Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌ - Vistara News

ಸಿನಿಮಾ

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renuka swamy Murder case) ನಟ ದರ್ಶನ್‌ ಬಂಧಿಯಾಗಿದ್ದಾರೆ. ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಆಗಬೇಕಿದ್ದ ಸಹಕೈದಿ ಜತೆಗೆ ಸುಮಾರು 12 ನಿಮಿಷಗಳ ಕಾಲ ಟೈಮ್‌ ಸ್ಪೆಂಡ್ ಮಾಡಿದ್ದಾರೆ. ಅಭಿಮಾನಿಯೊಟ್ಟಿಗೆ ಮನದಾಳದಿಂದ ಮಾತನಾಡಿರುವ ದರ್ಶನ್‌ ಬದುಕಿನ ಪಾಠ ಮಾಡಿದ್ದಾರೆ. ಹೆಂಡತಿ ಮಕ್ಕಳೊಟ್ಟಿಗೆ ಪ್ರೀತಿಯಿಂದ ಬದುಕುವಂತೆ ತಿಳಿ ಹೇಳಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ (Renuka Swamy Murder case) ಕೂಡಾ ನಟ ದರ್ಶನ್ (Actor Darshan) ಅಭಿಮಾನಿಯಾಗಿದ್ದವನು. ಆದರೆ ಅದೇ ಅಭಿಮಾನಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ನನ್ನು ಸಹಕೈದಿ ಭೇಟಿ ಮಾಡಿದ್ದಾರೆ. ತನ್ನ ಅಭಿಮಾನಿಗೆ ಜೀವನಪಾಠ ಮಾಡಿದ್ದು, ಮಾತ್ರವಲ್ಲದೇ ಆತನಿಂದ ಧ್ಯಾನವನ್ನು ಕಲಿತುಕೊಂಡಿದ್ದಾರೆ.

ಕೊಲೆಯಾಗಿ ಹೋಗಿರುವ ರೇಣುಕಾಸ್ವಾಮಿ, ನಟ ದರ್ಶನ್‌ನ ಅಪ್ಪಟ ಅಭಿಮಾನಿ. ಅಭಿಮಾನಿ ಅನ್ನೋದಕ್ಕಿಂತ ಈತ ದರ್ಶನ್‌ನ ಅಂಧಾಭಿಮಾನಿ. ಬಾಸ್.. ಡಿ ಬಾಸ್ ಅಂತ ಇದ್ದವನಾತ. ಆದರೆ ಪವಿತ್ರಾಗೌಡಗೆ ಆಶ್ಮೀಲವಾಗಿ ಮೆಸೇಜ್ ಕಳುಹಿಸಿದ್ದ ಅನ್ನೋ ಒಂದೇ ಒಂದು ಕಾರಣಕ್ಕೆ ದರ್ಶನ್ ಮತ್ತು ಗ್ಯಾಂಗ್ ಆತನನ್ನು ಭೀಕರವಾಗಿ ಕೊಲೆ ಮಾಡಿದೆ ಎನ್ನುವ ಆರೋಪವನ್ನು ಎದುರಿಸುತ್ತಿದೆ. ಈ ಪ್ರಕರಣದಲ್ಲಿ ಎ2 ಆರೋಪಿಯಾಗಿ ದರ್ಶನ್ ಜೈಲುಪಾಲಾಗಿದ್ದಾರೆ. ಅಭಿಮಾನಿಯನ್ನೇ ಕೊಂದ ಆರೋಪ ಹೊತ್ತಿರುವ ದರ್ಶನ್, ಜೈಲಿನಲ್ಲಿ ತಮ್ಮ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದಾರೆ. ಅವರ ಜತೆ ಒಂದಿಷ್ಟು ಸಮಯವನ್ನು ಕಳೆದಿದ್ದು, ಮಾತ್ರವಲ್ಲದೇ ಬದುಕಿನ ಪಾಠವನ್ನು ಮಾಡಿದ್ದಾರೆ.

ಸನ್ನಡತೆ ಆಧಾರದಲ್ಲಿ ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಬೇಕಿದ್ದ ಸಿದ್ಧಾರೂಢ ಅವರು ದರ್ಶನ್‌ನ ಭೇಟಿ ಮಾಡಲೇಬೇಕು ಎನ್ನುವ ಆಸೆ ಹೊಂದಿದ್ದರು. ಅದಕ್ಕಾಗಿ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು. ಇದಕ್ಕೆ ಜೈಲು ಅಧಿಕಾರಿ ಕೂಡ ಒಪ್ಪಿಕೊಂಡಿದ್ದರು. ಆದರೆ ಸಿದ್ಧರೂಢರನ್ನು ಭೇಟಿಯಾಗೋದಿಕ್ಕೆ ದರ್ಶನ್‌ ಒಪ್ಪುತ್ತಾರಾ? ಅವರಿಗೆ ಮನಸಿದ್ಯಾ ಅಂತ ಅಧಿಕಾರಿಗಳು ದರ್ಶನ್‌ನ ಕೇಳಿದ್ದರು. ಆದರೆ ದರ್ಶನ್‌ ಹಿಂದೂ ಮುಂದೂ ನೋಡಲೇ ಇಲ್ಲ. ಒಂಚೂರು ಯೋಚನೆ ಮಾಡದೇ ತನ್ನನ್ನು ಭೇಟಿಯಾಗಲು ಬಯಸುತ್ತಿರುವ ಅಭಿಮಾನಿಯ ಭೇಟಿಗೆ ಒಪ್ಪಿಕೊಂಡಿದ್ದರು. ಸಿದ್ಧಾರೂಢ ಅವರನ್ನು ಒಳ ಕಳುಹಿಸುವಂತೆ ಮನವಿ ಮಾಡಿದ್ದರು.

ತನ್ನನ್ನು ಭೇಟಿಯಾಗಲು ಬಂದ ಅಭಿಮಾನಿ ಸಿದ್ಧರಾಢೂ ಜತೆಗೆ ಸುಮಾರು 12 ನಿಮಿಷ ಟೈಮ್‌ ಸ್ಪೆಂಡ್ ಮಾಡಿದ್ದ ದರ್ಶನ್, ಅದರಲ್ಲಿ 10 ನಿಮಿಷಗಳ ಕಾಲ ಧ್ಯಾನವನ್ನೇ ಮಾಡಿದ್ದರು. ಇನ್ನುಳಿದ 2 ನಿಮಿಷದಲ್ಲಿ ಅಭಿಮಾನಿ ಸಿದ್ಧಾರೂಢ ಅವರ ಜತೆಗೆ ಮಾತನಾಡಿದ ದಾಸ, ಅವರ ಬಗ್ಗೆ ವಿಚಾರಿಸಿದ್ದಾರೆ. ಏನ್ ಆಗಿದ್ದು? ಯಾವ ಕಾರಣಕ್ಕೆ ಜೈಲಿಗೆ ಬಂದಿದ್ದು ಅಂತೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತಾಗಿ, ತನ್ನ ನೋವಿನ ಬಗ್ಗೆಯಾಗಲೇ ಒಂದೇ ಒಂದು ಮಾತನ್ನು ದರ್ಶನ್ ಆಡಿಲ್ಲ. ಕೇವಲ ಸಿದ್ಧರೂಢ ಅವರ ಬಗ್ಗೆ ಮಾತ್ರವೇ ವಿಚಾರಿಸಿದ್ದಾರೆ.

ಮಾತ್ರಬಲ್ಲ ಜನರು ಕ್ಷಮಿಸಬಹುದು.. ದೇವರು ಕೂಡ ಕ್ಷಮಿಸಬಹುದು.. ಆದರೆ ತಪ್ಪು ಮಾಡಿದರೆ ಕಾನೂನು ಮಾತ್ರ ಯಾವುದೇ ಕಾರಣಕ್ಕೂ ಕ್ಷಮಿಸೋದಿಲ್ಲ. ಹೀಗಂತ ಕೊಲೆ ಆರೋಪಿಯಾಗಿರುವ ದರ್ಶನ್ ತನ್ನ ಅಭಿಮಾನಿ ಸಿದ್ಧರೂಢ ಅವರ ಬಳಿ ಈ ಮಾತನ್ನಾಡಿದ್ದಾರೆ. ನಿನ್ನನ್ನು ಕಾನೂನು ಕ್ಷಮಿಸಿ ಒಂದು ಅವಕಾಶವನ್ನು ಕೊಟ್ಟಿದೆ. ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೋ, ಹೆಂಡತಿ ಮಕ್ಕಳ ಜತೆ ಪ್ರೀತಿಯಿಂದ ಬದುಕು ಅಂತ ಸಲಹೆಯನ್ನು ಕೊಟ್ಟಿದ್ದರಂತೆ. ದರ್ಶನ್ ಆಡಿರುವ ಈ ಮಾತುಗಳನ್ನು ಕೇಳಿದರೆ ನಿಜಕ್ಕೂ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದೆ. ತಾನು ಮಾಡಿರುವ ತಪ್ಪಿನ ಅರಿವು ಆದಂತಿದೆ ಎಂದು ಸಿದ್ಧಾರೂಢ ತಿಳಿಸಿದರು.

ಇದನ್ನೂ ಓದಿ: Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ದರ್ಶನ್ ಹಾಗೂ ಸಿದ್ಧಾರೂಢ ನಡುವಿನ 12 ನಿಮಿಷಗಳ ಭೇಟಿಯಿಂದ ಅನೇಕ ವಿಚಾರಗಳು ಹೊರಬಿದ್ದಿವೆ. ಜೈಲಿನಲ್ಲಿ ದರ್ಶನ್ ಜೀವನ ಹೇಗಿದೆ ಅನ್ನೋ ನೈಜ ಚಿತ್ರಣವೊಂದು ಸಿಕ್ಕಿಂತಾಗಿದೆ. ಫ್ಯಾಮಿಲಿ ಫಸ್ಟ್ ಮಿಕ್ಕವರು ನೆಕ್ಸ್ಟ್ ಎನ್ನುವ ನಿರ್ಧಾರಕ್ಕೆ ಜೈಲಿನಲ್ಲಿರುವ ದರ್ಶನ್ ಬಂದಿದ್ದಾರೆ.

ಪಿರಮಿಡ್‌ ಧ್ಯಾನ ಹೇಳಿಸಿಕೊಂಡ ದರ್ಶನ್‌

ಜುಲೈ 8ರಂದು ಜೈಲಾಧಿಕಾರಿಗಳ ಅನುಮತಿ ಪಡೆದು ನಟ ದರ್ಶನ್‌ರನ್ನು ಭೇಟಿಯಾದ ಸಿದ್ಧರೂಢ, ಪಿರಮಿಡ್‌ ಧ್ಯಾನವನ್ನು ಹೇಳಿಕೊಟ್ಟಿದ್ದರಂತೆ. ನಾನು ನಿಮ್ಮ ಅಭಿಮಾನಿ ಎಂದಾಗ ಸಿದ್ಧರೂಢರನ್ನು ದರ್ಶನ್‌ ತಬ್ಬಿಕೊಂಡರಂತೆ. ಹತ್ತು ನಿಮಿಷ ಧ್ಯಾನ ಮಾಡಿದ ದರ್ಶನ್‌ ಇದು ಚೆನ್ನಾಗಿದೆ, ನಾನು ಇನ್ಮೆಲೆ ಇದನ್ನೂ ಮಾಡ್ತಿಲಿ ಎಂದು ಜೈಲಿನಿಂದ ಬಿಡುಗಡೆಗೊಂಡ ಕೈದಿ ಸಿದ್ಧಾರೂಢ ಹೇಳಿದ್ದಾರೆ. ದರ್ಶನ್‌ ಅವರನ್ನು ನೋಡಿದಾಗ ಬೇಸರ ಆಯಿತು. ಆದರೆ ಅವರು ನೀನು ನಾನ್‌ ಸೆಲೆಬ್ರಿಟಿ, ನಾನು ನಿನ್ನ ಸೆಲೆಬ್ರಿಟಿ ಎಂದು ಆಟೋಗ್ರಾಫ್‌ ಕೊಟ್ಟರು ಅಂತ ದರ್ಶನ್‌ ಕುರಿತು ಸಿದ್ಧರೂಢ ವಿವರಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sara Ali Khan: ವಿಮಾನದಲ್ಲಿ ಸಾರಾ ಅಲಿ ಖಾನ್‌ ಮೇಲೆ ಜ್ಯೂಸ್‌ ಚೆಲ್ಲಿದ ಗಗನಸಖಿ! ಮುಂದೇನಾಯ್ತು? ವಿಡಿಯೊ ನೋಡಿ

Sara Ali Khan: ನಟಿ ಸಾರಾ ಅಲಿ ಖಾನ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ, ಗಗನ ಸಖಿಯೊಬ್ಬರು ಸಾರಾ ಅಲಿ ಖಾನ್ ಉಡುಪಿನ ಮೇಲೆ ಆಕಸ್ಮಾತ್ ಆಗಿ ಜ್ಯೂಸ್ ಬೀಳಿಸಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗಗಮಸಖಿ ಜ್ಯೂಸ್‌ಗಳನ್ನು ಪ್ರಯಾಣಿಕರಿಗೆ ನೀಡುತ್ತಿರುವಾಗ ಆಕಸ್ಮಿಕವಾಗಿ ನಟಿಯ ಡ್ರೆಸ್‌ ಮೇಲೆ ಜ್ಯೂಸ್ ಅನ್ನು ಚೆಲ್ಲಿದ್ದಾಳೆ. ಇದರಿಂದ ನಟಿ ಅಸಮಾಧಾನಗೊಂಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

VISTARANEWS.COM


on

Sara Ali Khan
Koo


ಮುಂಬೈ: ನಟಿ ಸಾರಾ ಅಲಿ ಖಾನ್ (Sara Ali Khan) ಅವರು ತಮ್ಮ ನಟನೆಯ ಮೂಲಕ ಬಾಲಿವುಡ್‌ನಲ್ಲಿ ಛಾಪು ಮೂಡಿಸಿದ್ದಾರೆ. ಇತ್ತೀಚಿಗೆ ಅವರು ವಿಮಾನದಲ್ಲಿ ಪ್ರಯಾಣಿಸುವಾಗ ಅನಿರೀಕ್ಷಿತ ಘಟನೆಯೊಂದು ನಡೆದಿತ್ತು. ಗಗನ ಸಖಿಯೊಬ್ಬರು ಸಾರಾ ಅಲಿ ಖಾನ್‌ ಉಡುಪಿನ ಮೇಲೆ ಆಕಸ್ಮಾತ್‌ ಆಗಿ ಜ್ಯೂಸ್‌ ಬೀಳಿಸಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

Sara Ali Khan
Sara Ali Khan

ವೈರಲ್ ವಿಡಿಯೊದಲ್ಲಿ ನಟಿ ಸಾರಾ ಅಲಿ ಖಾನ್ ಸುರುಳಿ ಕೂದಲು ಮತ್ತು ದೊಡ್ಡ ಹೂಪ್ ಕಿವಿಯೋಲೆಗಳನ್ನು ಧರಿಸಿ ಬಿಳಿ ಮತ್ತು ಗುಲಾಬಿ ಬಣ್ಣದ ಡ್ರೆಸ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಆ ವೇಳೆ ಗಗಮಸಖಿ ಜ್ಯೂಸ್‌ಗಳನ್ನು ಪ್ರಯಾಣಿಕರಿಗೆ ನೀಡುತ್ತಿರುವಾಗ ಆಕಸ್ಮಿಕವಾಗಿ ನಟಿಯ ಡ್ರೆಸ್‍ನ ಮೇಲೆ ಜ್ಯೂಸ್ ಅನ್ನು ಚೆಲ್ಲಿದ್ದಾಳೆ. ಇದರಿಂದ ನಟಿ ಅಸಮಾಧಾನಗೊಂಡಿದ್ದಾರೆ. ಆಗ ನಟಿ ಗಗನಸಖಿಯನ್ನು ಸಿಟ್ಟಿನಿಂದ ದುರುಗುಟ್ಟಿ ನೋಡುತ್ತ ಎದ್ದು ವಾಶ್ ರೂಮ್‌ಗೆ ಹೋಗಿ ಮರಳಿ ಬರುತ್ತಿರುವಾಗ ನಟಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದು ಸಖತ್ ವೈರಲ್ ಆಗಿದೆ.

ವೈರಲ್ ವಿಡಿಯೊಗೆ ಹಲವರು ಕಾಮೆಂಟ್‍ಗಳ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೆಲವು ಅಭಿಮಾನಿಗಳು ಈ ಘಟನೆಯು ಪ್ರಚಾರಕ್ಕಾಗಿ ಮಾಡಿರಬಹುದು ಅಥವಾ ಮುಂಬರುವ ಯೋಜನೆಯ ದೃಶ್ಯವಾಗಿರಬಹುದು ಎಂದು ಆಶ್ಚರ್ಯ ಪಡುತ್ತಿದ್ದಾರೆ. ಆದಾಗ್ಯೂ, ಘಟನೆಯ ಸ್ವರೂಪದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವನ್ನು ಮಾಡಲಾಗಿಲ್ಲ.

Sara Ali Khan
Sara Ali Khan

ವೃತ್ತಿಪರ ರಂಗದಲ್ಲಿ ಸಾರಾ ಅಲಿ ಖಾನ್ ನಟನೆಯ ಹಲವು ಆಫರ್‌ಗಳನ್ನು ಹೊಂದಿದ್ದಾರೆ. ಧರ್ಮ ಪ್ರೊಡಕ್ಷನ್ಸ್ ಮತ್ತು ಸಿಖ್ಯಾ ಎಂಟರ್‌ಟೈನ್‍ಮೆಂಟ್ ನಿರ್ಮಿಸುತ್ತಿರುವ ಆಕ್ಷನ್-ಕಾಮಿಡಿ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ ಎದುರು ಅವರು ಮೊದಲ ಬಾರಿಗೆ ನಟಿಸಲಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಹಾಸಿಗೆ ಹಿಡಿದಿದ್ದಾರೆಯೇ? ಭಾರೀ ವೈರಲಾಗ್ತಿದೆ ಈ ಫೋಟೊ

ಹಾಗೇ ನಟಿ ಸಾರಾ ಅಲಿ ಖಾನ್ ಅವರು ಅನುರಾಗ್ ಬಸು ನಿರ್ದೇಶನದ “ಮೆಟ್ರೋ ಇನ್ ಡಿನೋ” ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆದಿತ್ಯ ರಾಯ್ ಕಪೂರ್, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್ ಮತ್ತು ನೀನಾ ಗುಪ್ತಾ ಸೇರಿದಂತೆ ಅನೇಕರು ನಟಿಸಲಿದ್ದಾರೆ. ಸಿನಿಮಾರಂಗದಲ್ಲಿ ಸಾರಾ ಅವರ ಅಭಿನಯವನ್ನು ನೋಡಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

Continue Reading

ಸಿನಿಮಾ

Actor Darshan: ನಟ ದರ್ಶನ್‌ಗೆ ಜೈಲೂಟ ಫಿಕ್ಸ್‌; ಕೋರ್ಟ್‌ ಮನೆಯೂಟದ ಅರ್ಜಿ ವಜಾಗೊಳಿಸಿದ್ದೇಕೆ?

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಇಂದೂ ನಿರಾಸೆ ಎದುರಾಗಿದೆ. ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಜೈಲೂಟವೇ ಫಿಕ್ಸ್‌ ಆಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಇಂದೂ ನಿರಾಸೆ ಎದುರಾಗಿದೆ. ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಜೈಲೂಟವೇ ಫಿಕ್ಸ್‌ ಆಗಿದೆ.

ದರ್ಶನ್ ಪರ ವಕೀಲರು ಹಾಗೂ ಸರ್ಕಾರಿ ಪರ ಎಸ್‌ಪಿಪಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ವಿಶ್ವನಾಥ ಸಿ. ಗೌಡರ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಅದರಂತೆ ತೀರ್ಪು ಪ್ರಕಟಗೊಂಡಿದೆ.

ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಇದು

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್‌ ಅರ್ಜಿ ವಜಾಗೊಂಡಿದೆ.

ದರ್ಶನ್ ಪರ ವಕೀಲ ವಕೀಲರ ವಾದ ಏನಾಗಿತ್ತು?

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಹೇಳಿದ್ದರು.

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರತಿವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಆರೋಪಮುಕ್ತನಾಗಿ ಶೀಘ್ರ ಹೊರ ಬರಲಿ; ಹಿರಿಯ ನಟಿ ಗಿರಿಜಾ ಲೋಕೇಶ್ ಹಾರೈಕೆ

ಸದ್ಯ ದರ್ಶನ್ ಮೆಡಿಕಲ್ ರಿಪೋರ್ಟ್‌ನಲ್ಲಿ ಬೆಡ್ ರೆಸ್ಟ್ ಬೇಕು ಎಂದಿದೆ. ಜೈಲು ವೈದ್ಯಾಧಿಕಾರಿಗಳು ಅಗತ್ಯವಿದ್ದರೆ ವಿಶೇಷ ಆಹಾರವನ್ನು ನೀಡಬಹುದು. ಜೈಲು ನಿಯಮ 728 ರಲ್ಲಿ ಬಟ್ಟೆ, ಹಾಸಿಗೆ ನೀಡುವ ನಿಯಮವಿದೆ. ಇದು ಕೊಲೆ ಆರೋಪಿಯನ್ನು ಹೊರತು ಪಡಿಸಿ ಬೇರೆ ಕೈದಿಗಳಿಗೆ ಅನ್ವಯವಾಗುತ್ತದೆ. ದರ್ಶನ್ ನಾನು ನಿತ್ಯ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದೆ. ಹೀಗಾಗಿ ಜೈಲಿನಲ್ಲಿ ನೀಡುವ ಊಟದ ಜೊತೆಗೆ ಎಕ್ಟ್ರಾ ಪ್ರೋಟಿನ್ ನೀಡಬೇಕೆಂದು ಮಾನವಿ ಮಾಡಿದ್ದಾರೆ. ಪ್ರತಿ ಭಾರಿ ನಾನು ಮನೆಯಲ್ಲಿ ವ್ಯಾಯಾಮ ಮಾಡ್ತಿದ್ದೆ. ಪ್ರೋಟಿನ್ ಆಹಾರ ತಿನ್ನುತ್ತಿದ್ದೆ. ಹೀಗಾಗಿ ಮನೆ ಊಟ ಬೇಕು ಎಂದಿದ್ದಾರೆ. ದರ್ಶನ್ ಬಂಧನವಾಗೋವರೆಗೂ ವ್ಯಾಯಾಮ ಮಾಡಿಕೊಂಡಿದ್ದರು, ಈಗ ಬಂಧಿಯಾಗಿದ್ದಾರೆ. ಜೈಲಿನಲ್ಲಿದ್ದಾಗಲೂ ಎಲ್ಲ ಸೌಲಭ್ಯಗಳು ಬೇಕೆಂದರೆ ಹೇಗೆ ಎಂದು ಪ್ರಶ್ನಿಸಿದ್ದರು.

Continue Reading

ಸಿನಿಮಾ

Toxic Movie: ಯಶ್‌ ಚಿತ್ರಕ್ಕೆ ಎದುರಾಯ್ತು ಕಾನೂನು ಸಂಕಷ್ಟ; ‘ಟಾಕ್ಸಿಕ್’ ವಿರುದ್ಧ ವಕೀಲ ಕೋರ್ಟ್‌ ಮೆಟ್ಟಿಲೇರಿದ್ದೇಕೆ?

Toxic Movie: ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ‘ಟಾಕ್ಸಿಕ್‌’ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಚಿತ್ರದ ವಿರುದ್ಧ ವಕೀಲ ಜಿ. ಬಾಲಾಜಿ ನಾಯ್ಡು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ, ಹಾಗಾದರೆ ಏನಿದು ವಿವಾದ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Toxic Movie
Koo

ಬೆಂಗಳೂರು: ಪ್ರಶಾಂತ್‌ ನೀಲ್‌ (Prashanth Neel) ನಿರ್ದೇಶನದ ಕೆಜಿಎಫ್‌ (KGF) ಸರಣಿ ಚಿತ್ರಗಳ ಬಳಿಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಲಕ್‌ ಬದಲಾಗಿದೆ. ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಬದಲಾಗಿದ್ದಾರೆ. ಸದ್ಯ ಯಶ್‌ ‘ಟಾಕ್ಸಿಕ್‌’ ಚಿತ್ರ (Toxic Movie)ದಲ್ಲಿ ಅಭಿನಯಿಸುತ್ತಿದ್ದು, ಈಗಾಗಲೇ ಇದು ಇಡೀ ದೇಶದ ಗಮನ ಸೆಳೆದಿದೆ. ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮೂಡಿದೆ. ಈ ಮಧ್ಯೆ ಚಿತ್ರತಂಡಕ್ಕೆ ಕಾನೂನು ಸಂಕಷ್ಟವೊಂದು ಎದುರಾಗಿದೆ. ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಹೈಕೋರ್ಟ್‌ (Karnataka High Court)ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ.

ಈ ಸಂಬಂಧ ಇದೀಗ ಚಿತ್ರ ನಿರ್ಮಿಸುತ್ತಿರುವ ಕೆವಿಎನ್ ಫಿಲ್ಮ್ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಿದೆ. ಜತೆಗೆ ಸರ್ಕಾರ ಮತ್ತು ಎಚ್ಎಂಟಿ ಕಂಪನಿಗೂ ನೋಟಿಸ್ ಜಾರಿ ಮಾಡಲಾಗಿದೆ. ಪೀಣ್ಯ ಪ್ಲಾಂಟೇಷನ್ ಜಮೀನಿನ 20.07 ಎಕರೆಯಲ್ಲಿ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅರಣ್ಯ ಭೂಮಿಯಲ್ಲಿ ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಾಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. ಸದ್ಯ ನೋಟಿಸ್ ಜಾರಿಗೆ ಆದೇಶಿಸಿ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ. ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆಯನ್ನು ಆ. 19ಕ್ಕೆ ಮುಂದೂಡಿದೆ.

ಏನಿದು ವಿವಾದ?

ಎಚ್ಎಂಟಿ ಸಂಸ್ಥೆ ಈ ಭೂಮಿಯನ್ನು ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಿತ್ತು. ಇದನ್ನು ಕೆನರಾ ಬ್ಯಾಂಕ್ ಕೆವಿಎನ್ ಸಿನಿಮಾ ನಿರ್ಮಾಣ ಸಂಸ್ಥೆಗೆ ನೀಡಿದೆ. ಇದು ಅರಣ್ಯ ಭೂಮಿ. ಇಲ್ಲಿ ಅನಧಿಕೃತವಾಗಿ ಸೆಟ್‌ ಹಾಕಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಸದ್ಯ ಕೋರ್ಟ್‌ನ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿದೆ.

ಕುತೂಹಲ ಕೆರಳಿಸಿದ ಟಾಕ್ಸಿಕ್‌

2022ರಲ್ಲಿ ‘ಕೆಜಿಎಫ್‌ 2’ (KGF 2ತೆರೆಕಂಡಿತ್ತು. ಅದಾಗಿ ಎರಡೂವರೆ ವರ್ಷ ಕಳೆದರೂ ಯಶ್‌ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಹೀಗಾಗಿ ಅಭಿಮಾನಿಗಳು ʼಟಾಕ್ಸಿಕ್‌ʼ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಚಿತ್ರತಂಡವು ಇದುವರೆಗೆ ಯಾವ ಗುಟ್ಟನ್ನೂ ಬಿಟ್ಟುಕೊಡದೆ ಕುತೂಹಲವನ್ನು ಕಾಯ್ದುಕೊಂಡು ಬಂದಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದು, ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಇದನ್ನೂ ಓದಿ: Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್? 

ನಾಯಕಿ ಯಾರು?

ಸದ್ಯ ಯಶ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಬಿಟ್ಟರೆ ತಾರಾಗಣದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಎನ್ನುವುದನ್ನು ಚಿತ್ರತಂಡ ರಿವೀಲ್‌ ಮಾಡಿಲ್ಲ. ಈ ಬಹು ನಿರೀಕ್ಷಿತ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ ಎನ್ನುವ ಕುತೂಹಲ ಸಿನಿಪ್ರಿಯರಲ್ಲಿ ಮನೆ ಮಾಡಿದೆ. ಮೂಲದ ಪ್ರಕಾರ ಕಾಲಿವುಡ್‌ ಸೂಪರ್‌ ಸ್ಟಾರ್‌ ನಯನತಾರಾ ಇದೇ ಮೊದಲ ಬಾರಿಗೆ ಯಶ್‌ ಜತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಹೊರ ಬರಬೇಕಿದೆ.

Continue Reading

ಕರ್ನಾಟಕ

Kannada New Movie: ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್‌ ರಾಜ್‌ಕುಮಾರ್; ‘ಕುಬುಸ’ ಚಿತ್ರದ ಟ್ರೈಲರ್ ಬಿಡುಗಡೆ

Kannada New Movie: ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ‘ಕುಬುಸ’ ಚಿತ್ರದ ಟ್ರೈಲರ್ ಅನಾವರಣ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ. ಈ ವೇಳೆ‌ ಮಾತನಾಡಿದ ಅವರು, ಒಬ್ಬ ಮಹಿಳೆ ನಿರ್ಮಾಪಕರಾಗಿ ಉತ್ತಮ ಚಲನಚಿತ್ರವನ್ನು ಕಷ್ಟಪಟ್ಟು ನಿರ್ಮಿಸಿದ್ದಾರೆ. ನಾನು ಯಾವತ್ತಿಗೂ ಕಲಾವಿದರಿಗೆ ಬೆಂಬಲವಾಗಿ ಇರುತ್ತೇನೆ ಎಂದರು. ಈ ಚಲನಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

VISTARANEWS.COM


on

Kubusa Kannada movie trailer release
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್‌ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು (Kannada New Movie). ಬೆಂಗಳೂರಿನ ವಸಂತನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ‘ಕುಬುಸ’ ಚಿತ್ರದ ಟ್ರೈಲರ್ ಅನಾವರಣ ಮಾಡಿ, ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ವೇದಿಕೆಯ ಮೇಲೆ ಕೇಂದ್ರ ಬಿಂದುವಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಡಾ. ಮಂಜಮ್ಮ ಜೋಗತಿ, ಹೊಸಪೇಟೆಯ ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್, ಸಮಾಜ ಸೇವಕ ಸಿದ್ದಾರ್ಥ್ ಸಿಂಗ್ ಪಾಲ್ಗೊಂಡಿದ್ದರು.

ಈ ವೇಳೆ‌ ಮಾತನಾಡಿದ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ಒಬ್ಬ ಮಹಿಳೆ ನಿರ್ಮಾಪಕರಾಗಿ ಉತ್ತಮ ಚಲನಚಿತ್ರವನ್ನು ಕಷ್ಟಪಟ್ಟು ನಿರ್ಮಿಸಿದ್ದಾರೆ. ನಾನು ಯಾವತ್ತಿಗೂ ಕಲಾವಿದರಿಗೆ ಬೆಂಬಲವಾಗಿ ಇರುತ್ತೇನೆ ಎಂದು ತಿಳಿಸಿದ ಅವರು, ಈ ಚಲನಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ: SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

ಕಾರ್ಯಕ್ರಮದಲ್ಲಿ ಹೋಂ ಆಫ್ ಹೋಪ್ ಸಂಸ್ಥಾಪಕ ಆಟೋರಾಜ್, ಡ್ಯಾನ್ಸ್ ಹರಿಪ್ರಸಾದ್, ಕೃಷ್ಣ ರಿತ್ತಿ, ಯೂಸುಫ್, ಇಮ್ತಿಯಾಜ್, ರಾಜು ಉಪ್ಪರ್, ನಂದೀಶ, ಇತರರು ಉಪಸ್ಥಿತರಿದ್ದರು.

ಟ್ರೈಲರ್ ರಿಲೀಸ್ ಬಳಿಕ ಚಿತ್ರದ ನಾಯಕ ನಟರಾಜ್ ಎಸ್. ಭಟ್ ಮಾತನಾಡಿ, ಇಂತಹ ಚಲನಚಿತ್ರ ನಿರ್ಮಾಣ ಮಾಡಲು ವಿ. ಶೋಭಾ ಆದಿ ನಾರಾಯಣ ಅವರಂತಹ ಒಳ್ಳೆಯ ವ್ಯಕ್ತಿ ಮತ್ತೆ ಸಿಗುವುದಿಲ್ಲ. ಈ ರೀತಿ ಚಿತ್ರಗಳು ಗೆಲ್ಲಬೇಕು ಈ ಸಿನಿಮಾ ಗೆದ್ದಾಗ ನಿರ್ಮಾಪಕರು ಮತ್ತೆ ಸಿನಿಮಾ ಮಾಡಲು ಮುಂದಾಗುತ್ತಾರೆ. ಇಡೀ ತಂಡ ಈ ಚಿತ್ರಕ್ಕಾಗಿ ಬಹಳಷ್ಟು ಕೆಲಸ ಮಾಡಿದ್ದಾರೆ .ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ ನಿಮ್ಮ ಸಹಕಾರ ಕುಬುಸ ಸಿನಿಮಾ ಮೇಲೆ ಇರಲಿ ಎಂದರು.

ನಿರ್ದೇಶಕ ರಘುರಾಮ ಚರಣ್ ಮಾತನಾಡಿ, ಪುಟ್ಟ ಕನಸು ದೊಡ್ಡದಾಗುತ್ತಾ ಬಂತು, ಅದು ಈಗ ಸಿನಿಮಾ ರೂಪತಾಳಿದೆ. ಇದು ಯಾವ ಜಾನರ್ ಎಂದು ಹೇಳಲು ಆಗುವುದಿಲ್ಲ. ಕಥೆ ಬರೆಯುವಾಗ ಏನು ವಿಜ್ವಲ್ ಬಂತು ಅದನ್ನು ಶೂಟ್ ಮಾಡಿದ್ದೇವೆ. 1960ರ ಕಾಲಘಟ್ಟದಲ್ಲಿ ಬರುವ ಕಥೆ ಇದು. ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ ಎಂದು ಮಾಹಿತಿ ನೀಡಿದರು.

ವಿ. ಶೋಭಾ ಆದಿನಾರಾಯಣ ಮಾತನಾಡಿ, ಕುಬುಸ ಚಲನಚಿತ್ರ ಹಳ್ಳಿ ಸೊಗಡಿನ ಚಿತ್ರಕಥೆಯಾಗಿದ್ದು ಈ ಚಿತ್ರದಲ್ಲಿ ನನಗೆ ತುಂಬಾ ಅನುಭವವಾಗಿದ್ದು, ಜನರ ಮನಸ್ಸಿನಲ್ಲಿ ಉಳಿಯುವಂತಹ ಸಿನಿಮಾಗಳನ್ನು ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡುತ್ತೇನೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಇದೇ ತಿಂಗಳು ಜುಲೈ 26ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಪ್ರೇಕ್ಷಕರು ಸಿನಿಮಾ ನೋಡಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಜನಪ್ರಿಯ ಲೇಖಕ ಕುಂ.ವೀರಭದ್ರಪ್ಪ ಅವರ ಕಥೆ ಆಧಾರಿಸಿದ ಸಿನಿಮಾ ‘ಕುಬುಸ’ ಸಿನಿಮಾದ ಮೂಲ ಕತೆಯಲ್ಲಿ ಬಳ್ಳಾರಿಯ ಭಾಷಾ ಸೊಗಡನ್ನು ಕಾಣಬಹುದು. ಇದು ಮ್ಯೂಸಿಕಲ್ ಸಿನಿಮಾ ಕೂಡ ಆಗಿದ್ದು ,ಸನ್ನಿವೇಶಕ್ಕೆ ತಕ್ಕ ಹಾಗೆ ನಾಲ್ಕು ಹಾಡುಗಳಿವೆ . ಪ್ರದೀಪ್ ಚಂದ್ರ ಅವರ ಸಂಗೀತ ಸಂಯೋಜನೆ ಚಿತ್ರಕಿದ್ದು, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಶರ್ಮ ಎ. ಕ್ಯಾಮರಾ, ಶಿವಮೂರ್ತಿ ದೋಣಿಮಲೆ ಸಹ ನಿರ್ದೇಶನ ಚಿತ್ರಕ್ಕಿದೆ. ಕುಬುಸ ಸಿನಿಮಾ ವಿ. ಶೋಭಾ ಆದಿನಾರಾಯಣ ಅವರ ಚೊಚ್ಚಲ ನಿರ್ಮಾಣದ ಚಲನಚಿತ್ರವಾಗಿದೆ. ವಿ. ಶೋಭಾ ಸಿನಿಮಾಸ್ ಬ್ಯಾನರ್ ನಡಿ ಕುಬುಸ ಚಿತ್ರವನ್ನು ನಿರ್ಮಿಸಿದ್ದಾರೆ.

Continue Reading
Advertisement
Maharaja Trophy
ಕ್ರೀಡೆ36 seconds ago

Maharaja Trophy: ಮೈಸೂರು ವಾರಿಯರ್ಸ್ ತಂಡ ಸೇರಿದ ದ್ರಾವಿಡ್ ಪುತ್ರ ಸಮಿತ್

Monsoon Fashion
ಫ್ಯಾಷನ್13 mins ago

Monsoon Fashion: ಮಾನ್ಸೂನ್‌ ಸೀಸನ್‌ಗೆ ಇಶಾನಿ ಶೆಟ್ಟಿಯ ಫ್ಯಾಷನ್‌ ಟಿಪ್ಸ್‌ ಹೀಗಿದೆ!

Paris Olympics 2024
ಕ್ರೀಡೆ22 mins ago

Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

Viral Video
Latest28 mins ago

Viral Video: ಜಾರಿ ಬಿದ್ದ ವಧುವನ್ನು ಎತ್ತದ ವರ; ಸಹೋದರನಿಂದ ಮದುವೆ ಮಂಟಪದಲ್ಲೇ ಬಿತ್ತು ಗೂಸಾ!

Lokayukta
ರಾಜಕೀಯ31 mins ago

Lokayukta: ಲೋಕಾಯುಕ್ತ ಎಡಿಜಿಪಿಯಾಗಿ ಮನೀಶ್‌ ಕರ್ಬೀಕರ್‌, ಅಗ್ನಿಶಾಮಕ ದಳ ಡಿಜಿಪಿಯಾಗಿ ಪ್ರಶಾಂತ್ ಕುಮಾರ್ ಥಾಕೂರ್‌ ನೇಮಕ

Arecanut Price
ಪರಿಸರ39 mins ago

ವಿಸ್ತಾರ ಗ್ರಾಮ ದನಿ: ಅಡಿಕೆ ಬೆಳೆಗಾರರೂ ‘ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ʼ ಸಲ್ಲಿಸಬೇಕಾ? ಸಲ್ಲಿಸದಿದ್ದರೆ ಏನಾಗುತ್ತದೆ?

BJP
ದೇಶ40 mins ago

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೂ ಮೊದಲು ಕಾರ್ಯಕಾರಿ ಅಧ್ಯಕ್ಷರ ನೇಮಕ; ಶೀಘ್ರದಲ್ಲೇ ಆದೇಶ?

Tax Saving Tips
ಮನಿ-ಗೈಡ್47 mins ago

Tax Saving Tips: 10 ಲಕ್ಷ ರೂ. ಆದಾಯ ಇದ್ದರೂ ತೆರಿಗೆಯಿಂದ ಪಾರಾಗಲು ಸಾಧ್ಯ! ಇಲ್ಲಿದೆ ಸರಳ ಲೆಕ್ಕಾಚಾರ!

Murder Case
Latest1 hour ago

Murder Case: ʼಸಾಫ್ಟ್ ಟಚ್ʼ ಸ್ಪಾಗೆ ಹೋಗಿದ್ದ ಕ್ರಿಮಿನಲ್‌ನನ್ನು ಪ್ರೇಯಸಿ ಎದುರೇ ತುಂಡು ತುಂಡಾಗಿ ಕತ್ತರಿಸಿದರು!

Successful liver transplant surgery at Fortis Hospital
ಕರ್ನಾಟಕ1 hour ago

Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್7 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ8 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ9 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌