Ajith Kumar: ಅಜಿತ್ ಚಿತ್ರದಿಂದ ವಿಘ್ನೇಶ್ ಶಿವನ್ ಔಟ್? ಶುರುವಾಗಿದೆ ಟ್ವೀಟ್‌ ಅಭಿಯಾನ - Vistara News

ಕಾಲಿವುಡ್

Ajith Kumar: ಅಜಿತ್ ಚಿತ್ರದಿಂದ ವಿಘ್ನೇಶ್ ಶಿವನ್ ಔಟ್? ಶುರುವಾಗಿದೆ ಟ್ವೀಟ್‌ ಅಭಿಯಾನ

ನಟ ಅಜಿತ್ (Ajith Kumar) ಇತ್ತೀಚೆಗೆ ಲಂಡನ್‌ಗೆ ಹಾರಿದ್ದಾರೆ. ಕಳೆದೆರಡು ದಿನಗಳಿಂದ ಅಜಿತ್‌ ಅವರು ಲಂಡನ್‌ನಲ್ಲಿರುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ, ನಿರ್ದೇಶಕ ವಿಘ್ನೇಶ್ ಶಿವನ್ ಕೂಡ ಲಂಡನ್‌ಗೆ ಪ್ರಯಾಣಿಸಿರುವಂತೆ ತೋರುತ್ತಿದೆ.

VISTARANEWS.COM


on

After AK 62, Actor Ajith Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಥಾಲ ಅಜಿತ್ ಕುಮಾರ್‌ (Ajith Kumar) ಅಭಿನಯದ ‘ತುನಿವು’ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿದೆ. ಇದೀಗ ಅಜಿತ್‌ ಅಭಿಮಾನಿಗಳು ನಟರ ಮುಂದಿನ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅಜಿತ್ ಕುಮಾರ್ ಅವರ ‘ಎಕೆ 62’ ಚಿತ್ರವನ್ನು ನಿರ್ದೇಶಕ ವಿಘ್ನೇಶ್ ಶಿವನ್ ನಿರ್ದೇಶಿಸಲಿದ್ದಾರೆ ಎಂದು ಕಳೆದ ವರ್ಷ ಘೋಷಿಸಲಾಗಿತ್ತು, ಅದು ಶೀಘ್ರದಲ್ಲೇ ತೆರೆಗೆ ಬರಲಿದೆ ಎಂದು ನಿರೀಕ್ಷಿಸಲಾಗಿತ್ತು. ವಿಘ್ನೇಶ್ ಶಿವನ್ ಈಗ ಚಿತ್ರದಿಂದ ಹೊರಗುಳಿದಿದ್ದಾರೆ ಮತ್ತು ನಿರ್ದೇಶಕ ಅಟ್ಲೀ ಅವರು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ ಎನ್ನಲಾಗುತ್ತಿದೆ.

ನಟ ಅಜಿತ್ ಇತ್ತೀಚೆಗೆ ಲಂಡನ್‌ಗೆ ಹಾರಿದ್ದಾರೆ. ಕಳೆದೆರಡು ದಿನಗಳಿಂದ ಅಜಿತ್‌ ಅವರು ಲಂಡನ್‌ನಲ್ಲಿರುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ, ನಿರ್ದೇಶಕ ವಿಘ್ನೇಶ್ ಶಿವನ್ ಕೂಡ ಲಂಡನ್‌ಗೆ ಪ್ರಯಾಣಿಸಿರುವಂತೆ ತೋರುತ್ತಿದೆ. ಮತ್ತು ಲಂಡನ್‌ನ ಕ್ಯಾನರಿ ವಾರ್ಫ್‌ನಿಂದ ಒಂದು ಸಣ್ಣ ವಿಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ನೆಟ್ಟಿಗರು ಈ ಎರಡೂ ವಿಡಿಯೊಗಳನ್ನು ನೋಡಿ ವಿಘ್ನೇಶ್ ಶಿವನ್ ಅವರು ಅಜಿತ್ ಕುಮಾರ್ ಅವರ ‘ಎಕೆ 62’ ಸಿನಿಮಾಗೆ ನಿರ್ದೇಶಿಸಲಿದ್ದಾರೆ ಎಂದು ಕಮೆಂಟ್‌ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ‘AK62’ ಕುರಿತು ಈಗಾಗಲೇ ಅಭಿಯಾನ ಶುರುವಾಗಿದೆ. ಜಸ್ಟಿಸ್‌ ಫಾರ್‌ ಶಿವನ್‌ ಎಂಬ ಅಭಿಯಾನ ಟ್ವೀಟ್‌ನಲ್ಲಿ ಶುರುವಾಗಿದ್ದು, ಹಲವಾರು ಊಹಾಪೋಹಗಳು ಸೋಷಿಯಲ್‌ ಮೀಡಿಯಾದಲ್ಲಿ ಶುರುವಾಗಿವೆ. ಈ ಬಗ್ಗೆ ಅಜಿತ್‌ ಆಗಲಿ, ವಿಘ್ನೇಶ್ ಶಿವನ್ ಆಗಲಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇದನ್ನೂ ಓದಿ: Ajith Kumar | `ತುನಿವು’ ಸಿನಿಮಾ ಬಿಡುಗಡೆ ವೇಳೆ ಟ್ರಕ್‌ನಿಂದ ಬಿದ್ದು ಅಜಿತ್‌ ಅಭಿಮಾನಿ ಸಾವು

ಇದನ್ನೂ ಓದಿ: Ajit Pawar | ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಇದ್ದ ಲಿಫ್ಟ್‌ 4ನೇ ಫ್ಲೋರ್‌ನಿಂದ ಕುಸಿತ, ಅದೃಷ್ಟವಶಾತ್‌ ಪಾರು

ಚಿತ್ರದ ಶೂಟಿಂಗ್ ಫೆಬ್ರವರಿ ಮೊದಲ ವಾರದಲ್ಲಿ ಮುಂಬೈನಲ್ಲಿ ಪ್ರಾರಂಭವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು 35-40 ದಿನಗಳಲ್ಲಿ ಚಿತ್ರೀಕರಣ ಮುಗಿಸುವ ಯೋಜನೆ ಚಿತ್ರತಂಡಕ್ಕೆ ಇದೆ ಎನ್ನಲಾಗುತ್ತಿದೆ. ಅಟ್ಲೀ ಅವರು ಶಾರುಖ್‌ ಅವರ ಜವಾನ್‌ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಾಲಿವುಡ್

Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

Thalaivar 171: ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ.ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ.

VISTARANEWS.COM


on

Thalaivar 171 Rajinikanth first look
Koo

ಬೆಂಗಳೂರು: ನಿರ್ದೇಶಕ ಲೋಕೇಶ್ ಕನಕರಾಜ್ (Director Lokesh Kanagaraj) ಅವರು ರಜನಿಕಾಂತ್ (actor Rajinikanth) ಜತೆ ಸಿನಿಮಾ ಅನೌನ್ಸ್‌ ಮಾಡಿದ್ದಾಗಿನಿಂದ ರಜನಿ ಫ್ಯಾನ್ಸ್‌ ಹೊಸ ಅಪ್‌ಡೇಟ್‌ಗೆ ಕಾಯುತ್ತಿದ್ದರು. ಇದೀಗ ಆ ದಿನ ಬಂದಾಗಿದೆ. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪೋಸ್ಟರ್ ಹಂಚಿಕೊಂಡ ಲೋಕೇಶ್ ಕನಕರಾಜ್ ಅವರು, “ತಲೈವರ್ 171 ಶೀರ್ಷಿಕೆ (Thalaivar 171) ಏಪ್ರಿಲ್ 22ರಂದು ಬಹಿರಂಗಗೊಳ್ಳುತ್ತದೆ” ಎಂದು ಬರೆದಿದ್ದಾರೆ. ಪೋಸ್ಟರ್‌ನಲ್ಲಿ, ರಜನಿಕಾಂತ್ ಅವರು ಚಿನ್ನದ ಗಡಿಯಾರದಿಂದ ಮಾಡಿದ ಕೈಕೋಳಗಳೊಂದಿಗೆ, ಸ್ಟೈಲಿಶ್ ಆಗಿ ಕಾಣುತ್ತಿದ್ದಾರೆ. ಚಿನ್ನದ ಸನ್‌ಗ್ಲಾಸ್‌ ಕೂಡ ಹಾಕಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಸೂರ್ಯ ಪಾತ್ರದ ʻರೋಲೆಕ್ಸ್ʼ ಪಾತ್ರ ಇರಲಿದೆ ಎಂದು ವರದಿಯಾಗಿದೆ. ಸಿನಿಮಾ ತಂಡ ಈ ಬಗ್ಗೆ ಏನೂ ಘೋಷಿಸದಿದ್ದರೂ, ಚಿತ್ರದ ಪೋಸ್ಟರ್ ಈ ಬಗ್ಗೆ ಸುಳಿವು ನೀಡುವಂತಿದೆ. ಚಿತ್ರದ ಪ್ರಿ-ಪ್ರೊಡಕ್ಷನ್ ನಡೆಯುತ್ತಿದ್ದು, ಈ ವರ್ಷದ ಕೊನೆಯಲ್ಲಿ ಸೆಟ್ಟೇರಲಿದೆ ಎನ್ನಲಾಗಿದೆ.

ಲೋಕೇಶ್ ಜತೆ ರಜನಿಕಾಂತ್ ಅಭಿನಯದ ಮೊದಲ ಚಿತ್ರ ಇದಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು. ಚಿತ್ರದಲ್ಲಿ ಶಿವಕಾರ್ತಿಕೇಯನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಉಳಿದ ಪಾತ್ರವರ್ಗ ಇನ್ನೂ ಘೋಷಿಸಿಲ್ಲ. ಟೈಟಲ್ ಅನೌನ್ಸ್ ಆದ ದಿನವೇ ಚಿತ್ರದ ಫುಲ್ ಟೀಮ್ ರಿವೀಲ್ ಆಗುವ ನಿರೀಕ್ಷೆ ಇದೆ. ಅನಿರುದ್ಧ್ ರವಿಚಂದರ್ ಸಂಗೀತ ಇದ್ದರೆ, ಜೋಡಿ ಅನ್ಬರಿವ್ ಸಾಹಸ ನಿರ್ದೇಶನ ಇದೆ.

ಇದನ್ನೂ ಓದಿ: Fraud Case : ಸೂಪರ್ ಸ್ಟಾರ್ ರಜನಿಕಾಂತ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಕಾಸ್ಟಿಂಗ್ ಡೈರೆಕ್ಟರ್‌

ಸಿನಿಮಾ ಪೋಸ್ಟರ್‌

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.

ಇನ್ನು ಲೋಕೇಶ್‌ ಕನಕರಾಜ್‌ ಅವರು ಇತ್ತೀಚೆಗೆ ಶ್ರುತಿ ಹಾಸನ್ ಅವರ ʻಇನಿಮೆಲ್ʼ ಹಾಡಿನ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ರಜನಿಕಾಂತ್ ಜತೆಗಿನ ಚಿತ್ರದ ಹೊರತಾಗಿ, ಲೋಕೇಶ್ ಅವರು ಕಾರ್ತಿ ಜತೆಗಿನ ʻಕೈದಿ 2ʼ ಸಿನಿಮಾ ಸಹ ಹೊಂದಿದ್ದಾರೆ.

Continue Reading

ಕಾಲಿವುಡ್

Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

Actor Suriya: 42ನೇ ಚಿತ್ರ ʻಕಂಗುವʼ ಸಿನಿಮಾ ರಿಲೀಸ್‌ಗಾಗಿ ಸೂರ್ಯ ಫ್ಯಾನ್ಸ್‌ ಕಾಯುತ್ತಿದ್ದಾರೆ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ಸೂರ್ಯ.

VISTARANEWS.COM


on

Actor Suriya announces film
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ʻಕಂಗುವʼ ಟೀಸರ್‌ ಔಟ್‌ ಆಗಿತ್ತು. ಇದರ ಬೆನ್ನಲ್ಲೇ ತಮ್ಮ ಮುಂದಿನ ಸಿನಿಮಾ ಯಾವುದು ಎಂದು ಅನೌನ್ಸ್‌ ಮಾಡಿದ್ದಾರೆ ಸೂರ್ಯ (Actor Suriya). ತಮ್ಮ ಮುಂದಿನ ಚಿತ್ರಕ್ಕಾಗಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ (Karthik Subbaraj) ಅವರೊಂದಿಗೆ ಕೈಜೋಡಿಸಿರುವುದಾಗಿ ನಟ ಗುರುವಾರ (ಮಾ.28) ಘೋಷಿಸಿದರು. ಸೂರ್ಯ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟರ್ ಹಂಚಿಕೊಂಡಿದ್ದಾರೆ.

‘ಪ್ರೀತಿ , ನಗು, ಯುದ್ಧ’!

ಪೋಸ್ಟರ್‌ ಬಹಳ ಕುತೂಹಲಕಾರಿಯಾಗಿದ್ದು, ಮರದ ಹಿಂದೆ ಕಾರು ಧಗ ಧಗ ಉರಿದಿದೆ. ಮರದಲ್ಲಿ ಹೃದಯವನ್ನು ಕೆತ್ತಲಾಗಿದೆ. ಅದಕ್ಕೆ ಬಾಣ ಚುಚ್ಚಿದೆ. ‘ಪ್ರೀತಿ , ನಗು, ಯುದ್ಧ’ ಎಂದು ಅಡಿ ಬರಹ ನೀಡಲಾಗಿದೆ. ಈ ಪೋಸ್ಟರ್‌ ಕಂಡು ಸಿನಿಪ್ರಿಯರು ಅಚ್ಚರಿಗೆ ಒಳಗಾಗಿದ್ದಾರೆ.

“ಹೊಸ ಆರಂಭ..! ನಿಮ್ಮೆಲ್ಲರ ಶುಭ ಹಾರೈಕೆಗಳು ಬೇಕು!” ಎಂದು ಸೂರ್ಯ ಈ ಪೋಸ್ಟರ್‌ ಶೇರ್‌ ಮಾಡಿಕೊಂಡಿದ್ದಾರೆ. ಕಾರ್ತಿಕ್‌ ಜತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ʻವಾಡಿ ವಾಸಲ್; ಚಿತ್ರಕ್ಕಾಗಿ ಸೂರ್ಯ ನಿರ್ದೇಶಕ ವೆಟ್ರಿಮಾರನ್ ಜತೆ ಕೈಜೋಡಿಸಬೇಕಿತ್ತು. ಆದರೆ ಸೂರ್ಯ ಅನೌನ್ಸ್‌ ಮಾಡಿದ್ದೇ ಬೇರೆಯಾಗಿದೆ. ಇದು ಸೂರ್ಯ ಅವರ 44ನೇ ಸಿನಿಮಾ ಆಗಿದೆ. 42ನೇ ಚಿತ್ರ ʻಕಂಗುವʼ ಸಿನಿಮಾ ರಿಲೀಸ್‌ಗಾಗಿ ಸೂರ್ಯ ಫ್ಯಾನ್ಸ್‌ ಕಾಯುತ್ತಿದ್ದಾರೆ. ಕಾರ್ತಿಕ್ ಅವರ ಕೊನೆಯ ಚಿತ್ರ ʻಜಿಗರ್ತಂಡ ಡಬಲ್ ಎಕ್ಸ್ʼ 2023ರಲ್ಲಿ ಬಿಡುಗಡೆಯಾಗಿ ಉತ್ತಮ ವಿಮರ್ಶೆಗಳನ್ನು ಪಡೆದಿತ್ತು. ಇದೀಗ ಕಾರ್ತಿಕ್‌ ಸೂರ್ಯ ಜತೆ ಸಿನಿಮಾ ಮಾಡುತ್ತಿದ್ದಾರೆ. ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ: Actor Suriya: `ಸುಧಾ ಕೊಂಗರ’ ನಿರ್ದೇಶನದ ಸಿನಿಮಾ ಇನ್ನೂ ಸೆಟ್ಟೇರಲೇ ಇಲ್ಲ! ಸೂರ್ಯ ಹೇಳಿದ್ದೇನು?

ಕ್ರೂರ ಅವತಾರ ತಾಳಿದ ಬಾಬಿ ಡಿಯೋಲ್​

ಇನ್ನು ಕಂಗುವ ವಿಚಾರಕ್ಕೆ ಬಂದರೆ ಈಗಾಲೇ ಸಿನಿಮಾದ ಟೀಸರ್‌ ಔಟ್‌ ಆಗಿದೆ. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದಾರೆ. ವೀಕ್ಷಕರಂತೂ ಸೂರ್ಯ ಅವರ ರಗಡ್‌ ಲುಕ್‌ಗೆ ಫಿದಾ ಆಗಿದ್ದಾರೆ.ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ. ಇದು ಸಾಹಸಮಯ ಚಿತ್ರವಾಗಿದ್ದು, 2024ರ ಆರಂಭದಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದಾರೆ. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೊಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Aditi Rao and Siddharth: ದೇವಸ್ಥಾನದಲ್ಲಿ ಮದುವೆಯಾದರೆ ನಟ ಸಿದ್ಧಾರ್ಥ್-ಅದಿತಿ ರಾವ್ ಹೈದರಿ?

Aditi Rao and Siddharth: ಅದಿತಿ ರಾವ್ ಮತ್ತು ಸಿದ್ಧಾರ್ಥ್ ಬಹಳ ಸಮಯದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಿದ್ದರು. ಇಂದು ತೆಲಂಗಾಣದ ವನಪರ್ತಿ (Sri Ranganayakaswamy Temple) ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಜೋಡಿಯ ವಿವಾಹವಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Aditi Rao and Siddharth
Koo

ಬೆಂಗಳೂರು: ನಟ ಸಿದ್ಧಾರ್ಥ್ (Actor Siddharth) ಅವರು ಅದಿತಿ ರಾವ್ ಹೈದರಿ ಜತೆ ಡೇಟಿಂಗ್‌ (Aditi Rao and Siddharth) ಮಾಡುತ್ತಿರುವ ವಿಚಾರ ಗೊತ್ತೇ ಇದೆ. ಇದೀಗ ಈ ಜೋಡಿ ಇಂದು (ಮಾ.27) ತೆಲಂಗಾಣದ ವನಪರ್ತಿ (Sri Ranganayakaswamy Temple) ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ವಿವಾಹವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಅದಿತಿ ರಾವ್ ಮತ್ತು ಸಿದ್ಧಾರ್ಥ್ (Aditi Rao and Siddharth) ಬಹಳ ಸಮಯದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದರು. ʻಮಹಾ ಸಮುದ್ರಮ್‌ʼ ಚಿತ್ರದಲ್ಲಿ ಸಿದ್ಧಾರ್ಥ್‌ ಮತ್ತು ಅದಿತಿ ಒಟ್ಟಾಗಿ ಅಭಿನಯಿಸಿದ್ದರು. ಅಲ್ಲಿಂದ ಈ ಜೋಡಿ ಮಧ್ಯೆ ಆಪ್ತತೆ ಹೆಚ್ಚಾಗಿತ್ತು. ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಅವರು ತಮ್ಮ ವಿವಾಹದ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ನೀಡಿಲ್ಲ.

ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ. ಈ ಮೊದಲು ಅದಿತಿ ರಾವ್​ ಹೈದರಿ ಅವರು ನಟ ಸತ್ಯದೀಪ್​ ಮಿಶ್ರಾ ಜತೆ ಮದುವೆ ಆಗಿದ್ದರು. ಆದರೆ 2013ರಲ್ಲಿ ಅವರು ವಿಚ್ಛೇದನ ಪಡೆದರು. ಅದೇ ರೀತಿ, ಸಿದ್ಧಾರ್ಥ್​ ಕೂಡ ಮೇಘನಾ ನಾರಾಯಣ್​ ಜತೆ 2003ರಲ್ಲಿ ಮದುವೆಯಾಗಿ 2007ರಲ್ಲಿ ಡಿವೋರ್ಸ್​ ಪಡೆದರು.

ಇದನ್ನೂ ಓದಿ: Aditi Rao Hydari: ಸಿದ್ಧಾರ್ಥ್ ಪೋಸ್ಟ್‌ ಹಂಚಿಕೊಂಡು ʻಜಸ್ಟ್‌ ಲುಕಿಂಗ್‌ ಲೈಕ್‌ ಎ ವಾವ್‌ʼ ಎಂದ ಅದಿತಿ!

ಅರುಣ್ ಕುಮಾರ್ ನಿರ್ದೇಶನದ “ಚಿತ್ತಾʼ ಚಿತ್ರದಲ್ಲಿ ಸಿದ್ಧಾರ್ಥ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಿಮಿಷಾ ಸಜಯನ್, ಅಂಜಲಿ ನಾಯರ್ ಮತ್ತು ಸಹಸ್ರ ಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಟಕಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿದ್ಧಾರ್ಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮುಂದೆ ನಟ ಎಸ್ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಕಾಣಿಸಿಕೊಳ್ಳಲು ಸಹ ಸಿದ್ಧರಾಗಿದ್ದಾರೆ.

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇದನ್ನೂ ಓದಿ: Aditi Rao Hydari: ʻಲವ್ಲಿ ಜೋಡಿ’ ಎನ್ನುತ್ತಿದ್ದಂತೆ ನಾಚಿ ನೀರಾದ ಅದಿತಿ ರಾವ್ ಹೈದರಿ

ಮತ್ತೊಂದೆಡೆ, ಅದಿತಿ ರಾವ್ ಹೈದರಿ ಕೊನೆಯದಾಗಿ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಿದ ಜುಬಿಲಿ ವೆಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಅಪರಶಕ್ತಿ ಖುರಾನಾ, ವಾಮಿಕಾ ಗಬ್ಬಿ, ಸಿದ್ದಾಂತ್ ಗುಪ್ತಾ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಮುಂದಿನ ಸಂಜಯ್ ಲೀಲಾ ಬನ್ಸಾಲಿಯವರ ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿಯಲ್ಲಿ ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ ಮತ್ತು ಇನ್ನೂ ಅನೇಕರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಕಜ್ರಿ ಬಬ್ಬರ್ ನಿರ್ದೇಶನದ ಲಯನೆಸ್ ಎಂಬ ಇಂಗ್ಲಿಷ್ ಚಲನಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

ಕಾಲಿವುಡ್

Shruti Haasan: ನಿರ್ದೇಶಕನ ಜತೆ ಸಖತ್‌ ರೊಮ್ಯಾನ್ಸ್‌ ಮಾಡಿದ ಕಮಲ್ ಹಾಸನ್ ಪುತ್ರಿ

Shruti Haasan: ʻಇನಿಮೆಲ್ʼ ಸಾಂಗ್‌ಗೆ ಲೋಕೇಶ್ ಕನಕರಾಜ್ ಅವರು ನಟರಾಗಿದ್ದಾರೆ. ಕಮಲ್ ಹಾಸನ್ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಸಂಪೂರ್ಣ ವಿಡಿಯೊ ಮಾರ್ಚ್ 25ರಂದು ರಿಲೀಸ್ ಆಗಲಿದೆ.

VISTARANEWS.COM


on

Shruti Haasan romance with lokesh
Koo

ಬೆಂಗಳೂರು: ಇಷ್ಟು ದಿನ ಕಾಲಿವುಡ್‌ನಲ್ಲಿ  ‘ಕೈದಿ’, ‘ಲಿಯೋ’ ಹೀಗೆ ಅನೇಕ ಹಿಟ್‌ ಸಿನಿಮಾಗಳನ್ನು ನೀಡಿದ್ದರು ಲೋಕೇಶ್ ಕನಕರಾಜ್ (Lokesh Kanagaraj) . ಇದೀಗ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ (Shruti Haasan) ಜತೆ ರೊಮ್ಯಾನ್ಸ್‌ ಮಾಡಿದ್ದಾರೆ ಲೋಕೇಶ್‌. ʻಇನಿಮೆಲ್ʼ ಸಾಂಗ್‌ (video titled Inimel) ಒಂದು ಬಿಡುಗಡೆಯಾಗುತ್ತಿದೆ. ಲೋಕೇಶ್ ಕನಕರಾಜ್ ಅವರು ನಟರಾಗಿದ್ದಾರೆ. ಕಮಲ್ ಹಾಸನ್ (Kamal Haasan) ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಆದರೆ ಈ ಹಾಡಿಗೆ ನಿರ್ದೇಶನ ಇರೋದು ಶ್ರುತಿ ಹಾಸನ್ ಅವರದ್ದು. ಈ ಹಾಡಿನ ಪ್ರೋಮೊ ರಿಲೀಸ್ ಆಗಿದ್ದು, ಸಂಪೂರ್ಣ ವಿಡಿಯೊ ಮಾರ್ಚ್ 25ರಂದು ರಿಲೀಸ್ ಆಗಲಿದೆ.

ಒಂದು ವಾರದ ಹಿಂದೆ, ಶ್ರುತಿ (Shruti Haasan) ತಮ್ಮ ಇನ್‌ಸ್ಟಾದಲ್ಲಿ ಪೋಸ್ಟರ್ ಹಂಚಿಕೊಂಡಿದ್ದರು. ʻಇನಿಮೆಲ್ ರೋಲ್ ರಿವರ್ಸ್ ಹೊಸ ಪದ್ಯ” ಎಂದು ಬರೆದು, ಲೋಕೇಶ್ ನಟರಾಗಿ, ಕಮಲ್ ಗೀತರಚನೆಕಾರರಾಗಿ ಮತ್ತು ಶ್ರುತಿ ಸಂಯೋಜಕಿಯಾಗಿ ಹೊರಹೊಮ್ಮಿದ್ದಾರೆ ಎಂದು ಬರೆದುಕೊಂಡಿದ್ದರು.

ಮಾರ್ಚ್ 25 ರಂದು ಬಿಡುಗಡೆ

ಗುರುವಾರ (ಮಾ.21) ಸಂಜೆ ಹಾಡಿನ ಟೀಸರ್ ಬಿಡುಗಡೆ ಆಗಿದೆ. ಇನಿಮೆಲ್‌ನ ಪೂರ್ಣ ವಿಡಿಯೊವನ್ನು ಮಾರ್ಚ್ 25 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಬರೆದಿದ್ದಾರೆ. ವಿಡಿಯೊದಲ್ಲಿ, ಶ್ರುತಿ ಮತ್ತು ಲೋಕೇಶ್ ಪ್ರೇಮಿಗಳ ಪಾತ್ರವನ್ನು ನಿರ್ವಹಿಸಿದ್ದಾರೆ. ಲೋಕೇಶ್ ಹಾಗೂ ಶ್ರುತಿ ಹಾಸನ್ (Shruti Haasan) ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕೂಡ ಹಾಡಿನ ಸುಳಿವು ನೀಡಿದ್ದು, ಶ್ರುತಿ ಅವರ ಗಾಯನವಿದೆ.

ಇದನ್ನೂ ಓದಿ: Shruti Haasan: ಮಗಳ ಸಿನಿಮಾ ನಿರ್ಮಾಣ ಮಾಡುತ್ತಿರುವ ʻಕಮಲ್ ಹಾಸನ್ʼ; ‘ವಿಕ್ರಮ್’ ಡೈರೆಕ್ಟರ್ ಆ್ಯಕ್ಷನ್ ಕಟ್!

ಶ್ರುತಿ ಹಾಸನ್‌ (Shruti Haasan) ಕೊನೆಯದಾಗಿ ʻಸಲಾರ್ʼನಲ್ಲಿ ಕಾಣಿಸಿಕೊಂಡರು. ಕೆಲವು ದಿನಗಳ ಹಿಂದೆ ಶ್ರುತಿ ತಮ್ಮ ಮುಂಬರುವ ಯೋಜನೆಗಳ ಕುರಿತು ಅಪ್‌ಡೇಟ್ ನೀಡಿ ʻಎರಡು ಚಿತ್ರಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡುತ್ತಿದ್ದೇನೆ. ಎರಡೂ ಇನ್ನೂ ಬಿಡುಗಡೆಯಾಗಬೇಕಿದೆʼʼಎಂದು ಹೇಳಿಕೊಂಡಿದ್ದರು. ಶನೈಲ್ ಡಿಯೋ ನಿರ್ದೇಶನದ ಮತ್ತು ಅಡಿವಿ ಶೇಷ್ ಸಹ-ನಟನಾಗಿ ಶ್ರುತಿ ಶೀಘ್ರದಲ್ಲೇ ʻಡಕಾಯತ್‌ʼ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಶ್ರುತಿ ಹೊಸ ಅವತಾರದಲ್ಲಿ ಕಾಣಲಿದ್ದಾರೆ. ಫಿಲಿಪ್ ಜಾನ್ ಅವರ ಚೆನ್ನೈ ಸ್ಟೋರಿಯಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading
Advertisement
Karnataka Weather
ಮಳೆ3 mins ago

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Sanjiv Bhatt
ದೇಶ6 mins ago

Sanjiv Bhatt: ಡ್ರಗ್ಸ್‌ ಕೇಸ್;‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷ ಜೈಲು!

Kaptaan KL is keeping
ಕ್ರೀಡೆ7 mins ago

LSG vs PBKS: ಗೆಲುವಿನ ಖಾತೆ ತೆರೆದೀತೇ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ತಂಡ?

Lok Sabha Election 2024 Yathindra Siddaramaiah calls Amit Shah a goonda BJP says No maturity
Lok Sabha Election 20247 mins ago

Lok Sabha Election 2024: ಅಮಿತ್‌ ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

Aadujeevitham box office
ಮಾಲಿವುಡ್30 mins ago

Aadujeevitham Box Office: ಮೊದಲ ದಿನವೇ ಒಳ್ಳೆಯ ಗಳಿಕೆ ಕಂಡ ‘ʻಆಡು ಜೀವಿತಂ’!

gold rate today
ಚಿನ್ನದ ದರ40 mins ago

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

attempt to murder case
ಬೆಂಗಳೂರು50 mins ago

Attempt To Murder : ಹಣದಾಸೆಗೆ ವೃದ್ಧ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Alia Bhatt hosts Hope Gala
ಬಾಲಿವುಡ್53 mins ago

Alia Bhatt: ಲಂಡನ್‌ನಲ್ಲಿ `ಹೋಪ್ ಗಾಲಾ’ ಹೋಸ್ಟ್‌ ಮಾಡಿದ ಆಲಿಯಾ; ಏನಿದರ ಉದ್ದೇಶ?

RCB
ಕ್ರೀಡೆ57 mins ago

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

Thalaivar 171 Rajinikanth first look
ಕಾಲಿವುಡ್59 mins ago

Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202423 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌