Munawar Faruqui: ʻಬಿಗ್‌ ಬಾಸ್‌ʼ ವಿನ್ನರ್‌ ಮುನಾವರ್ ಫಾರೂಖಿ ಅಭಿಮಾನಿ ವಿರುದ್ಧ ಎಫ್‌ಐಆರ್! - Vistara News

ಬಿಗ್ ಬಾಸ್

Munawar Faruqui: ʻಬಿಗ್‌ ಬಾಸ್‌ʼ ವಿನ್ನರ್‌ ಮುನಾವರ್ ಫಾರೂಖಿ ಅಭಿಮಾನಿ ವಿರುದ್ಧ ಎಫ್‌ಐಆರ್!

Munawar Faruqui: ಇದೀಗ ಮುನಾವರ್ ಫಾರೂಖಿ ವಿಜಯೋತ್ಸವವನ್ನು ರೆಕಾರ್ಡ್ ಮಾಡುತ್ತಿದ್ದ ಡ್ರೋನ್ ಕ್ಯಾಮೆರಾ ಆಪರೇಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮುನಾವರ್ ಅವರು ತಮ್ಮ ಕಾರಿನ ಸನ್‌ರೂಫ್ ಮೇಲೆ ನಿಂತು ಫ್ಯಾನ್ಸ್‌ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

VISTARANEWS.COM


on

FIR against Munawar Faruqui fan for illegal drone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಹಿಂದಿಯ ಬಿಗ್ ಬಾಸ್ 17ನೇ (Bigg Boss 17)ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದಾರೆ. ಮುನಾವರ್ ಅವರ ಗೆಲುವನ್ನು ಆಚರಿಸಲು ಮುಂಬೈನ ಡೋಂಗ್ರಿಯಲ್ಲಿ ಹೆಚ್ಚಿನ ಜನರು ಜಮಾಯಿಸಿದ್ದರು. ಇದೀಗ ಮುನಾವರ್ ಫಾರೂಖಿ ವಿಜಯೋತ್ಸವವನ್ನು ರೆಕಾರ್ಡ್ ಮಾಡುತ್ತಿದ್ದ ಡ್ರೋನ್ ಕ್ಯಾಮೆರಾ ಆಪರೇಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಮುನಾವರ್ ಅವರು ತಮ್ಮ ಕಾರಿನ ಸನ್‌ರೂಫ್ ಮೇಲೆ ನಿಂತು ಫ್ಯಾನ್ಸ್‌ ಜತೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೊಗಳು ವೈರಲ್‌ ಆಗಿದೆ.

ಮುನಾವರ್ ಫಾರೂಖಿ ಅಭಿಮಾನಿ ವಿರುದ್ಧ ಎಫ್‌ಐಆರ್

ವರದಿಯ ಪ್ರಕಾರ, ಮುನಾವರ್ ಫಾರೂಖಿ ಅವರ ಅಭಿಮಾನಿ ಅರ್ಬಾಜ್ ಯೂಸುಫ್ ಖಾನ್ (26) ಮುಂಬೈನ ಡೋಂಗ್ರಿಯಲ್ಲಿ ಆಚರಣೆಯ ಸಂದರ್ಭದಲ್ಲಿ ಡ್ರೋನ್‌ ಬಳಕೆ ಮಾಡಿದ್ದಾರೆ. ಡ್ರೋನ್ ಬಳಸಲು ಅನುಮತಿಯಿಲ್ಲದ ಕಾರಣ ಡ್ರೋನ್ ಕ್ಯಾಮೆರಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಡ್ರೋನ್ ಬಳಕೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಆಯುಕ್ತರ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ಕ್ಯಾಮೆರಾಗಳು ಸೇರಿದಂತೆ ಇತರ ವಸ್ತುಗಳ ಮೇಲೆ ಪೊಲೀಸರು ನಿಷೇಧವನ್ನು ಹೊರಡಿಸಿದ್ದರು.

ಇದನ್ನೂ ಓದಿ: Munawar Faruqui: ʻಬಿಗ್‌ ಬಾಸ್‌ ವಿನ್ನರ್‌ʼ ಮುನಾವರ್‌ನನ್ನು ಮುತ್ತಿಕೊಂಡ ಫ್ಯಾನ್ಸ್‌; ನೆಲಕ್ಕೆ ಬೀಳೊದೊಂದು ಬಾಕಿ!

ಮುನಾವರ್ ಫಾರೂಖಿ ವಿಜೇತರಾದ ಕಾರಣ ಮುಂಬೈನ ಡೋಂಗ್ರಿಯಲ್ಲಿ ಅವರ ಫ್ಯಾನ್ಸ್‌ ಸಂಭ್ರಮಾಚರಣೆ ಮಾಡಿದ್ದರು. ವೀಡಿಯೊದಲ್ಲಿ ಸನ್‌ರೂಫ್ ತೆರೆದು ಮುನಾವರ್ ಫ್ಯಾನ್ಸ್‌ ಜತೆ ಫೋಟೊ ತೆಗೆಸಿಕೊಳ್ಳುತ್ತಿರುವುದು ನೀವು ಕಾಣಬಹುದು. ಅವರ ಕಾರಿನ ಸುತ್ತ ಜನಸಾಗರವೇ ನೆರೆದಿತ್ತು. ಅಭಿಮಾನಿಗಳು ಕೇಕೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ. ಚಿತ್ರಗಳನ್ನು ಕ್ಲಿಕ್ಕಿಸಿ ಶುಭಾಶಯ ಕೋರಿದ್ದಾರೆ. ಮುನಾವರ್ ಕೂಡ ಫ್ಯಾನ್ಸ್‌ಗೆ ಕೈಮುಗಿದು ಬೆಂಬಲಕ್ಕೆ ಕೃತಜ್ಞತೆ ತಿಳಿಸಿದ್ದಾರೆ.

ಇನ್ನು ಕೆಲವರು ಮುನಾವರ್‌ ಗೆದ್ದ ಬಳಿಕ ಇದು ಫಿಕ್ಸಿಂಗ್‌ ಎಂದು ಆರೋಪ ಕೂಡ ಮಾಡಿದ್ದರು. ಈ ಬಗ್ಗೆ ಮುನಾವರ್‌ ಕೂಡ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ʻನಾನು ಫಿಕ್ಸಿಂಗ್​ ವಿನ್ನರ್​ ಆಗಿದ್ದಿದ್ದರೆ ಇಷ್ಟೆಲ್ಲ ಕಷ್ಟ ಅನುಭವಿಸಬೇಕಿರಲಿಲ್ಲ. ಎಲ್ಲವೂ ನನಗೆ ಸುಲಭವಾಗಿ ಸಿಗುತ್ತಿತ್ತು. ಇಡೀ ಸೀಸನ್​ನಲ್ಲಿ ನಾನು ಕಷ್ಟಪಟ್ಟಿದ್ದೇನೆ. ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುವವರು ಕುಳಿತುಕೊಂಡು ಪೂರ್ತಿ ಸೀಸನ್​ನ ಸಂಚಿಕೆಗಳನ್ನು ನೋಡಲಿ. ಫಿಕ್ಸಿಂಗ್​ ಅಲ್ಲ ಎಂಬುದು ಆಗ ಗೊತ್ತಾಗುತ್ತದೆʼʼಎಂದಿದ್ದರು.

ಬಿಗ್ ಬಾಸ್ 17 ಗೆದ್ದಿರುವ ಮುನಾವರ್ ಫರೂಖಿ ಅವರಿಗೆ ಟ್ರೋಫಿ ದೊರೆತಿದ್ದು, ಜತೆಗೆ 50 ಲಕ್ಷ ರೂ. ಬಹುಮಾನ ಕೊಡ ನೀಡಲಾಗಿದೆ. ಇಷ್ಟೇ ಅಲ್ಲದೇ, ಐಷಾರಾಮಿ ಕಾರ್ ಕೂಡ ಬಹುಮಾನ ರೂಪವಾಗಿ ಬಂದಿದೆ. ಅಭಿಷೇಕ್ ಕುಮಾರ್ ಮೊದಲ ರನ್ನರ್ ಅಪ್ ಆದರೆ ನಟಿ ಅಂಕಿತಾ ಲೋಖಂಡೆ ಮತ್ತು ಅರುಣ್ ಮಾಶೆಟ್ಟಿ ಅವರು ಕ್ರಮವಾಗಿ ಎರಡು ಮತ್ತು ಮೂರನೇ ರನ್ನರ್ ಅಪ್ ಆದರು. ಮೂರು ತಿಂಗಳ ಕಾಲ ನಡೆದ ಈ ಶೋ ಜನವರಿ 28, ಭಾನುವಾರ ರಾತ್ರಿ ಅಂತ್ಯಗೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav Buys Mercedes G Wagon
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
Prajwal Revanna Case Revanna denied anticipatory bail today Court allows SIT to file objections
ಕ್ರೈಂ30 mins ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ51 mins ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ54 mins ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ1 hour ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ2 hours ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್2 hours ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು2 hours ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ2 hours ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ54 mins ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ15 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌