BBK SEASON 10:  ಸಂಗೀತಾ ಗೆಲ್ಲಬಹುದು, ಆದ್ರೆ ಕಾರ್ತಿಕ್‌ ವಿನ್‌ ಆಗಬೇಕು ಎಂದ ತನಿಷಾ ಕುಪ್ಪಂಡ - Vistara News

ಬಿಗ್ ಬಾಸ್

BBK SEASON 10:  ಸಂಗೀತಾ ಗೆಲ್ಲಬಹುದು, ಆದ್ರೆ ಕಾರ್ತಿಕ್‌ ವಿನ್‌ ಆಗಬೇಕು ಎಂದ ತನಿಷಾ ಕುಪ್ಪಂಡ

BBK SEASON 10:  ಈ ವಾರದ ವೀಕೆಂಡ್ ಎಪಿಸೋಡ್‌ನಲ್ಲಿ ಮತ್ತೆ ವೇದಿಕೆಗೆ ಬಂದು ಕಿಚ್ಚನ ಜತೆಗೆ ಬಿಚ್ಚುಮಾತುಗಳನ್ನಾಡಿದ ತನಿಷಾ ಕುಪ್ಪಂಡ ಮನೆಯಿಂದ ಹೊರಗೆ ಬಂದಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ.

VISTARANEWS.COM


on

Sangeetha can win, but Karthik should win Tanisha Kuppanda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್ (BBK SEASON 10) ಮನೆಯಲ್ಲಿ ‘ಬೆಂಕಿ’ ಎಂದೇ ಎಲ್ಲರಿಂದಲೂ ಹೇಳಿಸಿಕೊಳ್ಳುತ್ತಿದ್ದವರು ತನಿಷಾ ಕುಪ್ಪಂಡ. ಸ್ನೇಹಿತರಿಗೆ ಬೆಚ್ಚನೆಯ ಭಾವ ನೀಡುತ್ತ, ಎದುರಾಳಿಯಾಗಿ ನಿಂತರೆ ಸುಡುವ ಕೋಪವನ್ನೂ ತೋರುತ್ತಿದ್ದ ಅವರಿಗೆ ಈ ಬಿರುದು ಒಪ್ಪುವಂಥದ್ದೇ ಆಗಿದೆ. ನಡುವಲ್ಲಿ ಕಾಲುನೋವಾಗಿ ವಾಪಸ್ ಬರುತ್ತಾರೋ ಇಲ್ಲವೋ ಎಂಬ ಹಂತ ತಲುಪಿದರೂ, ಬಿಡದೇ ವಾಪಸ್ ಬಂದು ಸಾಕಷ್ಟು ಆಟವಾಡಿ ನೂರಕ್ಕೂ ಅಧಿಕ ದಿನ ಉಳಿದಿಕೊಂಡಿದ್ದ ತನಿಷಾ ಕುಪ್ಪಂಡ ಕಳೆದ ವಾರ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಮನೆಯಿಂದ ಹೊರಗೆ ಬಂದಿದ್ದರು. ‘ಇನ್ನಷ್ಟು ದಿನ ಉಳಿದುಕೊಳ್ಳುತ್ತೇನೆ’ ಎಂಬ ವಿಶ್ವಾಸದಲ್ಲಿಯೇ ಇದ್ದ ಅವರಿಗೆ ಎಲಿಮಿನೇಷನ್ ಶಾಕ್ ಕೊಟ್ಟಿತ್ತು. ಅದಕ್ಕಾಗಿ ಹೋಗುವಾಗ ಕಣ್ಣೀರು ಹಾಕುತ್ತ ಮನೆಯ ಸದಸ್ಯರಿಗೂ ಜರಿದು, ‘ಬಿಗ್‌ಬಾಸ್ ಯಾಕಿಷ್ಟುಕೆಟ್ಟದಾಗಿ ಕಳಿಸಿಕೊಡ್ತೀರಾ?’ ಎಂದು ಕೇಳುತ್ತಲೇ ಹೊರಗೆ ಹೋದರು. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ನಲ್ಲಿ ಮತ್ತೆ ವೇದಿಕೆಗೆ ಬಂದು ಕಿಚ್ಚನ ಜತೆಗೆ ಬಿಚ್ಚುಮಾತುಗಳನ್ನಾಡಿದ ತನಿಷಾ ಕುಪ್ಪಂಡ ಮನೆಯಿಂದ ಹೊರಗೆ ಬಂದಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ.

ಮಿಡ್ ವೀಕ್ ಎಲಿಮಿನೇಷನ್ ಅನುಭವ ಹೇಗಿತ್ತು?

ಆ ಸಂದರ್ಭದಲ್ಲಿ ತುಂಬ ಬೇಜಾರಾಯ್ತು ನನಗೆ. ನಾನು ಇನ್ನಷ್ಟು ದಿನ ಉಳಿದುಕೊಳ್ಳಲು ಅರ್ಹಳು ಎಂಬ ಆತ್ಮವಿಶ್ವಾಸದಲ್ಲಿಯೇ ನಾನಿದ್ದೆ. ಆ ನಂಬಿಕೆ ಮುರಿದುಹೋಯಿತು ಎಂಬ ಬೇಜಾರಿದೆ. ಆದರೆ ಆಚೆ ಬಂದು ಸ್ವಲ್ಪ ರಿಲ್ಯಾಕ್ಸ್ ಆಗಿ ಯೋಚಿಸಿದಾಗ ನನ್ನ ಜರ್ನಿ ನನಗೆ ಖುಷಿ ಕೊಟ್ಟಿದೆ. ನಾನು ಮಾಡಬೇಕಾದ ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ಮಾಡಿ ಮುಗಿಸಿದ್ದೇನೆ. ಹಾಗಾಗಿ ನಾನು ಬಿಗ್‌ಬಾಸ್ ಮನೆಯ ಒಳಗೆ ಇದ್ದಾಗ ಎಷ್ಟು ಖುಷಿಯಾಗಿದ್ದೆನೊ, ತೃಪ್ತಳಾಗಿದ್ದೇನೋ. ಆಚೆ ಬಂದಾಗಲೂ ಹಾಗೆಯೇ ಇದ್ದೇನೆ. ಎಲ್ಲರ ಮನೆಯ ಮಗಳಾಗಿದ್ದೇನೆ ನಾನು. ತುಂಬ ಖುಷಿ ಕೊಟ್ಟ ಪಯಣ ಇದು.

ಇದನ್ನೂ ಓದಿ: BBK SEASON 10: ಸ್ಪರ್ಧಿಗಳ ಉತ್ಸಾಹ ಹೆಚ್ಚಿಸೋಕೆ ಕಿಚ್ಚ ತಂದ್ರು ʻಬಿಗ್ ಬಾಸ್ ಕನ್ನಡʼ ಸೀಸನ್ 10ರ ಟ್ರೋಫಿ!

ಬಿಗ್‌ಬಾಸ್ ಮನೆಯಿಂದ ಯಾಕೆ ಹೊರಗೆ ಬಂದಿರಿ?

ತಪ್ಪು ಅಂತ ಏನೂ ಮಾಡಿಲ್ಲ ನಾನು. ಸಣ್ಣಪುಟ್ಟ ತಪ್ಪುಗಳನ್ನು ಮಾಡ್ತೀವಿ. ಅದು ಎಲ್ಲರಿಂದಲೂ ನಡೆಯುತ್ತದೆ. ಅದು ತಪ್ಪು ಎಂದು ಗೊತ್ತೂ ಆಗಿರಲ್ಲ. ಬಹುಶಃ ಜನರು ನಿರೀಕ್ಷೆ ಮಾಡುತ್ತಿರುವ ಯಾವುದನ್ನೋ ಹೊಸದಾಗಿ ಕೊಡಲಿಲ್ವೇನೋ ನಾನು ಅಂತ ಅನಿಸ್ತು. ನಾವು ಅಲ್ಲದೇ ಇರುವುದನ್ನು ಮಾಡಿದ್ರೆ ಖಂಡಿತವಾಗಿ ಫೇಕ್ ಆಗಿ ಕಾಣಿಸ್ತೀವಿ. ನಾನು ಫೇಕ್ ಆಗಿ ಏನನ್ನೂ ಮಾಡಲಿಲ್ಲ. ಜನರು ನನ್ನಿಂದ ಇನ್ನೂ ಏನನ್ನೋ ನಿರೀಕ್ಷೆ ಮಾಡ್ತಿದ್ರು ಅನಿಸುತ್ತದೆ. ಅನ್ನು ನಾನು ಕೊಡಲಿಲ್ವೇನೋ.

ಮತ್ತೆ ಮನೆಯೊಳಗೆ ಹೋಗಲು ಅವಕಾಶ ಸಿಕ್ಕರೆ ನಿಮ್ಮಲ್ಲಿ ನೀವು ಏನನ್ನು ಬದಲಿಸಿಕೊಳ್ಳುತ್ತೀರಿ?

ನನ್ನಲ್ಲಿ ನಾನು ಏನೂ ಬದಲಾವಣೆ ಮಾಡಿಕೊಳ್ಳಲ್ಲ. ಬಹುಶಃ ಇನ್ನಷ್ಟು ಮೆಲೊಡ್ರಾಮಾ ಆಡ್ ಮಾಡ್ಕೊಳ್ತಿದ್ದೆ ಅನಿಸುತ್ತದೆ. ಯಾಕಂದ್ರೆ ಎಷ್ಟೋ ಜನರನ್ನು ಮನೆಯೊಳಗಿದ್ದಾಗ ಅಯ್ಯೋ ಪಾಪ ಎಂದು ನೋಡುತ್ತಿದ್ದೆ. ಆದರೆ ಹೊರಗೆ ಬಂದು ನೋಡಿದಾಗ, ಅವರು ಕೊಡುವ ರಿಯಾಕ್ಷನ್ಗಳನ್ನು ನೋಡಿ, ಇವರನ್ನು ಅಯ್ಯೋ ಪಾಪ ಎಂದು ಕ್ಷಮಿಸಿದ್ದು ತಪ್ಪು ಅಂತ ನನಗನಿಸಿತು. ಸಾಮಾನ್ಯವಾಗಿ ನಾನು ಏನಾದ್ರೂ ಅನಿಸಿದ್ರೆ ನೇರವಾಗಿ ಹೇಳಿ ಅಷ್ಟಕ್ಕೆ ಬಿಟ್ಟುಬಿಡ್ತಿದ್ದೆ. ಆದರೆ ಹಾಗೆ ಬಿಡೋದನ್ನು ಕಡಿಮೆ ಮಾಡ್ತಿದ್ನೇನೋ. ಅಂದ್ರೆ ಇನ್ನೊಂಚೂರು ಡ್ರಾಮಾ ಮಾಡ್ತಿದ್ನೇನೋ.

ಮನೆಯೊಳಗೆ ನಿಮ್ಮ ಧ್ವನಿಯ ಬಗ್ಗೆ ಸಾಕಷ್ಟು ಚರ್ಚೆ ಬಂತು…

ಮೊದಲಿಂದಲೂ ನಾನು ನನ್ನ ಬೆಸ್ಟ್ ಅನ್ನು ಕೊಡುತ್ತ ಬಂದಿದೀನಿ. ಯಾರು ಏನೇ ಅಂದುಕೊಂಡರೂ, ಎಲ್ಲರೂ ಟಾರ್ಗೆಟ್ ಮಾಡಿದಾಗಲೂ ಮನಸ್ಸಿಗೆ ತೆಗೆದುಕೊಳ್ಳದೆ ಆಡಿದ್ದೇನೆ. ಯಾಕೆಂದರೆ ಅದು ಗೇಮ್. ಆದ್ರೆ ಪ್ರತಿ ಸಲ ನನ್ನ ಧ್ವನಿಯನ್ನು ಎತ್ತಿಕೊಂಡು ಮಾತಾಡಿದಾಗಲೂ, -ಅದನ್ನು ಹೆಚ್ಚು ನಮ್ರತಾ, ವಿನಯ್ ಮಾತಾಡಿದ್ದಾರೆ- ಪ್ರತಿ ನಾಮಿನೇಷನ್‌ನಲ್ಲಿಯೂ ಈ ಕಾರಣ ಕೊಟ್ಟಿದ್ದಾರೆ, ಅವರೇನೋ ಕಡಿಮೆ ಧ್ವನಿಯಲ್ಲಿ ಮಾತಾಡುತ್ತಾರೆ ಎನ್ನುವ ರೀತಿಯಲ್ಲಿ. ನಾನು ಯಾವ ಜಾಗದಲ್ಲಿ ಮಾತಾಡಬೇಕೋ ಆ ಜಾಗದಲ್ಲಿ ಮಾತಾಡಿದ್ದೇನೆ. ನಾರ್ಮಲ್ ಆಗಿ ಮಾತಾಡುವಾಗ ನನ್ನ ಧ್ವನಿಯಲ್ಲಿ ಮಾತಾಡುವಾಗ ಎದುರಿಗಿರುವವರಿಗೆ ಕಂಪರ್ಟಬಲ್ ಇರುವ ಧ್ವನಿಯಲ್ಲಿಯೇ ಮಾತಾಡುತ್ತಿರುತ್ತೇನೆ.

ಕಾಲು ನೋವಾಗಿದ್ದು ನಿಮಗೆ ಹಿನ್ನೆಡೆ ತಂದಿದೆ?

ಕಾಲುನೋವಾಗಿದ್ದ ದಿನ ನನಗೆ, ಶಾಕ್ ಆಗಿತ್ತು. ನನಗೆ ಯಾರೋ ಚಾಕು ಚುಚ್ಚಿಬಿಟ್ರೆನೋ ಅನ್ನುವಷ್ಟು ನೊಂದುಕೊಂಡದ್ದೆ. ಇಷ್ಟು ಚೆನ್ನಾಗಿ ಆಡ್ತಿದ್ನಲ್ವಾ? ಯಾಕೆ ಹೀಗೆ ಕಷ್ಟಕೊಟ್ಟೆ ಎಂದು ದೇವರನ್ನೆಲ್ಲ ಬೈದುಕೊಂಡಿದ್ದೇನೆ. ಕಾಲು ನೋವು ಮಾಡಿ ಮನೆಯೊಳಗೆ ಹೋಗದೇ ಇರುವ ಹಾಗೆ ಮಾಡಿಬಿಟ್ಯಲ್ಲಾ ಎಂದು ದೂರಿದ್ದೇನೆ. ಆ ವಿಷಯದಲ್ಲಿ ನಾನು ಬಿಗ್‌ಬಾಸ್ ಟೀಮ್‌ಗೆ ಥ್ಯಾಂಕ್‌ಫುಲ್ ಆಗಿದ್ದೇನೆ. ಬಹಳಷ್ಟು ಟಾಸ್ಕ್‌ಗಳು ಕಾಲುನೋವು ಆಗಿದ್ದರೂ ಆಡಬಹುದು ಎನ್ನುವ ರೀತಿಯಲ್ಲಿಯೇ ಇರುತ್ತಿದ್ದವು. ಕಾಲು ನೋವು ನನ್ನನ್ನು ಯಾವುದೋ ನಾಲ್ಕು ಫಿಜಿಕಲ್ ಟಾಸ್ಕ್‌ನಿಂದ ಹೊರಗಿಟ್ಟಿರಬಹುದು ಬಿಟ್ರೆ, ಉಳಿದನ್ನು ನಾನು ಆಡಲು ಸಮರ್ಥಳಾಗಿದ್ದೆ. ಚಾನ್ಸ್ ಸಿಗಬೇಕಿತ್ತಷ್ಟೆ. ಅಲ್ಲದೇ ಟಾಸ್ಕ್ ಅಂತ ಬಂದಾಗ ಅದು ಬರೀ ಮೂವತ್ ಪರ್ಸಂಟ್ ಅಷ್ಟೇ ಇರುತ್ತದೆ. ಅದಕ್ಕಿಂತ ಪರ್ಸನಾಲಿಟಿ ಮುಖ್ಯ ಎಂದು ಸುದೀಪ್ ಅವರು ಮೊದಲೇ ಕ್ಲಿಯರ್ ಆಗಿ ಹೇಳಿದ್ದರು.

ನೀವು, ಸಂಗೀತಾ, ಕಾರ್ತಿಕ್ ಟ್ರಯೋ ಫ್ರೆಂಡ್‌ಷಿಪ್‌ ಬಗ್ಗೆ…?

ಮೊದಲಿನಿಂದ ನನಗೆ ಒಟ್ಟಿಗೆ ಇದ್ದಿದ್ದರಿಂದ ಸಂಗೀತಾ, ಕಾರ್ತಿಕ್, ನನ್ನ ನಡುವೆ ಟ್ರಯೊ ಫ್ರೆಂಡ್‌ಷಿಪ್ ಬೆಳೀತು. ಆದರೆ ಅವರಿಬ್ಬರೂ ಸ್ವಲ್ಪ ಜಾಸ್ತಿ ಕ್ಲೋಸ್ ಆಗಿರುವುದು ನನಗೆ ಖಂಡಿತವಾಗಲೂ ಗೊತ್ತಿತ್ತು. ಆ ಕಾರಣಕ್ಕೇ ನಾನು ಇದು ಗುಂಪಲ್ಲ. ನನಗೆ ಇವರ ಜೊತೆಗೆ ಹೆಚ್ಚು ಮಾತಾಡಬೇಕು ಅನಿಸುತ್ತದಷ್ಟೆ ಎಂದು ಹೇಳಿಕೊಂಡು ಎಲ್ಲರ ಜೊತೆ ಮಾತಾಡಿಕೊಂಡು ಓಡಾಡಿಕೊಂಡೇ ಇದ್ದೆ. ತನಿಷಾ ಅವರ ದುಃಖಕ್ಕೆ ಸ್ಪಂದಿಸುವುದಕ್ಕೆ ಪ್ರತಿ ಸಲ ಇರುತ್ತಿದ್ದಳು. ಆದರೆ ತನಿಷಾಗೆ, ತನಿಷಾ ಥರ ಯಾರೂ ಇರಲಿಲ್ಲ. ನನ್ನ ದುಃಖಕ್ಕಾಗಲಿ, ಖುಷಿಗಾಗಲಿ, ನನ್ನ ಕೋಪಕ್ಕಾಗಲಿ ಸ್ಪಂದಿಸುವವರು ಯಾರೂ ಇರಲಿಲ್ಲ. ಸಂಗೀತಾಗೆ ಏನು ಸಮಸ್ಯೆ ಎಂದರೆ, ಫ್ರೆಂಡ್ಸ್ ಅಂದ್ರೆ ಅವರನ್ನು ಸ್ವಲ್ಪ ತಲೆಮೇಲೆ ಇಟ್ಕೋಬೇಕು.ಆಗ ಅವರಿಗೆ ಸಮಾಧಾನ ಆಗುತ್ತದೆ. ಇಲ್ಲಾ ಅಂದ್ರೆ ಸಮಾಧಾನ ಆಗುವುದಿಲ್ಲ. ನಾನು ಜಗಳ ಆಯ್ತು ಅಂದ್ರೆ ಅಲ್ಲಲ್ಲೇ ಬಿಟ್ಟು ಹೋಗ್ತಾ ಇರ್ತೀನಿ. ಅವ್ರು ಜನರನ್ನೇ ಬಿಟ್ಟು ಹೋಗ್ತಿರ್ತಾರೆ. ಹಾಗಾಗಿ ಅವರು ತಪ್ಪು ಮಾಡಿದ್ರೂ ತುಂಬ ಬೇಗ ಕ್ಷಮಿಸಿ ನಾರ್ಮಲ್ ಆಗಿಬಿಡ್ತಿದ್ದೆ.

ಕಾರ್ತಿಕ್ ವಿಚಾರಕ್ಕೆ ಬಂದ್ರೆ, ಕಾರ್ತಿಕ್ ಸ್ವಲ್ಪ ತಡವಾಗಿ ಅರ್ಥ ಮಾಡಿಕೊಳ್ಳುವುದು. ತುಂಬ ಚೆನ್ನಾಗಿದ್ರು, ಕೊನೆ ಕ್ಷಣದಲ್ಲಿ ಬೇರೆ ಯಾರದೋ ಮಾತು ಕೇಳಿಕೊಂಡು ಎಡವಿದ್ರು ಅಂತ ಅನಿಸ್ತು. ಪ್ರತಿ ಸಲ ಹೇಳಬೇಕಾದ್ರೆ ನಾನು ಇರ್ತಿದ್ದೆ. ಆದ್ರೆ ಅವು ಇರ್ತಿರ್ಲಿಲ್ಲ. ಹಾಗಾಗಿ ಒಬ್ರು ಸ್ವಲ್ಪ ಬೇಗ ದೂರವಾದ್ರು. ಇನ್ನೊಬ್ರು ತುಸು ತಡವಾಗಿ ದೂರವಾದ್ರು. ಆಚೆ ಹೋದರೆ ಬಹುಶಃ ನಾನು ಕಾರ್ತೀಕ್ ಜೊತೆಗೆ ಸ್ನೇಹ ಮುಂದುವರಿಸ್ತೀನಿ.

ಮನೆಯೊಳಗೆ ಯಾರು ಇಷ್ಟ? ಯಾರು ಫೇಕ್? ಯಾರು ಗೆಲ್ಲಬಹುದು?

ನನಗೆ ವರ್ತೂರು ಅವರ ಮುಗ್ಧತೆ ಇಷ್ಟ. ಯಾರದೋ ಮಾತಿಗೆ ಕೇಳಿಸಿಕೊಂಡು, ಬಲಿಯಾಗಿ ಯಾರ ಬಗ್ಗೆಯೋ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡುವುದಿಲ್ಲ ಅವರು. ಹಾಗಾಗಿ ಅವರ ಜೊತೆಗೆ ಮಾತಾಡುವುದು ನನಗೆ ಮೊದಲಿನಿಂದಲೂ ಇಷ್ಟ. ನನ್ನ ಪ್ರಕಾರ ಬಿಗ್‌ಬಾಸ್ ಮನೆಯಲ್ಲಿ ಫೇಕ್ ಅಂದ್ರೆ, ಸಂಗೀತಾ. ಜೆನ್ಯೂನ್ ಅನಿಸುವುದು ವರ್ತೂರು ಸಂತೋಷ್. ನನ್ನ ಪ್ರಕಾರ ಗೆಲ್ಲಬಹುದು ಅನಿಸುವುದು ಸಂಗೀತಾ. ಆದರೆ ನನಗೆ ವಿನ್ ಆಗಬೇಕು ಎಂದು ನನಗೆ ಇರುವುದು ಕಾರ್ತಿಕ್.

ಜಿಯೊ ಸಿನಿಮಾ ಫನ್‌ಟಾಸ್ಕ್‌ಗಳ ಬಗ್ಗೆ ಹೇಳಿ?

ಜಿಯೊ ಸಿನಿಮಾ ಫನ್ ಫ್ರೈಡೆ ಟಾಸ್ಕ್‌ಗಳು ಯಾವಾಗ ಬಂದಿದ್ಯೋ ಅವುಗಳನ್ನು ಸಾಕಷ್ಟು ಎಂಜಾಯ್ ಮಾಡಿದೀನಿ ನಾನು. ಮ್ಯೂಸಿಕಲ್ ಪಾಟ್ ಅಂತೊಂದು ಗೇಮ್ ಮಾಡಿದ್ರು. ಅದರಲ್ಲಿ ನಾನು ಗೆದ್ದೆ ಕೂಡ. ಆ ಟಾಸ್ಕ್ ನಂಗೆ ತುಂಬ ಇಷ್ಟವಾಯ್ತು. ಯಾಕಂದ್ರೆ ಅಸಮರ್ಥರು ಎಂದು ನಾವು ಮನೆಯೊಳಗೆ ಎಂಟರ್‍ ಆಗಿದ್ವಿ. ಇಡೀ ವಾರ ಕೆಲಸ ಮಾಡು ಕೆಲಸ ಮಾಡು ಅಂದ್ಕೊಂಡು ಇದ್ವಿ. ಅವರಾದ್ಮೇಲೆ ತಿನ್ನು, ಅವರಾದ್ಮೇಲೆ ಮಲಗು. ಲೈಟ್ ಆಫ್ ಆಗೋವರೆಗೂ ಕಾಯಬೇಕು ಹೀಗೆಯೇ ಕಳೆದಿದ್ವಿ. ಸಾಕಾಗಿಬಿಟ್ಟಿತ್ತು. ಆ ವಾರ ಬಂದ ಮ್ಯೂಸಿಕಲ್ ಪಾಟ್ ಬಂದಾಗ ಎಂಜಾಯ್ ಮಾಡಿದೀನಿ.

ಬಿಗ್‌ಬಾಸ್ ಮನೆಯಿಂದ ಆಚೆಬಂದು ಏನು ಮಿಸ್ ಮಾಡ್ಕೋತಿದೀರಿ…

ಮೈಕ್. ಮೈಕ್ ಅನ್ನೋದು ನನ್ನ ದೇಹದ ಒಂದು ಭಾಗವೇ ಆಗಿಬಿಟ್ಟಿದೆ. ಎರಡನೇದಾಗಿ ಬಿಗ್‌ಬಾಸ್ ಧ್ವನಿ. ನೀವು ತುಂಬ ತಿದ್ದಿದೀರಾ, ಪ್ರೀತಿ ಕೊಟ್ಟಿದೀರಾ…. ನಾವು ಮುಂದೆ ನಡೆಯುವುದಕ್ಕೆ ದಾರಿಯೇ ಇಲ್ಲ ಅಂದಾಗ ಹೆಜ್ಜೆ ಎಲ್ಲಿ ಇಡಬಹುದು ಎಂದು ತೋರಿಸಿಕೊಟ್ಟಿದೀರಾ? ನಾನು ಲೋ ಆಗಿದ್ದಾಗ ನನಗೆ ಸಾಂತ್ವನ ಹೇಳಿದ್ದೀರಾ… ನಿಮ್ಮ ಕಡೆಯಿಂದ ಸಮಾನವಾದ ಪ್ರೀತಿ ಕಾಣಿಸ್ತಾ ಇತ್ತು. ನಮ್ಮ ಮನೆಯವರೂ ಇಷ್ಟು ಕೇರ್ ಮಾಡಿರ್ಲಿಲ್ವೇನೋ… ಅಷ್ಟು ಪ್ರೀತಿ ಕೊಟ್ಟಿದೀರಾ… ನಾನು ಇದನ್ನು ಯಾವತ್ತಿಗೂ ಮರೆಯಲಾರೆ….

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
Mureder Case
ಪ್ರಮುಖ ಸುದ್ದಿ2 hours ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು3 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ4 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ5 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ6 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ7 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ7 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ7 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ6 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ8 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ8 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ15 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ15 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ15 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು18 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌