BBK Season 10 : 9 ಮಂದಿ ನಾಮಿನೇಟ್‌, ಮನೆಗೆ ಹೋಗ್ತಾರಾ ವಿನಯ್‌ ಗೌಡ? - Vistara News

ಕಿರುತೆರೆ

BBK Season 10 : 9 ಮಂದಿ ನಾಮಿನೇಟ್‌, ಮನೆಗೆ ಹೋಗ್ತಾರಾ ವಿನಯ್‌ ಗೌಡ?

BBK Season 10 : ಬಿಗ್‌ ಬಾಸ್‌ ಮನೆಯ ನಾಲ್ಕನೇ ವಾರದ ನಾಮಿನೇಷನ್‌ನಲ್ಲಿ ಅತಿ ಹೆಚ್ಚು ಮತ ಪಡೆದಿದ್ದು ವಿನಯ್‌ ಗೌಡ. ಹಾಗಿದ್ದರೆ ಹೊರ ಹೋಗುವುದು ಯಾರು?

VISTARANEWS.COM


on

Vinay gowda BBK Season 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10 (BBK Season 10) ಕದನ ನಾಲ್ಕನೇ ವಾರದಲ್ಲಿ ಮುನ್ನಡೆಯುತ್ತಿದೆ. ಸದಾ ಕಾಲ ದ್ವೇಷ, ವೈಷಮ್ಯಗಳೇ ಹೊಗೆಯಾಡುವ ಈ ಮನೆಯಲ್ಲಿ ಬೆಂಕಿ ಹಚ್ಚಲು ಹಳ್ಳಿ ಮನೆ ಟಾಸ್ಕ್‌ (Halli mane Task) ಕೂಡಾ ನೀಡಲಾಗಿದೆ. ಈ ನಡುವೆ ಈ ವಾರ ಮನೆಯಿಂದ ಯಾರು ಹೊರಬೀಳಲಿದ್ದಾರೆ ಎಂಬ ಕುತೂಹಲ ಹುಟ್ಟಿಕೊಂಡಿದೆ.

ಮನೆಯಿಂದ ಈ ವಾರ ಯಾರು ಎಲಿಮಿನೇಟ್‌ ಆಗಬೇಕು ಎಂಬ ನಿಟ್ಟಿನಲ್ಲಿ ಮಂಗಳವಾರ ನಾಮಿನೇಷನ್‌ ಪ್ರಕ್ರಿಯೆ (Nomination Process) ನಡೆಯಿತು. ಇದರಲ್ಲಿ ಅತಿ ಹೆಚ್ಚು ನಾಮಿನೇಷನ್‌ ಪಡೆದಿರುವ ವಿನಯ್‌ ಗೌಡ (Vinay Gowda) ಮನೆಯಿಂದ ಹೊರಹೋಗುವ ಟಾಪ್‌ ಕಂಟೆಂಡರ್‌ ಆಗಿ ಗಮನ ಸೆಳೆದಿದ್ದಾರೆ. ನಾಮಿನೇಷನ್‌ಗೆ ಅಧಿಕಾರ ಪಡೆದ ಎಂಟು ಮಂದಿಯಲ್ಲಿ ಆರು ಮಂದಿ ವಿನಯ್‌ ಗೌಡ ಅವರಿಗೆ ಮತ ಹಾಕಿದ್ದು ವಿಶೇಷವಾಗಿತ್ತು.

ಈ ವಾರ ಡೇಂಜರ್‌ ಝೋನ್‌ನಲ್ಲಿ ಇರುವವರು ಯಾರು?

ವಿನಯ್ ಗೌಡ, ಮೈಕಲ್ ಅಜಯ್, ಸಿರಿ, ತುಕಾಲಿ ಸಂತು, ರಕ್ಷಕ್, ತನಿಷಾ ಕುಪ್ಪಂಡ, ಸ್ನೇಹಿತ್ ಗೌಡ, ಕಾರ್ತಿಕ್ ಮಹೇಶ್ ಹಾಗೂ ವರ್ತೂರು ಸಂತೋಷ್ ಅವರು ನಾಮಿನೇಟ್‌ ಆಗಿದ್ದಾರೆ.

ಯಾರು ಯಾರನ್ನು ನಾಮಿನೇಟ್‌ ಮಾಡಿದರು?

ಬಿಗ್‌ ಬಾಸ್‌ ನೀಡಿದ ಬಲೂನ್‌ ಟಾಸ್ಕ್‌ನಲ್ಲಿ ಡ್ರೋನ್‌ ಪ್ರತಾಪ್‌ ಮತ್ತು ಕಾರ್ತಿಕ್‌ ಮಹೇಶ್‌ ತಲಾ ಮೂರು ಮತ್ತು ಒಂದು ಚೀಟಿ ಪಡೆದಿತ್ತು ಎಲ್ಲರಿಗೂ ಗೊತ್ತಿದೆ. ಗೆದ್ದ ಡ್ರೋನ್‌ ಪ್ರತಾಪ್‌ ಅವರು ಐದು ಮಂದಿಗೆ ನಾಮಿನೇಟ್‌ ಅಧಿಕಾರ ನೀಡಿದರೆ ಕಾರ್ತಿಕ್‌ ಒಬ್ಬರಿಗೆ ಅಧಿಕಾರ ನೀಡಿದರು. ಹೀಗೆ ಒಟ್ಟು ಎಂಟು ಮಂದಿಗೆ ಮಾತ್ರ ಈ ಬಾರಿ ವೋಟಿಂಗ್‌ ಪವರ್‌ ಇತ್ತು. ಕಾರ್ತಿಕ್, ಮೈಕಲ್, ಡ್ರೋನ್ ಪ್ರತಾಪ್, ನಮ್ರತಾ, ಸಂಗೀತಾ, ತನಿಷಾ, ಭಾಗ್ಯಶ್ರೀ ಹಾಗೂ ಸಿರಿ ನಾಮಿನೇಷನ್‌ ಅಧಿಕಾರ ಪಡೆದಿದ್ದರು.

ವಿನಯ್‌ಗೆ ಯಾರದೆಲ್ಲ ಮತ? ಕೊಟ್ಟ ಕಾರಣವೇನು?

ಬಿಗ್‌ ಬಾಸ್‌ ಮನೆಯಲ್ಲಿ ಆನೆ ಎಂದೇ ಕರೆಸಿಕೊಳ್ಳುವ ವಿನಯ್‌ ಗೌಡ ವಿರುದ್ಧ ಯಾರೂ ಧ್ವನಿ ಎತ್ತುತ್ತಿರಲಿಲ್ಲ. ಇದನ್ನು ಸ್ವತಃ ಸುದೀಪ್‌ ಕೂಡಾ ಪ್ರಶ್ನೆ ಮಾಡಿದ್ದರು. ಆದರೆ, ಇದೇ ಮೊದಲ ಬಾರಿಗೆ ನಾಮಿನೇಷನ್‌ ಪ್ರಕ್ರಿಯೆಯಲ್ಲಿ ವಿನಯ್‌ ಗೌಡ ಪರವಾಗಿ ದೊಡ್ಡದೊಂದು ಟೀಮ್‌ ವರ್ಕ್‌ ನಡೆಯಿತು. ಓಪನ್‌ ನಾಮಿನೇಷನ್‌ನಲ್ಲಿ ಡ್ರೋನ್ ಪ್ರತಾಪ್‌, ಕಾರ್ತಿಕ್, ಸಂಗೀತಾ, ಸಿರಿ, ತನಿಷಾ, ಭಾಗ್ಯಶ್ರೀ ವಿನಯ್‌ ವಿರುದ್ಧವಾಗಿ ಮತ ಹಾಕಿದರು.

ವಿನಯ್‌ ಆಗಾಗ ರೂಲ್ಸ್‌ ಬ್ರೇಕ್‌ ಮಾಡ್ತಾರೆ, ಇದರಿಂದ ಮನೆಗೆ ಶಿಕ್ಷೆ ಆಗುತ್ತಿದೆ ಎಂದು ಹೆಚ್ಚಿನವರು ಕೊಟ್ಟ ಕಾರಣವಾಗಿತ್ತು. ಇತರರನ್ನು ಕೆರಳಿಸುತ್ತಾರೆ, ಸೋಲನ್ನು ಒಪ್ಪಿಕೊಳ್ಳುವ ಮನೋಸ್ಥಿತಿ ಇಲ್ಲ, ಯಾವುದನ್ನೂ ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳುವುದಿಲ್ಲ ಎನ್ನುವುದು ವಿನಯ್‌ ನಾಮಿನೇಷನ್‌ಗೆ ಕೊಟ್ಟ ಕಾರಣಗಳು.

ಉಳಿದಂತೆ ಸಿರಿಗೆ ಎರಡು ನಾಮಿನೇಷನ್‌ (ಕಾರ್ತಿಕ್ ಮತ್ತು ಮೈಕಲ್), ರಕ್ಷಕ್ ಅವರನ್ನು ಇಬ್ಬರು (ಮೈಕಲ್, ತನಿಷಾ), ಮೈಕಲ್‌ ಅವರನ್ನು ಇಬ್ಬರು (ನಮ್ರತಾ ಮತ್ತು ಸಿರಿ), ತುಕಾಲಿ ಸಂತು ಅವರನ್ನು ಇಬ್ಬರು (ಸಂಗೀತಾ, ಡ್ರೋನ್‌ ಪ್ರತಾಪ್‌) ನಾಮಿನೇಟ್‌ ಮಾಡಿದರು. ತನಿಷಾ ಅವರನ್ನು ನಮ್ರತಾ, ಸ್ನೇಹಿತ್ ಅವರನ್ನು ಭಾಗ್ಯಶ್ರೀ ನಾಮಿನೇಟ್ ಮಾಡಿದರು.

ಇದನ್ನೂ ಓದಿ: BBK Season 10 : ಸಂಗೀತಾ-ನಮ್ರತಾ‌ರಲ್ಲಿ ಕಿತ್ತೋದೋಳು ಯಾರು? ವಿನಯ್-ಕಾರ್ತಿಕ್‌ ಮಧ್ಯೆ ಗಂಡ್ಸು ಯಾರು?

ಇದರ ಜತೆಗೆ ಕ್ಯಾಪ್ಟನ್‌ ನೀತು ಅವರು ತಮಗೆ ಸಿಕ್ಕಿದ ಡೈರೆಕ್ಟ್‌ ನಾಮಿನೇಷನ್‌ ಅಧಿಕಾರವನ್ನು ಕಾರ್ತಿಕ್‌ ಮೇಲೆ ಪ್ರಯೋಗ ಮಾಡಿದರು. ಹುಲಿ ಉಗುರು ಪೆಂಡೆಂಟ್‌ ಕೇಸಿಗೆ ಸಂಬಂಧಿಸಿ ಜೈಲು ಸೇರಿದ್ದ ವರ್ತೂರು ಸಂತೋಷ್‌ ಮನೆಗೆ ವಾಪಸಾಗಿದ್ದಾರೆ. ಅವರನ್ನು ನಾಮಿನೇಟ್‌ ಮಾಡಬೇಕೇ ಬೇಡವೇ ಎಂಬುದನ್ನು ಮನೆಯ ನಿರ್ಧಾರಕ್ಕೆ ಬಿಡಲಾಯಿತು. ಬಹುಮತದಂತೆ ವರ್ತೂರು ಸಂತೋಷ್‌ ಅವರನ್ನು ಮನೆಯಿಂದ ಹೊರಹೋಗಲು ನಾಮಿನೇಷನ್‌ ಮಾಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ.

VISTARANEWS.COM


on

Pavithra Jayaram died in the accident may alive if the ambulance arrived
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೇ.12ರಂದು ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ (ಮೇ.12) ಮುಂಜಾನೆ ಅಪಘಾತವಾಗಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡದಿತ್ತು. ಅಪಘಾತವಾದ ಕೂಡಲೇ ಆಂಬ್ಯುಲೆನ್ಸ್‌ ಸರಿಯಾದ ಸಮಯಕ್ಕೆ ಬಾರದೆ ಇದ್ದಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ಸಹನಟ ಚಂದ್ರಕಾಂತ್ ಆರೋಪ ಮಾಡಿದ್ದಾರೆ.

ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇನ್ನು ತೆಲುಗಿನ ‘ನಿನ್ನೆ ಪೆಲ್ಲಡತಾ’ ಅನ್ನೋ ಜನಪ್ರಿಯ ಧಾರಾವಾಹಿಯಲ್ಲೂ ನಟಿಸಿದ್ದರು. ಇದೀಗ ನಟಿಯ ಅಂತ್ಯಕ್ರಿಯೆ ಕೂಡ ನೆರವೇರಿದೆ. ಸಹನಟ ಚಂದ್ರಕಾಂತ್ ಮಾಧ್ಯಮದ ಜತೆ ಮಾತನಾಡಿ ʻʻಪವಿತ್ರಗೆ ಏನು ಗಾಯ ಆಗಿರಲಿಲ್ಲ ಭಯದಲ್ಲೇ ಉಸಿರು ಹೋಯ್ತು. ಅವರಿಗೆ ಏನೂ ಪೆಟ್ಟಾಗಿಲ್ಲ. ಆಂಬ್ಯುಲೆನ್ಸ್ 20 ನಿಮಿಷ ಮುಂಚೆ ಬಂದಿದ್ದರೆ, ಬಹುಶ: ಅವರು ಬದುಕುತ್ತಿದ್ದರು. ಅಪಘಾತವಾದಾಗ ಅವರು ಉಸಿರಾಡುತ್ತಿದ್ದರು” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

ಅಪಘಾತವಾದ ಕಾರಿನಲ್ಲಿ ನಟಿ ಪವಿತ್ರಾ ಜೊತೆ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್, ಸಹನಟ ಚಂದ್ರಕಾಂತ್ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲರಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಹನಟ ಚಂದ್ರಕಾಂತ್ ಚಿಕಿತ್ಸೆ ಪಡೆದು ಪವಿತ್ರ ಜಯರಾಂ ಅಂತ್ಯಕ್ರಿಯೆ ಪಾಲ್ಗೊಂಡಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼ ಎಂದಿದ್ದರು.

Continue Reading

ಕಿರುತೆರೆ

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

Vijay Surya: ವಿಜಯ್ ಸೂರ್ಯ ಅವರ ಕಿರುತೆರೆ ಪಯಣ ಶುರುವಾಗಿದ್ದು ‘ಉತ್ತರಾಯಣ’ ಧಾರಾವಾಹಿಯ ಮೂಲಕ.’ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಸಿದ್ಧಾರ್ಥ್ ಆಗಿ ಅಭಿನಯಿಸಿದರು ವಿಜಯ್ ಸೂರ್ಯ. ಮುಂದೆ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿಯೂ ನಾಯಕ ಸಿದ್ಧಾರ್ಥ್ ಆಗಿ ಕಂಡಿದ್ದರು.ಈ ಬಾರಿ ವಿಶೇಷವಾಗಿ ಅಮ್ಮಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ ನಟ.

VISTARANEWS.COM


on

Vijay Surya changes his name on mothers day
Koo

ʻಅಗ್ನಿಸಾಕ್ಷಿ’ ,’ನಮ್ಮ ಲಚ್ಚಿ’ ಧಾರಾವಾಹಿ ಖ್ಯಾತಿಯ ನಟ ವಿಜಯ್ ಸೂರ್ಯ (Vijay Suriya) ಅವರು ಈ ಬಾರಿ ವಿಶೇಷವಾಗಿ ಅಮ್ಮಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ.

ಇಂದಿನಿಂದ ನಾನು ನನ್ನ ಹೆಸರನ್ನು ʻವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು ಎಂದು ವಿಜಯ್ ಸೂರ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ ನಟ.

ಇದನ್ನೂ ಓದಿ: Puneeth Parva | ಅಪ್ಪುವಿನ ಮಾಸ್‌ ಡೈಲಾಗ್‌ ಹೇಳಿದ ಧ್ರುವ ಸರ್ಜಾ: ದುನಿಯಾ ವಿಜಯ್‌ ಭಾವುಕ

ವಿಜಯ್‌ ಸೂರ್ಯ ಪೋಸ್ಟ್‌ ಮಾಡಿ. ʻʻಅಮ್ಮ ಹಚ್ಚಿದೊಂದು ಹಣತೆ
ಇನ್ನೂ ಬೆಳಗಿದೆ..
ಮನಕೆ ಮಬ್ಬು ಕವಿಯದಂತೆ
ಸದಾ ಕಾದಿದೆ..

ಎಂ ಆರ್ ಕಮಲಾ ಅವರು ಬರೆದ ಈ ಸಾಲನ್ನು ಮನದಲ್ಲಿ ನೆನೆಯುತ್ತಾ ಅಮ್ಮನಿಗೊಂದು ಭಾವುಕ ನಮನ ಸಲ್ಲಿಸುತ್ತೇನೆ. ಹ್ಯಾಪಿ ಮದರ್ಸ್‌ ಡೇ ಅಮ್ಮ.

ಇಷ್ಟು ಹೇಳಿದರೆ ಸಾಕಾ ? ಅಮ್ಮ ಪ್ರತಿ ಕ್ಷಣದ ಮಿಡಿತ ಅಲ್ವಾ ? ಈ ಪ್ರಶ್ನೆ ನನ್ನನ್ನು ಸದಾ ಕಾಡಿದೆ ಇದಕ್ಕೆ ಉತ್ತರ ಹುಡುಕಲು ಹೊರಟಾಗ ಅನ್ನಿಸಿದ್ದು ನನ್ನ ಹೆಸರಿನಲ್ಲಿ ಅಮ್ಮನ ಹೆಸರು ಬೆರೆತರೆ ಹೇಗೆ ಎಂಬ ಭಾವ. ಅದನ್ನು ಅಳವಡಿಸಿಕೊಳ್ಳಲು ಅಮ್ಮಂದಿರ ದಿನಕ್ಕಿಂತ ವಿಶೇಷ ಸಂದರ್ಭ ಯಾವುದಿದೆ ಅಲ್ವಾ ?

ಹೌದು ಇಂದಿನಿಂದ ನಾನು ನನ್ನ ಹೆಸರನ್ನು ʻವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು.

ಜಗತ್ತಿನ ಎಲ್ಲ ಅಮ್ಮಂದಿರಿಗೂ ನನ್ನ ಶುಭಾಶಯಗಳು. ʻನಿಮ್ಮವನುʼ , ವಿಜಯ್ ಲಲಿತಾ ಸೂರ್ಯ…ʼʼಎಂದು ಬರೆದುಕೊಂಡಿದ್ದಾರೆ.

ತಾಯಿಗಾಗಿ ಹೆಸರನ್ನೇ ಬದಲಿಸಿಕೊಂಡ ನಟನ ಈ ನಡೆಗೆ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವಿಜಯ್ ಸೂರ್ಯ ಅವರ ಕಿರುತೆರೆ ಪಯಣ ಶುರುವಾಗಿದ್ದು ‘ಉತ್ತರಾಯಣ’ ಧಾರಾವಾಹಿಯ ಮೂಲಕ.’ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಸಿದ್ಧಾರ್ಥ್ ಆಗಿ ಅಭಿನಯಿಸಿದರು ವಿಜಯ್ ಸೂರ್ಯ. ಮುಂದೆ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿಯೂ ನಾಯಕ ಸಿದ್ಧಾರ್ಥ್ ಆಗಿ ಕಂಡಿದ್ದರು.

Continue Reading

ಕಿರುತೆರೆ

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Jyoti Rai: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜ್ಯೋತಿ ರೈ ಅವರನ್ನ ಅವರ ಅಭಿಮಾನಿಗಳು ಮಾತನಾಡಿಸಿದ್ದಾರೆ. ಜ್ಯೋತಿ ರೈ ಕೂಡ ಅಲ್ಲಿನ ಸಿಬ್ಬಂದಿ ಜೊತೆ ಕಷ್ಟ-ಸುಖ ಹಂಚಿಕೊಂಡಿದ್ದಾರೆ.ಜ್ಯೋತಿ ರೈ ತಿರುಪತಿಯ ತಮ್ಮ ಈ ದಿವ್ಯ ಅನುಭವವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಟಿ ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾದರು.

VISTARANEWS.COM


on

Jyoti Rai seeks divine blessings at tirupathi
Koo

ಬೆಂಗಳೂರು: ಕಿರುತೆರೆ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಮೂಲದ ಜ್ಯೋತಿ ರೈ (Jyoti Rai) ಕುರಿತಾದ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವುದೇ ಇದಕ್ಕೆ ಕಾರಣ. ಇದಾದ ಬಳಿಕ ನಟಿ ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾದರು. ಈ ಎಲ್ಲದರ ನಡುವೆ ನಟಿ ತಮ್ಮ ಸಂಗಾತಿ ಸುಕು ಪೂರ್ವಜ್ ಜತೆ ತಿರುಪತಿಗೆ ತೆರಳಿದ್ದಾರೆ. ತಿರುಪತಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜ್ಯೋತಿ ರೈ ಅವರನ್ನ ಅವರ ಅಭಿಮಾನಿಗಳು ಮಾತನಾಡಿಸಿದ್ದಾರೆ. ಜ್ಯೋತಿ ರೈ ಕೂಡ ಅಲ್ಲಿನ ಸಿಬ್ಬಂದಿ ಜೊತೆ ಕಷ್ಟ-ಸುಖ ಹಂಚಿಕೊಂಡಿದ್ದಾರೆ.ಜ್ಯೋತಿ ರೈ ತಿರುಪತಿಯ ತಮ್ಮ ಈ ದಿವ್ಯ ಅನುಭವವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ

ತೆಲುಗಿನ ಜನಪ್ರಿಯ ಜನಪದ ಗಾಯಕ ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ (Darshanam Mogilaiah) ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದರು.

ಧನ ಸಹಾಯ

ಅಕ್ಷಯ ತೃತೀಯ ದಿನ (ಶುಕ್ರವಾರ)ದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದರು. ʼʼಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತುʼʼ ಎಂದು ಜ್ಯೋತಿ ರೈ ಹೇಳಿದ್ದರು.

ಇದನ್ನೂ ಓದಿ: Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

ಮುಂದುವರಿದು, ʼʼಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣʼʼ ಎಂದು ಕರೆ ನೀಡಿದ್ದರು.

ಸವಾಲು

ಇದರ ಜತೆಗೆ ತಮ್ಮದು ಎನ್ನಲಾದ ನಕಲಿ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲು ಹಾಕಿದ್ದರು. ʼʼಈ ವಿಡಿಯೊ (ಮೊಗಿಲಯ್ಯ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ವಿಡಿಯೊ)ವನ್ನು ವೈರಲ್‌ ಮಾಡುವ ತಾಕತ್ತು ನಿಮ್ಮಲ್ಲಿ ಇದೆಯಾ? ಇದು ನಿಜವಾದುದು. ಈ ಕೆಳಗಿನ ಸಾಲುಗಳು ಕೆಲಸ ಇಲ್ಲದವರಿಗೆ, ಬುದ್ಧಿ ಇಲ್ಲದವರಿಗಾಗಿ. ಜಗತ್ತು ನನ್ನೆಡೆಗೆ ಅಂಧಕಾರವನ್ನು ದೂಡಿದಾಗ ನನ್ನೊಳಗಿನ ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ನನ್ನೊಳಗಿನ ಬೆಳಕು ಉರಿಯಲು ಇಂತಹ ಕತ್ತಲೇ ಇಂಧನ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏಳುತ್ತದೆ. ನಕಾರಾತ್ಮಕ ಶಕ್ತಿಯು ಮೆಟ್ಟಿಲು; ನಾನು ಅದರ ಮೇಲೆ ಹತ್ತಿ ಸಕಾರಾತ್ಮಕತೆಯ ದಿಗಂತದ ಕಡೆಗೆ ಸಾಗುತ್ತೇನೆʼʼ ಎಂದು ಜ್ಯೋತಿ ರೈ ಬರೆದುಕೊಂಡಿದ್ದರು. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ. ಅಭಿಮಾನಿಗಳು ಅವರ ಈ ದಿಟ್ಟತನವನ್ನು, ಮಾನವೀಯತೆಯ ಗುಣವನ್ನು ಮೆಚ್ಚಿದ್ದರು.

ಇನ್ನೂ ವಿಡಿಯೊ ವಿಚಾರಕ್ಕೆ ಬಂದರೆ ಜ್ಯೋತಿ ರೈ ವಿಚಾರದ ಕಿಡಿಗೇಡಿಗಳು ಡೀಪ್‌ಫೇಕ್ ವಿಡಿಯೊ ಬಳಸಿ ನಟಿ ಜ್ಯೋತಿ ರೈ ಅವರ ನಕಲಿ ವಿಡಿಯೋ ಹಾಗೂ ಫೋಟೊಗಳನ್ನು ಸೃಷ್ಟಿಸಿರಬಹುದೆಂದು ಚರ್ಚೆಯಾಗುತ್ತಿದೆ. ಈ ಬಗ್ಗೆ ನಟಿ ಈಗಾಗಲೇ ಜತೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಹ ನೀಡಿದ್ದರು.

Continue Reading

ಕಿರುತೆರೆ

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ. . ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

VISTARANEWS.COM


on

Pavithra Jayaram Trinayani serial Fame No More
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

ಇದನ್ನೂ ಓದಿ: IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

“ಅಷ್ಟೇ ಅಲ್ಲ 16ನೇ ವಯಸ್ಸಿಗೆ ಮದುವೆ ಮಾಡಿದ್ದರು. ಮ್ಯಾರೇಜ್ ಲೈಫ್ ಕೂಡ ನನ್ನದು ಅಷ್ಟಾಗಿ ಸರಿಯಿರಲಿಲ್ಲ. ಓದು ಕೂಡ ಅರ್ಧಕ್ಕೆ ಮುಗಿದಿತ್ತು. ಚಿಕ್ಕ ಚಿಕ್ಕ ಮಕ್ಕಳು ಇರುವಾಗಲೇ ನನ್ನ ಮಗಳು ಮತ್ತು ಮಗನನ್ನು ಕರೆದುಕೊಂಡು ಬೆಂಗಳೂರಿಗೆ ಅವಕಾಶ ಅರಸಿಕೊಂಡು ಬಂದೆ. ಮಕ್ಕಳನ್ನು ಬೆಳೆಸಲು ಹೌಸ್ ಕೀಪಿಂಗ್ ಕೆಲಸ ಕೂಡ ಮಾಡಿದ್ದೆ. ನರ್ಸಿಂಗ್ ಕಾಲೇಜಿನ ಲೈಬ್ರರಿಯಲ್ಲಿ ಕೂಡ ಕೆಲಸ ಮಾಡಿದ್ದೆʼʼಎಂದು ಹೇಳಿಕೊಂಡಿದ್ದರು.

Continue Reading
Advertisement
Viral Video
ದೇಶ2 seconds ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ18 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ22 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ26 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್27 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ40 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್40 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ45 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ56 mins ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Rahul Gandhi
ದೇಶ1 hour ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ12 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ24 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌