Bigg Boss Kannada | ಜೋಶ್‌ ಸಿನಿಮಾ ಖ್ಯಾತಿಯ ರಾಕೇಶ್‌ ಅಡಿಗ ಬಿಗ್‌ ಬಾಸ್‌ ಮನೆಗೆ ಪ್ರವೇಶ - Vistara News

ಬಿಗ್ ಬಾಸ್

Bigg Boss Kannada | ಜೋಶ್‌ ಸಿನಿಮಾ ಖ್ಯಾತಿಯ ರಾಕೇಶ್‌ ಅಡಿಗ ಬಿಗ್‌ ಬಾಸ್‌ ಮನೆಗೆ ಪ್ರವೇಶ

ಜೋಶ್‌ ಸಿನಿಮಾ ಖ್ಯಾತಿಯ ರಾಕೇಶ್‌ ಅಡಿಗ ಬಿಗ್‌ಬಾಸ್‌ ಮನೆಗೆ (Bigg Boss Kannada) ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ಗಾಂಜಾ ಕುರಿತಾದ ಹೇಳಿಕೆಗೆ ಸಾಕಷ್ಟು ಸುದ್ದಿಯಾಗಿದ್ದರು.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಒಟಿಟಿ ಕನ್ನಡದಲ್ಲಿ (Bigg Boss Kannada) ಈಗಾಗಲೇ ಮೂರು ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ ಪ್ರವೇಶಿಸಿದ್ದಾರೆ. ಇದೀಗ ಜೋಶ್‌ ಸಿನಿಮಾ ಖ್ಯಾತಿಯ ರಾಕೇಶ್‌ ಅಡಿಗ ಎಂಟ್ರಿ ನೀಡಿದ್ದಾರೆ.

ʻಅಲೆಮಾರಿʼ, ʻಡವ್ʼ ಚಿತ್ರಗಳ ನಟ ನಟ ರಾಕೇಶ್ ಅಡಿಗ ಸಿನಿಮಾ ನಿರ್ದೇಶಕರೂ ಆಗಿದ್ದಾರೆ. ಈ ಹಿಂದೆ ಅವರ ಚೊಚ್ಚಲ ಚಿತ್ರ ನೈಟ್ ಔಟ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ಮೊದಲ ಶೆಡ್ಯೂಲ್ ಶೂಟಿಂಗ್ ಕಂಪ್ಲೀಟ್ ಆಗಿದೆ. ಈ ಚಿತ್ರದಲ್ಲಿ ಭರತ್ ಮತ್ತು ಅಕ್ಷಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಈ ಹಿಂದೆ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ಸುದ್ದಿ ಹೆಚ್ಚಾಗುತ್ತಿರುವಂತೆಯೇ ಗಾಂಜಾ ಲೀಗಲ್ ಮಾಡಿ ಎಂದು ನಟ ರಾಕೇಶ್‌ ಒತ್ತಾಯಿಸಿರುವುದು ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ʻಯಾರೇ ಕೂಗಾಡಲಿʼ, ʻನಂದ ಗೋಕುಲʼ ʻಮಂದಹಾಸʼ, ʻʻಪ್ರೀತಿಯಿಂದ ʼಹೀಗೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ | Bigg Boss Kannada | ಕೆಲವೇ ಕ್ಷಣಗಳಲ್ಲಿ ಬಿಗ್‌ ಬಾಸ್‌ ಒಟಿಟಿ ಶುರು: ಇಲ್ಲಿದೆ ಟಾಪ್‌ 10 ಸ್ಪರ್ಧಿಗಳ ಮಾಹಿತಿ!

ಒಟಿಟಿ ಫ್ಲಾಟ್‌ಫಾರ್ಮ್‌ನಲ್ಲಿ 24 ಗಂಟೆ ಲೈವ್‌ನಲ್ಲಿ ಪ್ರಸಾರವಾಗಲಿದ್ದು, ಮನೆಯಲ್ಲಿ ನಡೆಯುವ ಎಲ್ಲ ಮಾಹಿತಿ ಸಿಗಲಿದೆ. ಇದೇ ಮೊದಲ ಬಾರಿಗೆ ಬಿಗ್ ಬಾಸ್ ಒಟಿಟಿಯಲ್ಲಿ ಪ್ರಸಾರ ಆಗುತ್ತಿದೆ. ವೂಟ್‌ ಆ್ಯಪ್ ಡೌನ್‌ಲೋಡ್‌ ಮಾಡಿಕೊಂಡರೆ ಮಾತ್ರ ಈ ಕಾರ್ಯಕ್ರಮ ನೋಡಲು ಸಾಧ್ಯ.

ಮುಂದೆ ಬರಲಿರುವ ಬಿಗ್ ಬಾಸ್ ಕನ್ನಡ ಸೀಸನ್ 9 ಟಿವಿಯಲ್ಲಿಯೂ ಪ್ರಸಾರವಾಗಲಿದೆ. ಬಿಗ್‌ ಬಾಸ್ ಒಟಿಟಿ ಶೋ ಮುಗಿದ ನಂತರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9 ಆರಂಭವಾಗಲಿದೆ.

ಇದನ್ನೂ ಓದಿ | Bigg Boss Kannada | ಬಿಗ್‌ಬಾಸ್‌ ಕನ್ನಡ ಒಟಿಟಿ 2ನೇ ಸ್ಪರ್ಧಿಯಾಗಿ ಟಿಕ್‌ಟಾಕ್‌ ಖ್ಯಾತಿಯ ಸೋನು ಗೌಡ ಎಂಟ್ರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
Road Accident in chikodi maharashtra
ಬೆಳಗಾವಿ1 min ago

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

HD Deve Gowda
ಕರ್ನಾಟಕ13 mins ago

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

Artificial Intelligence
ದೇಶ20 mins ago

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Book Release
ಬೆಂಗಳೂರು20 mins ago

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Actor Upendra
ಸಿನಿಮಾ45 mins ago

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Bengaluru News
ಬೆಂಗಳೂರು1 hour ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Madhu Bangarappa
ಕರ್ನಾಟಕ1 hour ago

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

Navneet Rana
ದೇಶ1 hour ago

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Murder Case in kodagu
ಕೊಡಗು2 hours ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ2 hours ago

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌