Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು?  - Vistara News

ಬಿಗ್ ಬಾಸ್

Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು? 

Bigg boss Hindi: ಇದೀಗ ಬಿಗ್ ಬಾಸ್ 18ನೇ ಆವೃತ್ತಿ ರಿಯಾಲಿಟಿ ಶೋವನ್ನು ನಟ ಸಲ್ಮಾನ್ ಖಾನ್ನ ಡೆಸಿಕೊಡಲಿದ್ದಾರೆ. ಜತೆಗೆ ಸ್ಪರ್ಧಿಗಳು ಯಾರೆಲ್ಲ ಎಂಬ ಸಂಭಾವ್ಯ ಪಟ್ಟಿ ಹೊರ ಬಿದ್ದಿದೆ.

VISTARANEWS.COM


on

Bigg boss Hindi list of contestants
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವರ್ಷ, ನಟ ಅನಿಲ್ ಕಪೂರ್ ಅವರು ಸಲ್ಮಾನ್ ಖಾನ್ ಬದಲಿಗೆ ಬಿಗ್ ಬಾಸ್ ಹಿಂದಿ (Bigg boss Hindi) OTT ಯ (Bigg Boss OTT 3) ಮೂರನೇ ಸೀಸನ್‌ನ ನಿರೂಪಕರಾಗಿದ್ದರು. ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕಿದೆ. ಬಿಗ್‌ ಬಾಸ್‌ ಸೀಸನ್‌ 18ನೇ ಆವೃತ್ತಿಗೆ ಸಲ್ಮಾನ್‌ ಅವರೇ ಹೋಸ್ಟ್‌ ಮಾಡಬೇಕು ಎಂದು ಪ್ರೇಕ್ಷಕರು ಕಮೆಂಟ್‌ ಮೂಲಕ ವ್ಯಕ್ತಪಡಿಸಿದ್ದರು. ಇದೀಗ ಬಿಗ್ ಬಾಸ್ 18ನೇ ಆವೃತ್ತಿ ರಿಯಾಲಿಟಿ ಶೋವನ್ನು ನಟ ಸಲ್ಮಾನ್ ಖಾನ್ನ ಡೆಸಿಕೊಡಲಿದ್ದಾರೆ. ಜತೆಗೆ ಸ್ಪರ್ಧಿಗಳು ಯಾರೆಲ್ಲ ಎಂಬ ಸಂಭಾವ್ಯ ಪಟ್ಟಿ ಹೊರ ಬಿದ್ದಿದೆ.

ಬಾಲಿವುಡ್ ನಟಿ ಇಶಾ ಕೋಪಿಕ್ಕರ್ 18ನೇ ಆವೃತ್ತಿ ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ.ಇಶಾ ಹೊರತಪಡಿಸಿದರೆ ಹಲವು ಹೆಸರು ಕೇಳಿಬರುತ್ತಿದೆ. ಈ ಪೈಕಿ ಸಂಭಾವ್ಯ ಸ್ಪರ್ಧಿಗಳ ಲಿಸ್ಟ್‌ನಲ್ಲಿ ನಟನೆಯಿಂದ ದೂರ ಉಳಿದಿರುವ ಸಮೀರಾ ರೆಡ್ಡಿ ಹೆಸರು ಮುಂಚೂಣಿಯಲ್ಲಿದೆ. ಹಿಂದಿ ಸೀರಿಯಲ್ ನಟ ಶೋಯಿಬ್ ಇಬ್ರಾಹಂ, ನಟಿ ಕಾಶಿಶ್ ಕಪೂರ್, ನಟ ಝ್ಯಾನ್ ಸೈಫಿ, ಪೂಜಾ ಶರ್ಮಾ, ಶೀಝಾನ್ ಖಾನ್, ದಲ್ಜಿತ್ ಕೌರ್ ಸಂಭಾವ್ಯ ಸ್ಪರ್ಧಿಗಳಾಗಿದ್ದಾರೆ. ಬಾಲಿವುಡ್ ಹಿರಿಯ ನಟಿ ರೇಖಾ ಈ ಬಾರಿಯಾ ಹಿಂದಿ ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಸೆಲೆಬ್ರೆಟಿ ಚಾಯ್‌ವಾಲ ಡೋಲಿ ಚಾಯ್‌ವಾಲ ಈ ಬಾರಿಯ ಬಿಗ್ ಬಾಸ್‌ಗೆ ಆಹ್ವಾ ನೀಡಲಾಗಿದೆ ಎನ್ನಲಾಗುತ್ತಿದೆ. ಸಂಭಾವ್ಯ ಪಟ್ಟಿಯಲ್ಲಿ ಈ ಡೋಲಿ ಚಾಯ್‌ವಾಲ್ ಹೆಸರು ಮುಂಚೂಣಿಯಲ್ಲಿದೆ. ಸೋಶಿಯಲ್ ಮೀಡಿಯಾ ಸ್ಟಾರ್ ಫೈಸಲ್ ಶೇಕ್, ಫುಕ್ರಾ ಇನ್ಸಾನ್ ಯೂಟ್ಯೂಬರ್ ಅಭಿಷೇಕ್ ಮಲ್ಹನ್, ಟಿವಿ ನಟಿ ನುಸ್ರತ್ ಜಹಾನ್, ನಟಿ ದೀಪಿಕಾ ಆರ್ಯ ಸಂಭಾವ್ಯ ಸ್ಪರ್ಧಿಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ.ಕಾಮಿಡಿಯನ್ ಹರ್ಷಾ ಬೆನಿವಾಲ್, ಟಿವಿ ನಟಿ ಸುರ್ಭಿ ಜ್ಯೋತಿ, ನಟ ಕರನ್ ಪಟೇಲ್, ನಟ ಅಲೈಸ್ ಕೌಶಿಕ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ: Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

ಹಿಂದಿಯ ಬಿಗ್ ಬಾಸ್ 17ನೇ (Bigg Boss 17)ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು,ಬಿಗ್ ಬಾಸ್ 17 ಗೆದ್ದಿರುವ ಮುನಾವರ್ ಫರೂಖಿ ಅವರಿಗೆ ಟ್ರೋಫಿ ದೊರೆತಿದ್ದು, ಜತೆಗೆ 50 ಲಕ್ಷ ರೂ. ಬಹುಮಾನ ಕೊಡ ನೀಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Isha Koppikar: ʻಸೂರ್ಯವಂಶʼ ಖ್ಯಾತಿಯ ನಟಿ ಬಿಗ್‌ ಬಾಸ್‌ಗೆ ಹೋಗೋದು ಫಿಕ್ಸ್‌!

Isha Koppikar:ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು.

VISTARANEWS.COM


on

Isha Koppikar Bigg Boss 18 Is Isha Koppikar a confirmed contestant
Koo

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಜತೆ ʻಸೂರ್ಯವಂಶʼ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಮುಂಬೈ ನಟಿ ಇಶಾ ಕೊಪ್ಪಿಕರ್ (Isha Koppikar) ಚಿತ್ರರಂಗದಲ್ಲಿ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಬ್ಬರು. ನಟಿ ಹಿಂದಿ ಚಿತ್ರರಂಗದಲ್ಲೂ ಹೆಸರು ಗಳಿಸಿದ್ದಾರೆ.  ಹಿಂದಿಯ ಬಿಗ್​ಬಾಸ್​ಗೆ ಮೊದಲ ಎಂಟ್ರಿಯಾಗಿ ಇಶಾ ಕೊಪ್ಪಿಕರ್​ ಹೆಸರು ಕನ್​ಫರ್ಮ್​ ಆಗಿದೆ. ಈ ಕುರಿತು ಖುದ್ದು ನಟಿ ಹೇಳಿದ್ದಾರೆ ಎನ್ನಲಾಗಿದೆ. 

ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು. ಕನ್ನಡದಲ್ಲೂ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಸೂರ್ಯವಂಶ’,’ಹೂ ಅಂತಿಯಾ ಹೂಂ ಅಂತಿಯಾ’, ‘ಓ ನನ್ನ ನಲ್ಲೆ’, ‘ಲೂಟಿ’ ಹಾಗೂ ನಾಲ್ಕು ವರ್ಷಗಳ ಹಿಂದಷ್ಟೇ ತೆರೆಕಂಡಿರೋ ‘ಕವಚ’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಅವರು ಹಿಂದಿಯ ಬಿಗ್​ಬಾಸ್​ಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Isha Koppikar: ಖ್ಯಾತ ನಟ ನನಗೆ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದ ʻಸೂರ್ಯವಂಶʼ ನಟಿ!

ಇತ್ತೇಚೆಗೆ ನಟಿ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದರು. ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ, ಇಶಾ ಮಾತನಾಡಿ ʻʻಆಗೆಲ್ಲ ಮಿ ಟೂ ಭಿಯಾನ ಇರಲಿಲ್ಲ. ನನ್ನ ಕಾಲದಲ್ಲಿ ಅನೇಕ ನಟಿಯರು ಇಂಡಸ್ಟ್ರಿ ತೊರೆದರು. ಕೆಲವೇ ಕೆಲವರು ಇಂಡಸ್ಟ್ರಿಯಲ್ಲಿ ಇದ್ದರು. ಅದರಲ್ಲಿ ನಾನೂ ಒಬ್ಬಳು. ನಾನು 18 ವರ್ಷವನಿದ್ದಾಗ ನಟ ಕಾಸ್ಟಿಂಗ್ ಕೌಚ್‌ಗಾಗಿ ಸಂಪರ್ಕಿಸಿದರು. ಕೆಲಸ ಸಿಗಬೇಕಾದರೆ ನಟರ ಜೊತೆ ‘ಫ್ರೆಂಡ್ಲಿ’ ಆಗಬೇಕು ಅಂತ ಹೇಳಿದ್ರು. ನೀವು ಯಾವ ಅರ್ಥದಲ್ಲಿ ‘ಫ್ರೆಂಡ್ಲಿ’ ಆಗಿರಬೇಕು ಎಂದು ಹೇಳುತ್ತಿದ್ದೀರಿ ಅಂತ ಅವರಿಗೆ ಮರು ಪ್ರಶ್ನೆ ಮಾಡಿದ್ದೆ ಎಂದಿದ್ದಾರೆ. ಇನ್ನೂ.. ಇದೊಂದೇ ಅಲ್ಲ. ಮತ್ತೊಮ್ಮೆ.. ಮತ್ತೊಬ್ಬ ಸ್ಟಾರ್‌ ನನಗೆ ಸಿಂಗಲ್ ಆಗಿ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದಿದ್ದಾರೆ. ಡ್ರೈವರ್ ಅಥವಾ ಬೇರೆ ಯಾರನ್ನೂ ಜತೆಗೆ ಕರೆದುಕೊಂಡು ಬರಬಾರದು ಎಂಬ ಷರತ್ತನ್ನೂ ಹಾಕಿದ್ದ ಎಂದಿರುವ ಇಶಾ ಕೊಪ್ಪಿಕರ್, ಆ ಕಾಲಕ್ಕೆ ಆತ ಹಿಂದಿ ಚಿತ್ರರಂಗದ ‘ಎ’ ದರ್ಜೆಯ ನಾಯಕನಾಗಿದ್ದ ಎಂದು ಕೂಡ ಹೇಳಿದ್ದಾರೆ. ನನ್ನ ಜೊತೆ ಚಿತ್ರರಂಗದ ಬಂದ ಹಲವಾರು ನಾಯಕಿಯರು ಈ ಕಾಸ್ಟಿಂಗ್ ಕೌಚ್ ಕಾರಣಕ್ಕೆ ಚಿತ್ರರಂಗದಿಂದ ದೂರ ಸರೆದರು ಎಂದು ಹೇಳಿಕೊಂಡಿದ್ದರು.

ಬಾಲಿವುಡ್​ ನಟ ಸಲ್ಮಾನ್​ ಖಾನ್​ ನಡೆಸಿಕೊಡುವ ಬಿಗ್​ಬಾಸ್​ ಷೋ 18ನೇ ಸೀಸನ್​ ಬರುವ ಅಕ್ಟೋಬರ್​ 5ರಿಂದ ಶುರುವಾಗಲಿದೆ.

Continue Reading

ಬಿಗ್ ಬಾಸ್

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Bigg Boss Telugu 8: ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Confirmed Contestants nagarjuna akkineni host
Koo

ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ. ಸ್ಟಾರ್ ಮಾ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ತೆಲುಗು ಸೀಸನ್ 8 ರ ಹೊಸ ಪ್ರೋಮೊವನ್ನು ಭಾನುವಾರ ಬಿಡುಗಡೆ ಮಾಡಿದೆ. ,ಈ ಶೋಗೆ ಸ್ಪರ್ಧಿಗಳು ಯಾರೆಂಬುದರ ಬಗ್ಗೆ ಚರ್ಚೆಗಳು ಶುರುವಾಗಿವೆ. ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

ಸಂಭಾವ್ಯ ಅಭ್ಯರ್ಥಿಗಳ ಹೆಸರು ವೈರಲ್ ಆಗುತ್ತಿದೆ. ಅದರಂತೆ ಜ್ಯೋತಿಷ್ಯ ವೇಣುಸ್ವಾಮಿ, ಯೂಟ್ಯೂಬರ್ ಬರೆಲ್ಲಕ್ಕ, ಯೂಟ್ಯೂಬರ್ ಯಾದಂ ರಾಜು ರಿತು ಚೌಧರಿ, ಕಿರುತೆರೆ ತಾರೆಯರಾದ ಅಂಜಲಿ, ಯಶ್ಮಿ ಗೌಡ, ತೇಜಸ್ವಿನಿ ಗೌಡ, ಹಿರಿಯ ನಟಿ ಸನಾ, ನಟ ಅನಿಲ್ ಗೀಲಾ, ಹಾಸ್ಯನಟ ಬುಂಚಿಕ್ ಬಬ್ಲು, ಕಿರಾಕ್ ಆರ್‌ಪಿ, ರಿಂಗ್ ರಿಯಾಜ್, ನಿರೂಪಕಿ ವಿಂಧ್ಯಾ ವಿಶಾಖ, ಪಾಗಲ್ ಪವಿತ್ರಾ ಹೀಗೆ ಹಲವು ಜನರ ಹೆಸರಿದೆ. ಇದರ ಜೊತೆಗೆ ಸುದ್ದಿ ವಾಚಕಿ ಕಲ್ಯಾಣಿ, ನಟಿ ರೇಖಾ ಬೋಜ್, ಸಾವಯವ ಕೃಷಿ ತಜ್ಞ ನೇತ್ರಾ ರೆಡ್ಡಿ, ಧಾರಾವಾಹಿ ನಟ ಇಂದ್ರನೀಲ್ ಸೇನ್‌ಗುಪ್ತ, ನಟ ಅಬ್ಬಾಸ್, ನಟ ರೋಹಿತ್, ಗಾಯಕ ಸಾಕೇತ್ ಕೊಮಂದೂರಿ, ಫೆಮಿನಾ ಮಿಸ್ ಇಂಡಿಯಾ ತೆಲಂಗಾಣ 2023 ರ ಊರ್ಮಿಳಾ ಚೌಹಾಣ್ ಅವರ ಹೆಸರು ಕೂಡ ಇದೆ.

ಇದರಲ್ಲಿ ಯಶ್ಮಿ ಗೌಡ ಕನ್ನಡದಾಕೆ, ಇದರ ಜೊತೆಗೆ ತೇಜಸ್ವಿನಿ ಗೌಡ ಕೂಡ ಕನ್ನಡದವರೇ ಆಗಿದ್ದಾರೆ. ಮೂಲತಃ ಕನ್ನಡದವರಾದ ಇವರು ತೆಲುಗಿನ ಧಾರವಾಹಿಗಳಲ್ಲಿ ಫೇಮಸ್ ಆಗಿದ್ದಾರೆ. . ಬಿಗ್ ಬಾಸ್ ಸೀಸನ್ 8 ಸೆಪ್ಟೆಂಬರ್ 8 ರ ಭಾನುವಾರ ಸಂಜೆ 6 ರಿಂದ ಪ್ರಾರಂಭವಾಗಲಿದೆ. ನಂದಮೂರಿ ಕುಟುಂಬದಿಂದ ತೆಲುಗು ಸಿನೆಮಾ ರಂಗಕ್ಕೆ ನಾಯಕನಾಗಿ ಕಾಲಿಟ್ಟಿರುವ ಚೈತನ್ಯ ಕೃಷ್ಣ ಅವರು ಬಿಗ್‌ಬಾಸ್‌ ಗೆ ಬರಲಿದ್ದಾರೆಂದು ಸುದ್ದಿ ಹಬ್ಬಿದೆ.

ಇದನ್ನೂ ಓದಿ: Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಕಾಲಿವುಡ್

Bigg Boss Tamil 8: ಬಿಗ್‌ ಬಾಸ್‌ನಿಂದ ಕಮಲ್‌ ಹಾಸನ್‌ ಔಟ್‌ ಆದ ಬೆನ್ನಲ್ಲೇ ಈ ಸ್ಟಾರ್‌ ನಟ ಎಂಟ್ರಿ?

Bigg Boss Tamil 8: ಹೀಗೆ ಕಮಲ್ ಹಾಸನ್ ಆ ಮನೆಯಿಂದ ನಿರ್ಗಮಿಸಿದ ಬೆನ್ನಲ್ಲಿಯೇ, ಕಮಲ್ ಜಾಗವನ್ನು ಬಿಗ್ ಬಾಸ್ ನಲ್ಲಿ ತುಂಬುವ ಕಲಾವಿದ ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಇದೀಗ ಸ್ಟಾರ್‌ ಒಬ್ಬರ ಹೆಸರು ಸಖತ್‌ ವೈರಲ್‌ ಆಗುತ್ತಿದೆ.

VISTARANEWS.COM


on

Bigg Boss Tamil 8 replaced Kamal Haasan for Bigg Boss.
Koo

ಬೆಂಗಳೂರು: ತಮಿಳು ಬಿಗ್‌ ಬಾಸ್‌ ಶೀಘ್ರದಲ್ಲಿ ಬರಲಿದೆ ಎಂದು ವರದಿಯಾಗಿದೆ. ಆದರೆ ಈ ಬಾರಿ ಬಿಗ್ ಬಾಸ್‌ ನಿರೂಪಣೆ ಕಮಲ್‌ ಹಾಸನ್‌ (Bigg Boss Tamil 8) ಮಾಡುತ್ತಿಲ್ಲ. ಈ ವರ್ಷ ಬಿಗ್ ಬಾಸ್ ಕಾರ್ಯಕ್ರಮದ ಹೊಣೆ ಹೊರಲು ಸಾಧ್ಯ ಇಲ್ಲ ಅಂದಿದ್ದಾರೆ. ಕಿರುತೆರೆಯ ಮೂಲಕ ನಿಮ್ಮ ಮನೆ ಮತ್ತು ಮನಗಳನ್ನು ತಲುಪಲು ಸಹಕಾರವನ್ನೂ ನೀಡಿದ ವಿಜಯ್ ಟಿವಿಗೆ ಧನ್ಯವಾದ ಎಂದಿರುವ ಕಮಲ್ ಹಾಸನ್,ಕೆಲಸದ ಒತ್ತಡ ಮತ್ತು ಒಪ್ಪಿಕೊಂಡಿರುವ ಕೆಲಸಗಳನ್ನು ಮುಗಿಸಲೇಬೇಕಾದ ಕಾರಣದಿಂದ ನಿರೂಪಣೆ ಮಾಡುತ್ತಿಲ್ಲ ಎಂದಿದ್ದಾರೆ. ಹೀಗೆ ಕಮಲ್ ಹಾಸನ್ ಆ ಮನೆಯಿಂದ ನಿರ್ಗಮಿಸಿದ ಬೆನ್ನಲ್ಲಿಯೇ, ಕಮಲ್ ಜಾಗವನ್ನು ಬಿಗ್ ಬಾಸ್ ನಲ್ಲಿ ತುಂಬುವ ಕಲಾವಿದ ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಇದೀಗ ಸ್ಟಾರ್‌ ಒಬ್ಬರ ಹೆಸರು ಸಖತ್‌ ವೈರಲ್‌ ಆಗುತ್ತಿದೆ.

ವಿಜಯ್ ಮತ್ತು ಅಜಿತ್ ಹೊರತು ಪಡಿಸಿದರೆ, ಬಿಗ್‌ ಬಾಸ್‌ ಕಾರ್ಯಕ್ರಮವನ್ನು ನೆರವೇರಿಸುವ ಶಕ್ತಿ ಇರುವುದು ರಜನಿಕಾಂತ್‌ ಅವರಿಗೆ ಮಾತ್ರ. ಇದೀಗ ಆದರೆ, ವಯಸ್ಸು ಸೇರಿ ಆರೋಗ್ಯದ ಸಮಸ್ಯೆಗಳು ಇದಕ್ಕೆ ಅಡ್ಡಗಾಲು ಆಗಿವೆ. ಈ ಕಾರಣಕ್ಕೆ ಬಿಗ್ ಬಾಸ್ ಉಸ್ತುವಾರಿಯನ್ನು, ವಿಜಯ್ ಸೇತುಪತಿ ಅವರ ಹೆಗಲಿಗೆ ವಹಿಸುವ ಕಸರತ್ತು ತಮಿಳುನಾಡಿನ ಕಿರುತೆರೆ ಲೋಕದಲ್ಲಿ ಶುರುವಾಗಿದೆ. ಇನ್ನೂ ವಿಜಯ್ ಸೇತುಪತಿ ಕೇವಲ ನಾಯಕನ ಪಾತ್ರಕ್ಕೆ ಸೀಮಿತವಾದವರಲ್ಲ. ಪಾತ್ರ ಯಾವುದೇ ಇದ್ದರೂ ಅದಕ್ಕೆ ಜೀವ ತುಂಬಬಲ್ಲ ಸಾಮರ್ಥ್ಯ ಹೊಂದಿರುವವರು. ಒಂದು ಅರ್ಥದಲ್ಲಿ ವರ್ಷ ಪೂರ್ತಿ ಬ್ಯುಸಿಯಾಗಿರುವವರು ವಿಜಯ್ ಸೇತುಪತಿ.

ಉಳಿದಂತೆ ವಿಜಯ್ ಸೇತುಪತಿ ಹೊರತು ಪಡಿಸಿದರೆ ಸಿಲಂಬರಸನ್ ಅಲಿಯಾಸ್ ಸಿಂಬು ಬಿಗ್ ಬಾಸ್ ನಿರೂಪಣೆ ಮಾಡುವ ಸಾಧ್ಯತೆ ಇದೆ. ಈ ಹಿಂದೆ ಸಿಂಬು ಬಿಗ್ ಬಾಸ್ ಅಲ್ಟಿಮೇಟ್ ಓಟಿಟಿ ಸೀಸನ್ ನಿರೂಪಣೆ ಮಾಡಿದ ಕಾರಣದಿಂದ ಸಿಂಬು ಒಪ್ಪಿಕೊಂಡರು ಒಪ್ಪಿಕೊಳ್ಳಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿ: Bigg Boss Tamil 8: ಬಿಗ್​ ಬಾಸ್​ ಸೀಸನ್ 8​ರ ಹೋಸ್ಟ್​ ನಾನಲ್ಲ ಎಂದ ಕಮಲ್‌ ಹಾಸನ್‌; ಕಾರಣ ಬಿಚ್ಚಿಟ್ಟ ನಟ!

ಹಮಲ್‌ ಹಾಸನ್‌ ಕೊಟ್ಟ ಕಾರಣವೇನು?

“ಆತ್ಮೀಯ ವೀಕ್ಷಕರೇ, ಭಾರವಾದ ಹೃದಯದಿಂದ, 7 ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಪ್ರಯಾಣದಿಂದ ನಾನು ಸಣ್ಣ ವಿರಾಮವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಸಿನಿಮಾಗಳ ಕಮಿಟ್‌ಮೆಂಟ್‌ನಿಂದಾಗಿ ಬಿಗ್ ಬಾಸ್ ತಮಿಳಿನ ಮುಂಬರುವ ಸೀಸನ್‌ಗೆ ಹೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ. .”
ನಿಮ್ಮ ಮನೆಗಳಲ್ಲಿ ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ನೀವು ನನಗೆ ಧಾರೆ ಎರೆದಿದ್ದೀರಿ, ಅದಕ್ಕಾಗಿ ನಿಮಗೆ ನನ್ನ ಚಿರ ಕೃತಜ್ಞತೆ ಇದೆ. ಇಲ್ಲಿ ನಾನು ನನ್ನ ಕಲಿಕೆಯನ್ನು ಪ್ರಾಮಾಣಿಕವಾಗಿ ಹಂಚಿಕೊಂಡಿದ್ದೇನೆ. ಈ ಕಲಿಕೆಯ ಅನುಭವಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಮತ್ತು ಸ್ಪರ್ಧಿಗಳಿಗೂ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಕೊನೆಯದಾಗಿ, ವಿಜಯ್ ಟಿವಿಯಲ್ಲಿನ ಅದ್ಭುತ ತಂಡಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ಜೊತೆಗೆ ಈ ಉದ್ಯಮವನ್ನು ಒಂದು ದೊಡ್ಡ ಯಶಸ್ಸನ್ನು ಮಾಡುವಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಕಮಲ್ ಹಾಸನ್ ಅವರು 2007 ರಲ್ಲಿ ‘ಬಿಗ್ ಬಾಸ್ ತಮಿಳು’ ನಿರೂಪಣೆ ಮಾಡಿದರು.ನಟ ‘ಬಿಗ್ ಬಾಸ್ ತಮಿಳು’ ನ ಪ್ರತಿ ಸೀಸನ್ ಅನ್ನು ನಿರಂತರವಾಗಿ ಹೋಸ್ಟ್ ಮಾಡಿದ್ದಾರೆ. ‘ಬಿಗ್ ಬಾಸ್ ತಮಿಳು 8’ ಹೊಸ ಹೋಸ್ಟ್ ಯಾರೆಂದು ಇನ್ನೂ ಘೋಷಿಸಲಾಗಿಲ್ಲ.

ಕಳೆದ ಸೀಸನ್‌ನಲ್ಲಿ ವಿಶೇಷ ಎಂದರೆ ಅರ್ಚನಾ ರವಿಚಂದ್ರನ್ ಅವರು ವೈಲ್ಡ್‌ ಕಾರ್ಡ್‌ ಮೂಲಕ ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶ ಪಡೆದಿದ್ದರು. ಇದೀಗ ವೈಲ್ಡ್ ಕಾರ್ಡ್ ಮೂಲಕ ಬಂದು ಚಾಂಪಿಯನ್‌ ಆಗುವ ಮೂಲಕ ಅವರು ಅಪರೂಪದ ಸಾಧನೆ ಮಾಡಿದ್ದರು.  ಇನ್ನು ಡ್ಯಾನ್ಸರ್‌ ಮಾಯಾ ಕೃಷ್ಣನ್‌ ರನ್ನರ್‌ ಅಪ್‌ ಆಗಿ ಆಯ್ಕೆಯಾಗಿದ್ದರು. ಮತ್ತೋರ್ವ ವೈಲ್ಡ್ ಕಾರ್ಡ್ ಎಂಟ್ರಿ ದಿನೇಶ್ ಮೂರನೇ ರನ್ನರ್ ಅಪ್ ಆಗಿದ್ದರು.

Continue Reading

ಬಿಗ್ ಬಾಸ್

Bigg Boss Kannada: ಬಿಗ್‌ ಬಾಸ್‌ ಆಫರ್‌ ಬಂದಿದ್ದು ನಿಜ ಎಂದ ನಟಿ ಜ್ಯೋತಿ ರೈ! ಆದರೆ…..

Bigg Boss Kannada: ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

VISTARANEWS.COM


on

Bigg Boss Kannada jyothi poorvaj join what she has to say
Koo

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 (Bigg Boss Kannada) ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗುತ್ತಿದೆ. ಇದೀಗ ನಟಿ ಜ್ಯೋತಿ ರೈ,ʻʻ ಕನ್ನಡ ಬಿಗ್ ಬಾಸ್‌ನಿಂದ ನನಗೆ ಕರೆ ಬಂದಿದ್ದು ನಿಜಾ. ಆದರೆ.. ನಾನು ಬಂದ ಈ ಅವಕಾಶವನ್ನು ಅಷ್ಟೇ ಗೌರವದಿಂದ ನಾನು ತಿರಸ್ಕರಿಸಿದ್ದೇನೆʼʼ ಎಂದಿದ್ದಾರೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ‘ಅನುರಾಗ ಸಂಗಮ’, ‘ಜೋಗುಳ’, ‘ಗೆಜ್ಜೆಪೂಜೆ’, ‘ಲವಲವಿಕೆ’, ‘ಕನ್ಯಾದಾನ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿ 18ಕ್ಕೂ ಹೆಚ್ಚು ಕನ್ನಡದ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಜ್ಯೋತಿ ರೈ ಅವರಿಗೆ ಬಿಗ್‌ ಬಾಸ್‌ ಆಫರ್‌ ಬಂದಿತ್ತು. ಆದರೆ ನಟಿ ಈ ಅವಕಾಶವನ್ನು ಅಷ್ಟೇ ಗೌರವದಿಂದ ನಾನು ತಿರಸ್ಕರಿಸಿದ್ದೇನೆ ಎಂದಿದ್ದಾರೆ.

ʻʻಈಗಾಗಲೇ ಒಪ್ಪಿಕೊಂಡ ಕೆಲಸಗಳ ಕಾರಣದಿಂದ ನಾನು ಈ ನಿರ್ಧಾರ ತೆಗೆದುಕೊಂಡಿದ್ದು ಅಭಿಮಾನಿಗಳ ಬೆಂಬಲಕ್ಕೆ ಮತ್ತು ಬಿಗ್ ಬಾಸ್ ನೀಡಿದ ಅವಕಾಶಕ್ಕೆ ನಾನು ಚಿರಋಣಿʼʼ ಎಂದು ತಮ್ಮ ಇನ್​ಸ್ಟಾಗ್ರಾಮ್​ಸ್ಟೋರಿಯಲ್ಲಿ ಜ್ಯೋತಿ ರೈ ಬರೆದುಕೊಂಡಿದ್ದಾರೆ. ಉಳಿದಂತೆ ಈ ಬಾರಿಯ ಬಿಗ್ ಬಾಸ್‌ನಲ್ಲಿ ‘ಬೃಂದಾವನ’ ಖ್ಯಾತಿಯ ವರುಣ್ ಆರಾಧ್ಯ.. ಯೂಟ್ಯೂಬರ್ ವರ್ಷಾ ಕಾವೇರಿ.. ತುಕಾಲಿ ಸಂತು ಅವರ ಪತ್ನಿ ಮಾನಸಾ.. ಸುನಿಲ್ ರಾವ್.. ಮೋಕ್ಷಿತಾ ಪೈ.. ರೀಲ್ಸ್ ರೇಷ್ಮಾ.. ಹೀಗೆ ಒಂದಿಷ್ಟು ಹೆಸರುಗಳು ಅಂತೆ-ಕಂತೆ ಸಂತೆಯಲ್ಲಿ ಕೇಳಿ ಬರುತ್ತಿವೆ.

ಇದನ್ನೂ ಓದಿ: Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌?

ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿದೆ.ಸಾಮಾಜಿಕ ಮಾಧ್ಯಮದಲ್ಲಿ ಕಿಚ್ಚ ಸುದೀಪ್‌ ಅವರು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಅರವಿಂದ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರು ಹೋಸ್ಟ್‌ ಮಾಡಲಿದ್ದಾರೆ ಎನ್ನಲಾಗುತ್ತಿದೆ, ರಮೇಶ್‌ ಅರವಿಂದ ಈಗಾಗಲೇ ಮಹಾನಟಿ ಶೋ ಮೂಲಕ ವೀಕ್ಷಕರನ್ನು ತಲುಪಿದಿದ್ದಾರೆ. ಈಗಾಗಲೆ ಕೋಟ್ಯಾಧಿಪತಿ ಮತ್ತು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರದಲ್ಲಿ ರಮೇಶ್ ಅರವಿಂದ್‌ ಹೋಸ್ಟ್‌ ಮಾಡಿದ್ದಾರೆ.ಇನ್ನು ರಿಷಬ್‌ ಕೂಡ ಮಾಡಬಹುದು ಎನ್ನಲಾಗಿದೆ.

Continue Reading
Advertisement
Road Accident
ದೇಶ53 seconds ago

Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

Sanju Samson
ಕ್ರೀಡೆ4 mins ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Physical Abuse
ಪ್ರಮುಖ ಸುದ್ದಿ14 mins ago

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Champai Soren
ರಾಜಕೀಯ26 mins ago

Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

CM Siddaramaiah
ಪ್ರಮುಖ ಸುದ್ದಿ43 mins ago

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

Heart attack
ಬೆಳಗಾವಿ47 mins ago

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

MS Dhoni
ಕ್ರೀಡೆ53 mins ago

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

Congress Protest
ಕರ್ನಾಟಕ53 mins ago

Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Physical Abuse
ದೇಶ1 hour ago

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Kannada New Movie vaikuntha samaradhane movie
ಸ್ಯಾಂಡಲ್ ವುಡ್1 hour ago

Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌