Abhishek Ambareesh: ಭಾವಿ ಪತ್ನಿ ಜನುಮದಿನದಂದು ರೊಮ್ಯಾಂಟಿಕ್‌ ಫೋಟೊಗಳನ್ನು ಹಂಚಿಕೊಂಡ ಅಭಿಷೇಕ್‌ ಅಂಬರೀಶ್‌ - Vistara News

ಸಿನಿಮಾ

Abhishek Ambareesh: ಭಾವಿ ಪತ್ನಿ ಜನುಮದಿನದಂದು ರೊಮ್ಯಾಂಟಿಕ್‌ ಫೋಟೊಗಳನ್ನು ಹಂಚಿಕೊಂಡ ಅಭಿಷೇಕ್‌ ಅಂಬರೀಶ್‌

ಅಭಿಷೇಕ್‌ ಅಂಬರೀಶ್‌ (Abhishek Ambareesh) ಭಾವಿ ಪತ್ನಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ಅವಿವಾ ಬಿದ್ದಪ್ಪ ಜತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Abhishek Ambarish shared romantic photos on his future wife's birthday.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Abhishek Ambareesh

ಯಂಗ್‌ ರೆಬಲ್ ಸ್ಟಾರ್‌ ಅಭಿಷೇಕ್‌ ಅಂಬರೀಶ್‌ (Abhishek Ambareesh) ಹಾಗೂ ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ಡಿಸೆಂಬರ್‌ 11ರಂದು ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆದಿತ್ತು.

Abhishek Ambareesh

ಇದೀಗ ಅಭಿಷೇಕ್‌ ಅಂಬರೀಶ್‌ ಭಾವಿ ಪತ್ನಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ಅವಿವಾ ಬಿದ್ದಪ್ಪ ಜತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

Abhishek Ambareesh

ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ವಿಚಾರವನ್ನು ಕುಟುಂಬಕ್ಕೆ ತಿಳಿಸಿ ಗ್ರೀನ್ ಸಿಗ್ನಲ್ ಪಡೆದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Abhishek Ambareesh

”ನಾನು ನಿನ್ನನ್ನು ಪಡೆದಿದ್ದೇನೆ, ಯಾವಾಗಲೂ ಮತ್ತು ಎಂದೆಂದಿಗೂ ಖುಷಿಯಾಗಿರು. ಜನುಮದಿನದ ಶುಭಾಶಯಗಳು, ದೇವರು ನಿಮ್ಮನ್ನು ಆಶೀರ್ವದಿಸಲಿʼʼ ಎಂದು ವಿಶ್‌ ಮಾಡಿದ್ದಾರೆ. ಅವಿವಾ ಕೂಡ ಅಭಿಷೇಕ್ ಜತೆಗಿರುವ ಫೋಟೊ ಹಂಚಿಕೊಂಡಿದ್ದಾರೆ.

ಅವಿವಾ ಬಿದ್ದಪ್ಪ ಫ್ಯಾಷನ್‌ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಸ್ವಿಮ್ ಸೂಟ್‌ ಬ್ರ್ಯಾಂಡ್‌ನ ಲಾಂಚ್ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Ranbir Kapoor: ಅತ್ಯಂತ ಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ ಆಗಲಿದ್ದಾರಂತೆ ರಣಬೀರ್- ಆಲಿಯಾ ಮಗಳು!

Ranbir Kapoor: ರಣಬೀರ್ ಅವರ ಹೊಸ ಬಂಗಲೆಗೆ 250 ಕೋಟಿ ರೂ. ವೆಚ್ಚ ತಗುಲಿದೆ ಎನ್ನಲಾಗುತ್ತಿದೆ. ಇದು ಮುಂಬೈನ ‘ಅತ್ಯಂತ ದುಬಾರಿ’ ಸೆಲೆಬ್ರಿಟಿ ಬಂಗಲೆಯಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Ranbir Kapoor Raha Kapoor
Koo

ಬೆಂಗಳೂರು: ರಣಬೀರ್ ಕಪೂರ್ (Ranbir Kapoor), ಆಲಿಯಾ ಭಟ್( Alia Bhatt) ಮತ್ತು ನೀತು ಕಪೂರ್ (Neetu Kapoor) ಇತ್ತೀಚೆಗೆ ಮುಂಬೈನ ಬಾಂದ್ರಾದಲ್ಲಿ (Mumbai’s Bandra) ನಿರ್ಮಾಣ ಹಂತದ ಬಂಗಲೆಗೆ ಭೇಟಿ ಕೊಟ್ಟಿದ್ದರು. ಇದೀಗ ವರದಿಯ ಪ್ರಕಾರ, ರಣಬೀರ್ ಮತ್ತು ಆಲಿಯಾ ಮಗಳು ರಾಹಾ ಕಪೂರ್ ಅವರ ಹೆಸರಿನಲ್ಲಿ ಈ ಬಂಗಲೆ ನೋಂದಣಿ ಆಗಲಿದೆ ಎಂದು ವರದಿಯಾಗಿದೆ. ಈ ಮನೆಗೆ ಕನಿಷ್ಠ 250 ಕೋಟಿ ರೂಪಾಯಿ ವೆಚ್ಚ ತಗುಲಿದೆ ಎನ್ನಲಾಗುತ್ತಿದೆ. ಒಂದು ವೇಳೆ ರಾಹಾ ಮನೆಯ ಒಡತಿ ಆದರೆ ʻಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ʼ (youngest and richest star kid) ಆಗಲಿದ್ದಾರೆ.

ರಣಬೀರ್ ಅವರ ಹೊಸ ಬಂಗಲೆಯು 250 ಕೋಟಿ ರೂ. ವೆಚ್ಚ ತಗುಲಿದೆ ಎನ್ನಲಾಗುತ್ತಿದೆ. ಶಾರುಖ್ ಖಾನ್ ಅವರ ಮನ್ನತ್ ಮತ್ತು ಅಮಿತಾಭ್‌ ಬಚ್ಚನ್ ಅವರ ‘ಜಲ್ಸಾ’ ಸಮೀಪವೇ ಇದೆ. ಇದು ಮುಂಬೈನ ‘ಅತ್ಯಂತ ದುಬಾರಿ’ ಸೆಲೆಬ್ರಿಟಿ ಬಂಗಲೆಯಾಗಿದೆ ಎಂದು ವರದಿಯಾಗಿದೆ. “ರಣಬೀರ್ ಮತ್ತು ಆಲಿಯಾ ಇಬ್ಬರೂ ತಮ್ಮ ಕನಸಿನ ಮನೆಯನ್ನು ಮಾಡಲು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸಮಾನವಾಗಿ ಹೂಡಿಕೆ ಮಾಡುತ್ತಿದ್ದಾರೆ. 250 ಕೋಟಿಗೂ ಹೆಚ್ಚು ವೆಚ್ಚ ತಗುಲಿದೆ. ಶಾರುಖ್ ಖಾನ್ ಅವರ ಮನ್ನತ್ ಮತ್ತು ಅಮಿತಾಭ್‌ ಬಚ್ಚನ್ ಅವರ ಜಲ್ಸಾಗೆ ಹೋಲಿಸಿದರೆ ಇದು ಮುಂಬೈನ ಅತ್ಯಂತ ದುಬಾರಿ ಬಂಗಲೆಯಾಗಲಿದೆʼʼ ಎಂದು ವರದಿಯಾಗಿದೆ.

ಈ ಬಂಗಲೆ ಜತೆಗೆ ಆಲಿಯಾ ಮತ್ತು ರಣಬೀರ್ ಇಬ್ಬರೂ ಬಾಂದ್ರಾ ಪ್ರದೇಶದಲ್ಲಿ ನಾಲ್ಕು ಫ್ಲಾಟ್‌ಗಳನ್ನು ಹೊಂದಿದ್ದಾರೆ. ಇದರ ಮೌಲ್ಯ 60 ಕೋಟಿ ರೂ.ಗಿಂತ ಹೆಚ್ಚು. ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್ ಇತ್ತೀಚೆಗೆ ಬಾಂದ್ರಾದಲ್ಲಿ 15 ಕೋಟಿ ರೂಪಾಯಿ ಮನೆ ಖರೀದಿಸಿದ್ದಾರೆ. ಬಂಗಲೆ ಪೂರ್ಣವಾದ ಬಳಿಕ ಇಡೀ ಕಪೂರ್ ಕುಟುಂಬ, ನೀತು ಸೇರಿದಂತೆ ಇದೇ ಬಂಗಲೆಯಲ್ಲಿ ಇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Ranbir Kapoor: ತಮ್ಮ ಐಷಾರಾಮಿ ಬಂಗಲೆಯಲ್ಲಿ ಪೋಸ್‌ ಕೊಟ್ಟ ಆಲಿಯಾ-ರಣಬೀರ್!

2020ರಲ್ಲಿ ರಿಷಿ ಕಪೂರ್ ಸಾಯುವ ಮೊದಲು, ಅವರು ಈ ಸೈಟ್‌ಗೆ ಭೇಟಿ ನೀಡಿದ್ದರು. ಆಲಿಯಾ ಮತ್ತು ರಣಬೀರ್ ಸೆಪ್ಟೆಂಬರ್ 2022ರಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಆಲಿಯಾ ಗರ್ಭಿಣಿಯಾಗಿದ್ದರು.ಆಲಿಯಾ ಮತ್ತು ರಣಬೀರ್ ಅನೇಕ ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ 2022ರ ಏಪ್ರಿಲ್ 14ರಂದು ಮದುವೆಯಾದರು.

ರಾಮಾಯಣ ಆಧರಿಸಿದ ಸಿನಿಮಾದಲ್ಲಿ ರಣಬೀರ್‌, ಆಲಿಯಾ

ನಿತೇಶ್ ತಿವಾರಿ ರಾಮಾಯಣ ಆಧರಿಸಿ ಸಿನಿಮಾ ಮಾಡಲಿದ್ದಾರೆ. ಈ ಚಿತ್ರದಲ್ಲಿ ಈ ಚಿತ್ರದಲ್ಲಿ ರಣಬೀರ್, ಆಲಿಯಾ ಭಟ್ ಹಾಗೂ ಯಶ್ (Actor Yash) ನಟಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಈಗಾಗಲೇ ಪಾತ್ರವರ್ಗ ಕೂಡ ಫಿಕ್ಸ್‌ ಆಗಿದ್ದು, ರಣಬೀರ್ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಆಲಿಯಾ ಭಟ್ ಸೀತೆ ಪಾತ್ರವನ್ನು ನಿಭಾಯಸಿಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪಾತ್ರವರ್ಗ ಕೂಡ ಫಿಕ್ಸ್‌ ಆಗಿದ್ದು, ರಣಬೀರ್ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಆಲಿಯಾ ಭಟ್ ಸೀತೆ ಪಾತ್ರವನ್ನು ನಿಭಾಯಸಿಲಿದ್ದಾರೆ ಎನ್ನಲಾಗಿದೆ.

Continue Reading

ಕಾಲಿವುಡ್

Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

Actor Suriya: 42ನೇ ಚಿತ್ರ ʻಕಂಗುವʼ ಸಿನಿಮಾ ರಿಲೀಸ್‌ಗಾಗಿ ಸೂರ್ಯ ಫ್ಯಾನ್ಸ್‌ ಕಾಯುತ್ತಿದ್ದಾರೆ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ಸೂರ್ಯ.

VISTARANEWS.COM


on

Actor Suriya announces film
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ʻಕಂಗುವʼ ಟೀಸರ್‌ ಔಟ್‌ ಆಗಿತ್ತು. ಇದರ ಬೆನ್ನಲ್ಲೇ ತಮ್ಮ ಮುಂದಿನ ಸಿನಿಮಾ ಯಾವುದು ಎಂದು ಅನೌನ್ಸ್‌ ಮಾಡಿದ್ದಾರೆ ಸೂರ್ಯ (Actor Suriya). ತಮ್ಮ ಮುಂದಿನ ಚಿತ್ರಕ್ಕಾಗಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ (Karthik Subbaraj) ಅವರೊಂದಿಗೆ ಕೈಜೋಡಿಸಿರುವುದಾಗಿ ನಟ ಗುರುವಾರ (ಮಾ.28) ಘೋಷಿಸಿದರು. ಸೂರ್ಯ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟರ್ ಹಂಚಿಕೊಂಡಿದ್ದಾರೆ.

‘ಪ್ರೀತಿ , ನಗು, ಯುದ್ಧ’!

ಪೋಸ್ಟರ್‌ ಬಹಳ ಕುತೂಹಲಕಾರಿಯಾಗಿದ್ದು, ಮರದ ಹಿಂದೆ ಕಾರು ಧಗ ಧಗ ಉರಿದಿದೆ. ಮರದಲ್ಲಿ ಹೃದಯವನ್ನು ಕೆತ್ತಲಾಗಿದೆ. ಅದಕ್ಕೆ ಬಾಣ ಚುಚ್ಚಿದೆ. ‘ಪ್ರೀತಿ , ನಗು, ಯುದ್ಧ’ ಎಂದು ಅಡಿ ಬರಹ ನೀಡಲಾಗಿದೆ. ಈ ಪೋಸ್ಟರ್‌ ಕಂಡು ಸಿನಿಪ್ರಿಯರು ಅಚ್ಚರಿಗೆ ಒಳಗಾಗಿದ್ದಾರೆ.

“ಹೊಸ ಆರಂಭ..! ನಿಮ್ಮೆಲ್ಲರ ಶುಭ ಹಾರೈಕೆಗಳು ಬೇಕು!” ಎಂದು ಸೂರ್ಯ ಈ ಪೋಸ್ಟರ್‌ ಶೇರ್‌ ಮಾಡಿಕೊಂಡಿದ್ದಾರೆ. ಕಾರ್ತಿಕ್‌ ಜತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ʻವಾಡಿ ವಾಸಲ್; ಚಿತ್ರಕ್ಕಾಗಿ ಸೂರ್ಯ ನಿರ್ದೇಶಕ ವೆಟ್ರಿಮಾರನ್ ಜತೆ ಕೈಜೋಡಿಸಬೇಕಿತ್ತು. ಆದರೆ ಸೂರ್ಯ ಅನೌನ್ಸ್‌ ಮಾಡಿದ್ದೇ ಬೇರೆಯಾಗಿದೆ. ಇದು ಸೂರ್ಯ ಅವರ 44ನೇ ಸಿನಿಮಾ ಆಗಿದೆ. 42ನೇ ಚಿತ್ರ ʻಕಂಗುವʼ ಸಿನಿಮಾ ರಿಲೀಸ್‌ಗಾಗಿ ಸೂರ್ಯ ಫ್ಯಾನ್ಸ್‌ ಕಾಯುತ್ತಿದ್ದಾರೆ. ಕಾರ್ತಿಕ್ ಅವರ ಕೊನೆಯ ಚಿತ್ರ ʻಜಿಗರ್ತಂಡ ಡಬಲ್ ಎಕ್ಸ್ʼ 2023ರಲ್ಲಿ ಬಿಡುಗಡೆಯಾಗಿ ಉತ್ತಮ ವಿಮರ್ಶೆಗಳನ್ನು ಪಡೆದಿತ್ತು. ಇದೀಗ ಕಾರ್ತಿಕ್‌ ಸೂರ್ಯ ಜತೆ ಸಿನಿಮಾ ಮಾಡುತ್ತಿದ್ದಾರೆ. ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ: Actor Suriya: `ಸುಧಾ ಕೊಂಗರ’ ನಿರ್ದೇಶನದ ಸಿನಿಮಾ ಇನ್ನೂ ಸೆಟ್ಟೇರಲೇ ಇಲ್ಲ! ಸೂರ್ಯ ಹೇಳಿದ್ದೇನು?

ಕ್ರೂರ ಅವತಾರ ತಾಳಿದ ಬಾಬಿ ಡಿಯೋಲ್​

ಇನ್ನು ಕಂಗುವ ವಿಚಾರಕ್ಕೆ ಬಂದರೆ ಈಗಾಲೇ ಸಿನಿಮಾದ ಟೀಸರ್‌ ಔಟ್‌ ಆಗಿದೆ. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದಾರೆ. ವೀಕ್ಷಕರಂತೂ ಸೂರ್ಯ ಅವರ ರಗಡ್‌ ಲುಕ್‌ಗೆ ಫಿದಾ ಆಗಿದ್ದಾರೆ.ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ. ಇದು ಸಾಹಸಮಯ ಚಿತ್ರವಾಗಿದ್ದು, 2024ರ ಆರಂಭದಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದಾರೆ. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೊಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

Yuva Rajkumar: ಜ್ಯೂನಿಯರ್‌ ಅಪ್ಪು ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿರುವ ಯುವ ಅದ್ಧೂರಿಯಾಗಿ ಇಂದು ದರ್ಶನ ಕೊಟ್ಟಿದ್ದಾನೆ. ಬೆಳ್ಳುಳ್ಳಿ ಕಬಾಬ್‌ ಚಂದ್ರು ಸಿನಿಮಾ ನೋಡಿ ಹೊಗಳಿದ್ದಾರೆ.

VISTARANEWS.COM


on

Yuva Rajkumar Yuva cutout
Koo

ಬೆಂಗಳೂರು: ಸಂತೋಷ್ ಆನಂದ್‌ರಾಮ್‌ ನಿರ್ದೇಶನ ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಮಗ ಯುವ ರಾಜ್‌ಕುಮಾರ್ (Yuva Rajkumar) ಚೊಚ್ಚಲ ಸಿನಿಮಾ ‘ಯುವ’ ಇಂದು (ಮಾರ್ಚ್ 29) ರಿಲೀಸ್ ಆಗಿದೆ. ಬೆಂಗಳೂರಿನ ಸಿದ್ದೇಶ್ವರ ಥಿಯೇಟರ್​ನಲ್ಲಿ ಮುಂಜಾನೆಯಿಂದಲೇ ಫ್ಯಾನ್ಸ್​ ಶೋ ಪ್ರದರ್ಶನ ಕಂಡಿದೆ. ರಾಜ್ಯದಲ್ಲಿ 350ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಇದೀಗ ಸಿನಿಮಾ ಕಂಡು ಪ್ರೇಕ್ಷಕರು ಫಿದಾ ಆಗಿದ್ದಾರೆ. ಇನ್ನು ಬೆಳ್ಳುಳ್ಳಿ ಕಬಾಬ್‌ ಚಂದ್ರು ಸಿನಿಮಾ ನೋಡಿ ʻಒನ್ ಮೋರ್‌ ಒನ್‌ ಮೋರ್‌ ಅಂತಾನೆ ಇರಬೇಕುʼ ಎಂದು ಹೊಗಳಿದ್ದಾರೆ.

ಜೆಪಿ ನಗರದ ಸಿದ್ದೇಶ್ವರ ಥಿಯೇಟರ್ ಎದುರು ಯುವ ಅವರ ಕಟೌಟ್​ಗಳನ್ನು ಹಾಕಲಾಗಿದೆ. ಜ್ಯೂನಿಯರ್‌ ಅಪ್ಪು ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿರುವ ಯುವ (Yuva Rajkumar), ಅದ್ಧೂರಿಯಾಗಿ ದರ್ಶನ ಕೊಟ್ಟಿದ್ದಾನೆ. ಇನ್ನು ಸಿನಿಮಾದಲ್ಲಿ ಯುವನ “ಒಬ್ಬನೇ ಶಿವ ಒಬ್ಬನೇ ಯುವ” ಹಾಡಿಗೆ ಸ್ಕ್ರೀನ್ ಮುಂದೆ ದೊಡ್ಮನೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದೀಗ ಸಿನಿಮಾ ಕುರಿತು ಪ್ರೇಕ್ಷಕರು ಮೆಚ್ಚುಗೆ ಹೊರ ಹಾಕಿದ್ದಾರೆ. ಒಬ್ಬ ಅಭಿಮಾನಿ ʻʻಖಂಡಿತವಾಗಿ ಸಿನಿಮಾ ನಮ್ಮನ್ನು ಭಾವುಕರನ್ನಾಗಿಸುತ್ತದೆʼʼಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ಸಂಪೂರ್ಣ ನಿಷೇಧ; ರಾಜ್ಯ ಸರ್ಕಾರ ಆದೇಶ

ಇನ್ನು ಬೆಳ್ಳುಳ್ಳಿ ಕಬಾಬ್‌ ಚಂದ್ರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ʻʻಸಿನಿಮಾ ತುಂಬ ಚೆನ್ನಾಗಿದೆ. ಫ್ಯಾಮಿಲಿ ಕರ್ಕೊಂಡು ಬರ್ತಾ ಇರಬೇಕು, ನೋಡ್ತಾ ಇರಬೇಕು. ಫೈಟ್ಸ್‌ ಡ್ಯಾನ್ಸ್‌ ಎಲ್ಲ ಸೂಪರ್‌ ಆಗಿದೆ. ತುಂಬ ಚೆನ್ನಾಗಿದೆ. ಒನ್ ಮೋರ್‌ ಒನ್‌ ಮೋರ್‌ ಅಂತಾನೆ ಇರಬೇಕು. ಒಟ್ಟಾರೆಯಾಗಿ ಒಂದು ಕುಟುಂಬ ಕುಳಿತು ನೋಡುವ ಸಿನಿಮಾ. ಹೊಸ ಹೀರೋ ಅಲ್ಲ. ಹಳೇ ಹೀರೋ. ಅವ್ರು ಬಂದಿರೋದು ಎಲ್ಲಿಂದ ಗೊತ್ತಲ್ಲ? ಫೈಟ್‌ ನೋಡುತ್ತಿದ್ದರೆ ಬಾಸ್‌ ನೆನಪಾಗುತ್ತೆʼʼ ಎಂದಿದ್ದಾರೆ ಬೆಳ್ಳುಳ್ಳಿ ಕಬಾಬ್‌ ಚಂದ್ರು.

ಇದನ್ನೂ ಓದಿ: Bellulli Kabab Chandru: `ರಾಹುಲ್ಲಾ ಅಲ್ಲ.. ಸುನಿಲ್ಲಾ’ ತುಂಬ ಚೆನ್ನಾಗಿ ಸಿನಿಮಾ ಮಾಡಿದ್ದಾರೆ ಎಂದ ಬೆಳ್ಳುಳ್ಳಿ ಕಬಾಬ್​ ಚಂದ್ರು!

ಚಿತ್ರದಲ್ಲಿ ಕಾಲೇಜು ಹುಡುಗನ ಪಾತ್ರದಲ್ಲಿ ಯುವ ರಾಜ್‌ಕುಮಾರ್ (Yuva Rajkumar) ಬಣ್ಣ ಹಚ್ಚಿದ್ದಾರೆ. ‘ಯುವ’ ಚಿತ್ರದಲ್ಲಿ ‘ಕಾಂತಾರ’ ಬೆಡಗಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದಾರೆ. ಕಿಶೋರ್, ಅಚ್ಯುತ್‌ ಕುಮಾರ್ ಹಾಗೂ ಸುಧಾರಾಣಿ ಚಿತ್ರದ ತಾರಾಗಣದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ.

“ಒಬ್ಬನೇ ಶಿವ ಒಬ್ಬನೇ ಯುವ” ಸಾಂಗ್‌ಗೆ ಮೆಚ್ಚುಗೆ

ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

Continue Reading

ಟಾಲಿವುಡ್

Allu Arjun: ದುಬೈನಲ್ಲಿ ಮೇಣದ ಪ್ರತಿಮೆ; ಇದ್ರಲ್ಲಿ ರಿಯಲ್ ಅಲ್ಲು ಅರ್ಜುನ್‌ ಯಾರು?

Allu Arjun: ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂಗೆ (Madame Tussauds in Dubai) ತೆರಳಿ ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ ಅಲ್ಲು ಅರ್ಜುನ್‌. ಇದೀಗ ಫೋಟೊಗಳನ್ನು ಕಂಡು ಅನೇಕರಿಗೆ ಕನ್​ಫ್ಯೂಸ್ ಆಗಿದೆ.

VISTARANEWS.COM


on

Allu Arjun wax statue
Koo

ಬೆಂಗಳೂರು: ಸ್ಟೈಲಿಶ್‌ ಐಕಾನ್‌, ಟಾಲಿವುಡ್‌ ನಟ ಅಲ್ಲು ಅರ್ಜುನ್ (Allu Arjun) ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂಗೆ (Madame Tussauds in Dubai) ತೆರಳಿ ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಇದೀಗ ಪ್ರತಿಮೆಗಳ ಪೋಸ್ಟ್‌ವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಫೋಟೊಗಳನ್ನು ಕಂಡು ಅನೇಕರಿಗೆ ಕನ್​ಫ್ಯೂಸ್ ಆಗಿದೆ.

ದುಬೈನ ಮೇಡಂ ಟುಸ್ಸಾಡ್ಸ್​ ಮ್ಯೂಸಿಯಂ ಅಲ್ಲು ಅವರನ್ನು ‘ನೃತ್ಯದ ರಾಜ’ ಎಂದು ಕರೆದು ಮೇಣದ ಪ್ರತಿಮೆಯ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದೆ. ಮೇಣದ ಪ್ರತಿಮೆಯಲ್ಲಿ ಅಲ್ಲು ಕೆಂಪು ಜಾಕೆಟ್‌ ಧರಿಸಿ ಪುಷ್ಪ ಪೋಸ್‌ ನೀಡಿದ್ದಾರೆ. ಪ್ರತಿಮೆಯ ಪಕ್ಕ ಅಲ್ಲು ಕೂಡ ಅದೇ ರೀತಿಯ ಕಾಸ್ಟ್ಯೂಮ್‌ ಧರಿಸಿ ಪೋಸ್‌ ಕೊಟ್ಟರು.

ಮೇಡಂ ಟುಸ್ಸಾಡ್ಸ್ ಮೇಣದ ಪ್ರತಿಮೆಯ ಅನಾವರಣದ ವೀಡಿಯೊವನ್ನು ಸಹ ಅಲ್ಲು (Allu Arjun) ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಅಲ್ಲು ಅರ್ಜುನ್‌ ಪೋಸ್ಟ್‌ ಮಾಡಿ ʻʻಇದು ಬಹಳ ವಿಜೃಂಭಣೆಯ ದಿನ . 2003ರಲ್ಲಿ ಇದೇ ದಿನ ಗಂಗೋತ್ರಿ ಸಿನಿಮಾ ರಿಲೀಸ್ ಆಗಿತ್ತು. ಇಂದೇ ನಾನು ನಾನು ನನ್ನ ಮೇಣದ ಪ್ರತಿಮೆಯನ್ನು ಮೇಡಂ ಟುಸ್ಸಾಡ್ಸ್ ದುಬೈನಲ್ಲಿ ಬಿಡುಗಡೆ ಮಾಡುತ್ತಿದ್ದೇನೆ. 21 ವರ್ಷಗಳ ಅವಿಸ್ಮರಣೀಯ ಪ್ರಯಾಣವಿದು. ಈ ಪ್ರಯಾಣದಲ್ಲಿರುವ ಪ್ರತಿಯೊಬ್ಬರಿಗೂ ನಾನು ಆಭಾರಿಯಾಗಿದ್ದೇನೆ. ಪ್ರೀತಿ ಮತ್ತು ಬೆಂಬಲಕ್ಕಾಗಿ ನನ್ನ ಅಭಿಮಾನಿಗಳಿಗೆ ವಿಶೇಷ ಧನ್ಯವಾದಗಳು. ಮುಂಬರುವ ವರ್ಷಗಳಲ್ಲಿ ನಿಮ್ಮೆಲ್ಲರನ್ನೂ ಹೆಚ್ಚು ಹೆಮ್ಮೆ ಪಡುವಂತೆ ಮಾಡುವ ಆಶಯದೊಂದಿಗೆ ಎಂದೆಂದಿಗೂ ಕೃತಜ್ಞರಾಗಿರುವೆʼʼಎಂದು ಬರೆದುಕೊಂಡಿದ್ದಾರೆ. ಪ್ರತಿಮೆಯಲ್ಲಿ . ‘ಅಲಾವೈಂಕುಠಪುರಮುಲೋ’ ಪೋಸ್ ರೀತಿಯಲ್ಲಿ ಅಲ್ಲು ಅರ್ಜುನ್ ಅವರ ಲುಕ್ ಇದೆ.

ಇದನ್ನೂ ಓದಿ: Prabhas Vs Allu Arjun: ‘ಪುಷ್ಪ 2’ ಜತೆ ಪೈಪೋಟಿಗಿಳಿದ ಶಿವಣ್ಣ, ಪ್ರಭಾಸ್!

ಅಲ್ಲು ಕೊನೆಯದಾಗಿ 2021ರ ಪುಷ್ಪ: ದಿ ರೈಸ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಅವರು ಪುಷ್ಪಾ ರಾಜ್ ಎಂಬ ಪಾತ್ರವನ್ನು ನಿಭಾಯಿಸಿದ್ದರು.

ನಿರ್ದೇಶಕ ಸುಕುಮಾರ್ ಕಳೆದ ಕೆಲವು ತಿಂಗಳುಗಳಿಂದ ‘ಪುಷ್ಪ 2’ ಚಿತ್ರೀಕರಣದಲ್ಲಿದ್ದಾರೆ. ಎರಡನೇ ಭಾಗ ಮುಗಿಯುವ ಹಂತದಲ್ಲಿದೆ. ‘ಪುಷ್ಪ 2’ ಬಹು ಭಾಷೆಗಳಲ್ಲಿ 2024ರ ಅಗಸ್ಟ್ 15ರಂದು ಥಿಯೇಟರ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಪುಷ್ಪರಾಜ್ ಪಾತ್ರದಲ್ಲಿ ಅಲ್ಲು ಅರ್ಜುನ್ ಮತ್ತೊಮ್ಮೆ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ.

ಇದನ್ನೂ ಓದಿ: Prabas vs Allu Arjun: ʻಜೈ ಅಲ್ಲು ಅರ್ಜುನ್ʼ ಹೇಳು ಎಂದು ಪ್ರಭಾಸ್‌ ಅಭಿಮಾನಿಗೆ ಥಳಿತ; ಬೆಂಗಳೂರಿನಲ್ಲಿ ಫ್ಯಾನ್ಸ್‌ ವಾರ್‌!

ಮೊದಲ ಭಾಗ, ‘ಪುಷ್ಪ: ದಿ ರೈಸ್’ನಲ್ಲಿ ಅಲ್ಲು ಅರ್ಜುನ್, ಫಹದ್ ಫಾಸಿಲ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದಗ್ದರು. ಡಿಸೆಂಬರ್ 2021 ರಲ್ಲಿ ಬಿಡುಗಡೆಯಾದ ‘ಪುಷ್ಪ’ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿದು ಹಿಂದಿ ಬೆಲ್ಟ್‌ನಲ್ಲಿಯೂ ದಾಖಲೆ ಮಾಡಿತ್ತು.

Continue Reading
Advertisement
Sania Mirza
ಕ್ರೀಡೆ9 mins ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ11 mins ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Heart Attack
ಬೆಂಗಳೂರು24 mins ago

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

Ranbir Kapoor Raha Kapoor
ಬಾಲಿವುಡ್31 mins ago

Ranbir Kapoor: ಅತ್ಯಂತ ಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ ಆಗಲಿದ್ದಾರಂತೆ ರಣಬೀರ್- ಆಲಿಯಾ ಮಗಳು!

Cows
ಕರ್ನಾಟಕ1 hour ago

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

R Ashwin
ಕ್ರೀಡೆ1 hour ago

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

Bangalore water crisis IT companies
ಬೆಂಗಳೂರು1 hour ago

Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Chikkaballapur
ಕರ್ನಾಟಕ2 hours ago

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

Actor Suriya announces film
ಕಾಲಿವುಡ್2 hours ago

Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

Yuva Rajkumar Yuva cutout
ಸಿನಿಮಾ2 hours ago

Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202421 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202423 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌