BBK SEASON 10: ಜೋರು ಧ್ವನಿ, ಸ್ನೇಹದ ಖನಿ ತನಿಷಾ ಕುಪ್ಪಂಡ ಬಿಗ್‌ಬಾಸ್‌ ಜರ್ನಿ ಹೇಗಿತ್ತು? - Vistara News

ಬಿಗ್ ಬಾಸ್

BBK SEASON 10: ಜೋರು ಧ್ವನಿ, ಸ್ನೇಹದ ಖನಿ ತನಿಷಾ ಕುಪ್ಪಂಡ ಬಿಗ್‌ಬಾಸ್‌ ಜರ್ನಿ ಹೇಗಿತ್ತು?

BBK SEASON 10: ಅಂತಿಮ ಹಂತಕ್ಕೆ ಒಂದೇ ಒಂದು ಹೆಜ್ಜೆ ಬಾಕಿ ಇರುವಾಗಲೇ ತನಿಷಾ ಮನೆಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ. ಜಿಯೋ ಸಿನಿಮಾ ಇದೀಗ ತನಿಷಾ ಕುಪ್ಪಂಡ ಬಿಗ್‌ಬಾಸ್‌ ಜರ್ನಿಯ ಹಲವು ಮುಖ್ಯ ಘಟ್ಟಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Bigg Boss Journey Of tanisha Kuppanda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ (BBK SEASON 10) 10ರ 15ನೇ ವಾರ ತನಿಷಾ ಮನೆಯಿಂದ ಹೊರಗೆ ಬಂದಿದ್ದಾರೆ. ಮಿಡ್‌ ವೀಕ್‌ ಎಲಿಮಿನೇಷನ್‌ ನಡೆದಿದ್ದು ತನಿಷಾ ಔಟ್‌ ಆಗಿದ್ದಾರೆ. ʻಬಿಗ್‌ಬಾಸ್‌ ಗ್ರ್ಯಾಂಡ್ ಪ್ರೀಮಿಯರ್‌ʼನ ಝಗಮಗಿಸುವ ವೇದಿಕೆಯಲ್ಲಿ ಸುದೀಪ್‌ ಅವರು ʻಎಷ್ಟು ವಿಶ್ವಾಸ ನಿಮ್ಮಲ್ಲಿದೆʼ? ಎಂದು ತನಿಷಾ ಅವರಿಗೆ ಕೇಳಿದ್ದರು. ನಿಷಾ ಕುಪ್ಪಂಡ ಕ್ಷಣಮಾತ್ರವೂ ಯೋಚಿಸದೆ ‘very much’ ಎಂದಿದ್ದರು. ಆ ಮಾತಿನಲ್ಲಷ್ಟೇ ಅಲ್ಲ, ಅವರ ನಿಲುವಿನಲ್ಲಿ, ಮುಖದಲ್ಲಿ, ನಗುವಿನಲ್ಲಿಯೂ ಆತ್ಮವಿಶ್ವಾಸ ತುಂಬಿ ತುಳುಕುತ್ತಿತ್ತು. ಆ ವಿಶ್ವಾಸವೇ ಅವರನ್ನು ಬಿಗ್‌ಬಾಸ್ ಮನೆಯೊಳಗೆ ನೂರನೇ ದಿನದ ಗಡಿಯನ್ನೂ ದಾಟುವಂತೆ ಮಾಡಿದೆ. ಅಂತಿಮ ಹಂತಕ್ಕೆ ಒಂದೇ ಒಂದು ಹೆಜ್ಜೆ ಬಾಕಿ ಇರುವಾಗಲೇ ತನಿಷಾ ಮನೆಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ. ಜಿಯೋ ಸಿನಿಮಾ ಇದೀಗ ತನಿಷಾ ಕುಪ್ಪಂಡ ಬಿಗ್‌ಬಾಸ್‌ ಜರ್ನಿಯ ಹಲವು ಮುಖ್ಯ ಘಟ್ಟಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ತನಿಷಾ ವಿಶ್ವಾಸಕ್ಕೆ ಮೊದಲ ಪೆಟ್ಟು ಬಿದ್ದಿದ್ದೂ ಅದೇ ಗ್ರ್ಯಾಂಡ್‌ ಪ್ರೀಮಿಯರ್‌ ವೇದಿಕೆಯಲ್ಲಿಯೇ!

ಜನರ ವೋಟ್‌ಗಳ ಕೊರತೆಯಿಂದ ಅವರನ್ನು ಹೋಲ್ಡ್‌ನಲ್ಲಿ ಇರಿಸಲಾಯಿತು. ನಂತರ ‘ಅಸಮರ್ಥ’ ಎಂಬ ಪಟ್ಟ ಹೊತ್ತುಕೊಂಡೇ ಮನೆಯೊಳಗೆ ಎಂಟ್ರಿ ಕೊಟ್ಟರು. ಈಗಾಗಲೇ ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ‘ಸಮರ್ಥ’ರು ಮನೆಯೊಳಗಿನ ಎಲ್ಲ ಸೌಕರ್ಯಗಳನ್ನು ಬಳಸಿಕೊಂಡು ಮೆರೆಯುತ್ತಿದ್ದರೆ, ತನಿಷಾ ತನ್ನ ‘ಅಸಮರ್ಥ’ ಜೊತೆಗಾರರೊಂದಿಗೆ ನೆಲದಲ್ಲಿ ಕುಳಿತಿದ್ದರು. ಆದರೆ ಅವರ ಮನಸ್ಸಿನಲ್ಲಿ ವಿಶ್ವಾಸ ಮಾತ್ರ ಕೊಂಚವೂ ಕಡಿಮೆಯಾಗಿರಲಿಲ್ಲ.

ಇದನ್ನೂ ಓದಿ: BBK SEASON 10: ಬರೋವಾಗಲೂ ನೋವಿನಲ್ಲಿ ಬಂದೆ.. ಹೋಗುವಾಗಲೂ ಹೀಗೆ; ಬಿಕ್ಕಿ ಬಿಕ್ಕಿ ಅತ್ತ ತನಿಷಾ!

ನಾಮಿನೇಷನ್‌ ಗನ್‌ಗೆ ಗುರಿಯಾದ ಎರಡನೇ ಸ್ಪರ್ಧಿ!

ಅಷ್ಟೇ ಅಲ್ಲ, ಮೊದಲ ವಾರ ಎಲಿಮಿನೇಷನ್‌ನ ಎರಡನೇ ಬಣ್ಣದ ಗುಂಡು ಬಿದ್ದಿದ್ದೂ ತನಿಷಾ ಕುಪ್ಪಂಡ ಮುಖಕ್ಕೆ. ನಾಮಿನೇಟ್ ಮಾಡಿದ ನಮ್ರತಾ ನೀಡಿದ ಕಾರಣಗಳಲ್ಲಿಯೇ ತನಿಷಾ ಅವರ ‘ಧ್ವನಿ’ಯ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. (ಈ ಸೀಸನ್‌ ಪಯಣದುದ್ದಕ್ಕೂ ತನಿಷಾ ಧ್ವನಿಯೆತ್ತರಿಸಿ ಮಾತಾಡುತ್ತಾರೆ ಎಂಬುದು ಒಂದು ಆರೋಪದ ಹಾಗೆ ಪದೇ ಪದೇ ಕೇಳಿಬರುತ್ತಲೇ ಇತ್ತು. ಅವರನ್ನು ನಾಮಿನೇಟ್ ಮಾಡುವ ಬಹುತೇಕ ಸದಸ್ಯರು ನೀಡುತ್ತಿದ್ದ ಕಾರಣಗಳಲ್ಲಿ ಅದೂ ಒಂದಾಗಿರುತ್ತಿತ್ತು. ಆದರೆ ಅಂದು ನಾಮಿನೇಷನ್‌ಗೆ ಒಳಗಾದ ತನಿಷಾ ಅಸಮರ್ಥರು ಸಮರ್ಥರಾಗುವ ಟಾಸ್ಕ್‌ಗಳಲ್ಲಿ ತೋರಿದ ಪ್ರದರ್ಶನ ಸಮರ್ಥರ ಎದೆಯಲ್ಲಿಯೂ ಅಳುಕು ಹುಟ್ಟಿಸಿದ್ದಂತೂ ನಿಜ.

ಇದನ್ನೂ ಓದಿ: BBK SEASON 10: ಅಬ್ಬರಿಸಿದ ʻವಿನಯ್‌ʼ; ಅವರವರ ಗತ್ತು ಅವರಿಗೆ ಗೊತ್ತು ಎಂದು ಡೈಲಾಗ್‌ ಹೊಡೆದ ವರ್ತೂರ್‌!

ಟಾಸ್ಕ್‌ಗೂ ಸೈ; ಮನರಂಜನೆಗೂ ಜೈ!

ಟಾಸ್ಕ್‌ ವಿಷಯವೇ ಇರಲಿ, ಮನೆಯ ಉಳಿದ ಚಟುವಟಿಕೆಗಳಲ್ಲಿ ಭಾಗವಹಿಸುವ ಸಂದರ್ಭವೇ ಇರಲಿ. ತನಿಷಾ ಎಂದೂ ಹಿಂದೆ ಬಿದ್ದವರಲ್ಲ. ಕೆಲವೊಮ್ಮೆ ತಮ್ಮ ತಂಡ, ತಮ್ಮ ಸ್ನೇಹಿತರನ್ನು ವಹಿಸಿಕೊಂಡು ಜಗಳಕ್ಕೆ ನಿಲ್ಲಲೂ ಹಿಂಜರಿದವರಲ್ಲ. ಫಿಜಿಕಲ್‌ ಟಾಸ್ಕ್‌ಗಳಾಗಲಿ, ಬುದ್ಧಿವಂತಿಕೆಯ ಆಟಗಳಾಗಲಿ, ಪ್ರತಿವಾರ ಮನೆಗೆ ಲಕ್ಷುರಿ ಬಜೆಟ್ ಬರೆಯುವ ಚಟುವಟಿಕೆಯೇ ಇರಲಿ ತನಿಷಾ ಮುಂದಿರುತ್ತಿದ್ದರು. ಇದರಾಚೆಗೆ ಅವರೊಳಗಿನ ಕಮಿಡಿಯನ್‌ ಹೊರಬಂದಿದ್ದು, ‘ಬೃಂದಾವನ’ ಧಾರಾವಾಹಿ ತಂಡ ಮನೆಗೆ ಭೇಟಿ ನೀಡಿದಾಗ. ಭಾಗ್ಯಶ್ರೀ, ತುಕಾಲಿ ಸಂತೋಷ್‌ ಜೊತೆಗೆ ಸೇರಿ ಅವರು ಪ್ರಸ್ತುತಪಡಿಸಿದ ಸ್ಕಿಟ್‌ಗಳಲ್ಲಿ ಅವರ ಟೈಮಿಂಗ್, ಹಾಸ್ಯಪ್ರಜ್ಞೆ ಅಷ್ಟೇ ಅಲ್ಲ, ಸಹಸ್ಪರ್ಧಿಗಳ ಜೊತೆಗಿನ ಬಾಂಧವ್ಯವನ್ನೂ ತೋರಿಸುವಂತಿತ್ತು.

ಜಿಯೊ ಸಿನಿಮಾ ಫನ್‌ ಫ್ರೈಡೆಯಲ್ಲಿ ತನಿಷಾ ಧಮಾಕಾ!

ವಾರವಿಡೀ ಬಗೆಬಗೆಯ ಟಾಸ್ಕ್‌ಗಳಲ್ಲಿ ಜಿದ್ದಿಗೆ ಬಿದ್ದು ಆಡಿದ ಸದಸ್ಯರಿಗೆ ರಿಲ್ಯಾಕ್ಸ್‌ ಆಗಿ ಒದಗಿಬರುತ್ತಿದ್ದದ್ದು ಪ್ರತಿ ಶುಕ್ರವಾರದ ಜಿಯೋ ಸಿನಿಮಾ ಫನ್ ಫ್ರೈಡೆ ಟಾಸ್ಕ್‌. ಈ ಸೀಸನ್‌ನ ಮೊದಲ ಫನ್‌ಫ್ರೈಡೆ ವಿನ್ನರ್ ಆಗಿ ಹೊರಹೊಮ್ಮಿದ್ದು ತನಿಷಾ! ‘ಮ್ಯೂಜಿಕಲ್‌ ಪಾಟ್‌’ ಟಾಸ್ಕ್‌ನಲ್ಲಿ ಸ್ಪರ್ಧೆಯೇನೋ ತುರುಸಿನದೇ ಆಗಿತ್ತು. ಆ ಸ್ಪರ್ಧೆಯಲ್ಲಿ ಕೊನೆಯ ಹಂತದಲ್ಲಿ ಸಿರಿ ಮತ್ತು ತನಿಷಾ ಉಳಿದುಕೊಂಡಿದ್ದರು. ಅವರಿಬ್ಬರ ನಡುವೆ ನಡೆದ ಜಿದ್ದಿನ ಸ್ಪರ್ಧೆಯಲ್ಲಿ ತನಿಷಾ, ಸಿರಿ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು. ಆ ಗೆಲುವು ಬರೀ ಒಂದು ಟಾಸ್ಕ್‌ನ ಗೆಲುವಷ್ಟೇ ಆಗಿರಲಿಲ್ಲ. ಬಿಗ್‌ಬಾಸ್ ಮನೆಯಲ್ಲಿ ತಾವು ಬಹುದೂರದವರೆಗೆ ಪ್ರಯಾಣಿಸಲಿದ್ದೇನೆ ಎಂದು ತನಿಷಾ ನೀಡಿದ ಸೂಚನೆಯೂ ಆಗಿತ್ತು.

ಸ್ನೇಹಕ್ಕೆ ಸಿದ್ಧ; ಸಮರಕ್ಕೂ ಬದ್ಧ!

ತನ್ನ ತಾಯಿ ಮತ್ತು ತಮ್ಮ ನೆಚ್ಚಿನ ನಾಯಿ ಈ ಇಬ್ಬರನ್ನು ಬಿಟ್ಟರೆ ಇನ್ಯಾರನ್ನಾದರೂ ನಾನು ಪ್ರೀತಿಸುತ್ತಿದ್ದೇನೆ ಎಂದು ಹೇಳಿದರೆ ಅದು ಫಿಪ್ಟಿ ಫಿಪ್ಟಿ ಅಷ್ಟೇ ಆಗಿರುತ್ತದೆ ಎಂದು ಹೇಳಿಯೇ ಮನೆಯೊಳಗೆ ಹೋಗಿದ್ದ ತನಿಷಾ, ಬಿಗ್‌ಬಾಸ್ ಮನೆಯೊಳಗೆ ಹಲವು ಸಂಬಂಧಗಳನ್ನು ಹಾದು ಬಂದಿದ್ದಾರೆ. ಅವುಗಳಲ್ಲಿ ಆರಂಭದ ವಾರದಿಂದ ಸಂಗೀತಾ ಮತ್ತು ಕಾರ್ತಿಕ್ ಜೊತೆಗೆ ಮೂಡಿದ ಸ್ನೇಹ ಸಂಬಂಧ ವಿಶೇಷವಾದದ್ದು. ಈ ಮೂವರ ಸ್ನೇಹ ಮನೆಯೊಳಗೇ ಹಲವರ ಕುಹುಕಕ್ಕೆ, ಜಲಸಿಗೂ ಕಾರಣವಾಗಿದ್ದೂ ನಿಜ. ಒಬ್ಬರಿಗೊಬ್ಬರು ಬಿಟ್ಟುಕೊಡದೆ, ಒಬ್ಬರನ್ನೊಬ್ಬರು ಬೆಂಬಲಿಸಿಕೊಂಡೇ ಬರುತ್ತಿದ್ದರು. ಆದರೆ ಒಂದು ಹಂತದಲ್ಲಿ ಸಂಗೀತಾ, ತಮ್ಮ ಎದುರಾಳಿಗಳಾದ ವಿನಯ್ ತಂಡವನ್ನು ಸೇರಿಕೊಂಡಾಗಲೇ ಈ ತ್ರಿಕೋನ ಸ್ನೇಹಸಂಬಂಧದಲ್ಲಿ ಮೊದಲ ಬಿರುಕು ಕಾಣಿಸಿಕೊಂಡಿದ್ದು. ಪರಸ್ಪರ ಎದುರಾಳಿಗಳಾಗಿದ್ದಾಗ ತನಿಷಾ ಮತ್ತು ಸಂಗೀತಾ ಅವರ ನಡುವೆ ಹಲವು ಮಾತಿನ ಚಕಮಕಿಗಳು ನಡೆದವು. ಈ ಬಿರುಕು ಮುಂದೆಂದೂ ಸಂಪೂರ್ಣವಾಗಿ ಸರಿಹೋಗಲೇ ಇಲ್ಲ.

ಸಂಗೀತಾ ಜೊತೆಗೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡಿದ್ದರೂ ಕಾರ್ತಿಕ್ ಜತೆಗಿನ ಅವರ ಸ್ನೇಹ ಮುಂದುವರಿದಿತ್ತು. ಒಂದು ಹಂತದಲ್ಲಂತೂ, ಕಾರ್ತೀಕ್, ತನಿಷಾ ಅವರನ್ನು ಸೇವ್ ಮಾಡಲಿಕ್ಕೋಸ್ಕರ ನಾನು ನಾಮಿನೇಟ್ ಆಗುತ್ತೇನೆ ಎನ್ನುವವರೆಗೂ ಹೋಗಿತ್ತು. ಆದರೆ ಅದೇ ಕಾರ್ತಿಕ್ ಕೆಲವು ವಾರಗಳ ಹಿಂದೆ, ‘ನಿಮ್ಮ ಗೇಮ್ ಸ್ಲೋ ಆಗಿದೆ’ ಎಂಬ ಕಾರಣ ನೀಡಿ ಹಾರ್ಟಿಗೆ ಚೂರಿ ಚುಚ್ಚಿ ನಾಮಿನೇಟ್ ಮಾಡಿದಾಗ, ತನಿಷಾ ಬ್ರೋಕ್‌ಡೌನ್ ಆಗಿಬಿಟ್ಟಿದ್ದರು. ಅದೇ ಸಿಟ್ಟಿನಲ್ಲಿ ‘ನಾನು ಬೆಂಕಿ. ನನ್ನ ಹಾರ್ಟಿಗೆ ಚೂರಿ ಹಾಕಲು ಬಂದರೆ ಸುಟ್ಟು ಬೂದಿಯೂ ಸಿಗದಂತೆ ಮಾಡುತ್ತೇನೆ’ ಎಂದು ಕಾರ್ತಿಕ್‌ಗೆ ಅವಾಜ್ ಹಾಕಿದ್ದರು. ಅಲ್ಲಿಗೆ ಬಿಗ್‌ಬಾಸ್ ಮನೆಯಲ್ಲಿಯೇ ಶುರುವಾದ ಅಪೂರ್ವ ಸ್ನೇಹದ ಅಧ್ಯಾಯವೊಂದು ಅಲ್ಲಿಯೇ ಕೊನೆಯಾದಂತಿತ್ತು.

ಇದನ್ನೂ ಓದಿ: BBK SEASON 10: ಬೆಡ್‌ಶೀಟ್‌ ವಿಚಾರ; ರಕ್ಷಕ್‌ಗೆ ಮಕ್ಕಳ ತರ ಆಡಬೇಡಿ ಎಂದ ಪ್ರತಾಪ್‌!

ವರ್ತೂರು ಸಂತೋಷ್ ಮತ್ತು ತನಿಷಾ ಬಾಂಧವ್ಯ

ಕಾರ್ತಿಕ್‌ ಮತ್ತು ಸಂಗೀತಾ ಜತೆಗಿನ ತನಿಷಾ ಅವರ ಸ್ನೇಹಬಂಧ ಒಂದು ಬಗೆಯದಾದರೆ, ವರ್ತೂರು ಸಂತೋಷ್ ಮತ್ತು ತನಿಷಾ ನಡುವಿನ ಸಂಬಂಧ ಇನ್ನೊಂದೇ ಬಗೆಯದಾಗಿತ್ತು. ಇದು ಶುರುವಾಗಿದ್ದು ಏಳನೇ ವಾರದಲ್ಲಿ ವರ್ತೂರು ಸಂತೋಷ್ ಅವರಿಗೆ ಎದುರಾಳಿಯಾಗಿ ಟಾಸ್ಕ್ ಆಡುವಾಗ ಕಾಲಿಗೆ ಗಾಯವಾಗಿ ತನಿಷಾ ಉಳಿದ ಟಾಸ್ಕ್ಗಳಿಂದ ಹೊರಗುಳಿಯಬೇಕಾಯ್ತು. ಈ ಘಟನೆಯ ನಂತರ ವರ್ತೂರು ಮತ್ತು ತನಿಷಾ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಯಿತು. ಕೆಲವು ಸಲ ಇದೊಂದು ರೊಮ್ಯಾಂಟಿಕ್ ಸಂಬಂಧ ಅನಿಸಿದ್ದೂ ಇದೆ. ಆದರೆ ಎಂದಿಗೂ ನಾಮಿನೇಷನ್‌ನಲ್ಲಾಗಲಿ, ಟಾಸ್ಕ್‌ಗಳಲ್ಲಾಗಲಿ ಎದುರಾಳಿಗಳಾಗಲು ಹಿಂಜರಿದಿದ್ದಿಲ್ಲ. ‘ನನ್ನಿಂದ ಅವರ ಕಾಲಿಗೆ ಗಾಯವಾಗಿದೆ ಎಂಬ ನೋವಿದೆ. ಆದರೆ ಅದರ ಅನುಕಂಪದ ಮೇಲೆ ಏನನ್ನು ಮಾಡಲಾರೆ. ಮನುಷ್ಯತ್ವ, ಮಾನವೀಯತೆ ಅಂತ ಹೋದ್ರೆ ನಮ್ಮ ಹಿಂದೆ ಮುಂದೆ ಎರಡೂ ಗುಂಡಿ ತೋಡಿರ್ತಾರೆ’ ಎಂದು ವರ್ತೂರು ತನಿಷಾ ಎದುರಿಗೇ ಖಡಕ್ ಆಗಿ ಹೇಳಿದ್ದೂ ಇದೆ. ಆದರೆ ಈ ಮಾತುಗಳು, ಸ್ಪರ್ಧೆ ಅವರ ನಡುವಿನ ಬಂಧಕ್ಕೆ ಯಾವತ್ತೂ ಧಕ್ಕೆ ತಂದಿಲ್ಲ. ವರ್ತೂರು ಅವರು ರೊಮ್ಯಾಂಟಿಕ್ ಆಕ್ಟಿಂಗ್‌ಗೆ ತನಿಷಾ ಸ್ಪೂರ್ತಿಯಾಗಿದ್ದಂತೂ ಕಿಚ್ಚ ಸುದೀಪ್ ವಾರಾಂತ್ಯದ ಎಪಿಸೋಡ್‌ನಲ್ಲಿ ಮತ್ತೆ ಮಾಡಿಸಿ ನೋಡಿ ಆನಂದಿಸಿದ್ದರು. ಕಳೆದ ವಾರ ತನಿಷಾ, ‘ವರ್ತೂರು ಸಂತೋಷ್ ಅವರದ್ದು ನಿಷ್ಕಲ್ಮಷ ಸಂಬಂಧ. ನಾನು ಈ ಸಂಬಂಧವನ್ನು ಈ ಮನೆಯ ಆಚೆಗೂ ಉಳಿಸಿಕೊಳ್ಳಲು ಬಯಸುತ್ತೇನೆ’ ಎಂದಿದ್ದೂ ಅವರ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗಿತ್ತು.


ಹದಿನೈದು ವಾರದಲ್ಲಿ ಒಂದೇ ಒಂದು ಸಲ ಅವರು ಮನೆಯ ಸದಸ್ಯರಿಂದ ಕಳಪೆ ಪಟ್ಟ ಗಿಟ್ಟಿಸಿಕೊಂಡು ಜೈಲಿಗೆ ಹೋಗಿದ್ದರು ಎಂಬುದು ಅವರ ಸಾಮರ್ಥ್ಯವನ್ನೂ ಹೇಳುವಂತಿದೆ. ಈಗ ಫಿನಾಲೆಯ ಹೊಸ್ತಿಲಲ್ಲಿ ತನಿಷಾ ಮನೆಯಿಂದ ಹೊರಗೆ ಬಿದ್ದಿದ್ದಾರೆ. ಅವರ ಜೊತೆ ಜಗಳವಾಡಿದವರು, ಅವರನ್ನು ನಿರಂತರವಾಗಿ ನಾಮಿನೇಟ್ ಮಾಡಿದವರು, ಅವರ ನಂಬಿಕೆ ಮುರಿದವರು, ಬೆಂಬಲಕ್ಕೆ ನಿಂತವರು ಎಲ್ಲ ಸ್ಪರ್ಧಿಗಳ ಕಣ್ಣಿನಲ್ಲಿಯೂ ತನಿಷಾ ಹೊರಹೋಗುವ ಸುದ್ದಿ ತಿಳಿದಾಗ ನೀರಿತ್ತು. ‘ನನ್ನ ಧ್ವನಿ ಎಲ್ಲರಿಗೂ ಸಮಸ್ಯೆಆಗಿತ್ತಲ್ವಾ? ಇನ್ನು ಮೇಲೆ ನನ್ನ ಧ್ವನಿ ಈ ಮನೆಯಲ್ಲಿ ಕೇಳಿಸುವುದಿಲ್ಲ’ ಎಂದು ತನಿಷಾ ಕಣ್ಣೀರು ಸುರಿಸುತ್ತ ಹೇಳಿದಾಗ ಎಲ್ಲರ ಹೃದಯಗಳೂ ಕರಗಿದ್ದವು. ಅದು ತನಿಷಾ ಈ ಮನೆಯೊಳಗಿನ ಸ್ಥಾನವನ್ನು ತಿಳಿಸುವಂತಿತ್ತು.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Bangalore Rain
ಕರ್ನಾಟಕ11 mins ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ13 mins ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ15 mins ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ43 mins ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್43 mins ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ47 mins ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Bellary Lok Sabha Constituency
ಬಳ್ಳಾರಿ1 hour ago

Bellary Lok Sabha Constituency: ಶ್ರೀರಾಮುಲು vs ತುಕಾರಾಮ್;‌ ಗಣಿ ನಾಡಲ್ಲಿ ಯಾರು ಧಣಿ?

YouTube channels
ವೈರಲ್ ನ್ಯೂಸ್1 hour ago

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

Highest Paying Companies
ವಾಣಿಜ್ಯ1 hour ago

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

Pro-Palestinian Protest
ಕರ್ನಾಟಕ2 hours ago

Pro-Palestinian Protest: ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ; ಮಹಿಳೆಯರು ಸೇರಿ ಹಲವರು ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌