Aamir Khan: ಆಮೀರ್ ಖಾನ್ ಹೊಸ ಹೇರ್‌ಸ್ಟೈಲ್‌, ವಿಭಿನ್ನ ಲುಕ್‌ ಕಂಡು ಫ್ಯಾನ್ಸ್‌ ಫಿದಾ! - Vistara News

ಬಾಲಿವುಡ್

Aamir Khan: ಆಮೀರ್ ಖಾನ್ ಹೊಸ ಹೇರ್‌ಸ್ಟೈಲ್‌, ವಿಭಿನ್ನ ಲುಕ್‌ ಕಂಡು ಫ್ಯಾನ್ಸ್‌ ಫಿದಾ!

Aamir Khan: ಆಮೀರ್‌ ಬಿಳಿ ಮತ್ತು ನೀಲಿ ಬಣ್ಣದ ಕುರ್ತಾ ಮತ್ತು ಕಡು ನೀಲಿ ಬಣ್ಣದ ಪೈಜಾಮಾವನ್ನು ಧರಿಸಿದ್ದರು. ಹೊಸ ಹೇರ್‌ ಸ್ಟೈಲ್‌ನೊಂದಿಗೆ ಕನ್ನಡಕವನ್ನೂ ಹಾಕಿಕೊಂಡಿದ್ದರು. ಒಟ್ಟಾರೆ ಆಮೀರ್‌ ಅವರ ಡಿಫರೆಂಟ್‌ ಲುಕ್‌ಗೆ ಅವರ ಫ್ಯಾನ್ಸ್‌ ಮೆಚ್ಚಿದ್ದಾರೆ.

VISTARANEWS.COM


on

Aamir Khan sports new hairdo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅವಿನಾಶ್ ಗೋವಾರಿಕರ್ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ನಟ ಆಮೀರ್ ಖಾನ್ (Aamir Khan) ಮುಂಬೈಗೆ ಬಂದಿದ್ದರು. ಆಮೀರ್‌ ಅವರ ಹೊಸ ಅವತಾರ ಕಂಡು ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ನಟ ವಿಭಿನ್ನ ಲುಕ್‌ನಲ್ಲಿ ಕಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೊ ವೈರಲ್‌ (Aamir Khan sports new hairdo) ಆಗಿದ್ದು, ನಟ ಕಾರಿನಿಂದ ಇಳಿದು ರೆಸ್ಟೊರೆಂಟ್‌ ಹೊರಗೆ ನಿಂತಿದ್ದ ಅಭಿಮಾನಿಗಳಿಗೆ ಆಮೀರ್ ಶೇಕ್‌ಹ್ಯಾಂಡ್‌ ಕೊಟ್ಟಿದ್ದಾರೆ. ಆಮೀರ್‌ ಬಿಳಿ ಮತ್ತು ನೀಲಿ ಬಣ್ಣದ ಕುರ್ತಾ ಮತ್ತು ಕಡು ನೀಲಿ ಬಣ್ಣದ ಪೈಜಾಮಾವನ್ನು ಧರಿಸಿದ್ದರು. ಹೊಸ ಹೇರ್‌ ಸ್ಟೈಲ್‌ನೊಂದಿಗೆ ಕನ್ನಡಕವನ್ನೂ ಹಾಕಿಕೊಂಡಿದ್ದರು. ಒಟ್ಟಾರೆ ಆಮೀರ್‌ ಅವರ ಡಿಫರೆಂಟ್‌ ಲುಕ್‌ಗೆ ಅವರ ಫ್ಯಾನ್ಸ್‌ ಮೆಚ್ಚಿದ್ದಾರೆ.

ಸತತ ಸೋಲಿನಿಂದ ಕಂಗೆಟ್ಟಿರುವ ಆಮೀರ್‌ ಖಾನ್‌ (Aamir Khan) ಕೆಲವು ಸಮಯಗಳಿಂದ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಳೆದ ವರ್ಷ ತೆರೆಕಂಡ ಆಮೀರ್‌ ಖಾನ್‌ ಅಭಿನಯ್‌ ಬಹು ನಿರೀಕ್ಷಿತ ಚಿತ್ರ ʼಲಾಲ್‌ ಸಿಂಗ್‌ ಛಡ್ಡಾʼ ಬಾಕ್ಸ್‌ ಆಫೀಸ್‌ನಲ್ಲಿ ಸೋತು ಹೋಗಿತ್ತು. ಬಳಿಕ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾದಾಗ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದರು. ಅದ್ವೈತ್‌ ಚಂದನ್‌ ನಿರ್ದೇಶನದ ಈ ಚಿತ್ರದಲ್ಲಿ ನಾಯಕಿಯಾಗಿ ಕರೀನಾ ಕಪೂರ್‌ ನಟಿಸಿದ್ದರು. ಹಾಲಿವುಡ್‌ನ ಹಿಟ್‌ ಚಿತ್ರ ಟಾಮ್‌ ಹಾಂಕ್ಸ್‌ನ ಫಾರೆಸ್ಟ್‌ ಗಂಪ್‌ನ ರಿಮೇಕ್‌ ಇದಾಗಿತ್ತು. ಅದರ ಮೊದಲು 2018ರಲ್ಲಿ ತೆರೆಕಂಡ ʼಥಗ್ಸ್‌ ಆಫ್‌ ಹಿಂದೂಸ್ಥಾನ್‌ʼ ಸಿನಿಮಾವೂ ಫ್ಲಾಪ್‌ ಪಟ್ಟಿಗೆ ಸೇರಿತ್ತು. ವಿಜಯ್‌ ಕೃಷ್ಣ ಆಚಾರ್ಯ ನಿರ್ದೇಶನದ ಈ ಚಿತ್ರದಲ್ಲಿ ಘಟಾನುಘಟಿಗಳಾದ ಅಮಿತಾಭ್‌ ಬಚ್ಚನ್‌, ಕತ್ರೀನಾ ಕೈಫ್‌ ಮತ್ತಿತರರು ನಟಿಸಿದ್ದರೂ ಪ್ರಯೋಜನವಾಗಿರಲಿಲ್ಲ.

ಇದನ್ನೂ ಓದಿ: Aamir Khan: ಕಂಬ್ಯಾಕ್‌ ಪ್ರಕಟಿಸಿದ ಆಮೀರ್‌ ಖಾನ್‌; ಆದರೆ ನಾಯಕನಾಗಿ ಅಲ್ಲ

ವೈರಲ್‌ ವಿಡಿಯೊ

ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ಆಮೀರ್‌ ತಮ್ಮ ಮುಂದಿನ ಚಿತ್ರದ ಬಿಡುಗಡೆಗಾಗಿ 2024ರ ಕ್ರಿಸ್ಮಸ್ ದಿನಾಂಕವನ್ನು ಲಾಕ್ ಮಾಡಿದ್ದಾರೆ. ಅವರ ಮುಂದಿನ ಚಿತ್ರ ಅಕ್ಷಯ್ ಕುಮಾರ್ ಮತ್ತು ಪರೇಶ್ ರಾವಲ್ ಅವರ ʻವೆಲ್ಕಮ್ ಟು ದಿ ಜಂಗಲ್ʼ ಜತೆ ಕ್ಲ್ಯಾಶ್‌ ಆಗಲಿದೆʼʼಎಂದಿದ್ದಾರೆ

ಆಮೀರ್‌ ಹೊಸ ಚಿತ್ರದೊಂದಿಗೆ ಮರಳಿ ಬಂದಿದ್ದಾರೆ. ಆದರೆ ಈ ಬಾರಿ ಅವರು ನಾಯಕನಾಗಿ ಅಲ್ಲ ಬದಲಾಗಿ ನಿರ್ಮಾಪಕನಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜ್‌ ಕುಮಾರ್‌ ಸಂತೋಷಿ ನಿರ್ದೇಶನದ ಮುಂದಿನ ಚಿತ್ರವನ್ನು ಆಮೀರ್‌ ಖಾನ್‌ ನಿರ್ಮಿಸಲಿದ್ದು, ಚಿತ್ರಕ್ಕೆ ಲಾಹೋರ್‌ 1947 (Lahore 1947) ಟೈಟಲ್‌ ಇಡಲಾಗಿದೆ. ಗದರ್‌ 2 (Gadar 2) ಮೂಲಕ ತಮ್ಮ ಖದರ್‌ ತೋರಿದ ಸನ್ನಿ ಡಿಯೋಲ್‌ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಾಕಿರುವ ಆಮೀರ್‌ ಖಾನ್‌ ಈ ಬಗ್ಗೆ ಮಾಹಿತಿ ನೀಡಿದ್ದರು. ʼʼನಾನು ಮತ್ತು ಆಮೀರ್‌ ಖಾನ್‌ ಪ್ರೊಡಕ್ಷನ್ಸ್‌ (AKP) ಟೀಮ್‌ನ ಎಲ್ಲರೂ ನಮ್ಮ ಮುಂದಿನ ಪ್ರಾಜೆಕ್ಟ್‌ ಘೋಷಿಸಲು ಉತ್ಸುಕರಾಗಿದ್ದೇವೆ. ಸನ್ನಿ ಡಿಯೋಲ್‌ ನಾಯಕನಾಗಿ ನಟಿಸುತ್ತಿರುವ, ನನ್ನ ನೆಚ್ಚಿನ ನಿರ್ದೇಶಕ ರಾಜ್‌ ಕುಮಾರ್‌ ಸಂತೋಷಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಚಿತ್ರಕ್ಕೆ ಲಾಹೋರ್‌ 1947 ಶೀರ್ಷಿಕೆ ಇಟ್ಟಿದ್ದೇವೆ. ಪ್ರತಿಭಾವಂತರಾದ ಸನ್ನಿ ಡಿಯೋಲ್‌ ಮತ್ತು ರಾಜ್‌ ಕುಮಾರ್‌ ಸಂತೋಷಿ ಒಂದಾಗುತ್ತಿರುವುದು ನೋಡಲು ಖುಷಿ ಎನಿಸುತ್ತಿದೆ. ಈ ನಮ್ಮ ಪಯಣಕ್ಕೆ ನಿಮ್ಮ ಆಶೀರ್ವಾದ ಬೇಕುʼʼ ಎಂದು ಬರೆದುಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

Cannes 2024: ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

VISTARANEWS.COM


on

Cannes 2024 Sonam Kapoor dubs this outfit the best at Cannes this year
Koo

ಬೆಂಗಳೂರು: ನಟಿ ಸೋನಮ್ ಕಪೂರ್ (Sonam Kapoor) ದೆಹಲಿ ಮೂಲದ ಫ್ಯಾಷನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ಅವರ (Nancy Tyagi) ಫ್ಯಾಷನ್‌ಗೆ ಫಿದಾ ಆಗಿದ್ದಾರೆ. ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ನ್ಯಾನ್ಸಿ ತ್ಯಾಗಿ ಭಾಗಿಯಾಗಿದ್ದರು. ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ಫ್ಯಾಶನ್ ಸ್ಟೇಟ್‌ಮೆಂಟ್‌ಗಳಿಗೆ ಹೆಸರುವಾಸಿಯಾಗಿರುವ ಸೋನಮ್ ಅವರು ನ್ಯಾನ್ಸಿ ತ್ಯಾಗಿ ಅವರ ಪೋಸ್ಟ್‌ವನ್ನು ರಿ ಪೋಸ್ಟ್‌ ಮಾಡಿ ಹೊಗಳಿದ್ದಾರೆ.

ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಅವರ ಇತ್ತೀಚಿನ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ ಲುಕ್‌ಗಿಂತ ನ್ಯಾನ್ಸಿ ತ್ಯಾಗಿ ಅವರ ಸ್ಟೈಲ್‌ಗೆ ಫಿದಾ ಆಗಿದ್ದಾರೆ ಸೆಲೆಬ್ರಿಟಿಗಳು. “ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ಅತ್ಯುತ್ತಮ ಉಡುಗೆ” ಎಂದು ಹೇಳುವ ಮೂಲಕ ನ್ಯಾನ್ಸಿಯನ್ನು ಹೊಗಳಿದರು ಸೋನಮ್‌. ಮೊದಲ ದಿನ ನ್ಯಾನ್ಸಿ ತ್ಯಾಗಿ 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ. ಇದೀಗ ಎರಡನೇ ದಿನ ಸೀರೆಯುಟ್ಟಿದ್ದಾರೆ.

“ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ನನ್ನ ಎರಡನೇ ಉಡುಗೆಯನ್ನು ನಾನು ವಿಶೇಷ ಸಮಾರಂಭದಲ್ಲಿ ಧರಿಸಿದ್ದೇನೆ, ಇದು ಸಂಪೂರ್ಣವಾಗಿ ನಾನೇ ಮಾಡಿದ ಮತ್ತೊಂದು ಸೃಷ್ಟಿಯಾಗಿದೆ. ಇದು ಕೈ ಕಸೂತಿಯನ್ನು ಒಳಗೊಂಡಿರುವ ಸೀರೆಯಾಗಿದೆʼʼ ಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಇದನ್ನೂ ಓದಿ: Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

ಇದನ್ನೂ ಓದಿ: Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

Continue Reading

ಬಾಲಿವುಡ್

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Star Kids with Sanskrit Names: ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹೆಸರು ಸಂಸ್ಕೃತದಿಂದ ಬಂದಿದೆ. ಯಾಮಿ ಮಾತ್ರವಲ್ಲ ಈ ನಡುವೆ ಸ್ಟಾರ್ಸ್‌ಗಳು ತಮ್ಮ ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರುಗಳನ್ನೇ ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಿದ್ದಾರೆ. ಹಾಗಾದ್ರೆ ಯಾರೆಲ್ಲ ಎಂಬುದು ಮುಂದೆ ಓದಿ!

VISTARANEWS.COM


on

Star Kids with Sanskrit Names From Yami Gautam to Priyanka Chopra
Koo

ಬೆಂಗಳೂರು: ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ʻವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಮಗುವಿನ ಹೆಸರಿಗೆ ಫಿದಾ (Star Kids with Sanskrit Names) ಆಗಿದ್ದಾರೆ. ʻವೇದವಿದ್ʼ ಹೆಸರು ಎಷ್ಟು ವಿಶಿಷ್ಟ ಮತ್ತು ಅಸಾಮಾನ್ಯ ಎಂದು ಹೇಳುತ್ತಿದ್ದಾರೆ. ಈ ಹೆಸರು ಸಂಸ್ಕೃತದಿಂದ ಬಂದಿದೆ. ಯಾಮಿ ಮಾತ್ರವಲ್ಲ ಈ ನಡುವೆ ಸ್ಟಾರ್ಸ್‌ಗಳು ತಮ್ಮ ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರುಗಳನ್ನೇ ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಿದ್ದಾರೆ. ಹಾಗಾದ್ರೆ ಯಾರೆಲ್ಲ ಎಂಬುದು ಮುಂದೆ ಓದಿ!

ವಮಿಕಾ ಕೊಹ್ಲಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ 2021ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅವಳೇ ಈ ವಮಿಕಾ. ವಮಿಕಾ ಎಂಬುದು ದುರ್ಗಾ ದೇವಿಯ ಹೆಸರು. ದುರ್ಗಾ ದೇವಿಯನ್ನು ವಮಿಕಾ ಎಂದೂ ಕರೆಯುತ್ತಾರೆ. ಇದೇ ಕಾರಣದಿಂದ ಪುತ್ರಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಅರ್ಧನಾರೀಶ್ವರನ ಒಂದು ಸ್ತ್ರೀ ಭಾಗ ವಮಿಕಾ ಎಂದು ಹಲವರು ತಿಳಿಸಿದ್ದಾರೆ. ಇನ್ನು ವಮಿಕಾ ಹೆಸರಿನಲ್ಲಿ ವಿರಾಟ್​ ಅವರ ಹೆಸರಿನ ʻವʼ ಅಕ್ಷರ ಮತ್ತು ಅನುಷ್ಕಾರ ಹೆಸರಿನ ʻಕಾʼ ಅಕ್ಷರ ಸಹ ಇದೆ. ಅಷ್ಟೇ ಅಲ್ಲದೆ, ವಮಿಕಾ ಅಂದರೆ ಯಶಸ್ಸು, ಶಾಂತಿಯನ್ನು ಸೂಚಿಸುತ್ತದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ರಾಹಾ ಕಪೂರ್

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗಳಿಗೆ ರಾಹಾ ಕಪೂರ್ ಎಂದು ಹೆಸರಿಟ್ಟಿದ್ದಾರೆ. ಬಾಲಿವುಡ್‌ ಸ್ಟಾರ್‌ ದಂಪತಿ ರಣಬೀರ್ ಕಪೂರ್‌- ಅಲಿಯಾ ಭಟ್‌ ದಂಪತಿ ತಮ್ಮ ಪುತ್ರಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ರಾಹ ಎಂದರೆ ಅದರ ಮೂಲ ಅರ್ಥ ದೈವಿಕ ಮಾರ್ಗ ಎಂದು. ಸ್ವಾಹಿಲಿ ಭಾಷೆಯಲ್ಲಿ ಸಂತೋಷ ಎಂಬ ಅರ್ಥವಿದೆ. ಸಂಸ್ಕೃತದಲ್ಲಿ ಕುಲ ಎಂಬ ಅರ್ಥವಿದೆ. ಬಾಂಗ್ಲಾದಲ್ಲಿ ವಿಶ್ರಾಂತಿ, ಆರಾಮ ಹಾಗೂ ನಿರಾಳ ಎಂಬ ಅರ್ಥವಿದೆ. ಅರೇಬಿಕ್‌ನಲ್ಲಿ ಸಂತೋಷ, ಸ್ವಾತಂತ್ರ್ಯ ಹಾಗೂ ಆನಂದ ಎಂಬ ಅರ್ಥವಿದೆ.

ಅಕಾಯ್ ಕೊಹ್ಲಿ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿಯ ಎರಡನೇ ಮಗುವಿಗೆ ಅಕಾಯ್ ಎಂದು ಹೆಸರಿಟ್ಟಿದ್ದಾರೆ. ಇದು ‘ಕಾಯಾ’ ಎಂಬ ಹಿಂದಿ ಪದದಿಂದ ಬಂದಿದೆ. ಇದರರ್ಥ ‘ದೇಹ’. ಅಕಾಯ್ ಎಂದರೆ ತನ್ನ ಭೌತಿಕ ದೇಹಕ್ಕಿಂತ ಹೆಚ್ಚಿನದನ್ನು ಹೊಂದಿರುವವನು. ಇನ್ನು ಟರ್ಕಿಶ್ ಭಾಷೆಯಲ್ಲಿ ‘ಅಕಾಯ್’ ಎಂಬ ಪದದ ಅರ್ಥ ‘ಹೊಳೆಯುವ ಚಂದ್ರ’ (Shining moon). ಒಟ್ಟಿನಲ್ಲಿ ದಂಪತಿ ತಮ್ಮ ಮಗನಿಗೆ ವಿಶಿಷ್ಟ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ಮಾಲತಿ ಮೇರಿ ಚೋಪ್ರಾ ಜೋನಾಸ್

ಮಾಲತಿ ಸಂಸ್ಕೃತ ಮೂಲದ ಪದವಾಗಿದ್ದು, ಹೂವಿನ ಸುವಾಸನೆ, ಬೆಳದಿಂಗಳು ಎಂಬರ್ಥವಿದೆ. ಮೇರಿ ಎಂದರೆ ಲ್ಯಾಟಿಲ್ ಸ್ಟೆಲಾ ಮೇರಿಸ್ ಎಂದರ್ಥ, ಅಂದರೆ ಸಮುದ್ರದ ತಾರೆ. ಫ್ರೆಂಚ್‌ನಲ್ಲಿ ಜೀಸ್‌ಸ್‌ನ ತಾಯಿ ಎಂಬರ್ಥ ಕೂಡ ಇದೆ.

ವೇದವಿದ್

ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಈ ಹೆಸರಿನ ಅರ್ಥ ವೇದಗಳಲ್ಲಿ ಚೆನ್ನಾಗಿ ಪಾರಂಗತನಾದವನು ಎಂದು.

ಕ್ಲೀಂಕಾರ ಕೊನಿಡೆಲಾ

11 ವರ್ಷದ ಬಳಿಕ ರಾಮ್‌ಚರಣ್‌ (Ram Charan) ಹಾಗೂ ಉಪಾಸನಾ ಪೋಷಕರಾಗಿದ್ದರು. ಲಲಿತಾ ಸಹಸ್ರನಾಮ ನಾಮದಿಂದ ಮಗಳಿಗೆ ಹೆಸರನ್ನು ಇಟ್ಟರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ ‘ಕ್ಲೀಂಕಾರ’ ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ದೈವಿಕ ತಾಯಿಯಾದ ‘ಶಕ್ತಿ’ಯ ಪರಮೋಚ್ಚ ಶಕ್ತಿ ಎಂದು ಅರ್ಥ.

Continue Reading

ಬಾಲಿವುಡ್

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Lok Sabha Election 2024: ಬಾಲಿವುಡ್ ನಟ ಆಮೀರ್ ಖಾನ್ ಅವರು ಮುಂಬೈನಲ್ಲಿ ಮಾಜಿ ಪತ್ನಿ ಕಿರಣ್ ರಾವ್ ಅವರೊಂದಿಗೆ ವೋಟ್‌ ಮಾಡಿದರು. ಆಮೀರ್‌ ಕಪ್ಪು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದರು. ಬಾಂದ್ರಾದ ಮತಗಟ್ಟೆಯಲ್ಲಿ ಆಮೀರ್ ಪುತ್ರಿ ಇರಾ ಖಾನ್ ಮತ್ತು ಜುನೈದ್ ಕೂಡ ಕಾಣಿಸಿಕೊಂಡಿದ್ದಾರೆ. ಮತ ಚಲಾಯಿಸಿದ ಬಳಿಕ ಪಾಪರಾಜಿಗಳಿಗೂ ಪೋಸ್ ನೀಡಿದರು. ಆಮೀರ್ ತಾಯಿ ಜೀನತ್ ಖಾನ್ ಕೂಡ ಮತದಾನ ಮಾಡಿದರು.

VISTARANEWS.COM


on

Lok Sabha Election 2024 Shah Rukh Khan booth in Mumbai
Koo

ಬೆಂಗಳೂರು: ಲೋಕಸಭೆ 2024ರ (Lok Sabha Election 2024) ಚುನಾವಣೆಯಲ್ಲಿ ಮತ ಚಲಾಯಿಸಲು ನಟ ಶಾರುಖ್ ಖಾನ್ ಮುಂಬೈನ ಮತಗಟ್ಟೆಯಲ್ಲಿ ಕಾಣಿಸಿಕೊಂಡರು. ಪತ್ನಿ ಗೌರಿ ಖಾನ್, ಮಗಳು ಸುಹಾನಾ ಖಾನ್ ಮತ್ತು ಮಗ ಅಬ್ರಾಮ್ ಕೂಡ ಅವರೊಂದಿಗೆ ಇದ್ದರು. ಶಾರುಖ್ (sharukh khan) ಕಪ್ಪು ಟಿ-ಶರ್ಟ್ ಧರಿಸಿ ಮತದಾನ ಕೇಂದ್ರಕ್ಕೆ ಆಗಮಿಸಿದರು. ಸುಹಾನಾ ನೀಲಿ ಸೂಟ್ ಮತ್ತು ಗೌರಿ ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಧರಿಸಿದ್ದರು.

ಮೇ 18ರಂದು ಶಾರುಖ್ ತಮ್ಮ ಅಭಿಮಾನಿಗಳಿಗೆ ಈ ವರ್ಷ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡಿದರು. ಎಕ್ಸ್ ಪೋಸ್ಟ್‌ನಲ್ಲಿ, ಶಾರುಖ್‌ ʻʻಜವಾಬ್ದಾರಿಯುತ ಭಾರತೀಯ ಪ್ರಜೆಗಳಾದ ನಾವು ಈ ಸೋಮವಾರ ಮಹಾರಾಷ್ಟ್ರದಲ್ಲಿ ಮತದಾನದ ಹಕ್ಕನ್ನು ಚಲಾಯಿಸಬೇಕು. ಭಾರತೀಯರಾಗಿ ನಮ್ಮ ಕರ್ತವ್ಯವನ್ನು ನಿರ್ವಹಿಸೋಣ ಮತ್ತು ನಮ್ಮ ದೇಶದ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸೋಣʼʼ ಎಂದು ಮನವಿ ಮಾಡಿದ್ದರು.

ಮುಂಜಾನೆ ಅಕ್ಷಯ್ ಕುಮಾರ್, ರಣಬೀರ್ ಕಪೂರ್, ಕಿಯಾರಾ ಆಡ್ವಾಣಿ, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಮುಂಬೈನಾದ್ಯಂತ ಮತದಾನ ಮಾಡಿದರು.

ಬಾಲಿವುಡ್ ನಟ ಆಮೀರ್ ಖಾನ್ ಅವರು ಮುಂಬೈನಲ್ಲಿ ಮಾಜಿ ಪತ್ನಿ ಕಿರಣ್ ರಾವ್ ಅವರೊಂದಿಗೆ ವೋಟ್‌ ಮಾಡಿದರು. ಆಮೀರ್‌ ಕಪ್ಪು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದರು. ಬಾಂದ್ರಾದ ಮತಗಟ್ಟೆಯಲ್ಲಿ ಆಮೀರ್ ಪುತ್ರಿ ಇರಾ ಖಾನ್ ಮತ್ತು ಜುನೈದ್ ಕೂಡ ಕಾಣಿಸಿಕೊಂಡಿದ್ದಾರೆ. ಮತ ಚಲಾಯಿಸಿದ ಬಳಿಕ ಪಾಪರಾಜಿಗಳಿಗೂ ಪೋಸ್ ನೀಡಿದರು. ಆಮೀರ್ ತಾಯಿ ಜೀನತ್ ಖಾನ್ ಕೂಡ ಮತದಾನ ಮಾಡಿದರು.

ಇದನ್ನೂ ಓದಿ: Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading

ಬಾಲಿವುಡ್

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Deepika Padukone: ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

VISTARANEWS.COM


on

Deepika Padukone Enjoy Lunch Date After Casting Their Vote
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ ಆಗುತ್ತಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಮತ ಚಲಾಯಿಸಿದ್ದಾರೆ. ಇದೀಗ ದೀಪಿಕಾ ಅವರ ಬೇಬಿ ಬಂಪ್‌ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗುತ್ತಿವೆ. ಈ ಮೂಲಕ ಜೋಡಿ ಬಾಡಿಗೆ ತಾಯ್ತನ ಆಶ್ರಯಿಸಿದ್ದಾರೆ ಎಂಬ ವದಂತಿಗೂ ತೆರೆ ಬಿದ್ದಿದೆ. ಲೂಸ್ ಶರ್ಟ್ ಧರಿಸಿದ್ದರೂ ಐದು ತಿಂಗಳ ಗರ್ಭಿಣಿಯಾಗಿರುವ ದೀಪಿಕಾಳ ಬೇಬಿ ಬಂಪ್ ಎದ್ದು ಕಾಣಿಸುತ್ತಿತ್ತು. ನೆಟ್ಟಿಗರು ದೀಪಿಕಾ ಹೊಟ್ಟೆಯಲ್ಲಿ ಗಂಡು ಮಗುವೇ ಇದೆ, ಈ ಜೋಡಿಗೆ ಗಂಡು ಮಗುವೇ ಆಗುವುದು ಎಂದು ಭವಿಷ್ಯ ನುಡಿಯುತ್ತಿದ್ದಾರೆ.

ವೈರಲ್‌ ಆದ ವಿಡಿಯೊದಲ್ಲಿ ದೀಪಿಕಾ ʻʻಬಿಳಿ ಶರ್ಟ್ ಮತ್ತು ಡೆನಿಮ್‌ನಲ್ಲಿ ಕಾಣಿಸಿಕೊಂಡರು. ರಣವೀರ್ ಹೆಂಡತಿಗೆ ಕಾರಿನಲ್ಲಿ ಕುಳಿತುಕೊಳ್ಳಲು ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ದೀಪಿಕಾ ಮತ್ತು ರಣವೀರ್ ಮತಗಟ್ಟೆಗೆ ತೆರಳುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದರು. ರಣವೀರ್ ಅವರು ದೀಪಿಕಾ ಅವರನ್ನು ಬೂತ್‌ಗೆ ಕರೆದೊಯ್ಯುವಾಗ ಕೈ ಹಿಡಿದು ಕರೆದುಕೊಂಡು ಹೋದರು. ದೀಪಿಕಾ ಇದೇ ಮೊದಲ ಬಾರಿಗೆ ತನ್ನ ಬೇಬಿ ಬಂಪ್ ತೋರಿಸಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ʻಸಿಂಗಮ್ ಅಗೇನ್ʼ ಚಿತ್ರದಲ್ಲಿ ಲೇಡಿ ಸಿಂಗಮ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ, ದೀಪಿಕಾ ಅವರೊಂದಿಗೆ ಕೆಲಸ ಮಾಡಿದ ಜ್ಯೂನಿಯರ್‌ ಕಲಾವಿದರು ನಟಿಯೊಂದಿಗಿನ ಸೆಲ್ಫಿಯನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼ ಎನ್ನಲಾಗಿತ್ತು.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

ಇದನ್ನೂ ಓದಿ: Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌!

ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಸಂದರ್ಭದಲ್ಲೇ ತಮ್ಮ ಮದುವೆ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಡಿಲಿಟ್‌ ಮಾಡಿದ್ದರು. ಎಲ್ಲವೂ ಸರಿಯಿರುವಾಗಲೇ ರಣ್‌ವೀರ್ ಸಿಂಗ್ ಯಾಕೆ ಈ ನಿರ್ಧಾರ ತೆಗೆದುಕೊಂಡರು? ದಿಢೀರನೇ ಫೋಟೊಗಳನ್ನು ತೆಗೆದು ಹಾಕಿದ್ದು ಯಾಕೆ? ಈ ಎಲ್ಲಾ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿತ್ತು. ಕಳೆದ ವರ್ಷ ಕರಣ್ ಜೋಹರ್ ಶೋನಲ್ಲಿ ಮದುವೆ ವಿಡಿಯೋ ರಿಲೀಸ್ ಮಾಡಿದ್ದರು. ಇದರಿಂದ ರಣವೀರ್ ಸಿಂಗ್ ಹಾಗೂ ದೀಪಿಕಾ ಮಧ್ಯೆ ಏನಾದರೂ ಗಂಭೀರ ಜಗಳ ಆಯಿತೇ ಎನ್ನುವ ಅನುಮಾನ ಮೂಡಿತ್ತು.

Continue Reading
Advertisement
Prashant Kishor
Lok Sabha Election 20246 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್25 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ43 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್49 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್51 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ1 hour ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್1 hour ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ1 hour ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ2 hours ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌