ಸಿನಿಮಾ
ಶ್..! ʼKGFʼ2 ಮಾನ್ಸ್ಟರ್ ಇಸ್ ಹಿಯರ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮೊಸ್ಟ್ ಅವೈಟೆಡ್ ಸಿನಿಮಾ ಕೆಜಿಎಫ್ 2 ಬಿಡುಗಡೆಗೊಂಡು ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ಕೆಜಿಎಫ್ 1 ಚಿತ್ರಕ್ಕೆ ಸೂಕ್ತ ಅಂತ್ಯ ಕೆಜಿಎಫ್ 2ನಲ್ಲಿದೆ.
ಚಿತ್ರ: ಕೆಜಿಎಫ್ ಚಾಪ್ಟರ್-2.
ನಿರ್ದೇಶಕ: ಪ್ರಶಾಂತ್ ನೀಲ್.
ನಿರ್ಮಾಪಕ: ವಿಜಯ್ ಕಿರಗಂದೂರ್
ಬ್ಯಾನರ್: ಹೊಂಬಾಳೆ ಫಿಲ್ಮ್ಸ್
ಸಂಗೀತ: ರವಿ ಬಸ್ರೂರ್
ತಾರಾಗಣ: ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್ತ್, ರವೀನಾ ಟಂಡನ್, ಅಚ್ಯುತ್ ಕುಮಾರ್, ಪ್ರಕಾಶ್ ರಾಜ್. ಮಾಳವಿಕಾ ಅವಿನಾಶ್,ಅರ್ಚನಾ ಜೋಯ್ಸ್, ಅಯ್ಯಪ್ಪ ಪಿ ಶರ್ಮಾ, ಹರೀಶ್ ರೈ, ದಿನೇಶ್ ಮಂಗಳೂರು.
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 1 ಅತ್ಯತ್ತಮ ಸಿನಿಮಾ ಎಂದು ಹೆಸರು ಮಾಡಿತ್ತು. ಚಿತ್ರದ ಯಶಸ್ಸಿಗೆ ಅವರು ಆಯ್ದುಕೊಂಡ ಕಥೆ, ತಾರಾಗಣ, ಪ್ರಬಲವಾದ ಚಿತ್ರತಂಡ ಪ್ರಮುಖ ಪಾತ್ರವಹಿಸಿತ್ತು. ಕೆಜಿಎಫ್ 1 ಮುಗಿಯುವ ಹೊತ್ತಿಗೆ ಎರಡನೇ ಭಾಗದಲ್ಲಿ ಏನು ಹೊಸತನ್ನು ಕಾಣಬಹುದು ಎಂಬ ಕುತೂಹಲ ಕೆರಳಿಸಿತ್ತು. ರಾಕಿ ಭಾಯ್ ಗರುಡನನ್ನು ಕೊಂದ ಮೇಲೆ ಕೆಜಿಎಫ್ನ ಸುಲ್ತಾನನಾಗಿ ಪಟ್ಟಕ್ಕೆ ಏರ್ತಾರಾ? ರೀನಾ ಮತ್ತು ರಾಕಿ ಭಾಯ್ ಒಂದಾಗ್ತಾರಾ? ರಮಿಕಾ ಸೇನ್ ರಾಕಿ ವಿರುದ್ಧ ಏನು ಕ್ರಮ ಕೈಗೊಳ್ತಾರೆ? ಗುರುಪಾಂಡ್ಯನ್ ಸೇರಿದಂತೆ ಉಳಿದವರ ಕಥೆ ಏನಾಗುತ್ತೆ? ಇನಾಯತ್ ಖಲೀಲ್ ಹಡಗುಗಳು ಭಾರತದ ಪೋರ್ಟ್ ಪ್ರವೇಶ ಪಡೆಯುತ್ತಾ? ಅಧೀರ ಕೆಜಿಎಫ್ಗೆ ಆಗಮಿಸಿದರೆ ರಾಕಿ ಏನು ಮಾಡಬಹುದು?
ಕೆಜಿಎಫ್ 1 ಹೀಗೆ ಹಲವಾರು ಪ್ರಶ್ನೆಗಳನ್ನು ಪ್ರೇಕ್ಷಕರ ಮನದಲ್ಲಿ ಹುಟ್ಟು ಹಾಕಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಇದಕ್ಕೆ ಉತ್ತರವಾಗಿ ಎರಡನೇ ಭಾಗ ಬರಲಿದೆ ಎಂದು ಭರವಸೆ ನೀಡಿದ್ದರು. ರಾಕಿ ತನ್ನ ತಾಯಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುವದರಲ್ಲಿ ಹೇಗೆ ಯಶಸ್ವಿಯಾದರೋ ಅದೇ ರೀತಿ ಪ್ರಶಾಂತ್ ಕೂಡ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಕೆಜಿಎಫ್ ಮೊದಲ ಭಾಗಕ್ಕೆ ಸೂಕ್ತ ಅಂತ್ಯವನ್ನು ಕೆಜಿಎಫ್ ಚಾಪ್ಟರ್ 2ನಲ್ಲಿ ನೀಡಲಾಗಿದೆ ಎಂದು ಹೇಳಬಹುದು.
ಏನು ಕಥೆ?
ಕೆಜಿಎಫ್ 2 ಮೊದಲ ಭಾಗದ ಮುಂದುವರೆದ ಕಥೆಯಾಗಿದೆ. ಮೊದಲ ಭಾಗದ ಕಥೆಗೆ ಸೂಕ್ತವಾದ ಅಂತ್ಯವನ್ನು ಎರಡನೇ ಭಾಗದಲ್ಲಿ ನೀಡಲಾಗಿದೆ ಎಂದು ಹೇಳಬಹುದು. ಈಗಾಗಲೇ ಟ್ರೇಲರ್ನಲ್ಲಿ ತೋರಿಸಿದ ಹಾಗೆ ರಾಕಿ ತನ್ನ ತಾಯಿಗೆ ರಾಜನಂತೆ ಬಾಳುವ ಮಾತು ಕೊಟ್ಟಿದ್ದ. ಆ ಮಾತನ್ನು ಉಳಿಸಿಕೊಳ್ಳಲು ಕೆಜಿಎಫ್ ಮೇಲೆ ರಾಜ್ಯಭಾರ ಮಾಡಬೇಕೆಂಬುದು ರಾಕಿ ಆಸೆ. ಕೆಜಿಎಫ್ ತನ್ನ ಹಿಡಿತಕ್ಕೆ ಪಡೆಯುವ ಮೂಲಕ ಇಡೀ ದೇಶದ ಮೇಲೆ ಹುಕೂಮತ್ ನಡೆಸಬೇಕು ಎಂಬ ರಾಕಿಯ ಹಂಬಲ. ಯಾರಿಗೂ ಭಯಪಡದೇ ಒಂಟಿಯಾಗಿ ಎಲ್ಲರನ್ನೂ ಎದುರಿಸಿ ತನ್ನ ಸಾಮ್ಯಜ್ಯವನ್ನು ಕಟ್ಟುವುದರಲ್ಲಿ ರಾಕಿ ಸಫಲತೆಯನ್ನು ಕಾಣ್ತಾರೆ. ಆದರೆ ಕೆಜಿಎಫ್ ಜಾಗದ ಮೇಲೆ ಉಳಿದವರೂ ಕಣ್ಣು ಹಾಕಿರುತ್ತಾರೆ ಎಂದು ಈಗಾಗಲೇ ಮೊದಲ ಭಾಗದಲ್ಲಿ ತಿಳಿಸಿದ್ದಾರೆ. ಆದರೆ, ಕೆಜಿಎಫ್ ವಶಪಡಿಸಿಕೊಳ್ಳುವ ಸಮರದಲ್ಲಿ ಯಾರು ಯಾರೊಂದಿಗೆ ಕೈ ಮಿಲಾಯಿಸಿ, ಯಾರ ವಿರುದ್ಧ ಯುದ್ಧ ಮಾಡಲು ಸಿದ್ಧರಾಗುತ್ತಾರೆ ಎಂಬುದೇ ಸ್ವಾರಸ್ಯ. ಒಂದು ಜಾಗಕ್ಕೆ, ಒಂದು ಪಟ್ಟಕ್ಕಾಗಿ ನಡೆಯುವ ರಾಜಕೀಯ ತಂತ್ರಗಳು, ಕೊಲೆಗಳು, ರಕ್ತಪಾತಗಳು, ಎಲ್ಲವೂ ಸೇರಿ ಕೊನೆಗೆ ಕೆಜಿಎಫ್ನಲ್ಲಿ ಏನಾಗುತ್ತದೆ? ಎಂಬುದೇ ಈ ಚಿತ್ರದ ಕಥೆ.
ಚಿತ್ರದಲ್ಲಿ ಆಕರ್ಷಿಸುವ ಅಂಶಗಳು:
- ಈವರೆಗೆ ಹಾಲಿವುಡ್ನಲ್ಲಿ ಡಾರ್ಕ್ ಥೀಮ್ ಇಟ್ಟುಕೊಂಡು ಅನೇಕ ಸಿನಿಮಾಗಳನ್ನು ಮಾಡಲಾಗಿದೆ. ಆದರೆ, ಕನ್ನಡದಲ್ಲಿ ಈ ರೀತಿಯ ಒಂದು ಪ್ರಯತ್ನ ಅಪರೂಪ. ಡಾರ್ಕ್ ಶೇಡ್ ಇಟ್ಟು ಚಿತ್ರವನ್ನು ನಿರ್ದೇಶಿಸಿ ಪ್ರೇಕ್ಷಕರ ಮನಮುಟ್ಟುವುದು ಸುಲಭದ ಕಾರ್ಯವಲ್ಲ ಆದರೆ ಕೆಜಿಎಫ್ ಇದರಲ್ಲಿ ಗೆದ್ದಿದೆ ಎಂದು ಹೇಳಬಹುದು.
- ಅಬ್ಬರಿಸುವ ರೌಡಿಗಳ ನಡುವೆ ತಾಯಿಯ ಸೆಂಟಿಮೆಂಟ್ ನೀಡಿದ್ದು ಚಿತ್ರವನ್ನು ಮತ್ತೊಂದು ಮಟ್ಟಕ್ಕೆ ಕರೆದೊಯ್ಯುತ್ತದೆ. ಹೌದು ಅನ್ನಿಸುವ ಕಥೆ, ಚಿತ್ರಕಥೆ ಚಿತ್ರದ ಗೆಲುವು.
- ರೌಡಿಸಂ ಕಥೆಯನ್ನು ಆಧರಿಸಿ ಹಲವಾರು ಚಿತ್ರಗಳು ಬಂದಿದೆ. ಕೆಜಿಎಫ್ ಇದೇ ಕೆಟಗರಿಗೆ ಸೇರಿಯೂ ಸ್ವಲ್ಪ ವಿಭಿನ್ನವಾಗಿ ನಿಲ್ಲುತ್ತದೆ. ಒಂದು ಚೂರು ಕ್ಲಾಸ್, ಸ್ವಲ್ಪ ಮಾಸ್, ಸ್ವಲ್ಪ ಕಲ್ಟ್ ಸಿನಿಮಾದ ವಿಭಾಗಕ್ಕೆ ಸೇರುತ್ತದೆ. ಇದು ನಿರ್ದೇಶಕ ಪ್ರಶಾಂತ್ ನೀಲ್ ಅವರ ಅದ್ಭುತ ಪ್ರಯತ್ನ. ಚಿತ್ರದ ಸೆಟ್, ಹಾಗೂ ಮೇಕಿಂಗ್ ಗಮನಸೆಳೆಯುತ್ತದೆ.
- ತೆರೆಯ ಹಿಂದೆ ಕೆಲಸ ಮಾಡಿದ ತಂಡದ ಪರಿಶ್ರಮ ತೆರೆಯ ಮೇಲೆ ಕಾಣುತ್ತದೆ. ಛಾಯಗ್ರಾಹಕ ಭುವನ್ ಗೌಡ ತಮ್ಮ ಕೆಜಿಎಫ್ 1 ಚಿತ್ರದಲ್ಲೇ ಸಾಮರ್ಥ್ಯವನ್ನು ತೋರಿದ್ದರು. ಅವರು ಅದ್ಭುತವಾಗಿ ಕ್ಯಾಮೆರಾ ಹಿಂದೆ ಕೆಲಸ ಮಾಡಬಹುದು ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.
- ಚಿತ್ರದಲ್ಲಿ ಹೊಸತನಬೇಕು ಎಂಬ ನಿಟ್ಟಿನಲ್ಲಿ ಹೊಸ ಟಕ್ನೀಶಿಯನ್ ಹಾಗೂ ಎಡಿಟರ್ಗಳಿಗೆ ಅವಕಾಶ ನೀಡಲಾಗಿದೆ. ಉದಾಹರಣೆಗೆ ಎಡಿಟಿಂಗ್ ಮಾಡಲು 18 ವರ್ಷದ ಯುವಕರೊಬ್ಬರಿಗೆ ಅವಕಾಶ ನೀಡಿದ್ದು ಅದ್ಭುತ ಕಾರ್ಯವನ್ನು ಮಾಡಿದ್ದಾರೆ.
- ರವಿ ಬಸ್ರೂರ್ ನೀಡಿದ ಹಿನ್ನಲೆ ಸಂಗೀತ ಚಿತ್ರದ ದೃಶ್ಯಗಳಿಗೆ ಪೂರಕವಾಗಿದೆ. ಭಾವಕ್ಕೆ ತಕ್ಕ ಸಂಗೀತ ನಿಡಿದ್ದಾರೆ.
- ನಿರ್ದೇಶಕ ಪ್ರಶಾಂತ್ ಬರೆದ ಸಂಭಾಷಣೆ ಚಿತ್ರದ ಶ್ರೀಮಂತಿಕೆ. ಪ್ರಶಾಂತ್ ಅವರ ಸಂಭಾಷಣೆ ಬರೆಯುವ ಶೈಲಿ ವಿಭಿನ್ನ. ದೀರ್ಘ ಸಂಭಾಷಣೆಯನ್ನು ಬರೆಯುವ ಹಾದಿಯನ್ನು ಆರಿಸಿಕೊಳ್ಳದೆ ವನ್ ಲೈನರ್ಸ್ ಮಾತುಗಳಿಗೆ ಹೆಚ್ಚು ಒತ್ತು ನೀಡುತ್ತಾರೆ. ಈ ರೀತಿಯ ಪಂಚಿಗ್ ಲೈನ್ಸ್ಗಳು ಪ್ರೇಕ್ಷಕರ ಮನದಲ್ಲಿ ಹೆಚ್ಚು ಕಾಲ ಉಳಿಯುತ್ತದೆ. ಈ ಹಿಂದೆ ಕೂಡ ಉಗ್ರಂ ಹಾಗೂ ಕೆಜಿಎಫ್ 1 ಸಿನಿಮಾಗಳಲ್ಲಿ ಪಂಚಿಂಗ್ ಡೈಲಾಗ್ಗಳಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಹೇಗಿದೆ ಅಭಿನಯ?
- ರಾಕಿಂಗ್ ಸ್ಟಾರ್ ಯಶ್ ರಾಕಿ ಪಾತ್ರಕ್ಕೆ ಹೊಂದುತ್ತಾರೆ. ಅವರ ಮಾತುಗಳಲ್ಲಿ ಒಂದು ಹಾಸ್ಯಮಯವಾದ ಧಾಟಿ ಅಥವಾ ವ್ಯಂಗ್ಯವಾಗಿ ಟೀಕಿಸಿ ಎದುರಾಳಿಯನ್ನು ಕೆಣಕುವ ಧಾಟಿ ಸಹಜವಾಗಿಯೇ ಇದೆ. ಇದು ಸಣ್ಣ ಹಳ್ಳಿಯಿಂದ ಬಂದು, ಏನೂ ಅರಿಯದ ಮಾಸ್ ಲೀಡರ್ ಆಗಿ ಬೆಳೆದು ನಿಂತ ರಾಕಿ ಪಾತ್ರಕ್ಕೆ ಹೊಂದುತ್ತದೆ. ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡ ನಟಿ ಶ್ರೀನಿಧಿ ಶೆಟ್ಟಿ ಕೂಡ ರೀನಾ ಪಾತ್ರಕ್ಕೆ ಒಪ್ಪುತ್ತಾರೆ. ಕೆಜಿಎಫ್ 1 ಚಿತ್ರದಲ್ಲಿ ಉತ್ತಮ ಅಭಿನಯದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿ ಕೂಡ ಅವರದ್ದು ಪ್ರಬುದ್ಧ ನಟನೆ.
- ಅಧೀರ ಹಾಗೂ ರಮಿಕಾ ಸೇನ್ ಗಮನ ಸೆಳೆಯುವ ಪ್ರಮುಖ ಪಾತ್ರಗಳು. ಅಧೀರನ ಪಾತ್ರದಲ್ಲಿ ಸಂಜಯ್ ದತ್ತ್ ಹಾಗೂ ರಮಿಕಾ ಸೇನ್ ಪಾತ್ರದಲ್ಲಿ ರವಿನಾ ಟಂಡನ್ ಇಬ್ಬರೂ ಪ್ರೇಕ್ಷಕರ ನಿರೀಕ್ಷೆಯನ್ನು ಮೀರಿ ಅಭಿನಯಿಸಿದ್ದಾರೆ. ನಟಿ ರವಿನಾ ಟಂಡನ್ ಕೆಲವು ವರ್ಷಗಳ ಹಿಂದೆ ಬಾಲಿವುಡ್ನ ಉತ್ತಮ ನಟಿಯರಲ್ಲಿ ಒಬ್ಬರು ಆದರೆ ಇತ್ತೀಚೆಗೆ ಅವರು ಯಾವುದೇ ಸಿನಿಮಾಗಳನ್ನು ಮಾಡಿದ್ದು ಕಂಡುಬಂದಿಲ್ಲ. ಆದರೆ ಕೆಜಿಎಫ್ 2ರಲ್ಲಿ ಅವರ ಅಭಿನಯ ಶ್ಲಾಘನೀಯ.
- ನಟ ಸಂಜಯ್ ದತ್ತ್ ಮಾನ್ಸ್ಟರ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಅವರು ಬಾಲಿವುಡ್ನ ಅಗ್ನಿಪಥ್ ಸಿನಿಮಾದಲ್ಲಿ ನಿರ್ದಾಕ್ಷಿಣ್ಯವಾಗಿ ಜನರನ್ನು ಹತ್ಯೆ ಮಾಡುವ ರಾಕ್ಷಸನಂತಿರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದರು ಕೂಡ. ಅಧೀರ ಕೂಡ ಅದೇ ರೀತಿಯ ಒಂದು ಪಾತ್ರ. ಆ ಪಾತ್ರಕ್ಕೆ ಅವಶ್ಯಕತೆಯಿರುವ ಗತ್ತು, ಗಾಂಭೀರ್ಯತೆಯನ್ನು ಅಚ್ಚುಕಟ್ಟಾಗಿ ಅಳವಡಿಸಿಕೊಂಡಿದ್ದಾರೆ.
- ಆನಂದ್ ಇಂಗಳಗಿ ಅವರ ಮಗನಾಗಿ ರಾಕಿಯ ಕಥೆಯನ್ನು ಹೇಳುವ ವಿಜಯೇಂದ್ರ ಇಂಗಳಗಿ ಪಾತ್ರವನ್ನು ಪ್ರಕಾಶ್ ರೈ ನಿರ್ವಹಿಸಿದ್ದಾರೆ. ಅವರ ವಿಶಿಷ್ಟ ಡೈಲಾಗ್ ಹೇಳುವ ರೀತಿಯಿಂದ ಆಕರ್ಷಿಸಿದ್ದಾರೆ.
- ಇನ್ನು ಉಳಿದಂತೆ ಎಲ್ಲಾ ಸಹಾಯಕ ಪಾತ್ರಗಳನ್ನು ನಿರ್ವಹಿಸಿದ ಕಲಾವಿದರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಎಂದು ಹೇಳಬಹುದು.
ಉತ್ತಮಗೊಳಿಸಬಹುದಾಗಿದ್ದ ಅಂಶಗಳು:
- ಚಿತ್ರದಲ್ಲಿ ಬರುವ ಹಾಡುಗಳು ವಿಶೇಷ ಅಂತನಿಸುವುದಿಲ್ಲ. ಕೆಜಿಎಫ್ 1ರ ಚಿತ್ರದ ಹಾಡುಗಳಿಗೆ ಹೋಲುತ್ತಿರುವದಕ್ಕೆ ಏಕತಾನತೆಯ ರೂಪ ಪಡೆದುಕೊಂಡಂತಿದೆ.
- ಪ್ರಕಾಶ್ ರೈ ಉತ್ತಮವಾಗಿ ಅಭಿನಯಿಸಿದ್ದರೂ ಪ್ರೇಕ್ಷಕರು ರಾಕಿ ಕಥೆಯನ್ನು ಆನಂದ್ ಇಂಗಳಗಿ ಬಾಯಲ್ಲಿ ಕೇಳಿದರೆ ಹೆಚ್ಚು ಖುಷಿಯಾಗುತ್ತಿತ್ತು. ಅನಂತ್ನಾಗ್ ಅವರನ್ನು ತೆರಯ ಮೇಲೆ ಕಾಣದೇ ನಿರಾಸೆ ಉಂಟುಮಾಡುತ್ತದೆ.
ಕೊನೆಯದಾಗಿ:
ರಾಕಿ ಪಾತ್ರಕ್ಕೆ ಬಿಲ್ಡಪ್ ಕೊಟ್ಟಿದ್ದು ಹೆಚ್ಚಾಯಿತು ಅಂತ ಅನ್ನಿಸಬಹುದು. ಆದರೆ, ಒಬ್ಬ ಸುಲ್ತಾನಂತೆ ರಾಜ್ಯಭಾರ ಮಾಡುವ ಗ್ಯಾಂಗ್ಸ್ಟರ್ಗೆ ಅಷ್ಟು ಬಿಲ್ಡಪ್ ಕೊಡುವ ವಿನಾಯಿತಿ ಇರುತ್ತದೆ. ಅದು ಕಥೆಗೆ ಎಲ್ಲೂ ಅಡಚಣೆ ಉಂಟುಮಾಡುವುದಿಲ್ಲ. ಕಾಲಕಾಲಕ್ಕೆ ಸರಿಯಾಗಿ ತಿರುವುಗಳನ್ನು ನೀಡಲಾಗಿದ್ದು, ಎಲ್ಲೂ ಬೋರ್ ಹೊಡೆಸದ ಅದ್ಧೂರಿ ಸಿನಿಮಾ ಎಂದು ಹೇಳಬಹುದು.
ಈ ಚಿತ್ರದ ಅಂತ್ಯದಲ್ಲಿ ಏನಾಗುತ್ತದೆ ಎಂದು ಪ್ರೇಕ್ಷಕರ ಊಹೆಗೆ ಬಿಡಲಾಗಿದೆ. ಇದರ ಮುಂದುವರೆದ ಭಾಗವಾಗಿ ಕೆಜಿಎಫ್ ಚಾಪ್ಟರ್ 3 ಬರಬಹುದಾ? ಎಂಬ ಕುತೂಹಲವನ್ನು ಈ ಪ್ರೇಕ್ಷಕರ ಮನದಲ್ಲಿ ಹುಟ್ಟುಹಾಕಿದೆ.
ಹೆಚ್ಚಿನ ಓದಿಗಾಗಿ: RRR ಸಿನಿ ವಿಮರ್ಶೆ
ಅಂಕಣ
Raja Marga Column : ನಿಮ್ಮ ಮಕ್ಕಳನ್ನು ಸೂಪರ್ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!
Raja Marga Column : ಟಿವಿ ವಾಹಿನಿಗಳ ಮಕ್ಕಳ ರಿಯಾಲಿಟಿ ಶೋಗಳಿಗೆ ಸ್ವಲ್ಪ ಬ್ರೇಕ್ ಬೇಕಿದೆ! ಯಾಕೆಂದರೆ ಅವು ಮಕ್ಕಳ ಬಾಲ್ಯವನ್ನು ಕಸಿಯುತ್ತಿವೆ. ದುಡ್ಡಿನ ದಂಧೆಯಾಗುತ್ತಿವೆ. ಈ ಬಗ್ಗೆ ಎಚ್ಚರವಿರಲಿ.
ಪ್ರಣವ್ ಧನವಾಡೇ : ಈ ಹೆಸರನ್ನು ಎಲ್ಲೋ ಕೇಳಿದ ನೆನಪು ನಿಮಗಿದೆಯಾ?
ಹೌದು! 2016ರಲ್ಲಿ ಮುಂಬೈಯ ಈ 16 ವರ್ಷದ ಹುಡುಗ (Pranav Dhanawade) ಒಂದು ಕ್ಲಾಸ್ ಒನ್ ಕ್ರಿಕೆಟ್ ಪಂದ್ಯದಲ್ಲಿ ಬರೋಬ್ಬರಿ 1000+ ರನ್ ಬಾರಿಸಿ ಮಿಂಚಿದ್ದ! ಅವನಿಗೆ ಆ ದಿನಗಳಲ್ಲಿ ಜಾಗತಿಕ ಮಟ್ಟದ ಪ್ರಚಾರ ಸಿಕ್ಕಿತ್ತು. ಸಚಿನ್ ತೆಂಡುಲ್ಕರ್ (Sachin Tendulkar) ಜೊತೆಗೆ ಆತನ ಭರ್ಜರಿ ಹೋಲಿಕೆಯು ಕೂಡ ನಡೆಯಿತು.ನೂರಾರು ಸನ್ಮಾನಗಳು ಮತ್ತು ನಗದು ಬಹುಮಾನಗಳು ಆತನಿಗೆ ದೊರೆತವು!
ಆದರೆ ಅವನು ಅದೇ ವೇಗದಲ್ಲಿ ಮುಂದೆ ಹೋಗಿರುತ್ತಿದ್ದರೆ ಅವನಿಗೆ ಈಗ 23 ವರ್ಷ ಆಗಿರಬೇಕಿತ್ತು! ಅವನು ಕನಿಷ್ಠ ಪಕ್ಷ ರಣಜಿ ಪಂದ್ಯ ಆದರೂ ಆಡಬೇಕಿತ್ತು! ಆದರೆ ಅವನು ಈಗ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎನ್ನುವುದು ನಮಗೆ ಯಾರಿಗೂ ಗೊತ್ತಿಲ್ಲ! (Raja Marga Column)
ನಮ್ಮ ಹೆಚ್ಚಿನ ಟಿವಿ ರಿಯಾಲಿಟಿ ಶೋ (Reality Show) ಹೀರೋಗಳ ಕಥೆ ಕೂಡ ಹೀಗೆಯೇ ಇದೆ!
ಖಾಸಗಿ ಟಿವಿಯ ವಾಹಿನಿಗಳಲ್ಲಿ (Private TV Channels) ಇಂದು ಪ್ರಸಾರ ಆಗುತ್ತಿರುವ ನೂರಾರು ರಿಯಾಲಿಟಿ ಶೋಗಳು ಮತ್ತು ಸ್ಪರ್ಧೆಗಳು ಹೆಚ್ಚು ಪ್ರಚಾರದಲ್ಲಿವೆ. ಅಂತ ಹಲವು ಟಿವಿ ಶೋಗಳು ಹಿಂದೆ ಕೂಡ ನಡೆದಿವೆ. ಅದರ ಎಲ್ಲ ವಿಜೇತರ ಪ್ರತಿಭೆಯ ಮೇಲೆ ಗೌರವ ಇರಿಸಿಕೊಂಡು ನಾನು ಕೇಳುವ ಒಂದೇ ಪ್ರಶ್ನೆ — ಅದರ ಸಾವಿರಾರು ವಿಜೇತರು ಮುಂದೆ ಎಲ್ಲಿಗೆ ಹೋಗುತ್ತಾರೆ? ಅವರ ಅನನ್ಯ ಪ್ರತಿಭೆಗಳನ್ನು ಅವರು ಎಷ್ಟು ಬೆಳೆಸಿದ್ದಾರೆ? ಅದರಿಂದ ನಾಡಿನ ಸಂಸ್ಕೃತಿಗೆ ಎಷ್ಟು ಲಾಭ ಆಗಿದೆ?
ಶಾಲಾ ಮಟ್ಟದಲ್ಲಿ ನೂರಾರು ಸಾಂಸ್ಕೃತಿಕ ಸ್ಪರ್ಧೆಗಳು, ಪ್ರತಿಭಾ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲಿ ವಿಜೇತರ ಘೋಷಣೆ ಆಗುತ್ತದೆ. ಅದರಲ್ಲಿ ಎಷ್ಟು ಜನರು ಮುಂದೆ ಅವರ ಪ್ರತಿಭೆಯನ್ನು ತಮ್ಮ ಹೊಟ್ಟೆಪಾಡಾಗಿ ಮಾಡಿಕೊಳ್ಳುತ್ತಾರೆ? ಎಷ್ಟು ಮಂದಿ ತಮ್ಮ ಕಲೆಯನ್ನು ಪ್ರೀತಿಸುತ್ತಾರೆ? ತಮ್ಮ ಕಲೆಯಿಂದ ಸಮಾಜವನ್ನು ಬೆಳಗುತ್ತಾರೆ? ಕನಿಷ್ಠ ಪಕ್ಷ ಆತ್ಮ ಸಂತೋಷಕ್ಕಾಗಿ ಆದರೂ ಆ ಕಲೆಯನ್ನು ಮುಂದೆ ಕಲಿಯುತ್ತಾರಾ?
ಈ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತ ಹೋದಾಗ ನಮಗೆ ಹಲವು ಕಡೆ ನಿರಾಸೆಯೇ ಆಗುತ್ತದೆ ಮತ್ತು ಕಹಿ ಸತ್ಯಗಳು ಗೋಚರ ಆಗುತ್ತವೆ.
ಹಾಗಾದರೆ ಟಿವಿ ವಾಹಿನಿಗಳಿಂದ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಿಂದ ಪ್ರತಿಭಾ ಶೋಧ ಆಗ್ತಾ ಇಲ್ಲವೇ ಎನ್ನುವ ಪ್ರಶ್ನೆ ನೀವು ಕೇಳಬಹುದು. ಖಂಡಿತ ಆಗುತ್ತಿದೆ! ಆದರೆ ಅದರ ಅಡ್ಡ ಪರಿಣಾಮಗಳ ಬಗ್ಗೆ ಇದುವರೆಗೆ ಯಾರೂ ಯೋಚನೆ ಮಾಡಿದ ಹಾಗಿಲ್ಲ.
ಉದಾಹರಣೆಗೆ ಇಂದು ಬಾಲಿವುಡನ ಹಿನ್ನೆಲೆ ಗಾಯನ ಲೋಕದ ಸೂಪರ್ ಸ್ಟಾರ್ಗಳಾದ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಇವರೆಲ್ಲರೂ ಬೇರೆ ಬೇರೆ ರಿಯಾಲಿಟಿ ಶೋಗಳ ಮೂಲಕ ಬೆಳಕಿಗೆ ಬಂದವರು. ಕನ್ನಡದಲ್ಲಿಯೂ ಅಂತವರು ತುಂಬಾ ಮಂದಿ ಇದ್ದಾರೆ. ಆದರೆ ಅವರಲ್ಲಿ ಹೆಚ್ಚಿನ ಸ್ಟಾರ್ಗಳು ಒಳ್ಳೆಯ ನಿರ್ಣಾಯಕರ ಮೂಲಕ ಆಯ್ಕೆ ಆದವರು. ಇನ್ನೂ ವಿವರವಾಗಿ ಹೇಳಬೇಕೆಂದರೆ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಆಯ್ಕೆ ಆಗುವಾಗ ಲತಾ ಮಂಗೇಶ್ಕರ್ ಅಂತವರು ನಿರ್ಣಾಯಕರಾಗಿದ್ದರು!
ಪ್ರತಿಭೆಗಳಿಗೆ ಆಗ ಒಂದಿಷ್ಟೂ ಅನ್ಯಾಯ ಆಗುತ್ತಾ ಇರಲಿಲ್ಲ.
ಅಪಾಯಕಾರಿ ಆದ ಇಂಟರ್ನೆಟ್ ವೋಟಿಂಗ್!
ಆದರೆ ಮುಂದೆ ಯಾವಾಗ ಇಂಟರ್ನೆಟ್ ಮೆಸೇಜ್ಗಳ ಮೂಲಕ ವೋಟಿಂಗ್ ಆರಂಭ ಆಯಿತೋ ಅಲ್ಲಿಗೆ ದುಡ್ಡು, ಪ್ರಭಾವ ಇದ್ದವರು ವೋಟುಗಳನ್ನು ಖರೀದಿ ಮಾಡುವುದು ಆರಂಭ ಆಯಿತು. ನಮಗೆ ವೋಟ್ ಮಾಡಿ ಎಂದು ಕೈ ಮುಗಿದು ಭಿಕ್ಷೆ ಬೇಡುವ ದೈನ್ಯತೆಯು ಆ ಪ್ರತಿಭೆಗಳಿಗೆ ಬರಬಾರದಿತ್ತು.
ಕನ್ನಡದಲ್ಲಿ ಕೂಡ ಆರಂಭದ ಎದೆ ತುಂಬಿ ಹಾಡುವೆನು, ಕಾಮಿಡಿ ಕಿಲಾಡಿ, ಮಜಾ ಟಾಕೀಸ್, ಡ್ರಾಮಾ ಜೂನಿಯರ್ ರಿಯಾಲಿಟಿ ಶೋನಲ್ಲಿ ಗೆದ್ದವರು ಮುಂದೆ ನೂರಾರು ಅವಕಾಶಗಳನ್ನು ಪಡೆದರು. ಅವರ ಪ್ರತಿಭೆಯನ್ನು ನಾಡು ಗುರುತಿಸಿ ಬೆಳೆಸಿತು.
ಆದರೆ ಇಲ್ಲಿ ಕೂಡ ಇತ್ತೀಚಿನ ವರ್ಷಗಳಲ್ಲಿ ಯಾವಾಗ ಇಂಟರ್ನೆಟ್ ವೋಟಿಂಗ್ ಆರಂಭ ಆಯಿತೋ ಅಲ್ಲಿಂದ ವೋಟ್ ಖರೀದಿಗಳು, ಪ್ರಭಾವಗಳು ಆರಂಭ ಆದವು. ಆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತು ಕೊಡುವ ಹಲವು ಶಾಲೆಗಳು ಮಹಾನಗರಗಳಲ್ಲಿ ನಾಯಿಕೊಡೆಗಳ ಹಾಗೆ ಆರಂಭ ಆದವು. ಹೆತ್ತವರು ತಮ್ಮ ಮಕ್ಕಳನ್ನು ಸೂಪರ್ ಹೀರೋ ಮಾಡುವ ಜಿದ್ದಿಗೆ ಬಿದ್ದು ಅಂತಹ ಶಾಲೆಗಳಿಗೆ ದುಡ್ಡು ಸುರಿಯಲು ತೊಡಗಿದರು.
ಆದರೆ ಇಲ್ಲಿ ಕೂಡ ಬಡವರ ಮಕ್ಕಳು, ಗ್ರಾಮಾಂತರ ಭಾಗದ ಪ್ರತಿಭೆಗಳು ನಿಜವಾಗಿಯೂ ಅವಕಾಶಗಳಿಂದ ವಂಚಿತರಾದರು!
ಒಂದು ಸಮೀಕ್ಷೆ ಮಾಡಿ ನೋಡಿ. ಇತ್ತೀಚಿನ ರಿಯಾಲಿಟಿ ಶೋಗಳಲ್ಲಿ ಗೆದ್ದವರಲ್ಲಿ ಎಷ್ಟು ಮಂದಿ ಹಳ್ಳಿಯ ಮಕ್ಕಳು ಇದ್ದಾರೆ? ಎಷ್ಟು ಮಂದಿ ಬಡವರ ಮಕ್ಕಳಿದ್ದಾರೆ? ಎಷ್ಟು ಮಂದಿ ಕನ್ನಡ ಮಾಧ್ಯಮದ ಮಕ್ಕಳಿದ್ದಾರೆ?
ಖಂಡಿತ ಇದ್ದಾರೆ. ಆದರೆ ಅವರ ಪ್ರಮಾಣ ತುಂಬಾ ಕಡಿಮೆ ಇದೆ!
ಜಗತ್ತಿನ ಪ್ರತೀ ಮಗುವೂ ಪ್ರತಿಭಾವಂತ ಮಗುವೇ!
ಈ ಜಗತ್ತಿನ ಪ್ರತೀ ಮಕ್ಕಳೂ ಪ್ರತಿಭಾವಂತರೇ ಆಗಿದ್ದಾರೆ. ಅವರಲ್ಲಿ ಒಂದಲ್ಲ ಒಂದು ಪ್ರತಿಭೆಯನ್ನು ಲೋಡ್ ಮಾಡಿ ಭಗವಂತ ಈ ಜಗತ್ತಿಗೆ ಅವರನ್ನು ಕಳುಹಿಸಿರುತ್ತಾನೆ. ನೀವು ಯಾವ ಮಕ್ಕಳನ್ನು ವಿಶೇಷ ಚೇತನ ಮಕ್ಕಳು ಎಂದು ಕರೆಯುತ್ತೀರೋ ಅವರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯ ಪೋಷಣೆಗೆ ವೇದಿಕೆ ಬೇಕು. ತರಬೇತು ಬೇಕು. ಹೆತ್ತವರ, ಶಿಕ್ಷಕರ, ಸಮಾಜದ ಪ್ರೋತ್ಸಾಹ ಬೇಕು.
ಅವರ ಶಾಪ ಆದರೆ ನಮ್ಮ ಮಕ್ಕಳು ಎಷ್ಟು ಪ್ರತಿಭೆ ಹೊಂದಿದ್ದಾರೆ ಎಂದರೆ ಅವರು ಸ್ಪರ್ಧೆಯ ಸೋಂಕಿಲ್ಲದೆ ಕೂಡ ತಮ್ಮ ಅಗಾಧವಾದ ಪ್ರತಿಭೆಯನ್ನು ಬೆಳೆಸುವ ಸಾಮರ್ಥ್ಯವನ್ನು ಖಂಡಿತವಾಗಿ ಹೊಂದಿರುತ್ತಾರೆ! ಅವರನ್ನು ರೇಸಿನ ಕುದುರೆ ಮಾಡಿ ರೇಸಿಗೆ ನಿಲ್ಲಿಸುವ ಅಗತ್ಯ ಖಂಡಿತ ಇಲ್ಲ!
ಸ್ಪರ್ಧೆಗಳ ಬಗ್ಗೆ ಸಾಹಿತಿ ಶಿವರಾಮ ಕಾರಂತರು ಹೇಳಿದ್ದೇನು?
ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ಕೋಟ ಶಿವರಾಮ ಕಾರಂತರು ಚಿಕ್ಕ ಮಕ್ಕಳನ್ನು ಸ್ಪರ್ಧೆಗೆ ನಿಲ್ಲಿಸಬೇಡಿ ಎಂದು ಹೇಳುತ್ತಿದ್ದರು. 12 ವರ್ಷಗಳವರೆಗೆ ಮಕ್ಕಳಿಗೆ ಯಾವ ಸ್ಪರ್ಧೆಯನ್ನು ಕೂಡ ಮಾಡಬಾರದು ಎನ್ನುವುದು ಅವರ ಖಚಿತ ಅಭಿಪ್ರಾಯ. ಸ್ಪರ್ಧೆ ಮಾಡಿದರೂ ಎಲ್ಲ ಮಕ್ಕಳಿಗೂ ಸಮಾನ ಬಹುಮಾನ ಕೊಡಿ ಎನ್ನುತ್ತಿದ್ದರು ಕಾರಂತರು.
ಆದರೆ ಇಂದು ಆಗುತ್ತಿರುವುದೆನು?
ಆದರೆ ಸ್ಪರ್ಧೆಯ ಗೆಲುವನ್ನು ತಮ್ಮ ಪ್ರತಿಷ್ಠೆಯನ್ನಾಗಿ ಮಾಡಿಕೊಂಡ ಶಿಕ್ಷಕರು ಮತ್ತು ಹೆತ್ತವರು ಮಕ್ಕಳನ್ನು ರೇಸಿನ ಕುದುರೆ ಮಾಡಿ ಈಗಾಗಲೇ ನಿಲ್ಲಿಸಿ ಆಗಿದೆ! ಈ ಸ್ಪರ್ಧೆಯಲ್ಲಿ ಸೋತವರ ಕಣ್ಣೀರನ್ನು ಮತ್ತು ಗೆದ್ದು ಬೀಗಿದವರ ಆನಂದ ಬಾಷ್ಪವನ್ನು ತಮ್ಮ ಟಿ ಆರ್ ಪಿ ಸರಕನ್ನಾಗಿ ಮಾಡಿಕೊಂಡ ಟಿವಿ ವಾಹಿನಿಗಳಿಗೆ ಈ ಸ್ಪರ್ಧೆಗಳು ಬೇಕೇ ಬೇಕು! ಮಕ್ಕಳ ಗೆಲುವನ್ನು ತಮ್ಮ ಪ್ರತಿಷ್ಠೆ ಎಂದು ಭಾವಿಸುವ ಹೆತ್ತವರು ಇರುವವರೆಗೆ ಈ ಮಕ್ಕಳ ರಿಯಾಲಿಟಿ ಶೋಗಳು ಖಂಡಿತ ನಿಲ್ಲುವುದಿಲ್ಲ. ಈ ಸ್ಪರ್ಧೆಗಳು ಮೆಗಾ ಮನರಂಜನೆಯ ಭಾಗ ಎಂದು ಪರಿಗಣಿಸುವ ವೀಕ್ಷಕರು ಕೂಡ ರಿಯಾಲಿಟಿ ಶೋ ಬೇಕು ಅಂತಾರೆ!
ತಮ್ಮ ಮಕ್ಕಳನ್ನು ಸೂಪರ್ ಹೀರೋ ಅಥವ ಸೂಪರ್ ಹೀರೋಯಿನ್ ಮಾಡಲು ಹೊರಟ ಹೆತ್ತವರು ಮಕ್ಕಳ ಬಾಲ್ಯವನ್ನು ಬರಿದು ಮಾಡುತ್ತಿದ್ದಾರೆ. ತಮ್ಮ ಮಕ್ಕಳು ಒಮ್ಮೆ ಟಿವಿಯಲ್ಲಿ ಕಂಡರೆ ಸಾಕು ಎಂದು ತೆವಲಿಗೆ ಪೋಷಕರು ಬಿದ್ದಿರುವ ಈ ದಿನಗಳಲ್ಲಿ ಅವರು ಬುದ್ಧಿ ಕಲಿಯುವುದು ಯಾವಾಗ?
ಇಲ್ಲೊಬ್ಬರು ತಾಯಿ ತನ್ನ ಎರಡನೇ ಕ್ಲಾಸಿನ ಮುಗ್ಧವಾದ ಮಗಳನ್ನು ದಿನವೂ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಲಘು ಸಂಗೀತ, ಕರಾಟೆ, ಚೆಸ್, ಕ್ರಿಕೆಟ್, ಯಕ್ಷಗಾನ, ಬ್ಯಾಡ್ಮಿಂಟನ್, ಸ್ವಿಮ್ಮಿಂಗ್ ಕೋಚಿಂಗ್ ಎಂದೆಲ್ಲ ಉಸಿರು ಬಿಗಿ ಹಿಡಿದು ಓಡುತ್ತಿರುವಾಗ ಆ ಮುಗ್ಧ ಮಗುವಿನ ಮೇಲಾಗುತ್ತಿರುವ ಒತ್ತಡವನ್ನು ನನಗೆ ಊಹೆ ಮಾಡಲು ಕಷ್ಟ ಆಗುತ್ತಾ ಇದೆ! ಯಾವುದೇ ಕಲಿಕೆಯು ಮಕ್ಕಳಿಗೆ ಹೊರೆ ಆಗಬಾರದು ಎಂಬ ಸಾಮಾನ್ಯ ಪ್ರಜ್ಞೆಯು ಅಂತಹ ಹೆತ್ತವರಿಗೆ ಬೇಡವಾ?
ಇದನ್ನೂ ಓದಿ: Raja Marga Column : ನೀವು ಜ್ಯೂಲಿ ನೋಡಿದ್ದೀರಾ? ಇದು KGFಗೂ ಮೊದಲು ಬಾಲಿವುಡ್ನ ಅಹಂ ಮುರಿದ ಸಿನಿಮಾ
ಡ್ಯಾಡಿ ನಂಬರ್ ಒನ್, ಮಮ್ಮಿ ನಂಬರ್ ಒನ್ ಮೊದಲಾದ ನಾನಸೆನ್ಸ್ ಸ್ಪರ್ಧೆಯ ಮೂಲಕ ಅಪ್ಪ, ಅಮ್ಮನ ಪ್ರೀತಿಯು ಅಳೆಯಲ್ಪಡಬೇಕಾ?
ನನ್ನ ಸಲಹೆ ಏನೆಂದರೆ ಮುಂದಿನ ಕೆಲವು ವರ್ಷಗಳ ಕಾಲ ಎಲ್ಲ ಟಿವಿ ವಾಹಿನಿಗಳ ಸ್ಪರ್ಧಾತ್ಮಕವಾದ ರಿಯಾಲಿಟಿ ಶೋಗಳನ್ನು ನಿಲ್ಲಿಸುವುದು ಒಳ್ಳೆಯದು! ಅಥವಾ ಅವುಗಳಿಗೆ ಒಂದು ಸಣ್ಣ ಬ್ರೇಕ್ ಆದರೂ ಬೇಕು. ವರ್ಷಾನುಗಟ್ಟಲೆ ಈ ಸ್ಪರ್ಧೆಗಳು ಮುಂದುವರಿದರೆ ಆ ಮಕ್ಕಳ ಶಿಕ್ಷಣದ ಮೇಲೆ ಆಗುವ ಕರಾಳತೆಯ ಬಗ್ಗೆ ಕೂಡ ನಾವು ಯೋಚನೆ ಮಾಡಬೇಕು ಅಲ್ಲವೇ?
ರಿಯಾಲಿಟಿ ಶೋಗಳ ಹಂಗಿಲ್ಲದೆ ಇಂದು ಸ್ಟಾರ್ ಆಗಿ ಮಿಂಚುತ್ತಿರುವ ನೂರಾರು ಪ್ರತಿಭೆಗಳು ನನ್ನ ಪಟ್ಟಿಯಲ್ಲಿ ಇವೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು.
ಕರ್ನಾಟಕ
VISTARA TOP 10 NEWS: ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ಎಐಎಡಿಎಂಕೆ-ಬಿಜೆಪಿ ಮೈತ್ರಿಯೂ ಬಂದ್
VISTARA TOP 10 NEWS : ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಬಂದ್! ಇನ್ನು ಪ್ರಧಾನಿ ಮೋದಿ ಅವರು ಅ. 1ರಂದು ಎಲ್ಲರೂ ಸೇರಿ ಕಸ ಗುಡಿಸೋಣ ಅಂದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್.
1. ಕಾವೇರಿ ಕಿಚ್ಚು: ರಾಜ್ಯಕ್ಕೆ ಡಬಲ್ ಬಂದ್ ಶಾಕ್; ನಾಳೆ ಬೆಂಗಳೂರು, ಸೆ. 29 ಕರ್ನಾಟಕ ಬಂದ್
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಸೆ. 26ರ ಬೆಂಗಳೂರು ಬಂದ್ ಬೆನ್ನಿಗೇ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೆ. 29ರಂದು ಅಖಿಲ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಹೀಗಾಗಿ ವಾರದಲ್ಲಿ ಎರಡು ಬಂದ್ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
2. ನಾಳೆ ಬೆಂಗಳೂರು ಬಂದ್: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ; ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಹಾಗಿದ್ದರೆ ಏನಿರುತ್ತೆ? ಏನಿರಲ್ಲ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1: ಬಲವಂತದಿಂದ ಬಂದ್ ಮಾಡಿಸುವಂತಿಲ್ಲ; ಮೆರವಣಿಗೆಗೆ ಅವಕಾಶವಿಲ್ಲ ಎಂದ ಕಮಿಷನರ್
ಪೂರಕ ಸುದ್ದಿ2: ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್ವೈ
ಪೂರಕ ಸುದ್ದಿ3: ಯಾವ ಬಂದ್ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
3 .ಜಲಶಕ್ತಿ ಇಲಾಖೆ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಲಿ, ಮೋದಿ ಮಧ್ಯಪ್ರವೇಶಿಸಲಿ: ದೇವೇಗೌಡ
ಸುಪ್ರೀಂ ಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ನಿಂದ ರಾಜಕೀಯ: ಸಿದ್ದರಾಮಯ್ಯ ಆರೋಪ
4. ಏಕಕಾಲಕ್ಕೆ ರಾಜ್ಯಾದ್ಯಂತ ದಾಖಲೆ ಬರೆದ ಜನತಾ ದರ್ಶನ: ಸಿದ್ದರಾಮಯ್ಯ ಚಿಂತನೆ ಕ್ಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಏಷ್ಯನ್ ಗೇಮ್ಸ್: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ; ಲಂಕಾ ವಿರುದ್ಧ ರೋಚಕ ಜಯ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪ್ರಯತ್ನದಲ್ಲೇ ಐತಿಹಾಸಿಕ ಚಿನ್ನದ ಪದಕ ಜಯಿಸಿ ಮರೆದಾಡಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಲಂಕಾ ವಿರುದ್ಧ ರೋಚಕ 19 ರನ್ಗಳ ಗೆಲುವು ಸಾಧಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ: ಎಲ್ಲರೂ ಬನ್ನಿ ಎಂದು ಆಹ್ವಾನಿಸಿದ ಪ್ರಧಾನಿ ಮೋದಿ
ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಂದು ಒಂದು ಗಂಟೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಎಲ್ಲ ಗ್ಯಾರಂಟಿಗಳಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ
7. ಭಾರತ ವಿಭಜಿಸಿ ಹಲವು ದೇಶ ಸೃಷ್ಟಿಸುವುದು ಖಲಿಸ್ತಾನಿ ಉಗ್ರ ಪನ್ನುನ್ ಗುರಿ; ಷಡ್ಯಂತ್ರ ಬಯಲು
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ತಿಗಳನ್ನು ಎನ್ಐಎ ಜಪ್ತಿ ಮಾಡಿದ ಬೆನ್ನಲ್ಲೇ ಉಗ್ರನ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ಭಾರತವನ್ನು ವಿಭಜಿಸಿ, ಹಲವು ದೇಶಗಳನ್ನಾಗಿ ಸೃಷ್ಟಿಸುವುದು ಗುರುಪತ್ವಂತ್ ಸಿಂಗ್ ಪನ್ನುನ್ ಗುರಿಯಾಗಿದೆ” ಎನ್ನುವುದೇ ಆ ಮಾಹಿತಿ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಬಿಜೆಪಿ ಜತೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. 9 ತಿಂಗಳೊಳಗೆ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್; ಜವಾನ್ ಹೊಸ ದಾಖಲೆ
ಶಾರುಖ್ ಖಾನ್ ಪ್ರಧಾನ ಪಾತ್ರದಲ್ಲಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection).ಪಠಾಣ್ ಸಿನಿಮಾವೂ 1000 ಕೋಟಿ ದಾಟಿತ್ತು. ಹೀಗಾಗಿ ಒಂಬತ್ತು ತಿಂಗಳ ಅವಧಿಯಲ್ಲಿ ಶಾರುಖ್ 2000 ಕೋಟಿ ಕೊಳ್ಳೆ ಹೊಡೆದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 100 ಫ್ಯಾನ್ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ದೇಶಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿ(Ganesh Chaturthi) ಹಬ್ಬವನ್ನು ಹ್ಯಾವಲ್ಸ್ ಕಂಪೆನಿ(Havells) ಕ್ರಿಯಾತ್ಮಕವಾಗಿ ಬರಮಾಡಿಕೊಂಡಿದೆ. 100 ಫ್ಯಾನ್ಗಳನ್ನು ಬಳಸಿಕೊಂಡು ಗಣೇಶನನ್ನು ರಚಿಸಿ ಗಮನ ಸೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ದೇಶ
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
Swara Bhasker: ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸ್ವರಾ ಭಾಸ್ಕರ್ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದರು.
ನವದೆಹಲಿ: ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸ್ವರಾ ಭಾಸ್ಕರ್ (Swara Bhasker) ಅವರು ಸೆಪ್ಟೆಂಬರ್ 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ(Baby Girl). ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ (Fahad Ahmad) ಅವರು ಸ್ವರಾ ಅವರ ಪತಿಯಾಗಿದ್ದಾರೆ. ತಮಗೆ ಹೆಣ್ಣು ಮಗು ಜನಿಸಿದ ಮಾಹಿತಿಯನ್ನು ದಂಪತಿಯು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಮಗುವಿನ ಮೊದಲ ಫೋಟೋ ಕೂಡ ಷೇರ್ ಮಾಡಿದ್ದಾರೆ. ಮಗುವಿಗೆ ‘ರಾಬಿಯಾ’ (Raabiyaa) ಎಂದು ನಾಮಕರಣ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಜಂಟಿಯಾಗಿ ಪೋಸ್ಟ್ ಮಾಡಿರುವ ಸ್ವರಾ ಮತ್ತು ಫಹಾದ್ ಅವರು, ನಮ್ಮ ಪ್ರಾರ್ಥನೆ ಫಲಿಸಿತು. ಆಶೀರ್ವಾದ ಲಭಿಸಿತು. ಹಾಡು ಪಿಸುಗುಟ್ಟಿದೆ… ಅದು ಅತೀಂದ್ರಿಯ ಸತ್ಯ…. ಸೆಪ್ಟೆಂಬರ್ 23ರಂದು ನಮಗೆ ಹೆಣ್ಣು ಮಗು ಜನಿಸಿದೆ. ಕೃತಜ್ಞತೆಯ ಮತ್ತು ಸಂತೋಷದ ಹೃದಯಗಳೊಂದಿಗೆ, ನಿಮ್ಮ ಪ್ರೀತಿಗೆ ಧನ್ಯವಾದಗಳು! ಇದು ಸಂಪೂರ್ಣ ಹೊಸ ಜಗತ್ತು ಎಂದು ಬರೆದುಕೊಂಡಿದ್ದಾರೆ.
ಸ್ವರಾ-ಫಹಾದ್ ದಂಪತಿ ಫೋಟೋ ಷೇರ್ ಮಾಡಿದ್ದಾರೆ. ಈ ಪೈಕಿ ಮೊದಲನೆಯ ಫೋಟೋದಲ್ಲಿ ಕೂಸು ರಾಬಿಯಾ ಜತೆ ಸ್ವರ ಭಾಸ್ಕರ್ ಇದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಮಯದಲ್ಲಿ, ತೊಟ್ಟಿಲಲ್ಲಿ ಮಗುವಿನ ಪಕ್ಕದಲ್ಲಿ ಸ್ವರಾ ಮತ್ತು ಫಹಾದ್ ಇದ್ದಾರೆ. ಆಸ್ಪತ್ರೆಯ ಹಾಸಿಗೆಯ ಮೇಲೆ ತನ್ನ ನವಜಾತ ಮಗಳೊಂದಿಗೆ ಸ್ವರಾ ಇರುವ ಮತ್ತೊಂದು ಫೋಟೋ ಇದೆ. ಇನ್ನೂ ಒಂದು, ಫಹಾದ್ ಮಗುವನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡಿರುವ ಹಾಗೂ ಕೊನೆಯದು ಮೂವರು ಇರುವ ಕುಟುಂಬದ ಮತ್ತೊಂದು ಫೋಟೋವನ್ನು ಕಾಣಬಹುದಾಗಿದೆ.
ಈ ಸುದ್ದಿಯನ್ನೂ ಓದಿ: Swara Bhaskar: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ರಾಹುಲ್ ಗಾಂಧಿ ಭಾಗಿ
ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ, ತಂದೆಯಾದ ಸ್ವರಾ ಮತ್ತು ಫಹಾದ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಅಭಿಮಾನಿಗಳಿಂದ ಸೆಲೆಬ್ರಿಟಿಗಳವರೆಗೆ ಹಲವಾರು ಜನರು ಈಗ ದಂಪತಿಗಳಿಗೆ ಶುಭಾಶಯ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ತಿಲೋತಮಾ ಶೋಮ್, ಗುನೀತ್ ಮೊಂಗಾ ಮತ್ತು ಪಾರ್ವತಿ ಕಾಮೆಂಟ್ಗಳಲ್ಲಿ ದಂಪತಿಗಳನ್ನು ಅಭಿನಂದಿಸಿದ್ದಾರೆ.
ಇದೇ ವರ್ಷದ ಫೆಬ್ರವರಿಯಲ್ಲಿ ಸ್ವರಾ ಭಾಸ್ಕರ್ ಮ್ತತು ಫಹಾದ್ ಅಹ್ಮದ್ ಅವರು ಕೋರ್ಟ್ನಲ್ಲಿ ವಿವಾಹವಾಗಿದ್ದರು. ಬಳಿಕ ಮಾರ್ಚ್ ತಿಂಗಳಲ್ಲಿ ಹಳದಿ, ಸಂಗೀತ, ವೆಡ್ಡಿಂಗ್ ರಿಸೆಪ್ಷನ್ ಸೇರಿದಂತೆ ಅನೇಕ ಮದುವೆಯ ಕಾರ್ಯಕ್ರಮಗಳನ್ನು ನಡೆಸಿದ್ದರು. ಜೂನ್ ತಿಂಗಳಲ್ಲಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸ್ವರಾ ಭಾಸ್ಕರ್ ಹಾಗೂ ಫಹಾದ್ ಅಹ್ಮದ್ ಅವರು ಘೋಷಿಸಿದ್ದರು. ಈಗ ಮುದ್ದಾದ ಹೆಣ್ಣುಮಗಳ ತಂದೆತಾಯಿಯಾಗಿದ್ದಾರೆ.
ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿ
Actor Darshan : ನಾವಷ್ಟೇ ಕಾಣ್ಸೋದಾ? ಹೇಳಿಕೆಯಿಂದ ರೈತರ ಕೆಂಗಣ್ಣಿಗೆ ಗುರಿಯಾದ ನಟ ದರ್ಶನ್; ಕ್ಷಮೆ ಯಾಚನೆಗೆ ಆಗ್ರಹ
Actor Darshan : ಕಾವೇರಿ ಹೋರಾಟ ಅಂದರೆ ನಾವು ಮಾತ್ರ ಕಾಣ್ಸೋದಾ? ೩೬ ಕೋಟಿ ಮಾಡಿದೋನು ಕಾಣಿಸೊಲ್ವಾ ಎಂಬ ನಟ ದರ್ಶನ್ ಹೇಳಿಕೆ ವಿವಾದವಾಗಿದೆ. ರೈತರು ದರ್ಶನ್ ಕ್ಷಮೆ ಯಾಚನೆಗೆ ಒತ್ತಾಯಿಸಿದ್ದಾರೆ.
ಮಂಡ್ಯ: ಕಾವೇರಿ ಹೋರಾಟ (Cauvery protest) ಎಂದ ಕೂಡಲೇ ನಿಮ್ಮ ಕಣ್ಣಿಗೆ ದರ್ಶನ್, ಸುದೀಪ್ , ಶಿವಣ್ಣ, ಯಶ್, ಅಭಿ ಮಾತ್ರ ಕಾಣೋದಾ? ಬೇರೆ ತಮಿಳು ಚಿತ್ರದಲ್ಲಿ ಕೋಟಿ ಕೋಟಿ ಮಾಡಿದವನು ಕಾಣ್ತಿಲ್ವ? ಎಂಬ ನಟ ದರ್ಶನ್ (Actor Darshan) ಅವರ ಹೇಳಿಕೆ ಮಂಡ್ಯದ ರೈತರ (Farmers of Mandya) ಕೆಂಗಣ್ಣಿಗೆ ಗುರಿಯಾಗಿದೆ.
ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ (Mandya Jilla raitha hitha rakshana samiti) ಮಂಡ್ಯದಲ್ಲಿ ನಡೆಸುತ್ತಿರುವ ಧರಣಿಯಲ್ಲಿ ದರ್ಶನ್ ಅವರ ಹೇಳಿಕೆ ಪ್ರಸ್ತಾಪವಾಗಿದೆ. ಇದೊಂದು ಬೇಜವಾಬ್ದಾರಿತನ ಹೇಳಿಕೆಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಮಾತ್ರವಲ್ಲ, ನಟ ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಹೋರಾಟ ವೇಳೆ ಮಾತನಾಡಿದ ಪ್ರತಿಭಟನಾಕಾರರು, ದರ್ಶನ್ ಅವರು ರೀತಿ ಮಾತನಾಡಬಾರದಿತ್ತು. ನಾವು ಒಂದು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ದರ್ಶನ್ ಬಂದ್ರೆ ಬಲಸಿಗುತ್ತದೆ ಎಂದು ಭಾವಿಸಿದ್ದೆವು. ಆದರೆ, ನೀವು ನಮ್ಮನ್ನೇ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದೀರಿʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಹೋರಾಟಕ್ಕೆ ನೀಡಿದ ಆಮಂತ್ರಣವನ್ನೇ ತಪ್ಪಾಗಿ ಭಾವಿಸಿ ಈ ರೀತಿಯಾಗಿ ಮಾತನಾಡಿದ್ದು ತಪ್ಪು. ಕಾವೇರಿ ಕೊಳ್ಳದ ಜಿಲ್ಲೆಯವರಾಗಿ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಬಾರದು ಎಂದು ಹೇಳಿದ ಪ್ರತಿಭಟನಾಕಾರರು, ನಟ ದರ್ಶನ್ ಅವರು ಕೂಡಲೇ ರೈತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಒಬ್ಬ ಜವಾಬ್ದಾರಿಯುತ ನಟನಾಗಿ ಹೋರಾಟಕ್ಕೆ ದನಿಗೂಡಿಸಿ ಎಂದು ಆಗ್ರಹಿಸಿದರು.
ಏನು ಹೇಳಿದ್ದರು ನಟ ದರ್ಶನ್?
ಕಾವೇರಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಚಿತ್ರ ನಟರು ಯಾರೂ ಯಾಕೆ ಭಾಗವಹಿಸುತ್ತಿಲ್ಲ, ಅವರೇಕೆ ಮೌನ ಎಂದು ಕನ್ನಡ ಪರ ಹೋರಾಟಗಾರರು ಪ್ರಶ್ನೆ ಮಾಡಿದ್ದರು. ಈ ಮಾತು ಬರುತ್ತಿದ್ದಂತೆಯೇ ಚಿತ್ರ ನಟರೆಲ್ಲ ಟ್ವೀಟ್ ಮಾಡುವ ಮೂಲಕ ಬೆಂಬಲ ಸಾರಿದ್ದರು. ನಟ ದರ್ಶನ್ ಕೂಡಾ ತಮ್ಮ ಬೆಂಬಲ ನೀಡಿದ್ದರು.
ಈ ನಡುವೆ ಮೈಸೂರಿನ ಟಿ. ನರಸೀಪುರದ ಬನ್ನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು ವಿವಾದಕ್ಕೆ ತಿರುಗಿದೆ. ನನ್ನ ಈ ಮಾತು ವಿವಾದಕ್ಕೆ ಒಳಗಾಗುತ್ತದೆ, ವಿವಾದಾತ್ಮಕ ಮಾತನ್ನೇ ಆಡುತ್ತೇನೆ ಎಂದೇ ಪ್ರಸ್ತಾವಿಸಿ ಈ ಮಾತುಗಳನ್ನು ಹೇಳಿದ್ದರು.
ಇದನ್ನೂ ಓದಿ: Actor Darshan : ಕಾವೇರಿ ಹೋರಾಟಕ್ಕೆ ನಾನು, ಸುದೀಪ್, ಶಿವಣ್ಣ, ಯಶ್ ಮಾತ್ರಾ ಕಾಣ್ಸೋದಾ?; ನಟ ದರ್ಶನ್ ಆಕ್ರೋಶ
ನಟ ದರ್ಶನ್ ಅವರು ಹೇಳಿದ್ದು ಇಷ್ಟು….
- ದರ್ಶನ್, ಸುದೀಪ್ , ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ? ಬೇರೆ ತಮಿಳು ಚಿತ್ರದಲ್ಲಿ ಕೋಟಿ ಕೋಟಿ ಮಾಡಿದವನು ಕಾಣ್ತಿಲ್ವ?
- ಇತ್ತೀಚೆಗೆ ತಮಿಳು ಸಿನಿಮಾ ಬಿಡುಗಡೆಯಾಯಿತು. ಆ ಸಿನಿಮಾವನ್ನು ಕನ್ನಡದ ವಿತರಕರೊಬ್ಬರು ಕರ್ನಾಟಕ ಹಂಚಿಕೆಗೆ 6 ಕೋಟಿ ರೂ. ಖರೀದಿ ಮಾಡಿದರು (ಜೈಲರ್ ಸಿನಿಮಾ ವಿತರಣೆ ಮಾಡಿದ್ದು ಜಯಣ್ಣ). ಆದರೆ ಅವರು 36-37 ಕೋಟಿ ರೂ. ಸಂಪಾದಿಸಿದರು. ಕನ್ನಡದವರು ತಮಿಳು ಸಿನಿಮಾಗೆ 37 ಕೋಟಿ ರೂ. ಕೊಂಡೊಯ್ಯಲು ಬಿಟ್ಟು ಈಗ ಕನ್ನಡ ಕಲಾವಿದರನ್ನು ಮಾತ್ರ ಹೋರಾಟಕ್ಕೆ ಕರೆಯೋದು ಯಾವ ನ್ಯಾಯ?
- 3.ತಮಿಳು ಸಿನಿಮಾಕ್ಕೆ 37 ಕೋಟಿ ರೂ. ಕೊಟ್ರಲ್ಲಾ ಅವರನ್ನು ಹೋರಾಟಕ್ಕೆ ಕರೆಯಿರಿ. ಕನ್ನಡಿಗರು ಕನ್ನಡ ಸಿನಿಮಾನೆ ನೋಡಲ್ಲ. ತಮಿಳು ಸಿನಿಮಾಗೆ 37 ಕೋಟಿ ಕೊಡ್ತೀರಿ. ಇಷ್ಟೆಲ್ಲ ಹಣ ಕನ್ನಡಿಗರು ಸಿನಿಮಾ ನೋಡಿದ್ರಿಂದ ತಾನೆ ಬಂದಿದ್ದು. ಕನ್ನಡಿಗರು ಸಿನಿಮಾ ಮಾಡಿದ್ರೆ ಅದನ್ನ ನೀವು ನೋಡಲ್ಲ. ನೀವು ಬೇರೆ ಭಾಷೆಗೆ ತೋರಿಸುವ ಪ್ರೀತಿ ನಮ್ಮ ಸಿನಿಮಾಗೂ ತೋರಿಸಿ. ಆ ಮೇಲೆ ಕನ್ನಡ ಕಲಾವಿದರನ್ನು ಕರೆಯಿರಿ
-
ವಿದೇಶ18 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ16 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ11 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ12 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema14 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ18 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ16 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ8 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ