BBK Season 10: ತಲೆ ಬೋಳಿಸ್ಕೊಂಡ್ರು ಕಾರ್ತಿಕ್, ತುಕಾಲಿ! ಮನೆಯಲ್ಲೀಗ ‘ಕಾಂಪಿಟೇಶನ್‌ ಹೀಟ್‌’! Vistara News

ಬಿಗ್ ಬಾಸ್

BBK Season 10: ತಲೆ ಬೋಳಿಸ್ಕೊಂಡ್ರು ಕಾರ್ತಿಕ್, ತುಕಾಲಿ! ಮನೆಯಲ್ಲೀಗ ‘ಕಾಂಪಿಟೇಶನ್‌ ಹೀಟ್‌’!

BBK Season 10: ನಿನ್ನೆಯ ನಾಮಿನೇಷನ್ ಟಾಸ್ಕ್‌ನಲ್ಲಿ ಸಂಗೀತಾ, ಕಾರ್ತಿಕ್‌ಗೇ ನಾಮಿನೇಷನ್ ಮಾಡಲು ಅಧಿಕಾರ ಕೊಟ್ಟಿದ್ದರು. ಹಾಗೆಯೇ ಕಾರ್ತಿಕ್ ಕೂಡ ಸಂಗೀತಾಗೆ ನಾಮಿನೇಷನ್‌ ಅಧಿಕಾರ ಕೊಟ್ಟಿದ್ದರು.

VISTARANEWS.COM


on

head was shaved by Karthik, Thukali Competition heat is intense at BBK Season 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರು ವಾರಗಳನ್ನು ಕಳೆದು (BBK Season 10) ಏಳನೇ ವಾರದಲ್ಲಿರುವ ಬಿಗ್‌ಬಾಸ್‌ ಮನೆಯಲ್ಲಿ ‘ಕಾಂಪಿಟೇಶನ್‌ ಹೀಟ್‌’ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಿಸಿ ಈಗ ಸ್ಪರ್ಧಿಗಳ ತಲೆಬೋಳಿಸಿಕೊಳ್ಳುವವರೆಗೂ ಮುಟ್ಟಿದೆ. ಜಿಯೋ ಸಿನಿಮಾದಲ್ಲಿ ಬಿಡುಗಡೆ ಮಾಡಿರುವ ಪ್ರೊಮೋದಲ್ಲಿ ಕಾರ್ತಿಕ್‌ ಮತ್ತು ತುಕಾಲಿ ಸಂತೋಷ್‌ ಅವರ ತಲೆ ಬೋಳಿಸುತ್ತಿರುವ ದೃಶ್ಯ ಜಾಹೀರಾಗಿದೆ.

ಮನೆಯನ್ನು ‘ಗಜಕೇಸರಿ’ ಮತ್ತು ‘ಸಂಪತ್ತಿಗೆ ಸವಾಲ್’ ಎಂಬ ಎರಡು ತಂಡಗಳನ್ನಾಗಿ ವಿಭಾಗಿಸಲಾಗಿದೆ. ‘ಗಜಕೇಸರಿ’ ತಂಡದಲ್ಲಿ ವಿನಯ್, ನಮ್ರತಾ, ಸಂಗೀತಾ, ಸ್ನೇಹಿತ್, ಸಿರಿ, ಪ್ರತಾಪ್‌ ಇದ್ದಾರೆ. ‘ಸಂಪತ್ತಿಗೆ ಸವಾಲ್ ತಂಡದಲ್ಲಿ, ‘ಮೈಕಲ್, ನೀತು, ತನಿಷಾ, ವರ್ತೂರು, ಕಾರ್ತಿಕ್ ಮತ್ತು ತುಕಾಲಿ ಸಂತೋಷ್‌ ಇದ್ದಾರೆ.

ಈ ತಂಡಗಳಿಗೆ ಬಿಗ್‌ಬಾಸ್ ಎದುರಾಳಿ ತಂಡಕ್ಕೆ ಒಂದಾದ ಮೇಲೆ ಒಂದರಂತೆ ಸವಾಲ್ ಹಾಕುವ ಟಾಸ್ಕ್ ಅನ್ನು ನೀಡಿದ್ದಾರೆ. ಅದರ ಭಾಗವಾಗಿ ಸಂಗೀತಾ, ತನ್ನ ಎದುರಾಳಿ ತಂಡದಲ್ಲಿರುವ ಕಾರ್ತಿಕ್ ಮತ್ತು ತುಕಾಲಿ ಅವರು ತಲೆಯನ್ನು ಕ್ಲೀನ್ ಶೇವ್ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದಕ್ಕೆ ವಿರೋಧವೂ ವ್ಯಕ್ತವಾಗಿದೆ. ನಂತರದ ದೃಶ್ಯದಲ್ಲಿ ಕಾರ್ತಿಕ್, ‘ಗೇಮ್‌ಗಾಗಿ, ತಂಡಕ್ಕಾಗಿ ಏನನ್ನಾದ್ರೂ ಮಾಡ್ತೀನಿ. ಬೋಳಿಸಿಕೊಂಡ್ರೂ ಕೂದಲು ಮತ್ತೆ ಬರತ್ತೆ’ ಎಂದು ಹೇಳಿ ತಲೆಬೋಳಿಸಿಕೊಂಡು ಕೂತಿದ್ದಾರೆ.

ನಿನ್ನೆಯ ನಾಮಿನೇಷನ್ ಟಾಸ್ಕ್‌ನಲ್ಲಿ ಸಂಗೀತಾ, ಕಾರ್ತಿಕ್‌ಗೇ ನಾಮಿನೇಷನ್ ಮಾಡಲು ಅಧಿಕಾರ ಕೊಟ್ಟಿದ್ದರು. ಹಾಗೆಯೇ ಕಾರ್ತಿಕ್ ಕೂಡ ಸಂಗೀತಾಗೆ ನಾಮಿನೇಷನ್‌ ಅಧಿಕಾರ ಕೊಟ್ಟಿದ್ದರು. ಕಾರ್ತಿಕ್ ಜತೆಗೆ ಇಷ್ಟು ಸ್ನೇಹದಿಂದ ಇದ್ದ ಸಂಗೀತಾ ಅವರೇ ಕಾರ್ತಿಕ್‌ಗೆ ತಲೆಬೋಳಿಸಿಕೊಳ್ಳುವ ಸವಾಲ್ ಹಾಕಿದ್ದಾರೆ. ಕಾರ್ತಿಕ್ ಇದನ್ನು ಸ್ವೀಕರಿಸಿದ್ದಾರೆ ಕೂಡ.

ಇದನ್ನೂ ಓದಿ: BBK Season 10: ರಕ್ತ ಬಂದ್ರೂ ಜಗ್ಗಲ್ಲ; ಸಂಗೀತಾ-ತನಿಷಾ ಜಗಳ ಮುಗಿಯಲ್ಲ!

ಇದನ್ನೆಲ್ಲ ದಿಗ್ಮೂಢರಾಗಿ ನರೇಂದ್ರ (ಬ್ರಹ್ಮಾಂಡ ಗುರೂಜಿ) ನೋಡುತ್ತ ಕೂತಿರುವುದೂ ಪ್ರೋಮೊದಲ್ಲಿ ಸೆರೆಯಾಗಿದೆ.
ಹಾಗಾದ್ರೆ ಏನಾಗ್ತಿದೆ ಬಿಗ್‌ಬಾಸ್ ಮನೆಯಲ್ಲಿ? ಗೆಲ್ಲುವ ಹಟ ಯಾವ ಅತಿರೇಕಕ್ಕೆ ಸ್ಪರ್ಧಿಗಳನ್ನು ತೆಗೆದುಕೊಂಡು ಹೋಗುತ್ತಿದೆ? ಇದಕ್ಕೆಲ್ಲ ಕಡಿವಾಣ ಬೀಳುತ್ತದೆಯೇ? ಎಂಬುದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

BBK SEASON 10: ಸಂಗೀತಾ ಅವರು ನಾಯಿಯ ಹಾಗೆ ಕೈಗಳನ್ನೂ ಕಾಲಾಗಿಸಿಕೊಂಡು, ಮನೆಯೊಳಗೆ ನಾಯಿಯ ಹಾಗೆ ನಡೆದಾಡುತ್ತ, ಅಳುವ ನಾಯಿಯ ಹಾಗೆ ಕೂಗುತ್ತ ಓಡಾಡುತ್ತಿದ್ದಾರೆ.

VISTARANEWS.COM


on

Tukali imitate sangeetha sringeri
Koo
tukali santosh

‘ಬಿಗ್‌ಬಾಸ್‌ ಮನೆಗೆ ‘ಚಾರ್ಲಿ’ ಬರ್ತಾನೆ ಎನ್ನುವುದು ಸಾಕಷ್ಟು ಸುದ್ದಿಯಾಗಿತ್ತು. ಆದರೆ ಇದುವರೆಗೆ ಚಾರ್ಲಿ (BBK SEASON 10 ) ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ‘ಚಾರ್ಲಿ’ಗೆ ಸಿನಿಮಾದಲ್ಲಿ ಚಿಕಿತ್ಸೆ ನೀಡಿದ್ದ ಡಾಕ್ಟರ್, ಸಂಗೀತಾ ಶೃಂಗೇರಿ ನಾಯಿ ತರ ಆಡ್ತಿದ್ದಾರೆ!

sangeetha bigg boss

ಇದೇನು ಇಷ್ಟು ಕೀಳುಭಾಷೆಯಲ್ಲಿ ಸ್ಪರ್ಧಿಯನ್ನು ಹೀಗಳೆಯುತ್ತಿದ್ದಾರೆ ಎಂದು ಕೋಪಿಸಿಕೊಳ್ಳಬೇಡಿ. ಇದು ಹೀಗಳೆಯಲು ಹೇಳಿದ್ದು ಖಂಡಿತ ಅಲ್ಲ. ಈ ಮಾತು ಅಕ್ಷರಶಃ ಸತ್ಯ! ಸಂಗೀತಾ ಅವರು ನಾಯಿಯ ಹಾಗೆ ಕೈಗಳನ್ನೂ ಕಾಲಾಗಿಸಿಕೊಂಡು, ಮನೆಯೊಳಗೆ ನಾಯಿಯ ಹಾಗೆ ನಡೆದಾಡುತ್ತ, ಅಳುವ ನಾಯಿಯ ಹಾಗೆ ಕೂಗುತ್ತ ಓಡಾಡುತ್ತಿದ್ದಾರೆ.

vinay pavi

ಬಿಗ್‌ಬಾಸ್ ಮನೆಯೊಳಗೆ ಇದೇನೂ ಹೊಸ ಸಮಸ್ಯೆ ಎನ್ನಬೇಡಿ. ಇದು ಬಿಗ್‌ಬಾಸ್ ಅವರೇ ಮನೆಯ ಸ್ಪರ್ಧಿಗಳಿಗೆ ನೀಡಿದ ಹೊಸ ಟಾಸ್ಕ್‌! ‘ಬಿಗ್‌ಬಾಸ್‌ ಸೂಚಿಸಿದ ಚಟುವಟಿಕೆಗಳನ್ನು ಮನೆಯ ಸ್ಪರ್ಧಿಗಳು ಮಾಡಬೇಕು’ ಎಂಬುದು ಈ ವಾರದ ಮೊದಲ ಟಾಸ್ಕ್‌. ಇದರ ಭಾಗವಾಗಿಯೇ ಸಂಗೀತಾ ಅಳುತ್ತಿರುವ ನಾಯಿಯ ಹಾಗೆ ಆಡುತ್ತಿದ್ದಾರೆ. ತುಕಾಲಿ ಸಂತೋಷ್ ಕೂಡ ನಾಯಿಯ ಹಾಗೆ ಆಡುತ್ತ ಅವರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ: BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

namratha pavi poovappa

ಅವಿನಾಶ್‌ ನಾಗಿಣಿಯ ಹಾಗೆ ಆಡುತ್ತಿರುವುದು, ಕಾರ್ತಿಕ್ ಪೆಂಗ್ವಿನ್ ಹಾಗೆ ಕುಪ್ಪಳಿಸುತ್ತಿರುವುದೆಲ್ಲವೂ ಪ್ರೋಮೊದಲ್ಲಿ ಸೆರೆಯಾಗಿದೆ. ಈ ತಮಾಷೆಯ ಟಾಸ್ಕ್‌ಗೆ ಮನೆಮಂದಿಯೆಲ್ಲ ಬಿದ್ದು ಬಿದ್ದು ನಗುತ್ತಿದ್ದಾರೆ.
ವಾರದ ಆರಂಭ ಭರಪೂರ ನಗೆಯೊಂದಿಗೆ ಆರಂಭಗೊಂಡಿದೆ.

tukali varthur santhosh

ಈ ನಗೆಯು ಕೋಪದ ಹೊಗೆಯಾಗಿ ಬದಲಾಗಲು ಜಾಸ್ತಿ ಹೊತ್ತೇನೂ ಬೇಕಾಗಿಲ್ಲ. ಬಿಗ್‌ಬಾಸ್‌ ಮನೆಯಲ್ಲಿ ಯಾವ ಕ್ಷಣದಲ್ಲಿ ಏನಾಗುತ್ತದೆ ಎಂದು ಹೇಳುವುದೇ ಕಷ್ಟ.

Continue Reading

ಬಿಗ್ ಬಾಸ್

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

BBK SEASON 10: ಬೇರೊಬ್ಬರ ರೀತಿ ಮಾತನಾಡುವುದು ಅಥವಾ ನಾಯಿ ಅಳುವ ರೀತಿ ಅಳುವುದು, ಮಿಮಿಕ್ರಿ ಮಾಡುವ ಟಾಸ್ಕ್‌ಗಳನ್ನು ಬಿಗ್‌ ಬಾಸ್‌ ನೀಡಿದ್ದರು. ಇದೀಗ ಈ ಪ್ರೋಮೊ ವೈರಲ್‌ ಆಗುತ್ತಿದ್ದು ತಮಾಷೆ ಹೋಗಿ ಅಮಾಸೆ ಆಗುತ್ತಾ ಟಾಸ್ಕ್? ಎನ್ನುತ್ತಿದ್ದಾರೆ ನೆಟ್ಟಿಗರು.

VISTARANEWS.COM


on

Tukali Santosh Imitate Sangeetha Sringeri
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10 (BBK SEASON 10) ಅಂತೂ ಒಂಬತ್ತನೇ ವಾರಕ್ಕೆ ಕಾಲಿಟ್ಟಿದೆ. ಜಿಯೋ ಸಿನಿಮಾ ಹಂಚಿಕೊಂಡ ಪ್ರೋಮೊ ನೋಡಲು ತಮಾಷೆಯಾಗಿದ್ದರೂ ಮನೆಯಲ್ಲಿ ಅಶಾಂತಿ ಹುಟ್ಟಿಸುವುದು ಗ್ಯಾರಂಟಿ ಎನ್ನುತ್ತಿದ್ದಾರೆ ನೆಟ್ಟಿಗರು. ಈ ವಾರ ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ಒಂದು ಟಾಸ್ಕ್‌ವನ್ನು ನೀಡಿದ್ದರು. ಬೇರೊಬ್ಬರ ರೀತಿ ಮಾತನಾಡುವುದು ಅಥವಾ ನಾಯಿ ಅಳುವ ರೀತಿ ಅಳುವುದು, ಮಿಮಿಕ್ರಿ ಮಾಡುವ ಟಾಸ್ಕ್‌ಗಳನ್ನು ನೀಡಿದ್ದರು. ಇದರಲ್ಲಿ ತುಕಾಲಿ ಅವರು ಸಂಗೀತಾ ಬಗ್ಗೆ ಹೇಳಿರುವ ಮಾತು ಸಖತ್‌ ಹೈಲೈಟ್‌ ಆಗಿದೆ.

ಕಿಚ್ಚನ ಪಂಚಾಯಿತಿಯಲ್ಲಿ ತನಿಷಾ ಅವರು ಸಂಗೀತಾ ಅವರಿಗೆ ನಂಬಿಕೆ ದ್ರೋಹ ಟಾನಿಕ್‌ ನೀಡಿದ್ದರು. ಮಾತ್ರವಲ್ಲ ಸಂಗೀತಾ ಅವರಿಗೆ ದರಂಕಾರ ಪಟ್ಟ ಕೂಡ ಹಲವು ಸ್ಪರ್ಧಿಗಳು ಒಮ್ಮತದಿಂದ ನೀಡಿದ್ದರು. ಇದೀಗ ಬಿಗ್‌ ಬಾಸ್‌ ಸಂಗೀತಾ ಅವರು ನಾಯಿಯ ರೀತಿ ಅನುಕರಣೆ ಮಾಡಲು ಹೇಳಿದ್ದಾರೆ. ಇದಕ್ಕೆ ತುಕಾಲಿ ಸಂತೋಷ್ ನಮ್ಮ ಮನೆಯ ನಾಯಿಯನ್ನು ಹೊರಗಡೆ ಬಿಟ್ಟಿದ್ದೇನೆ ಎಂದಿದ್ದಾರೆ. ಈ ತಮಾಷೆಯ ಮಾತೇ ಸಂಗೀತಾ ಕೋಪಕ್ಕೆ ಕಾರಣವಾಗಬಹುದು ಎನ್ನುತ್ತಿದ್ದಾರೆ ಪ್ರೇಕ್ಷಕರು. ಇನ್ನು ತುಕಾಲಿ ಸಂತು ಹಾಗೂ ಸಂತೋಷ್‌ ಅವರಿಗೆ ಕಾರ್ತಿಕ್‌ ಮತ್ತು ಸಂಗೀತಾ ಅವರ ರೀತಿ ಅನುಕರಣೆ ಮಾಡಲು ಬಿಗ್‌ ಬಾಸ್‌ ಹೇಳಿದ್ದರು. ಅದೇ ರೀತಿ ತುಕಾಲಿ ಸಂತೋಷ್, ಸಂಗೀತಾ ರೀತಿ ಅನುಕರಣೆ ಮಾಡಿದ್ದಾರೆ‌.

ಇದನ್ನೂ ಓದಿ: BBK SEASON 10: ಸಂಗೀತಾ ಜಾಗದಲ್ಲಿ ನಮ್ರತಾ ಇದ್ದಿದ್ದರೆ ʻಪನೀರ್‌ʼ ಕಥೆ ಏನಾಗ್ತಿತ್ತು? ಸ್ನೇಹಿತ್‌ಗೆ ಚಿವುಟಿದ ಸುದೀಪ್‌!

ಕಾರ್ತಿಕ್ ರೀತಿ ವರ್ತೂರು ಸಂತೋಷ್ ನಟಿಸಿದ್ದಾರೆ. ವರ್ತೂರು ಸಂತೋಷ್ ʻʻನಾನು ವಿನಯ್‌ನನ್ನು ಬಿಡೋದಿಲ್ಲ, ಅವರನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಟಾಸ್ಕ್ ಆಡುತ್ತೇನೆʼʼ ಎಂದು ಹೇಳಿದ್ದಾರೆ. ಇದಕ್ಕೆ ತುಕಾಲಿ ಸಂತೋಷ್ ʻʻಅವರನ್ನು ಯಾಕೆ ಮನಸ್ಸಿನಲ್ಲಿ ಇಟ್ಟುಕೊಳ್ಳುತ್ತಿಯಾ? ನನ್ನನ್ನ ಮನಸ್ಸಿನಲ್ಲಿ ಇಟ್ಟುಕೊಂಡು ಆಟವಾಡುʼʼ ಎಂದಿದ್ದಾರೆ. ನಂತರ ವರ್ತೂರು ʻʻನೀವು ವಿನಯ್ ಟೀಮ್‌ಗೆ ಸೇರಿದಾಗ ಏನು ಮಾಡಿದ್ರಿ?ʼʼಎಂದಾಗ, ತುಕಾಲಿ ʻʻನಾನು ಎಲ್ಲಿಗೆ ಹೋದ್ರು ಅಲ್ಲಿ ಎಲ್ಲರಿಗೂ ಗುಂಡಿ ತೋಡಿ ಬರುತ್ತೇನೆʼʼ ಎಂದು ಸಂಗೀತಾ ರೀತಿ ಮಾತನಾಡಿದ್ದಾರೆ. ಇದು ಕೂಡ ಸಂಗೀತಾ ಅವರಿಗೆ ಕೆರಳಿಸುವಂತೆ ಇತ್ತು.

ಅವಿನಾಶ್ ಶೆಟ್ಟಿ ಹಾಗೂ ವಿನಯ್, ಕಾರ್ತಿಕ್, ಸ್ನೇಹಿತ್ ಹಾಗೂ ಸಂಗೀತಾ, ತುಕಾಲಿ‌ ಹಾಗೂ ವರ್ತೂರು ಸಂತೋಷ್ ಟಾಸ್ಕ್‌ನಲ್ಲಿ ಭಾಗಿಯಾಗಿದ್ದಾರೆ. ಅವಿನಾಶ್ ಶೆಟ್ಟಿ ಹಾವಿನ ರೀತಿಯಲ್ಲಿ ವರ್ತಿಸಿದ್ದಾರೆ. ಇದೀಗ ಈ ಪ್ರೋಮೊ ವೈರಲ್‌ ಆಗುತ್ತಿದ್ದು ತಮಾಷೆ ಹೋಗಿ ಅಮಾಸೆ ಆಗುತ್ತಾ ಟಾಸ್ಕ್? ಎನ್ನುತ್ತಿದ್ದಾರೆ ನೆಟ್ಟಿಗರು.

ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ

ದುರಂಹಕಾರಕ್ಕೆ ಔಷಧ, ನಾಲಗೆ ಬಿಗಿ ಹಿಡಿಯಲು ಔಷಧ, ನಂಬಿಕೆ ದ್ರೋಹ ಮಾಡದಿರಲು ಔಷಧ, ನಾಲಿಗೆಗೆ ಲಗಾಮು ಹಾಕುವ ಔಷಧ ಹೆಸರಿನಲ್ಲಿ ಮನೆಯಲ್ಲಿ ತರಸಲಾಗಿತ್ತು. ಈ ವೇಳೆ ಹೆಚ್ಚು ಟಾನಿಕ್ ಬಂದಿದ್ದು ಸಂಗೀತಾಗೆ, ಎರಡನೇ ಸ್ಥಾನ ವಿನಯ್ ಗೌಡಗೆ. ಪ್ರತಿಯೊಬ್ಬ ಸದಸ್ಯನು ಮನೆಯ ಎರಡು ಟಾನಿಕ್ ಅನ್ನು ಯಾರಾದರೂ ಇಬ್ಬರಿಗೆ ಕೊಡಬೇಕಿತ್ತು. ಸಂಗೀತಾ ಅವರಿಗೆ ಏಳು ಟಾನಿಕ್‌ ದೊರೆತರೆ, ವಿನಯ್‌ ಅವರಿಗೆ 5 ಸಿಕ್ಕಿತ್ತು. ಹೀಗಾಗಿ ಸಂಗೀತಾ ಅವರನ್ನು ಸ್ಪರ್ಧಿಗಳು ಸಖತ್‌ ಟಾರ್ಗೆಟ್‌ ಮಾಡುತ್ತಿದ್ದಾರೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಿಗ್ ಬಾಸ್

BBK SEASON 10: ಸಂಗೀತಾ ಜಾಗದಲ್ಲಿ ನಮ್ರತಾ ಇದ್ದಿದ್ದರೆ ʻಪನೀರ್‌ʼ ಕಥೆ ಏನಾಗ್ತಿತ್ತು? ಸ್ನೇಹಿತ್‌ಗೆ ಚಿವುಟಿದ ಸುದೀಪ್‌!

BBK SEASON 10:  ಸುದೀಪ್‌ ಅವರು ಸ್ನೇಹಿತ್‌ ಅವರಿಗೆ ಮಾತಿನಲ್ಲಿಯೇ ತಿವಿದಿದ್ದಾರೆ. ಲಕ್ಷುರಿ ಬಜೆಟ್ ವಿಚಾರ ವೇದಿಕೆಯಲ್ಲಿ ಪಸ್ತಾವನೆ ಆದಾಗ ಸುದೀಪ್ ಅವರು ಸ್ನೇಹಿತ್‌ ಅವರಿಗೆ ತಿರುಗೇಟು ನೀಡಿದರು.

VISTARANEWS.COM


on

snehith sangeetha namratha bbk 10
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ (BBK SEASON 10) ಎಂಟನೇ ವಾರ ಯಾರೊಬ್ಬರೂ ಎಲಿಮಿನೇಶನ್‌ ಆಗಿಲ್ಲ. ಸುದೀಪ್‌ ಅವರು ತಮ್ಮ ಅಧಿಕಾರ ಬಳಸಿಕೊಂಡು ಸ್ನೇಹಿತ್‌ ಹಾಗೂ ಮೈಕಲ್‌ ಅವರನ್ನು ಸೇವ್‌ ಮಾಡಿದ್ದಾರೆ. ಆದರೆ ಇಲ್ಲಿಗೆ ಸುದೀಪ್‌ ಅವರು ಸಮ್ಮನಾಗಿಲ್ಲ. ಸ್ನೇಹಿತ್‌ ಅವರಿಗೆ ಮಾತಿನಲ್ಲಿಯೇ ತಿವಿದಿದ್ದಾರೆ. ಲಕ್ಷುರಿ ಬಜೆಟ್ ವಿಚಾರ ವೇದಿಕೆಯಲ್ಲಿ ಪಸ್ತಾವನೆ ಆದಾಗ ಸುದೀಪ್ ಅವರು ಸ್ನೇಹಿತ್‌ ಅವರಿಗೆ ತಿರುಗೇಟು ನೀಡಿದರು.

ಮನೆಯಲ್ಲಿ ವೆಜ್‌ ತಿನ್ನುವವರು ಅಂದರೆ ಅದು ಸಂಗೀತಾ ಮಾತ್ರ. ಕಳೆದ ವಾರದ ಲಕ್ಷುರಿ ಬಜೆಟ್​ನಲ್ಲಿ ಸಂಗೀತಾ ಪನೀರ್ ಬೇಕು ಎಂದಿದ್ದರು. ಅದಕ್ಕೆ ಯಾರೂ ಪ್ರಾಮುಖ್ಯತೆ ನೀಡಲೇ ಇಲ್ಲ. ಕೇವಲ 10 ಕೆಜಿ ಚಿಕನ್ ತರಿಸಲಾಯಿತು. ಇದು ಸಂಗೀತಾ ಬೇಸರಕ್ಕೆ ಕಾರಣ ಆಗಿತ್ತು. ಈ ವಿಚಾರ ಸುದೀಪ್‌ ಅವರ ಮುಂದೆ ಚರ್ಚೆಯಾಗಿದೆ. ಸ್ನೇಹಿತ್ ಅವರು, ‘ನಾನು ಯಾರೇ ಇದ್ದರೂ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿದ್ದೆ’ ಎಂದರು. ಇದಕ್ಕೆ ಸುದೀಪ್ ಅವರು ಸ್ನೇಹಿತ್‌ಗೆ ಚೆನ್ನಾಗಿಯೇ ಮಾತು ಕೊಟ್ಟರು.

‘ಯಾರೇ ಇದ್ದರೂ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿದ್ದರೇ? ಇದು ಸುಳ್ಳು. ಬಹುಶಃ ಸಂಗೀತಾ ಜಾಗದಲ್ಲಿ ನಮ್ರತಾ ಇದ್ದಿದ್ದರೆ ಲಿಸ್ಟ್​ನಲ್ಲಿ ಪನೀರ್ ತುಂಬಿ ಹೋಗುತ್ತಿತ್ತು’ ಎಂದಿದ್ದಾರೆ ಸುದೀಪ್​. ‘ಬಹುಶಃ ನನ್ನ ಗುಂಡಿಯನ್ನು ನಾನೇ ತೋಡಿಕೊಂಡೆ ಎನಿಸುತ್ತಿದೆ’ ಎಂದು ಸುದೀಪ್ ಎದುರು ಸ್ನೇಹಿತ್‌ ಹೇಳಿದರು. ಇದಕ್ಕೆ ಸುದೀಪ್ ‘ನೀವು ಒಂದು ಗುಂಡಿ ತೋಡಿಕೊಂಡಿಲ್ಲ. ವಾರದಲ್ಲಿ ಒಂದೊಂದು ಗುಂಡಿ ತೋಡಿಕೊಂಡು ಸೈಟ್​ ಮಾಡಿಕೊಂಡಿದ್ದೀರಿ. ಯಾವ ಗುಂಡಿಯಲ್ಲಿ ಮಲಗ್ತೀರಾ, ಯಾರಿಗೋಸ್ಕರ ಮಲಗ್ತೀರಾ, ಯಾವಾಗ ಮಲಗ್ತೀರಾ ನನಗೆ ಗೊತ್ತಿಲ್ಲ’ ಎಂದರು ಸುದೀಪ್. ಈ ಮಾತನ್ನು ಕೇಳಿ ಎಲ್ಲರೂ ನಕ್ಕರು.

ದುರಂಹಕಾರಕ್ಕೆ ಔಷಧ, ನಾಲಗೆ ಬಿಗಿ ಹಿಡಿಯಲು ಔಷಧ, ನಂಬಿಕೆ ದ್ರೋಹ ಮಾಡದಿರಲು ಔಷಧ, ನಾಲಿಗೆಗೆ ಲಗಾಮು ಹಾಕುವ ಔಷಧ ಹೆಸರಿನಲ್ಲಿ ಮನೆಯಲ್ಲಿ ತರಸಲಾಗಿತ್ತು. ಈ ವೇಳೆ ಸ್ನೇಹಿತ್​ಗೆ ನಾಲಿಗೆ ಬಿಗಿ ಹಿಡಿತದ ಟಾನಿಕ್ ನೀಡಿದ್ದರು ನಮ್ರತಾ. ಆಗ ಸುದೀಪ್‌ ಅವರು ನಮ್ರತಾರಿಂದ ಸ್ನೇಹಿತ್‌ಗೆ ಅಮೃತ ಎಂದು ಕಾಲೆಳೆದರು.

ಇದನ್ನೂ ಓದಿ: BBK SEASON 10: ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ; ಟಾನಿಕ್ ಕುಡಿಸಿದ ಮೇಲೆ ಒದ್ದಾಟ-ಗುದ್ದಾಟ!

ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

ಸ್ನೇಹಿತ್‌ ಕೂಡ ಮನೆಯಲ್ಲಿ ಅದೆಷ್ಟೋ ಬಾರಿ ನಮ್ರತಾ ಬಗ್ಗೆ ಇರುವ ಫಿಲಿಂಗ್ಸ್‌ ಬಗ್ಗೆ ಪರೋಕ್ಷವಾಗಿ ಹೇಳಿಕೊಂಡಿದ್ದೂ ಇದೆ. ರಾತ್ರಿ ಎಲ್ಲರೂ ಮಲಗಿರುವಾಗ ಸ್ನೇಹಿತ್‌ ಅವರು ನಮ್ರತಾ ಫೋಟೊ ಪಕ್ಕ ತಮ್ಮ ಫೋಟೊವನ್ನು ಇಟ್ಟಿದ್ದರು. ಇದಾದ ಬಳಿಕ ವಿನಯ್‌ ಅವರ ಬಳಿ ನಮ್ರತಾ ಬಗ್ಗೆ ತಮಗಿರು ಫೀಲಿಂಗ್‌ ಬಗ್ಗೆ ಹೇಳಿಕೊಂಡಿದ್ದರು. ‘ನನಗೆ ಹುಡುಗಿಯರು ಇಷ್ಟ ಆಗಿದ್ದು ಬಹಳ ಕಡಿಮೆ. ಒಬ್ಬಳು ಇಷ್ಟ ಆಗಿದ್ದಳು. ಅದು ವರ್ಕೌಟ್‌​ ಆಗಲಿಲ್ಲ. ಅದಾದ ಬಳಿಕ ಈಗಲೇ ಆಗಿರುವುದು. ಬಿಗ್​ ಬಾಸ್​ ಮನೆಗೆ ಬಂದಾಗ ಒಬ್ಬರು ನನಗೆ ಇಷ್ಟೆಲ್ಲ ಇಷ್ಟ ಆಗುತ್ತಾರೆ ಎಂದು ನನಗೂ ನಂಬಿಕೆ ಇರಲಿಲ್ಲ. ಅದನ್ನು ನಂಬೋಕೆ ಆಗುತ್ತಿಲ್ಲ. ಇವರ ಜತೆ ನಾನು ಫ್ರೆಂಡ್​ಗಿಂತಲೂ ಚೂರು ಜಾಸ್ತಿ ಅಟ್ಯಾಚ್​ ಆಗಿದ್ದೇನೆ ಎಂಬುದು ನಾನು ಜೈಲಿಗೆ ಹೋದಾಗ ಗೊತ್ತಾಯಿತು. ಆಮೇಲೆ ಒಂದು ಹಂತದ ನಂತರ ಅನಿಸಿತು. ನನಗೆ ಇವರ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ. ಅದಾದ ಬಳಿಕ ಅವರಿಗೆ ನಾನು ಹೇಳಿದೆ. ಅವರ ಜತೆ ನನಗೆ ಮುಂದಿನ ಹತ್ತು ವರ್ಷಗಳು ಕಾಣುತ್ತಿವೆ. ನಮ್ಮ ಅಪ್ಪ-ಅಮ್ಮನ ಜೊತೆ ಅವರು ಕೂಡ ಕಾಣುತ್ತಾರೆ’ ಎಂದು ಸ್ನೇಹಿತ್​ ಹೇಳಿದ್ದರು.

ಕಳೆದ ವಾರ ಪರೋಕ್ಷವಾಗಿ ನಮ್ರತಾ ಗೌಡಗೆ ಪ್ರೇಮ ನಿವೇದನೆ ಮಾಡಿದ್ದರು ಸ್ನೇಹಿತ್. ನಮ್ರತಾ ಗೌಡ ಸಮಯ ಕೊಡಿ ಅಂದಾಗಿತ್ತು. ಈ ವಿಚಾರವಾಗಿ ನಮ್ರತಾ ತುಂಬಾ ಕಿರಿಕಿರಿ ಅನುಭವಿಸಿದ್ದರು. ಈ ಮುಂಚೆಯೇ ನಮ್ರತಾ ಅವರು ಸ್ನೇಹಿತ್‌ಗೆ ʻʻಸ್ಮೈಲ್ ಮಾಡ್ಕೊಂಡು ಎಲ್ಲದನ್ನೂ ಚಿಲ್ಲಾಗಿ ತೆಗೆದುಕೊಳ್ಳುತ್ತಿದ್ದೀನಿ ಎಂದ ಮಾತ್ರಕ್ಕೆ ಎಲ್ಲವೂ ಸರಿ ಇದೆ ಎಂದಲ್ಲ. ‘ನಿಮಗೆ ಬೇಕಾದಾಗ ನೀವು ಮಾತು ನಿಲ್ಲಿಸಬಹುದು. ನಿಮಗೆ ಬೇಕಾದ ನೀವು ಬ್ಲೇಮ್ ಮಾಡಬಹುದು. ಮೊದಲ ದಿನದಿಂದಲೂ ಇದನ್ನೂ ಮಾಡುತ್ತಿದ್ದೀರಿ’ ಎಂದು ಬೇಸರ ಹೊರಹಾಕಿದ್ದರು.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಿಗ್ ಬಾಸ್

BBK SEASON 10: ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ; ಟಾನಿಕ್ ಕುಡಿಸಿದ ಮೇಲೆ ಒದ್ದಾಟ-ಗುದ್ದಾಟ!

BBK SEASON 10: ದುರಂಹಕಾರಕ್ಕೆ ಔಷಧ, ನಾಲಗೆ ಬಿಗಿ ಹಿಡಿಯಲು ಔಷಧ, ನಂಬಿಕೆ ದ್ರೋಹ ಮಾಡದಿರಲು ಔಷಧ, ನಾಲಿಗೆಗೆ ಲಗಾಮು ಹಾಕುವ ಔಷಧ ಹೆಸರಿನಲ್ಲಿ ಮನೆಯಲ್ಲಿ ತರಸಲಾಗಿತ್ತು.

VISTARANEWS.COM


on

Sangeetha is more cruel than Vinay drinking tonic task bigg boss
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರಲ್ಲಿ (BBK SEASON 10) ಸಂಗೀತಾ ಹಾಗೂ ವಿನಯ್‌ ಅವರು ಕಚ್ಚಾಡಿಕೊಳ್ಳುವುದು ಇದೇನು ಮೊದಲೇನಲ್ಲ. ಪರಸ್ಪರ ವೈರತ್ವ ತೋರಿಸಿದ್ದ ಸಂಗೀತಾ ಹಾಗೂ ವಿನಯ್, ಕಳೆದೆರಡು ವಾರ ಸ್ನೇಹಿತರಂತೆ ಇದ್ದರು, ಈಗ ಮತ್ತೆ ಇಬ್ಬರೂ ವೈರಿಗಳಾಗಿದ್ದಾರೆ. ಇದೀಗ ಇಬ್ಬರಲ್ಲಿ ಹೆಚ್ಚಿನ ದುರಹಂಕಾರ ಯಾರಿಗೆ ಎಂಬುದು ಬಯಲಿಗೆ ಬಂದಿದೆ.

ದುರಂಹಕಾರಕ್ಕೆ ಔಷಧ, ನಾಲಗೆ ಬಿಗಿ ಹಿಡಿಯಲು ಔಷಧ, ನಂಬಿಕೆ ದ್ರೋಹ ಮಾಡದಿರಲು ಔಷಧ, ನಾಲಿಗೆಗೆ ಲಗಾಮು ಹಾಕುವ ಔಷಧ ಹೆಸರಿನಲ್ಲಿ ಮನೆಯಲ್ಲಿ ತರಸಲಾಗಿತ್ತು. ಈ ವೇಳೆ ಹೆಚ್ಚು ಟಾನಿಕ್ ಬಂದಿದ್ದು ಸಂಗೀತಾಗೆ, ಎರಡನೇ ಸ್ಥಾನ ವಿನಯ್ ಗೌಡಗೆ. ಪ್ರತಿಯೊಬ್ಬ ಸದಸ್ಯನು ಮನೆಯ ಎರಡು ಟಾನಿಕ್ ಅನ್ನು ಯಾರಾದರೂ ಇಬ್ಬರಿಗೆ ಕೊಡಬೇಕಿತ್ತು. ಸಂಗೀತಾ ಅವರಿಗೆ ಏಳು ಟಾನಿಕ್‌ ದೊರೆತರೆ, ವಿನಯ್‌ ಅವರಿಗೆ 5 ಸಿಕ್ಕಿತ್ತು. ಇದರಲ್ಲಿ ಐದು ದುರಹಂಕಾರವನ್ನು ನಿಯಂತ್ರಿಸಿಕೊಳ್ಳಬೇಕು ಎಂಬುದು ಆಗಿತ್ತು.

ಅದೇ ರೀತಿ ನಂಬಿಕೆ ದ್ರೋಹ ಹಾಗೂ ನಾಲಿಗೆಗೆ ಲಗಾಮು ಔಷಧ ತಲಾ ಒಂದೊಂದು ಬಂತು. ವಿನಯ್‌ ಅವರಿಗೆ ಐದು ಟಾನಿಕ್​ಗಳು ಬಂದವು. ಅದರಲ್ಲಿ ಎರಡು ದುರಹಂಕಾರ, ಇನ್ನುಳಿದವೆಲ್ಲ ನಾಲಿಗೆ ಬಿಗಿ ಹಿಡಿದುಕೊಳ್ಳಬೇಕು ಎಂಬ ಟಾನಿಕ್ ಆಗಿತ್ತು. ಇವರಿಬ್ಬರ ಜತೆಗೆ ತುಕಾಲಿಗೂ ಬಂದಿದೆ. ತುಕಾಲಿ ನಾಲಿಗೆ ಬಿಗಿ ಹಿಡಿದುಕೊಳ್ಳಬೇಕು ಎಂಬ ಕೆಲವು ಟಾನಿಕ್​ಗಳು ಬಂದವು, ಸಿರಿ ಅವರಿಗೆ ಹೇಡಿತನ ನಿವಾರಣೆ ಟಾನಿಕ್ ನೀಡಿದರು. ಡ್ರೋನ್ ಪ್ರತಾಪ್​ಗೆ ನಂಬಿಕೆ ದ್ರೋಹ ಟಾನಿಕ್‌ವನ್ನು ನಮ್ರತಾ ಕೊಟ್ಟರು. ಸ್ನೇಹಿತ್​ಗೂ ಕೆಲವು ನಾಲಿಗೆ ಬಿಗಿ ಹಿಡಿತದ ಟಾನಿಕ್ ಸಿಕ್ಕರೆ, ಮೈಕಲ್‌ಗೆ ದುರಹಂಕಾರ, ಕಾರ್ತಿಕ್‌ಗೆ ನಾಲಿಗೆ ಹಿಡಿತ, ವರ್ತೂರು ಸಂತೋಷ್​ಗೆ, ತನಿಷಾಗೆ ಹಾಗೂ ನಮ್ರತಾಗೆ ಯಾವುದೇ ಟಾನಿಕ್​ ಸಿಗಲಿಲ್ಲ. ತನಿಷಾ ಅವರು ಪವಿ ಅವರಿಗೆ ನಾಲಿಗೆ ಲಗಾಮ್‌ ಕೊಟ್ಟರು. ನಮ್ರತಾ ಅವರಿಗೆ ನಂಬಿಕೆ ದ್ರೋಹ ಟಾನಿಕ್‌ ಕೊಟ್ಟರು.

ಇದನ್ನೂ ಓದಿ: BBK SEASON 10: ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲು; ಈ ವಾರ ನೋ ಎಲಿಮಿನೇಶನ್‌! ಸ್ನೇಹಿತ್- ಮೈಕಲ್‌ ಸೇಫ್‌!

ಈ ಟಾಸ್ಕ್‌ ಆಗುವಾಗ ಕೂಡ ಸಂಗೀತಾ ಹಾಗೂ ವಿನಯ್‌ ಅವರ ಮಾತಿನ ಚಕಮಕ್ಕಿ ತಾರಕಕ್ಕೇರಿತ್ತು. ಎಲಿಬಿಲ್ಲದ ನಾಲಗೆ, ಯಾರ ಬಗ್ಗೆ ಏನಾದರೂ ಮಾತನಾಡುತ್ತಾನೆ ಎಂದು ವಿನಯ್ ಬಗ್ಗೆ ಸಂಗೀತಾ ಹೇಳಿದರೆ, ಸಂಗೀತಾ ಜತೆ ಫ್ರೆಂಡ್​ಶಿಫ್ ಮಾಡಿದರೆ ನನಗಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಅವರು ನಿರೀಕ್ಷೆ ಮಾಡುತ್ತಾರೆ ಎಂದರು.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Foeticide case and pair of pink bunny figurines
ಕರ್ನಾಟಕ11 mins ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER12 mins ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ30 mins ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್36 mins ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ53 mins ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ1 hour ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ1 hour ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema2 hours ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ2 hours ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ2 hours ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌