ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್' - Vistara News

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

VISTARANEWS.COM


on

ಬೆಂಗಳೂರು: ಇಂದು ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರ ಬಸ್‌ ನಿಲ್ದಾಣದ ಸಮೀಪವಿರುವ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಮೃತರು ಬೀದಿಬದಿ ವ್ಯಾಪಾರಿಗಳು ಎಂದು ತಿಳಿದುಬಂದಿದೆ. 11 ಜನ ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಅವಶೇಷಗಳಡಿ ಮತ್ತಷ್ಟು ಜನ ಸಿಲುಕಿರುವ ಶಂಕೆಯಿದ್ದು, ರಕ್ಷಣಾಕಾರ್ಯ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Continue Reading

Latest

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

VISTARANEWS.COM


on

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಮೆಜೆಸ್ಟಿಕ್, ಎಂ.ಜಿ. ರಸ್ತೆ, ಮಲ್ಲೇಶ್ವರಂ, ಜಯನಗರ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಆಲಿಕಲ್ಲು ಸಮೇತ ಮಳೆಯಾಗಿದ್ದು, ಹಲೆವೆಡೆ ಮರಗಳು ಧರೆಗುರುಳಿವೆ. ಮಳೆಯಿಂದಾಗಿ ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯ್ತು.
ಕಳೆದ ಹಲವು ದಿನಗಳಿಂದ ರಣ ಬಿಸಿಲಿನಿಂದ ಕಂಗೆಟ್ಟಿದ್ದ ನಗರದ ಜನತೆಗೆ ಮಳೆ ತಂಪೆರೆದಿದೆ. ನಾಳೆಯೂ ನಗರದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Continue Reading

bigbreaking

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

VISTARANEWS.COM


on

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

ಪಂಚರಾಜ್ಯಗಳ ಚುನಾವಣಾ ಪರ್ವ ಮುಗಿದಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಪೈಪೋಟಿ ತೀವ್ರಗೊಂಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣಗಳ ನಡುವೆ ನೀನಾ..ನಾನಾ ಸಮರ ಜೋರಾಗಿದೆ. ಮೇ ಕ್ಲೈಮ್ಯಾಕ್ಸ್‌ಗೆ ವೇದಿಕೆ ಸಜ್ಜಾಗಿದೆ. ಮತ್ತೊಂದು ಪ್ರಬಲ ರಾಜಕೀಯ ಸಂಘರ್ಷದ ಮುನ್ಸೂಚನೆ ಸಿಕ್ಕಿದೆ.

ಸಿದ್ದರಾಮಯ್ಯ ಮಹಾಮೌನ:
ರಾಜಕೀಯ ಬೆಳವಣಿಗೆಗಳು ತಾರಕಕ್ಕೆ ಏರುತ್ತಿರುವಂತೆಯೇ ಸಿಎಂ ಸಿದ್ದರಾಮಯ್ಯ ಮಹಾಮೌನಕ್ಕೆ ಜಾರಿದ್ದಾರೆ. ಈ ಮೌನ ಸಿದ್ದರಾಮಯ್ಯ ಬಣದ ಆತಂಕಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೂ ಸಿದ್ದರಾಗಿದ್ದಾರೆ ಎಂಬಂತ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರತೊಡಗಿದೆ. ಇಷ್ಟೇ ಅಲ್ಲ, ಇನ್ನೊಂದು ಕಡೆ ಡಿಕೆ ಶಿವಕುಮಾರ್‌ ಬಣ ಮೇ ತಿಂಗಳ ಶುಭಸುದ್ದಿಯ ನಿರೀಕ್ಷೆಯಲ್ಲಿದೆ.

ಅಹಿಂದ-ದಲಿತ ಸಿಎಂ?
ಒಂದು ವೇಳೆ ಸಿದ್ದರಾಮಯ್ಯ ಪದತ್ಯಾಗ ಮಾಡಿದರೆ, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ, ಗೊಂದಲ ತೀವ್ರಗೊಂಡಿದೆ. ಈ ಮಧ್ಯೆ, ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಲು ರಣತಂತ್ರ ರಚಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಬಣದ ಸಚಿವರಾದ ಸತೀಶ್‌ ಜಾರಕಿಹೊಳಿ ಮತ್ತು ಹೆಚ್‌ ಸಿ ಮಹದೇವಪ್ಪ, ಅಹಿಂದ ಕಾರ್ಡ್‌ ಅಸ್ತ್ರ ಪ್ರಯೋಗ ಮಾಡಿದ್ದಾರೆ. ದಲಿತ ಸಿಎಂ ಬೇಡಿಕೆಯನ್ನೂ ಅವರು ಮುಂದಿಟ್ಟಿದ್ದಾರೆ. ದಲಿತ ಸಿಎಂ ಅಸ್ತ್ರದ ಪ್ರಯೋಗ ಅಂದರೆ, ಇನ್ನೊಂದು ರೀತಿಯಲ್ಲಿ ಡಿಕೆಶಿ ಸಿಎಂ ಆಗಬಾರದು ಎಂಬ ಪರೋಕ್ಷ ಸಂದೇಶದ ರವಾನೆ. ದಲಿತ ಸಿಎಂ ಚರ್ಚೆ ಬಂದಾಗ ರೇಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಪರಮೇಶ್ವರ್‌, ಹೆಚ್‌ ಸಿ ಮಹದೇವಪ್ಪ, ಸತೀಶ್‌ ಜಾರಕಿಹೊಳಿ, ಕೆ. ಹೆಚ್‌ ಮುನಿಯಪ್ಪ ಹೆಸರುಗಳು ಮುಂಚೂಣಿಯಲ್ಲಿರುತ್ತದೆ. ಈ ಎಲ್ಲಾ ಹೆಸರುಗಳು ಕಳೆದ ಒಂದು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಚಾಲ್ತಿಯಲ್ಲಿವೆ.

ನಡೆಯುತ್ತಾ ಮೇ ಕ್ರಾಂತಿ?:
ಮೇ ನಾಲ್ಕರಂದು ಐದು ರಾಜ್ಯಗಳ ಫಲಿತಾಂಶ ಹೊರಬರಲಿದೆ. ಅಂದೇ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣಾ ರಿಸಲ್ಟ್‌ ಕೂಡಾ ಬರಲಿದೆ. ಡಿಕೆಶಿ ಬಣ ಅಧಿಕಾರ ಬದಲಾವಣೆ ನಿರೀಕ್ಷೆಯಲ್ಲಿದೆ. ಅದನ್ನು ತಪ್ಪಿಸಲು ಸಿದ್ದರಾಮಯ್ಯ ಬಣ ನಾನಾ ತಂತ್ರಗಾರಿಕೆ ನಡೆಸುತ್ತಿದೆ. ರಾಜಣ್ಣ ದಲಿತಾಸ್ತ್ರ ಪ್ರಯೋಗ ಮಾಡಿದ್ದಾರೆ. ಸತೀಶ್‌ ಜಾರಕಿಹೊಳಿ, ಹೆಚ್‌.ಸಿ. ಮಹದೇವಪ್ಪ ಮೊದಲಾದ ಸಿಎಂ ಬಣದ ಸಚಿವರು ಪ್ರಯೋಗ ಮಾಡಿದ್ದು ದಲಿತಾಸ್ತ್ರವೇ. ಅಧಿಕಾರ ಬದಲಾವಣೆಯಾದರೂ, ದಲಿತರೇ ಮುಖ್ಯಮಂತ್ರಿಯಾಗಬೇಕು ಎಂಬ ಹಠ ಈ ನಾಯಕರದ್ದು. ಈ ಮೂಲಕ ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಬೇಕು ಎಂಬ ರಣತಂತ್ರ ಹೆಣೆಯಲಾಗಿದೆ. ಡಿಕೆಶಿ ಬಣ ಕೂಡಾ ಪ್ರತಿತಂತ್ರ ಹೆಣೆಯುತ್ತಿದೆ. ಸಿದ್ದರಾಮಯ್ಯನವರ ಒಪ್ಪಿಗೆ ಇಲ್ಲದೇ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂಬುದನ್ನೂ ಹಲವು ಸಚಿವರು ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

Continue Reading

Latest

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

VISTARANEWS.COM


on

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ಈಗ ಹೊಸ ಸಂಭ್ರಮದಲ್ಲಿದ್ದಾರೆ. ಮದುವೆಯಾದ ಕೆಲವು ತಿಂಗಳುಗಳ ನಂತರ ಈ ದಂಪತಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರವಾದ ಪೋಸ್ಟ್ ಹಂಚಿಕೊಂಡಿರುವ ಅವರು, Our universe is expanding ಎಂದು ಬರೆಯುವ ಮೂಲಕ ತಂದೆ-ತಾಯಿ ಆಗುತ್ತಿರುವ ಸಂತಸದ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಟ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಅದ್ಧೂರಿ ಮದುವೆಯಲ್ಲಿ ಚಿತ್ರರಂಗ ಹಾಗೂ ರಾಜಕೀಯದ ಗಣ್ಯರು ಭಾಗವಹಿಸಿ ಶುಭ ಹಾರೈಸಿದ್ದರು. ಇದೀಗ ಡಾಲಿ ದಂಪತಿ ನೀಡಿರುವ ಈ ಗುಡ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಮತ್ತು ಸ್ಯಾಂಡಲ್‌ವುಡ್‌ನ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

Continue Reading
Advertisement
Latest34 minutes ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 hour ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest2 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking2 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest4 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest5 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest6 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ6 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest7 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest8 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌