Site icon Vistara News

BBK SEASON 10: ಯಾರ ಕಣ್ಣು ಬಿತ್ತಮ್ಮ ತನಿಷಾ-ವರ್ತೂರ್ ಸ್ನೇಹದ ಮ್ಯಾಲೆ?

Varthur Santhosh and tanisha bigg boss Kannada

ಬೆಂಗಳೂರು: ಬೆಳಗ್ಗೆಯಷ್ಟೇ ತಮಾಷೆಯ ಟಾಸ್ಕ್‌ನಲ್ಲಿ ನಕ್ಕು ನಲಿದಿದ್ದ ಬಿಗ್‌ಬಾಸ್ (BBK SEASON 10) ಸ್ಪರ್ಧಿಗಳ ಮುಖದಲ್ಲಿ ನಾಮಿನೇಷನ್ ಹೀಟ್ ಎದ್ದು ಕಾಣುತ್ತಿದೆ. ‘ವಿಶೇಷ ಅಧಿಕಾರದ ಅಂಗವಾಗಿ ನಾಮಿನೇಟ್ ಮಾಡುವ ಅಧಿಕಾರ ಸ್ನೇಹಿತ್ ಅವರಿಗಷ್ಟೇ ಇರುತ್ತದೆʼ ಎಂದು ಬಿಗ್‌ಬಾಸ್ ಹೇಳಿದ್ದಾರೆ. ವಿಶೇಷ ಅಧಿಕಾರದ ಆಸನದ ಮೇಲೆ ಸ್ಟೈಲಿಶ್ ಆಗಿ ಕೂತಿರುವ ಸ್ನೇಹಿತ್ ಅವರ ಎದುರು ಮನೆಯ ಸದಸ್ಯರು, ತಮ್ಮನ್ನು ಸೇವ್ ಮಾಡಿ ಎಂದು ಸ್ನೇಹಿತ್ ಅವರಿಗೆ ಕನ್ವಿನ್ಸ್ ಮಾಡಲು ಪ್ರಯತ್ನಿಸುತ್ತಿದ್ದಾರೆ.

ತನಿಷಾ ಅವರ ಪರವಾಗಿ ಕಾರ್ತಿಕ್ ವಾದ ಮಾಡಿದ್ದಾರೆ. ಅದಕ್ಕೆ ವಿರುದ್ಧವಾಗಿ ವರ್ತೂರು ಸಂತೋಷ್ ಅವರು, ‘ನಾವಿಲ್ಲಿ ತ್ಯಾಗಮೂರ್ತಿಗಳಾಗೋಕೆ ಬಂದಿಲ್ಲ. ತನಿಷಾನ ನಾನು ಬೇಕಂತ ಹೋಗಿ ತಳ್ಳಿಲ್ಲ. ಹಾಗಾಗಿ ಅವ್ರಿಗೆ ಇನ್ನೊಂದು ಚಾನ್ಸ್ ಸಿಗಲಿ ಎಂದೂ ಹೇಳಲ್ಲ’ ಎಂದು ಖಡಕ್ಕಾಗಿ ಹೇಳಿದ್ದಾರೆ.

ವರ್ತೂರ್ ಮಾತಿನಿಂದ ಖುಷಿಯಾಗಿ ನಮ್ರತಾ ಕೇಕೆ ಹಾಕಿದ್ದರೆ, ತನಿಷಾಗೆ ಶಾಕ್ ಆಗಿದೆ. ‘ವರ್ತೂರು ಅವರು ಮೊದಲ ದಿನದಿಂದಲೇ ಹೀಗೆ ಮಾತಾಡಿದ್ದರೆ ನಾನು ಒಪ್ಕೋತಾ ಇದ್ದೆ’ ಎಂದು ಕೋಪ ಮಾಡಿಕೊಂಡಿದ್ದಾರೆ.

9ನೇ ವಾರದಲ್ಲೂ ಹಾಗೆಯೇ ಆಗಿದೆ. ಅದರಲ್ಲೂ ವರ್ತೂರು ಸಂತೋಷ್​ ಅವರು ತನಿಷಾ ಕುಪ್ಪಂಡ ವಿರುದ್ಧವೇ ತಿರುಗಿ ಬಿದ್ದಿರುವುದು ಅಚ್ಚರಿಗೆ ಕಾರಣ ಆಗಿದೆ. 8ನೇ ವಾರದಲ್ಲಿ ತನಿಷಾಗೆ ಪೆಟ್ಟಾಗಿತ್ತು. ಆದರೂ ಕೂಡ ನಾಮಿನೇಷನ್​ ವಿಚಾರದಲ್ಲಿ ತಾವು ಮಾನವೀಯತೆ ತೋರಿಸಲು ಸಾಧ್ಯವಿಲ್ಲ ಎಂದು ವರ್ತೂರು ಸಂತೋಷ್​ ಅವರು ಹೇಳಿದ್ದಾರೆ.

ಸ್ನೇಹಿತ್‌ ಕೈಗೆ ಸಿಕ್ಕಿರುವ ವಿಶೇಷ ಅಧಿಕಾರ ಹೇಗೆ ಕೆಲಸ ಮಾಡುತ್ತದೆ? ಯಾರ ನೆತ್ತಿಮೇಲೆ ತೂಗುಗತ್ತಿಯಾಗುತ್ತದೆ? ಯಾರಿಗೆ ಅಭಯಹಸ್ತವಾಗಿ ಬದಲಾಗುತ್ತದೆ? ಎಂಬುದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

ಮಿಸ್‌ ಮಾಡಿಕೊಂಡಿದ್ದ ವರ್ತೂರ್‌

ಎರಡು ತಂಡಗಳು ಆಟ ಆಡುವಾಗ ತನಿಷಾ ಕಾಲಿಗೆ ಪೆಟ್ಟಾಗಿದ್ದು, ನೋವಿನಿಂದ ಒದ್ದಾಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗೆ ಕಳುಹಿಸಲಾಗಿತ್ತು. ಬಿಗ್ ಬಾಸ್ ಟೀಮ್ ಕಡೆಯವರು ತನಿಷಾ ಅವರನ್ನು ಚಿಕಿತ್ಸೆಗಾಗಿ ಹೊರ ಕರೆದುಕೊಂಡು ಹೋಗಿದ್ದರು. ತನಿಷಾ ಮನೆಯಲ್ಲಿ ಇಲ್ಲದ ಕಾರಣ ವರ್ತೂರ್‌ ಕೂಡ ತುಂಬಾ ಮಿಸ್‌ ಮಾಡಿಕೊಂಡಿದ್ದರು.. ನಮ್ರತಾ ವರ್ತೂರ್‌ ಅವರನ್ನು ಕಂಡು ʻʻ ʻʻಬೆಂಕಿ ಯೋಚನೆಯಲ್ಲಿ ಮುಳುಗಿ ಹೋಗಿದ್ದಾರೆ ವರ್ತೂರ್‌ʼʼಎಂದ್ದಿದ್ದರು. ತುಕಾಲಿ ಮಾತನಾಡಿ ʻʻಈ ರೀತಿ ಒಬ್ಬರಿಗೋಸ್ಕರ ಕನವರಿಸಿಕೊಂಡವರನ್ನು ನಾನು ಇತಿಹಾಸದಲ್ಲಿ ನೋಡಿಲ್ಲ. ಎಷ್ಟು ಸಲ ಬೆಂಕಿ ಹೆಸರು ಹೇಳಿದ್ರು ಗೊತ್ತಾ? ಹೇಗಾದರೂ ಮಾಡಿ ಇಲ್ಲಿಂದ ತಪ್ಪಿಸಿಕೊಂಡು ಹೋಗಿ ಬೆಂಕಿ ಕರೆದುಕೊಂಡು ಬಂದು ಇವರಿಗೆ ಒಪ್ಪಿಸಬೇಕು ಅಂತ ಅನಿಸಿಬಿಡ್ತು. ಅವರಿಗೆ ಆಗ್ತಾನೇ ಇಲ್ಲ, ದಿಢೀರ್ ಅಂತ ಯಾರಿಗೋ ಹೊಡೆಯೋಕೆ ಹೋಗ್ತಾರೆ, ಕಚ್ಚುತ್ತಾರೆ, ನನ್ನ ಜತೆಯೂ ಜಗಳ ಆಡಿದ್ರುʼʼ ಎಂದಿದ್ದರು. ವರ್ತೂರ್‌ ಕೂಡ ತನಿಷಾ ವಾಪಸ್ ಬಂದ್ರೆ ಸಾಕು ಎಂದಿದ್ದರು. ಆದರೆ ಈಗ ವರ್ತೂರ್‌ ಅವರ ವರ್ತನೆ ನೋಡುಗರಿಗೆ ಅಚ್ಚರಿ ಮೂಡಿಸಿದೆ.

ನಮ್ರತಾ ಕೂಡ ತನಿಷಾ ಪರವಾಗಿ ಹಿಂದಿನ ವಾರ ಆಟವಾಡಿ ಕಿಚ್ಚ ಸುದೀಪ್‌ ಅವರಿಂದ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.

Exit mobile version