Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು! - Vistara News

ಸಿನಿಮಾ

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Actor Darshan : ನಟ ದರ್ಶನ್‌ಗೂ ವಿವಾದಕ್ಕೂ ಸಿಕ್ಕಾಪಟ್ಟೆ ನಂಟಿದೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಒಂದು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಬಳಿಕ ಹಲವಾರು ವಿಷಯಗಳಿಗೆ ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ದರ್ಶನ್‌, ಸದ್ಯ ರೇಣುಕಾ ಸ್ವಾಮಿ ಎಂಬಾತನ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಬೆಂಗಳೂರು: ಲೈಟ್ ಮ್ಯಾನ್, ಕ್ಯಾಮೆರಾಮನ್ ಆಗಿ ಚಿತ್ರರಂಗದಲ್ಲಿ ಕೆಲಸ ಆರಂಭಿಸಿದ ನಟ ದರ್ಶನ್‌ (Actor Darshan), ನಾಯಕನಾಗಿ ಸಿನಿ ಪಯಣ ಶುರು ಮಾಡಿ ಸಾಲು ಸಾಲು ಹಿಟ್​ ಸಿನಿಮಾಗಳನ್ನು ನೀಡಿ ಬಾಕ್ಸ್​ ಆಫೀಸ್​ ಸುಲ್ತಾನ್ ಆಗಿ ಮೆರೆದಿದ್ದಾರೆ. ಅದರ ಜತೆಗೆ ವೈಯಕ್ತಿಕ ಕಾರಣಗಳಿಂದಲೂ ಇವರು ಹೆಚ್ಚು ಸುದ್ದಿಯಾಗಿದ್ದರು. ನಟ ದರ್ಶನ್‌ಗೂ ವಿವಾದಗೂ ಸಿಕ್ಕಾಪಟ್ಟೆ ನಂಟಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ವೈಯಕ್ತಿಕ ಜೀವನ ಆಗಾಗ ಚರ್ಚೆಯಲ್ಲಿ ಇರುತ್ತದೆ. ದರ್ಶನ್ ಜತೆ 10 ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿ ಇದ್ದೆ ಎಂದು ಪವಿತ್ರಾ ಗೌಡ ಹೇಳಿಕೆ ನೀಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರಾ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ವಾರ್‌ ನಡೆದೇ ಹೋಯ್ತು. ಇದೀಗ ಪವಿತ್ರಾ ಗೌಡಗೆ ಸಂಬಂಧಿಸಿದಂತೆ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಬಂಧನವಾಗಿದೆ. ಇಷ್ಟಕ್ಕೂ ದರ್ಶನ್‌ ವಿರುದ್ಧ ದಾಖಲಾದ ಕೇಸ್‌ಗಳು ಎಷ್ಟು? ಎಷ್ಟು ಬಾರಿ ಜೈಲುವಾಸ ಅನುಭವಿಸಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ..

ಪತ್ನಿ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿದ್ದ ನಟ

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ್ದಕ್ಕೆ ನಟ ದರ್ಶನ್‌ ವಿರುದ್ಧ ಮೊದಲ ಬಾರಿ ಕೇಸ್‌ವೊಂದು ದಾಖಲಾಗಿತ್ತು. ಪತ್ನಿಗೆ ಹೊಡೆದಿದ್ದಕ್ಕೆ ಒಂದು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹೀಗಾಗಿ ವಿಜಯನಗರ ಪೊಲೀಸರು ನಟನನ್ನು ಬಂಧಿಸಿದ್ದರು. ಇಷ್ಟೆಲ್ಲ ಘಟನೆಗಳ ನಂತರ ವಿರಸಗಳನ್ನು ಮರೆತು ಈ ಜೋಡಿ ಮತ್ತೆ ಹೊಂದಾಗಿತ್ತು.

ಚಿತ್ರ ನಿರ್ಮಾಪಕನಿಗೆ ಧಮ್ಕಿ ಹಾಕಿದ್ದ ನಟ ದರ್ಶನ್​

ʻಭಗವಾನ್​ ಶ್ರೀಕೃಷ್ಣ ಪರಮಾತ್ಮʼ ಎಂಬ ಚಿತ್ರದ ನಿರ್ಮಾಪಕ ಭರತ್​ ಎಂಬುವರಿಗೆ ಬೆದರಿಕೆ ಹಾಕಿದ ಆರೋಪದಡಿ ನಟ ದರ್ಶನ್​ ವಿರುದ್ಧ ಕೆಂಗೇರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಚಿತ್ರದಲ್ಲಿ ಧ್ರುವನ್​ ಎಂಬ ನಟ ನಾಯಕನಾಗಿ ಅಭಿನಯಿಸಿದ್ದು, ಈತನೇ ದರ್ಶನ್​​ಗೆ ಹೇಳಿ ಭರತ್​ಗೆ ಕರೆ ಮಾಡಿಸಿದ್ದಾನೆ ಎಂದು ಆರೋಪಿಸಲಾಗಿತ್ತು.

ಭರತ್​ ನಿರ್ಮಾಣ ಮಾಡುತ್ತಿದ್ದ ಭಗವಾನ್​ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಹಣಕಾಸಿನ ತೊಂದರೆಯಿಂದ ಅರ್ಧಕ್ಕೇ ನಿಲ್ಲಿಸಬೇಕಾದ ಪರಿಸ್ಥಿತಿ ಬಂದಿತ್ತು. ಹೀಗಾಗಿ ಭರತ್​ ಅವರು ಸೆಟ್​​ಗೆ ಧ್ರುವನ್​​ರನ್ನು ಕರೆಸಿಕೊಂಡು ʻಸಿನಿಮಾ ತಡವಾಗಿ ಪ್ರಾರಂಭವಾಗುತ್ತದೆ. ನಾನು ಸೆಟ್ಲ್​​ಮೆಂಟ್​ ಮಾಡುತ್ತೇನೆʼ ಎಂದು ಹೇಳಿದ್ದರಂತೆ. ಆದರೆ ಧ್ರುವನ್​ ಸಿನಿಮಾ ನಿಂತಿದ್ದಕ್ಕೆ ಸಿಟ್ಟಾಗಿ, ದರ್ಶನ್​​ ಬಳಿ ಹೇಳಿ ಬೆದರಿಕೆ ಹಾಕಿಸಿದ್ದಾನೆ ಎಂಬುದು ದೂರಿನ ಸಾರಾಂಶವಾಗಿತ್ತು.

ನಟ ದರ್ಶನ್​ ಅವರು ಭರತ್​​ಗೆ ಬೆದರಿಕೆ ಹಾಕಿದ ಆಡಿಯೋ ಕೂಡ ವೈರಲ್​ ಆಗಿತ್ತು. ‘ಅವನ ಕರಿಯರ್ ಹಾಳಾದರೆ ನೀನೇನು ಮಾಡುತ್ತೀಯಾ?, ಸಿನಿಮಾ ಶುರು ಮಾಡಿದ ಮೇಲೆ ಮುಗಿಸಿದರೆ ಒಳ್ಳೆಯದು. ಇಲ್ಲ ಅಂದರೆ ನೀನೇ ಇರಲ್ಲ. ಎದುರಿಗೆ ಸಿಕ್ಕಾಗ ಮಾತಾಡೋ ತರಹ ಇರಬೇಕು. ಅದಾಗಲ್ಲ ಅಂದ್ರೆ ನೀನೇ ಕಾಣ್ಸಲ್ಲ ಹಾಗೆ ಮಾಡಿಬಿಡುತ್ತೇನೆ, ನೀನು ರೆಡಿ ಇರಬೇಕು’ ಎಂಬಿತ್ಯಾದಿ ಮಾತುಗಳಿಂದ ದರ್ಶನ್​​ ಬೆದರಿಕೆ ಹಾಕುವುದು ಆಡಿಯೋದಲ್ಲಿತ್ತು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

ನಾಯಿಗಳು ಕಚ್ಚಿದ್ದಕ್ಕೆ ದಾಸನ ವಿರುದ್ಧ ಕೇಸ್‌

ನಟ ದರ್ಶನ್‌ (Actor Darshan) ಅವರ ಮನೆಯ ನಾಯಿಯು ವೈದ್ಯೆಯೊಬ್ಬರಿಗೆ ಕಚ್ಚಿದ (Dog Bite) ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವೇಳೆ ನಾಯಿ ಕಡಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್ಚರಿಕೆ ವಹಿಸಬೇಕಿತ್ತು ಎಂದು ನಮ್ಮ ಹುಡುಗರಿಗೆ ಹೇಳಿದ್ದೇನೆ. ಅಲ್ಲದೆ, ನಾಯಿ ಕಡಿತಕ್ಕೆ ಒಳಗಾದ ವೈದ್ಯೆ ಅಮಿತಾ ಜಿಂದಾಲ್ ಅವರ ಆಸ್ಪತ್ರೆ ವೆಚ್ಚವನ್ನು ಭರಿಸುತ್ತೇನೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದು ಪೊಲೀಸರಿಗೆ ನಟ ದರ್ಶನ್‌ ಹೇಳಿಕೆ ನೀಡಿದ್ದರು.

ಕೈಯಲ್ಲಿ ಲಾಂಗ್‌ ಹಿಡಿದು ಪೋಸ್‌ ನೀಡಿದ್ದ ಕರಿಯ

ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ದರ್ಶನ್‌ ಕೈಯಲ್ಲಿ ಲಾಂಗ್‌ ಹಿಡಿದು ಪೋಸ್‌ (Darshan poses with long in hand) ನೀಡಿರುವುದು ಚರ್ಚೆಗೆ ಕಾರಣವಾಗಿತ್ತು. ಬೆಂಗಳೂರಿನ ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳೆಯರ ಬಳಗ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಅಭಿಮಾನಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು ತಮ್ಮ ಪ್ರೀತಿಯ ದ್ಯೋತಕವಾಗಿ ದರ್ಶನ್‌ ಅವರಿಗೆ ಬೆಳ್ಳಿಯ ಲಾಂಗ್‌ ನೀಡಿದ್ದರು. ದರ್ಶನ್‌ ಅವರು ಅಭಿಮಾನಿಗಳ ಪ್ರೀತಿಗೆ ಮಣಿದು ಈ ಲಾಂಗ್‌ನ್ನು ಕೈಯಲ್ಲಿ ಹಿಡಿದು ಪೋಸ್‌ ನೀಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಮಾತ್ರವಲ್ಲ ಹುಲಿಯ ಉಗುರಿನ ಪೆಂಡೆಂಟ್‌ (Tiger nail pendent) ಧರಿಸಿದ ಕಾರಣಕ್ಕೆ ದರ್ಶನ್‌ ಕೆಂಗಣ್ಣಿಗೆ ಗುರಿಯಾದ್ದರು .

ಪತ್ನಿ ವಿಜಯಲಕ್ಷ್ಮಿ- ಪವಿತ್ರಾ ಗೌಡ ವಿವಾದ

ದರ್ಶನ್‌ ಗೆಳತಿ ಪವಿತ್ರಾ ಗೌಡ – ಪತ್ನಿ ವಿಜಯಲಕ್ಷ್ಮಿ ತೆರೆ ಮರೆಯಲ್ಲಿ ನಡೆಯುತ್ತಿದ್ದ ವಾಗ್ವಾದ ನಂತರ ಬಹಿರಂಗವಾಯಿತು. ಕಾಟೇರ ಯಶಸ್ಸಿನಲ್ಲಿ ಇದ್ದ ದರ್ಶನ್‌ ಮೊದಲ ಬಾರಿಗೆ ಕೌಟುಂಬಿಕ ಕಲಹ ಇರಸು-ಮುರಸು ಮಾಡಿತ್ತು. ಮಾಡೆಲ್‌ ಪವಿತ್ರ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್ (Darshan Thoogudeepa) ಜತೆಗಿನ ಫೋಟೊಗಳನ್ನು ಹಂಚಿಕೊಂಡಿದ್ದರು. ಇದಾದ ಮೇಲೆ ಆ ಪೋಸ್ಟ್‌ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಆಗಿಯೇ ಪ್ರತಿಕ್ರಿಯಿಸಿದ್ದರು. ಇದಾದ ಮೇಲೆ ಪವಿತ್ರಾ ಗೌಡ ಅಸಮಾಧಾನ ಹೊರಹಾಕಿದ್ದರು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಟ್ಯಾಗ್ ಮಾಡಿ, ಎಚ್ಚರಿಕೆಯ ಸಂದೇಶವನ್ನು ಬರೆದು ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

ದರ್ಶನ್‌ ವಿರುದ್ಧ ಅಹೋರಾತ್ರಿ ಆಕ್ರೋಶ!

ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮದಲ್ಲಿ ನಟ ದರ್ಶನ್‌ ಅವರು 25 ವರ್ಷದ ಸುದೀರ್ಘ ಪ್ರಯಾಣದ ಬಗ್ಗೆ ಮಾತನಾಡಿದರು. ಈ ವೇಳೆ ʻʻಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯʼʼ ಎಂದಿದ್ದರು ದರ್ಶನ್. ದರ್ಶನ್‌ ಈ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದು ದರ್ಶನ್ (Actor Darshan) ಮಾತಿನ ಭರದಲ್ಲಿ ಹೇಳಿದ್ದು, ಭಾರಿ ವಿವಾದ ಸೃಷ್ಟಿಸಿತ್ತು. ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿತ್ತ. ಇದರ ಬೆನ್ನಲ್ಲೇ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

ಕಾಟೇರ ಸಕ್ಸಸ್‌ ಪಾರ್ಟಿ ಎಫೆಕ್ಟ್- ದರ್ಶನ್‌ಗೆ ನೋಟಿಸ್‌

ಜೆಟ್​ಲಾಗ್ ಪಬ್​ನಲ್ಲಿ (Jetlog Pub) ಕಾಟೇರ ಸಿನಿಮಾದ (Kaatera Movie) ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ (Rockline Venkatesh) ಸೇರಿ ಹಲವು ನಟರು ಸುಬ್ರಮಣ್ಯ ನಗರ ಪೊಲೀಸ್‌ ಠಾಣೆಗೆ ಖುದ್ದು ಹಾಜರಾಗಿದ್ದರು. ಅವಧಿ ಮೀರಿ ಪಾರ್ಟಿ ಮಾಡಿದ ಆರೋಪದಲ್ಲಿ ಖ್ಯಾತ ನಟ ದರ್ಶನ್ (Actor Darshan), ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್‌, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಈಗ ಸುಬ್ರಮಣ್ಯ ನಗರ ಪೊಲೀಸರು ನೋಟಿಸ್‌ ನೀಡಿದ್ದರು. ಇದರ ಪ್ರಕಾರ ಈ ಸ್ಟಾರ್‌ಗಳು ಸುಬ್ರಹ್ಮಣ್ಯ ನಗರ ಪೊಲೀಸ್‌ ಠಾಣೆಗೆ ಭೇಟಿ ನೀಡಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇವರ ಮೇಲಿನ ಪ್ರಕರಣ ಇಲ್ಲಿಗೇ ಮುಕ್ತಾಯವಾಗಿದೆಯೇ ? ಮುಂದೇನಾದರೂ ಕ್ರಮಗಳಿವೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಅಯ್ಯೋ ತಗಡೇ, ಯಾಕಪ್ಪ ಗುಮ್ಮಿಸ್ಕೋತಿಯಾ: ಉಮಾಪತಿಗೆ ದರ್ಶನ್‌ ವಾರ್ನಿಂಗ್‌!

ಕಳೆದ ಫೆ.20ರಂದು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆದಲ್ಲಿ ದರ್ಶನ್‌ ಭಾಗಿಯಾಗಿದ್ದರು. ಇದೇ ವೇಳೆ ದರ್ಶನ್‌ ʻರಾಬರ್ಟ್ʼ ಸಿನಿಮಾದ ನಿರ್ಮಾಪಕ ಉಮಾಪತಿಗೆ ತಿರುಗೇಟು ಕೊಟ್ಟಿದ್ದರು. ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ಸಮಾರಂಭದಲ್ಲಿ, ಉಮಾಪತಿಯನ್ನುದ್ದೇಶಿಸಿ ‘ಅಯ್ಯೋ ತಗಡೇ, ಯಾಕಪ್ಪ ಗುಮ್ಮಿಸ್ಕೋತಿಯಾ ಎಂದು ಕಠು ಪದಗಳನ್ನು ಬಳಸಿ ನಿಂದಿಸಿ ಮತ್ತೆ ಸುದ್ದಿಯಾಗಿದ್ದರು.

ಇನ್ನೂ ಪವಿತ್ರ ಗೌಡ ವಿಚಾರದಲ್ಲಿ ಪತ್ನಿ ವಿಜಯಲಕ್ಷ್ಮಿ ಆರೋಪಿಸಿ ದೂರು ಕಾಂಟ್ರವರ್ಸಿಗೆ ಕಾರಣವಾಗಿತ್ತು. ಮೈಸೂರಿನ ಸೋಷಿಯಲ್ ಹೋಟೆಲ್‌ನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಸಂಬಂಧ ದೂರು ದಾಖಲಾಗಿತ್ತು. ಮೈಸೂರಿನಲ್ಲಿ ಹೆಬ್ಬಾಳ ರಿಂಗ್ ರಸ್ತೆಯ ಬಳಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ದರ್ಶನ್ ಹೆಸರಿನಲ್ಲಿ ದೂರು ದಾಖಲಾಗಿತ್ತು. ಸದ್ಯ ರೇಣುಕಾ ಸ್ವಾಮಿ ಎಂಬಾತ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ಸ್ಯಾಂಡಲ್ ವುಡ್

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Shiva Rajkumar: ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

VISTARANEWS.COM


on

Shiva Rajkumar played the dupe for saikumar in film
Koo

ಬೆಂಗಳೂರು: ಸಿನಿಮಾಗಳಲ್ಲಿ ಡ್ಯೂಪ್ ಹಾಕುವುದು ಸರ್ವೇ ಸಾಮಾನ್ಯ. ತೆಲುಗು ನಟ ಸಾಯಿಕುಮಾರ್‌ಗೆ (Shiva Rajkumar) ಕನ್ನಡ ನಟ ಶಿವರಾಜ್‌ಕುಮಾರ್ ಒಂದು ಸಿನಿಮಾದಲ್ಲಿ ಡ್ಯೂಪ್ ಹಾಕಿದ್ದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ : ಸಾಯಿಕುಮಾರ್‌ ಈ ವಿಚಾರವನ್ನು ಬಹಿರಂಗಪಡಿಸಿದ್ದರು.ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

ಈ ಬಗ್ಗೆ ನಟ ಸಾಯಿ ಕುಮಾರ್‌ ಮಾತನಾಡಿ ʻʻAK 47 ಸಿನಿಮಾದ ಮಾಡುವಾಗ ಡಬಲ್‌ ವರ್ಷನ್‌ ಮಾಡಬೇಕು ಎಂದು ರಾಮು ಅವರ ಪ್ಲ್ಯಾನ್‌ ಆಗಿತ್ತು. ಲಾಕ್‌ಅಪ್‌ಡೆತ್‌ ಸಿನಿಮಾ ಕೊಟ್ಟಿದ್ದು ಓಂ ಪ್ರಕಾಶ್‌. ರಾಮು ಅವರೇ ಪ್ರೊಡ್ಯೂಸರ್‌ ಆಗಿದ್ದರು. ಆ ಸಿನಿಮಾ ಕನ್ನಡವನ್ನು ಶಿವಣ್ಣ ಮಾಡ್ತಾರೆ, ತೆಲುಗು ನೀವು ಮಾಡಿ ಅಂದರು. ಖಂಡಿತ ಮಾಡ್ತೀನಿ ಎಂದೆ. ಬಾಂಬೆಯಲ್ಲಿ ಮೇಜರ್‌ ಎಪಿಸೋಡ್‌ ಇತ್ತು. ಅವರದ್ದು ನಂದೂ ಸೇಮ್‌ ಕಾಸ್ಟ್ಯೂಮ್‌ ಇತ್ತು. ಆದರೆ ನಾನು ಶೂಟ್‌ ಮಾಡುವಾಗ ಗಾಯಕ್ಕೆ ಒಳಗಾದೆ. ನನಗೆ ಏಟು ಬಿತ್ತು. ಆಸ್ಪತ್ರೆಗೆ ಕರೆದುಕೊಂಡರು. ತಿರಗಾ ಬಂದು ಮತ್ತೆ ಶೂಟಿಂಗ್‌ ಬಂದೆವು. ಟೆಲಿ ಶಾಟ್‌ ಒಂದು ಇತ್ತು. ಬಳಿಕ ನನ್ನ ಶಾಟ್‌ ಎಲ್ಲ ಅವರೇ ಮಾಡಿದ್ರು. ಇನ್ನು ಫೈಟ್ ಮಾಡುವಾಗ ಅಪ್ ಶಾಟ್ ಹೊಡೆಯಬೇಕಿತ್ತು. ಶಿವಣ್ಣ ತುಂಬಾ ಚೆನ್ನಾಗಿ ಮಾಡಿದರು. ನನಗೂ ಮಾಡೋಕೆ ಹೇಳ್ತಾರೆ ಅಂತ ನನಗೆ ಭಯವಾಗಿತ್ತು. ನನ್ನನ್ನು ಕರೆದು ಮಾಡಿ ಎಂದಾಗ ಆಗಲ್ಲ ಎಂದೆ. ಇಲ್ಲ ಮಾಡಲೇಬೇಕು ಎಂದ್ರು. ಶಿವಣ್ಣ ಬಂದ್ರು. ಸೇಮ್ ಡ್ರೆಸ್‌ನಲ್ಲಿ ಇದ್ರು. ಸ್ವಲ್ಪ ಆಂಗಲ್ ಚೇಂಜ್ ಮಾಡ್ಕೊಳ್ಳಿ ಸಾಯಿಗೆ ನಾನೇ ಡ್ಯೂಪ್ ಮಾಡ್ತೀನಿ ಅಂತ ಶಿವಣ್ಣ ಮಾಡಿಬಿಟ್ರು. ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿತ್ತು. ನಾನು ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದೆ. ಸಿನಿಮಾ ಎಲ್ಲಾ ಚೆನ್ನಾಗಿತ್ತು. ಆ ಶಾಟ್‌ಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಆದರೆ ಜನ ಅಂದುಕೊಂಡಿದ್ದು ನಾನು ಅಂತ. ಆ ಕ್ಕ್ರೆಡಿಟ್‌ ಶಿವಣ್ಣ ಅವರಿಗೆ ಸೇರಬೇಕು ಎಂದರು.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ನಟ ಸಾಯಿಕುಮಾರ್ ಅವರನ್ನು ಕನ್ನಡ ಸಿನಿರಸಿಕರು ಡೈಲಾಗ್ ಕಿಂಗ್ ಎಂದೇ ಹೇಳುತ್ತಾರೆ. ಕನ್ನಡದ ‘ಲಾಕಪ್‌ ಡೆತ್’ ಸಿನಿಮಾ ಮೂಲಕ ಅವರಿಗೆ ದೊಡ್ಡ ಬ್ರೇಕ್ ಸಿಕ್ಕಿತ್ತು. ‘ಪೊಲೀಸ್ ಸ್ಟೋರಿ’ ಸಿನಿಮಾ ದಾಖಲೆ ಬರೆದಿತ್ತು. ಮುಂದೆ ‘ಮುದ್ದಿನ ಕಣ್ಮಣಿ’, ‘ಅಗ್ನಿ ಐಪಿಎಸ್’, ‘ಪೊಲೀಸ್ ಸ್ಟೋರಿ-2’, ‘ಕಲ್ಪನಾ’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಇದೀಗ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಎನ್ನುವ ಚಿತ್ರದಲ್ಲಿ ನಿರೂಪ್ ಭಂಡಾರಿ ಜೊತೆ ನಟಿಸುತ್ತಿದ್ದಾರೆ.

Continue Reading

South Cinema

Rashmika Mandanna: ದೇವರ ನಾಡಲ್ಲಿ ರಶ್ಮಿಕಾ ಬೋಲ್ಡ್‌ ಡ್ಯಾನ್ಸ್‌; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್!

Rashmika Mandanna: ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ  ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ,  ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. 

VISTARANEWS.COM


on

Rashmika Mandanna attends an event in Kerala receives love
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಎರಡು ವರ್ಷಗಳ ಬಳಿಕ ದೇವರ ನಾಡು ಕೇರಳಕ್ಕೆ ಆಗಮಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಕೇರಳದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. 2000 ಕ್ಕೂ ಹೆಚ್ಚು ಜನ ನಟಿಯನ್ನು ನೋಡಲು ಮುಗಿ ಬಿದ್ದಿದ್ದರು. ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ  ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ,  ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. 

ಇದೀಗ ರಶ್ಮಿಕಾ ಫೋಟೊ ಶೇರ್‌ ಮಾಡಿ “ನಾನು ನಿಮ್ಮೆಲ್ಲರನ್ನು ಭೇಟಿಯಾದಾಗ ನನ್ನ ಹೃದಯ ತುಂಬಿ ಬಂತು. ಧನ್ಯವಾದಗಳು ಕರುನಾಗಪಲ್ಲಿ. ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಹೀಗಾಗಿ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯುತ್ತಾರೆ. ನಿನ್ನೆ (ಜು. 25) ಕೇರಳದ ಕೊಲ್ಲಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗವಹಿಸಿದ್ದರು, ಆದರೆ ನಟಿಯನ್ನು ವೀಕ್ಷಿಸಲು 2000 ಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದರು. ನಟಿಯನ್ನು ಸ್ವಾಗತಿಸಲು ಕಾರ್ಯಕ್ರಮದ ಸಮಯದಲ್ಲಿ ರಶ್ಮಿಕಾ ಮಂದಣ್ಣ ನಟಿಸಿರುವ ಸಿನಿಮಾಗಳ ಹಲವಾರು ಹಾಡುಗಳನ್ನು ಪ್ರಸಾರ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಸಿರು ಸೀರೆಯಲ್ಲಿ ಕಾಣಿಸಿಕೊಂಡರು ರಶ್ಮಿಕಾ.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ʻರಂಜಿತಮೆ’ ಹಾಡು ಪ್ಲೇ ಆಗುತ್ತಿದ್ದಂತೆ ನೃತ್ಯ ಮಾಡಲು ಪ್ರಾರಂಭಿಸಿದರು ನಟಿ. ನೆರೆದಿದ್ದ ಸಾವಿರಾರು ಅಭಿಮಾನಿಗಳಿಗೆ ತಮ್ಮ ಎಂದಿನ ಸ್ಟೈಲ್‌ನಲ್ಲಿ ಫ್ಲೈಯಿಂಗ್‌ ಕಿಸ್‌ ನೀಡಿದ್ದಾರೆ ನಟಿ. ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ಸಲ್ಮಾನ್‌ ಖಾನ್‌ ಅವರ ಸಿಕಂದರ್‌ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಅದೇ ರೀತಿ ಛಾವಾ ಸಿನಿಮಾಗೆ ರಶ್ನಿಕಾ ನಾಯಕಿ. ಪುಷ್ಪ ಸಿನಿಮಾಗೂ ರಶ್ಮಿಕಾ ನಾಯಕಿ.  ಈಗ ಒಂದೇ ದಿನ ರಶ್ಮಿಕಾ ಅವರ ಈ ಎರಡು ಸಿನಿಮಾಗಳು ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ವರದಿಯಾಗಿದೆ.

‘ಪುಷ್ಪ 2’ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

Continue Reading
Advertisement
Ricky Ponting
ಕ್ರೀಡೆ3 mins ago

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

karnataka Rain
ಮಳೆ3 mins ago

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

PARIS 2024 OLYMPICS
ಕ್ರೀಡೆ21 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ28 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್32 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್51 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ1 hour ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ1 hour ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ2 hours ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ22 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ23 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ24 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌