Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ! - Vistara News

ಸಿನಿಮಾ

Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

Actor Darshan: ದರ್ಶನ್ ಗೆ ಸಿಮ್ ಕೊಟ್ಟಿದ್ದ ಬಗ್ಗೆ ಹೇಮಂತ್ ವಿಚಾರಣೆ ಆಗಿದೆ. ಅದೇ ರೀತಿ ಎ1 ಆರೋಪಿ ಪವಿತ್ರಾಗೌಡಗೆ ಸಿಮ್ ಕಾರ್ಡ್ ಕೊಟ್ಟಿದ್ದ ವ್ಯಕ್ತಿ ವಿಚಾರಣೆ ಆಗಿದೆ. ಮನೋಜ್ ಎಂಬಾತನ ವಿಚಾರಣೆ ನಡೆಸಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಮನೋಜ್ ಬಸವೇಶ್ವರನಗರ ನಿವಾಸಿಯಾದ್ದರು.

VISTARANEWS.COM


on

Actor Darshan Renuka Swamy assault scene recorded on iPhone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ (Actor Darshan) ಆರೋಪಿಗಳು ಹಲ್ಲೆ ಬಳಿಕ ಐ ಫೋನ್‌ನಲ್ಲಿ ರೆಕಾರ್ಡ್‌ ಕೂಡ ಮಾಡಿರುವುದು ತಿಳಿದು ಬಂದಿದೆ. ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಾಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು ಮಸ್ತ್‌ ಪ್ಲ್ಯಾನ್‌ ಕೂಡ ಆಗಿತ್ತು. ಅದರಲ್ಲಿಯೇ ಒಬ್ಬ ಆರೋಪಿ ಹಲ್ಲೆ ನಡೆದ ಬಳಿಕ ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರಂತೆ. ಸಿನಿಮಾ ಶೈಲಿಯಲ್ಲಿ ನಡೆದಿದ್ದ ಕೃತ್ಯವನ್ನು ಸೆರೆ ಹಿಡಿದಿದ್ದಾರೆ.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿಂದಂತೆ. ಐವರು ಆರೋಪಿಗಳಿಗೆ ಸಿಮ್ ಕಾರ್ಡ್ ಕೊಟ್ಟಿದ್ದವರ ವಿಚಾರಣೆಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಮಾಡುತ್ತಿದ್ದಾರೆ. ಸಿಮ್ ಕಾರ್ಡ್ ಕೊಟ್ಟ ಬಗ್ಗೆ ಐವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. A2 ಆರೋಪಿ ನಟ ದರ್ಶನ್‌ಗೆ ಹೇಮಂತ್ ಸಿಮ್ ಕೊಟ್ಟಿದ್ದ .ಹೇಮಂತ್ ವಿಚಾರಣೆ ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿದ್ದರು. ಬೆಂಗಳೂರಿನ ಪ್ರಕಾಶ್ ನಗರ ನಿವಾಸಿ ಹೇಮಂತ್.

ದರ್ಶನ್ ಗೆ ಸಿಮ್ ಕೊಟ್ಟಿದ್ದ ಬಗ್ಗೆ ಹೇಮಂತ್ ವಿಚಾರಣೆ ಆಗಿದೆ. ಅದೇ ರೀತಿ ಎ1 ಆರೋಪಿ ಪವಿತ್ರಾಗೌಡಗೆ ಸಿಮ್ ಕಾರ್ಡ್ ಕೊಟ್ಟಿದ್ದ ವ್ಯಕ್ತಿ ವಿಚಾರಣೆ ಆಗಿದೆ. ಮನೋಜ್ ಎಂಬಾತನ ವಿಚಾರಣೆ ನಡೆಸಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಮನೋಜ್ ಬಸವೇಶ್ವರನಗರ ನಿವಾಸಿಯಾದ್ದರು. ಹಾಗೂ ಉಳಿದ ಮೂವರು ಆರೋಪಿಗಳಿಗೆ ಸಿಮ್ ಕೊಟ್ಟವರ ವಿಚಾರಣೆ ಆಗಿದೆ. ಕಾರ್ತಿಕ್, ಕೇಶವಮೂರ್ತಿ, ನಿಖಲಿ ನಾಯಕ್ ಗೆ ಸಿಮ್ ಕಾರ್ಡ್ ಕೊಟ್ಟವರ ವಿಚಾರಣೆ ಕೂಡ ಆಗಿದೆ.

ಇದನ್ನೂ ಓದಿ: Kannada New Movie: ಸದ್ದಿಲ್ಲದೇ ಒಟಿಟಿಗೆ ಲಗ್ಗೆ ಇಟ್ಟ ರಂಗಾಯಣ ರಘು ಅಭಿನಯದ ‘ಮೂರನೇ ಕೃಷ್ಣಪ್ಪ’ ಸಿನಿಮಾ!

ಕಾರ್ತಿಕ್ ಎಂಬುವ ವೇಲು ಎಂಬಾತನ ಹೆಸರಲ್ಲಿದ್ದ ಸಿಮ್ ಬಳಸಿದ್ದ . ಗೀತಾ ಹೆಸರಲ್ಲಿದ್ದ ಸಿಮ್ ಬಳಸಿದ್ದ ನಿಖಿಲ್ ನಾಯಕ್. ಐದು ಮಂದಿಯನ್ನ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ ಪೊಲೀಸರು. ಕೊಲೆ ವೇಳೆ ಬೇರೊಬ್ಬರ ಹೆಸರಲ್ಲಿದ್ದ ಸಿಮ್ ಕಾರ್ಡ್ ಆರೋಪಿಗಳು ಬಳಸಿದ್ದರು. ಐವರು ಆರೋಪಿಗಳ ಪೋನ್ ಪರಿಶೀಲನೆ ವೇಳೆ ಸಿಮ್ ಕಾರ್ಡ್ ಸಿಕ್ರೇಟ್ ಬಯಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Tanisha Kuppanda: ಪೂಜಾ ಗಾಂಧಿ ಜತೆ ಲಿಪ್ ಲಾಕ್; 6 ಟೇಕ್ಸ್‌ ತೆಗೆದುಕೊಂಡ ಅನುಭವ ಹಂಚಿಕೊಂಡ ʻಬೆಂಕಿʼ ತನಿಷಾ!

Tanisha Kuppanda: ದಂಡುಪಾಳ್ಯ 2 ಸಿನಿಮಾದಲ್ಲಿ ನಟಿ ಪೂಜಾ ಗಾಂಧಿಯವರಿಗೆ ಲಿಪ್ ಲಾಕ್ (Liplock) ಮಾಡಿರುವ ಬಗ್ಗೆ ತನಿಷಾ ಮಾತನಾಡಿದ್ದಾರೆ.  ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿ ಸುದ್ದಿಯಾಗಿದ್ದರು.

VISTARANEWS.COM


on

Tanisha Kuppanda Lip lock with Pooja Gandhi shares her experience
Koo

 ತನಿಷಾ ಕುಪ್ಪಂಡ (Tanisha Kuppanda) ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿ ಸುದ್ದಿಯಾಗಿದ್ದರು. ಇದೀಗ  ದಂಡು ಪಾಳ್ಯ ಸಿನಿಮಾದಲ್ಲಿ ಪೂಜಾ ಗಾಂಧಿಗೆ ಕಿಸ್ ಮಾಡಿದ ಅನುಭವದ ಬಗಗೆ ಹೇಳಿಕೊಂಡಿದ್ದಾರೆ.

 ಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ (Tanisha Kuppanda) ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ‘ನನ್ನಮ್ಮ ಸೂಪರ್ ಸ್ಟಾರ್-3’ರಲ್ಲಿ (Nanamma Super Star 3) ತನಿಷಾ ಭಾಗಿಯಾಗಿದ್ದರು.  ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿ ಸುದ್ದಿಯಾಗಿದ್ದರು. ಇದೀಗ ದಂಡುಪಾಳ್ಯ 2 ಸಿನಿಮಾದಲ್ಲಿ ನಟಿ ಪೂಜಾ ಗಾಂಧಿಯವರಿಗೆ ಲಿಪ್ ಲಾಕ್ (Liplock) ಮಾಡಿರುವ ಬಗ್ಗೆ ಮಾತನಾಡಿದ್ದಾರೆ. 

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

ಈ ಬಗ್ಗೆ ತನಿಷಾ ಮಾತನಾಡಿ ʻʻಅದು ಪ್ರಾಪರ್ ಕಿಸ್ ಥರ ಇರಲಿಲ್ಲ, ಬಲವಂತದ ಕಿಸ್ಸಿಂಗ್ ಸೀನ್ ಅದಾಗಿತ್ತು, ಹಾಗಾಗಿ ನಾನು ಪೂಜಾ ಗಾಂಧಿಯವರಿಗೆ ಗಂಡಸರ ರೀತಿ ಕಿಸ್ ಮಾಡಿದ ಹಾಗಿತ್ತು, ಅದಕ್ಕೆ ಪೂಜಾ ಅವರು ಅಮ್ಮ ನೀನು ತುಂಬಾ ರಫ್ ಆಗಿ ಇದ್ಯಾ.. ಅಂದಿದ್ರುʼʼ ಎಂದು ಶೂಟಿಂಗ್ ದಿನಗಳನ್ನ ಮೆಲುಕು ಹಾಕಿದ್ದಾರೆ. 

ಬಹಳ ಕಾಂಟ್ರೋವರ್ಸಿ ಸೃಷ್ಟಿಸಿದ ದೃಶ್ಯ ಇದಾಗಿತ್ತು. ಇದೇ ಲಿಪ್ ಲಾಪ್ ಸೀನ್ ಮಾಡಲು 6 ಟೇಕ್ ತೆಗೆದುಕೊಂಡಿರೋ ಬಗ್ಗೆ ಮಾತನಾಡಿದ್ದಾರೆ ತನಿಷಾ.

ಒಂದ್ಸಲ ಟೆಕ್ನಿಕಲ್ ಪ್ರಾಬ್ಲಂ ಆಯ್ತು, ಇನ್ನೊಂದ್ಸಲ ಲೈಟಿಂಗ್ ಸಮಸ್ಯೆ ಹಾಗೇ ಹೀಗೆ ಅಂತ 6 ಸಲ ರೀಟೇಕ್ ಮಾಡ್ಸಿದ್ರು ಎಂದು ತಮ್ಮ ಲಿಪ್ ಲಾಕ್ ಅನುಭವ ಬಿಚ್ಚಿಟ್ಟಿದ್ದಾರೆ. ಪೂಜಾ ಗಾಂಧಿ ಅವರಿಗೆ 6 ಸಲ ಮುದ್ದು ಮುದ್ದಾಗಿ ಕಿಸ್ ಮಾಡಿದ್ದೀನಿ ಎಂದು ಹೇಳಿಕೊಂಡ ತನಿಷಾ, ಕಿಸ್ ಮಾಡೋವಾಗ ಆಕೆ ಪುಟ್ಟ ಮಗುವಿನಂತೆ ಅನಿಸಿದ್ದರು ಎಂದಿದ್ದಾರೆ.

Continue Reading

ಸಿನಿಮಾ

Bhama Kurup: ಡಿವೋರ್ಸ್‌ ಆದ ಬೆನ್ನಲ್ಲೇ ಹೆಣ್ಣು ಮಕ್ಕಳಿಗೆ ಮದುವೆ ಬೇಕಾ? ಎಂದು ಪೋಸ್ಟ್‌ ಮಾಡಿದ ʻಶೈಲೂʼ ನಟಿ!

Bhama Kurup: ಮಾಲಿವುಡ್‌ ನಟಿ ಭಾಮಾ ಸಿಂಗಲ್‌ ಪೇರೆಂಟ್‌ ಎಂದು ಅನೌನ್ಸ್‌ ಕೂಡ ಮಾಡಿದ್ದರು. ಅಧಿಕೃತವಾಗಿ ದಂಪತಿಗೆ ಡಿವೋರ್ಸ್ ಸಿಕ್ಕ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇದೆಲ್ಲದರ ನಡುವೆ ಹೆಣ್ಣು ಮಕ್ಕಳು ಯಾಕೆ ಮದುವೆ ಆಗಬೇಕು? ಎನ್ನುವ ಅರ್ಥದಲ್ಲಿ ಭಾಮಾ ಮಾಡಿರುವ ಪೋಸ್ಟ್ ವೈರಲ್ ಆಗುತ್ತಿದೆ.

VISTARANEWS.COM


on

Bhama Kurup questions necessity of marriage
Koo

ಬೆಂಗಳೂರು: ಮಾಲಿವುಡ್‌ ನಟಿ ಭಾಮಾ (Bhama Kurup) ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದೆ.ಮದುವೆಯ ಬಗ್ಗೆ, ವರದಕ್ಷಿಣೆ ಬಗ್ಗೆ ,ಮಹಿಳೆಯರ ಪಾತ್ರಗಳ ಬಗ್ಗೆ ಬರೆದುಕೊಂಡಿದ್ದಾರೆ. ಈಗಾಗಲೇ ಪತಿಯಿಂದ ದೂರವಾಗಿ ಮಗಳ ಜತೆ ಇದ್ದಾರೆ. ಸಿಂಗಲ್‌ ಪೇರೆಂಟ್‌ ಎಂದು ಅನೌನ್ಸ್‌ ಕೂಡ ಮಾಡಿದ್ದರು. ಅಧಿಕೃತವಾಗಿ ದಂಪತಿಗೆ ಡಿವೋರ್ಸ್ ಸಿಕ್ಕ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇದೆಲ್ಲದರ ನಡುವೆ ಹೆಣ್ಣು ಮಕ್ಕಳು ಯಾಕೆ ಮದುವೆ ಆಗಬೇಕು? ಎನ್ನುವ ಅರ್ಥದಲ್ಲಿ ಭಾಮಾ ಮಾಡಿರುವ ಪೋಸ್ಟ್ ವೈರಲ್ ಆಗುತ್ತಿದೆ.

ಭಾಮಾ ಅವರ ಪೋಸ್ಟ್ ಹೀಗಿದೆ. ʻʻಹೆಣ್ಣು ಮಕ್ಕಳಿಗೆ ನಿಜವಾಗಿಯೂ ಮದುವೆ ಬೇಕೇ? ಖಂಡಿತ ಇಲ್ಲ!
ನಿಜಕ್ಕೂ ಬೇಡ. ತಮ್ಮ ಹಣವನ್ನು ವರದಕ್ಷಿಣೆಯಾಗಿ ಕೊಟ್ಟು ಮದುವೆ ಆಗಬೇಕಾ? ಖಂಡಿತ ಬೇಕಾಗಿಲ್ಲ. ಅವರು ನಿಮ್ಮನ್ನು ತೊರೆದರೆ ಕಥೆಯೇನು? ನಮ್ಮ ಹಣದಿಂದ ಅವರು ಸುಖವಾಗಿ ಬದುಕುತ್ತಾರೆ. ಆದರೆ ನಾವು ಮದುವೆ ಆಗದೇ ಒಂಟಿಯಾಗಿ ಬದುಕಬೇಕು. ನಿಮ್ಮ ಬಾಳಿಗೆ ಬರುವ ವ್ಯಕ್ತಿ ನಿಮ್ಮನ್ನು ಹೇಗೆ ನಡೆಸಿಕೊಳ್ಳುತ್ತಾನೆ ಎನ್ನುವ ಕಲ್ಪನೆಯೂ ಇರುವುದಿಲ್ಲʼʼ ಎಂದು ಭಾಮಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

ಭಾಮಾ ಮತ್ತು ಅರುಣ್ 2020ರಲ್ಲಿ ವಿವಾಹವಾದರು. ಬಳಿಕ ನಟಿ ನಟನೆಯಿಂದ ಬ್ರೇಕ್‌ ತೆಗೆದುಕೊಂಡರು. ಮಗಳು ಗೌರಿ ಜನಿಸಿದ ನಂತರ ಕುಟುಂಬದ ಜತೆ ಇರುವ ಫೋಟೊಗಳನ್ನು ಆಗಾಗ ಶೇರ್‌ ಮಾಡಿಕೊಳ್ಳುತ್ತಿದ್ದರು. ಆದರೆ ಒಂದು ದಿನ ಏಕಾಏಕಿ ಪತಿ ಜತೆಗೆ ಇದ್ದ ಎಲ್ಲ ಫೋಟೊಗಳನ್ನು ಡಿಲಿಟ್‌ ಮಾಡಿದರು. ಮತ್ತಷ್ಟು ವಿಚ್ಛೇದನ ಊಹಾಪೋಹ ಶುರುವಾಗಿದ್ದವು. ಮಲಯಾಳಂ ನಟಿ ಭಾಮಾ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ.

ಈ ಪೋಸ್ಟ್‌ಗೂ ಮೊದಲು ಸಿಂಗಲ್‌ ಪೇರೆಂಟ್‌ ಎಂಬ ಪೋಸ್ಟ್‌ ಕೂಡ ಶೇರ್‌ ಮಾಡಿಕೊಂಡಿದ್ದರು. “ನನಗೆ ನನ್ನ ಶಕ್ತಿ ಬಗ್ಗೆ ಗೊತ್ತೇ ಇರಲಿಲ್ಲ. ಆದರೆ ನಾನು ಸಿಂಗಲ್ ಮದರ್ ಆದ ಮೇಲೆ ಆ ಶಕ್ತಿಯ ಅರಿವಾಗಿದೆ. ಈಗ ನಾನು ಮತ್ತು ನನ್ನಮಗಳು” ಎಂದು ಬರೆದು ಭಾಮಾ ಮಗಳ ಜೊತೆಗಿನ ಫೋಟೊ ಹಂಚಿಕೊಂಡಿದ್ದರು.




Continue Reading

ಬಾಲಿವುಡ್

Shraddha Kapoor: ಮದುವೆ ಬಗ್ಗೆ ಶ್ರದ್ಧಾ ಕಪೂರ್ ಹೇಳಿದ್ದೇನು? ಹುಡುಗ ಯಾರು?

Shraddha Kapoor: ಶ್ರದ್ಧಾ ಕಪೂರ್ ಕಳೆದ ತಿಂಗಳು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ರಾಹುಲ್ ಮೋದಿ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದರು. ಕಳೆದ ವರ್ಷ ಶ್ರದ್ಧಾ ಕಪೂರ್ ಮತ್ತು ರಾಹುಲ್ ಮೋದಿ ಹಲವಾರು ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಂತರ ಡೇಟಿಂಗ್ ವದಂತಿಗಳು ಪ್ರಾರಂಭವಾದವು. ಮಾರ್ಚ್‌ನಲ್ಲಿ ಸ್ನೇಹಿತನ ಮದುವೆಯಲ್ಲಿ ಒಟ್ಟಿಗೆ ಭಾಗಿಯಾಗಿದ್ದರು.

VISTARANEWS.COM


on

Shraddha Kapoor On Rumours Of Wedding To Rahul Mody
Koo

ಬೆಂಗಳೂರು: 2018ರಲ್ಲಿ ‘ಸ್ತ್ರಿ’ ಮೊದಲ ಭಾಗ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ಈಗ ‘ಸ್ತ್ರಿ 2’ ಸಿನಿಮಾ ಇದೇ ಆಗಸ್ಟ್ 15ಕ್ಕೆ ರಿಲೀಸ್ ಆಗಲಿದೆ. ಶ್ರದ್ಧಾ ಕಪೂರ್ (Shraddha Kapoor) ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ, ಮದುವೆ (Wedding) ಬಗ್ಗೆ ನಟಿ ಮೌನ ಮುರಿದಿದ್ದಾರೆ. ಇತ್ತೇಚೆಗೆ ರಾಹುಲ್ ಮೋದಿ ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ವದಂತಿ ಕೂಡ ಹಬ್ಬಿದೆ.

ಶ್ರದ್ಧಾ ಕಪೂರ್, ಚಿತ್ರದ ಟ್ರೈಲರ್‌ ಬಿಡುಗಡೆ ಸಮಾರಂಭದಲ್ಲಿ ರಾಹುಲ್ ಮೋದಿಯೊಂದಿಗಿನ ತನ್ನ ಮದುವೆಯ ವದಂತಿ ಉದ್ದೇಶಿಸಿ ಮಾತನಾಡಿದರು. ಯಾವಾಗ ಮದುವೆಯಾಗುತ್ತೀರಿ ಎಂದು ನಟಿಗೆ ಪ್ರಶ್ನೆ ಎದುರಾದಾಗ, ಜಾಣತನದಿಂದ ಶ್ರದ್ಧಾ ಉತ್ತರಿಸಿದ್ದಾರೆ. ಆಕೆ ಸ್ತ್ರಿ, ಆಕೆಗೆ ಇಷ್ಟ ಬಂದಾಗ ಮದುಮಗಳು ಆಗುತ್ತಾಳೆ ಎಂದು ನಟಿ ಉತ್ತರಿಸಿದ್ದಾರೆ.

ಶ್ರದ್ಧಾ ಕಪೂರ್ ಕಳೆದ ತಿಂಗಳು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ರಾಹುಲ್ ಮೋದಿ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದರು. ಕಳೆದ ವರ್ಷ ಶ್ರದ್ಧಾ ಕಪೂರ್ ಮತ್ತು ರಾಹುಲ್ ಮೋದಿ ಹಲವಾರು ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಂತರ ಡೇಟಿಂಗ್ ವದಂತಿಗಳು ಪ್ರಾರಂಭವಾದವು. ಮಾರ್ಚ್‌ನಲ್ಲಿ ಸ್ನೇಹಿತನ ಮದುವೆಯಲ್ಲಿ ಒಟ್ಟಿಗೆ ಭಾಗಿಯಾಗಿದ್ದರು.

ಇದನ್ನೂ ಓದಿ: Kannada New Movie: ಸದ್ದಿಲ್ಲದೇ ಒಟಿಟಿಗೆ ಲಗ್ಗೆ ಇಟ್ಟ ರಂಗಾಯಣ ರಘು ಅಭಿನಯದ ‘ಮೂರನೇ ಕೃಷ್ಣಪ್ಪ’ ಸಿನಿಮಾ!

ಮೂಲಗಳ ಪ್ರಕಾರ ಈ ಜೋಡಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ ಎಂದರೆ ತಮ್ಮ ಸಂಬಂಧವನ್ನು ಯಾವುದೇ ಸಮಯದಲ್ಲಿ ಅಧಿಕೃತಗೊಳಿಸುತ್ತಾರೆ ಎಂದರ್ಥವಲ್ಲ ಎನ್ನಲಾಗಿದೆ, ರಾಹುಲ್ ಮೋದಿ ಸಿನಿಮಾ ಬರಹಗಾರ. ಅವರು ರಣಬೀರ್ ಕಪೂರ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ತು ಜೂಥಿ ಮೈನ್ ಮಕ್ಕರ್ ಸಿನಿಮಾಗೆ ಕೆಲಸ ಮಾಡಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಪ್ರೀತಿ ಚಿಗುರಿತ್ತು ಎನ್ನಲಾಗಿದೆ.

 ಈ ಸಿನಿಮಾದಲ್ಲಿ ನಟಿ ರಣಬೀರ್ ಕಪೂರ್ ಅವರ ಜತೆ ನಟಿಸಿದ್ದಾರೆ. ಈ ಮೂವಿ ಸಕ್ಸಸ್ ಆಗಿದೆ. ಸಿನಿಮಾಗೆ ಉತ್ತಮ ಪ್ರತಿಕ್ರಿಯೆಯೂ ಬಂದಿದೆ. ತೂ ಜೂಟಿ ಮೇ ಮಕ್ಕರ್ ಸಿನಿಮಾದಲ್ಲಿ ಸ್ಟ್ಯಾಂಡಪ್ ಕಾಮೆಡಿಯನ್ ಅನುಭವ್ ಸಿಂಗ್ ಬಾಸಿ, ಬೋನಿ ಕಪೂರ್, ಡಿಂಪಲ್ ಕಪಾಡಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

 
Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಗ್ಯಾಂಗ್‌ನ ನಾಲ್ಕನೇ ಆರೋಪಿ ತಾಯಿ ನಿಧನ

Actor Darshan: ಈ ಮುಂಚೆ ಡಿಗ್ಯಾಂಗ್ ಜತೆ ಸೇರಿಕೊಂಡ ಅನುಕುಮಾರ್ ಜೈಲು ಸೇರಿದ್ದ. ಈ ನೋವಿನಲ್ಲೇ ಅನುಕುಮಾರ್ ತಂದೆ ಹೃದಯಾಘಾತಕ್ಕೆ ಬಲಿಯಾಗಿದ್ದರು. ಮನೆಗೆ ಆಧಾರವಾಗಿದ್ದ ಮಗನೇ ಈ ರೀತಿಯ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಇದು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದ ಅನು ಕುಮಾರ್ ತಂದೆ ನೋವಿನಲ್ಲೇ ಮೃತಪಟ್ಟಿದ್ದರು.

VISTARANEWS.COM


on

Actor Darshan 4th accused mother dies
Koo

ಬೆಂಗಳೂರು: ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಇದೀಗ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ (Actor Darshan) ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್‌ ರಘು ತಾಯಿ ಮಂಜುಳಮ್ಮ (75) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ರಾಘವೇಂದ್ರ ಚಿತ್ರದುರ್ಗ ದರ್ಶನ್‌ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರಾಘವೇಂದ್ರನ ತಾಯಿ ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಇಷ್ಟೂ ದಿನ ರಘು ಸಹೋದರ ಮುರುಳಿ ಮನೆಯಲ್ಲಿದ್ದರು. ಮುರುಳಿ ಮದುವೆಯಾಗದೇ ತಾಯಿ ಆರೈಕೆ ಮಾಡುತಿದ್ದ. ಆದರೆ ರಘು ಲವ್ ಮ್ಯಾರೇಜ್ ಆಗಿ ಪತ್ನಿ ಜತೆ ಪ್ರತ್ಯೇಕವಾಗಿ ವಾಸವಾಗಿದ್ದ‌. ಆಗಾಗ ಬಂದು ತಾಯಿಯ ಕ್ಷೇಮ ವಿಚಾರಿಸುತ್ತಿದ್ದ ಎನ್ನಲಾಗಿದೆ.

ಈ ಮುಂಚೆ ಡಿಗ್ಯಾಂಗ್ ಜತೆ ಸೇರಿಕೊಂಡ ಅನುಕುಮಾರ್ ಜೈಲು ಸೇರಿದ್ದ. ಈ ನೋವಿನಲ್ಲೇ ಅನುಕುಮಾರ್ ತಂದೆ ಹೃದಯಾಘಾತಕ್ಕೆ ಬಲಿಯಾಗಿದ್ದರು. ಮನೆಗೆ ಆಧಾರವಾಗಿದ್ದ ಮಗನೇ ಈ ರೀತಿಯ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಇದು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದ ಅನು ಕುಮಾರ್ ತಂದೆ ನೋವಿನಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ

 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್‌ಗೆ ಮತ್ತೆ ಜೈಲೂಟವೇ ಗತಿಯಾಗಿದೆ. ಯಾಕೆಂದರೆ, ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ರಿಟ್ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಮನೆ ಊಟಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ದರ್ಶನ್‌ (Actor Darshan) ಕೋರಿದ್ದ ಅರ್ಜಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲ ಫಣೀಂದ್ರ ವಾದ ಮಂಡಿಸಿ, ವಿಚಾರಣಾಧೀನ ಕೈದಿಗಳಿಗೆ ಖಾಸಗಿ ಸೋರ್ಸ್‌ನಿಂದ ಅಗತ್ಯ ವಸ್ತುಗಳನ್ನು ಪಡೆಯಲು ಅವಕಾಶವಿದೆ. ಕಾರಗೃಹ ಕಾಯ್ದೆಯಲ್ಲಿ ಅದಕ್ಕೆ ಅವಕಾಶ ಇದೆ. ವಿಚಾರಣಾಧಿನ ಕೈದಿ, ಶಿಕ್ಷೆಗೆ ಗುರಿಯಾಗದ ಕೈದಿಗೂ ಮನೆಯ ಊಟ, ಹಾಸಿಗೆ ನೀಡಲು ಜೈಲು ಮ್ಯಾನ್ಯುಯಲ್‌ನಲ್ಲಿ ಅವಕಾಶ ಇದೆ ಎಂದು ಹೇಳಿದರು.

ಊಟವನ್ನು ಸ್ನೇಹಿತರು, ಕುಟುಂಬಸ್ಥರ ಬಳಿ ಪಡೆಯಲು ಜೈಲ್ ಎಸ್ಪಿ, ಐಜಿಪಿ ಚೆಕ್ ಮಾಡಬೇಕು ಅಂತ ನಿಯಮ ಇದೆ. ಅದಲ್ಲದೇ ಆ ಆಹಾರದಿಂದ ತೊಂದರೆಯಾದರೆ ಅದಕ್ಕೆ ಅವರೇ ಕಾರಣ ಇರುತ್ತಾರೆ ಎಂದು ಬಾಂಬೆ ಹೈಕೋರ್ಟ್‌ನ ಅಸ್ಕರ್ ಯೂಸಫ್ ಪ್ರಕರಣದ ಆದೇಶವನ್ನು ಉಲ್ಲೇಖಿಸಿದರು. ನಿಗದಿತ ಸಮಯದಲ್ಲಿ ಕೈದಿ, ತನ್ನ ಖರ್ಚಿನಲ್ಲಿ ಊಟ ಹೊರಗಿನಿಂದ ಪಡೆಯಬಹುದು ಎಂದರು.

ಈ ವೇಳೆ ಪ್ರತಿಕ್ರಿಯಿಸಿದ ಜಡ್ಜ್‌ ಎಸ್.ಆರ್. ಕೃಷ್ಣಕುಮಾರ್, ನೀವು ಆಹಾರ, ಹಾಸಿಗೆ ಮೂಲಭೂತ ಹಕ್ಕು ಎನ್ನುತ್ತಿದ್ದೀರಿ. ಆದರೆ ನಾನು ಈಗ ಮಧ್ಯಂತರ ಆದೇಶ ಮಾಡಲು ಸಾಧ್ಯವಿಲ್ಲ. ಸಂಪೂರ್ಣ ಪ್ರಕರಣದ ವಿಚಾರಣೆ ಮಾಡಬೇಕು. ವಿಚಾರಣಾಧೀನ ಕೈದಿ ಇದ್ದಾಗ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಧಿಕಾರ ಇದೆ. ಅಲ್ಲಿ ಮೊದಲು ಅರ್ಜಿ ಸಲ್ಲಿಸಿ ಅವಕಾಶ ಕೋರಬೇಕು. ಅಲ್ಲಿ ನಿರಾಕರಣೆಯಾದರೆ, ಮುಂದೆ ನೋಡೋಣ ಎಂದು ಹೇಳಿ, ಮುಂದಿನ ವಿಚಾರಣೆ 29ಕ್ಕೆ ಮುಂದೂಡಿದರು.

ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಹೀಗಾಗಿ ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ದರ್ಶನ್‌ ಮನವಿ ಮಾಡಿದ್ದರು. ಜೈಲಿನ ಆಹಾರ ದರ್ಶನ್‌ಗೆ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಹೇಳಿದ್ದರು. ಅತಿಸಾರದಿಂದಾಗಿ ದರ್ಶನ್ ತೂಕ ತುಂಬಾ ಕಡಿಮೆಯಾಗಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ದರ್ಶನ್ ಜಾಮೀನಿಗಾಗಿ ವಕೀಲರು ಬೇಕಾದ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇನ್ನು ಕೆಲವಷ್ಟು ದಿನ ದರ್ಶನ್ ಜೈಲಿನಲ್ಲೆ ಇರಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

Continue Reading
Advertisement
LKG UKG in Anganwadis
ಕರ್ನಾಟಕ15 mins ago

LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

Viral Video
ಕ್ರಿಕೆಟ್32 mins ago

Viral Video: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಗುಳ್ಳೆ ನರಿ; ವಿಡಿಯೊ ವೈರಲ್​

terror activities
ದೇಶ39 mins ago

Terror Activities: ಉಗ್ರರ ಬೇಟೆಗೆ 500ಕ್ಕೂ ಹೆಚ್ಚು ಪ್ಯಾರಾ ಕಮಾಂಡೋಗಳು ಗಡಿಯಲ್ಲಿ ಸಜ್ಜು

Siddaramaiah
ಕರ್ನಾಟಕ53 mins ago

CM Siddaramaiah: ವಾರದಲ್ಲಿ 4 ದಿನ ಶಾಲೆಗಳಿಗೆ ಮೊಟ್ಟೆ ಪೂರೈಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ಜತೆ ಒಪ್ಪಂದ: ಸಿಎಂ

Viral News
ವೈರಲ್ ನ್ಯೂಸ್1 hour ago

Viral News: ಸ್ತನ ಸೌಂದರ್ಯ ಶಸ್ತ್ರಚಿಕಿತ್ಸೆಯ ವಿಡಿಯೊ; ಆಸ್ಪತ್ರೆ ವಿರುದ್ಧ ಮಹಿಳೆಯಿಂದ ಕೇಸ್‌!

gold rate today
ವಾಣಿಜ್ಯ1 hour ago

Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಸ್ವರ್ಣ ಪ್ರಿಯರಿಗೆ ಶುಭ ಸುದ್ದಿ

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

Tanisha Kuppanda Lip lock with Pooja Gandhi shares her experience
ಸ್ಯಾಂಡಲ್ ವುಡ್1 hour ago

Tanisha Kuppanda: ಪೂಜಾ ಗಾಂಧಿ ಜತೆ ಲಿಪ್ ಲಾಕ್; 6 ಟೇಕ್ಸ್‌ ತೆಗೆದುಕೊಂಡ ಅನುಭವ ಹಂಚಿಕೊಂಡ ʻಬೆಂಕಿʼ ತನಿಷಾ!

Tantrik Arrest
ಕ್ರೈಂ1 hour ago

Tantrik Arrest: ರೋಗ ಗುಣಪಡಿಸುವುದಾಗಿ ಹೇಳಿ ಯುವತಿಯ ತಲೆಗೆ 18 ಸೂಜಿ ಚುಚ್ಚಿದ ಮಂತ್ರವಾದಿ!

Ganja seized
ಬೆಂಗಳೂರು1 hour ago

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌