Site icon Vistara News

Actor Darshan : ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಬಗ್ಗೆ ಚರ್ಚೆ ಆಯ್ತಾ! ಆ ದಿನ ದರ್ಶನ್‌ ಏನ್‌ ಅಂದ್ರು

Actor Chikkanna

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy case) ಚಾರ್ಜ್​ಶೀಟ್​ನಲ್ಲಿ ನಟ ಚಿಕ್ಕಣ್ಣನ (Actor Chikkanna) ಹೇಳಿಕೆಯೂ ಉಲ್ಲೇಖವಾಗಿದೆ. ಅಂದು ಸ್ಟೋನಿಬ್ರೂಕ್​​ನಲ್ಲಿ ದರ್ಶನ್​ (Actor Darshan) ಭೇಟಿ ಮಾಡಿದ್ದ ಚಿಕ್ಕಣ್ಣ ಪೊಲೀಸರಿಗೆ ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ಜೂನ್ 8ರಂದು ಎ.ಪಿ ಅರ್ಜುನ್ ಕಛೇರಿಯಲ್ಲಿ ನನ್ನ ಮುಂದಿನ ಚಿತ್ರದ ಬಗ್ಗೆ ಚರ್ಚೆ‌ ಮಾಡುತ್ತಿದ್ದೆ. ಆಗ ನಟ ಯಶಸ್ ಕರೆ ಮಾಡಿ ದರ್ಶನ್ ಮಧ್ಯಾಹ್ನ ಸ್ಟೋನಿ ಬ್ರೂಕ್ ನಲ್ಲಿ ಊಟ ಅರೆಂಜ್ ಮಾಡಿದ್ದಾರೆ. ನಿನಗೆ ಕರೆ ಮಾಡಿ ತಿಳಿಸುವಂತೆ ಸೂಚಿಸಿದ್ದಾರೆ, ಡೈರೆಕ್ಟಾಗಿ ಸ್ಟೋನಿ ಬ್ರೂಕ್ ಬರುವಂತೆ ಹೇಳಿದ್ದರು. ನಾನು ಬರಲು ಟ್ರೈ ಮಾಡುತ್ತೇನೆಂದು ಯಶಸ್‌ಗೆ ತಿಳಿಸಿದೆ.

ಆದರೆ 10 ನಿಮಿಷಗಳ ನಂತರ ದರ್ಶನ್ ನನಗೆ ಕರೆ ಮಾಡಿ ಬರುವಂತೆ ತಿಳಿಸಿದರುನಾನು ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು 02-45ಕ್ಕೆ‌‌ ನನ್ನ ಖಾಸಗಿ ವಾಹನದಲ್ಲಿ ಡ್ರೈವರ್ ಸಿದ್ದು ಜತೆಯಲ್ಲಿ ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ನಾನು ಸಿದ್ದುನನ್ನು ಕಾರಲ್ಲಿ ಬಿಟ್ಟು ಡಿ ಬಾಸ್ ಸಫಾರಿ ಎಂಬ ಲಾಂಜ್‌ಗೆ ತೆರಳಿದೆ. ಅಲ್ಲಿ ದರ್ಶನ್, ವಿನಯ್, ಪ್ರದೂಷ್, ಯಶಸ್, ನಾಗರಾಜು ಊಟ ಮಾಡುತ್ತಿದ್ದರು. ​​ನಾನು ಕುಳಿತುಕೊಂಡು ನನ್ನ ಮುಂದಿನ ಚಿತ್ರದ ಬಗ್ಗೆ ಮಾತನಾಡುತ್ತಾ, ಊಟ ಮಾಡಿದೆ.

ಇದನ್ನೂ ಓದಿ: Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

ಆಗ ಪವನ್, ದರ್ಶನ್ ಬಳಿಗೆ ಬಂದು ಕಿವಿಯಲ್ಲಿ ಯಾವುದೋ ವಿಚಾರ ತಿಳಿಸಿದರು. ವಿಷಯ ತಿಳಿಸಿದ ನಂತರ ದರ್ಶನ್ ಮುಖಭಾವ ಬದಲಾವಣೆಯಾಗಿತ್ತು. ನಂತರ ದರ್ಶನ್ ಯಾರಿಗೋ ಕರೆ ಮಾಡಿ ಗಂಭೀರವಾಗಿ ಯಾವುದೋ ವಿಚಾರದ ಬಗ್ಗೆ ಚರ್ಚೆ ಮಾಡಿದರು. ನಂತರ ಚಿಕ್ಕಣ್ಣ ನೀನು ಹೊರಡು ನಮಗೆ ಬೇರೆ ಕೆಲಸ ಇದೆ ಎಂದು ದರ್ಶನ್ ತಿಳಿಸಿದರು. ಹೀಗಾಗಿ ಎಲ್ಲರೂ ಒಟ್ಟಿಗೆ ಕೆಳಗೆ ಬಂದಿದ್ದು‌. ನಾನು ಅಲ್ಲಿಂದ ಹೊರಟು ಹೋದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದಲ್ಲಿ ದರ್ಶನ್, ಪ್ರದೂಷ್ ಹಾಗೂ ವಿನಯ್ ಹಾಗೂ ನಾಗರಾಜು ಬಿಳಿ ಬಣ್ಣದ ಸ್ಕಾರ್ಪಿಯೋ ವಾಹನವಲ್ಲಿ ಅಲ್ಲಿಂದ ಹೋದರು.

ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು. ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ನಾಯಕ ನಟ ಹಾಗೂ ಹಾಸ್ಯ ನಟನಾಗಿದ್ದೇನೆ. ನನಗೆ ದರ್ಶನ್ ಬುಲ್ ಬುಲ್ ಚಿತ್ರದ ಸಮಯದಿಂದ ಪರಿಚಯವಾಗಿರುತ್ತದೆ. ನಾನು ಅವರೊಂದಿಗೆ ಸುಮಾರು 03 ಚಿತ್ರಗಳಲ್ಲಿ ಹಾಸ್ಯನಟನಾಗಿ ಕೆಲಸ ಮಾಡಿದ್ದೇನೆ. ರಾಬರ್ಟ್ ಸಿನಿಮಾದ ವೇಳೆ ಹೆಚ್ಚಾಗಿ ಅವರೊಂದಿಗೆ ಒಡನಾಟ ಹೊಂದಿದ್ದೆ. ದರ್ಶನ್- ಪವಿತ್ರಗೌಡ ಜತೆಗೆ ಲಿವಿಂಗ್ ರಿಲೇಷನ್‌ನಲ್ಲಿ ಇದ್ದ ಬಗ್ಗೆ ನನಗೆ ತಿಳಿದಿದೆ ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version