Bigg Boss Kannada | ರೂಪೇಶ್‌ ರಾಜಣ್ಣಗೆ ತಪ್ಪು ಒಪ್ಪಿನ ಕ್ಲಾಸ್‌ ತೆಗೆದುಕೊಂಡ ಕಿಚ್ಚ! - Vistara News

ಬಿಗ್ ಬಾಸ್

Bigg Boss Kannada | ರೂಪೇಶ್‌ ರಾಜಣ್ಣಗೆ ತಪ್ಪು ಒಪ್ಪಿನ ಕ್ಲಾಸ್‌ ತೆಗೆದುಕೊಂಡ ಕಿಚ್ಚ!

ರೂಪೇಶ್‌ ರಾಜಣ್ಣ ಅವರು ಮನೆಯಲ್ಲಿ ‌ (Bigg Boss Kannada) 84 ದಿನ ಕಳೆದ್ದರೂ ತಮ್ಮ ತಪ್ಪನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ ಎಂಬುದರ ಕುರಿತು ಚರ್ಚೆ ಮಾಡಿದ್ದಾರೆ ಕಿಚ್ಚ ಸುದೀಪ್‌.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 9ರಲ್ಲಿ (Bigg Boss Kannada ) ರೂಪೇಶ್‌ ರಾಜಣ್ಣ ಅವರಿಗೆ ಕಿಚ್ಚ ಸುದೀಪ್‌ ವೀಕೆಂಡ್‌ ಪಂಚಾಯಿತಿಯಲ್ಲಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ರೂಪೇಶ್‌ ರಾಜಣ್ಣ ಅವರು ಮನೆಯಲ್ಲಿ 84 ದಿನಗಳು ಕಳೆದ್ದರೂ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ ಎಂಬುದರ ಕುರಿತು ಚರ್ಚೆ ಮಾಡಿದ್ದಾರೆ ಕಿಚ್ಚ ಸುದೀಪ್‌.

ಕಿಚ್ಚ ಸುದೀಪ್‌ ಅವರು ರೂಪೇಶ್‌ ರಾಜಣ್ಣ ಅವರಿಗೆ ʻʻನೀವು ಏನೋ ತಪ್ಪು ಮಾಡಿರುತ್ತೀರಿ, ಅದರಲ್ಲಿ ಏನೋ ತಪ್ಪಿದೆ ಎಂದು ನಾನು ಹೇಳಿದಾಗ, ನೀವು ಅದನ್ನು ಒಪ್ಪಿಕೊಳ್ಳುವುದಿಲ್ಲ ನಾನೇ ಸರಿ ಎಂದು ಹೇಳುತ್ತೀರಿ. ಪ್ರತಿಯೊಬ್ಬರ ತಪ್ಪು ಅಥವಾ ನಿಮಗೆ ತಪ್ಪು ಅನಿಸಿರಬಹುದು ಅದರ ಬಗ್ಗೆ ಮಾತನಾಡುತ್ತೀರಿ. ನೆನಪಿಟ್ಟುಕೊಳ್ಳುತ್ತೀರಿ. ಚರ್ಚೆ ಮಾಡುತ್ತೀರಿ. ಅವರು ಒಪ್ಪುವ ತನಕ ನೀವು ಮಾತನಾಡುತ್ತೀರಿ. ಯಾರಾದರೂ ನಿಮ್ಮಲ್ಲಿ ತಪ್ಪು ಕಂಡಲ್ಲಿ ನಿಮಗೆ ಹೇಳಿದ್ದರೆ ಅದನ್ನು ಒಪ್ಪಿಕೊಳ್ಳುವುದು ಸ್ವಲ್ಪ ಸಮಸ್ಯೆ ಆಗುತ್ತದೆ ನಿಮಗೆ ಎಂದು ಕೇಳಿದ್ದಾರೆ.

Bigg Boss Kannada
Bigg Boss Kannada

ಇದನ್ನೂ ಓದಿ | Bigg Boss Kannada | ʼಕಳಪೆʼ ನೀಡುವಾಗ ಬೇಸರ ಹೊರಹಾಕಿದ ಅಮೂಲ್ಯ ಗೌಡ!

ರೂಪೇಶ್‌ ರಾಜಣ್ಣ ಈ ಬಗ್ಗೆ ಪ್ರತಿಕ್ರಿಯೆ ನೀಡಿ ʻʻನನಗೆ ಒಬ್ಬರು ಹೇಳಿದಾಗ ಅದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟವಿದೆ. ನನ್ನಿಂದ ಏನಾದರೂ ತಪ್ಪಾಗಿದ್ದರೆ ಖಂಡಿತ ಒಪ್ಪಿಕೊಳ್ಳುತ್ತೇನೆ. ನನ್ನ ತಪ್ಪು ಇಲ್ಲ ಎಂದಾಗ ನಾನು ಒಪ್ಪಿಕೊಳ್ಳುವುದಿಲ್ಲʼʼಎಂದಿದ್ದಾರೆ. ದಿವ್ಯಾ ಉರುಡುಗ ಈ ಬಗ್ಗೆ ಮಾತನಾಡಿ ʻʻಯಾವುದೇ ವಿಚಾರವನ್ನು ರೂಪೇಶ್‌ ರಾಜಣ್ಣ ಅವರು ಒಪ್ಪಿಕೊಳ್ಳುವುದಿಲ್ಲ. ಹುಡುಗಿಯರ ಜತೆ ಜೋರಾಗಿ ಮಾತನಾಡುತ್ತಾರೆ ಹಾಗೆ ಮಾತನಾಡಬೇಡಿ ಎಂದು ಹೇಳಿದ್ದರೆ ಹೊರಗಡೆ ಹೋಗಿ ನೋಡಿ. ನಾನು ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಡುತ್ತೇನೆ ಎನ್ನುತ್ತಾರೆ. ಅವರು ಮಾಡಿರುವುದೇ ಸರಿ ಎನ್ನುತ್ತಾರೆʼ ʼಎಂದರು. ದೀಪಿಕಾ ದಾಸ್‌ ಈ ಬಗ್ಗೆ ಮಾತನಾಡಿ ʻʻರಾಜಣ್ಣ ಅವರಿಗೆ ಸ್ವೀಕಾರ ಮನೋಭಾವನೆ ಸ್ವಲ್ಪವೂ ಇಲ್ಲ. ಜನರಿಗೆ ಹೇಗೆ ಬಿಂಬಿಸಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತುʼʼ ಎಂದಿದ್ದಾರೆ.

ಸುದೀಪ್‌ ನಂತರದಲ್ಲಿ ರೂಪೇಶ್‌ ರಾಜಣ್ಣ ಅವರಲ್ಲಿ ಮಾತನಾಡಿ, ʻʻನಿಮ್ಮಲ್ಲಿ ಈ ಗುಣ ಇದೆಯಾ, ನಿಮಗೆ ಗೊತ್ತ ಎಂದು ಅರ್ಥ ಮಾಡಿಸಿಲು ಈ ಪ್ರಶ್ನೆ ಕೇಳಿದೆ ನಾನು. ನೀವು ಉತ್ತರ ಕೊಡಲಿಲ್ಲ ಎನ್ನುವ ಕಾರಣಕ್ಕೆ ಇನ್ನಿತರರ ಬಳಿ ಉತ್ತರ ಕೇಳಿದ್ದು. ಮನೆಯಲ್ಲಿ ಎಷ್ಟೇ ಕನ್ನಡಿಗಳು ಇದ್ದರೂ ರಾಜಣ್ಣ ನಾನು ಒಂದು ಒಂದು ಕನ್ನಡಿ ತೋರಿಸಬೇಕಾಗುತ್ತದೆʼʼ ಎಂದು ಹೇಳಿದರು.

Bigg Boss Kannada
Bigg Boss Kannada

ಇದನ್ನೂ ಓದಿ | Bigg Boss Kannada | ಬಿಗ್‌ ಬಾಸ್‌ ಮನೆಯಿಂದ ಹೊರ ನಡೆದ ಅನುಪಮಾ ಗೌಡ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಬಿಗ್ ಬಾಸ್

Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?

Bigg Boss Kannada: ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

VISTARANEWS.COM


on

Bigg Boss Kannada paru fame mokshita pai participate season 11
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ವತಃ ನಟಿಯೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್​ಬಾಸ್​ಮನೆ ಹೋಗುತ್ತಾರೆ ಎನ್ನಲಾಗಿತ್ತು. ಇದೀಗ ನಟಿ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯಿ ನೀಡಿ ʻʻಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ . ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲʼʼ ಎಂದಿದ್ದಾರೆ.

ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

Continue Reading

ಸಿನಿಮಾ

Soniya Bansal: ಪ್ರಶಸ್ತಿ ಸಮಾರಂಭದ ವೇಳೆ ಖ್ಯಾತ ʻಬಿಗ್ ಬಾಸ್ʼ ಸ್ಪರ್ಧಿಗೆ ಪ್ಯಾನಿಕ್ ಅಟ್ಯಾಕ್‌; ಆಸ್ಪತ್ರೆಗೆ ದಾಖಲು

Soniya Bansal: ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ.

VISTARANEWS.COM


on

Soniya Bansal Suffers Panic Attack Bigg Boss 17 Fame Hospitalised
Koo

ಬೆಂಗಳೂರು: ಕಿರುತೆರೆ ನಟಿ, ಹಿಂದಿ ಬಿಗ್ ಬಾಸ್ 17 ರ ಸ್ಪರ್ಧಿ ಸೋನಿಯಾ ಬನ್ಸಾಲ್ ಅವರು (Soniya Bansal) ಜುಲೈ 2 ರಂದು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಜುಲೈ 21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ಮೂಲಗಳ ಪ್ರಕಾರ ನಟಿಗೆ ಹೃದಯಾಘಾತ ಕೂಡ ಆಗಿದೆ ಎನ್ನಲಾಗಿದೆ.

ಪ್ರಶಸ್ತಿ ಸಮಾರಂಭದಲ್ಲಿ ನಟಿ ಆರೋಗ್ಯ ಸಮಸ್ಯೆಯ ಬಗ್ಗೆ ದೂರು ನೀಡಿದ್ದರು. ಮೂಲಗಳ ಪ್ರಕಾರ ನಟಿ, ಕಳೆದ ನಾಲ್ಕು ತಿಂಗಳಿನಿಂದ ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನಟಿ ಮಾನಸಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದರೂ ಎಂದೂ ಹೇಳಲಾಗುತ್ತಿದೆ. ಸೋನಿಯಾ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಟಿಗೆ ಅನೇಕ ದಿನಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.  

ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್‌ನ 17 ನೇ ಸೀಸನ್‌ನಲ್ಲಿ ಕಾಣಿಸಿಕೊಂಡಾಗ ಸೋನಿಯಾ ಬನ್ಸಾಲ್ ಸಾಕಷ್ಟು ಫೇಮ್‌ ಪಡೆದರು. ಆ ಸೀಸನ್‌ನಲ್ಲಿ ಹಾಸ್ಯನಟ ಮುನಾವರ್ ಫರೂಕಿ ಗೆದ್ದರು ಮತ್ತು ಅಭಿಷೇಕ್ ಕುಮಾರ್ ರನ್ನರ್ ಅಪ್ ಆಗಿದ್ದರು.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ನಟನೆಗೂ ಮುಂಚೆ ಸೋನಿಯಾ ಬನ್ಸಾಲ್ ಮಾಡೆಲ್‌ ಆಗಿದ್ದರು. ಬಳಿಕ ಸಂಗೀತ ವೀಡಿಯೊಗಳು ಮತ್ತು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು.  ‘ಗೇಮ್ 100 ಕೋಟಿ ಕಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ನಂತರ ‘ನಾಟಿ ಗ್ಯಾಂಗ್’, ‘ಡಬ್ಕಿ’ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ನಟನೆಯ  ‘ಶೂರ್ವೀರ್’ ವೆಬ್ ಸರಣಿಯಲ್ಲಿ ಶೀಘ್ರದಲ್ಲಿಯೇ ತೆರೆ ಕಾಣಲಿದೆ. ಇಷ್ಟೇ ಅಲ್ಲದೇ ನಟಿ, ಈ ವರ್ಷ ತೆಲುಗು ಚಿತ್ರಗಳಾದ  ತೆಲುಗಿನ ‘ಧೀರ’ ಮತ್ತು ‘ಯೆಸ್ ಬಾಸ್’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading

ಬಿಗ್ ಬಾಸ್

Actress Siri: ನಾನೇನು ʻಮದುವೆʼಯ ವಿರೋಧಿ ಅಲ್ಲ, ವಿವಾಹ ಬೇಡ ಎಂದೂ ಅಂದುಕೊಂಡಿರಲಿಲ್ಲ ಎಂದ ಸಿರಿ!

Actress Siri: ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

VISTARANEWS.COM


on

Actress Siri Reaction about late marriage
Koo

ಬೆಂಗಳೂರು: `ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿರುವುದು ಗೊತ್ತೇ ಇದೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದರು. ಇದೀಗ ವಿಸ್ತಾರದೊಂದಿಗೆ ಮದುವೆ ಬಗ್ಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿರಲಿಲ್ಲ. ನನ್ನನ್ನು ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದು ಇತ್ತುʼಎಂದು ಸಿರಿ ಮಾತನಾಡಿದರು.

ಸಿರಿ ಮಾತನಾಡಿ ʻʻಇಷ್ಟು ವರ್ಷ ನನಗೆ ಮದುವೆ ಬಗ್ಗೆ ಏನೂ ಅನ್ನಿಸುತ್ತಿರಲಿಲ್ಲ. ನಮ್ಮ ತಾಯಿ ಬಿಟ್ಟರೆ ನಾನು ಮದುವೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನಾನು ನನ್ನ ತಾಯಿಗೆ ಒಂದು ಮಾತು ಹೇಳುತ್ತ ಇದ್ದೆ. ನಿನ್ನ ಮಗಳು ಖುಷಿಯಾಗಿ ಇರಬೇಕು. ಅದೇ ಮುಖ್ಯ ಅಂದರೆ ನೋಡು ಅಂತಿದ್ದೆ. ಆದರೆ ಬಿಗ್‌ ಬಾಸ್‌ ಆದ ಬಳಿಕ ಆಗಬೇಕು ಎಂಬ ಮನಸ್ಸು ಬಂತು. ಆದರೆ ಒತ್ತಡ ಅಂತೇನಿಲ್ಲ. ಹೀಗೆ ಆಗಬೇಕು ಎಂದು ಅನ್ನಿಸಿತ್ತು. ಹೊರಗೆ ಬಂದ ಮೇಲೆ ಈ ಬಗ್ಗೆ ನಿರ್ಧಾರ ಮಾಡಿದೆ. ಬಳಿಕ ಇವರನ್ನ ಮದುವೆ ಆಗಬಹುದು ಎಂದು ಅನ್ನಿಸಿದ ಮೇಲೆ ನಾನು ಮದುವೆಯಾದೆʼʼಎಂದರು.

ʻʻನಾನು ಯಾವತ್ತೂ ಮದುವೆ ಬೇಡ ಎಂದು ಅಂದುಕೊಂಡಿಲ್ಲ. ನನ್ನ ಅರ್ಥ ಮಾಡಿಕೊಳ್ಳುವವರು ಸಿಗಬೇಕು ಎಂದೇ ಇತ್ತು. ಮದುವೆ ವಿರುದ್ಧನೂ ಅಲ್ಲ ನಾನು. ನನ್ನ ಹಣೆಬರಹದಲ್ಲಿ ಈಗ ಬರ್ದಿದೆ. ಮನೆಯಲ್ಲಿ ಪ್ರಯತ್ನ ಮಾಡಿದ್ದರು. ಆದರೆ ಈಗ ಆ ಕಾಲ ಕೂಡಿ ಬಂದಿದೆ. ಮದುವೆ ಬೇಗ ಆಗಿ ಏನಾದರೂ ಸಮಸ್ಯೆ ಮಾಡಿಕೊಳ್ಳುವುದಿಕ್ಕಿಂತ , ನಾನು ರೆಡಿ ಇದ್ದೀನಿ.. ಎಂದು ರೆಡಿ ಆದ ಮೇಲೆ ಮದುವೆ ಮದುವೆಯಾಗೋದು ಸರಿ. ಯಾರಿಗಾದರೂ ಇದು ದೊಡ್ಡ ನಿರ್ಧಾರ. ನನಗೆ ನನ್ನ ಪತಿ ಬದುಕು ಸೀರಿಯಲ್‌ ನಿಂದ ಪರಿಚಯ. ಇಬ್ಬರು ಸ್ನೇಹಿತರಾಗಿದ್ದೇವು. ಬಳಿಕ ಮತ್ತೆ ವರ್ಷಗಳ ನಂತರ ಟಚ್‌ನಲ್ಲಿ ಬಂದೆವು. ನಂತರ ಇಬ್ಬರು ಮದುವೆಯಾಗೋಣ ಎಂದು ನಿರ್ಧಾರ ಮಾಡಿದೆವು. ಈಗಲೂ ಫ್ರೆಂಡ್‌ ಜತಗೆ ಇದ್ದೇನೆ ಎಂದು ಅನ್ನಿಸುತ್ತೆ. ಇಬ್ಬರಲ್ಲೂ ಪ್ರಪೋಸ್‌ ಏನೂ ಆಗಿಲ್ಲ. ಮಾತುಕತೆ ಆಯ್ತು. ಹಾಗೇ ಮದುವೆ ಆದೆವುʼʼಎಂದರು.

ಇದನ್ನೂ ಓದಿ: Actress Siri: ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀವೆ; ಪತಿಯನ್ನು ಬಣ್ಣಿಸಿದ ಸಿರಿ!

ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್​ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

Continue Reading
Advertisement
Mumbai Girl
ದೇಶ2 mins ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ10 mins ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ30 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ40 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ51 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ60 mins ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್2 hours ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ3 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ3 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌