RRR: ರೌದ್ರಂ.. ರಣಂ.. ರುಧಿರಂ.. ಒಂದು ಹೈ ವೊಲ್ಟೇಜ್‌ ಮೂವಿ Vistara News

ಸಿನಿಮಾ

RRR: ರೌದ್ರಂ.. ರಣಂ.. ರುಧಿರಂ.. ಒಂದು ಹೈ ವೊಲ್ಟೇಜ್‌ ಮೂವಿ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಥೆ ಎಷ್ಟು ಮುಖ್ಯವೋ ಕಥೆ ಹೇಳುವ ರೀತಿ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಅದನ್ನು ಎಸ್.ಎಸ್.ರಾಜಮೌಳಿ ಒಬ್ಬ ನಿರ್ದೇಶಕರಾಗಿ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಒಂದು ದೃಶ್ಯ ಹೇಗೆ ಪ್ರೇಕ್ಷಕರ ಮನಸ್ಸನ್ನು ಮುಟ್ಟುವಂತೆ ಮಾಡಬೇಕು ಎಂದು ತಿಳಿದುಕೊಂಡ ಚಾಣಾಕ್ಷ ನಿರ್ದೇಶಕ. ಬಾಹುಬಲಿ ಚಿತ್ರದ ನಂತರ ಪ್ರೇಕ್ಷಕರ ಮೇಲೆ ಹೇಗೆ ಪ್ರಭಾವ ಬೀರಿದೆ ಎಂದರೆ ಸ್ಟಾರ್‌‌ ಕಾಸ್ಟ್ ನೋಡಿ ಥಿಯೇಟರ್‌ಗೆ ಬರೋಕಿಂತ ಜಾಸ್ತಿ ಅದು ರಾಜಮೌಳಿ ಚಿತ್ರ ಎಂದು ನೋಡಲು ಥಿಯೇಟರ್‌ಗೆ ಮುಗಿಬೀಳ್ತಾರೆ. ಆರ್‌ಆರ್‌ಆರ್ ಕೂಡ ಅದೇ ಸಾಲಿಗೆ ಸೇರಿರುವ ಪ್ಯಾನ್ ಇಂಡಿಯಾ ಸಿನಿಮಾ.

ಸಿನಿಮಾ ಶುರುವಾಗಿ ಮುಗಿಯೋವರೆಗೂ ಒಂದು ಕ್ಷಣ ಕೂಡ ಕಣ್ಣು ರೆಪ್ಪೆ ಮುಚ್ಚದೇ ಚಿತ್ರ ನೋಡುವ ಹಾಗೆ ದೃಶ್ಯಗಳನ್ನು ಚಿತ್ರಿಸಲಾಗಿದೆ. ಚಿತ್ರದ ಆರಂಭದಲ್ಲಿ ಬ್ರಿಟಿಷರು ಮತ್ತು ಕಾಡು ಜನರ ನಡುವೆ ಶುರುವಾಗುವ ಕಲಹ ಮುಂದೆ ದೊಡ್ಡ ಸಂಗ್ರಾಮಕ್ಕೆ ನಾಂದಿಯಾಗುತ್ತದೆ. ಬ್ರಿಟಿಷರ ವಿರುದ್ಧದ ಹೋರಾಟ, ಹೋರಾಟದಲ್ಲಿ ಎದುರಾಗುವ ತೊಡಕುಗಳು ಮತ್ತು ಬೆಸೆಯುವ ಹೊಸ ಸಂಬಂಧಗಳು. ಈ ಎಲ್ಲಾ ಅಂಶಗಳನ್ನು ಮನದಲ್ಲಿಟ್ಟುಕೊಂಡು ವಿಜಯೇಂದ್ರ ಪ್ರಸಾದ್ ಸರಳವಾದ ಕಥೆಯನ್ನು ಬರೆದಿದ್ದಾರೆ. ಈ ಸಿನಿಮಾ ಆಂಧ್ರಪದೇಶ ಪ್ರಾಂತ್ಯದ ಸ್ವಾತಂತ್ರ್ಯ ಹೋರಾಟಗಾರರಾದ ಸೀತಾರಾಮರಾಜು ಹಾಗೂ ಕೊಮರಂ ಭೀಮ ಅವರ ಪಾತ್ರದಿಂದ ಪ್ರೇರಣೆ ಪಡೆದಿದೆ.

ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್‌ಚರಣ್ ತೇಜ ಅದ್ಭುತವಾಗಿ ನಟಿಸಿದ್ದಾರೆ. ಖಡಕ್ ಸ್ಟೈಲಿಷ್ ಪೋಲಿಸ್ ಅಧಿಕಾರಿ ಲುಕ್‌ನಲ್ಲಿ ಎಂಟ್ರಿ ಕೊಟ್ಟಾಗ ಹಾಗೂ ಶ್ರೀರಾಮನಂತೆ ಬಿಲ್ಲು ಬಾಣ ಹಿಡಿದು ಯುದ್ಧಕ್ಕೆ ನಿಂತ ದೃಶ್ಯವನ್ನು ನೋಡಿದಾಗ ಆ ಪಾತ್ರಕ್ಕೆ ರಾಮ್‌ಚರಣ್ ಅತ್ಯಂತ ಸೂಕ್ತ ಆಯ್ಕೆ ಎಂಬುದು ಖಚಿತವಾಗುತ್ತದೆ. ಅದೇ ರೀತಿ ಕೊಮರಂ ಭೀಮ್ ಪಾತ್ರ ನಿರ್ವಹಿಸಿದ ಜ್ಯೂನಿಯರ್ ಎನ್.ಟಿ.ಆರ್ ಕೂಡ ರಗಡ್ ಲುಕ್‌ನಲ್ಲಿ ಅಭಿಮಾನಿಗಳ ಮನಸೆಳೆದಿದ್ದಾರೆ. ರಾಮ್‌ಚರಣ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ರಾಮ್‌ಚರಣ್ ಮತ್ತು ಜ್ಯೂನಿಯರ್ ಎನ್‌ಟಿಆರ್‌ ಎರಡೂ ಪಾತ್ರಗಳ ನಡುವಿನ ಪೈಪೋಟಿ ಹಾಗೂ ಗೆಳೆತನವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ತೆರೆಯ ಮೇಲೆ ಮೆರೆದಿದ್ದಾರೆ.

ಕಥೆಗೆ ತಕ್ಕ ಸಂಭಾಷಣೆಯನ್ನು ಬರೆದು ಚಿತ್ರದ ಭಾವವನ್ನು ಪ್ರೇಕ್ಷಕನಿಗೆ ತಲುಪಿಸುವಲ್ಲಿ ಆರ್‌ಆರ್‌ಆರ್‌ ಯಶಸ್ವಿಯಾಗಿದೆ. ಇವೆಲ್ಲದಕ್ಕೂ ಶಕ್ತಿ ನೀಡಿ ಜೀವ ತುಂಬಿದ್ದು ಕ್ಯಾಮರಾ ಹಿಂದಿನ ಕೆ ಕೆ ಸೆಂಥಿಲ್ ಅವರ ಕೈಚಳಕ. ಛಾಯಾಗ್ರಾಹಕ ಸೆಂಥಿಲ್ ಅವರು ಮಾಡಿದ ಮ್ಯಾಜಿಕ್ ಹಾಗೂ ವಿಷುವಲ್ ಎಫೆಕ್ಟ್ಸ್ ಮಾಡಿದ ಮೋಡಿ ಚಿತ್ರವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕತೆ ಅತೀ ಸರಳ ಹಾಗೂ ನಿರೀಕ್ಷಿತವಾಗಿದ್ದರೂ ಮುಂದಿನ ದೃಶ್ಯವನ್ನು ಸೀಟಿನ ತುದಿಯಲ್ಲಿ ಕುಳಿತು ನೋಡುವಂತೆ ಮಾಡುವುದರಲ್ಲಿ ಚಿತ್ರ ಗೆದ್ದಿದೆ. ಸಣ್ಣ ಸಣ್ಣ ಅಂಶಗಳಿಗೂ ಗಮನ ಕೊಟ್ಟು ಕಥೆಯಲ್ಲಿ ಎಲ್ಲಿಯೂ ದೋಷ ಕಾಣದಂತೆ ಚಿತ್ರವನ್ನು ನಿರ್ದೇಶಿಸಲಾಗಿದೆ.

ಎಂ.ಎಂ.ಕಿರವಾಣಿ ನೀಡಿದ ಸಂಗೀತ ಈ ಚಿತ್ರದ ಶ್ರೀಮಂತಿಕೆ. ಪ್ರತಿಯೊಂದು ಹಾಡು ಕೂಡ ಹೊಸ ಜೋಶ್ ನೀಡುತ್ತದೆ. ನಾಟು ನಾಟು ಹಾಗೂ ಎತ್ತರಾ ಜೆಂಡಾ ಹಾಡು ಕೇಳುವಾಗ ನಾಲ್ಕು ಸ್ಟೆಪ್ ಹಾಕದೇ ಸುಮ್ಮನೆ ಕೂರುವುದು ಕಷ್ಟ ಆಗುತ್ತದೆ. ಪ್ರತಿಯೊಂದು ಸೀನ್‌ಗೂ ಸೂಕ್ತ ಹಿನ್ನಲೆ ಸಂಗೀತ ನೀಡಿದ್ದಾರೆ.

ಕೆಲವೇ ನಿಮಿಷಗಳ ಕಾಲ ದೃಶ್ಯದಲ್ಲಿದ್ದ ಬಾಲಿವುಡ್ ನಟ ಅಜಯ್ ದೇವಗನ್ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಸೀತಾ ಪಾತ್ರದಲ್ಲಿ ಕಾಣಿಸಿಕೊಂಡ ಆಲಿಯಾ ಭಟ್ ಆ ಪಾತ್ರಕ್ಕೆ ಅಷ್ಟು ಸೂಕ್ತ ಆಯ್ಕೆ ಎಂದು ಅನ್ನಿಸುವುದಿಲ್ಲ. ಕೆಲವು ದೃಶ್ಯಗಳಲ್ಲಿ ಇಂಗ್ಲಿಷ್ ಡೈಲಾಗ್‌ಗಳಿಗೆ ತೆಲುಗು ವಾಯ್ಸ್ ಓವರ್‌ ನೀಡಲಾಗಿದೆ ಆದರೆ ಕೆಲವು ದೃಶ್ಯಗಳಿಗೆ ನೀಡಲಾಗಿಲ್ಲ. ಅದು ಚಿತ್ರದ ಸ್ವಾರಸ್ಯವನ್ನು ಕೆಡಿಸುತ್ತದೆ.

ಆರ್‌ಆರ್‌ಆರ್ ಚಿತ್ರವನ್ನು ನಮ್ಮ ಲಾಜಿಕ್‌ಗಳಿಂದ ಆಚೆ ಇಟ್ಟು ನೋಡಿದರೆ ಒಂದು ಸುಂದರ ಅನುಭವ ಎನ್ನಬಹುದು. ಹಾಸ್ಯ, ಪ್ರೀತಿ, ಉದ್ವೇಗ, ದುಃಖ, ಪ್ರತೀಕಾರ, ಕೋಪ, ಈ ಎಲ್ಲಾ ಭಾವನೆಗಳು ಭರಪೂರವಾಗಿ ತುಂಬಿರುವ ಸಿನಿಮಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Masha And The Bear: ಬೆಂಗಳೂರಿಗೆ ಬರ್ತಿದ್ದಾರೆ ʻಮಾಶಾ ಆ್ಯಂಡ್‌ ದಿ ಬೇರ್ʼ!

Masha And The Bear: ಜನಪ್ರಿಯ ಕಾರ್ಟೂನ್‌ ಸಿರೀಸ್‌ ‘ಮಾಶಾ ಆ್ಯಂಡ್‌ ದಿ ಬೇರ್’ ಅನ್ನು ರಂಗವೇದಿಕೆಗೆ ಅಳವಡಿಸಿ ಭಾರತದ ಪ್ರಮುಖ ನಗರಗಳಲ್ಲಿ ಪ್ರದರ್ಶನ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಬಾರಿ ತಮ್ಮ ಅಭಿಮಾನಿ ಚಿಣ್ಣರ ಎದುರು ನೇರವಾಗಿ ಕಾಣಿಸಿಕೊಳ್ಳಲಿರುವ ಅವರು, ಪತ್ತೇದಾರಿ ಕಥೆಯೊಂದನ್ನು ರಂಗದ ಮೇಲೆ ಪ್ರಸ್ತುತಪಡಿಸಲಿದ್ದಾರೆ.

VISTARANEWS.COM


on

Masha And The Bear in banglore
Koo

ಬೆಂಗಳೂರು: ವಿಶಿಷ್ಟವಾದ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಕೊಡುವಲ್ಲಿ ಮುಂಚೂಣಿಯಲ್ಲಿರುವ ವಯಕಾಮ್‌ 18 ಲೈವ್‌, ಇದೀಗ ತನ್ನ ದಾರಿಯಲ್ಲಿ ಇನ್ನೊಂದು ಮಹತ್ವದ ಹೆಜ್ಜೆಯನ್ನು ಇಡುತ್ತಿದೆ. ಪುಟ್ಟ ಮಕ್ಕಳಿಗೆಲ್ಲ ಚಿರಪರಿಚಿತವಾಗಿರುವ ಮಾಶಾ ಆ್ಯಂಡ್‌ ದಿ ಬೇರ್​ (Masha And The Bear) ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು, ಅವರ ಮುಂದೆ ಲೈವ್ ಪ್ರದರ್ಶನ ನೀಡಲು ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿಯೂ ವೇದಿಕೆ ಸಜ್ಜುಗೊಂಡಿದೆ.

ಜನಪ್ರಿಯ ಕಾರ್ಟೂನ್‌ ಸಿರೀಸ್‌ ‘ಮಾಶಾ ಆ್ಯಂಡ್‌ ದಿ ಬೇರ್’ ಅನ್ನು ರಂಗವೇದಿಕೆಗೆ ಅಳವಡಿಸಿ ಭಾರತದ ಪ್ರಮುಖ ನಗರಗಳಲ್ಲಿ ಪ್ರದರ್ಶನ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಬಾರಿ ತಮ್ಮ ಅಭಿಮಾನಿ ಚಿಣ್ಣರ ಎದುರು ನೇರವಾಗಿ ಕಾಣಿಸಿಕೊಳ್ಳಲಿರುವ ಅವರು, ಪತ್ತೇದಾರಿ ಕಥೆಯೊಂದನ್ನು ರಂಗದ ಮೇಲೆ ಪ್ರಸ್ತುತಪಡಿಸಲಿದ್ದಾರೆ.
ವಯಕಾಮ್18 ಲೈವ್ ನಿರ್ಮಾಣ ಮಾಡಿರುವ, ಎಸ್‌ಎಸ್‌ಬಿಸಿ ಇಂಡಿಯಾ ಪ್ರಸ್ತುತಪಡಿಸುತ್ತಿರುವ ಈ ಲೈವ್‌ ಷೋ ಟೂರ್‌, ಡಿಸೆಂಬರ್ 23ರಂದು ಮುಂಬೈನಿಂದ ಪ್ರಾರಂಭಗೊಳ್ಳಲಿದೆ. ನಂತರ ಭಾರತದ ಪ್ರಮುಖ ಮಹಾನಗರಗಳಾದ ದೆಹಲಿ, ಹೈದರಾಬಾದ್‌ ಮತ್ತು ಬೆಂಗಳೂರುಗಳಲ್ಲಿಯೂ ಪ್ರದರ್ಶನ ನೀಡಿ ಮತ್ತೆ ಮುಂಬೈನಲ್ಲಿಯೇ ಈ ಲೈವ್‌ಷೋ ಟೂರ್ ಕೊನೆಗೊಳ್ಳಲಿದೆ.

ಪತ್ತೇದಾರಿ ಕಥೆಯಲ್ಲಿ ನಿಮ್ಮ ಪಾಲೂ ಇರಲಿದೆ!

‘ಅ ವೆರಿ ಡಿಟೆಕ್ಟೀವ್ ಸ್ಟೋರಿ’ ಎನ್ನುವುದು ಈ ಷೋಗೆ ನೀಡಿರುವ ಅಡಿಟಿಪ್ಪಣಿ. ಹೌದು, ಈ ಲೈವ್‌ ಷೋದಲ್ಲಿ ಮಾಶಾ ಮತ್ತು ಬೇರ್ ಸೇರಿಕೊಂಡು ಮನೆಯಲ್ಲಿ ಕಳೆದುಹೋಗಿರುವ ವಸ್ತುವೊಂದನ್ನು ಹುಡುಕುವ ಪತ್ತೇದಾರಿ ಕೆಲಸ ಮಾಡಲಿದ್ದಾರೆ. ಪತ್ತೇಧಾರಿ ಕಥೆ ಅಂದಮೇಲೆ ಕೇಳಬೇಕೆ? ಸಾಕಷ್ಟು ರೋಚಕತೆ, ಕುತೂಹಲ, ಪನ್‌ ಎಲ್ಲವೂ ಇರಲಿದೆ. ಅಷ್ಟೇ ಅಲ್ಲ, ತಮ್ಮ ಪತ್ತೇಧಾರಿಕೆಯಲ್ಲಿ ಮಾಶಾ ಮತ್ತು ಬೇರ್ ಪ್ರೇಕ್ಷಕರ ಎದುರು ಕೂತಿರುವವರ ಸಹಾಯವನ್ನೂ ಪಡೆಲಿದ್ದಾರೆ! ಅಂದರೆ ಪ್ರೇಕ್ಷಕನೂ ಈ ಷೋದ ಪಾತ್ರಧಾರಿ ಆಗಿರುತ್ತಾನೆ? ಪ್ರೇಕ್ಷಕರ ಜೊತೆ ಮಾತಾಡುತ್ತ, ಅವರನ್ನು ನಗಿಸುತ್ತ, ಅವರಲ್ಲಿ ಕುತೂಹಲ ಕೆರಳಿಸುತ್ತ ಸಾಗುವ ಹಾಗೆಯೇ ಇಡೀ ಷೋವನ್ನು ವಿನ್ಯಾಸಗೊಳಿಸಲಾಗಿದೆ. ವಿಶಾಲ್ ಅಸ್ರಾಣಿ ಈ ಷೋವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Darshan Thoogudeepa: ಭಾರಿ ಮೊತ್ತಕ್ಕೆ ಕಾಟೇರ ಡಿಜಿಟಲ್‌, ಸ್ಯಾಟಲೈಟ್ ಮಾರಾಟ!

ಯಾರು ಯಾರೆಲ್ಲ ಇರ್ತಾರೆ?

ʻಮಾಶಾ ಆ್ಯಂಡ್‌ ದಿ ಬೇರ್ʼ ಬಗ್ಗೆ ಪುಟಾಣಿಗಳಿಗೆ ಹೇಳುವುದೇ ಬೇಕಿಲ್ಲ. ಎಲ್ಲ ಮಕ್ಕಳಿಗೂ ಗೊತ್ತಿರುವ, ಎಲ್ಲ ಮಕ್ಕಳೊಟ್ಟಿಗೆ ಹಿರಿಯರಿಗೂ ಪರಿಚಿತವಾಗಿರುವ ಕಾರ್ಟೂನ್‌ ಕ್ಯಾರೆಕ್ಟರ್‌ಗಳು ಅವು. ಆದರೆ ಷೋದಲ್ಲಿ ಬರೀ ಆ ಎರಡು ಪಾತ್ರಗಳು ಮಾತ್ರವಲ್ಲ. ಸೀರೀಸ್‌ನಲ್ಲಿ ಕಾಣುವ, ಪ್ರೊಫೆಸರ್ ನಾನ್‌ಬೆಲೆವಿಯಸ್‌, ರೋಸಿ, ಪಾಂಡಾ, ಸ್ಲೈ ಫಾಕ್ಸ್‌ ಮತ್ತು ಸಿಲ್ಲಿ ಫಾಕ್ಸ್ ಸೇರಿದಂತೆ ಇನ್ನೂ ಹಲವು ಪಾತ್ರಗಳು ಈ ಷೋದ ಭಾಗವಾಗಿರುತ್ತವೆ.

ಯಾವಾಗ ಎಲ್ಲಿ?

ಮಾಶಾ ಆ್ಯಂಡ್‌ ದಿ ಬೇರ್ ಲೈವ್ ಷೋ ಟೂರ್ ಡಿಸೆಂಬರ್ 23ರಂದು ಮುಂಬೈನಲ್ಲಿ ಆರಂಭಗೊಳ್ಳುತ್ತದೆ. 24ರಂದೂ ಮುಂಬೈನಲ್ಲಿಯೇ ಪ್ರದರ್ಶನ ಇರುತ್ತದೆ. 2024 ಜನವರಿ 20 ಮತ್ತು 21ರಂದು ದೆಹಲಿಯಲ್ಲಿ ಎರಡು ದಿನಗಳ ಷೋ ಆಯೋಜಿಸಲಾಗಿದೆ. ಫೆಬ್ರುವರಿ 3 ಮತ್ತು 4ರಂದು ಹೈದರಾಬಾದ್‌ನಲ್ಲಿ ಪ್ರದರ್ಶನ ನಡೆಯಲಿದೆ.
ಫೆಬ್ರುವರಿ 10-11ರಂದು ‘ಮಾಶಾ ಆಂಡ್‌ ದಿ ಬೇರ್’ ತಂಡ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನ ಮಾಶಾ, ಬೇರ್ ಅಭಿಮಾನಿಗಳಿಗಾಗಿ ಎರಡು ದಿನ ಹಲವು ಪ್ರದರ್ಶನಗಳು ನಡೆಯಲಿವೆ.

ಪಾಲ್ಗೊಳ್ಳುವುದು ಹೇಗೆ?

‘ಮಾಶಾ ಆ್ಯಂಡ್‌ ದಿ ಬೇರ್’ ಷೋದಲ್ಲಿ ನೀವೂ ಪಾಲ್ಗೊಳ್ಳಬಹುದು. ನಿಮ್ಮ ಟಿಕೆಟ್‌ಗಳನ್ನು www.kidsdayout.co ದಲ್ಲಿ ಈಗಲೇ ಬುಕ್ ಮಾಡಬಹುದು. ಎಚ್‌ಎಸ್‌ಬಿಸಿ ಕಾರ್ಡ್‌ ಇರುವವರಿಗೆ ಷೋ ಪ್ರಾರಂಭವಾಗುವ 72 ಗಂಟೆಗಳಿಗೂ ಮುನ್ನ ತಮ್ಮ ಇಷ್ಟದ ಸೀಟ್‌ ಬುಕ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಷೋದ ಪಾತ್ರಗಳನ್ನು ಭೇಟಿಯಾಗಿ ಶುಭಾಶಯ ಕೋರುವ ಅವಕಾಶವನ್ನೂ ನೀಡಲಾಗುತ್ತಿದೆ. ಟಿಕೆಟ್ ದರದಲ್ಲಿಯೂ ವಿಶೇಷ ರಿಯಾಯತಿ ಇರುತ್ತದೆ. ಟಿಕೆಟ್ ಬುಕ್ ಮಾಡಿಕೊಂಡವರಿಗೆ ಪ್ರದರ್ಶನದ ಸ್ಥಳ, ಸಮಯದ ಮಾಹಿತಿಯನ್ನು ನೀಡಲಾಗುವುದು.

ಮಾಶಾ ಆ್ಯಂಡ್‌ ದಿ ಬೇರ್ ಭಾರತದಲ್ಲಿ ಈಗಾಗಲೇ ಸಾಕಷ್ಟು ಜನಪ್ರಿಯವಾಗಿರುವ ಕಾರ್ಟೂನ್ ಸೀರೀಸ್‌. ಚಿಣ್ಣರ ಜತೆಯಲ್ಲಿ ಪೋಷಕರೂ ಕೂತು ನೋಡುವ ಈ ರಿಯಾಲಿಟಿ ಷೋದ ಪಾತ್ರಗಳೂ ಎಲ್ಲರಿಗೂ ಪರಿಚಿತವೇ ಆಗಿವೆ. ಈಗ ವಯಕಾಮ್‌ 18ಲೈವ್‌ ಅವುಗಳನ್ನು ನೇರವಾಗಿ ನೋಡುವ ಅವಕಾಶವನ್ನೂ ಮಾಡಿಕೊಡುತ್ತಿದೆ. ಕಳೆದ ವರ್ಷ, ‘ಪೆಪ್ಪಾ ಪಿಗ್‌ ಲೈವ್‌ ಷೋ’ ಕೂಡ ಇದೇ ರೀತಿ ಭಾರತದ ಬೇರೆ ಬೇರೆ ನಗರಗಳಲ್ಲಿ ಲೈವ್‌ ಪ್ರದರ್ಶನಗಳನ್ನು ನೀಡಿ ಯಶಸ್ವಿಯಾಗಿತ್ತು. ಅದೇ ದಾರಿಯಲ್ಲಿ ಈಗ ಮಾಶಾ ಆ್ಯಂಡ್‌ ದಿ ಬೇರ್ ಕೂಡ ನಡೆಯುತ್ತಿದ್ದು, ಜನರಿಗೆ ಮನರಂಜನೆಯ ರಸದೂಟವನ್ನು ಬಡಿಸಲು ಸರ್ವಸನ್ನದ್ಧವಾಗಿದೆ.

Continue Reading

ಬಾಲಿವುಡ್

Vidyut Jammwal: ಬೆತ್ತಲಾಗಿ ಹಿಮಾಲಯದಲ್ಲಿದ್ದಾರೆ ಈ ಫೇಮಸ್‌ ನಟ! ಸೋಷಿಯಲ್‌ ಮೀಡಿಯಾದಲ್ಲಿ ಫೋಟೊ!

Vidyut Jammwal: ದಕ್ಷಿಣ ಭಾರತದ ಕೆಲವು ಸೂಪರ್‌ಸ್ಟಾರ್ ಸಿನಿಮಾಗಳಲ್ಲಿ ಖಳನಾಯಕನಾಗಿಯೂ ನಟಿಸಿದ್ದಾರೆ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಸಂತನಂತೆ ಹಿಮಾಲಯದ ಕಾಡು ಮತ್ತು ನದಿಗಳಲ್ಲಿ ಆದಿವಾಸಿಯಂತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

VISTARANEWS.COM


on

Vidyut Jammwal
Koo

ಬೆಂಗಳೂರು; ದಳಪತಿ ವಿಜಯ್ ನಟಿಸಿದ ʼತುಪಾಕಿʼ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿ ಗಮನ ಸೆಳೆದಿದ್ದ ನಟ ವಿದ್ಯುತ್ ಜಮ್ವಾಲ್ (Vidyut Jammwal) ಹಿಮಾಲಯದಲ್ಲಿ ಸನ್ಯಾಸಿಯಂತೆ ಮೈ ಮೇಲೆ ಬಟ್ಟೆ ಧರಿಸದೆ ತಿರುಗಾಡುತ್ತಿದ್ದಾರೆ. ಇದೀಗ ಬೆತ್ತಲೆಯಾಗಿರುವ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟನ ಈ ಅವತಾರ ಕಂಡು ಅವರ ಫ್ಯಾನ್ಸ್‌ ಶಾಕ್‌ಗೆ ಒಳಗಾಗಿದ್ದಾರೆ. ಈ ರೀತಿ ನಟ ಇರುವುದಕ್ಕೂ ಕಾರಣ ಕೂಡ ಇದೆ.

ವಿದ್ಯುತ್ ಜಮ್ವಾಲ್ ಅವರು ಇಂದು (ಡಿಸೆಂಬರ್ 10) 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಸಂತನಂತೆ ಹಿಮಾಲಯದ ಕಾಡು ಮತ್ತು ನದಿಗಳಲ್ಲಿ ಆದಿವಾಸಿಯಂತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇಲ್ಲೇ ಸುಮಾರು 10 ದಿನಗಳ ಕಾಲ ಹೀಗೆ ಜೀವನ ನಡೆಸುವುದಾಗಿ ಹೇಳಿಕೊಂಡಿದ್ದಾರೆ.

ʻವಿದ್ಯುತ್ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಮೂರು ಫೋಟೊಗಳನ್ನು ಹಂಚಿಕೊಂಡರು. ಮೊದಲನೆಯದಲ್ಲಿ ಬಟ್ಟೆಯಿಲ್ಲದೆ ನದಿಯ ಪಕ್ಕ ಕುಳಿತಿರುವುದು. ನೀರಿನಲ್ಲಿ ಸೂರ್ಯ ನಮಸ್ಕಾರವನ್ನು ಮಾಡುತ್ತಿರುವ, ಅಡುಗೆ ಮಾಡುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಈ ಬಗ್ಗೆ ನಟ ಹೇಳಿಕೊಂಡಿದ್ದು, ʻʻದೈವಿಕ ವಾಸಸ್ಥಾನ.. 14 ವರ್ಷಗಳ ಹಿಂದೆ ಈ ಅಭ್ಯಾಸ ಶುರುವಾಯ್ತು. ನನಗಿದು ಅರಿವಿಗೆ ಬರುವ ಮೊದಲೇ ಪ್ರತಿ ವರ್ಷ 7-10 ದಿನಗಳನ್ನು ಏಕಾಂಗಿಯಾಗಿ ಕಳೆಯುವುದು ನನ್ನ ಜೀವನದ ಅವಿಭಾಜ್ಯ ಅಂಗವಾಯಿತು.” ಎಂದು ವಿದ್ಯುತ್ ಹೇಳಿದ್ದಾರೆ.

ತಮ್ಮ ಆಚರಣೆಯನ್ನು ವಿವರಿದ ನಟ , “ಐಷಾರಾಮಿ ಜೀವನದಿಂದ ಕಾಡಿಗೆ ಬಂದ ನಾನು ನನ್ನ ಏಕಾಂತತೆಯನ್ನು ಕಂಡುಕೊಂಡಿದ್ದೇನೆ. ‘ನಾನು ಯಾರು’ ಎಂದು ತಿಳಿದುಕೊಳ್ಳುವ ಮೊದಲ ಹೆಜ್ಜೆ ಇದು. ನಿಸರ್ಗ ಒದಗಿಸಿದ್ದರಲ್ಲೇ ನನ್ನನ್ನು ನಾನೇ ರಕ್ಷಣೆ ಮಾಡಿಕೊಳ್ಳುತ್ತೇನೆ.” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅನಿಮಲ್‌ ಸಿನಿಮಾ ನೋಡಿ ಪರ್ಸ್‌ ಬಿಟ್ಟು ಬಂದಳು; ವಾಪಸ್‌ ತರಲು ಹೋದಾಗ ಸೆಕ್ಯುರಿಟಿ ಗಾರ್ಡ್‌ಗೆ ಒದ್ದಳು!

ದಕ್ಷಿಣ ಭಾರತದ ಕೆಲವು ಸೂಪರ್‌ಸ್ಟಾರ್ ಸಿನಿಮಾಗಳಲ್ಲಿ ಖಳನಾಯಕನಾಗಿಯೂ ನಟಿಸಿದ್ದಾರೆ. ‘ಕಮಾಂಡೋ 2’ ಹಾಗೂ ‘ಕಮಾಂಡೋ 3’ ಅಂತಹ ಸೂಪರ್ ಸಿನಿಮಾಗಳನ್ನು ನೀಡಿದ ಬಳಿಕ ಇತ್ತೀಚೆಗಷ್ಟೇ ‘IB71’ ಎನ್ನುವ ಸಿನಿಮಾದಲ್ಲಿ ನಟಿಸಿದ್ದರು. ಸದ್ಯ ನಟನ ಬಾಲಿವುಡ್ ಸಿನಿಮಾಗಳಾದ ‘ಶೇರ್ ಸಿಂಗ್ ರಾಣಾ’ ಹಾಗೂ ‘ಕ್ರ್ಯಾಕ್’ ಚಿತ್ರೀಕರಣ ನಡೆಯುತ್ತಿದೆ.

Continue Reading

South Cinema

Prajwal Devaraj: ಕೋಣದ ಮೇಲೆ ಪ್ರಜ್ವಲ್ ಸವಾರಿ; ‘ಕರಾವಳಿ’ ಟೀಸರ್ ಔಟ್‌!

Prajwal Devaraj: ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.

VISTARANEWS.COM


on

Karavali prajwal devaraj
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ (Prajwal Devaraj) ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅ ಮಂಗಳೂರಿನಲ್ಲಿ ಅದ್ಧೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.

ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜತೆಗೆಯೇ ಕೋಣ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡುತ್ತಿದ್ದರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೋತ್ತಾಗುತ್ತಿದೆ. ಬ್ಯಾಗ್ರೌಂಡ್‌ನಲ್ಲಿ ಬರುವ ಯಕ್ಷಗಾನದ ಧ್ವನಿ ಟೀಸರ್‌ನ ತೂಕವನ್ನು ಹೆಚ್ಚಿಸುವ ಜೊತೆಗೆ ಕುತೂಹಲ ದುಪ್ಪಟ್ಟು ಮಾಡಿದೆ.

ಕರಾವಳಿ ಎಂದಮೇಲೆ ಆ ಭಾಗದ ಸಂಸ್ಕೃತಿ, ದೈವ, ಯಕ್ಷಗಾನ ಮುಖ್ಯವಾಗಿ ಕಂಬಳ ಸೇರಿದಂತೆ ಅಲ್ಲಿನ ಆಚಾರ ವಿಚಾರ ಎಲ್ಲವನ್ನು ಈ ಸಿನಿಮಾದಲ್ಲಿ ನೋಡುವ ಕಾತರದಲ್ಲಿದ್ದಾರೆ ಅಭಿಮಾನಿಗಳು. ಇನ್ನು ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಇದನ್ನೂ ಓದಿ; Prajwal Devaraj: ಸೋನಾ ಬೇಬಿ ಜತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್!

ಸದ್ಯ ರಿಲೀಸ್ ಆಗಿರುವ ಟೀಸರ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರ ಪಾತ್ರ ನೋಡಿದ್ರೆ ಇದುವರೆಗೂ ಅವರು ಮಾಡಿರುವ ಪಾತ್ರಗಳಲ್ಲಿಯೇ ಅತ್ಯಂತ ವಿಭಿನ್ನವಾಗಿದೆ. ಟೀಸರ್ ನೋಡ್ತಿದ್ರೆ ಪ್ರಜ್ವಲ್ 40ನೇ ಸಿನಿಮಾ ತುಂಬಾ ವಿಶೇಷವಾಗಿ ಮೂಡಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುದರಲ್ಲಿ ಎರಡು ಮಾತಿಲ್ಲ. ಇದೀಗ ಟೀಸರ್ ಮೂಲಕ ಸದ್ದು ಮಾಡುತ್ತಿರುವ ‘ಕರಾವಳಿ’ ಈ ತಿಂಗಳ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಶೂಟಿಂಗ್‌ಗೆ ಹೊರಡಲಿದೆ. ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

Continue Reading

ಸಿನಿಮಾ

Actress Leelavathi: ಅಜ್ಜಿಯ ಗುಣಗಳು ಮೊಮ್ಮಗನಲ್ಲೂ ಇವೆ; ವಿನೋದ್ ರಾಜ್ ಪತ್ನಿ ಅನು

Actress Leelavathi:  ತಾಯಿ ನೆನಪಿನಲಿಯೇ ಹಾಲು ತುಪ್ಪ ವಿಧಿ ವಿಧಾನಗಳನ್ನು ವಿನೋದ್‌ ರಾಜ್‌ ಅವರು ನೆರವೇರಿಸಿದ್ದಾರೆ, ಅಜ್ಜಿ ನೆನಪಲ್ಲಿ ಸಮಾಧಿಗೆ ಮೊಮ್ಮಗ ಯುವರಾಜ್‌ ಕೂಡ ಹಾಲು ತಪ್ಪ ಬಿಟ್ಟಾಗಿದೆ. ವಿನೋದ್ ರಾಜ್ ಪತ್ನಿ ಅನು ಅವರು ಲೀಲಾವತಿ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು.

VISTARANEWS.COM


on

actor vinod rajs wife anu opinion about Actress Leelavathi
Koo

ಬೆಂಗಳೂರು: ನಟಿ ಲೀಲಾವತಿಯವರು (Actress Leelavathi) ಬಾರದ ಲೋಕಕ್ಕೆ ಹೋಗಿ ಮೂರು ದಿನ ಕಳೆದಿದೆ. ತಾಯಿ ನೆನಪಿನಲಿಯೇ ಹಾಲು ತುಪ್ಪ ವಿಧಿ ವಿಧಾನಗಳನ್ನು ವಿನೋದ್‌ ರಾಜ್‌ ಅವರು ನೆರವೇರಿಸಿದ್ದಾರೆ, ಅಜ್ಜಿ ನೆನಪಲ್ಲಿ ಸಮಾಧಿಗೆ ಮೊಮ್ಮಗ ಯುವರಾಜ್‌ ಕೂಡ ಹಾಲು ತಪ್ಪ ಬಿಟ್ಟಾಗಿದೆ. ವಿನೋದ್ ರಾಜ್ ಪತ್ನಿ ಅನು ಅವರು ಲೀಲಾವತಿ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು.

ʻʻಲೀಲಾವತಿ ಅಮ್ಮ ದೊಡ್ಡ ಕಲಾವಿದೆ. ಜೀವನದಲ್ಲಿ ಬಹಳ ಶಿಸ್ತುಬದ್ಧವಾಗಿದ್ದರು. ಅವರ ಗುಣಗಳನ್ನು ನಾನು ನನ್ನ ಮಗನಿಗೂ ಹೇಳಿಕೊಟ್ಟಿದ್ದೇನೆ. ಅತ್ತೆಯವರಿಂದಲೇ ಅಷ್ಟು ಉತ್ತಮ ಗುಣನಡತೆ, ಶಿಸ್ತುಬದ್ಧ ಜೀವನ, ಸಾಧನೆ ಸಾಧ್ಯವಾಯಿತು.ಅವರನ್ನು ನೋಡಿ ಜೀವನದಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ. ಅವರಂಥ ಅತ್ತೆ ಪಡೆಯುವುದಕ್ಕೂ ನಾನು ಮತ್ತು ಅವರಂಥ ಅಜ್ಜಿ ಪಡೆಯುವುದಕ್ಕೂ ನನ್ನ ಮಗ ಪುಣ್ಯ ಮಾಡಿದ್ದೇವೆʼʼಎಂದರು.

ಲೀಲಾವತಿ ಅವರು ತೋಟಗಾರಿಕೆಯಲ್ಲಿಯೂ ಅತ್ಯಂತ ಶಿಸ್ತಬದ್ಧವಾಗಿರುತ್ತಿದ್ದರು ಎಂದೂ ಹೇಳಿದರು. ಅವರು ನಟಿಸಿದ ಚಿತ್ರಗಳೆಲ್ಲ ನನಗೆ ಇಷ್ಟ. ಅವರ ಸಾಮಾಜಿಕ ಕಾರ್ಯ ಮಾದರಿ. ಜೀವನವೇ ಬೇರೆಯವರಿಗೆ ಮೀಸಲಿಟ್ಟರು ಎಂದರು. ತಾಯಿ ಕಳೆದುಕೊಂಡಿರುವ ವಿನೋದ್‌ ರಾಜ್‌ ಅವರನ್ನು ಖುಷಿಯಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಲೀಲಾವತಿ ಅವರ ಚೆನ್ನೈಯಲ್ಲಿ ವಾಸಿಸುತ್ತಿರುವ ಸೊಸೆ ವಿನು ಹೇಳಿದರು.

ಇದನ್ನೂ ಓದಿ: Actress Leelavathi: ವಿನೋದ್​ ರಾಜ್​ ಪುತ್ರನಿಗೆ ಲೀಲಾವತಿ ಅಜ್ಜಿಯೇ ಕನ್ನಡ ಟೀಚರ್​!

ಲೀಲಾವತಿ ಅಜ್ಜಿಯೇ ಕನ್ನಡ ಟೀಚರ್​!

ʻʻಅಜ್ಜಿ ನನಗೆ ಕನ್ನಡ ಹೇಳಿಕೊಟ್ಟಿದ್ದು. ನನಗೆ ಅಷ್ಟಾಗಿ ಮಾತನಾಡಲು ಬರುವುದಿಲ್ಲ. ಅವರು ಇದ್ದಿದ್ದರೆ ಇನ್ನೂ ಕನ್ನಡ ಕಲಿತಾ ಇದ್ದೆ. ಜೀವನದಲ್ಲಿ ಹೇಗೆ ಇರಬೇಕು ಎಂಬುದು ಅಜ್ಜಿ ನನಗೆ ಕಲಿಸಿದ್ದಾರೆ. ತಂದೆ ಅವರು ಕಲಾವಿದರು. ನಾನು ಐಟಿ ಫೀಲ್ಡ್‌ನಲ್ಲಿ ಇದ್ದೇನೆ. ನನ್ನ ಫೇವರೇಟ್‌ ಹೀರೊ ಕೂಡ ನನ್ನ ತಂದೆನೆ’ ಎಂದರು. ಮೊಮ್ಮಗನಿಗೆ ಯುವರಾಜ್​ ಎಂದು ಲೀಲಾವತಿ ಅವರೇ ನಾಮಕರಣ ಮಾಡಿದ್ದರು. ಆ ಎಲ್ಲ ವಿಷಯಗಳನ್ನು ಯುವರಾಜ್​ ಮೆಲುಕು ಹಾಕಿದ್ದಾರೆ. ‘ಅಂದು ನಾನು ಬಂದು ಅಜ್ಜಿ ಎಂದು ಕರೆದಾಗ ಕಣ್ಣು ಬಿಟ್ಟಿದ್ದರು. ಯುವರಾಜಾ ಎಂದು ನನ್ನನ್ನು ಕರೆದಿದ್ದರು. ಅದು ನನಗೆ ತುಂಬ ಫೀಲ್​ ಆಗುತ್ತಿದೆ’ ಎಂದು ಯುವರಾಜ್‌ ಹೇಳಿದ್ದಾರೆ.

ವಿನೋದ್‌ ರಾಜ್‌ ಅವರ ಪುತ್ರ ಯುವರಾಜ್‌, ಚೆನ್ನೈನಲ್ಲಿಯೇ ಅಮ್ಮನ ಜತೆಗೆ ಬೆಳೆಯುತ್ತಿದ್ದಾನೆ. ಚೆನ್ನೈಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Continue Reading
Advertisement
South Africa vs India 1
ಕ್ರಿಕೆಟ್10 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ15 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ21 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ46 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ46 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ50 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್51 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ58 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ1 hour ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್2 hours ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌