್‌ ಔಟ್‌ ಆಗಿದ್ದಾರೆ. ಅಂದರೆ ನಾಲ್ಕನೇ ರನ್ನರ್‌ ಅಪ್‌ ಆಗಿ ವರ್ತೂರ್‌ ಸಂತೋಷ್‌ ಆಯ್ಕೆಯಾಗಿದ್ದಾರೆ. ವರ್ತೂರು ಹೆಸರನ್ನು ನಮ್ರತಾ ವೇದಿಕೆ ಮೇಲೆ ಘೋಷಿಸಿದರು. ತುಂಬಾ ದೊಡ್ಡ ಜವಾಬ್ದಾರಿ ಬಿಗ್‌ಬಾಸ್‌ ನೀಡಿದ್ದಾರೆ ಎನ್ನುತ್ತಲೇ ನಮ್ರತಾ ಮಾತು ಆರಂಭಿಸಿದ್ದರು.

ಮನೆಯ ಸದಸ್ಯರು ‘ಜೈ ಹಳ್ಳಿಕಾರ್’ ಎಂದು ಘೋಷಣೆ ಕೂಗಿ ಕಳಿಸಿಕೊಟ್ಟರು. ಸೀಸನ್‌ನಲ್ಲಿ ಹಲವು ಏರಿಳಿತಗಳನ್ನು ಕಂಡ ಜರ್ನಿ ವರ್ತೂರು ಸಂತೋಷ್ ಅವರದ್ದು. ‘ರೈತ ಅಂದ್ರೆ ಸಗಣಿನೇ ಎತ್ಕೊಬೇಕು ಅಂತಿಲ್ಲ. ಶೋಕಿನೂ ಮಾಡ್ಬೋದು ಕೃಷಿನೂ ಮಾಡ್ಬೋದು ಅಂತ ತೋರಿಸಿಕೊಟ್ಟಿದೀನಿ’ ಎನ್ನುತ್ತ ಬಿಗ್‌ಬಾಸ್ ವೇದಿಕೆಗೆ ಬಂದ ತರುಣ ರೈತ ವರ್ತೂರು ಸಂತೋಷ್ ಅವರ ಕತ್ತಿನಲ್ಲಿ ಹುಲಿಯುಗುರಿನ ಪೆಂಡೆಂಟ್ ನೇತಾಡುತ್ತಿತ್ತು. ಮುಖದಲ್ಲಿ ಮುಗ್ಧತೆ ಎದ್ದು ಕಾಣುತ್ತಿತ್ತು.

ಈಗ ಫಿನಾಲೆಯ ದಿನ ಐದು ಸ್ಪರ್ಧಿಗಳಲ್ಲಿ ಮೊದಲಿಗರಾಗಿ ಮನೆಯಿಂದ ಹೊರಗೆ ಬಂದಾಗ ವರ್ತೂರು ಅವರ ಮುಖದಲ್ಲಿನ ಮುಗ್ಧತೆ ಕಿಂಚಿತ್ ಮಾಸದೆ ಹಾಗೆಯೇ ಉಳಿದಿತ್ತು. ಆದರೆ ಕತ್ತಿನಲ್ಲಿ ನೇತಾಡುತ್ತಿದ್ದ ಹುಲಿಯುಗುರು ಮಾಯವಾಗಿತ್ತು! ಕಳೆದುಕೊಂಡಿದ್ದು ಒಂದು ಹುಲಿಯುಗುರು, ಆದರೆ ಈ ಮನೆಯಲ್ಲಿ ವರ್ತೂರು ಗಳಿಸಿಕೊಂಡಿದ್ದಕ್ಕೆ ಲೆಕ್ಕವಿಲ್ಲ. ಅದಕ್ಕೆ ಮೌಲ್ಯ ಕಟ್ಟಲು ಸಾಧ್ಯವೂ ಇಲ್ಲ.

ಹಳ್ಳಿಕಾರ್ ಒಡೆಯ ಎಂಬ ಬಿರುದನ್ನು ಗಳಿಸಿಕೊಂಡಿದ್ದ, ಹಳ್ಳಿಕಾರ್ ತಳಿಯ ಹೈನುಗಳನ್ನು ಸಲುಹುತ್ತಿದ್ದ ವರ್ತೂರು, ಹಳ್ಳಿಕಾರ್ ರೇಸ್‌ನಿಂದ ಬಿಗ್‌ಬಾಸ್‌ ರೇಸ್‌ಗೆ ಬಂದಿದ್ದು ಖುಷಿಖುಷಿಯಾಗಿಯೇ ಆದರೆ ಈ ಮನೆಯೊಳಗೆ ಅವರ ದಿನಗಳಲ್ಲಿ ಖುಷಿಯಷ್ಟೇ ಇರಲಿಲ್ಲ. ಹಲವು ಭಾವಗಳು, ನೋವು ನಲಿವುಗಳು ತುಂಬಿದ್ದ ವರ್ತೂರು ಸಂತೋಷ್ ಜರ್ನಿಯನ್ನು ಕಟ್ಟಿಕೊಡುವ ಪ್ರಯತ್ನ ಇಲ್ಲಿದೆ.

ಅಸಮರ್ಥರಾಗಿ ಒಳಹೊಕ್ಕು

ಬಿಗ್‌ಬಾಸ್ ಮನೆಯೊಳಗೆ ಅಸಮರ್ಥರಾಗಿ ಒಳಗೆ ಹೋದವರು ವರ್ತೂರು ಸಂತೋಷ್. ಅಸಮರ್ಥರ ಗುಂಪಿನಿಂದ ಸಮರ್ಥರ ಗುಂಪಿಗೆ ಜಿಗಿದರೂ ಮನೆಯೊಳಗೆ ಅತ್ಯಂತ ಕ್ರಿಯಾತ್ಮಕವಾಗಿಯೇನೂ ವರ್ತೂರು ಪಾಲ್ಗೊಳ್ಳುತ್ತಿರಲಿಲ್ಲ. ಹಾಗಾಗಿಯೇ ಪ್ರತಿ ವಾರ ನಾಮಿನೇಷನ್‌ ಆಗುವಾಗಲೂ ಈ ಕಾರಣ ಎಲ್ಲರ ಬಾಯಿಯಲ್ಲಿ ಬರುತ್ತಿತ್ತು. ಆದರೆ ಕ್ರಮೇಣ ಮನೆಯೊ ಸದಸ್ಯರ ಜೊತೆಗೆ ಬೆರೆಯುತ್ತ, ಆಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ, ಗಲಾಟೆ, ಜಗಳದಿಂದ ಮಾರುದೂರವೇ ಉಳಿದುಕೊಳ್ಳುತ್ತ ವರ್ತೂರು ರೇಸ್‌ನ ಕಣದೊಳಗೆ ಎಂಟ್ರಿ ಕೊಡತೊಡಗಿದರು.

ಹುಲಿಯುಗುರಿನ ಸಹವಾಸ!

ಕೆಲವು ವಾರಗಳು ಕಳೆಯುತ್ತಿದ್ದ ಹಾಗೆಯೇ ವರ್ತೂರುಸಂತೋಷ್ ಇದ್ದಕ್ಕಿದ್ದಂತೆಯೇ ಮನೆಯಿಂದ ಮಾಯವಾದರು. ಆಗ ಮನೆಯವರೆಲ್ಲ ಅಚ್ಚರಿಪಟ್ಟರು. ಯಾಕೆ ಹೋಗಿರಬಹುದು? ಎಲ್ಲಿ ಹೋಗಿರಬಹುದು ಎಂದು ಊಹಿಸತೊಡಗಿದ್ದರು. ಮನೆಯಲ್ಲಿ ಯಾರಿಗೋ ಅನಾರೋಗ್ಯ ಉಂಟಾದ ಕಾರಣಕ್ಕೆ ಹೋಗಿದ್ದಾರೆ ಎಂದುಮನೆಯವರು ತಿಳಿದುಕೊಂಡಿದ್ದರು. ಆದರೆ ಪರಿಸ್ಥಿತಿ ಬೇರೆಯೇ ಇತ್ತು. ವರ್ತೂರು ಸಂತೋಷ್ ಹುಲಿಯುಗುರನ್ನು ಧರಿಸಿರುವುದು ವನ್ಯಜೀವಿ ರಕ್ಷಣಾ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂಬ ಕಾರಣ ನೀಡಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಈ ಸಂಗತಿ ರಾಷ್ಟ್ರಮಟ್ಟದಲ್ಲಿಸದ್ದು ಮಾಡಿತ್ತು. ಮತ್ತೆ ವರ್ತೂರು ಮನೆಯೊಳಗೆ ಹೋಗುವುದು ಸಾಧ್ಯವೇ ಇಲ್ಲ ಎಂದು ಎಲ್ಲರೂ ನಿರ್ಧರಿಸಿಬಿಟ್ಟಿದ್ದರು. ಆದರೆ ಎಲ್ಲ ನಿರೀಕ್ಷೆಗಳನ್ನು ಹುಸಿಗೊಳಿಸಿ ವರ್ತೂರು ಸಂತೋಷ್ ನಗುನಗುತ್ತ ಮತ್ತೆ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು. ಆದರೆ ಮೊದಲಿನ ಉತ್ಸಾಹವಾಗಲಿ, ನೆಮ್ಮದಿಯಾಗಲಿ ಅವರಿಗೆ ಇರಲಿಲ್ಲ.

ಉಳಿಯಲಾರೆ ಮನೆಯೊಳಗೆ

ಮನೆಯಿಂದ ಹೊರಗೆ ಹೋಗಿ ರೀ ಎಂಟ್ರಿ ಕೊಟ್ಟಾಗಿನಿಂದಲೂ ವರ್ತೂರು ನೆಮ್ಮದಿಯಿಂದ ಇರಲಿಲ್ಲ. ‘ನನಗೆ ಇಲ್ಲಿ ಇರಲಾಗುತ್ತಿಲ್ಲ. ದಯವಿಟ್ಟು ಹೊರಗೆ ಬಿಟ್ಟುಬಿಡಿ’ ಎಂದು ಪದೇ ಪದೇ ಕೇಳಿಕೊಳ್ಳಲು ಶುರುಮಾಡಿದರು. ಮನೆಯ ಸದಸ್ಯರೆಲ್ಲರೂ ಕೇಳಿದರೂ ಅವರು ಜಗ್ಗಲಿಲ್ಲ. ಮನೆಯಿಂದ ಹೊರಗೆ ಕಳಿಸದಿದ್ದರೆ ನಾನು ಯಾವ ಗೇಮ್ ಕೂಡ ಆಡುವುದಿಲ್ಲ ಎಂದು ಹಟ ಹಿಡಿದು ಕೂತರು. ಭಾಗ್ಯಲಕ್ಷ್ಮಿ ಧಾರಾವಾಹಿಯ ನಟಿ ಸುಷ್ಮಾ ಬಂದಾಗಲೂ ವರ್ತೂರುಅವರ ಮನವೊಲಿಸಲು ಯತ್ನಿಸಿದ್ದರು. ಆದರೆ ಅವರು ಕರಗಲಿಲ್ಲ. ಕೊನೆಗೆ ವರ್ತೂರುಅವರ ಅಮ್ಮನೇ ಮನೆಯೊಳಗೆ ಬಂದು, ವರ್ತೂರು ಅವರಿಗೆ ಊಟ ತಿನ್ನಿಸಿ ಬುದ್ಧಿವಾದ ಹೇಳಿದಾಗ ವರ್ತೂರು ಮನಸ್ಸು ಬದಲಾಯಿಸಿದರು. ‘ಈಗಿನಿಂದ ಆಟ ಶುರು’ ಎಂದು ಹೇಳಿ ಕಣ್ಣೀರು ಒರೆಸಿಕೊಂಡು ನಕ್ಕರು. ಆ ವಾರಾಂತ್ಯದ ಎಪಿಸೋಡ್‌ನಲ್ಲಿ ಸುದೀಪ್‌ ಕೂಡ ವರ್ತೂರು ಅವರಿಗೆ ಪ್ರೋತ್ಸಾಹದ ಮಾತು ಹೇಳಿದರು. ಅಲ್ಲದೆ ಅವರಗೆ ಕರ್ನಾಟಕದ ಜನರು ನೀಡಿರುವ ಮತಗಳನ್ನೂ ಬಹಿರಂಗಪಡಿಸಿದ್ದರು. ಈ ಎಲ್ಲವೂ ವರ್ತೂರು ಅವರಲ್ಲಿ ಹೊಸ ಉತ್ಸಾಹ ತುಂಬಿತ್ತು. ಮತ್ತೆ ಮನೆಯೊಳಗೆ ಬಂದಾಗ ಅವರು ಹೊಸದಾಗಿದ್ದರು.

ತುಕಾಲಿ ಜತೆಗಿನ ಸ್ನೇಹ

ತುಕಾಲಿ ಸಂತೋಷ್ ಮತ್ತು ವರ್ತೂರು ಸಂತೋಷ್ ಇಬ್ಬರ ಜೋಡಿ ಸಂತು-ಪಂತು ಜೋಡಿ ಎಂದೇ ಮನೆಯೊಳಗೆ ಜನಪ್ರಿಯವಾಗಿತ್ತು. ಅವರಿಬ್ಬರೂ ಸೇರಿ ಬಿನ್‌ ಬ್ಯಾಗ್‌ನಲ್ಲಿ ಕೂತು ಆಡಿದ ಮಾತುಗಳಿಗೆ ಲೆಕ್ಕವಿಲ್ಲ. ಮಾಡಿದ ತಂತ್ರಗಳಿಗೆ ಮೇರೆಯೇ ಇಲ್ಲ. ಬರೀ ತಂತ್ರಗಾರಿಕೆ, ಉಳಿದವರ ಬಗ್ಗೆ ಚಾಡಿಯಷ್ಟೇ ಅಲ್ಲ, ತಮ್ಮಕಷ್ಟಸುಖಗಳನ್ನೂ ಹಂಚಿಕೊಂಡಿದ್ದಾರೆ. ಸಂತೈಸಿಕೊಂಡಿದ್ದಾರೆ. ಅವರಿಬ್ಬರ ಸ್ನೇಹಬಂಧನ ಗಟ್ಟಿಗೊಂಡಿದ್ದೇ ಬಾಲ್ಕನಿ ಮೇಲಿನ ಬಿನ್‌ಬ್ಯಾಗ್‌ನಲ್ಲಿ. ಒಬ್ಬರಿಗೊಬ್ಬರು ಯಾವ ಸಂದರ್ಭದಲ್ಲಿಯೂ ಬಿಟ್ಟುಕೊಡದ ಅವರ ಸ್ನೇಹದ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಅವರೇ ‘ಅಪರೂಪದ ನಿಷ್ಕಳಂಕ ಸ್ಣೇಹವಿದು’ ಎಂದು ಉದ್ಘರಿಸಿದ್ದಿದೆ. ಈ ಸ್ನೇಹಸಂಬಂಧ ಈ ಸೀಸನ್‌ನ ಬಿಗ್‌ಬಾಸ್‌ನ ಅದ್ಭುತ ಕಥನ. ಜತೆಗೆ ವರ್ತೂರು ಜರ್ನಿಯ ಬಹುಮುಖ್ಯ ಅಧ್ಯಾಯವೂ ಹೌದು.

ಅಮ್ಮನ ಜೊತೆಗಿನ ರೀ ಯೂನಿಯನ್

ಕುಟುಂಬದ ಸದಸ್ಯರೆಲ್ಲರೂ ಮನೆಗೆ ಭೇಟಿ ನೀಡಿದಾಗ ವರ್ತೂರು ಸಂತೋಷ್ ಅಮ್ಮ ಬುತ್ತಿಯ ಜೊತೆಗೆ ಮನೆಯೊಳಗೆ ಬಂದು ಎಲ್ಲರಿಗೂ ಊಟ ಬಡಿಸಿದ್ದರು. ಸಂತೋಷ್ ಅವರಿಗೆ ಎಣ್ಣೆಹಾಕಿ ತಲೆಗೆ ಮಸಾಜ್ ಮಾಡಿದ್ದರು. ಇದು ಅವರಲ್ಲಿ ಹೊಸ ಉತ್ಸಾವನ್ನು ತುಂಬಿತ್ತು. ಅಮ್ಮ ಮನೆಗೆ ಬಂದು ಹೋದ ಮೇಲೆ ವರ್ತೂರು ಅವರ ಆಟವೇ ಬದಲಾಗಿತ್ತು.

ಜೈಲಿಂದ ಹೊರಗೆ ಬಂದ ಚರಿತ್ರೆ

ತುಕಾಲಿ ಸಂತೋಷ್ ಮತ್ತು ವರ್ತೂರು ಸಂತೋಷ್ ಸೇರಿಕೊಂಡು ಮಾಡಿದ ತರಲೆಗಳಿಗೆ ಲೆಕ್ಕವಿಲ್ಲ. ವರ್ತೂರು ಸಂತೋಷ್ ಕಳಪೆ ಪಟ್ಟ ಗಳಿಸಿಕೊಂಡು ಜೈಲು ಪಾಲಾಗಿದ್ದರು. ಎಲ್ಲರೂ ಮಲಗಿದ್ದರೂ ತುಕಾಲಿ ಸಂತೋಷ್ ಜೈಲಿನ ಪಕ್ಕದಲ್ಲೇ ಕೂತು ಮಾತಾಡುತ್ತಿದ್ದರು. ನಡುರಾತ್ರಿ ‘ಅಣ್ಣಾ ಜೈಲಿಂದ ಹೊರಗೆ ಬಂದುಬಿಡು’ ಎಂದು ವರ್ತೂರು ಅವರಿಗೆ ತುಕಾಲಿ ಆಹ್ವಾನ ನೀಡಿದ್ದರು. ಅದಕ್ಕೆ ವರ್ತೂರು ಹಿಂಜರಿದಾಗ, ‘ಜೈಲಿಂದ ಹೊರಗೆ ಬಂದ್ರೆ ಚರಿತ್ರೆನೇ ಸೃಷ್ಟಿಯಾಗತ್ತೆ. ಏನಾಗಲ್ಲ ಬಾ’ ಎಂದು ಪ್ರೋತ್ಸಾಹಿಸಿದರು. ಅವರ ಮಾತು ಕೇಳಿಕೊಂಡು ಬಿಗ್‌ಬಾಸ್ ಮನೆ ನಿಯಮ ಉಲ್ಲಂಘಿಸಿ ಜೈಲಿಂದ ಹೊರಗೆ ಬಂದಿದ್ದರು. ಆದರೆ ಮನೆಯಿಂದ ಹೊರಗೆ ಬಂದ ತಕ್ಷಣ, ‘ಬಿಗ್‌ಬಾಸ್ ನಂಗೂ ಶಿಕ್ಷೆ ಕೊಟ್ರೆ ಏನ್ಮಾಡೋದು ಅಣ್ಣಾ, ಒಳಗೆ ಹೋಗ್ಬಿಡು’ ಎಂದು ಮತ್ತೆ ಮನೆಯೊಳಗೆ ಕಳಿಸಿಬಿಟ್ಟಿದ್ದರು. ಇದಕ್ಕಾಗಿ ಶಿಕ್ಷೆ ಅನುಭವಿಸಿದ್ದು ಬೇರೆ ಮಾತು. ಆದರೆ ಜೈಲಿಂದ ತಪ್ಪಿಸಿಕೊಂಡ ಏಕೈಕೆ ಸ್ಪರ್ಧಿಯಾಗಿ ದಾಖಲಾಗಿದ್ದಾರೆ.

ಬೆಂಕಿಯ ಜತೆಗೆ ಸರಸ!

ಬಿಗ್‌ಬಾಸ್ ಮನೆಯ ಬೆಂಕಿ ಎಂದೇ ಖ್ಯಾತರಾಗಿದ್ದ ತನಿಷಾ ಜೊತೆಗಿನ ವರ್ತೂರು ಒಡನಾಟ ಹಲವು ರಸಪ್ರಸಂಗಗಳನ್ನು ಸೃಷ್ಟಿಸಿತ್ತು. ತನಿಷಾ, ವರ್ತೂರು ಅವರ ಕಾಲಿಗೆ ಮಸಾಜ್ ಮಾಡುವುದೇನು, ವರ್ತೂರು, ತನಿಷಾ ಅವರ ಮಡಿಲಲ್ಲಿ ಮಲಗುವುದೇನು…. ಪರಸ್ಪರ ಮಾತುಗಳನ್ನು ಹಂಚಿಕೊಳ್ಳುವುದೇನು… ಇದೊಂದು ತಮಾಷೆಯ ಟ್ರ್ಯಾಕ್ ಆಗಿ ಸಖತ್ ಹಿಟ್ ಆಗಿತ್ತು. ಟಾಸ್ಕ್‌ನಲ್ಲಿ ವರ್ತೂರು ಅವರಿಂದಲೇ ತನಿಷಾ ಗಾಯಗೊಂಡಂತಾಗಿ ಹೊರಗೆ ಹೋಗುವಂತಾಗಿದ್ದು ವರ್ತೂರು ಅವರ ಮನಸಲ್ಲಿ ಗಿಲ್ಟ್ ಹುಟ್ಟಿಸಿತ್ತು. ಹಾಗಾಗಿಯೇ ತನಿಷಾ ವಾಪಸ್ ಮನೆಗೆ ಬಂದಾಗ ವರ್ತೂರು ತುಸು ಹೆಚ್ಚೇ ಕಾಳಜಿ ತೋರಿಸಿದ್ದರು. ಶಾಲಾ ಟಾಸ್ಕ್‌ನಲ್ಲಿ ವರ್ತೂರು ‘ಪಟಾಕಿ ಯಾರದ್ದಾದ್ರೂ ಆಗಿರ್ಲಿ, ಹಚ್ಚೋರು ನಾವಾಗಿರ್ಬೇಕು’ ಎಂಬಡೈಲಾಗ್‌ಗೆ ತನಿಷಾ ಜೊತೆಗೆ ನೀಡಿದ ಆಕ್ಟ್ ಕೂಡ ಸಖತ್ ವೈರಲ್ ಆಗಿತ್ತು. ವಾರಾಂತ್ಯದಲ್ಲಿ ಕಿಚ್ಚ ಕೂಡ ಅದನ್ನು ವರ್ತೂರು ಮತ್ತು ತನಿಷಾ ಕೈಲಿ ಮಾಡಿಸಿ ನೋಡಿದ್ದರು.

ಕ್ಯಾಪ್ಟನ್ ಎಂಬ ಕನಸು

ಕ್ಯಾಪ್ಟನ್ ಆಗಬೇಕು ಎಂದು ಜಿದ್ದಿಗೆ ಬಿದ್ದವರೇನಲ್ಲ ವರ್ತೂರು. ಆದರೆ ಅವರಿಗೂ ಕ್ಯಾಪ್ಟನ್ ಆಗುವ ಅವಕಾಶ ಬಂದಿತ್ತು. ತಿರುಗುವ ಚಕ್ರದಲ್ಲಿ ಕೂತು ನಿಗದಿತ ಸಮಯವನ್ನು ಊಹಿಸುವ ಟಾಸ್ಕ್‌ನಲ್ಲಿ ಗೆದ್ದು ವರ್ತೂರು ಕ್ಯಾಪ್ಟನ್‌ ರೂಮು ಪ್ರವೇಶಿಸಿದ್ದರು. ಆದರೆ ಅವರು ಗೆದ್ದಿದ್ದು ವಿನಯ್ ಅವರ ಸಹಾಯದೊಂದಿಗೆ ಎಂಬುದು ವಾರಾಂತ್ಯದಲ್ಲಿ ಕಿಚ್ಚು ಸುದೀಪ್ ಜಾಹೀರುಮಾಡಿದ್ದರು. ಅಷ್ಟೇ ಅಲ್ಲ, ‘ಕ್ಯಾಪ್ಟನ್‌ಗೆ ಗೌರವ ಕೊಡುವ ಅಭ್ಯಾಸ ಇಲ್ಲದ ಈ ಮನೆಗೆ ಕ್ಯಾಪ್ಟನ್ ಅಗತ್ಯ ಇಲ್ಲ’ ಎಂದು ಬಿಗ್‌ಬಾಸ್ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಕ್ಯಾಪ್ಟನ್ ರೂಮ್ ಲಾಕ್ ಮಾಡಿಸಿಬಿಟ್ಟಿದ್ದರು. ಹಾಗಾಗಿ ಕ್ಯಾಪ್ಟನ್ ರೂಮಿಗೆ ಕೀಲಿ ಹಾಕಿಸಿದ ದಾಖಲೆಯೂ ವರ್ತೂರು ಅವರ ಹೆಸರಿನಲ್ಲಿಯೇ ಇದೆ.

ಟಿಕೆಟ್ ಟು ಫಿನಾಲೆ

ಟಿಕೆಟ್ ಟು ಫಿನಾಲೆ’ಯಲ್ಲಿ ವರ್ತೂರು ಸಂತೋಷ್ ತೋರಿದ ಗೇಮ್ ಫರ್ಪಾರ್ಮೆನ್ಸ್ ನೋಡಿ ಮನೆಯ ಜನರೆಲ್ಲ ಬೆರಗಾಗಿದ್ದರು. ಹಲವು ಆಟಗಳಲ್ಲಿ ಭಾಗವಹಿಸಿ ಕೆಲವನ್ನು ಗೆದ್ದು ಎಲ್ಲರಿಗಿಂತ ಮೊದಲು 200 ಪಾಯಿಂಟ್ಸ್ ಪಡೆದುಕೊಂಡಿದ್ದರು. ಇದರಿಂದಾಗಿ ಒಂದು ಹಂತಕ್ಕೆ ವರ್ತೂರು ಅವರೇ ಎಲ್ಲರಿಗಿಂತ ಮೊದಲು ಫಿನಾಲೆ ಪ್ರವೇಶಿಸುತ್ತಾರೇನೋ ಎಂಬ ಊಹೆಯೂ ಹುಟ್ಟಿತ್ತು. ಆದರೆ ನಂತರ ಪ್ರತಾಪ್, ಸಂಗೀತಾ ಮತ್ತು ನಮೃತಾ ವರ್ತೂರು ಅವರನ್ನ ಹಿಂದಿಕ್ಕಿದರು. ಆದರೆ ಈ ವಾರದಲ್ಲಿ ತುಕಾಲಿ ಸಂತೋಷ್ ಜೊತೆಗೂಡಿ ವರ್ತೂರು ಸಂತೋಷ್ ಮಾಡಿದ ತಂತ್ರಗಾರಿಕೆಯೂ ಅವರ ವ್ಯಕ್ತಿತ್ವದ ಮತ್ತೊಂದು ಆಯಾಮವನ್ನು ತೆರೆದಿಟ್ಟಿತ್ತು.

ಎಲಿಮಿನೇಷನ್‌ ಬೆಂಕಿ

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಾರಾಂತ್ಯದ ಎಲಿಮಿನೇಷನ್‌ನಲ್ಲಿ ಕೊನೆಯ ಒಬ್ಬರಾಗಿ ವರ್ತೂರು ಸಂತೋಷ್ ಮತ್ತು ತುಕಾಲಿ ಸಂತೋಷ್ ಇಬ್ಬರೂ ಕೂತಿದ್ದರು. ಆ ಸಮಯದಲ್ಲಿ ಸುದೀಪ್, ಇವರಿಬ್ಬರ ಸ್ನೇಹದ ಬಗ್ಗೆ ಮೆಚ್ಚುಗೆಯ ಮಾತಾಡಿದ್ದರು. ಪರಸ್ಪರ ಇಬ್ಬರೂಶುಭ ಹಾರೈಸಿಕೊಂಡಿದ್ದೂ ಮನಕರಗಿಸುವಂತಿತ್ತು. ಆದರೆ ಆ ವಾರ ಎಲಿಮಿನೇಷನ್‌ ಹೋಲ್ಡ್‌ನಲ್ಲಿ ಇಟ್ಟು ಇಬ್ಬರನ್ನೂ ಉಳಿಸಿದ್ದರು. ಮುಂದಿನ ವಾರದ ಮಿಡ್‌ವೀಕ್‌ ಎಲಿಮಿನೇಷನ್‌ನಲ್ಲಿ ತನಿಷಾ ಕುಪ್ಪಂಡ ಹೊರಗೆಹೋಗಿದ್ದರು. ‘ಜಗಳವಾಡುವುದಕ್ಕಾಗಿ ಇಲ್ಲಿಗೆ ಬಂದಿಲ್ಲ’ ಎಂದು ಪದೇ ಪದೇ ಹೇಳುತ್ತಿದ್ದ ವರ್ತೂರು ಹಲವು ಬಾರಿ ತಾಳ್ಮೆ ಕಳೆದುಕೊಂಡುಮಾತಾಡಿದ್ದಿದೆ. ಆದರೆ ಯಾರ ವಿರುದ್ಧವೂ ಹದತಪ್ಪಿ ಮಾತಾಡಿಲ್ಲ. ಅವಹೇಳನ ಮಾಡಿಲ್ಲ. ತಮ್ಮ ಮುಗ್ಧತೆಯಿಂದಲೇ ಮನೆಯ ಸದಸ್ಯರ ಮೆಚ್ಚುಗೆಯನ್ನು ಪಡೆದುಕೊಂಡಿರುವ ಅವರು ಮನೆಯ ಹೊರಗೂ ಇದೇ ಕಾರಣಕ್ಕೆ ಜನರಿಂದ ಪ್ರೀತಿಯನ್ನು ಗಳಿಸಿಕೊಂಡಿದ್ದರು.

ಮುಗ್ಧತೆ, ಬದ್ಧತೆ ಎರಡನ್ನೂ ಸೇರಿಸಿ ಎರಕ ಹೊಯ್ದಂತಿರುವ ವರ್ತೂರು ಸಂತೋಷ್ ಅವರು ನಾಲ್ಕನೇ ರನ್ನರ್ ಅಪ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಸಾಕಷ್ಟು ನೆನಪುಗಳನ್ನು ಬಿಗ್‌ಬಾಸ್ ಮನೆಯೊಳಗಿಂದ ಹೊತ್ತು ಬಂದಿದ್ದಾರೆ.

ಇದಕ್ಕೂ ಮೊದಲು ಕಿಚ್ಚ ಸುದೀಪ್‌ ವೇದಿಕೆ ಮೇಲೆ ತುಕಾಲಿ ಸಂತೋಷ್‌ ಅವರಿಗೆ 2 ಲಕ್ಷ ರೂ. ಚೆಕ್‌ ವಿತರಿಸಿದ್ದರು. ಜಿಯೊಸಿನಿಮಾದಲ್ಲಿ ವರ್ತೂರು ಅವರ ಸಖತ್ ತಿರುವುಗಳುಳ್ಳ ಜರ್ನಿಯನ್ನು ಉಚಿತವಾಗಿ ವೀಕ್ಷಿಸಬಹುದು.

ಇದನ್ನೂ ಓದಿ: BBK SEASON 10: ಬಿಗ್‌ಬಾಸ್ ಕನ್ನಡ ಸೀಸನ್‌ 10ರ ಅವಿಸ್ಮರಣೀಯ ಗಳಿಗೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav Buys Mercedes G Wagon
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ13 mins ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ17 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ27 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ32 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202451 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ1 hour ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ2 hours ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20248 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌