Site icon Vistara News

Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Actor Dhanush

Actor Dhanush

ಚೆನ್ನೈ: ಈಗಾಗಲೇ ಕಾಲಿವುಡ್‌ ನಟ ಧನುಷ್‌ (Actor Dhanush) ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ (Aishwarya Rajinikanth) ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. 2022ರ ಜನವರಿ 17ರಂದು ಧನುಷ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದಾಗಿ ಘೋಷಿಸಿದ್ದರು. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ (Suchitra) ಅವರು ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ಸಂಬಂಧಿಸಿ ಶಾಕಿಂಗ್‌ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೂ ಧನುಷ್‌ ಬಗ್ಗೆ ಆರೋಪ ಹೊರಿಸಿದ್ದ ಸುಚಿತ್ರಾ ಸಂದರ್ಶನವೊಂದರಲ್ಲಿ, ಧನುಷ್‌ ಮತ್ತು ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ ಚಾನಲ್‌ ಕುಮುದಂಗೆ ನೀಡಿದ ಸಂದರ್ಶನಲ್ಲಿ ಸುಚಿತ್ರಾ ಈ ಬಗ್ಗೆ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಇಬ್ಬರೂ ವ್ಯವಸ್ಥಿತವಾಗಿ ಪರಸ್ಪರ ಮೋಸ ಮಾಡಿಕೊಂಡಿದ್ದ ದಂಪತಿ ಎಂದು ಸುಚಿತ್ರಾ ಕರೆದಿದ್ದಾರೆ. ಇವರು ಮದುವೆಯಾದ ಮೇಲೆ ಆಗಾಗ ಇತರರೊಂದಿಗೆ ಡೇಟಿಂಗ್ ಹೋಗುತ್ತಿದ್ದರು ಎಂದೂ ಹೇಳಿದ್ದಾರೆ. ಧನುಷ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸುಚಿತ್ರಾ, ಐಶ್ವರ್ಯಾ ಅವರನ್ನು ಕೆಟ್ಟ ತಾಯಿ ಎಂದು ಜರೆದಿದ್ದಾರೆ ಮತ್ತು ಈ ವಿಚಾರದಲ್ಲಿ ಧನುಷ್‌ ಪರವಾಗಿ ನಿಂತಿದ್ದಾರೆ. ಧನುಷ್ ಪ್ರೀತಿಯ ತಂದೆಯಾಗಿ ತಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯಾ ಅವರು ಯಾವಾಗಲೂ ಧನುಷ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರೂ ಕೂಡ ಅದನ್ನೇ ಮಾಡಿದ್ದಾರೆ. ಆಕೆಗೊಂದು ನ್ಯಾಯ ಆತನಿಗೊಂದು ನ್ಯಾಯವೇ? ಎಂದು ಸುಚಿತ್ರಾ ಪ್ರಶ್ನಿಸಿದ್ದಾರೆ. “ಅವರು ಬಾರ್‌ನಲ್ಲಿ ಕುಳಿತು ಡೇಟಿಂಗ್ ನಡೆಸುತ್ತಿರುವ ವ್ಯಕ್ತಿಯೊಂದಿಗೆ ಮದ್ಯ ಸೇವಿಸಿದ್ದಾರೆ” ಎಂದಿದ್ದಾರೆ.

ತಮ್ಮ ಮಾಜಿ ಪತಿ ಕಾರ್ತಿಕ್ ವಿರುದ್ಧವೂ ಸುಚಿತ್ರಾ ಗಂಭೀರ ಆರೋಪ ಮಾಡಿದ್ದಾರೆ. ʼʼಆತ (ಕಾರ್ತಿಕ್) ಸಲಿಂಗಕಾಮಿ. ಆದರೆ ಅದನ್ನು ಹೇಳಲು ಅವನಿಗೆ ಧೈರ್ಯವಿಲ್ಲ. ಪತಿ ಸಲಿಂಗಕಾಮಿ ಎಂದು ನನಗೆ ಮದುವೆಯಾದ 2 ವರ್ಷಕ್ಕೆ ತಿಳಿಯಿತು. ಧನುಷ್ ಹಾಗೂ ನನ್ನ ಮಾತಿ ಪತಿ ಒಟ್ಟಿಗೆ ಕೋಣೆಯಲ್ಲಿ ಏನು ಮಾಡುತ್ತಿದ್ದರು? ಪಾರ್ಟಿಗಳಲ್ಲಿ ಏನು ನಡೆಯುತ್ತಿತ್ತು?ʼʼ ಎಂದು ಸುಚಿತ್ರಾ ಕೇಳಿದ್ದಾರೆ.

ಧನುಷ್ ವಿರುದ್ಧ ಆರೋಪ ಹೊರಿಸಿದ್ದ ಸುಚಿತ್ರಾ

2017ರಲ್ಲಿ ಸುಚಿತ್ರಾ ಅವರು ಧನುಷ್ ಸಹಾಯಕ ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು. ಆ ಬಳಿಕ ಧನುಷ್ ಬಗ್ಗೆಯೂ ದೂರಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಧನುಷ್‌ ವಿರುದ್ದ ಮಾತನಾಡಿ ಸಂಚಲನ ಮೂಡಿಸಿದ್ದಾರೆ.

ಕಳೆದ ತಿಂಗಳು ಧನುಷ್‌ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ʼʼಇಬ್ಬರೂ ಅಧಿಕೃತವಾಗಿ ಚೆನ್ನೈಯ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ಪರಸ್ಪರ ಗೌರವ ಹೊಂದಿದ್ದಾರೆ. ಇದು ಸೌಹಾರ್ದಯುತ ಪ್ರಕ್ರಿಯೆಯಾಗಲಿದೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಧನುಷ್‌ ‌ʼರಾಯನ್‌ʼ ಚಿತ್ರದಲ್ಲಿ ನಟಿಸುವ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ರಾಷ್ಟ್ರ ಪಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಬಹುಭಾಷಾ ಸಿನಿಮಾ ʼಕುಬೇರʼದಲ್ಲಿಯೂ ಧನುಷ್‌ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಐಶ್ವರ್ಯಾ ರಜನಿಕಾಂತ್‌ ನಿರ್ರದೇಶನದ ʼಲಾಲ್‌ ಸಲಾಂʼ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಅವರ ಮುಂದಿನ ಸಿನಿಮಾ ಇನ್ನಷ್ಟೆ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Exit mobile version