Site icon Vistara News

BBK Season 10: ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ʻಸಿರಿʼ ಯಾಕೆ ಇನ್ನೂ ಮದುವೆಯಾಗಿಲ್ಲ?

Rangoli heroine Siri

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಮನೆಗೆ ಎಂಟ್ರಿ ಕೊಟ್ಟಿದ್ದಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ. ಇದೀಗ ಬಿಗ್‌ ಬಾಸ್‌ ವೇದಿಕೆಯಲ್ಲಿ ಸಿರಿ ಈ ಬಗ್ಗೆ ಬಾಯ್ಬಿಟ್ಟಿದ್ದಾರೆ.

ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದರು.

30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ‘ನಾನು ನಾನಾಗಿರಬೇಕು’ ಎಂಬ ಆಸೆಯೊಂದಿಗೆ ಅವರು ಬಿಗ್‌ಬಾಸ್‌ ವೇದಿಕೆಗೆ ಬಂದಿದ್ದಾರಂತೆ.
ಸಿರಿಯನ್ನು ತೆರೆಯ ಮೇಲಿನ ಪಾತ್ರವಾಗಿಯಷ್ಟೇ ನೋಡಿದ್ದ ಜನರಿಗೆ ತಮ್ಮ ನಿಜವಾದ ವ್ಯಕ್ತಿತ್ವವನ್ನು ತೋರಿಸಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿದ್ದಾರೆ. ಸೂಕ್ಷ್ಮ ವ್ಯಕ್ತಿತ್ವದ, ತುಸು ಕೋಪಿಷ್ಠರಾದ ಸಿರಿ ಅವರಿಗೆ ಜನರು 83% ವೋಟ್ ಮಾಡಿ ಮನೆಯೊಳಗೆ ಕಳುಹಿಸಿದ್ದಾರೆ. ತಂದೆಯ ನೆನಪಿಸಿಕೊಂಡು ಬಲಗಾಲಿಟ್ಟು ಸಿರಿ ಮನೆಯೊಳಗೆ ಹೋಗಿದ್ದಾರೆ. ಕನ್ನಡದಲ್ಲಿ ವಿಷ್ಣುವರ್ಧನ್ ನಟನೆಯ ‘ಸಿಂಹಾದ್ರಿಯ ಸಿಂಹ’, ಕಿಚ್ಚ ಸುದೀಪ್ ನಟನೆಯ ‘ಚಂದು’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: BBK Season 10: ಕಲರ್‌ಫುಲ್‌ ಮನೆಗೆ ಖಡಕ್‌ ಡೈಲಾಗ್‌ ಮೂಲಕ ಭರ್ಜರಿ ಎಂಟ್ರಿ ಕೊಟ್ರು MLA ಪ್ರದೀಪ್ ಈಶ್ವರ್!

ರ‍್ಯಾಪರ್‌ ಇಶಾನಿ, ಕಿರುತೆರೆ ನಟ ವಿನಯ್‌ ಗೌಡ, ಹಳ್ಳಿಕಾರ್‌ ಸಂತೋಷ್‌, ಪತ್ರಕರ್ತ ಗೌರೀಶ್‌ ಅಕ್ಕಿ, ಸ್ನೇಕ್‌ ಶ್ಯಾಮ್‌, ನಟಿ ಸಂಗೀತಾ, ನೈಜೀರಿಯನ್‌ ಕನ್ನಡಿಗ ಮೈಕಲ್‌ ಅಜಯ್‌, ಕಿರುತೆರೆ ನಟ ಸ್ನೇಹಿತ್‌ ಗೌಡ, ಡ್ರೋನ್‌ ಪ್ರತಾಪ್‌, ಹಾಸ್ಯನಟ ಸಂತೋಷ್‌, ನಟಿ ಸಿರಿ, ರಕ್ಷಕ್‌ ಬುಲೆಟ್‌, ನೀತು ವನಜಾಕ್ಷಿ, ನಟಿ ಭಾಗ್ಯಶ್ರೀ, ನಟಿ ನಮ್ರತ ಗೌಡ, ನಟ ಕಾರ್ತಿಕ್‌ ಮಹೇಶ್‌ ಹಾಗೂ ನಟಿ ತನೀಶಾ ಬಿಗ್‌ ಬಾಸ್‌ ಮನೆಯನ್ನು ಪ್ರವೇಶಿಸಿದ್ದಾರೆ.

Exit mobile version