70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು! - Vistara News

ಸಿನಿಮಾ

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

70th National Film Awards: 2022 ಜನವರಿಯಿಂದ ಡಿಸೆಂಬರ್ 31ರವರೆಗೆ ಸೆನ್ಸಾರ್ ಆಗಿರುವ ಚಿತ್ರಗಳು ರಾಷ್ಟ್ರೀಯ ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿವೆಮಧ್ಯಾಹ್ನ ಮೂರು ಗಂಟೆಗೆ ಪ್ರಶಸ್ತಿ ಪಟ್ಟಿ ಘೋಷಣೆ ಆಗಲಿದೆ.

VISTARANEWS.COM


on

70th National Film Awards Mammootty rishab shetty competition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಎನಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ (70th National Film Awards) ಇಂದು (ಆಗಸ್ಟ್ 16) ರಂದು ಘೋಷಣೆ ಆಗಲಿದೆ. ಕನ್ನಡದ ‘ಕಾಂತಾರ’ ಸಿನಿಮಾ ಈ ಬಾರಿ ಪ್ರಶಸ್ತಿ ಪಟ್ಟಿಯಲ್ಲಿದೆ. ಮಲಯಾಳಂನ ಮಮ್ಮುಟಿ ನಟನೆಯ ಕೆಲ ಸಿನಿಮಾಗಳು ಸ್ಪರ್ಧೆಯಲ್ಲಿವೆ.  ಮಧ್ಯಾಹ್ನ ಮೂರು ಗಂಟೆಗೆ ಪ್ರಶಸ್ತಿ ಪಟ್ಟಿ ಘೋಷಣೆ ಆಗಲಿದೆ. 2022 ಜನವರಿಯಿಂದ ಡಿಸೆಂಬರ್ 31ರವರೆಗೆ ಸೆನ್ಸಾರ್ ಆಗಿರುವ ಚಿತ್ರಗಳು ರಾಷ್ಟ್ರೀಯ ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿವೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2024 ವಿಜೇತ ಪಟ್ಟಿಯನ್ನು ಪ್ರಕಟಿಸಲಿದೆ. ಮಮ್ಮುಟ್ಟಿ ಮತ್ತು ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ ರೇಸ್‌ನಲ್ಲಿದ್ದಾರೆ. 70 ನೇ ರಾಷ್ಟ್ರೀಯ ಫಿಲ್ಮ್ ಅವಾರ್ಡ್ಸ್ 2024 ವಿಜೇತರ ಹೆಸರು ಪಟ್ಟಿಯನ್ನು ಶುಕ್ರವಾರ (ಆಗಸ್ಟ್ 16) ಘೋಷಿಸಲಾಗುತ್ತದೆ.  ವಿಶೇಷವಾಗಿ ಈ ಬಾರಿ ಅತ್ಯುತ್ತಮ ನಟ ಯಾರಾಗಬಹುದು ಎಂಬ ಕುತೂಹಲ ಹೆಚ್ಚಾಗಿದೆ.

ಕನ್ನಡದ ‘ಕಾಂತಾರ’ ಸಿನಿಮಾ ಈ ಬಾರಿ ಪ್ರಶಸ್ತಿ ಪಟ್ಟಿಯಲ್ಲಿದೆ. ಅತ್ಯುತ್ತಮ ಸಿನಿಮಾ, ಸಂಗೀತ, ಎಡಿಟಿಂಗ್, ಪ್ರೊಡಕ್ಷನ್ ಡಿಸೈನ್, ಅತ್ಯುತ್ತಮ ನಟನೆ, ಅತ್ಯುತ್ತಮ ಸಿನಿಮಾ ಮತ್ತು ನಿರ್ದೇಶನ, ವಸ್ತ್ರ ವಿನ್ಯಾಸ ಇನ್ನೂ ಕೆಲವು ವಿಭಾಗಗಳಲ್ಲಿ ‘ಕಾಂತಾರ’ ಸಿನಿಮಾ ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಇದೆ. ʻನನ್ಪಕಲ್ ನೆರತು ಮಯಕ್ಕಮ ’ ಮತ್ತು ‘ರೋರ್ಸ್ಚಾಚ್’ ಚಿತ್ರಗಳಿಗೆ ಮಮ್ಮುಟ್ಟಿ ಹೆಸರನ್ನು ಆಯ್ಕೆ ಮಾಡಲಾಗಿದೆ

‘ಕೆಜಿಎಫ್ 2’ ಸಿನಿಮಾ ಸಹ ಪ್ರಶಸ್ತಿ ಪಟ್ಟಿಯಲ್ಲಿದ್ದು ಅತ್ಯುತ್ತಮ ಸಾಹಸ, ಅತ್ಯುತ್ತಮ ನಟನೆ, ಪ್ರೊಡಕ್ಷನ್ ಡಿಸೈನ್, ವಿಎಫ್​ಎಕ್ಸ್, ಹಿನ್ನೆಲೆ ಸಂಗೀತ ಇನ್ನೂ ಕೆಲವು ವಿಭಾಗಗಳಲ್ಲಿ ಇದೆ. ಪೃಥ್ವಿ ಕೋಣನೂರು ಅವರ ಸಿನಿಮಾ ‘ಹದಿನೇಳೆಂಟು’, ‘ಕೋಳಿ ಎಸ್ರು’, ‘ಪೆದ್ರೊ’, 19.20.21, ‘ಫೋಟೊ’, ‘ವಿರಾಟಪುರದ ವಿರಾಗಿ’, ‘ನಾನು ಕುಸುಮ’ ಇನ್ನೂ ಕೆಲವು ಸಿನಿಮಾಗಳು ಇವೆ.

ಇದನ್ನೂ ಓದಿ: Duniya Vijay: ಗಣೇಶ್‌ ಸಿನಿಮಾ ಹಿಂದಿಕ್ಕಿತೇ ‘ಭೀಮ’? ದುನಿಯಾ ವಿಜಯ್ ಸಿನಿಮಾ ಭರ್ಜರಿ ಕಲೆಕ್ಷನ್!

ಪೃಥ್ವಿರಾಜ್ ಸುಕುಮಾರ್ ನಟನೆಯ ‘ಜನ ಗಣ ಮನ’, ಮಲಯಾಳಂ ನ ಇತರೆ ಕೆಲವು ಸಿನಿಮಾಗಳಾದ, ‘ರೊರಸಾಚ್’, ‘ಮುಕುಂದನ್ ಉನ್ನಿ ಅಸೋಸಿಯೇಟ್ಸ್’, ‘ಜಯ ಜಯ ಜಯ ಹೇ’, ‘ಪುಜು’, ‘ಅರಿಪ್ಪು’, ‘ಸಲ್ಯೂಟ್’ ಇನ್ನೂ ಕೆಲವು ಸಿನಿಮಾಗಳಿವೆ. ‘ಸೀತಾ ರಾಮಂ’ ಸಿನಿಮಾ 2022 ರಲ್ಲಿ ಬಿಡುಗಡೆ ಆಗಿದ್ದು ಸ್ಪರ್ಧೆಯಲ್ಲಿದೆ.

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024 ಗಾಗಿ, ತೆಲುಗು ಚಿತ್ರ ಪುಷ್ಪ: ದಿ ರೈಸ್‌ಗಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರು. ಮತ್ತು ಅತ್ಯುತ್ತಮ ನಟಿ ಗೌರವವನ್ನು ಆಲಿಯಾ ಮತ್ತು ಕೃತಿ ಗೆದ್ದಿದ್ದರು. ಮೂವರೂ ನಟರಿಗೆ ಇದು ಮೊದಲ ರಾಷ್ಟ್ರೀಯ ಪ್ರಶಸ್ತಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Vijay Surya: ಕಲರ್ಸ್ ಕನ್ನಡ ವಾಹಿನಿಯ ವಿಜಯ್ ಸೂರ್ಯ ಅವರ ಎರಡನೇ ಪ್ರೋಮೋ ರಿಲೀಸ್ ಮಾಡಲಾಗಿದೆ. ಅದರಲ್ಲಿ ವಿಜಯ್ ಸೂರ್ಯ ಖಡಕ್ ಎಂಟ್ರಿ ಕೊಟ್ಟಿದ್ದಾರೆ. ಇದಕ್ಕೆ ‘ಹೆಸರು ದತ್ತಾ ಶ್ರೀರಾಮ ಪಾಟಿಲ್, ಬಳ್ಳಾರಿ ಜನ ಕರೆಯೋದು ದತ್ತಾ ಭಾಯ್ ಎಂದು.

VISTARANEWS.COM


on

Vijay Surya drusti bottu serial will start
Koo

ಕಲರ್ಸ್ ಕನ್ನಡ ವಾಹಿನಿಯ ಹೊಸ ಧಾರಾವಾಹಿ ದೃಷ್ಟಿಬೊಟ್ಟು ಶುರುವಾಗುತ್ತಿದೆ.

ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ರಾಜ್ಯದ ಜನತೆಯ ಮೆಚ್ಚುಗೆ ಗಳಿಸಿದ ವಿಜಯ್ ಸೂರ್ಯ ಈ ಧಾರಾವಾಹಿ ಮೂಲಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯ ವಿಜಯ್ ಸೂರ್ಯ ಅವರ ಎರಡನೇ ಪ್ರೋಮೋ ರಿಲೀಸ್ ಮಾಡಲಾಗಿದೆ. ಅದರಲ್ಲಿ ವಿಜಯ್ ಸೂರ್ಯ ಖಡಕ್ ಎಂಟ್ರಿ ಕೊಟ್ಟಿದ್ದಾರೆ. ಇದಕ್ಕೆ ‘ಹೆಸರು ದತ್ತಾ ಶ್ರೀರಾಮ ಪಾಟಿಲ್, ಬಳ್ಳಾರಿ ಜನ ಕರೆಯೋದು ದತ್ತಾ ಭಾಯ್ ಎಂದು.

ಇದನ್ನೂ ಓದಿ: Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

ದತ್ತಾ ಭಾಯ್ ಬರ್ತಿದ್ದಾರೆ ಶ್ರೀಘ್ರದಲ್ಲೇ..! ಎಂದು ಬರೆದುಕೊಂಡು ಪೋಸ್ಟ್ ಹಂಚಿಕೊಂಡಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ ದೃಷ್ಟಿಬೊಟ್ಟ ಆರಂಭವಾಗುತ್ತಿದ್ದು, ನಾಯಕನಾಗಿ ವಿಜಯ್ ಸೂರ್ಯ ಖಡಕ್ ಎಂಟ್ರಿ ಕೊಟ್ಟಿದ್ದಾರೆ.

Continue Reading

Latest

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Kolkata Doctor Murder Case: ಕೋಲ್ಕತ್ತಾದ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಇಡೀ ದೇಶದ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ತಾರೆಯರು ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಬೆಂಬಲ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಹೃತಿಕ್ ರೋಶನ್, ಜೆನಿಲಿಯಾ ದೇಶ್‌ಮುಖ್‌, ಆಯುಷ್ಮಾನ್ ಖುರಾನಾ, ರಿಚಾ ಚಡ್ಡಾ, ನವ್ಯಾ ನವೇಲಿ ನಂದಾ, ಜೋಯಾ ಅಖ್ತರ್ ಮುಂತಾದ ನಟನಟಿಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Kolkata Doctor Murder Case
Koo


ಕೋಲ್ಕತಾ: ಕೋಲ್ಕತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನೀಡುತ್ತಿದ್ದ ವೈದ್ಯೆಯ (Kolkata Doctor Murder Case) ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದೇಶದ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ತಾರೆಯರು ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಬೆಂಬಲ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Kolkata Doctor Murder Case
Kolkata Doctor Murder Case

ಬಾಲಿವುಡ್ ಸೆಲೆಬ್ರಿಟಿಗಳಾದ ಜೆನಿಲಿಯಾ ದೇಶ್‌ಮುಖ್‌, ಆಯುಷ್ಮಾನ್ ಖುರಾನಾ, ರಿಚಾ ಚಡ್ಡಾ, ನವ್ಯಾ ನವೇಲಿ ನಂದಾ, ಜೋಯಾ ಅಖ್ತರ್ ಮತ್ತು ಇತರರು ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಕೊರತೆಯ ವಿರುದ್ಧ ತಮ್ಮ ಆಕ್ರೋಶವನ್ನು ಕಟುವಾದ ಪದಗಳ ಮೂಲಕ ಹೊರಹಾಕಿದ್ದಾರೆ ಮತ್ತು ಅಪರಾಧಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಕವಿತೆ ರಚಿಸುವ ಕಲೆ ಹೊಂದಿರುವಂತಹ ನಟ ಆಯುಷ್ಮಾನ್ ಖುರಾನಾ ಅವರು ಕಾಶ್ ಮೈ ಭಿ ಲಡ್ಕಾ ಹೋತಿ (ನಾನು ಹುಡುಗನಾಗಬೇಕೆಂದು ಬಯಸುತ್ತೇನೆ) ಎಂಬ ಭಾವನಾತ್ಮಕ ಕವಿತೆಯನ್ನು ಬರೆದು ಆ ಕವಿತೆಯನ್ನು ಹೇಳುತ್ತಾ ವಿಡಿಯೊ ಮಾಡಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆ ಕವಿತೆಯಲ್ಲಿ ಅವರು ನಾನು ಹುಡುಗನಾಗಬೇಕೆಂದು ಬಯಸುತ್ತೇನೆ. ಯಾಕೆಂದರೆ ನಾನು ಬಾಗಿಲನ್ನು ಲಾಕ್ ಮಾಡದೆ ಮಲಗಬಹುದು. ನಿರಾತಂಕವಾಗಿ ಎಲ್ಲಿ ಬೇಕಾದರೂ ಓಡಾಡಬಹುದು, ಹಾರಾಡಬಹುದು, ರಾತ್ರಿಯಿಡೀ ಸ್ನೇಹಿತರೊಂದಿಗೆ ತಿರುಗಾಡಬಹುದು. ಆದರೆ ಈ ಸ್ವಾತಂತ್ರ್ಯ ಮಹಿಳೆಯರಿಗೆ ಇಲ್ಲವಲ್ಲ ಎಂಬುದನ್ನು ತಮ್ಮ ಕವಿತೆಯ ಮೂಲಕ ಮಾರ್ಮಿಕವಾಗಿ ತಿಳಿಸಿದ್ದಾರೆ.

Kolkata Doctor Murder Case
Kolkata Doctor Murder Case

ಈ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟಿ ಕೃತಿ “ನಾವು ನಮ್ಮ 78ನೇ ಸ್ವಾತಂತ್ರ್ಯ ವರ್ಷವನ್ನು ಆಚರಿಸುತ್ತಿರುವಾಗ ಜಾಗತಿಕವಾಗಿ ಒಂದು ದೇಶವಾಗಿ ನಾವು ಎಷ್ಟು ದೂರ ಬಂದಿದ್ದೇವೆ ಎಂಬುದರ ಬಗ್ಗೆ ಹೆಮ್ಮೆಪಡುತ್ತೇವೆ. ಆದರೆ ತಮ್ಮ ದೇಶದಲ್ಲಿ ಮಹಿಳೆಯರು ಇನ್ನೂ ಸುರಕ್ಷಿತವಾಗಿಲ್ಲ ಎಂಬ ಭಯಾನಕ ವಾಸ್ತವವನ್ನು ನೋಡಿದಾಗ ನನಗೆ ಬೇಸರವಾಗುತ್ತದೆ. ಈ ಅಮಾನವೀಯ ಕೃತ್ಯಗಳನ್ನು ಮಾಡುವ ಜನರಿಗೆ ಯಾವುದೇ ಭಯವಿರುವುದಿಲ್ಲ. ಆದರೆ ಇಂದಿಗೂ, ಇದರಲ್ಲಿ ಬಲಿಪಶುವಾಗಿರುವುದಕ್ಕೆ ಮಹಿಳೆಯನ್ನು ದೂಷಿಸಲಾಗುತ್ತಿದೆ ಎಂದು ವಿಷಾದಿಸಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾದವರಿಗೆ ಮರಣದಂಡನೆ ವಿಧಿಸಬೇಕೆಂದು ನಟಿ ಜೆನಿಲಿಯಾ ದೇಶ್‌ಮುಖ್‌ ಆಗ್ರಹಿಸಿದ್ದಾರೆ. ತಮ್ಮ ಎಕ್ಸ್ (ಹಿಂದೆ ಟ್ವಿಟರ್) ಖಾತೆಯಲ್ಲಿ ಅವರು, “ರಾಕ್ಷಸರನ್ನು ಗಲ್ಲಿಗೇರಿಸಬೇಕಾಗಿದೆ. ಬಲಿಪಶು ಅನುಭವಿಸಿದ್ದನ್ನು ಓದಿದಾಗ ನನ್ನ ರಕ್ತ ಕುದಿಯುತ್ತದೆ. ಸೆಮಿನಾರ್ ಹಾಲ್‍ನಲ್ಲಿ ಕರ್ತವ್ಯದಲ್ಲಿದ್ದ ಒಬ್ಬ ಮಹಿಳೆ, ಇಂತಹ ಘೋರ ಭಯಾನಕತೆಯನ್ನು ಎದುರಿಸಿದಳು. ಅವಳ ಕುಟುಂಬದವರು ಮತ್ತು ಪ್ರೀತಿಪಾತ್ರರು ಈ ದುರಂತವನ್ನು ಹೇಗೆ ಎದುರಿಸುತ್ತಿದ್ದಾರೆಂದು ಊಹಿಸಲು ಸಹ ಸಾಧ್ಯವಿಲ್ಲʼʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಟ ಹೃತಿಕ್ ರೋಷನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ತೀವ್ರ ಕೋಪ ಮತ್ತು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ, ನಾವೆಲ್ಲರೂ ಸಮಾನವಾಗಿ ಸುರಕ್ಷಿತರೆಂದು ಭಾವಿಸುವ ಸಮಾಜವನ್ನು ನಿರ್ಮಿಸಬೇಕು. ಆದರೆ ಅದಕ್ಕೆ ಹಲವು ವರ್ಷಗಳು ಬೇಕಾಗುತ್ತದೆ. ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಮುಂದಿನ ತಲೆಮಾರು ಉತ್ತಮವಾಗಿರುತ್ತದೆ. ಇದೀಗ ಇಂತಹ ದೌರ್ಜನ್ಯಗಳಿಗೆ ಕಠಿಣ ಕ್ರಮ ಕೈಗೊಳ್ಳುವುದು ನ್ಯಾಯವಾಗಿದೆ. ಮತ್ತು ಅದನ್ನು ಮಾಡಲು ಇರುವ ಏಕೈಕ ಮಾರ್ಗವೆಂದರೆ ಅಂತಹ ಅಪರಾಧಿಗಳಿಗೆ ಹಾಡುಹಗಲಿನಲ್ಲೇ ಕಠಿಣ ಶಿಕ್ಷೆ ನೀಡುವುದು ಎಂದು ತಿಳಿಸಿದ್ದಾರೆ ಮತ್ತು ತಾನು ಸಂತ್ರಸ್ತೆಗೆ ನ್ಯಾಯ ದೊರಕಿಸಲು ಆಕೆಯ ಕುಟುಂಬದೊಂದಿಗೆ ನಿಲ್ಲುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯನ್ನು ನಟಿ ಕರೀನಾ ಕಪೂರ್ ಖಾನ್ ಕೂಡ ಖಂಡಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕರೀನಾ, “12 ವರ್ಷಗಳ ನಂತರ; ಅದೇ ಕಥೆ; ಅದೇ ಪ್ರತಿಭಟನೆ. ಆದರೆ ನಾವು ಇನ್ನೂ ಬದಲಾವಣೆಗಾಗಿ ಕಾಯುತ್ತಿದ್ದೇವೆʼʼ ಎಂದಿದ್ದಾರೆ.

ಆಘಾತಕಾರಿ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ಪ್ರೀತಿ ಜಿಂಟಾ, ಮಹಿಳೆಯರ ಸುರಕ್ಷತೆಗೆ ಸರ್ಕಾರವು ಆದ್ಯತೆ ನೀಡಬೇಕು ಎಂದು ತಿಳಿಸುವ ಮೂಲಕ ಅವರು ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲದೇ ಅತ್ಯಾಚಾರ ಮತ್ತು ಹಿಂಸಾತ್ಮಕ ಲೈಂಗಿಕ ಅಪರಾಧದ ಸಂತ್ರಸ್ತರ ಹೆಸರುಗಳು ಮತ್ತು ಮುಖಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಿರುವಾಗ, ಅತ್ಯಾಚಾರಿಯ ಮುಖವನ್ನು ಮರೆಮಾಚುವುದನ್ನು ನೋಡಿದರೆ ಅಸಹ್ಯವಾಗುತ್ತದೆ. ಇಂತಹ ಘೋರ ಕೃತ್ಯಗಳಿಗೆ ಬೇಗ ನ್ಯಾಯ ಸಿಗುವುದಿಲ್ಲ, ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವುದಿಲ್ಲ. ಹಾಗಾಗಿ ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ಹೆಣ್ಣುಮಗಳ ಬಗ್ಗೆ ತಾನು ವಿಷಾದ ವ್ಯಕ್ತಪಡಿಸುತ್ತೇನೆ. ಕ್ಷಮಿಸಿ ಎಂದು ಅವರು ಬರೆದಿದ್ದಾರೆ

ಇದನ್ನೂ ಓದಿ:ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

ಆಗಸ್ಟ್ 9ರಂದು ಕೋಲ್ಕತಾದ ಆರ್‌ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‍ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆಯೊಬ್ಬರು ಶವವಾಗಿ ಪತ್ತೆಯಾಗಿದ್ದರು. ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಕೊಲೆ ಮತ್ತು ಲೈಂಗಿಕ ದೌರ್ಜನ್ಯದ ವಿರುದ್ಧ ದೇಶಾದ್ಯಂತ ವೈದ್ಯರು ಪ್ರತಿಭಟನೆ ಮುಂದುವರಿಸಿದ್ದು, ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Shiva Rajkumar: ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿತ್ತು. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗಿತ್ತು.

VISTARANEWS.COM


on

Shiva Rajkumar 131st film set on Varamahalakshmi festival
Koo

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shiva Rajkumar) 131ನೇ ಚಿತ್ರದ ಪೋಸ್ಟರ್‌ ಈ ಹಿಂದೆ ಬಿಡುಗಡೆಯಾಗಿತ್ತು, ಇದೀಗ ವರಲಕ್ಷ್ಮಿ ಹಬ್ಬದಂದು ಸಿನಿಮಾದ ಮುಹೂರ್ತ ಮುಗಿಸಿ ಅಧಿಕೃತವಾಗಿ ಸೆಟ್ಟೇರಿದೆ. ಶಿವಣ್ಣ ನಟಿಸಲಿರುವ 131ನೇ ಸಿನಿಮಾ ಆಗಿರಲಿದ್ದು ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ.

 ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕಂಠೀರವ ಸ್ಟುಡಿಯೋನಲ್ಲಿ ಸಿನಿಮಾಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಶಿವರಾಜ್ ಕುಮಾರ್ ಸೇರಿದಂತೆ ಇನ್ನೂ ಕೆಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿತ್ತು. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗಿತ್ತು.

ಇದನ್ನೂ ಓದಿ: Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಕಾಲಿವುಡ್

Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Thalapathy Vijay: ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

VISTARANEWS.COM


on

Thalapathy Vijay Looks Intense In New GOAT Poster Trailer To Release
Koo

ಬೆಂಗಳೂರು: ವಿಜಯ್‌ ಅವರು ಸದ್ಯ ‘ಗ್ರೇಟೆಸ್ಟ್ ಆಫ್ ಆಲ್​ ಟೈಮ್’ ((‘Greatest Of All Time (GOAT)’) ) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತ್ರಿಶಾ ನಾಯಕಿ. ಈ ಸಿನಿಮಾದಲ್ಲಿ ಪ್ರಭುದೇವ ಮೊದಲಾದವರು ನಟಿಸುತ್ತಿದ್ದಾರೆ. ʻವಿಸಿಲ್‌ ಪೋಡುʼ (Whistle Podu) ಎಂಬ ಶೀರ್ಷಿಕೆಯ ಮೊದಲ ಹಾಡು ಬಿಡುಗಡೆಯಾಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆ ದಿನಾಂಕ ರಿವೀಲ್‌ ಆಗಿದೆ.

ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಪ್ರಶಾಂತ್, ಪ್ರಭುದೇವ, ಮೋಹನ್, ಜಯರಾಮ್, ಸ್ನೇಹಾ ಮತ್ತು ಲೈಲಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಅಂದರೆ ಆಗಸ್ಟ್ 17ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಆಗಸ್ಟ್ 15ರ ಪ್ರಯುಕ್ತ ಈ ಘೋಷಣೆ ಮಾಡಲಾಗಿದೆ.  GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ. 

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಜಯ್ ಕೊನೆಯದಾಗಿ ಲೋಕೇಶ್ ಕನಕರಾಜ್ ಅವರ ʻಲಿಯೋʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ. ದಿ ಗೋಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯಂದು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಎಂದು ವರದಿಯಾಗಿದೆ.

ಸಿನಿಮಾ ವೃತ್ತಿಜೀವನಕ್ಕೆ ದಳಪತಿ ವಿಜಯ್‌ (Thalapathy Vijay) ಅವರು ವಿದಾಯ ಹೇಳಲು ಸಜ್ಜಾಗುತ್ತಿದ್ದಾರೆ. ದಳಪತಿ ವಿಜಯ್‌ ಅವರ 69ನೇ ಸಿನಿಮಾ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ತಮಿಳು ಚಿತ್ರ ನಟ ದಳಪತಿ ವಿಜಯ್‌ (Thalapathy Vijay) ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೇ ಇದೆ. ಪಕ್ಷಕ್ಕೆ ʼತಮಿಳ ವೆಟ್ರಿ ಕಳಗಂʼ (Tamizha Vetri Kazhagam) ಎಂಬ ಹೆಸರನ್ನು ಈಗಾಗಲೇ ಘೋಷಿಸಿದ್ದಾರೆ ನಟ. ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 2026ರ ರಾಜ್ಯ ಚುನಾವಣೆಯಲ್ಲಿ ವಿಜಯ್‌ ಅವರು ಕಣಕ್ಕೆ ಇಳಿಯಲಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸದೆ 2026ರಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.

Continue Reading
Advertisement
Pav Bhaji
Latest2 mins ago

Pav Bhaji: ಪಾವ್ ಭಾಜಿ ಮನೆಯಲ್ಲೇ ಮಾಡುವುದು ಹೇಗೆ? ಇಲ್ಲಿದೆ ಸರಳ ವಿಧಾನ

Doctors protest
ಕರ್ನಾಟಕ11 mins ago

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Medicine
ಆರೋಗ್ಯ17 mins ago

Red Line on Medicine Strip: ಔಷಧ ಪ್ಯಾಕೇಟ್‌ ಮೇಲೆ ಕೆಂಪು ಗೆರೆ ಏಕಿರುತ್ತದೆ ಅನ್ನೋದು ಗೊತ್ತಾ?

Vijay Surya drusti bottu serial will start
ಕಿರುತೆರೆ26 mins ago

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Visa Free Countries
ಪ್ರವಾಸ29 mins ago

Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

Indian Economy
ಪ್ರಮುಖ ಸುದ್ದಿ1 hour ago

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Kolkata Doctor Murder Case
Latest1 hour ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Shiva Rajkumar 131st film set on Varamahalakshmi festival
ಸ್ಯಾಂಡಲ್ ವುಡ್1 hour ago

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Donald Trump
ಪ್ರಮುಖ ಸುದ್ದಿ2 hours ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌