Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​ - Vistara News

ಬಜೆಟ್ 2024

Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​

Karnataka Budget 2024 : ಡ್ರೋನ್ ತರಬೇತಿ ನೀಡುವ ಮೂಲಕ ಪರಿಶಿಷ್ಟ ಪಂಗಡದ ಯುವಕರಿಗೆ ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

VISTARANEWS.COM


on

Drone Training
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಕ್ಕೆ ನೆರವಾಗುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದರು.

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್​ -3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂಬುದಾಗಿ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರೈಸ್‌ ಯೋಜನೆಯಡಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು| ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು ಎಂದು ನುಡಿದರು.

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ 100 ರೂ. ನಂತೆ ಹೆಚ್ಚಿಸಲಾಗುವುದು ಎಂದು ಹೇಳಿದರು.

35 ಕೋಟಿ ಕಾರ್ಪಸ್​ ಫಂಡ್​

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್​​ ಫಂಡ್​ ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

  1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಿದರು.
  2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
  3. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು ಎಂದು ಸಿಎಂ ಬಜೆಟ್ ವೇಳೆ ಘೋಷಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ದೇಶ

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Nirmala Sitharaman: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬಜೆಟ್‌ ಭಾಷಣದಲ್ಲಿ ರಾಜ್ಯಗಳ ಹೆಸರು ಇಲ್ಲ ಎಂದ ಮಾತ್ರಕ್ಕೆ ಆ ರಾಜ್ಯಕ್ಕೆ ಅನುದಾನ ಹೋಗುವುದಿಲ್ಲ ಎಂಬ ಅರ್ಥವಲ್ಲ ಎಂದಿದ್ದಾರೆ.

VISTARANEWS.COM


on

Nirmala Sitharaman

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಕೆಲ ದಿನಗಳ ಹಿಂದೆ ಮಂಡಿಸಿದ ಬಜೆಟ್‌ನಲ್ಲಿ (Union Budget 2024) ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಕೊಟ್ಟಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಭಾರತದ ಹಲವು ರಾಜ್ಯಗಳು ಟೀಕಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದು, “ಕಾಂಗ್ರೆಸ್‌ ನೇತೃತ್ವದ ಯುಪಿಎ ಅವಧಿಯ ಬಜೆಟ್‌ನಲ್ಲೂ 26 ರಾಜ್ಯಗಳ ಹೆಸರು ಇರಲಿಲ್ಲ. ಹಾಗಂತ, ಆ ರಾಜ್ಯಗಳಿಗೆ ಅನುದಾನ ನೀಡಿಲ್ಲ ಎಂದು ಅರ್ಥವೇ” ಎಂಬುದಾಗಿ ಪ್ರಶ್ನಿಸಿದ್ದಾರೆ.

“ಬಜೆಟ್‌ ಭಾಷಣದಲ್ಲಿ ಕೆಲ ರಾಜ್ಯಗಳ ಹೆಸರು ಇಲ್ಲದ ಕಾರಣ, ಕೇಂದ್ರ ಸರ್ಕಾರವು ಆ ರಾಜ್ಯಗಳಿಗೆ ಅನುದಾನವನ್ನೇ ಕೊಟ್ಟಿಲ್ಲ ಎಂಬ ರೀತಿ ಪ್ರತಿಪಕ್ಷಗಳು ಬಿಂಬಿಸುತ್ತಿಲ್ಲ. ಆದರೆ, ನಾನು 2004-05ರಿಂದಲೂ ಮಂಡಿಸಿದ ಬಜೆಟ್‌ ಪ್ರತಿಗಳನ್ನು ಗಮನಿಸಿದ್ದೇನೆ. 2004-05ರ ಬಜೆಟ್‌ನಲ್ಲಿ ಅಂದರೆ ಯುಪಿಎ ಅವಧಿಯಲ್ಲಿ ಪ್ರಸ್ತುತಪಡಿಸಿದ ಬಜೆಟ್‌ ಭಾಷಣದಲ್ಲಿ 17 ರಾಜ್ಯಗಳ ಹೆಸರು ಇರಲಿಲ್ಲ. 2006-07ರಲ್ಲಿ 16, 2009ರಲ್ಲಿ 26 ರಾಜ್ಯಗಳ ಹೆಸರುಗಳೇ ಇರಲಿಲ್ಲ. ಹಾಗಂತ, ಈ ರಾಜ್ಯಗಳಿಗೆ ಹಣವೇ ನೀಡಲಿಲ್ಲವೇ” ಎಂಬುದಾಗಿ ಬಜೆಟ್‌ ಕುರಿತ ಚರ್ಚೆಯ ವೇಳೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

“ಸಂಸತ್‌ನ ಎಲ್ಲ ಸದಸ್ಯರಿಗೂ ನಾನು ಒಂದು ಮನವಿ ಮಾಡುತ್ತೇನೆ. ಬಜೆಟ್‌ ಭಾಷಣದಲ್ಲಿ ಯಾವುದಾದರೂ ರಾಜ್ಯಗಳ ಹೆಸರು ಇಲ್ಲ ಎಂದರೆ, ಆ ರಾಜ್ಯಗಳಿಗೆ ಹಣ ನೀಡುವುದಿಲ್ಲ ಎಂದು ಅರ್ಥವಲ್ಲ. ಸುಳ್ಳು ಹಾಗೂ ಜನರ ದಾರಿ ತಪ್ಪಿಸುವ ರೀತಿ ಅಭಿಯಾನ ಆರಂಭಿಸಲಾಗುತ್ತಿದೆ. ಒಂದು ರಾಜ್ಯದ ಹೆಸರನ್ನು ಬಜೆಟ್‌ ಭಾಷಣದಲ್ಲಿ ಪ್ರಸ್ತಾಪಿಸಿಲ್ಲ ಎಂದ ಮಾತ್ರಕ್ಕೆ, ಆ ರಾಜ್ಯಕ್ಕೆ ಅನುದಾನವನ್ನೇ ನೀಡಿಲ್ಲ ಎಂಬ ರೀತಿ ಹೇಳುತ್ತಿರುವುದು ನೋವು ತಂದಿದೆ” ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಹೇಳಿದ್ದಾರೆ. ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Continue Reading

ಕರ್ನಾಟಕ

Union Budget 2024: ವಾರ್ಷಿಕ 7.5 ಲಕ್ಷ ವೇತನ ಪಡೆಯುವವರಿಗೆ ಯಾವುದೇ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್

Union Budget 2024: ಕರ್ನಾಟಕಕ್ಕೆ ಹತ್ತು ವರ್ಷದಲ್ಲಿ ಯುಪಿಎ ಸರ್ಕಾರ 81,791 ಕೋಟಿ ಅನುದಾನ ನೀಡಿದೆ. ಎನ್‌ಡಿಎ ಸರ್ಕಾರ 2,95,818 ಅನುದಾನ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

VISTARANEWS.COM


on

Union Budget 2024

ಬೆಂಗಳೂರು: ವಾರ್ಷಿಕ 7.5 ಲಕ್ಷ ವೇತನ ಪಡೆಯುವವರಿಗೆ ಯಾವುದೇ ತೆರಿಗೆ ಇಲ್ಲ. ಕೇಂದ್ರದಿಂದ ರಾಜ್ಯಕ್ಕೆ ಬರುವ ಅನುದಾನದ (Union Budget 2024) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಮಾಹಿತಿ ಕೊಡುತ್ತಿದೆ. ಕೇಂದ್ರದಿಂದ ಯಾವುದೇ ಬಾಕಿ ಇಲ್ಲ. ಹತ್ತು ವರ್ಷದಲ್ಲಿ ಯುಪಿಎ ಸರ್ಕಾರ 81,791 ಕೋಟಿ ಅನುದಾನ ನೀಡಿದೆ. ಎನ್‌ಡಿಎ ಸರ್ಕಾರ 10 ವರ್ಷಗಳಲ್ಲಿ 2,95,818 ಅನುದಾನ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 60,679 ಕೋಟಿ ಗ್ರ್ಯಾಂಟ್ ಇನ್ ಏಡ್ ನೀಡಲಾಗಿದ್ದು, ಮೋದಿ ಸರ್ಕಾರದಲ್ಲಿ 2,36,955 ಕೋಟಿ ನೀಡಲಾಗಿದೆ. ಯುಪಿಎ ವಾರ್ಷಿಕ 8,179 ಕೋಟಿಯಾದರೆ, ಮೋದಿ ಸರ್ಕಾರದಲ್ಲಿ ವಾರ್ಷಿಕ 45,485 ಕೋಟಿ ನೀಡಲಾಗಿದೆ.

ಕಲಬುರಗಿಯ ಪಿಎಂ ಮಿತ್ರಾ ಮೆಗಾ ಟೆಕ್ಸ್‌ಟೈಲ್ಸ್ ಪಾರ್ಕ್‌ಗೆ 200 ಕೋಟಿ ಅನುದಾನ ನೀಡಲಾಗಿದೆ. ಕರ್ನಾಟಕದಲ್ಲಿ ರೈಲ್ವೆಗೆ 2009-14ರವರೆಗೂ 835 ಕೋಟಿ ನೀಡಲಾಗಿತ್ತು. 2024-25ನೇ ಸಾಲಿನ ಬಜೆಟ್‌ನಲ್ಲಿ 7,559 ಕೋಟಿ ನೀಡಲಾಗಿದೆ. ರೈಲ್ವೆ ಹಳಿಗಳ ನಿರ್ಮಾಣಕ್ಕೆ, 47,016 ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ. 7 ಒಂದೇ ಭಾರತ್ ರೈಲು ಸಂಚರಿಸುತ್ತಿವೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಐಐಟಿ ಧಾರವಾಡ ಸ್ಥಾಪನೆ ಆಗಿದೆ. ತುಮಕೂರಿನಲಿ ಸೌತ್ ಇಂಡಿಯಾ ಕಾರಿಡಾರ್ ನಡೆಯುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಗಾಗಿ 6,428 ಕೋಟಿ ಅನುದಾನ ನೀಡಲಾಗಿದೆ. 7 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದ್ದು, 1,600 ಕೋಟಿ ವೆಚ್ಚದಲ್ಲಿ ಖಾಸಗಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಟೆಕ್ನಾಲಜಿ ಸೆಂಟರ್ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗಿದೆ.

4,600 ಕಿ.ಮೀ ರಸ್ತೆ ನಿರ್ಮಾಣ ಆಗಿದೆ. ಭಾರತ್ ಮಾಲಾ ಯೋಜನೆಯಡಿ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಸೇರಿ ಮೂರು ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗುತ್ತಿವೆ ಎಂದು ಹೇಳಿದರು.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕ ಸರ್ಕಾರ ಪೆಟ್ರೋಲ್, ಡೀಸೆಲ್, ಹಾಲು, ಗೈಡ್‌ಲೈನ್ಸ್ ವ್ಯಾಲ್ಯೂ, ಇವಿ ವಾಹನಗಳ ದರ ಎಲ್ಲವೂ ಹೆಚ್ಚಳ ಮಾಡಿದೆ. ಉದ್ಯೋಗ ಸೃಷ್ಟಿ ಸಂಪೂರ್ಣ ಕುಸಿದಿದೆ. ಕಳೆದ ವರ್ಷ ಆದಾಯ ಬಜೆಟ್ ಮಂಡನೆಯಾಗಿತ್ತು, ಒಂದೇ ವರ್ಷದಲ್ಲಿ ಖೋತಾ ಬಜೆಟ್ ಆಗಿದೆ. ಎಸ್‌ಸಿ, ಎಸ್‌ಟಿ ಯೋಜನೆಯಿಂದ ಹಣ ತೆಗೆಯಲಾಗಿದೆ. ವಾಲ್ಮೀಕಿ ಹಗರಣ ನಿಮಗೆಲ್ಲಾ ಗೊತ್ತಿದೆ ಎಂದು ತಿಳಿಸಿದರು.

ಉದ್ಯೋಗ ವಿಚಾರವಾಗಿ ದೆಹಲಿಯಲ್ಲಿ ತಿಳಿಸಿದ್ದೇನೆ. ಯುವಕರಿಗೆ ಉದ್ಯೋಗ, ಎಂಎಸ್‌ಎಂಇ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಮೂರು ರೀತಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದ್ದು, ಮೊದಲ ಬಾರಿ ಉದ್ಯೋಗಕ್ಕೆ ಬರುವವರಿಗಾಗಿ ಉದ್ಯೋಗ, ನವೋದ್ಯಮ 4.0 ಕೈಗಾರಿಕೆಗಳಿಗಾಗಿ ಸ್ಕಿಲ್ ಟ್ರೈನಿಂಗ್ ನೀಡಲಾಗುತ್ತಿದೆ. ಇದರಿಂದ ಹೊಸ ಕಂಪನಿಗಳು ನೇಮಕಕ್ಕೆ ಸಹಾಯವಾಗಲಿದೆ. ಯುವಕರು ಓದಲು ಕಡಿಮೆ ಬಡ್ಡಿ ದರದಲ್ಲಿ 7.5ಲಕ್ಷದವರೆಗೂ ಸಾಲ ನೀಡಲಾಗುತ್ತದೆ, ಸ್ಕಿಲ್ ಟ್ರೈನಿಂಗ್‌ಗಾಗಿ ಸಾಲ ನೀಡಲಾಗುತ್ತದೆ. ಎಂಎಸ್‌ಎಂಇ ಮೂಲಕ ಹೆಚ್ಚು ಉದ್ಯೋಗ ನೀಡಲಾಗುತ್ತಿದೆ ಎಂದು ತಿಳಿಸಿದರು

ಸಂಶೋಧನೆ ಮತ್ತು ಅಭಿವೃದ್ಧಿ (R&D)ಯಿಂದ ಬೆಂಗಳೂರಿಗೆ ಹೆಚ್ಚು ಉಪಯೋಗ ಆಗಲಿದೆ. ಬೆಂಗಳೂರಿನಲ್ಲಿ ಸ್ಪೇಸ್ ರಿಸರ್ಚ್ ಈ ಹಿಂದಿನಿಂದಲೂ ನಡೆಯುತ್ತಿದೆ. ಹೀಗಾಗಿ ರಿಸರ್ಚ್‌ಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಇದರಿಂದ ಹೆಚ್ಚು ಅನುಕೂಲ ಆಗಲಿದೆ. ಏಂಜೆಲ್ ಟ್ಯಾಕ್ಸ್ ಕೂಡ ಅನೇಕ ಜನರಿಗೆ ಲಾಭ ಆಗಲಿದೆ. ಕರ್ನಾಟಕ ಕೂಡ ಇದರ ಲಾಭ ಪಡೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ | Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

ಇನ್ನು ಬಜೆಟ್‌ನಿಂದ ಮಹಿಳೆಯರಿಗೆ ಹೆಚ್ಚು ಅನುಕೂಲ ಆಗಲಿದೆ. ಮಹಿಳೆಯರಿಗೆ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ. ಕೃಷಿ ಮತ್ತು ಸಂಶೋಧನೆಯಲ್ಲಿ ಕರ್ನಾಟಕ ಹೆಚ್ಚು ಲಾಭ ಪಡೆದಿದೆ. ಬೆಂಗಳೂರು ಮತ್ತು ರಾಯಚೂರಿನಲ್ಲಿ ಇದರ ಉಪಯೋಗವಾಗಿದೆ. ಅದರಲ್ಲೂ ಹೆಚ್ಚು ಉತ್ತರ ಕರ್ನಾಟಕಕ್ಕೆ ಅನುಕೂಲ ಆಗಿದೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಹಗರಣದ ಬಗ್ಗೆ ಪ್ರತಿಕ್ರಿಯಿಸಿ, ಈ ಅಕ್ರಮದ ಬಗ್ಗೆ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಏನು ಹೇಳುತ್ತೀರಿ? ಬ್ಯಾಂಕ್ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಿ. ಕೇಂದ್ರ ಸರ್ಕಾರದ ಸಿಬ್ಬಂದಿ ಆದರೂ ಸರಿ ಅವರನ್ನು ಬಂಧನ ಮಾಡಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Continue Reading

ವಾಣಿಜ್ಯ

Mukesh Ambani: ಬಜೆಟ್ ದಿನ 9,200 ಕೋಟಿ ರೂ. ಕಳೆದುಕೊಂಡಿದ್ದ ಮುಕೇಶ್ ಅಂಬಾನಿ!

ಕೇಂದ್ರ ಬಜೆಟ್‌ ಮಂಡನೆಯಾದ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್‌ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ, ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ಮುಕೇಶ್ ಅಂಬಾನಿ (Mukesh Ambani) ಸೇರಿದಂತೆ ದೇಶದ ದೊಡ್ಡ ಬಿಲಿಯನೇರ್‌ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.

VISTARANEWS.COM


on

By

Mukesh Ambani

ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವನ್ನು (Ananth Ambani and Radhika Merchant’s wedding) ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದ ರಿಲಯನ್ಸ್ ಉದ್ಯಮಿ ಮುಕೇಶ್ ಅಂಬಾನಿ (businessman Mukesh Ambani) 2024ರ ಕೇಂದ್ರ ಬಜೆಟ್ (Union Budget 2024) ಮಂಡನೆಯಾದ ದಿನ ಷೇರು ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದಾಗಿ ಬರೋಬ್ಬರಿ 9,200 ಕೋಟಿ ರೂ. ಕಳೆದುಕೊಂಡಿದ್ದರು!

ಕೇಂದ್ರ ಬಜೆಟ್‌ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್‌ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಈ ಸಂದರ್ಭದಲ್ಲಿ ವಹಿವಾಟಿನಲ್ಲಿ ಗಮನಾರ್ಹವಾದ ಏರಿಳಿತಗಳು ಕಂಡುಬಂದವು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ದೇಶದ ದೊಡ್ಡ ಬಿಲಿಯನೇರ್‌ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.

ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯದಲ್ಲಿ ಈ ದಿನ ಗಣನೀಯ ಇಳಿಕೆಯಾಗಿದೆ. ಬಜೆಟ್ ದಿನದಂದು, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಏರುವ ನಿರೀಕ್ಷೆ ಇತ್ತು. ಇದರಿಂದ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯವನ್ನು ಹೆಚ್ಚಾಗುತ್ತದೆ ಎಂದೇ ಭಾವಿಸಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀರಿತು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅಂಬಾನಿ ಅವರ ನಿವ್ವಳ ಮೌಲ್ಯವು 1.10 ಬಿಲಿಯನ್ ಡಾಲರ್‌ ಅಂದರೆ ಸರಿಸುಮಾರು 9200 ಕೋಟಿ ರೂ. ಗಳಷ್ಟು ಕಡಿಮೆಯಾಗಿದೆ. ಈ ಕುಸಿತದ ಹೊರತಾಗಿಯೂ ಈ ವರ್ಷದ ಆರಂಭದಲ್ಲಿ ಅವರ ಸಂಪತ್ತು 16 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಾಗಿತ್ತು.

ಕಳೆದ ಕೆಲವು ದಿನಗಳಲ್ಲಿ ಅಂಬಾನಿ ಅವರ ನಿವ್ವಳ ಮೌಲ್ಯವು 7 ಶತಕೋಟಿ ಡಾಲರ್‌ಗಿಂತ ಕಡಿಮೆಯಾಗಿದೆ. ಜುಲೈ 19ರಂದು ಅವರ ನಿವ್ವಳ ಮೌಲ್ಯವು 119 ಶತಕೋಟಿ ಡಾಲರ್ ಆಗಿತ್ತು. ಆದರೆ ಅದು ಈಗ 112 ಶತಕೋಟಿ ಡಾಲರ್‌ಗೆ ಇಳಿದಿದೆ ಎನ್ನಲಾಗಿದೆ.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಇತ್ತೀಚೆಗೆ ಕುಸಿಯುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಅಂಬಾನಿ ಸಂಪತ್ತಿನಲ್ಲಿ ಮತ್ತಷ್ಟು ಕುಸಿತ ಉಂಟಾಗಬಹುದು ಎನ್ನಲಾಗಿದೆ.

Mukesh Ambani


ಇದಕ್ಕೆ ವ್ಯತಿರಿಕ್ತವಾಗಿ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಹೆಚ್ಚಳವಾಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅದಾನಿ ಅವರ ನಿವ್ವಳ ಮೌಲ್ಯವು 751 ಮಿಲಿಯನ್ ಡಾಲರ್‌ಗಳು ಅಂದರೆ ಸರಿಸುಮಾರು 63 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅವರ ಸಂಪತ್ತು 102 ಬಿಲಿಯನ್ ಡಾಲರ್‌ ಗಳನ್ನು ತಲುಪಿದೆ. ಈ ವರ್ಷ ಅವರ ಸಂಪತ್ತು 17.8 ಬಿಲಿಯನ್ ಡಾಲರ್‌ಗಳಷ್ಟು ಏರಿಕೆಯಾಗಿದೆ.

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಅನುದಾನದಲ್ಲಿ ಭಾರೀ ಕಡಿತ! ನೆರೆಯ ರಾಷ್ಟ್ರಗಳಿಗೆ ಎಷ್ಟೆಷ್ಟು ನೆರವು ಘೋಷಣೆ?

Union Budget 2024: 2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು

VISTARANEWS.COM


on

union budget 2024

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌(Union Budget 2024)ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Seetharaman) ಅವರು ಭಾರತದ ವಿದೇಶಿ ನೆರವು ಹಂಚಿಕೆಗಳಲ್ಲಿ ಗಣನೀಯ ಬದಲಾವಣೆಗಳನ್ನು ಘೋಷಿಸಿದ್ದಾರೆ. ಇದರದಲ್ಲಿ ನೆರೆಯ ರಾಷ್ಟ್ರಗಳಾದ ಮಾಲ್ಡೀವ್ಸ್‌ ಮತ್ತು ಭೂತಾನ್‌ಗೆ ಅನುದಾನ ಹಂಚಿಕೆಯಲ್ಲಿ ಈ ಬಾರಿ ಗಣನೀಯ ಬದಲಾವಣೆ ತರಲಾಗಿದೆ. ಮಾಲ್ಡೀವ್ಸ್‌ ಅನುದಾನದಲ್ಲಿ ಈ ಬಾರಿ ಭಾರೀ ಕಡಿತ ಮಾಡಲಾಗಿದೆ. ಹಾಗೆಯೇ ಭೂತಾನ್‌ ಅನುದಾನದಲ್ಲಿ ಏರಿಕೆ ಮಾಡಲಾಗಿದೆ.

2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು.

ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮೊಹಮದ್ ಮುಯಿಝು ಅವರು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಚುನಾಯಿತರಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಟ್ಟಿದೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅವರ ಆಡಳಿತದ ವಿಮರ್ಶಾತ್ಮಕ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುವ “ಮಾಲ್ಡೀವ್ಸ್ ಬಹಿಷ್ಕಾರ” ಅಭಿಯಾನವನ್ನು ಹುಟ್ಟುಹಾಕಿತು.

ಈ ಬಾರಿ ನೇಪಾಳವು 700 ಕೋಟಿ ರೂಪಾಯಿ ಅತ್ಯಧಿಕ ನೆರವನ್ನು ಪಡೆದುಕೊಂಡಿದೆ. ಇದು ನೇಪಾಳ ಮತ್ತು ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. ಶ್ರೀಲಂಕಾವು ಕಳೆದ ವರ್ಷದ 60 ಕೋಟಿ ರೂಪಾಯಿಗಳ ನೆರವು ಪಡೆದಿತ್ತು. ಈ ಬಾರಿ 245 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದು, ನೆರವಿನಲ್ಲಿ ಗಣನೀಯ ಏರಿಕೆ ಕಂಡಿದೆ.

ಬಜೆಟ್‌ನಲ್ಲಿ ದಕ್ಷಿಣ ಏಷ್ಯಾದ ಆಚೆಗಿನ ದೇಶಗಳಿಗೂ ಮೀಸಲಿಡಲಾಗಿದೆ. ಇರಾನ್‌ನ ಚಬಹಾರ್ ಬಂದರು 100 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದ್ದು, ಅದರ ಕಾರ್ಯತಂತ್ರದ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅಫ್ಘಾನಿಸ್ತಾನದ ನೆರವನ್ನು 220 ಕೋಟಿಯಿಂದ 200 ಕೋಟಿಗೆ ಸ್ವಲ್ಪ ಕಡಿಮೆ ಮಾಡಲಾಗಿದೆ. ಬಾಂಗ್ಲಾದೇಶಕ್ಕೆ 120 ಕೋಟಿ ರೂ., ಮ್ಯಾನ್ಮಾರ್‌ನ ನೆರವನ್ನು 320 ಕೋಟಿ ರೂ.ಗಳಿಂದ 250 ಕೋಟಿ ರೂ.ಗೆ ಇಳಿಸಲಾಯಿತು. ಆಫ್ರಿಕನ್ ರಾಷ್ಟ್ರಗಳು ಒಟ್ಟಾರೆಯಾಗಿ 200 ಕೋಟಿ ರೂಪಾಯಿಗಳನ್ನು ಪಡೆದಿವೆ ಮತ್ತು ಮಾರಿಷಸ್‌ಗೆ 370 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಒಟ್ಟಾರೆ ವಿದೇಶಾಂಗ ವ್ಯವಹಾರಗಳ ಬಜೆಟ್‌ ಎಷ್ಟು?

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಒಟ್ಟು ಬಜೆಟ್ ಅನ್ನು 29,121 ಕೋಟಿ ರೂಗಳಿಂದ 22,154 ಕೋಟಿಗೆ ಇಳಿಸಲಾಗಿದ್ದು, ಇದು ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಹಂಚಿಕೆಯೊಂದಿಗೆ ಹೊಂದಿಕೆಯಾಗುತ್ತದೆ. ಕೇಂದ್ರ ಬಜೆಟ್ 2024-25 ಭಾರತದ ಕ್ರಿಯಾತ್ಮಕ ವಿದೇಶಾಂಗ ನೀತಿಯನ್ನು ಪ್ರತಿಬಿಂಬಿಸುತ್ತದೆ. ಭೂತಾನ್ ಮತ್ತು ಇತರ ನೆರೆಹೊರೆಗಳಿಗೆ ಹೆಚ್ಚಿದ ಬೆಂಬಲವು ಭಾರತದ ವಿಕಸನಗೊಳ್ಳುತ್ತಿರುವ ರಾಜತಾಂತ್ರಿಕ ಆದ್ಯತೆಗಳನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

Continue Reading
Advertisement
Latest2 hours ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌