Site icon Vistara News

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

Snehith Gowda Became Villain In Bigg Boss Kannada in rakshasa task

ಬೆಂಗಳೂರು: ನಿನ್ನೆಯಿಂದ (ಡಿ.5) ಬಿಗ್‌ಬಾಸ್‌ ಮನೆಯಲ್ಲಿ (BBK SEASON 10) ಗಂಧರ್ವರು ಮತ್ತು ರಕ್ಕಸರ ಮೇಲಾಟಗಳು ನಡೆಯುತ್ತಿವೆ. ರಕ್ಕಸರ ಗುಂಪಿನ ಕಾರ್ತಿಕ್, ಸಂಗೀತಾ, ತನಿಷಾ, ಅವಿನಾಶ್‌ ಎಲ್ಲರೂ ಬಗೆಬಗೆಯ ಚೇಷ್ಟೆಗಳಿಂದ ಕೆಣಕುತ್ತಿದ್ದರೆ ಗಂಧರ್ವರ ಗುಂಪಿನ ವಿನಯ್, ನಮ್ರತಾ, ತುಕಾಲಿ, ಮೈಕಲ್, ಪವಿ ಎಲ್ಲರೂ ಸಿಟ್ಟಿಗೆಳದೇ ಇರಲು ಹರಸಾಹಸ ಪಡುತ್ತಿದ್ದಾರೆ.

ಕಾರ್ತಿಕ್, ತನಿಷಾ, ಸಂಗೀತಾ, ಡ್ರೋನ್ ಪ್ರತಾಪ್, ಸಿರಿ, ಅವಿನಾಶ್ ಅವರು ರಾಕ್ಷಸರಾಗಿದ್ದರೆ, ವಿನಯ್ ಗೌಡ, ತುಕಾಲಿ ಸ್ಟಾರ್ ಸಂತು, ಪವಿ, ನಮ್ರತಾ ಗೌಡ, ವರ್ತೂರು ಸಂತೋಷ್ ಅವರು ಗಂಧರ್ವರಾಗಿದ್ದರು. ಸ್ನೇಹಿತ್ ಅವರು ಮನೆಯ ಕ್ಯಾಪ್ಟನ್ ಆಗಿ ಸರಿಯಾಗಿ ಟೀಂ ಮಾಡಿರಲಿಲ್ಲ.

ಈ ಆಟದ ಮುಂದುವರಿದ ಭಾಗದ ಝಲಕ್ ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೊಮೊದಲ್ಲಿ ಸಿಕ್ಕಿದೆ.
ಗಂಧರ್ವರ ಗುಂಪಿನ ಇಬ್ಬರು ಸದಸ್ಯರು ಕುರ್ಚಿಯಲ್ಲಿ ಕೂತಿದ್ದಾರೆ. ಅವರನ್ನು ಹೇಗಾದರೂ ಕುರ್ಚಿಯಿಂದ ಮೇಲೆಳುವಂತೆ ಮಾಡುವ ಸವಾಲನ್ನು ರಕ್ಕಸರ ಗುಂಪಿಗೆ ನೀಡಲಾಗಿತ್ತು. ರಕ್ಕಸರ ಗುಂಪಿನ ಸದಸ್ಯರು ಗಂಧರ್ವರ ಮೇಲೆ ನೀರು ಸೋಕಲಾರಂಭಿಸಿದರು. ಈ ಹಂತದಲ್ಲಿ ತುಕಾಲಿ ಸೀಟಿನಿಂದ ಎದ್ದರು ಎಂದು ರಕ್ಕಸರ ಗುಂಪಿನ ಸದಸ್ಯರು ಕೂಗಲಾರಂಭಿಸಿದರು. ಆದರೆ ಎದ್ದಿಲ್ಲ ಬರೀ ಸರಿದಿದ್ದಾರೆ ಎಂಬುದು ಗಂಧರ್ವರ ಗುಂಪಿನ ನಮ್ರತಾ ವಾದ. ನಮ್ರತಾ ವಾದಕ್ಕೆ ಅನುಗುಣವಾಗಿಯೇ ಉಸ್ತುವಾರಿ ಸ್ನೇಹಿತ್‌ ತಮ್ಮ ನಿರ್ಧಾರವನ್ನು ತಿಳಿಸಿದಾಗ ರಕ್ಕಸರ ಗುಂಪಿನ ಸದಸ್ಯರು ಅಕ್ಷರಶಃ ರಕ್ಕಸರಾಗಿ ಬದಲಾಗಿದ್ದಾರೆ.

ತನಿಷಾ, ‘ನಮ್ರತಾ ಹೇಳಿದ ಮೇಲೆ ಉಸ್ತುವಾರಿಯ ನಿರ್ಧಾರ ಬದಲಾಗುತ್ತದೆ’ ಎಂದು ಹೇಳಿದ್ದರೆ, ನಮ್ರತಾ, ‘ಹೌದು. ಯಾಕಂದ್ರೆ ನಮ್ರತಾ ಇಂಪಾರ್ಟೆಂಟ್ ಇದ್ದಾಳೆ’ ಎಂದು ಇನ್ನಷ್ಟು ಕೆಣಕಿದ್ದಾರೆ. ತನಿಷಾ ಮತ್ತು ನಮ್ರತಾ ನಡುವಿನ ಜಗಳ ಜಟಾಪಟಿಯ ಹಂತಕ್ಕೂ ಹೋಗಿದೆ.

ಕಾರ್ತಿಕ್, ‘ನ್ಯಾಯವಾಗಿ ಉಸ್ತುವಾರಿ ಮಾಡಲಿಕ್ಕೆ ಬರದಿದ್ದರೆ ಬಿಟ್ಟು ಹೋಗ್ತಿರ್ಬೇಕು’ ಎಂದು ಗುಡುಗಿದ್ದಾರೆ.
ಎರಡೂ ತಂಡವನ್ನು ಸಮನಾಗಿ ಕಾಣಬೇಕಿದ್ದ ಉಸ್ತುವಾರಿ ಸ್ನೇಹಿತ್ ಒಂದು ಕಡೆ ವಾಲಿಕೊಂಡರಾ? ಅಥವಾ ಅವರು ತೆಗೆದುಕೊಂಡ ನಿರ್ಧಾರ ನ್ಯಾಯಯುತವಾಗಿಯೇ ಇತ್ತಾ? ಎಂಬುದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: BBK SEASON 10: ನೀನು ಯಾರಿಗೆ ʻಚೇಲಾʼ ಅಂತ ಗೊತ್ತು ʻಹೋಗೋಲೋʼ ಎಂದು ಸ್ನೇಹಿತ್‌ ಮೇಲೆ ರೊಚ್ಚಿಗೆದ್ದ ಸಂಗೀತಾ!

ಸ್ನೇಹಿತ್‌ ತಗೊಂಡ ನಿರ್ಧಾರಗಳು ಬಯಾಸ್ಡ್‌!

ಬಿಗ್‌ ಬಾಸ್‌ ಸೀಸನ್‌ 10ರ (BBK SEASON 10) ಈ ವಾರ ಸ್ನೇಹಿತ್‌ ಕ್ಯಾಪ್ಟನ್‌ ಆಗಿರುವುದು ಗೊತ್ತೇ ಇದೆ. ಹಾಗೆಯೇ ವಿನಯ್‌ ಅವರ ʻಚೇಲಾʼ ಎಂದು ಅದೆಷ್ಟೋ ಬಾರಿ ಸ್ನೇಹಿತ್‌ ಕರೆಸಿಕೊಂಡಿದ್ದಾರೆ. ಈ ಬಾರಿ ಬಿಗ್‌ ಬಾಸ್‌ ಸ್ನೇಹಿತ್‌ಗೆ ವಿಶೇಷ ಅಧಿಕಾರವನ್ನು ನೀಡಿತ್ತು. ಈ ಬಾರಿ ಕೂಡ ಸ್ನೇಹಿತ್‌ ಬಕೇಟ್‌ ರಾಜ ಎಂಬುದು ಸಾಬೀತಾದಂತಿದೆ. ಈ ವಾರ ನಾಮಿನೇಷನ್ ಮಾಡುವ ಸಂಪೂರ್ಣ ಅಧಿಕಾರ ಸ್ನೇಹಿತ್​ಗೆ ಇತ್ತು. ಹೀಗಾಗಿ ಅವರು ತಮ್ಮ ತಂಡದವರನ್ನು ಸೇವ್ ಮಾಡಿದ್ದಾರೆ. ವಿನಯ್, ನಮ್ರತಾ ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ಈ ವಾರ ತಂಡ ಮಾಡುವ ಆಯ್ಕೆಯನ್ನು ಬಿಗ್ ಬಾಸ್ ಸ್ನೇಹಿತ್​​ಗೆ ನೀಡಿದ್ದರು, ಇದರಲ್ಲಿಯೂ ಸ್ನೇಹಿತ್‌ ತಗೊಂಡ ನಿರ್ಧಾರಗಳು ಬಯಾಸ್ಡ್‌ ಆಗಿದ್ದು, ಅದರ ವಿರುದ್ಧ ಟಾಸ್ಕ್ ವೇಳೆ ಸಂಗೀತಾ ರೊಚ್ಚಿಗೆದ್ದರು.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version