Kantara Movie | ಕಾಂತಾರದ ವರಾಹ ರೂಪಂ ಹಾಡು ನವರಸಂ ಹಾಡಿನ ಕಾಪಿ? ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಮಲಯಾಳಂ ಸಂಗೀತ ತಂಡ - Vistara News

ಪ್ರಮುಖ ಸುದ್ದಿ

Kantara Movie | ಕಾಂತಾರದ ವರಾಹ ರೂಪಂ ಹಾಡು ನವರಸಂ ಹಾಡಿನ ಕಾಪಿ? ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಮಲಯಾಳಂ ಸಂಗೀತ ತಂಡ

ಮಲಯಾಳಂ ಹಾಡನ್ನು ನಕಲು ಮಾಡಲಾಗಿದೆ ಎನ್ನಲಾದ ಕಾಂತಾರ ಸಿನಿಮಾ ತಂಡಕ್ಕೆ ಈಗ ಕಾನೂನು ಸಮರದ ಅತಂಕ ಎದುರಾಗಿದೆ.

VISTARANEWS.COM


on

kantara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಿಷಭ್‌ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ (Kantara Movie) ಯಶಸ್ಸಿನ ಉತ್ತುಂಗದಲ್ಲಿರುವ ನಡುವೆಯೇ, ಆ ಸಿನಿಮಾದ ಹಾಡುಗಳ ಬಗ್ಗೆ ಅಪಸ್ವರಗಳು ಕೇಳಿ ಬಂದಿವೆ. ಚಲನ ಚಿತ್ರದಲ್ಲಿ ಬಳಸಲಾಗಿರುವ ಹಾಡುಗಳ ಟ್ಯೂನ್‌ಗಳು ಭಾರತದ ನಾನಾ ಭಾಷೆಯ ಹಾಡುಗಳಿಂದ ನಕಲು ಮಾಡಲಾಗಿದೆ ಎಂಬ ಆರೋಪಗಳಿಗೆ ಪುಷ್ಟಿ ಸಿಕ್ಕಿದೆ. ಕೇರಳದ ಸಂಗೀತ ನಿರ್ದೇಶನ ಮಾಡಿರುವ ತಂಡವೊಂದು ಈ ಬಗ್ಗೆ ಕಾನೂನು ಸಮರದ ಎಚ್ಚರಿಕೆ ಕೊಟ್ಟು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದೆ.

ಕಾಂತಾರ ಸಿನಿಮಾದ “ವರಾಹ ರೂಪಂ’ ಎಂಬ ಹಾಡು ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದುಕೊಂಡಿತ್ತು. ಹಾಡಿನ ಸಂಗೀತದ ಇಂಪು ಕನ್ನಡಿಗರ ಮನ ಮುಟ್ಟಿತ್ತು. ಆದರೆ ಈ ಹಾಡಿನ ಟ್ಯೂನ್‌ ನಮ್ಮದೆಂದು ಕೇರಳದ “ತೈಕುಡಂ ಬ್ರಿಜ್‌’ ಎಂಬ ಸಂಗೀತ ನಿರ್ದೇಶನ ಸಂಸ್ಥೆ ಆರೋಪಿಸಿದೆ.

ತೈಕುಡಂ ಬ್ರಿಗೇಡ್‌ ಐದು ವರ್ಷದ ಹಿಂದೆ ನವರಸಂ ಎಂಬ ಆಲ್ಬಮ್‌ ಸಾಂಗ್‌ ಬಿಡುಗಡೆ ಮಾಡಿತ್ತು. ಆ ಹಾಡಿನಲ್ಲಿರುವ ಟ್ಯೂನ್‌ ಮತ್ತು ವರಾಹ ರೂಪಂ ಹಾಡಿಗೆ ಸಾಮ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಈಗ ನವರಸಂ ಹಾಡಿನ ಕರ್ತೃಗಳಾದ ತೈಕುಡಮ್‌ ಬ್ರಿಜ್‌ ಕಾನೂನು ಹೋರಾಟದ ಸುಳಿವು ನೀಡಿದೆ.

“ಕಾಂತಾರ ಸಿನಿಮಾದೊಂದಿಗೆ ತೈಕುಡಂ ಬ್ರಿಜ್‌ ಯಾವುದೇ ಸಂಯೋಜನೆ ಮಾಡಿಕೊಂಡಿಲ್ಲ. ಅಂತೆಯೇ ನಮ್ಮ ಆಡಿಯೊ ನವರಸಂ ಮತ್ತು ವರಾಹ ರೂಪಂ ನಡುವೆ ಹೋಲಿಕೆಗಳಿವೆ. ಈ ಮೂಲಕ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿರುವುದು ಸ್ಪಷ್ಟ. ಹಾಡನ್ನು ಬಳಸಿಕೊಂಡಿರುವ ಸಿನಿಮಾ ತಂಡ ನಮ್ಮ ಹಕ್ಕುಗಳನ್ನು ಪಡೆದುಕೊಂಡಿಲ್ಲ. ತಮ್ಮದೇ ಸಂಗೀತವೆಂದು ಹೇಳಿಕೊಳ್ಳಲಾಗಿದೆ. ಹೀಗಾಗಿ ಕಾನೂನು ಕ್ರಮ ಬಯಸುತ್ತೇವೆ,” ಎಂದು ತೈಕುಡಂ ಬ್ರಿಜ್‌ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದೆ. ಈ ಪೋಸ್ಟ್‌ ಅನ್ನು ಹೊಂಬಾಳೆ ಫಿಲ್ಸ್ಮ್‌, ಅಜನೀಶ್‌ ಲೋಕನಾಥ್‌ ಹಾಗೂ ರಿಷಭ್‌ ಶೆಟ್ಟಿಗೆ ಟ್ಯಾಗ್ ಮಾಡಲಾಗಿದೆ.

ಅಚ್ಚರಿಯೆಂದರೆ ಸೂಪರ್ ಹಿಟ್‌ ಆಗಿರುವ ಹಾಡನ್ನು ಹೊಂಬಾಳೆ ಫೀಲ್ಸ್ಮ್‌ ಚಾನೆಲ್‌ನಿಂದ ಬಿಡುಗಡೆ ಮಾಡಿರಲಿಲ್ಲ. ಸಂಗೀತ ನಿರ್ದಶಕ ಅಜನೀಶ್‌ ಲೋಕನಾಥ್ ಅವರ ಚಾನೆಲ್‌ನಿಂದ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಹಾಡು ನಕಲಾಗಿದೆ ಎಂಬುದರ ಬಗ್ಗೆ ಈ ಹಿಂದೆಯೂ ಅಜನೀಶ್ ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಆ ವೇಳೆ ಅವರು ಕಾಪಿ ಅಲ್ಲ, ಪ್ರೇರಣೆ ಎಂದಿದ್ದರು. ಅಲ್ಲದೆ, ಯಾರೂ ಈ ಬಗ್ಗೆ ಚಕಾರವೇ ಎತ್ತಿಲ್ಲ ಎಂದಿದ್ದರು. ಇದೀಗ ಸಂಗೀತ ತಂಡವೇ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಹೊಸ ತಿರುವು ಲಭಿಸಿದೆ.

ಇದನ್ನೂ ಓದಿ | Kantara Movie | ಕಾಂತಾರ ಸಿನಿಮಾ ನೋಡಿ ಥ್ರಿಲ್‌ ಆದ ಪೂಜಾ ಹೆಗ್ಡೆ, ಆಕೆ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸೋಮವಾರ (ಏಪ್ರಿಲ್‌ 22) ಪತ್ನಿಯು ಅಪಘಾತದಲ್ಲಿ ತೀರಿಕೊಂಡಿದ್ದಳು. ಇದರಿಂದ ವ್ಯಕ್ತಿಯು ತೀವ್ರ ಆಘಾತಕ್ಕೊಳಗಾಗಿದ್ದ. ಪತ್ನಿಯೇ ಇಲ್ಲದ ಜೀವನ ಏಕೆ ಎಂದು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Break Up
Koo

ಲಖನೌ: ಮದುವೆಯಾದ ಎರಡು-ಮೂರು ತಿಂಗಳಿಗೇ ವಿಚ್ಛೇದನ (Divorce) ಪಡೆಯುವವರಿದ್ದಾರೆ. ಪ್ರೀತಿಸಿ ಮದುವೆಯಾದವರೇ ಅನುಸರಿಸಿಕೊಂಡು ಹೋಗದೆ, ದಾಂಪತ್ಯ ಮುರಿದುಕೊಳ್ಳುತ್ತಿದ್ದಾರೆ. ಬದಲಾದ ಕಾಲಘಟ್ಟ, ಯೋಚನೆ, ಸಂಪ್ರದಾಯ, ಅಹಂಕಾರ ಇದಕ್ಕೆ ಕಾರಣಗಳು ಇರಬಹುದು. ಆದರೆ, ಉತ್ತರ ಪ್ರದೇಶದಲ್ಲೊಬ್ಬ (Uttar Pradesh) ವ್ಯಕ್ತಿಯು, ಅಪಘಾತದಲ್ಲಿ ಪತ್ನಿ ತೀರಿಕೊಂಡ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್‌ನೋಟ್‌ ಬರೆದಿರುವ ಆತ, “ನಾವು ಇದ್ದರೂ ಜತೆಗೇ, ಸತ್ತರೂ ಜತೆಗೇ” ಎಂಬುದಾಗಿ ಬರೆದಿದ್ದಾರೆ.

ಆರು ತಿಂಗಳ ಹಿಂದೆ 36 ವರ್ಷದ ಯೋಗೇಶ್‌ ಕುಮಾರ್‌ ಹಾಗೂ 28 ವರ್ಷದ ಮಣಿಕರ್ಣಿಕಾ ಕುಮಾರಿ ಮದುವೆಯಾಗಿದ್ದರು. ಇಬ್ಬರೂ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನೆಲೆಸಿದ್ದರು. ಮಣಿಕರ್ಣಿಕಾ ಕುಮಾರಿ ನರ್ಸ್‌ ಆಗಿದ್ದರು. ಯೋಗೇಶ್‌ ಕುಮಾರ್‌ ಟೀಚರ್‌ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರ ದಾಂಪತ್ಯವೂ ಸುಮಧುರವಾಗಿತ್ತು. ಆದರೆ, ಕಳೆದ ಸೋಮವಾರ (ಏಪ್ರಿಲ್‌ 22) ಮಣಿಕರ್ಣಿಕಾ ಕುಮಾರಿ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನವು ಮಣಿಕರ್ಣಿಕಾ ಕುಮಾರಿ ಅವರ ಸ್ಕೂಟಿಗೆ ಡಿಕ್ಕಿಯಾಗಿತ್ತು.

ಲಖನೌ-ಹರ್ದೋಯಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಣಿಕರ್ಣಿಕಾ ಕುಮಾರಿ ಮೃತಪಟ್ಟಿದ್ದರು. “ಸುರ್ಸಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮಣಿಕರ್ಣಿಕಾ ಕುಮಾರಿ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಮೃತಪಟ್ಟಿದ್ದರು. ಮಣಿಕರ್ಣಿಕಾ ಅವರ ಕಚೇರಿಯ ಗುರುತಿನ ಚೀಟಿ ಆಧಾರದ ಮೇಲೆ ಅವರ ಪತಿಗೆ ಕರೆ ಮಾಡಿ ವಿಷಯ ತಿಳಿಸಲಾಯಿತು” ಎಂದು ಸುರ್ಸಾ ಎಸ್‌ಎಚ್‌ಒ ಇಂದ್ರೇಶ್‌ ಕುಮಾರ್‌ ಯಾದವ್‌ ಮಾಹಿತಿ ನೀಡಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ?

ಪತ್ನಿಯ ಸಾವಿನಿಂದ ನೊಂದ ಪತಿಯು ಮನೆಗೆ ಬಂದವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಳಿ ಡೆತ್‌ನೋಟ್‌ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂಬುದಾಗಿ ಬರೆದಿದ್ದಾರೆ. ಪತ್ನಿಯ ವಸ್ತುಗಳನ್ನು ಮನೆಗೆ ತೆಗೆದುಕೊಂಡು ಹೋದ ಯೋಗೇಶ್‌ ಕುಮಾರ್‌ ಬಾಗಿಲು ಹಾಕಿಕೊಂಡಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದ ಕಾರಣ ಪಕ್ಕದ ಮನೆಯವರು ಹೋಗಿ ನೋಡಿದಾಗ ಯೋಗೇಶ್‌ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Continue Reading

ಕ್ರೀಡೆ

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

IPL 2024: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ 250ನೇ ಐಪಿಎಲ್​ ಪಂದ್ಯವನ್ನಾಡಿದ ದ್ವಿತೀಯ ತಂಡ ಎಂಬ ದಾಖಲೆ ಬರೆಯಲಿದೆ. ಮುಂಬೈ ಇಂಡಿಯನ್ಸ್​ ಮೊದಲ ತಂಡ

VISTARANEWS.COM


on

IPL 2024
Koo

ಹೈದರಾಬಾದ್​: ಇಂದು(ಗುರುವಾರ) ನಡೆಯುವ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bangalore) ಮತ್ತು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad ) ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಆರ್​ಸಿಬಿಗೆ ಸ್ಮರಣೀಯವಾಗಿದೆ. ಇದು ಆರ್​ಸಿಗೆ(RCB) 250ನೇ ಐಪಿಎಲ್(RCB 250th IPL match)​ ಪಂದ್ಯವಾಗಿದೆ. ಈ ಸಾಧನೆ ಮಾಡಿದ ದ್ವಿತೀಯ ತಂಡ ಎಂಬ ಹೆಗ್ಗಳಿಕೆ ಆರ್​ಸಿಬಿ ಪಾತ್ರವಾಗಲಿದೆ.

“ಇಂದು ಆರ್​ಸಿಬಿಗೆ ಪ್ರಮುಖ ದಿನ. ನಮ್ಮ 250ನೇ ನೇ ಐಪಿಎಲ್​ ಪಂದ್ಯ! ಇದನ್ನು ಸ್ಮರಣೀಯವಾಗಿಸಲು ನಿಮ್ಮೆಲ್ಲರ ಹಾರೈಕೆಗಳು ಮತ್ತು ಬೆಂಬಲವನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಆರ್​ಸಿಬಿ ಫ್ರಾಂಚೈಸಿ ಇದುವರೆ ಆರ್​ಸಿಬಿ ತಂಡದ ಪರ ಆಡಿದ ಕೆಲ ಸ್ಟಾರ್​ ಆಟಗಾರರ ಫೋಟೊ ಕೊಲಾಜ್​ ಮಾಡಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್​ ಮಾತ್ರ 250 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಅಲ್ಲದೆ ಅತ್ಯಧಿಕ ಐಪಿಎಲ್​ ಪಂದ್ಯವನ್ನಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಯನ್ನು ಕೂಡ ಹೊಂದಿದೆ. ಮುಂಬೈ ಇದುವರೆಗೆ 255* ಐಪಿಎಲ್​ ಪಂದ್ಯಗಳನ್ನಾಡಿದೆ. ಆರ್​ಸಿಬಿ 250 ಪಂದ್ಯಗಳನ್ನಾಡಿದ 2ನೇ ತಂಡ ಎನಿಸಿಕೊಳ್ಳಲಿದೆ. ದುರಾದೃಷ್ಟವೆಂದರೆ ಇಷ್ಟು ಪಂದ್ಯಗಳನ್ನಾಡಿದರೂ ಕೂಡ ತಂಡ ಒಮ್ಮೆಯೂ ಕಪ್​ ಗೆಲ್ಲುವಲ್ಲಿ ಯಶಸ್ವಿಯಾಗಿಲ್ಲ. ಪ್ರತಿ ಐಪಿಎಲ್‌(IPL 2024) ಆರಂಭದ ಸಂದರ್ಭದಲ್ಲಿಯೂ ಆರ್‌ಸಿಬಿ ಒಂದು ಕ್ರೇಜ್‌ ಹುಟ್ಟಿಸುತ್ತದೆ. ದುರಾದೃಷ್ಟವಶಾತ್‌ ಈ ಕ್ರೇಜ್‌ ಬಹುಕಾಲ ಉಳಿಯುವುದಿಲ್ಲ. ಈ ಬಾರಿಯೂ ಅದೇ ರಾಗ ಅದೇ ಹಾಡು. ಅದರಲ್ಲಿಯೂ ಈ ಬಾರಿ ಹೊಸ ಅಧ್ಯಾಯ ಎಂದು ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಆದರೆ ಇದೀಗ ಕ್ಷಮಿಸಿ ನಮ್ಮದು ಮುದಿದು ಹೋದ ಅಧ್ಯಾಯ ಎನ್ನುವ ಹಂತಕ್ಕೆ ತಲುಪಿದೆ.

ಇದನ್ನೂ ಓದಿ IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

ಅತಿ ಹೆಚ್ಚು ಐಪಿಎಲ್​ ಪಂದ್ಯವನ್ನಾಡಿದ ಟಾಪ್​ 5 ತಂಡಗಳು


ಮುಂಬೈ ಇಂಡಿಯನ್ಸ್​-255* ಪಂದ್ಯ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು-249* ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್​-247*ಪಂದ್ಯ

ಕೋಲ್ಕತ್ತಾ ನೈಟ್​ ರೈಡರ್ಸ್​-244 ಪಂದ್ಯ

ಪಂಜಾಬ್​ ಕಿಂಗ್ಸ್​-240* ಪಂದ್ಯ

ಆರ್​ಸಿಬಿ(RCB) ಈ ಆವೃತ್ತಿಯಲ್ಲಿ ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 7 ಸೋಲು ಕಂಡು ಪ್ಲೇ ಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಇಂದು ನಡೆಯವ ಪಂದ್ಯ ಕೇವಲ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಇನ್ನುಳಿದ ಎಲ್ಲ ಪಂದ್ಯಗಳನ್ನು ಗೆದ್ದರೂ ಕೂಡ ಪ್ಲೇ ಆಫ್​ಗೇರಲು ಸಾಧ್ಯವಿಲ್ಲ. ಪವಾಡ ಸಂಭಿಸಿದರೆ ಮಾತ್ರ ಸಾಧ್ಯ.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್,ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್.

ಸನ್​ರೈಸರ್ಸ್​ ಹೈದರಾಬಾದ್​: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್​, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ , ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.

Continue Reading

ದೇಶ

ಪಾಕಿಸ್ತಾನದ ಯುವತಿಯ ಪ್ರಾಣ ಉಳಿಸಿತು ಭಾರತದ ಹೃದಯ; ‘ಹಾರ್ಟ್‌’ ಟಚಿಂಗ್ ಸ್ಟೋರಿ ಇದು!

ಪಾಕಿಸ್ತಾನದ ಆಯೇಷಾ ರೆಶಾನ್‌ ಅವರು ಕಳೆದ ಒಂದು ದಶಕದಿಂದ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದರು. ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಕೆಯ ಸರ್ಜರಿ ಕೂಡ ವಿಫಲವಾಯಿತು. ಆದರೆ, ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ನುರಿತ ವೈದ್ಯರು ಆಯೇಷಾಗೆ ಹೃದಯದ ಕಸಿ ಮಾಡುವ ಮೂಲಕ, ಬೇರೊಬ್ಬರ ಹೃದಯವನ್ನು ಇವರಿಗೆ ಅಳವಡಿಸುವ ಮೂಲಕ ಆಕೆಯ ಬಾಳಿಗೆ ಬೆಳಕಾಗಿದ್ದಾರೆ.

VISTARANEWS.COM


on

Pakistan Teen
Koo

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ (India Pakistan) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಇದೆ. ಭಾರತದ ಮೇಲೆ ಪಾಕ್‌ ಕೃಪಾಪೋಷಿತ ಉಗ್ರರು ದಾಳಿ ಮಾಡಿದಾಗ, ಭಾರತ-ಪಾಕಿಸ್ತಾನ ಮಧ್ಯೆ ಕ್ರಿಕೆಟ್‌ ಪಂದ್ಯ ನಡೆದಾಗ ಭಾರತೀಯರು ಪಾಕಿಸ್ತಾನವನ್ನು ಬಗ್ಗುಬಡಿಯಲಿ ಎಂದು ಪ್ರಾರ್ಥಿಸುತ್ತೇವೆ. ಆದರೆ, ಇಷ್ಟೆಲ್ಲ ಬಿಕ್ಕಟ್ಟಿನ ಮಧ್ಯೆಯೂ ಭಾರತ ಹಾಗೂ ಪಾಕಿಸ್ತಾನ ನಾಗರಿಕರ ಮಧ್ಯೆ ಸಹೋದರತ್ವದ ಭಾವನೆ ಇದೆ. ಭಾರತದಲ್ಲಿ (India) ಜನಿಸಿ, ದೇಶ ಇಬ್ಭಾಗವಾದಾಗ ಪಾಕ್‌ಗೆ ತೆರಳಿದವರು ಈಗಲೂ ಭಾರತದ ನಂಟನ್ನು ನೆನಪಿಸಿಕೊಳ್ಳುತ್ತಾರೆ. ಈ ನಂಟಿಗೆ ನಿದರ್ಶನ ಎಂಬಂತೆ, ಭಾರತದ ʼಹೃದಯʼವೊಂದು (Indian Heart) ಪಾಕಿಸ್ತಾನದ ಯುವತಿಯ (Pakistan Teen) ಪ್ರಾಣವನ್ನು ಉಳಿಸಿದೆ.

ಹೌದು, ಹೃದಯದ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಆಯೇಷಾ ರೆಶಾನ್‌ (19) ಎಂಬ ಯುವತಿಗೆ ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ವೈದ್ಯರು ಉಚಿತವಾಗಿ ಹೃದಯದ ಕಸಿ ಮಾಡುವ ಮೂಲಕ ನೆರೆ ರಾಷ್ಟ್ರದ ಯುವತಿಯ ಬಾಳಿಗೆ ಬೆಳಕಾಗಿದ್ದಾರೆ. ಭಾರತೀಯರೊಬ್ಬರ ಹೃದಯವನ್ನು ಪಾಕಿಸ್ತಾನದ ಯುವತಿಗೆ ಕಸಿ ಮಾಡುವ ಮೂಲಕ, ಆಕೆ ಮತ್ತೆ ಬದುಕು ಕಟ್ಟಿಕೊಳ್ಳಲು ಅಪೂರ್ವ ಅವಕಾಶ ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಇದಕ್ಕಾಗಿ ಆಯೇಷಾ ರೆಶಾನ್‌ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯೇಷಾ ರೆಶಾನ್‌ಗೆ ಏನಾಗಿತ್ತು?

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಆದರೆ, ಹಾರ್ಟ್‌ ಪಂಪ್‌ ಅಳವಡಿಸಿದ ಬಳಿಕ ಶಸ್ತ್ರಚಿಕಿತ್ಸೆಯು ವಿಫಲವಾಗಿತ್ತು. ಇದರಿಂದಾಗಿ ಆಯೇಷಾ ರೆಶಾನ್‌ ಅವರ ಪ್ರಾಣಕ್ಕೆ ಕುತ್ತು ಬಂದಿತ್ತು. ಆಗ, ಆಸ್ಪತ್ರೆಯ ಸರ್ಜನ್‌ಗಳು ದಾನಿಯೊಬ್ಬರ ಹೃದಯವನ್ನು ಆಯೇಷಾ ರೆಷಾನ್‌ ಅವರಿಗೆ ಅಳವಡಿಸುವ ಮೂಲಕ ಆಕೆಯ ಪ್ರಾಣ ಉಳಿಸಿದ್ದಾರೆ.

ಹೃದಯದ ಕಸಿ ಮಾಡಲು ಸುಮಾರು 35 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಚೆನ್ನೈನ ಐಶ್ವರ್ಯನ್‌ ಟ್ರಸ್ಟ್‌ ಹಾಗೂ ಆಸ್ಪತ್ರೆ ವೈದ್ಯರೇ ಖರ್ಚು ಭರಿಸಿ, ಉಚಿತವಾಗಿ ಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದೆಹಲಿ ಮೂಲದ ದಾನಿಯಿಂದ ಹೃದಯ ಪಡೆದ ವೈದ್ಯರು, ಆಯೇಷಾಗೆ ಅಳವಡಿಸಿದ್ದಾರೆ. “ಹೃದಯ ಕಸಿ ಬಳಿಕ ನಾನೀಗ ಆರೋಗ್ಯದಿಂದ ಇದ್ದೇನೆ. ಚೆನ್ನೈ ವೈದ್ಯರಿಂದಾಗಿ ನಾನು ಉಸಿರಾಡುತ್ತಿದ್ದೇನೆ. ನನ್ನ ಜೀವ ಉಳಿಸಿದ ವೈದ್ಯರಿಗೆ ಕೃತಜ್ಞತೆಗಳು. ಪಾಕಿಸ್ತಾನಕ್ಕೆ ತೆರಳಿ ನಾನು ಪದವಿ ಪಡೆಯುತ್ತೇನೆ” ಎಂಬುದಾಗಿ ಆಯೇಷಾ ಹೇಳಿದ್ದಾರೆ.

ಇದನ್ನೂ ಓದಿ: Humanity : ಗಡಿ ಮೀರಿದ ಮಾನವೀಯತೆ; ನಿರಾಶ್ರಿತರಿಗೆ ಹಣ ಹಂಚಿದ ಆಫ್ಘನ್ ಆಟಗಾರ ಗುರ್ಬಜ್​

Continue Reading

ದೇಶ

Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

Rahul Gandhi: ಲೋಕಸಭೆ ಚುನಾವಣೆಯ ಹೊತ್ತಿನಲ್ಲಿಯೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ರಾಮಮಂದಿರಕ್ಕೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಅಮೇಥಿ ಹಾಗೂ ರಾಯ್‌ಬರೇಲಿಗೆ ಭೇಟಿ ನೀಡುವ ಮುನ್ನ ಇಬ್ಬರೂ ರಾಮಲಲ್ಲಾನ ಆಶೀರ್ವಾದ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರ (Ram Mandir) ಲೋಕಾರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಬಹಿಷ್ಕರಿಸಿತ್ತು. ಆದರೆ, ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲಿಯೇ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ (Rahul Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಶೀಘ್ರದಲ್ಲೇ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ಆಶೀರ್ವಾದ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಕ್ಷೇತ್ರವಾಗಿದ್ದ ರಾಯ್‌ಬರೇಲಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಎರಡೂ ಕ್ಷೇತ್ರಗಳಿಗೆ ಸಹೋದರ-ಸಹೋದರಿ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು ಅವರು ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

Ayodhya Ram mandir

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವಿದೆ ಎಂದು ತಿಳಿದುಬಂದಿದೆ.

ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್‌ 26ರಂದು ಮತದಾನ ನಡೆಯಲಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್‌ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಹುಲ್‌ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Continue Reading
Advertisement
IPL 2024
ಕ್ರೀಡೆ10 mins ago

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

Break Up
ದೇಶ18 mins ago

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

IPL 2024
ಕ್ರೀಡೆ47 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

Pakistan Teen
ದೇಶ47 mins ago

ಪಾಕಿಸ್ತಾನದ ಯುವತಿಯ ಪ್ರಾಣ ಉಳಿಸಿತು ಭಾರತದ ಹೃದಯ; ‘ಹಾರ್ಟ್‌’ ಟಚಿಂಗ್ ಸ್ಟೋರಿ ಇದು!

Comedy Khiladigalu Premier League From 27th April On Zee Kannada
ಕಿರುತೆರೆ47 mins ago

Comedy Khiladigalu Premier League: ಹೇಗಿರಲಿದೆ ಹೊಸ ಶೋ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼ?

Pushpa The Rule first single on May 1
ಟಾಲಿವುಡ್1 hour ago

Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

actress amulya father in law election officers ride
ಕ್ರೈಂ1 hour ago

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

Rahul Gandhi
ದೇಶ1 hour ago

Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

IPL 2024
ಕ್ರೀಡೆ1 hour ago

IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

Amitabh Bachchan, AR Rahman honoured with Deenanath Mangeshkar award
ಸಿನಿಮಾ2 hours ago

Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌