Site icon Vistara News

Actor Dhanush: ಧನುಷ್ ಹೊಸ ಲುಕ್‌ ಕಂಡೊಡನೆ ಬಾಬಾ ರಾಮದೇವ್ ಅಂದ್ರು ನೆಟ್ಟಿಗರು!

Dhanush looks at

#image_title

ಬೆಂಗಳೂರು: ಧನುಷ್ (Actor Dhanush) ಕೊನೆಯದಾಗಿ ʻವಾತಿʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿತು. ಇದು ವಿಮರ್ಶಾತ್ಮಕ ಮೆಚ್ಚುಗೆಯನ್ನು ಪಡೆಯಿತು. ಈ ಸಿನಿಮಾ ವೆಂಕಿ ಅಟ್ಲೂರಿ ನಿರ್ದೇಶಿಸಿದ್ದಾರೆ. ಸದ್ಯ ಅರುಣ್ ಮಾಥೇಶ್ವರನ್ ನಿರ್ದೇಶನದ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ಧನುಷ್ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ನಟ ಶಿವ ರಾಜ್‌ಕುಮಾರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇದೀಗ ನಟ ಮುಂಬೈ ವಿಮಾನ ನಿಲ್ದಾಣದಲ್ಲಿ ಹೊಸ ಲುಕ್‌ನೊಂದಿಗೆ ಕಾಣಿಸಿಕೊಂಡಿದ್ದಾರೆ. ಗಡ್ಡ ಹಾಗೂ ಉದ್ದನೆಯ ಕೂದಲನ್ನು ಕಂಡು ನೆಟ್ಟಿಗರು ನಟ ಧನುಷ್‌ರನ್ನು ಬಾಬಾ ರಾಮದೇವ್ ಎಂದು ಕಮೆಂಟ್‌ ಮಾಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಜೀನ್ಸ್ ಮತ್ತು ಸನ್‌ಗ್ಲಾಸ್‌ನೊಂದಿಗೆ ನೇರಳೆ ಬಣ್ಣದ ಸ್ವೆಟ್ಶರ್ಟ್ ಧರಿಸಿದ್ದರು ಧನುಷ್‌. ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಕಮೆಂಟ್‌ನಲ್ಲಿ ʻʻಕ್ಯಾಶುಯಲ್ ಬಟ್ಟೆಗಳನ್ನು ಧರಿಸಿ ಹೊರಬಂದಿರುವುದು ನೋಡಿದರೆ ಬಾಬಾ ರಾಮದೇವ್ ಎಂದು ನಾನು ಭಾವಿಸಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು ʻʻಗುರುತು ಹಿಡಿಯಲಾರದಷ್ಟು ವಿಭಿನ್ನವಾಗಿ ಕಾಣುತ್ತಿದ್ದಾರೆʼʼಎಂದರೆ ಇನ್ನೊಬ್ಬರು ʻ”ಬಾಬಾ ರಾಮದೇವ್.. ಅದು ನೀವೇ?” ಎಂದು ಕಮೆಂಟ್‌ ಮಾಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ಧನುಷ್‌

ಕ್ಯಾಪ್ಟನ್‌ ಮಿಲ್ಲರ್‌ ಸಿನಿಮಾ

ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ. ಇನ್ನು ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಈ ‘ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ; Actor Dhanush: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ಸ್ಟಾರ್‌ ಧನುಷ್‌!

ವೈರಲ್‌ ವಿಡಿಯೊ

ಐತಿಹಾಸಿಕ ಕಥಾ ಹಂದರ ಹೊಂದಿರುವ ‘ಕ್ಯಾಪ್ಟನ್ ಮಿಲ್ಲರ್’ !

ಈ ಚಿತ್ರ 1930 ಮತ್ತು 40ರ ದಶಕದ ಮದ್ರಾಸ್‌ ಪ್ರೆಸಿಡೆನ್ಸಿ ಹಿನ್ನೆಲೆಯಲ್ಲಿ ಸೆಟ್ಟೇರಲಿದೆ. ಶೀಘ್ರದಲ್ಲಿಯೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರಕ್ಕೆ ಶ್ರೇಯಸ್ ಕೃಷ್ಣ ಅವರ ಛಾಯಾಗ್ರಹಣ, ನಾಗೂರನ್ ಅವರ ಸಂಕಲನ ಮತ್ತು ಜಿ ವಿ ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ ಇದೆ. ಸತ್ಯಜ್ಯೋತಿ ಫಿಲ್ಮ್ಸ್‌ನ ಸೆಂಧಿಲ್‌ ತ್ಯಾಗರಾಜನ್‌ ಮತ್ತು ಅರ್ಜುನ್‌ ತ್ಯಾಗರಾಜನ್‌ ನಿರ್ಮಿಸಿರುವ ʻಕ್ಯಾಪ್ಟನ್‌ ಮಿಲ್ಲರ್‌ʼ 2023ರಲ್ಲಿ ತೆರೆ ಕಾಣಲಿದೆ. ಮದನ್‌ ಕರ್ಕಿ ಸಂಭಾಷಣೆ ಇದೆ. ರಾಷ್ಟ್ರ ಪ್ರಶಸ್ತಿ ವಿಜೇತೆ ಪೂರ್ಣಿಮಾ ರಾಮಸ್ವಾಮಿ ಮತ್ತು ಕಾವ್ಯ ಶ್ರೀರಾಮ್‌ ಅವರು ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅರುಣ್ ಮಾಥೇಶ್ವರನ್ ನಿರ್ದೇಶನದ, ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ಧನುಷ್ ದ್ವಿಪಾತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿಗಳಿವೆ. ತಂದೆ ಹಾಗೂ ಮಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಸರಿಡದ ತಮಿಳು ಚಿತ್ರಕ್ಕಾಗಿ ಒಂದಾದ ಮಾರಿ ಸೆಲ್ವರಾಜ್ ಮತ್ತು ಧನುಷ್‌

ಕ್ಯಾಪ್ಟನ್ ಮಿಲ್ಲರ್ ಜತೆಗೆ, ಧನುಷ್ ನಿರ್ದೇಶಕ ಮಾರಿ ಸೆಲ್ವರಾಜ್ ಅವರ ಮುಂಬರುವ ಇನ್ನೂ ಹೆಸರಿಡದ ತಮಿಳು ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಹಿಂದೆ ಕರ್ಣನ್ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳಿದ ಮಾರಿ ಸೆಲ್ವರಾಜ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ವಂಡರ್‌ಬಾರ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಈ ಸಿನಿಮಾ ನಿರ್ಮಿಸಲಿದ್ದಾರೆ. ಏಪ್ರಿಲ್ 9ರಂದು, ಧನುಷ್ ಅವರು ಹೊಸ ಚಿತ್ರವನ್ನು ಮಾರಿ ಸೆಲ್ವರಾಜ್ ಅವರೊಂದಿಗೆ ಘೋಷಿಸಿದ್ದರು.

Exit mobile version