Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌? - Vistara News

ಬಿಗ್ ಬಾಸ್

Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌?

Bigg Boss Kannada: ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

VISTARANEWS.COM


on

Bigg Boss Kannada host by rishab shetty sudeep Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಮುಕ್ತಾಯವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗುತ್ತಿದೆ. ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕಿಚ್ಚ ಸುದೀಪ್‌ ಅವರು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಅರವಿಂದ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರು ಹೋಸ್ಟ್‌ ಮಾಡಲಿದ್ದಾರೆ ಎನ್ನಲಾಗುತ್ತಿದೆ, ರಮೇಶ್‌ ಅರವಿಂದ ಈಗಾಗಲೇ ಮಹಾನಟಿ ಶೋ ಮೂಲಕ ವೀಕ್ಷಕರನ್ನು ತಲುಪಿದಿದ್ದಾರೆ. ಈಗಾಗಲೆ ಕೋಟ್ಯಾಧಿಪತಿ ಮತ್ತು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರದಲ್ಲಿ ರಮೇಶ್ ಅರವಿಂದ್‌ ಹೋಸ್ಟ್‌ ಮಾಡಿದ್ದಾರೆ.ಇನ್ನು ರಿಷಬ್‌ ಕೂಡ ಮಾಡಬಹುದು ಎನ್ನಲಾಗಿದೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Bigg Boss OTT 3: ಅನಿಲ್​ ಕಪೂರ್ ʻವರ್ಸ್ಟ್‌ ನಿರೂಪಕʼ ಎಂದ ನೆಟ್ಟಿಗರು ; ಬೇಸತ್ತ ವೀಕ್ಷಕರು!

Bigg Boss OTT 3: ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕುತ್ತಿದ್ದಾರೆ. ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ,ಮತ್ತೆ ಹೋಸ್ಟ್ ಆಗಿ ತೆಗೆದುಕೊಳ್ಳಬೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Bigg Boss OTT 3 Anil Kapoor as the worst ever host of Bigg Boss
Koo

ಬೆಂಗಳೂರು: ಈ ವರ್ಷ, ನಟ ಅನಿಲ್ ಕಪೂರ್ ಅವರು ಸಲ್ಮಾನ್ ಖಾನ್ ಬದಲಿಗೆ ಬಿಗ್ ಬಾಸ್ ಹಿಂದಿ OTT ಯ (Bigg Boss OTT 3) ಮೂರನೇ ಸೀಸನ್‌ನ ನಿರೂಪಕರಾಗಿದ್ದಾರೆ. ಮೊದಲಿಗೆ ಅನಿಲ್‌ ಕಪೂರ್‌ ಎಂದು ಅನೌನ್ಸ್‌ ಆದಾಗ ಪ್ರೇಕ್ಷಕರಲ್ಲಿ ನಿರೀಕ್ಷೆ ಇದ್ದಿತ್ತು. ಆದರೀಗ ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕುತ್ತಿದ್ದಾರೆ. ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ,ಮತ್ತೆ ಹೋಸ್ಟ್ ಆಗಿ ತೆಗೆದುಕೊಳ್ಳಬೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಇದೀಗ ನೆಟ್ಟಿಗರು ʻʻಬಿಗ್ ಬಾಸ್‌ನ ಅತ್ಯಂತ ಕೆಟ್ಟ ಹೋಸ್ಟ್ʼʼಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಹೀಗೆ ಬರೆದುಕೊಂಡಿದ್ದಾರೆ. ʻʻಅನಿಲ್‌ ಕಪೂರ್‌ ಅವರದ್ದು ಫೇಕ್‌ ನಗು, ಫೇಕ್‌ ಕೋಪ,ಒಟ್ಟಾರೆ ಫೇಕ್‌ ವ್ಯಕ್ತಿತ್ವ ಹೊಂದಿರುವವರುʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻನಾನು ಬಿಗ್ ಬಾಸ್ ಅನ್ನು ಹಲವು ವರ್ಷಗಳಿಂದ ನೋಡಿಕೊಂಡು ಬರುತ್ತಿದ್ದೆ. ಇದೇ ಮೊದಲ ಬಾರಿ ವೀಕೆಂಡ್‌ನಲ್ಲಿ ಕಾರ್ಯಕ್ರಮ ನೋಡುತ್ತ ಮಧ್ಯಕ್ಕೆ ಎದ್ದು ಹೋದೆ. ಈ ಸೀಸನ್ ಹೋಸ್ಟ್ ಮತ್ತು ಸ್ಪರ್ಧಿಗಳು ಸರಿಯಿಲ್ಲ. ದೇವರಿಗೆ ಧನ್ಯವಾದ. ಅಂತೂ ಮುಂದಿನ ವಾರ ಸೀಸನ್‌ ಕೊನೆಗೊಳ್ಳುತ್ತದೆʼʼಎಂದು ಕಮೆಂಟ್‌ ಮಾಡಿದ್ದಾರೆ. “ಅನಿಲ್ ಕಪೂರ್ ಒಬ್ಬ ಒಳ್ಳೆಯ ನಟ. ಅವರು ಹೋಸ್ಟ್ ಆದರೆ ವಿಚಿತ್ರವಾಗಿ ಕಾಣುತ್ತಾರೆʼʼಎಂದು ಬರೆದುಕೊಂಡಿದ್ದಾರೆ

ಕನ್ನಡದಲ್ಲಿ ನಟ ಸುದೀಪ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಕೂಡ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅನಿಲ್​ ಕಪೂರ್​ ಅವರು ಅತಿ ಕಳಪೆ ನಿರೂಪಕ ಎಂಬ ಟೀಕೆಗೆ ಒಳಗಾಗಿದ್ದಾರೆ. ಈಗ ಹಿಂದಿ ‘ಬಿಗ್​ ಬಾಸ್​ ಒಟಿಟಿ 3’ ಕೊನೇ ಹಂತ ತಲುಪಿದೆ. ಶೀಘ್ರದಲ್ಲೇ ಇದರ ಫಿನಾಲೆ ನಡೆಯಲಿದೆ. ಇಷ್ಟು ದಿನಗಳ ಕಾಲ ಅನಿಲ್​ ಕಪೂರ್​ ಅವರ ನಿರೂಪಣೆಯನ್ನು ನೋಡಿದ ವೀಕ್ಷಕರು ಬೇಸತ್ತಿದ್ದಾರೆ. ಇನ್ನೆಂದೂ ಅನಿಲ್​ ಕಪೂರ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡುವುದು ಬೇಡ ಎಂದು ಜನರು ತಾಕೀತು ಮಾಡುತ್ತಿದ್ದಾರೆ.

ಇದನ್ನೂ ಓದಿ: Bigg Boss OTT 3: ‘ಅತ್ತಿಗೆ, ನೋಡಲು ಬ್ಯೂಟಿಫುಲ್‌’ ಅಂದಿದ್ದೇ ತಡ ಕೆನ್ನೆಗೆ ಬಾರಿಸಿಯೇ ಬಿಟ್ಟ ಇಬ್ಬರು ಹೆಂಡತಿಯರ ಮುದ್ದಿನ ಗಂಡ!

ಈ ಶೋನಲ್ಲಿ ರಣವೀರ್ ಶೋರೆ, ಲವಕೇಶ್ ಕಟಾರಿಯಾ, ಸನಾ ಸುಲ್ತಾನ್, ಸನಾ ಮಕ್ಬುಲ್, ಸಾಯಿ ಕೇತನ್ ರಾವ್, ಶಿವನಿ ಕುಮಾರಿ, ವಿಶಾಲ್ ಪಾಂಡೆ, ನೇಜಿ, ಅರ್ಮಾನ್ ಮಲಿಕ್ ಮತ್ತು ಕೃತಿಕಾ ಮಲಿಕ್ ಬಿಗ್‌ ಬಾಸ್‌ ಸ್ಪರ್ಧಿಗಳು.

Continue Reading

ಬಿಗ್ ಬಾಸ್

Bigg Boss Marathi 5: ಶುರುವಾಯ್ತು ಮರಾಠಿ ಬಿಗ್​ಬಾಸ್ 5; ಈ ಬಾರಿ ರಿತೇಶ್ ದೇಶ್​ಮುಖ್ ನಿರೂಪಕ!

Bigg Boss Marathi 5: ಬಿಗ್ ಬಾಸ್ ಮರಾಠಿ 5 ಅನ್ನು ಘೋಷಿಸಿದಾಗಿನಿಂದ ಹೊಸ ಸೀಸನ್‌ನಲ್ಲಿ ಯಾರು ಭಾಗವಹಿಸುತ್ತಾರೆ ಎಂಬುದರ ಕುರಿತು ಊಹಾಪೋಹಗಳಿವೆ. ಇಲ್ಲಿಯವರೆಗೆ, ಕೋಕನ್ ಹಾರ್ಟೆಡ್ ಗರ್ಲ್ ಎಂದೂ ಕರೆಯಲ್ಪಡುವ ಸಾಮಾಜಿಕ ಮಾಧ್ಯಮದ ಪ್ರಭಾವಿ ಅಂಕಿತಾ ವಾಲಾವಲ್ಕರ್ ಕಾರ್ಯಕ್ರಮದ ಮೊದಲ ಸ್ಪರ್ಧಿ ಎಂದು ದೃಢಪಡಿಸಲಾಗಿದೆ ಎಂದು ವರದಿಗಳಿವೆ.

VISTARANEWS.COM


on

Bigg Boss Marathi 5 premiere ritesh deshmukh co star shubhankar tawde
Koo

ಬೆಂಗಳೂರು: ಬಿಗ್ ಬಾಸ್ ಮರಾಠಿ 5 ಗ್ರ್ಯಾಂಡ್ ಪ್ರೀಮಿಯರ್‌ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮರಾಠಿಯ ನಾಲ್ಕು ಸೀಸನ್‌ಗಳ ಯಶಸ್ಸಿನ ನಂತರ, ತಯಾರಕರು ಬಿಗ್ ಬಾಸ್ ಮರಾಠಿ 5 ನೊಂದಿಗೆ ಬಂದಿದ್ದಾರೆ. ಹಿಂದಿನ ಸೀಸನ್‌ಗಳಿಗಿಂತ ಭಿನ್ನವಾಗಿ, ಬಿಗ್ ಬಾಸ್ OTT 5 (Bigg Boss Marathi 5) ಅನ್ನು ರಿತೇಶ್ ದೇಶ್‌ಮುಖ್ ಅವರು ಹೋಸ್ಟ್ ಮಾಡಲಿದ್ದಾರೆ. ತೆಲುಗು ಬಿಗ್​ಬಾಸ್ ಇನ್ನೇನು ಕೆಲವು ದಿನಗಳಲ್ಲಿ ಆರಂಭವಾಗಲಿದೆ. ಹಿಂದಿ ಬಿಗ್​ಬಾಸ್​ಗೆ ಸಿದ್ಧತೆ ನಡೆಯುತ್ತಿದೆ. ಕನ್ನಡದಲ್ಲಿಯೂ ಸಿದ್ಧತೆ ಆರಂಭವಾಗಿದೆ. ಇದರ ನಡುವೆ ಮರಾಠಿ ಬಿಗ್​ಬಾಸ್​ ಇಂದಿನಿಂದ ಆರಂಭವಾಗುತ್ತಿದೆ.

ಮರಾಠಿ ಬಿಗ್​ಬಾಸ್ ಸೀಸನ್ 5 ಇಂದು (ಜುಲೈ 28) ಆರಂಭವಾಗುತ್ತಿದ್ದು, ಕಾರ್ಯಕ್ರಮದ ಪ್ರೋಮೋಗಳು, ಸ್ಪರ್ಧಿಗಳ ಪಟ್ಟಿ ಈಗಾಗಲೇ ವೈರಲ್ ಆಗುತ್ತಿದೆ. ವಿಶೇಷವೆಂದರೆ ಮರಾಠಿ ಬಿಗ್​ಬಾಸ್ ಆರಂಭವಾದಾಗಿನಿಂದಲೂ ಇದೇ ಮೊದಲ ಬಾರಿಗೆ ಶೋನ ನಿರೂಪಕರು ಬದಲಾಗಿದ್ದು, ಕಿಚ್ಚ ಸುದೀಪ್​ರ ಆಪ್ತ ಗೆಳೆಯ ರಿತೇಶ್ ದೇಶ್​ಮುಖ್​ ಈ ಬಾರಿ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಬಿಗ್ ಬಾಸ್ ಮರಾಠಿ 5 ಅನ್ನು ಘೋಷಿಸಿದಾಗಿನಿಂದ ಹೊಸ ಸೀಸನ್‌ನಲ್ಲಿ ಯಾರು ಭಾಗವಹಿಸುತ್ತಾರೆ ಎಂಬುದರ ಕುರಿತು ಊಹಾಪೋಹಗಳಿವೆ. ಇಲ್ಲಿಯವರೆಗೆ, ಕೋಕನ್ ಹಾರ್ಟೆಡ್ ಗರ್ಲ್ ಎಂದೂ ಕರೆಯಲ್ಪಡುವ ಸಾಮಾಜಿಕ ಮಾಧ್ಯಮದ ಪ್ರಭಾವಿ ಅಂಕಿತಾ ವಾಲಾವಲ್ಕರ್ ಕಾರ್ಯಕ್ರಮದ ಮೊದಲ ಸ್ಪರ್ಧಿ ಎಂದು ದೃಢಪಡಿಸಲಾಗಿದೆ ಎಂದು ವರದಿಗಳಿವೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಬಾರಿ ನಿರೂಪಕರನ್ನು ಬದಲಾಯಿಸಿದ್ದು, ಶೋಗೆ ಇನ್ನಷ್ಟು ಮಾದಕತೆ, ಗ್ಲಾಮರ್ ತುಂಬುವ ಪ್ರಯತ್ನ ಮಾಡಲಾಗುತ್ತಿದೆ. ಸುದೀಪ್ ನಟಿಸಿದ ಮೊದಲ ಹಿಂದಿ ಸಿನಿಮಾ ‘ರಣ್’ನಲ್ಲಿ ರಿತೇಶ್ ದೇಶ್​ಮುಖ್ ಸಹ ನಾಯಕನಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಅಮಿತಾಭ್‌ ಬಚ್ಚನ್ ಸಹ ನಟಿಸಿದ್ದರು. ಈ ಹಿಂದೆ ಮರಾಠಿ ಬಿಗ್​ಬಾಸ್ ಶೋ ಅನ್ನು ಹಿರಿಯ ನಟ, ನಿರ್ದೇಶಕ ಮಹೇಶ್ ಮಾಂಜ್ರೆಕರ್ ನಿರೂಪಣೆ ಮಾಡುತ್ತಿದ್ದರು.

ಬಿಗ್ ಬಾಸ್ ಮರಾಠಿ 5 ರಲ್ಲಿ ಶುಭಂಕರ್ ಮತ್ತು ಅಂಕಿತಾ ಅವರಲ್ಲದೆ ಅರ್ಬಾಜ್ ಪಟೇಲ್, ವಿವೇಕ್ ಸಾಂಗ್ಲೆ, ಚೇತನ್ ವಡ್ನೆರೆ ಮತ್ತು ವರ್ಷಾ ಉಸ್ಗಾಂವ್ಕರ್ ಕೂಡ ಭಾಗವಹಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ, ಈ ಬಗ್ಗೆ ಅಧಿಕೃತ ಪ್ರಕಟಣೆ ಇನ್ನೂ ಹೊರಬೀಳಬೇಕಿದೆ. ಜುಲೈ 28 ರಂದು ರಾತ್ರಿ 9 ಗಂಟೆಗೆ ಕಲರ್ಸ್ ಮರಾಠಿ ಮತ್ತು ಜಿಯೋ ಸಿನಿಮಾದಲ್ಲಿ ಪ್ರಸಾರವಾಗಲಿದೆ.

Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಬಿಗ್ ಬಾಸ್

Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?

Bigg Boss Kannada: ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

VISTARANEWS.COM


on

Bigg Boss Kannada paru fame mokshita pai participate season 11
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ವತಃ ನಟಿಯೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್​ಬಾಸ್​ಮನೆ ಹೋಗುತ್ತಾರೆ ಎನ್ನಲಾಗಿತ್ತು. ಇದೀಗ ನಟಿ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯಿ ನೀಡಿ ʻʻಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ . ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲʼʼ ಎಂದಿದ್ದಾರೆ.

ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

Continue Reading
Advertisement
National Handloom day 2024
ಫ್ಯಾಷನ್30 mins ago

National Handloom day 2024: ಕರ್ನಾಟಕದ ಹೆಮ್ಮೆಯ ವಿಶ್ವ ಪ್ರಸಿದ್ಧ ಹ್ಯಾಂಡ್‌ ಲೂಮ್‌ ಸೀರೆಗಳಿವು

Viral Video
Latest40 mins ago

Viral Video: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

Vinesh Phogat
ಕ್ರೀಡೆ52 mins ago

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

Lalbagh Flower Show
ಕರ್ನಾಟಕ1 hour ago

Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

Viral Video
Latest1 hour ago

Viral Video: ರೀಲ್ಸ್‌ಗಾಗಿ ಬೆಡ್‌ರೂಮ್‌ನಲ್ಲಿ ಅರೆನಗ್ನ ಗೆಳತಿ ಕೈಗೆ ಪಿಸ್ತೂಲ್ ಕೊಟ್ಟ ಪೊಲೀಸ್ ಅಧಿಕಾರಿ!

Viral News
Latest1 hour ago

Viral News: ಚಹಾ ಮಾರಾಟದಿಂದ ಇವರಿಗೆ ಪ್ರತಿ ತಿಂಗಳು 2 ಲಕ್ಷ ರೂ. ಆದಾಯ!

Viral video
ವೈರಲ್ ನ್ಯೂಸ್2 hours ago

Viral Video: ಐದನೇ ಮಹಡಿಯಿಂದ ಬಾಲಕಿ ಮೇಲೆ ಬಿದ್ದ ಶ್ವಾನ; ಆಮೇಲೆ ಆಗಿದ್ದೇನು? ವಿಡಿಯೋ ಇದೆ

OTT Releases
ಸಿನಿಮಾ2 hours ago

OTT Releases: ಇಂಡಿಯನ್ 2, ಟರ್ಬೊ ಸೇರಿದಂತೆ ಹಲವು ಹೊಸ ಚಿತ್ರಗಳು ಈ ವಾರ ಒಟಿಟಿಯಲ್ಲಿ!

Gowri Movie Saanya Iyer Samar Lankesh eating dosa with together
ಸಿನಿಮಾ2 hours ago

Gowri Movie: ಸಮರ್ಜಿತ್‌ಗೆ ನಾಚಿಕೆಯಿಂದ ದೋಸೆ ತಿನ್ನಿಸಿದ ಸಾನ್ಯಾ ಅಯ್ಯರ್; ಇದೇನು ಡೇಟಿಂಗಾ ಎಂದು ಪ್ರಶ್ನೆ ಇಟ್ಟ ಫ್ಯಾನ್ಸ್!

Self Harming
ಕರ್ನಾಟಕ2 hours ago

Self Harming: ಇನ್‍ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಯುವಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌