Budget 2024 : ಮಧ್ಯಂತರ ಬಜೆಟ್​ ವೇಳೆ ಷೇರು ಮಾರುಕಟ್ಟೆ ಕುಸಿತ, ಚೇತರಿಕೆ - Vistara News

ಬಜೆಟ್ 2024

Budget 2024 : ಮಧ್ಯಂತರ ಬಜೆಟ್​ ವೇಳೆ ಷೇರು ಮಾರುಕಟ್ಟೆ ಕುಸಿತ, ಚೇತರಿಕೆ

Budget 2024 : ಹೆಚ್ಚಿನ ಘೋಷಣೆಗಳು ಇಲ್ಲದ ಕಾರಣ ಆರಂಭದಲ್ಲಿ ಷೇರು ಮಾರುಕಟ್ಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತಗೊಂಡಿತ್ತು. ಬಳಿಕ ನಿಧಾನಗತಿಯಲ್ಲಿ ಏರಿಕೆ ಕಂಡಿತು.

VISTARANEWS.COM


on

Share Market
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮಧ್ಯಂತರ ಬಜೆಟ್​ಗೆ ಷೇರು ಮಾರುಕಟ್ಟೆ ಹೂಡಿಕೆದಾರರು ಹೆಚ್ಚಿನ ಪ್ರತಿಕ್ರಿಯೆ ತೋರಲಿಲ್ಲ. ಭಾರತೀಯ ಷೇರುಗಳು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಕುಸಿತ ಕಂಡವು. ಬಳಿಕ ಅದು ಚೇತರಿಸಿಕೊಂಡವು. ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಜೆಟ್ ಮಂಡಿಸಿದ್ದು, ನಿರೀಕ್ಷಿತ ಪ್ರಮುಖ ಘೋಷಣೆಗಳಿಲ್ಲದ ಕಾರಣ ಆರಂಭದಲ್ಲಿ 150 ಪಾಯಿಂಟ್​ಗಳಷ್ಟು ಇಳಿಕೆ ಕಂಡಿತ್ತು. ನಂತರದಲ್ಲಿ ನಿಧಾನವಾಗಿ ಏರಿಕೆಯಾಯಿತು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಸೆನ್ಸೆಕ್ಸ್ 73.99 ಪಾಯಿಂಟ್ ಅಥವಾ ಶೇಕಡಾ 0.10 ರಷ್ಟು ಏರಿಕೆ ಕಂಡು 71,826.10 ಕ್ಕೆ ತಲುಪಿದೆ ಮತ್ತು ನಿಫ್ಟಿ 2.50 ಪಾಯಿಂಟ್ ಅಥವಾ 0.01% ಏರಿಕೆ ಕಂಡು 21,728.20 ಕ್ಕೆ ತಲುಪಿದೆ.

ಕೇಂದ್ರ ಬಜೆಟ್​ನಲ್ಲಿ ರಫ್ತು ಗುರಿಯನ್ನು ದ್ವಿಗುಣಗೊಳಿಸಿದ್ದರಿಂದ ಭಾರತೀಯ ಮೀನುಗಾರಿಕೆ ಷೇರುಗಳು ಜಿಗಿತ ಕಂಡವು. 10 ಮಿಲಿಯನ್ ಮನೆಗಳಿಗೆ ಸೌರ ಫಲಕಗಳ ಮೂಲಕ ಉಚಿತ ವಿದ್ಯುತ್ ನೀಡಲಾಗುವುದು ಎಂದು ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದರಿಂದ ವಿದ್ಯುತ್ ಸ್ಟಾಕ್​ಗಳು ಏರಿಕೆ ಕಂಡವು. ಆಟೋಮೊಬೈಲ್​ ಕ್ಷೇತ್ರದ ಷೇರುಗಳು ಹೆಚ್ಚಿನ ಲಾಭ ಗಳಿಸಿದವು, ಕಂಪನಿಗಳು ಜನವರಿಯ ಮಾರಾಟದ ಡೇಟಾವನ್ನು ವರದಿ ಮಾಡಿದ್ದರಿಂದ 1% ಏರಿಕೆ ಕಂಡಿದೆ.

ಆದಾಯ ತೆರಿಗೆಯಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಟ್ಯಾಕ್ಸ್​ ಸ್ಲ್ಯಾಬ್​

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸಂಬಳ ಪಡೆಯುವ ವೃತ್ತಿಪರರು, ವಿಶೇಷವಾಗಿ, ಆದಾಯ ತೆರಿಗೆಯ ಬಗ್ಗೆ ಅವರ ಘೋಷಣೆಗಳ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದರು. ಅವರೆಲ್ಲರಿಗೂ ಶುಭ ಸುದ್ದಿ ನೀಡಿದ್ದು ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದೇ ರೀತಿ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರವಾಗಿದೆ.

ಇದನ್ನೂ ಓದಿ : Budget 2024: ಕೇಂದ್ರ ಬಜೆಟ್‌ಗೆ FKCCI ಸಂತಸ; ಭವಿಷ್ಯದ ಭಾರತ ಬಗ್ಗೆ ಸ್ಪಷ್ಟತೆ

ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಪ್ರಕಟಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್​​ನಲ್ಲಿ ಆದಾಯ ತೆರಿಗೆ ದರಗಳು ಮತ್ತು ಸ್ಲ್ಯಾಬ್​ಗಳು ಹಿಂದಿನದ್ದನ್ನೇ ಉಳಿಸಿಕೊಳ್ಳಲಾಗಿದೆ. ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಕೊಟ್ಟಿಲ್ಲ . ಅಸ್ತಿತ್ವದಲ್ಲಿರುವ ಸ್ಲ್ಯಾಬ್ (ಕಳೆದ ವರ್ಷದ ಬಜೆಟ್​ನಲ್ಲಿ ಪ್ರಕಟಿಸಿರುವ ಹೊಸ ಮಾದರಿಯ ತೆರಿಗೆ ಪದ್ಧತಿ) ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಸೀತಾರಾಮನ್ ಹೇಳಿದ್ದಾರೆ.

ಇದೇ ವೇಳೆ ಅದಕ್ಕಿಂತ ಹಿಂದಿನ (ಓಲ್ಡ್​ ರೆಜಿಮ್​) ಆದಾಯ ಸ್ಲ್ಯಾಬ್​ಗಳನ್ನು ಅದೇ ರೀತಿ ಮುಂದುವರಿಸಲಾಗಿದೆ. 2023ರವರೆಗೆ ಒಟ್ಟು 5 ಲಕ್ಷ ರೂ. ತನಕದ ಆದಾಯಕ್ಕೆ ವಿನಾಯಿತು ಲಭಿಸುತ್ತಿತ್ತು. ಹೊಸ ಮಾದರಿಯಲ್ಲಿ (ನ್ಯೂ ರೆಜಿಮ್​) 7 ಲಕ್ಷ ರೂ.ಗೆ ವಿಸ್ತರಿಸಲಾಗಿತ್ತು. 5 ಲಕ್ಷ ರೂ. ತನಕದ ಆದಾಯಕ್ಕೆ 12,500 ರೂ. ತನಕ ತೆರಿಗೆ ರಿಬೇಟ್‌ ಸಿಗುತ್ತಿತ್ತು. ಹೀಗಾಗಿ ವೈಯಕ್ತಿಕ ತೆರಿಗೆದಾರರು 7 ಲಕ್ಷ ರೂ. ತನಕದ ಆದಾಯಕ್ಕೆ ತೆರಿಗೆ ನೀಡದೆ ಇರಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ವಿಸ್ತಾರ ಸಂಪಾದಕೀಯ: ಸಾಲದ ಹೊರೆಯ ನಡುವೆ ಸರ್ವ ವಲಯಗಳಿಗೂ ಸಮಾನ ಹಂಚಿಕೆಯ ಬಜೆಟ್

Vistara Editorial: ಸಿಎಂ ಸಿದ್ದರಾಮಯ್ಯ ಅವರು ಸಾಲ ಮಾಡಿ ತುಪ್ಪ ತಂದರೂ ರಾಜ್ಯದ ಎಲ್ಲ ವಲಯಗಳ ಜನತೆಗೂ ಹದವಾಗಿ ಹಂಚಿದ್ದಾರೆ. ಅವರ ಘೋಷಣೆಗಳು ಹಾಗೂ ಭರವಸೆಗಳು ಸಕಾಲದಲ್ಲಿ ಕಾರ್ಯರೂಪದಲ್ಲಿ ಬರುವಂತಾಗಲಿ.

VISTARANEWS.COM


on

Vistara Editorial, Karnataka budget touches all sectors amid debt burden
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು 2024-25ರ ಬಜೆಟ್‌ ಅನ್ನು ಮಂಡಿಸಿದ್ದಾರೆ. ಈ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರ 3,71,383 ಕೋಟಿ ರೂ. ಇದು 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇನ್ನಷ್ಟು ಆಕರ್ಷಕ ಯೋಜನೆಗಳನ್ನು ಪ್ರಕಟಿಸಿ ಮತದಾರರನ್ನು ಸೆಳೆಯಬಹುದು ಎಂದು ಹೇಳಲಾಗಿತ್ತಾದರೂ, ಸಿಎಂ ಹಾಗೇನೂ ಮಾಡಲು ಮುಂದಾಗಿಲ್ಲ. ಖಜಾನೆಯ ಸ್ಥಿತಿಗತಿ ಗಮನಿಸಿಕೊಂಡು, ಏರಿಸಬೇಕಾದಲ್ಲಿ ತೆರಿಗೆ ಏರಿಸಿ, ಸಾಲ ಮಾಡಬೇಕಾದಲ್ಲಿ ಸಾಲ ಮಾಡಿ, ಗ್ಯಾರಂಟಿ ಯೋಜನೆಗಳಿಗೂ ಹಣಕಾಸು ಹೊಂದಿಸಿಕೊಂಡು, ವಿತ್ತೀಯ ಶಿಸ್ತನ್ನು ಉಳಿಸಿಕೊಳ್ಳಲು ಸಾಕಷ್ಟು ಕಸರತ್ತು ಮಾಡಿ ಬಜೆಟನ್ನು ಸಿಎಂ ಮಂಡಿಸಿದ್ದಾರೆ. ಎಲ್ಲ ವಲಯಗಳನ್ನೂ ಈ ಬಜೆಟ್‌ ಸ್ಪರ್ಶಿಸಿದೆ(Vistara Editorial).

ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ. ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ. ಇಲಾಖೆಗಳಲ್ಲಿ ಶಿಕ್ಷಣ 44422 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ 34406 ಕೋಟಿ ರೂ., ಇಂಧನ 23159 ಕೋಟಿ ರೂ., ಗ್ರಾಮೀಣಾಭಿವೃದ್ಧಿ 21160 ಕೋಟಿ ರೂ. ಹೆಚ್ಚಿನ ಅನುದಾನ ಪಡೆದಿವೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ, ಸರ್ಕಾರದ ಹಿಂದಿನ ಅವಧಿಯ ಬೆಳೆಸಾಲ ಮನ್ನಾ ಬಾಬ್ತು ಬಾಕಿ ಇರುವ 132 ಕೋಟಿ ರೂ. ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ, ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ಇವೆಲ್ಲವೂ ಕೃಷಿ ಕ್ಷೇತ್ರವನ್ನು ಬಲಿಷ್ಠಗೊಳಿಸುವ ಘೋಷಣೆಗಳಾಗಿವೆ. ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಒಂದು ಪ್ರತ್ಯೇಕ ಯೋಜನಾ ವಿಭಾಗ ಹಾಗೂ 2 ಉಪವಿಭಾಗಗಳ ಸ್ಥಾಪನೆ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ, ಲಿಫ್ಟ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ, ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಿರುವುದು ನೀರಾವರಿಯ ಬೋನಸ್.

2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿರುವುದು ವಸತಿ ಹೊಂದುವ ಕನಸು ಹೊಂದಿದವರಿಗೆ ಭರವಸೆ. 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ ಮಾಡುತ್ತಿರುವುದು ಶಿಕ್ಷಣ ಕ್ಷೇತ್ರದಲ್ಲಿ ಕುತೂಹಲಕಾರಿಯಾದ, ಕನ್ನಡ ಭಾಷೆಯ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲ ಹೆಜ್ಜೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ, ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ, ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ ಇವುಗಳು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಹೆಚ್ಚಿನ ಮೌಲ್ಯ ಕಲ್ಪಿಸಬಲ್ಲ ಕ್ರಮಗಳಾಗಿವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ಆದರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಸಾಲ ಮಾಡಿರುವುದು ಕಂಡುಬರುತ್ತಿದೆ. 2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ಅಂದರೆ ಈಗ ರಾಜ್ಯ ಸರ್ಕಾರದ ಮೇಲೆ 6.65 ಲಕ್ಷ ಕೋಟಿ ರೂ. ಸಾಲ ಇದೆ. ಅಂದರೆ, ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆ ಇದೆ ಎಂದು ಇಟ್ಟುಕೊಂಡರೆ ಪ್ರತಿಯೊಬ್ಬರ ಮೇಲೆ ಒಂದೊಂದು ಲಕ್ಷ ರೂ. ಸಾಲ ಇರುವಂತಾಗಿದೆ. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ. ಆದರೆ ಇದು ವಿತ್ತೀಯ ಶಿಸ್ತನ್ನು ದಾಟಿ ಹೋಗಿಲ್ಲ. ಹೀಗಾಗಿ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ ಎಂಬ ವಾದ ಮುಖ್ಯಮಂತ್ರಿಯದು. ಸಾಲ ಮಾಡಿ ತುಪ್ಪ ತಂದರೂ ರಾಜ್ಯದ ಎಲ್ಲ ವಲಯಗಳ ಜನತೆಗೂ ಹದವಾಗಿ ಹಂಚಿದ್ದಾರೆ. ಈ ಮೇಲಿನ ಘೋಷಣೆಗಳು ಹಾಗೂ ಭರವಸೆಗಳು ಸಕಾಲದಲ್ಲಿ ಕಾರ್ಯರೂಪದಲ್ಲಿ ಬಂದಾಗ ಮಾತ್ರ ಅರ್ಥಪೂರ್ಣವಾಗಲಿವೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಚುನಾವಣೆ ಬಾಂಡ್; ಪಾರದರ್ಶಕತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Continue Reading

ಬಜೆಟ್ 2024

Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​

Karnataka Budget 2024 : ಡ್ರೋನ್ ತರಬೇತಿ ನೀಡುವ ಮೂಲಕ ಪರಿಶಿಷ್ಟ ಪಂಗಡದ ಯುವಕರಿಗೆ ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

VISTARANEWS.COM


on

Drone Training
Koo

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಕ್ಕೆ ನೆರವಾಗುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದರು.

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್​ -3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂಬುದಾಗಿ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರೈಸ್‌ ಯೋಜನೆಯಡಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು| ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು ಎಂದು ನುಡಿದರು.

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ 100 ರೂ. ನಂತೆ ಹೆಚ್ಚಿಸಲಾಗುವುದು ಎಂದು ಹೇಳಿದರು.

35 ಕೋಟಿ ಕಾರ್ಪಸ್​ ಫಂಡ್​

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್​​ ಫಂಡ್​ ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

  1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಿದರು.
  2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
  3. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು ಎಂದು ಸಿಎಂ ಬಜೆಟ್ ವೇಳೆ ಘೋಷಿಸಿದ್ದಾರೆ.
Continue Reading

ಪ್ರಮುಖ ಸುದ್ದಿ

Karnataka Budget 2024 : ಮೆಟ್ರೊ 3ನೆ ಹಂತ ಸೇರಿದಂತೆ ಬೆಂಗಳೂರು ನಗರ ಸಂಚಾರ ವ್ಯವಸ್ಥೆಗೆ ಬಜೆಟ್​ನಲ್ಲಿ ಒತ್ತು

Karnataka Budget 2024 : ಮೆಟ್ರೊ, ಉಪನಗರ ರೈಲು ಹಾಗೂ ಬಿಎಂಟಿಗೆ ಉತ್ತೇಜನ ನೀಡುವ ಭರವಸೆಯನ್ನು ಬಜೆಟ್​ನಲ್ಲಿ ವ್ಯಕ್ತಪಡಿಸಲಾಗಿದೆ.

VISTARANEWS.COM


on

Namma Metro
Koo

ಬೆಂಗಳೂರು: ಬೆಂಗಳೂರು ನಗರದೊಳಗಿನ ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಅವರು ತಾವು ಮಂಡಿಸಿರುವ 15ನೇ ಬಜೆಟ್​ನಲ್ಲಿ (Karnataka Budget 2024) ಒತ್ತು ನೀಡಿದ್ದಾರೆ. ಪ್ರಮುಖವಾಗಿ ಸರ್ಜಾಪುರದಿಂದ ಹೆಬ್ಬಾಳದವರೆಗಿನ ನಮ್ಮ ಮೆಟ್ರೋ ಹಂತ 3 ಕರಡು ಸಿದ್ಧಪಡಿಸುವುದು, ಉಪನಗರ ರೈಲು ಯೋಜನೆಗೆ ಚುರುಕು, ಬಿಎಂಟಿಸಿ ಸಾರಿಗೆ ಉನ್ನತೀಕರಣಕ್ಕೆ ಆದ್ಯತೆ ನೀಡಲಾಗಿದೆ.

ನಮ್ಮ ಮೆಟ್ರೋ ರೈಲಿನ ಮೂಲಕ 8 ಲಕ್ಷಕ್ಕೂ ಹೆಚ್ಚಿನ ಜನರು ಪ್ರತಿನಿತ್ಯ ಪ್ರಯಾಣಿಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಸಿದ್ದವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತನ್ನ ಬಜೆಟ್‌ ಭಾಷಣದಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ :Karnataka Budget 2024 : ಸಿದ್ದರಾಮಯ್ಯ ಬಜೆಟ್​ ಎಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ 1

ಮೆಟ್ರೊ ಹಂತ-3ರ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ. ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸಲಿದೆ.

ಉಪನಗರ ರೈಲು

ಬೆಂಗಳೂರು ಉಪನಗರ ರೈಲು ಯೋಜನೆಯಡಿ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಐರೋಪ್ಯ ಹೂಡಿಕೆ ಬ್ಯಾಂಕ್‌ ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಿಎಂಟಿಸಿಗೆ ಹೊಸ ಬಸ್‌ಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​ ಬಾಷಣದಲ್ಲಿ ಹೇಳಿದ್ದಾರೆ.

ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಆ್ಯಪ್​

ಬಿಎಂಟಿಸಿಯಲ್ಲಿ ಮಹಿಳಾ ಸುರಕ್ಷತೆಯನ್ನು ಒಳಗೊಂಡ ವೆಹಿಕಲ್‌ ಟ್ರ್ಯಾಕಿಂಗ್‌ ಹೊಂದಿರುವ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏರಿಯಾ ಟ್ರಾಫಿಕ್‌ ಸಿಗ್ನಲ್‌ ಸಿಸ್ಟಮ್‌ ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು ಎಂದರು.

Continue Reading

ಕರ್ನಾಟಕ

Karnataka Budget 2024: ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡ ಕಸುಬಿ ಬಜೆಟ್‌ ಎಂದ ಆರ್.ಅಶೋಕ್‌

Karnataka Budget 2024: ಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌’ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

VISTARANEWS.COM


on

R Ashoka
Koo

ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡ ಕಸುಬಿ ಬಜೆಟ್‌ʼ (Karnataka Budget 2024) ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಟುವಾಗಿ ಟೀಕಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡ ಕಸುಬಿʼ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.

ಸಾಧನೆಯ ಬಲದಿಂದಾಗಲೀ, ಅಭಿವೃದ್ಧಿ ಕೆಲಸಗಳಿಂದಾಗಲೀ, ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Karnataka Budget Session 2024: ಬೆಂಗಳೂರಲ್ಲಿ 6,000 ಕೋಟಿ ರೂ. ತೆರಿಗೆ ಸಂಗ್ರಹ ಟಾರ್ಗೆಟ್‌! ನಗರಾಭಿವೃದ್ಧಿಗೆ ಏನ್‌ ಮಾಡ್ತಾರೆ?

ತಲಾ 44,000 ರೂ. ಸಾಲಭಾಗ್ಯ

ತಮ್ಮ ಮೊದಲ ಅವಧಿಯಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಮಾಡಿ ಪ್ರತಿ ಪ್ರಜೆಯ ತಲೆಯ ಮೇಲೆ 44,000 ರೂ. ಗೂ ಅಧಿಕ ಸಾಲದ ಹೊರೆ ಹೇರಿದ್ದು ಮುಖ್ಯಮಂತ್ರಿ ಸಿದ್ದರಾಮ್ಯಯನವರ ದೊಡ್ಡ ಸಾಧನೆ. ಆ ಭಾಗ್ಯ, ಈ ಭಾಗ್ಯ ಎಂದು ರಾಜ್ಯದ ಜನತೆಯ ಮೇಲೆ ʼಸಾಲ ಭಾಗ್ಯʼ ಹೊರಿಸಿ, ಹಳಿ ತಪ್ಪಿದ್ದ ವಿತ್ತೀಯ ಶಿಸ್ತನ್ನು ನಂತರ ಬಂದ ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿ ದಾರಿಗೆ ತಂದಿತ್ತು. ಆದರೆ ಈಗ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬುದು ಈ ಸರ್ಕಾರದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬಂತಾಗಿದೆ ಎಂದರು.

ಕೇಂದ್ರದ ಮೇಲೆ ಆರೋಪ: ಬಜೆಟ್‌ ಪುಸ್ತಕದಲ್ಲಿ ಸುಳ್ಳುಗಳು

ಮೋದಿ ಸರ್ಕಾರದ ವಿರುದ್ಧ ದ್ವೇಷ ಭಾಷಣವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಸಂಪತ್ತಿನ ಶೇಖರಣೆ, ಅಸಮಾನತೆ ಎಂಬ ಹಳೆಯ ವಾದವನ್ನೇ ಜನರ ಮುಂದಿಟ್ಟಿದ್ದಾರೆ. ಹೀಗೆ ಹೇಳುತ್ತಲೇ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನ್ನು ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಪರೋಕ್ಷವಾಗಿ ಹೇಳಿದ್ದು, ಹಾಗೇನೂ ಇಲ್ಲ ಎಂದು ಬಜೆಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

15ನೇ ಹಣಕಾಸು ಯೋಜನೆಯಡಿ ವಿಶೇಷ ಅನುದಾನ ಎಂಬ ಹಸಿ ಸುಳ್ಳನ್ನು ಬಜೆಟ್‌ ಪುಸ್ತಕದಲ್ಲಿ ಸೇರಿಸಿದ್ದಾರೆ. ಈ ರೀತಿಯ ಶಿಫಾರಸನ್ನು ಮಾಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ಎಷ್ಟು ನಷ್ಟವಾಗಿದೆ ಎಂಬ ಹೊಸ ತಲೆ ಬುಡವಿಲ್ಲದ ಲೆಕ್ಕವನ್ನು ನೀಡಿದ್ದಾರೆ. 2004-2014 ರ ಅವಧಿಯಲ್ಲಿ ಯುಪಿಎ ನೀಡಿದ್ದು, 81,795 ಕೋಟಿ ರೂ. 2014-2024 ರ ಅವಧಿಯಲ್ಲಿ ಮೋದಿ ಸರ್ಕಾರ ನೀಡಿರುವುದು 2,82,791 ಕೋಟಿ ರೂ. ಅಂದರೆ ಈ ಪ್ರಮಾಣ 242% ಕ್ಕೂ ಅಧಿಕ ಎಂದು ಆರ್.ಅಶೋಕ ಸತ್ಯಾಂಶವನ್ನು ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಜನರ ಆದಾಯ ಹೆಚ್ಚಿದೆ ಎಂದಿದ್ದಾರೆ. ಒಂದು ಕಡೆ ವಿದ್ಯುತ್‌ ದರ ಏರಿಕೆ, ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಕಡಿತ, ಕಿಸಾನ್‌ ಸಮ್ಮಾನ್‌ ನಿಧಿ ಸ್ಥಗಿತ, ವಿದ್ಯಾನಿಧಿ ಸ್ಥಗಿತ, ಹೈನುಗಾರರಿಗೆ ಹಾಲಿನ ಪ್ರೋತ್ಸಾಹಧನ ಸ್ಥಗಿತ, ಮುದ್ರಾಂಕ ಶುಲ್ಕ ದರ ಏರಿಕೆ ಮೊದಲಾದವುಗಳ ಮೂಲಕ ಜನರಿಗೆ ದರ ಏರಿಕೆಗಳ ಬರೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌’ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

ಪದೇ ಪದೆ ಆರೋಪ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಮುಖ್ಯಮಂತ್ರಿಗಳು ವಿಧಾನಸಭೆಯ ಒಳಗೆ ಕಾಂಗ್ರೆಸ್‌ನ ಶಾಲು ಧರಿಸಿಕೊಂಡು ಬಜೆಟ್‌ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡಿ ತೆಗಳಿದ್ದಾರೆ. 15 ನೇ ಹಣಕಾಸು ಆಯೋಗವಿದ್ದಾಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರು. ಅದಕ್ಕೆ ಅವರೇ ಒಪ್ಪಿಗೆ ಕೊಟ್ಟು ಈಗ ಅನ್ಯಾಯ ಆಗಿದೆ ಎಂದರೆ ಕುಣಿಯಲಾಗದವರು ನೆಲ ಡೊಂಕು ಎಂದಂತಾಗುತ್ತದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇವರೊಬ್ಬರೇ ತೆರಿಗೆ ಪಾವತಿಸುವಂತೆ ಮಾತಾಡುತ್ತಾರೆ. ಕೇಂದ್ರ ಸರ್ಕಾರದಿಂದ ಅನುದಾನ ತರುವುದು ಹೇಗೆಂದು ಯೋಚಿಸದೆ ತೆಗಳುವ ಕೆಲಸ ಮಾಡಿರುವುದರಿಂದ ನಾವು ಸಭಾತ್ಯಾಗ ಮಾಡಿದ್ದೇವೆ ಎಂದರು.

ಹಿಂದೆ ಬಿಜೆಪಿ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ನವರು ಕಿವಿ ಮೇಲೆ ಹೂ ಇಟ್ಟುಕೊಂಡಿದ್ದರು. ಆದರೆ ಈಗ ನಾವು ಪ್ರತಿಭಟಿಸಿದ್ದನ್ನು ಸ್ಪೀಕರ್‌ ಮಾಧ್ಯಮಕ್ಕೆ ತಿಳಿಯದಂತೆ ಮಾಡಿದ್ದಾರೆ. ರಾಜ್ಯಕ್ಕೆ 14,000 ಕೋಟಿ ರೂ. ಆದಾಯ ಕಡಿಮೆಯಾದರೆ, ಕೇಂದ್ರದಿಂದ ಬರುವ ಅನುದಾನ 3,000 ಕೋಟಿ ರೂ. ಹೆಚ್ಚಿದೆ. ಸಿಎಂ ಸಿದ್ದರಾಮಯ್ಯನವರು 7 ಕೋಟಿ ಕನ್ನಡಿಗರ ಮೇಲೆ ತೆರಿಗೆಯ ಜೊತೆಗೆ ಸಾಲದ ಹೊರೆ ಹಾಕಿದ್ದಾರೆ. ಒಟ್ಟು ಸಾಲ 1 ಲಕ್ಷ ಕೋಟಿ ರೂ. ದಾಟಿದೆ. ಸಾಲವನ್ನು ಈ ಮಟ್ಟಕ್ಕೆ ದಾಟಿಸಿದ ಮೊದಲ ಮುಖ್ಯಮಂತ್ರಿ ಇವರೇ ಎಂದರು.

ಇದನ್ನೂ ಓದಿ | Karnataka Budget 2024: ಏಳನೇ ವೇತನ ಆಯೋಗ ಶಿಫಾರಸು ಜಾರಿ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

ಲೂಟಿ ಹೊಡೆದ ಹಣವನ್ನು ಸಾಗಿಸಲು ಸುರಂಗ ಯೋಜನೆ ರೂಪಿಸಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಉತ್ತಮ ಅನುದಾನ ನೀಡಿದ್ದಾರೆ. ಆದರೆ ಈಗಿನ ಬಜೆಟ್‌ನಲ್ಲಿ ಬೆಂಗಳೂರಿಗೆ ಅನುದಾನವೇ ಇಲ್ಲ. ಇದು ಚುನಾವಣೆಗಾಗಿ ಮಾಡಿದ ಬೋಗಸ್‌ ಬಜೆಟ್‌ ಎಂದರು.

Continue Reading
Advertisement
3 Indian companies have featured in Time magazines list of 100 most influential companies in the world
ದೇಶ53 mins ago

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Murder News
ಪ್ರಮುಖ ಸುದ್ದಿ2 hours ago

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Reserve Bank of India
ದೇಶ2 hours ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ2 hours ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್3 hours ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು3 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ3 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್4 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ4 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ4 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ11 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌