Bigg Boss Kannada | ಜಡೆಗಳಿಂದ ಸಖತ್‌ ಪ್ರಾಬ್ಲಮ್‌ ಅಂದ್ರು ಪ್ರಶಾಂತ್‌: ಆಟದಲ್ಲಿ ನೀವೇ ಹೀರೊ ಎಂದ ಗುರೂಜಿ! - Vistara News

ಬಿಗ್ ಬಾಸ್

Bigg Boss Kannada | ಜಡೆಗಳಿಂದ ಸಖತ್‌ ಪ್ರಾಬ್ಲಮ್‌ ಅಂದ್ರು ಪ್ರಶಾಂತ್‌: ಆಟದಲ್ಲಿ ನೀವೇ ಹೀರೊ ಎಂದ ಗುರೂಜಿ!

ಮನೆಯಲ್ಲಿ ಹೆಣ್ಣು ಮಕ್ಕಳ ಗ್ಯಾಂಗ್‌ (Bigg Boss Kannada) ಆಗಿದೆ ಎಂದು ಆರ್ಯವರ್ಧನ್‌ ಬಳಿ ಪ್ರಶಾಂತ್‌ ಸಂಬರಗಿ ಹೇಳಿಕೊಂಡಿದ್ದಾರೆ. ಹಾಗೇ ಆರ್ಯವರ್ಧನ್‌ ಮೈನ್‌ ಟಾಸ್ಕ್‌ನಲ್ಲಿ ಪ್ರಶಾಂತ್‌ ಆಟವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದರು.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ (Bigg Boss Kannada) ಮನೆಯಲ್ಲಿ ಗೋಲ್ಡ್‌ ಮೈನ್‌ ಟಾಸ್ಕ್‌ ವಿಚಾರವಾಗಿ ಮೂಲೆ ಮೂಲೆಯಲ್ಲಿಯೂ ಗಾಸಿಪ್‌ ಮಾತುಗಳು ಶುರುವಾಗಿವೆ. ಮನೆಯಲ್ಲಿ ಈಗಾಗಲೇ ಎರಡು ಗುಂಪುಗಳು ಆಗಿದಂತಿವೆ. ಇದರ ಬಗ್ಗೆ ಆರ್ಯವರ್ಧನ್‌, ಪ್ರಶಾಂತ್‌ ಸಂಬರಗಿ ಮಾತನಾಡಿಕೊಂಡಿದ್ದಾರೆ.

ಆರ್ಯವರ್ಧನ್‌, ಪ್ರಶಾಂತ್‌ ಸಂಬರಗಿ, ರೂಪೇಶ್‌ ಶೆಟ್ಟಿ ಹಾಗೂ ಅರುಣ್‌ ಸಾಗರ್‌ ಟಾಸ್ಕ್‌ ವಿಚಾರವಾಗಿ ಮಾತನಾಡಿಕೊಂಡರು. ಆರ್ಯವರ್ಧನ್‌ ಮಾತನಾಡಿ ʻʻಅನುಪಮಾ ಅವರೆಲ್ಲ ಪರಿವರ್ತನೆ ಆಗಿದ್ದಾರೆ. ಇಂಟು ಮಾರ್ಕ್‌ ಬಿದ್ದಾಗಿದೆʼ ಎಂದು ಎಲ್ಲರ ಸಮುಖದಲ್ಲಿ ಹೇಳಿದರು. ನಂತರ ಪ್ರಶಾಂತ್‌ ಸಂಬರಗಿ ಕಡೆ ತಿರುಗಿ ʻʻಈ ಟಾಸ್ಕ್‌ನಲ್ಲಿ ಹೀರೊನೂ ನೀವೇ. ಖಳನಾಯಕನೂ ನೀವೇ. ಆದರೆ ಹೀರೊ ಆಗಿ ನೀವು ನಂಬರ್‌ ಒನ್‌. ನೀವು ಇಲ್ಲ ಅಂದಿದ್ದರೆ ಮಜನೇ ಇರುತ್ತಿರಲಿಲ್ಲ. ನೀವು ಇಲ್ಲ ಅಂದಿದ್ದರೆ ಮ್ಯಾಚ್‌ ಮೊದಲೇ ಮುಗಿದು ಬಿಡುತ್ತಿತ್ತುʼʼಎಂದರು. ಇದಕ್ಕೆ ರೂಪೇಶ್‌ ಪ್ರತಿಕ್ರಿಯೆ ನೀಡಿʻʻ ಸ್ಟ್ರ್ಯಾಟಜಿ ಇಷ್ಟ ಆಯ್ತೋ ಇಲ್ಲವೋ ಗೊತ್ತಿಲ್ಲ. ಆದರೆ ನೀವು (ಪ್ರಶಾಂತ್‌) ಆಟ ಮಾತ್ರ ಚೆನ್ನಾಗಿ ಆಡಿದ್ದೀರಾʼʼ ಎಂದರು. ಅರುಣ್‌ ಸಾಗರ್‌ ಮಾತನಾಡಿ ʻʻನಾನು ಕೂಡ ಒಂದು ಪೈಸೆ ಇಲ್ಲದೇ, ಎರಡು ವಿಕೆಟ್‌ ಕೆಡವಿದೆʼʼ ಎಂದರು.

Bigg Boss Kannada

ಹೆಣ್ಣು ಮಕ್ಕಳು ರೋಧನೆ ಕೊಡ್ತಿದ್ದಾರೆ!
ನಂತರದಲ್ಲಿ ಆರ್ಯವರ್ಧನ್‌ ಮತ್ತು ಪ್ರಶಾಂತ್‌ ಇಬ್ಬರೇ ಮಾತನಾಡಿಕೊಂಡಿದ್ದಾರೆ. ರಾತ್ರಿ 10.10ರ ಸಮಯದಲ್ಲಿ ಆರ್ಯವರ್ಧನ್‌ ಪ್ರಶಾಂತ್‌ ಸಂಬರಗಿ ಜತೆ ʻʻಕ್ಯಾಪ್ಟನ್‌ಶಿಪ್‌ ಮಾಡುವಾಗ ತುಂಬಾ ಕಷ್ಟವಿತ್ತು. ಏನೇನೋ ಡಬಲ್‌ ಗೇಮ್‌ ಇತ್ತು. ಕುಗ್ಗಿಸಿದ್ದರು, ಬಗ್ಗಿಸಿದ್ದರು. ಒಬ್ಬರನ್ನ ಮೇಲೆ ತರಕ್ಕೂ ಐಡಿಯಾ ಮಾಡುತ್ತಾರೆ. ಹಾಗೇ ಇರದನ್ನೂ ಹಾಳು ಮಾಡಲು ಐಡಿಯಾ ಮಾಡುತ್ತಾರೆ.ʼʼ ಎಂದರು.

ಪ್ರಶಾಂತ್‌ ಸಂಬರಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ ʻʻಇಡೀ ಬಿಗ್‌ ಬಾಸ್‌ ಇತಿಹಾಸದಲ್ಲೇ ಹೆಣ್ಣು ಮಕ್ಕಳ ಗ್ಯಾಂಗ್‌ ಇರಲಿಲ್ಲ. ಆದರೆ ಇದು ಯಾಕೋ ಗ್ಯಾಂಗ್‌ ಅಗಿ ಬಿಟ್ಟಿದೆ. ಎರಡು ಜಡೆ ಸೇರಲ್ಲ. ದೀಪಿಕಾ ಜತೆ ಯಾರಾದರೂ ಇದ್ದಿದ್ದರೆ, ಎರಡು ಹೆಣ್ಣು ಮಕ್ಕಳ ಗ್ಯಾಂಗ್‌ ಆಗಿ ಬಿಡೋದು. ಇಲ್ಲಿ ಒಂದು ಹೆಣ್ಣು ಮಕ್ಕಳ ಗ್ಯಾಂಗ್‌ ಅಗಿದ್ದು ರೋದನೆ ಕೊಡ್ತಾ ಇದ್ದಾರೆ. ಇವರಿಂದ ತೊಂದರೆ ಆಗುತ್ತಿದೆ. ಕಳಪೆಯನ್ನು ಡಿಸೈಡ್‌ ಮಾಡಿರುತ್ತಾರೆʼʼ ಎಂದರು. ಆರ್ಯವರ್ಧನ್‌ ನಂತರ ಮಾತನಾಡಿ ʻʻಸಾನ್ಯ ಒಬ್ಬಳು ದೂರ ಇದ್ದಾಳೆ. ಅವಳನ್ನು ಸೇರಿಸಿಕೊಳ್ಳಲ್ಲ ಅವರುʼʼ ಎಂದರು. ಅದಕ್ಕೆ ಪ್ರಶಾಂತ್‌ ಸಂಬರಗಿ ಮಾತನಾಡಿ ʻʻಸಾನ್ಯ ಯಾವಾಗಲೂ ರೂಪೇಶ್‌ ಶೆಟ್ಟಿ ಜತೆ ಇರ್ತಾಳೆʼʼಎಂದರು.

ಇದನ್ನೂ ಓದಿ | Bigg Boss Kannada | ಗೋಲ್ಡ್ ಮೈನ್ ಟಾಸ್ಕ್‌ ಕುರಿತು ಮನೆಯಲ್ಲಿ ಚರ್ಚೆ: ಇದು ಗ್ಯಾಂಗ್‌ ಗೇಮ್‌ ಅಂದ್ರು ಆರ್ಯವರ್ಧನ್‌!

Bigg Boss Kannada

ಇದನ್ನೂ ಓದಿ | Bigg Boss Kannada | ರೋಲ್‌ಕಾಲ್‌ ವಿಚಾರಕ್ಕೆ ರೂಪೇಶ್‌ ರಾಜಣ್ಣ-ಪ್ರಶಾಂತ್‌ ಕಿರಿಕ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Venkatesh Iyer Marriage
ಕ್ರೀಡೆ2 mins ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ3 mins ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ21 mins ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ22 mins ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್38 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್43 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202451 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು1 hour ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್1 hour ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ1 hour ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು21 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌