70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ? - Vistara News

ಸಿನಿಮಾ

70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

70th National Film Awards: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಗೆ ದಿನಗಣನೆ ಆರಂಭವಾಗಿದೆ. ವಿಶೇಷ ಎಂದರೆ ಅತ್ಯುತ್ತಮ ನಟ ವಿಭಾಗದಲ್ಲಿ ಕನ್ನಡದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಅಂತಿಮ ಸುತ್ತಿಗೆ ಈ ಇಬ್ಬರು ಆಯ್ಕೆಯಾಗಿದ್ದಾರೆ ಎನ್ನಲಾಗಿದ್ದು, ಯಾರಿಗೆ ಪ್ರಶಸ್ತಿ ಸೇರಲಿದೆ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನ ಅಭಿಮಾನಿಗಳನ್ನು ಕಾಡುತ್ತಿದೆ.

VISTARANEWS.COM


on

70th National Film Awards
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (70th National Film Awards) ಘೋಷಣೆಗೆ ದಿನಗಣನೆ ಆರಂಭವಾಗಿದೆ. ಈ ತಿಂಗಳೊಳಗೆ ಪ್ರಶಸ್ತಿ ವಿಜೇತರ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ. ಇದಕ್ಕಾಗಿ ಚಲನಚಿತ್ರ ಆಯ್ಕೆ ಮಂಡಳಿ ಸಿದ್ಧತೆಯಲ್ಲಿ ತೊಡಗಿದೆ. 2022ರಲ್ಲಿ ತೆರೆಕಂಡ ಭಾರತದ ವಿವಿಧ ಭಾಷೆಗಳ ಅತ್ಯುತ್ತಮ ಚಿತ್ರಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ವಿಭಾಗಳಲ್ಲಿ ಅತ್ಯುತ್ತಮರನ್ನು ಆಯ್ಕೆ ಮಾಡುವ ಈ ಪ್ರಶಸ್ತಿ ಈಗಾಗಲೇ ಕುತೂಹಲ ಮೂಡಿಸಿದೆ. ವಿಶೇಷ ಎಂದರೆ ಅತ್ಯುತ್ತಮ ನಟ ವಿಭಾಗದಲ್ಲಿ ಕನ್ನಡದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty) ಮತ್ತು ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ (Mammootty) ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಅಂತಿಮ ಸುತ್ತಿಗೆ ಈ ಇಬ್ಬರು ಆಯ್ಕೆಯಾಗಿದ್ದಾರೆ ಎನ್ನಲಾಗಿದ್ದು, ಯಾರಿಗೆ ಪ್ರಶಸ್ತಿ ಸೇರಲಿದೆ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನ ಅಭಿಮಾನಿಗಳನ್ನು ಕಾಡುತ್ತಿದೆ.

ರಿಷಬ್‌ ಶೆಟ್ಟಿ

2022ರಲ್ಲಿ ತೆರೆಕಂಡು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ, ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಟಿಸಿದ ʼಕಾಂತಾರʼ ಚಿತ್ರ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಅತ್ಯುತ್ತಮ ಚಿತ್ರದ ಜತೆಗೆ ನಟ, ನಿರ್ದೇಶಕ ವಿಭಾಗದಲ್ಲಿಯೂ ರಿಷಬ್‌ ಶೆಟ್ಟಿ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇದೀಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ಗಮನವನ್ನೂ ಸೆಳೆದಿದ್ದಾರೆ. ʼಕಾಂತಾರʼ ಚಿತ್ರದ ಶಿವ ಪಾತ್ರದ ಮೂಲಕ ಅತ್ಯುತ್ತಮ ನಟ ವಿಭಾಗದಲ್ಲಿ ರಿಷಬ್‌ ಶೆಟ್ಟಿ ಪ್ರಬಲ ಪೈಪೋಟಿ ಒಡ್ಡಿದ್ದಾರೆ. ತುಳುನಾಡಿನ ವಿಶಿಷ್ಟ ಭೂತಾರಾಧನೆಯ ಸಂಸ್ಕೃತಿಯನ್ನು ಜಗತ್ತಿಗೇ ಸಾರಿದ ಈ ಸಿನಿಮಾ ಮೇಕಿಂಗ್‌ನಿಂದಲೇ ಪ್ರೇಕ್ಷಕರ ಗಮನ ಸೆಳೆದಿತ್ತು. ಅದರಲ್ಲಿಯೂ ನಾಯಕನಾಗಿ ರಿಷಭ್‌ ಶೆಟ್ಟಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಕ್ಲೈಮಾಕ್ಸ್‌ನಲ್ಲಂತೂ ಅವರ ಅಭಿನಯ ಅಮೋಘ ಎಂದಿದ್ದ ಹಲವರು ಅಂದೇ ನ್ಯಾಷನಲ್‌ ಅವಾರ್ಡ್‌ ಬಗ್ಗೆ ಭವಿಷ್ಯ ನುಡಿದಿದ್ದರು.

2016ರಲ್ಲಿ ʼರಿಕ್ಕಿʼ ಚಿತ್ರ ನಿರ್ದೇಶಿಸುವ ಮೂಲಕ ಅವರು ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಬಳಿಕ ತೆರೆಕಂಡ ʼಕಿರಿಕ್‌ ಪಾರ್ಟಿʼ ಮತ್ತು ʼಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡುʼ ಸಿನಿಮಾದಿಂದ ಸ್ಯಾಂಡಲ್‌ವುಡ್‌ನ ಗಮನ ಸೆಳೆದರು. ಇನ್ನು 2022ರಲ್ಲಿ ತೆರೆಕಂಡ ʼಕಾಂತಾರʼ ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿ ಬಾಕ್ಸ್‌ ಆಫೀಸ್‌ನಲ್ಲಿ 400 ಕೋಟಿ ರೂ.ಗಿಂತ ಹೆಚ್ಚು ಗಳಿಸಿ ಮೈಲಿಗಲ್ಲು ನೆಟ್ಟಿದೆ. ಈಗಾಗಲೇ ಫಿಲಂಫೇರ್‌ನಂತಹ ಪ್ರಶಸ್ತಿ ಮುಡುಗೇರಿಸಿಕೊಂಡ ರಿಷಬ್‌ ಶೆಟ್ಟಿ ಅವರಿಗೆ ನ್ಯಾಷನಲ್‌ ಅವಾರ್ಡ್‌ ಪಡೆಯುವ ಎಲ್ಲ ಅರ್ಹತೆಗಳಿವೆ ಎಂದು ಚಿತ್ರಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ. ಇನ್ನೇನು ಈ ಕುತೂಹಲಕ್ಕೆ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ.

ಮಮ್ಮುಟ್ಟಿ

ಮಾಲಿವುಡ್‌ ನಟ, ಬಹುಭಾಷಾ ಕಲಾವಿದ ಮಮ್ಮುಟ್ಟಿ ಕೂಡ ಅತ್ಯುತ್ತಮ ನಟ ವಿಭಾಗದ ರೇಸ್‌ನಲ್ಲಿದ್ದಾರೆ. ಈಗಾಗಲೇ 3 ಬಾರಿ ರಾಷ್ಟ್ರೀಯ ಚಲನಚಿತ್ರ ಮುಡಿಗೇರಿಸಿಕೊಂಡ ಅವರು ʼರೋಷಾಕ್‌ʼ (Rorschach) ಮತ್ತು ʼನಾನ್‌ಪಗಲ್‌ ನೇರತ್ತ್‌ ಮಯಕ್ಕಂʼ (Nanpakal Nerathu Mayakkam) ಚಿತ್ರದಲ್ಲಿನ ಅಭಿನಯಕ್ಕಾಗಿ ಮತ್ತೊಮ್ಮೆ ಪ್ರಬಲ ಪೈಪೋಟಿ ಒಡ್ಡಿದ್ದಾರೆ.

2022ರಲ್ಲಿ ತೆರೆಕಂಡ ಈ ಚಿತ್ರಗಳ ಮೂಲಕ ಮಮ್ಮುಟ್ಟಿ ಮತ್ತೊಮ್ಮೆ ತಮ್ಮ ಅಭಿನಯ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ. ʼರೋಷಾಕ್‌ʼ ಅನ್ನು ಸಿಸ್ಸಾಮ್‌ ಬಷೀರ್‌ ನಿರ್ದೇಶಿಸಿದರೆ, ʼನಾನ್‌ಪಗಲ್‌ ನೇರತ್ತ್‌ ಮಯಕ್ಕಂʼ ಸಿನಿಮಾಕ್ಕೆ ಲಿಜೊ ಜೋಸ್‌ ಪೆಲ್ಲಿಶ್ಶೇರಿ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ʼನಾನ್‌ಪಗಲ್‌ ನೇರತ್ತ್‌ ಮಯಕ್ಕಂʼ ಚಿತ್ರಕ್ಕಾಗಿ ಈಗಾಗಲೇ ಮಮ್ಮುಟ್ಟಿ ಕೇರಳ ರಾಜ್ಯ ಚಲನಚಿತ್ರ, ಫಿಲಂಫೇರ್‌ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೇಕ್ಷಕರಿಂದ, ವಿಮರ್ಷಕರಿಂದ ಮೆಚ್ಚುಗೆ ಗಳಿಸಿದ ಮಮ್ಮುಟಿ 4ನೇ ಬಾರಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: Modi Meets Celebrities: ನರೇಂದ್ರ ಮೋದಿ ಭೇಟಿ ನಂತರ ಯಶ್‌, ರಿಷಭ್‌ ಶೆಟ್ಟಿ, ಅನಿಲ್‌ ಕುಂಬ್ಳೆ, ಮನೀಶ್‌ ಪಾಂಡೆ, ಅಯ್ಯೋ ಶ್ರದ್ಧಾ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Naga Chaitanya:ಟಾಲಿವುಡ್‌ ನಟ ನಾಗ ಚೈತನ್ಯ ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಸದ್ಯ ಸಮಾರಂಭದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

VISTARANEWS.COM


on

Naga Chaitanya
Koo

ಹೈದರಾಬಾದ್‌: ಟಾಲಿವುಡ್‌ ನಟ ನಾಗ ಚೈತನ್ಯ (Naga Chaitanya) ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ (Sobhita Dhulipala) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಇದೀಗ ಶೋಭಿತಾ ಅವರ ಸಹೋದರಿ ಸಮಂತಾ ಧೂಳಿಪಾಲ ನಿಶ್ಚಿತಾರ್ಥದ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿ ಶುಭ ಹಾರೈಸಿದ್ದಾರೆ.

ಸಮಂತಾ-ಶೋಭಿತಾ ಅವರ ಪೋಷಕರು ನಾಗ ಚೈತನ್ಯ ಅವರ ಪೋಷಕರೊಂದಿಗೆ ನಗು ನಗುತ್ತಾ ಪೋಸ್‌ ಕೊಟ್ಟಿದ್ದಾರೆ. ನಾಗ ಚೈತನ್ಯ ತನ್ನ ಅತ್ತೆ ಮಾವನೊಂದಿಗೆ ನಿಂತಿರುವುದು, ಜೋಡಿ ಇಡೀ ಕುಟುಂಬದೊಂದಿಗೆ ಖುಷಿಯಿಂದ ಇರುವ ಕ್ಷಣಗಳ ಫೋಟೊ ಇದಾಗಿದೆ.

ಮಗನ ನಿಶ್ಚಿತಾರ್ಥದ ಬಗ್ಗೆ ನಾಗಾರ್ಜುನ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ʼʼಶೋಭಿತಾ ಅವರ ಪೋಷಕರೂ ನಾಗ ಚೈತನ್ಯನನ್ನು ಪ್ರೀತಿಸುತ್ತಾರೆ. ಅವನು ಖುಷಿಯಿಂದ ಇರಬೇಕು ಎನ್ನುವುದೇ ನನ್ನ ಆಸೆ. ನನ್ನ ಇಬ್ಬರ ಮಕ್ಕಳ ಬಗ್ಗೆಯೂ ಹೆಮ್ಮೆ ಇದೆʼʼ ಎಂದು ಹೇಳಿದ್ದಾರೆ. ಮದುವೆ ಹೀಗೆ ಆಗಬೇಕು ಎನ್ನುವುದರ ಬಗ್ಗೆ ಇದುವರೆಗೆ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಈ ಹಿಂದೆ ನಾಗ ಚೈತನ್ಯ 2017ರಲ್ಲಿ ಬಹುಭಾಷಾ ನಟಿ, ಸೂಪರ್‌ ಸ್ಟಾರ್‌ ಸಮಂತಾ ರುತ್‌ ಪ್ರಭು ಅವರನ್ನು ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದರೂ ಬಳಿಕ ಭಿನ್ನಾಭಿಪ್ರಾಯ ತಲೆದೋರಿದ ಹಿನ್ನಲೆಯಲ್ಲಿ 2021ರಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡಿದ್ದರು.

ನಾಗ ಚೈತನ್ಯ-ಶೋಭಿತಾ ಲವ್‌ ಸ್ಟೋರಿ

2022ರ ಮೇಯಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ಅವರು ಜನ್ಮದಿನ ಆಚರಿಸಿಕೊಂಡಿದ್ದರು. ನಾಗ ಚೈತನ್ಯ ಕೂಡ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಇಬ್ಬರೂ ಜತೆಯಾಗಿ ಪ್ರವಾಸ ಮಾಡುವ ಹಲವು ಫೋಟೊಗಳು ವೈರಲ್‌ ಆಗಿದ್ದವು. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಮಾತನಾಡಿರಲಿಲ್ಲ. ಇದೀಗ ಉಂಗುರ ಬದಲಾಯಿಸುವ ಮೂಲಕ ತಮ್ಮ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.

2022ರಲ್ಲಿ ನಾಗ ಚೈತನ್ಯ ʼಲಾಲ್‌ ಸಿಂಗ್‌ ಛಡ್ಡಾʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದರೂ ಹೇಳಿಕೊಳ್ಳುವಂತಹ ಬ್ರೇಕ್‌ ಸಿಗಲಿಲ್ಲ. ಕಳೆದ ವರ್ಷ ತಮಿಳು ಮತ್ತು ತೆಲುಗಿನಲ್ಲಿ ತೆರೆಕಂಡ ʼಕಸ್ಟಡಿʼ ಚಿತ್ರವೂ ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಜತೆಗೆ ʼಧೂತʼ ಎನ್ನುವ ವೆಬ್‌ಸೀರಿಸ್‌ನಲ್ಲಿ ಕಾಣಿಸಿಕೊಂಡಿದ್ದರು. ಇದು ತೆಲುಗಿನಲ್ಲಿ ತಯಾರಾಗಿತ್ತು. ಸದ್ಯ ʼಥಂಡೆಲ್‌ʼ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು ಶೋಭಿತಾ 2016ರಲ್ಲಿ ಬಿಡುಗಡೆಯಾದ ʼರಾಮನ್‌ ರಾಘವ್‌ 2.0ʼ ಹಿಂದಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ತೆಲುಗು, ತಮಿಳು, ಮಲಯಾಳಂನಲ್ಲಿಯೂ ಅಭಿನಯಿಸಿರುವ ಅವರು ಸದ್ಯ ʼಮಂಕಿ ಮ್ಯಾನ್‌ʼ ಎನ್ನುವ ಇಂಗ್ಲಿಷ್‌ ಚಿತ್ರ ಮತ್ತು ಹಿಂದಿಯ ʼಸಿತಾರಾʼ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Naga Chaitanya: ಸಮಂತಾಗೆ ಪ್ರಪೋಸ್‌ ಮಾಡಿದ ದಿನವೇ ಎಂಗೇಜ್‌ ಆದ ನಾಗಚೈತನ್ಯ! ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ?

Continue Reading

ಸ್ಯಾಂಡಲ್ ವುಡ್

Radhika Pandit: ಯಶ್‌-ರಾಧಿಕಾ ಪಂಡಿತ್‌ ಎಂಗೇಜ್‌ಮೆಂಟ್‌ಗೆ 8 ವರ್ಷ; ಇದು ನೂರು ಜನ್ಮದ ನಂಟು ಎಂದ ಮಿಸೆಸ್‌ ರಾಮಾಚಾರಿ

Radhika Pandit: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಎಂದೇ ಜನಪ್ರಿಯವಾಗಿರುವ ಯಶ್‌ ಮತ್ತು ರಾಧಿಕಾ ಪಂಡಿತ್‌ ನಿಶ್ಚಿತಾರ್ಥ ನಡೆದು 8 ವರ್ಷ ಆಗಿದೆ. ಈ ಹಿನ್ನಲೆಯಲ್ಲಿ ರಾಧಿಕಾ ಪಂಡಿತ್‌ ಇನ್‌ಸ್ಟಾಗ್ರಾಮ್‌ನಲ್ಲಿ ಯಶ್‌ ಜತೆಗಿನ ಫೋಟೊ ಹಂಚಿಕೊಂಡು, ʼʼ8 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಾಲೇ ನನಗೆ 100 ಜನ್ಮದಲ್ಲೂ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂಬುದು ತಿಳಿದಿತ್ತುʼʼ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಎಂದೇ ಜನಪ್ರಿಯವಾಗಿರುವ ಯಶ್‌ ಮತ್ತು ರಾಧಿಕಾ ಪಂಡಿತ್‌ ನಿಶ್ಚಿತಾರ್ಥ ನಡೆದು 8 ವರ್ಷ ಆಗಿದೆ. ಈ ಹಿನ್ನಲೆಯಲ್ಲಿ ರಾಧಿಕಾ ಪಂಡಿತ್‌ (Radhika Pandit) ಇನ್‌ಸ್ಟಾಗ್ರಾಮ್‌ನಲ್ಲಿ ಯಶ್‌ ಜತೆಗಿನ ಫೋಟೊ ಹಂಚಿಕೊಂಡು, ʼʼ8 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಾಲೇ ನನಗೆ 100 ಜನ್ಮದಲ್ಲೂ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂಬುದು ತಿಳಿದಿತ್ತುʼʼ ಎಂದು ಬರೆದುಕೊಂಡಿದ್ದಾರೆ.

2016ರ ಆಗಸ್ಟ್‌ 12ರಂದು ಗೋವಾದಲ್ಲಿ ಅದ್ಧೂರಿಯಾಗಿ ಯಶ್- ರಾಧಿಕಾ ನಿಶ್ಚಿತಾರ್ಥ ನೆರವೇರಿತ್ತು. ಬಳಿಕ ಅದೇ ವರ್ಷ ಡಿಸೆಂಬರ್‌ 9ರಂದು ಗೋವಾದಲ್ಲಿ ಸಪ್ತಪದಿ ಇವರು ಸಪ್ತಪದಿ ತುಳಿದಿದ್ದರು.

ಧಾರಾವಾಹಿಯಲ್ಲಿ ನಟಿಸುತ್ತಿದ್ದ ರಾಧಿಕಾ ಪಂಡಿತ್‌ 2008ರಲ್ಲಿ ತೆರೆಕಂಡ ʼಮೊಗ್ಗಿನ ಮನಸ್ಸುʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ್ದರು. ವಿಶೇಷ ಎಂದರೆ ಇದರಲ್ಲಿ ಯಶ್‌ ಕೂಡ ನಟಿಸಿದ್ದರು. ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಇವರು ಬಳಿಕ ʼಡ್ರಾಮʼ, ʼಮಿ. ಆ್ಯಂಡ್‌ ಮಿ. ರಾಮಾಚಾರಿʼ, ʼಸಂತು ಸ್ಟ್ರೈಟ್‌ ಫಾರ್ವರ್ಡ್‌ʼ ಮುಂತಾದ ಸಿನಿಮಾಗಳಲ್ಲಿ ಜತೆಯಾಗಿ ನಟಿಸಿದ್ದರು.

ಮಕ್ಕಳಾದ ಐರಾ ಹಾಗೂ ಯಥರ್ವ್ ಅವರೊಂದಿಗೆ ಸಾಕಷ್ಟು ಸಮಯ ಕಳೆಯುವ ಯಶ್‌ ಮತ್ತು ರಾಧಿಕಾ ಪಂಡಿತ್‌, ಕುಟುಂಬದೊಂದಿಗಿನ ಫೋಟೊಗಳನ್ನು ಆಗಾಗ ಶೇರ್‌ ಮಾಡುತ್ತಿರುತ್ತಾರೆ.

ಸದ್ಯ ಯಶ್‌ ಬಹು ನಿರೀಕ್ಷಿತ ‘ಟಾಕ್ಸಿಕ್‌’ ಚಿತ್ರದಲ್ಲಿ ನಿರತರಾಗಿದ್ದಾರೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿರುವ ರಾಧಿಕಾ ಪಂಡಿತ್‌ ಚಿತ್ರರಂಗಕ್ಕೆ ಯಾವಾಗ ಮರುಳುತ್ತಾರೆ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಆಗಾಗ ಕೇಳುತ್ತಲೇ ಇರುತ್ತಾರೆ. ಆದರೆ ಅವರು ಇದುವರೆಗೆ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ರಾಧಿಕಾ ಪಂಡಿತ್‌ ಕೊನೆಯದಾಗಿ 2019ರಲ್ಲಿ ತೆರೆಕಂಡ ʼಆದಿ ಲಕ್ಷ್ಮೀ ಪುರಾಣʼ ಚಿತ್ರದಲ್ಲಿ ನಟಿಸಿದ್ದರು. ಇದರಲ್ಲಿ ನಿರೂಪ್‌ ಭಂಡಾರಿ ನಾಯಕನಾಗಿ ಅಭಿನಯಿಸಿದ್ದರು. ಇತ್ತೀಚೆಗೆ ಯಶ್‌ ಜತೆ ಜಾಹೀರಾತಿನಲ್ಲಿ ನಟಿಸಿದ್ದ ರಾಧಿಕಾ ಪಂಡಿತ್‌ ಸಿನಿಮಾಕ್ಕೆ ಬಣ್ಣ ಹಚ್ಚಿಲ್ಲ.

‘ನಂದಗೋಕುಲ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಾಧಿಕಾ ಪಂಡಿತ್, ಉತ್ತಮ ಕಥೆ ಸಿಕ್ಕರೆ ಮತ್ತೆ ಖಂಡಿತಾ ನಟಿಸುತ್ತೇನೆ ಎಂದು ಈ ಹಿಂದೆ ತಿಳಿಸಿದ್ದು, ಅವರ ಕಂಬ್ಯಾಕ್‌ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ ಎಂದೇ ಕರೆಯಲ್ಪಡುವ ರಾಧಿಕಾ ಪಂಡಿತ್‌ ಕೆಲವು ದಿನಗಳ ಹಿಂದೆ ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದರು. ಈ ವೇಳೆ ʼʼಮತ್ತೆ ನೀವು ಯಾವಾಗ ಚಿತ್ರದಲ್ಲಿ ನಟಿಸುತ್ತೀರಾ? ಬೆಳ್ಳಿ ತೆರೆಯಲ್ಲಿ ನಿಮ್ಮನ್ನು ನೋಡಲು ನಾವೆಲ್ಲ ಕಾತುರದಿಂದ ಕಾಯುತ್ತಿದ್ದೇವೆʼʼ ಎಂದು ಹೇಳಿದಾಗ ʼʼಸರಿಯಾದ ಸಮಯ ಬಂದಾಗʼʼ ಎಂದಷ್ಟೇ ಉತ್ತರಿಸಿ ಕುತೂಹಲ ಹೆಚ್ಚಿಸಿದ್ದಾರೆ.

ಇದನ್ನೂ ಓದಿ: Radhika Pandit: ನಟಿ ರಾಧಿಕಾ ಪಂಡಿತ್‌ ಕಮ್‌ ಬ್ಯಾಕ್‌ ಯಾವಾಗ? ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

Continue Reading

ಸ್ಯಾಂಡಲ್ ವುಡ್

Gowri Movie: ʼಗೌರಿʼ ಚಿತ್ರದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್‌; ರಿಯಲ್‌ ಸ್ಟಾರ್‌ ಉಪೇಂದ್ರ ಸಾಥ್‌

Gowri Movie: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ʼಗೌರಿʼ ಚಿತ್ರ ಅಗಸ್ಟ್‌ 15ರಂದು ತೆರೆ ಕಾಣಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಇತ್ತೀಚೆಗೆ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿ ‘ಗೌರಿ’ ಚಿತ್ರಕ್ಕೆ ಸಾಥ್ ನೀಡಿದರು.

VISTARANEWS.COM


on

Gowri Movie
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ʼಗೌರಿʼ (Gowri Movie) ಚಿತ್ರ ಅಗಸ್ಟ್‌ 15ರಂದು ತೆರೆ ಕಾಣಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಇತ್ತೀಚೆಗೆ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ (Upendra) ಮುಖ್ಯ ಅತಿಥಿಯಾಗಿ ಆಗಮಿಸಿ ‘ಗೌರಿ’ ಚಿತ್ರಕ್ಕೆ ಸಾಥ್ ನೀಡಿದರು. ಪ್ರೀ ರಿಲೀಸ್ ಇವೆಂಟ್‌ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಮತ್ತಿತರರು ಭಾಗಿಯಾಗಿದ್ದರು.

ಇಂದ್ರಜಿತ್‍ ಅವರದ್ದು ಗೋಲ್ಡನ್‍ ಹ್ಯಾಂಡ್‍ ಎಂದು ಮಾತನಾಡಿದ ಉಪೇಂದ್ರ ಅವರು, ʼʼಇಂದ್ರಜಿತ್ ಅವರು ದೀಪಿಕಾ ಪಡುಕೋಣೆ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಈಗ ಅವರು ಇಂಟರ್‌ನ್ಯಾಷನಲ್‌ ಸ್ಟಾರ್ ಆಗಿದ್ದಾರೆ. ಇವರ ಮಗ ಯಾವುದಾದರೂ ದೃಷ್ಟೀಲಿ ಇಲ್ಲಿ ಇರ್ತಾನೆ ಅನಿಸುತ್ತಾ? ಬಾಲಿವುಡ್‌ಗೊ, ಹಾಲಿವುಡ್‌ಗೊ ಹೋಗೋ ಥರ ಇದ್ದಾನೆ. ಅವನನ್ನು ಇಲ್ಲೇ ಇರಿಸಿಕೊಳ್ಳೋಕೆ ನಿಮ್ಮ ಕೈಲಿ ಸಾಧ್ಯ ಇದೆ. ಈ ತರಹ ಹೊಸ ತಲೆಮಾರಿನವರು ನಮ್ಮ ಕನ್ನಡ ಚಿತ್ರರಂಗದಲ್ಲಿ ಉಳಿದುಕೊಳ್ಳಬೇಕು ಅಂದರೆ ನಿಮ್ಮ ಕೈಯಲ್ಲಿ ಮಾತ್ರ ಸಾಧ್ಯ. ಅದಕ್ಕೆ ನೀವೆಲ್ಲ ಚಿತ್ರ ನೋಡಬೇಕು. ಈ ಬ್ಯೂಟಿ ಮತ್ತು ಬುದ್ಧಿವಂತಿಕೆ ಮುಗ್ಧತೆಯಿಂದ ಬರುತ್ತದೆ. ಮುಗ್ಧತೆ ಇದೆಯಲ್ಲಾ ಅದೇ ಬ್ಯೂಟಿ. ಇವರ ಮುಖವನ್ನು ನೋಡಿ. ಇವರಿಗೆ ನಾನು ಹಾರೈಸುವುದು ಮುಖ್ಯವಲ್ಲ. ನೀವು ಹಾರೈಸಬೇಕುʼʼ ಎಂದು ಹೇಳಿದರು.

ʼʼಫಸ್ಟ್ ಡೇ, ಫಸ್ಟ್ ಶೋ ಎಲ್ಲರೂ ʼಗೌರಿʼ ಸಿನಿಮಾ ನೋಡಿ. ಇವರ ಸಿನಿಮಾ ನೋಡಿದರೆ ನಮಗೂ ಖುಷಿ ಆಗುತ್ತೆ. ಇಂದ್ರಜಿತ್‍ ಅವರು ಶೋಮ್ಯಾನ್. ಈ ತರಹ ಕಾರ್ಯಕ್ರಮ ಮಾಡೋದಕ್ಕೆ ಅವರಿಂದಲೇ ಸಾಧ್ಯ. ಸಿನಿಮಾ ಸಹ ಅದೇ ರೀತಿ ಮಾಡಿರುತ್ತಾರೆ. ಕಾರ್ಯಕ್ರಮವನ್ನೇ ಹೀಗೆ ಮಾಡಿದ್ದಾರೆ. ಇನ್ನ ಸಿನಿಮಾ ಹೇಗೆ ಮಾಡಿರಬಹುದು ಯೋಚಿಸಿ” ಎಂದರು.

”ಸಮರ್ಜಿತ್‍ ಲವ್‍ಸ್ಟೋರಿಗಳಿಗೂ ಸೂಟ್ ಆಗುತ್ತಾನೆ, ಆ್ಯಕ್ಷನ್‍ ಚಿತ್ರಗಳಿಗೂ ಹೊಂದುತ್ತಾನೆ. ದೇಹವನ್ನೂ ಚೆನ್ನಾಗಿ ಬೆಳೆಸಿದ್ದಾನೆ. ಡ್ಯಾನ್ಸ್ ಸಹ ಮಾಡ್ತಾನೆ. ಜನ ಈಗಾಗಲೇ ಹೃತಿಕ್‍ ರೋಷನ್‍ ಅಂತ ಹೇಳೋಕೆ ಶುರು ಮಾಡಿದ್ದಾರೆ. ನೀನು ನಿನ್ನ ಮುಗ್ಧತೆಯನ್ನ ಉಳಿಸಿಕೋ ಸಾಕು. ಎಷ್ಟು ಮುಗ್ಧನಪ್ಪಾ ನೀನು. ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಸ್ವಲ್ಪ ದಿನ ಚಿತ್ರರಂಗದಲ್ಲಿ ಇದ್ದರೆ ಸಾಕು, ನಾವೆಲ್ಲ ಬಹಳ ಕಿಲಾಡಿಗಳಾಗಿ ಬಿಡ್ತೀವಿ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೇ ಇರುತ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ಕಳೆದುಕೊಂಡು ಬಿಡುತ್ತಾರೆʼʼ ಎಂದು ರಿಯಲ್ ಸ್ಟಾರ್ ಉಪೇಂದ್ರ ಸಮರ್ಜಿತ್ ಲಂಕೇಶ್ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದರು.

ʼʼಸಿನಿಮಾ ಒಂದು ಕ್ರಿಯಾಶೀಲ ಮಾಧ್ಯಮ. ಪ್ರತಿ ಕ್ಷಣ ಯೋಚನೆ ಮಾಡಿ, ಏನಾದರೂ ಹೊಸತನ ತರುತ್ತಾರೆ ಎಂದರೆ ಅದು ಉಪೇಂದ್ರ. ಅವರು ಕನ್ನಡ ಚಿತ್ರರಂಗದಲ್ಲಿರುವುದು ನಮ್ಮ ಅದೃಷ್ಟ. ಉಪ್ಪಿ ಸಾರ್ ಅವರು ತಮ್ಮ ಬುದ್ಧಿವಂತಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೆಸರು ತಂದಿದ್ದಾರೆ. ಇವತ್ತು ಕನ್ನಡ ಚಿತ್ರರಂಗವನ್ನು ಜಗತ್ತಿಗೆ ತೆಗೆದುಕೊಂಡು ಹೋಗಿದ್ದಾರೆ. ‘ಎ’, ‘ಉಪೇಂದ್ರ’ ಮತ್ತು ‘ಸೂಪರ್’ ಚಿತ್ರಗಳನ್ನು ನಾವು ಯೋಚನೆ ಮಾಡೋಕೂ ಸಾಧ್ಯವಿಲ್ಲ. ನನ್ನ ಮಗ ‘ಉಪೇಂದ್ರ’ ಸಿನಿಮಾ ಕ್ಲೈಮ್ಯಾಕ್ಸ್ ನೋಡಿ ಅವರು ಆಗಿನ ಕಾಲಕ್ಕೆ ಟೊರೋಂಟಿನೋ ಶೈಲಿಯ ಸಿನಿಮಾ ಮಾಡಿದ್ದರು ಎಂದು ಹೇಳುತ್ತಿದ್ದ. ಆ ರೀತಿಯ ಯೋಚನೆ ಮಾಡೋದು ಅಸಾಧ್ಯ. ಅವರು ನಮ್ಮ ನಡುವೆ ಇದ್ದಾರೆ ಅನ್ನೋದು ನಮ್ಮ ಹೆಮ್ಮೆʼʼ ಎಂದು ಇಂದ್ರಜಿತ್ ಲಂಕೇಶ್ ಹೇಳಿದರು. ʼʼಆಗಸ್ಟ್‌ 15ರಂದು ಬಿಡುಗಡೆಯಾಗುತ್ತಿರುವ ʼಗೌರಿʼ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿʼʼ ಎಂದು ಮನವಿ ಮಾಡಿದರು.

ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ತಮ್ಮ ಮೊದಲ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕೆಂದು ವಿನಂತಿಸಿದರು.

ಇದನ್ನೂ ಓದಿ: Gowri Movie: ‘ಗೌರಿ’ ಚಿತ್ರದ ಟ್ರೈಲರ್ ಅನಾವರಣ ಮಾಡಿದ ಕಿಚ್ಚ ಸುದೀಪ್

Continue Reading

ಕಿರುತೆರೆ

Annayya Serial: ‘ಅಣ್ಣಯ್ಯ’ ಧಾರಾವಾಹಿಗೆ ರಿಷಬ್ ಶೆಟ್ಟಿ ಸಾಥ್‌; ಕಾರಣವೇನು?

Annayya Serial: ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಆಗಲಿದ್ದು, ಕೆಲವು ದಿನಗಳಿಂದ ಭರ್ಜರಿ ಪ್ರಚಾರ ಆರಂಭಿಸಿತ್ತು. ‘ಗಟ್ಟಿಮೇಳ’ ಧಾರಾವಾಹಿಯ ನಾಯಕಿ ನಿಶಾ ರವಿಕೃಷ್ಣನ್ ಮತ್ತೆ ‘ಅಣ್ಣಯ್ಯ’ ಮೂಲಕ ಕಮ್‌ಬ್ಯಾಕ್ ಮಾಡುತ್ತಿದ್ದಾರೆ.

VISTARANEWS.COM


on

Annayya Serial rishab shetty support
Koo

ಬೆಂಗಳೂರು: ಇತ್ತೀಚೆಗಷ್ಟೇ ‘ಸತ್ಯ’ ಧಾರಾವಾಹಿ (Annayya Serial) ಅಂತ್ಯ ಕಂಡಿತ್ತು. ಈ ಬೆನ್ನಲ್ಲೇ ಮತ್ತೊಂದು ಹೊಸ ಧಾರಾವಾಹಿ ಪ್ರಸಾರಕ್ಕೆ ರೆಡಿಯಾಗಿ ನಿಂತಿದೆ ಅದುವೇ ‘ಅಣ್ಣಯ್ಯ’. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಆಗಲಿದ್ದು, ಕೆಲವು ದಿನಗಳಿಂದ ಭರ್ಜರಿ ಪ್ರಚಾರ ಆರಂಭಿಸಿತ್ತು. ‘ಗಟ್ಟಿಮೇಳ’ ಧಾರಾವಾಹಿಯ ನಾಯಕಿ ನಿಶಾ ರವಿಕೃಷ್ಣನ್ ಮತ್ತೆ ‘ಅಣ್ಣಯ್ಯ’ ಮೂಲಕ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಹಾಗೇ ನಾಗೇಂದ್ರ ಶಾ, ವಿಕಾಶ್ ಉತ್ತಯ್ಯ ಸೇರಿದಂತೆ ಹಲವು ಮಂದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಈ ಧಾರಾವಾಹಿಗೆ ರಿಷಬ್ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ.

ʻಅಣ್ಣಯ್ಯ’ ಧಾರಾವಾಹಿಯನ್ನು ರಿಷಬ್ ಗೆಳೆಯ ಪ್ರಮೋದ್ ಶೆಟ್ಟಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಪೋಸ್ಟ್ ಕೂಡ ಹಾಕಿದ್ದಾರೆ. ಅವರು ಧಾರಾವಾಹಿ ನೋಡುವಂತೆ ಕೋರಿದ್ದಾರೆ.

‘ನಾನು ನಿಮಗೆ ಒಂದು ಕಥೆ ಹೇಳೋಣ ಎಂದು ಬಂದೆ. ನಮ್ಮ ಶಿವಣ್ಣಂದು. ಕಾಡು ಬೆಟ್ಟದ ಶಿವಣ್ಣ (ಕಾಂತಾರ ಕಥಾ ನಾಯಕನ ಪಾತ್ರ) ಅಲ್ಲ. ಮಾರಿಗುಡಿ ಶಿವಣ್ಣಂದು. ಇವನು ಹ್ಯಾಟ್ರಿಕ್ ಹೀರೋ ಶಿವಣ್ಣನ ರೀತಿಯೇ. ತಂಗಿ ಅಂದ್ರೆ ಪ್ರೀತಿ. ನಾಲ್ಕು ತಂಗಿಯರ ಬದುಕು ಚಂದ ಆಗಬೇಕು ಅನ್ನೋದೆ ಅವನ ದೊಡ್ಡ ಕನಸು. ಶಿವಣ್ಣನ ಕಥೆ ಇಷ್ಟೇ ಅಲ್ಲ, ಭಾರಿ ಉಂಟು. ನೋಡಿ ಮರ್ರೆ’ ಎಂದು ರಿಷಬ್ ಶೆಟ್ಟಿ ಕೋರಿದ್ದಾರೆ.

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

ನಾಲ್ಕು ಜನ ತಂಗಿಯರಿಗೆ ತಾಯಿಯ ಮಮತೆ ತೋರುತ್ತಾನೆ. ತಂಗಿಯಂದಿರ ಓದು- ಮದುವೆಯ ಕನಸು ಕಾಣುತ್ತಾನೆ.’ಪಾರು’ ಧಾರಾವಾಹಿಯ ಹನುಮಂತು ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಾಗೇಂದ್ರ ಶಾ ಇಲ್ಲಿ ವಿಶಿಷ್ಟ ಅವತಾರ ತಾಳಿದ್ದಾರೆ.

‘ಅಣ್ಣಯ್ಯ’ ಧಾರಾವಾಹಿಯಲ್ಲಿ ರಂಗಭೂಮಿ ಹಿನ್ನೆಲೆಯ ಅನುಭವಿ ಕಲಾವಿದರ ದೊಡ್ಡ ತಂಡವೇ ಇದೆ. ಶಿವಣ್ಣ- ಪಾರ್ವತಿ ಮತ್ತು ನಾಲ್ಕು ತಂಗಿಯರ ಕಥೆ ನಾಳೆಯಿಂದ (ಆಗಸ್ಟ್ 12) ರಾತ್ರಿ 7.30 ಕ್ಕೆ ಪ್ರಸಾರಗೊಳ್ಳಲಿದೆ. 7.30 ಕ್ಕೆ ಪ್ರಸಾರವಾಗುತ್ತಿದ್ದ ‘ಪುಟ್ಟಕ್ಕನ ಮಕ್ಕಳು’ ಇನ್ಮುಂದೆ ಸಂಜೆ 6.30 ಕ್ಕೆ ಹಾಗೂ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.

Continue Reading
Advertisement
Self harming
ಕರ್ನಾಟಕ1 min ago

Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Patanjali ads
ದೇಶ7 mins ago

Patanjali Ayurved Ads: ನ್ಯಾಯಾಂಗ ನಿಂದನೆ ಪ್ರಕರಣ ರದ್ದು; ಬಾಬಾ ರಾಮದೇವ್‌ಗೆ ಬಿಗ್‌ ರಿಲೀಫ್

Gold Rate Today
ಚಿನ್ನದ ದರ15 mins ago

Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ಬೆಂಗಳೂರು18 mins ago

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Muda Scam
ಕರ್ನಾಟಕ28 mins ago

Muda Scam: ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸ್ವೀಕರಿಸದಂತೆ ಕೋರ್ಟ್‌ಗೆ ಅರ್ಜಿ

Tungabhadra Dam
ಪ್ರಮುಖ ಸುದ್ದಿ38 mins ago

Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

Naga Chaitanya
ಸಿನಿಮಾ40 mins ago

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Paris Paralympic 2024
ಕ್ರೀಡೆ50 mins ago

Paris Paralympic 2024: ಪ್ಯಾರಾಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಹಾಲಿ ಚಾಂಪಿಯನ್‌ ಪ್ರಮೋದ್ ಭಗತ್‌ಗೆ ಅಮಾನತು ಶಿಕ್ಷೆ

kolkata doctor murder case
ದೇಶ51 mins ago

Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

borewell water More than 40 people suffer from vomiting after drinking borewell water
ಬೆಳಗಾವಿ56 mins ago

Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌