Actor Gopichand: ಟಾಲಿವುಡ್‌ ನಟ ಗೋಪಿಚಂದ್ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ ಎ.ಹರ್ಷ Vistara News
Connect with us

ಟಾಲಿವುಡ್

Actor Gopichand: ಟಾಲಿವುಡ್‌ ನಟ ಗೋಪಿಚಂದ್ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ ಎ.ಹರ್ಷ

ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ ಇದಾಗಿದ್ದು, .ಕೆ.ರಾಧಾಮೋಹನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ನಟ ಗೋಪಿಚಂದ್ (Actor Gopichand) ಅವರ 31 ಚಿತ್ರಕ್ಕೆ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

VISTARANEWS.COM


on

Actor Gopichand
Koo

ಬೆಂಗಳೂರು: ‘ಭಜರಂಗಿ’, ‘ವಜ್ರಕಾಯ’, ‘ವೇದ’ ಸೂಪರ್ ಹಿಟ್ ಸಿನಿಮಾಗಳ ಖ್ಯಾತಿಯ ಎ.ಹರ್ಷ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಾಲಿವುಡ್ ಸ್ಟಾರ್ ನಟ ಗೋಪಿಚಂದ್ (Actor Gopichand) ಅವರ 31 ಚಿತ್ರಕ್ಕೆ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಗೋಪಿಚಂದ್ ಹಾಗೂ ಹರ್ಷ ಕಾಂಬಿನೇಶನ್ ಸಿನಿಮಾ ಅದ್ಧೂರಿಯಾಗಿ ಸೆಟ್ಟೇರಿದ್ದು, ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್‌ನಡಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ ಇದಾಗಿದ್ದು, .ಕೆ.ರಾಧಾಮೋಹನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಪಕ ಕೆ.ಕೆ.ರಾಧಾಮೋಹನ್ ಮಾತನಾಡಿ ʻʻಗೋಪಿಚಂದ್ ಹಾಗೂ ಎ.ಹರ್ಷ ಜತೆ ಸೇರಿ ಸಿನಿಮಾ ಮಾಡುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದು ನಮ್ಮ ನಿರ್ಮಾಣ ಸಂಸ್ಥೆಯ 14ನೇ ಸಿನಿಮಾ. ನಿರ್ದೇಶಕರು ಪವರ್ ಫುಲ್ ಸಬ್ಜೆಕ್ಟ್ ಇರುವ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೋಪಿಚಂದ್ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಇದೇ ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆʼʼ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Rashmi Gautam: ಸಂಕಷ್ಟದಲ್ಲಿ ಟಾಲಿವುಡ್‌ ನಿರೂಪಕಿ, ನಟಿ ರಶ್ಮಿ ಗೌತಮ್!

Actor Gopichand

ಸ್ವಾಮಿ.ಜೆ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಸಿನಿಮಾದ ತಾರಾಬಳಗ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

South Cinema

Salaar Movie: ಈ ವರ್ಷ ʻಸಲಾರ್‌ʼ ರಿಲೀಸ್‌ ಇಲ್ಲ; ಕಾರಣವೇನು?

Salaar Movie: ಶಾರುಖ್ ಖಾನ್ ಅವರ ʼಜವಾನ್ʼ ಸೆಪ್ಟೆಂಬರ್ 7ರಂದು ಬಿಡುಗಡೆಯಾಗುತ್ತಿದ್ದಂತೆ, ಹಲವರು ʼಸಲಾರ್‌ʼ ಮುಂದೂಡಿದ್ದು ಇದೇ ಕಾರಣಕ್ಕೆ ಎಂದು ಬರೆದುಕೊಂಡಿದ್ದರು. ಆದರೆ ಕಾರಣ ಬೇರೆಯೇ ಇದೆ.

VISTARANEWS.COM


on

Edited by

Salaar Movie
Koo

ಬೆಂಗಳೂರು: ಪ್ರಶಾಂತ್‌ ನೀಲ್‌ ನಿರ್ದೇಶನ ಹಾಗೂ ಪ್ರಭಾಸ್‌ ನಟನೆಯ ‘ಸಲಾರ್’ (Salaar Movie) ಸಿನಿಮಾ ಸೆಪ್ಟೆಂಬರ್ 28ಕ್ಕೆ ರಿಲೀಸ್ (Release) ಆಗಲಿದೆ ಎಂದು ಈ ಹಿಂದೆ ಹೊಂಬಾಳೆ ಫಿಲ್ಮ್ಸ್ (salaar part 1 – ceasefire) ಘೋಷಣೆ ಮಾಡಿತ್ತು. ಆದರೆ, ಸಿನಿಮಾವನ್ನು ಈ ದಿನಾಂಕದಂದು ಬಿಡುಗಡೆ ಮಾಡಲು ಆಗುತ್ತಿಲ್ಲವೆಂದು ಅದು ಘೋಷಣೆ ಈಗಾಗಲೇ ಮಾಡಿದೆ. ಗುಣಮಟ್ಟದ ದೃಷ್ಟಿಯಿಂದ ʼಸಲಾರ್‌ʼ ಸಿನಿಮಾಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ ಎಂದು ಟ್ವಿಟರ್‌ ಮೂಲಕ ಅಧಿಕೃತ ಮಾಹಿತಿ ಹಂಚಿಕೊಂಡಿತ್ತು. ಟ್ರೇಡ್‌ ವಿಶ್ಲೇಷಕ ಮನೋಬಾಲಾ ವಿಜಯಬಾಲನ್ ಅವರು ಈ ಬಗ್ಗೆ ಟ್ವೀಟ್‌ ಹಂಚಿಕೊಂಡಿದ್ದಾರೆ.

ಸಲಾರ್ ಬಿಡುಗಡೆ ವಿಳಂಬ ಏಕೆ?

ಮನೋಬಾಲಾ ವಿಜಯಬಾಲನ್ ತಮ್ಮ ಇತ್ತೀಚಿನ ಟ್ವೀಟ್‌ನಲ್ಲಿ, “ತಂಡವು ಅತ್ಯುನ್ನತ ಗುಣಮಟ್ಟವನ್ನು ಪೂರೈಸಲು ಕೆಲಸ ಮಾಡುತ್ತಿದೆ. ಅಸಾಧಾರಣ ಸಿನಿಮೀಯ ಅನುಭವವನ್ನು ನೀಡಲು ಬದ್ಧರಾಗಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ಹೊಂಬಾಳೆ ಹೇಳಿದ್ದೇನು?

ಸಿನಿಮಾ ಬಿಡುಗಡೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಹೊಂಬಾಳೆ, ‘ನಾವು ಅತ್ಯುತ್ತಮವಾದ ಸಿನಿಮಾವನ್ನು ಕೊಡಲು ಸಿದ್ಧವಾಗುತ್ತಿದ್ದೇವೆ. ಆದರೆ ನಾನಾ ಕಾರಣಗಳಿಂದಾಗಿ ಸೆ.28ರಂದು ಸಿನಿಮಾ ಬಿಡುಗಡೆ ಮಾಡಲು ಆಗುತ್ತಿಲ್ಲ. ನಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸುತ್ತೇವೆ. ಬಿಡುಗಡೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಈ ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ನಿಮಗೆ ಧನ್ಯವಾದಗಳು’ ಎಂದು ಹೇಳಿಕೊಂಡಿತ್ತು.

ಶಾರುಖ್ ಖಾನ್ ಅವರ ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗುತ್ತಿದ್ದಂತೆ, ಹಲವರು ʼಸಲಾರ್‌ʼ ಮುಂದೂಡಿದ್ದು ಇದೇ ಕಾರಣ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Salaar Movie: ಸೆ. 28ಕ್ಕೆ ರಿಲೀಸ್‌ ಆಗುತ್ತಿಲ್ಲ ʻಸಲಾರ್‌ʼ; ಹೊಂಬಾಳೆ ಸಂಸ್ಥೆ ಹೇಳಿದ್ದೇನು?

ʻಆದಿಪುರುಷ’ ಚಿತ್ರದ ಸೋಲಿನ ನಂತರ ಪ್ರಭಾಸ್ (Actor Prabhas) ತಮ್ಮ ಮುಂಬರುವ ಬಿಗ್-ಬಜೆಟ್ ಚಿತ್ರ ‘ಸಲಾರ್‌’ (Salaar Movie) ಮೇಲೆ ಭಾರಿ ಭರವಸೆಯನ್ನು ಇಟ್ಟುಕೊಂಡಿದ್ದಾರೆ. ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಸಲಾರ್’ ಟೀಸರ್ ಈಗಾಗಲೇ ಬಿಡುಗಡೆಗೊಂಡಿದ್ದು. ಸೂಪರ್ ಹಿಟ್ ಆಗಿದೆ. 100 ಮಿಲಿಯನ್‌ಗೂ ಅಧಿಕ ವ್ಯೂಸ್ ಸಾಧಿಸಿದೆ. ಆದರೂ ಕೂಡ ಟೀಸರ್ ಬಗ್ಗೆ ಕೆಲವು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಪ್ರಭಾಸ್‌ ಲುಕ್ ರಿವೀಲ್ ಮಾಡಿಲ್ಲ ಎಂದಿದ್ದರು. ಇನ್ನು ʼಸಲಾರ್‌ʼ ಸಿನಿಮಾದ ವಿತರಣೆಯ ಹಕ್ಕನ್ನು ಪ್ರತ್ಯಾಂಗೀರ್‌ ಸಿನಿಮಾಸ್‌ ಪಡೆದುಕೊಂಡಿದೆ.

ಬಹು ನಿರೀಕ್ಷೆಯ ʼಸಲಾರ್‌ʼ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್‌ ಅವರು ನಾಯಕ ನಟಿಯಾಗಿದ್ದಾರೆ. ಪೃಥ್ವಿರಾಜ್‌ ಸುಕುಮಾರನ್‌, ಜಗಪತಿ ಬಾಬು, ಈಶ್ವರಿ ರಾವ್‌ ಸೇರಿ ಹಲವು ಪ್ರಮುಖರು ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಎರಡು ಭಾಗಗಳಲ್ಲಿ ನಿರ್ಮಾಣವಾಗಿದೆ ಎಂದೂ ವರದಿಯಾಗಿದೆ.

Continue Reading

South Cinema

Sai Pallavi: ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ; ಸಾಯಿ ಪಲ್ಲವಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌!

Sai Pallavi: ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್‌ನಡಿ ನಿರ್ಮಾಣ ಮಾಡುತ್ತಿದ್ದಾರೆ.

VISTARANEWS.COM


on

Edited by

Sai Pallavi with Geetha Arts film
Koo

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ ಸಿನಿಮಾಗೆ ನಾಯಕಿಯಾಗಿ ಸಾಯಿ ಪಲ್ಲವಿ (Sai Pallavi:) ಆಯ್ಕೆಯಾಗಿದ್ದಾರೆ. ʻಲವ್ ಸ್ಟೋರಿʼ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್‌ನಡಿ ನಿರ್ಮಾಣ ಮಾಡುತ್ತಿದ್ದಾರೆ.

ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಇತ್ತೀಚೆಗೆ ನಾಯಕ ಚೈತನ್ಯ ಹಾಗೂ ನಿರ್ದೇಶಕ ಚಂದು ಮೊಂಡೇಟಿ ಆಂಧ್ರಪ್ರದೇಶದ ಶ್ರೀಕಾಕುಳಂಗೆ ಭೇಟಿ ನೀಡಿ, ಮೀನುಗಾರರ ಕುಟುಂಬಗಳ ಜೊತೆ ಕಾಲಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಸದ್ಯ NC23 ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.

ಚಂದೂ ಮೊಂಡೇಟಿ ಮಾತನಾಡಿ, “ಕಾರ್ತಿಕ್ ಎಂಬ ಸ್ಥಳೀಯ ವ್ಯಕ್ತಿ 2018 ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಕಥೆಯನ್ನು ಸಿದ್ಧಪಡಿಸಿದ್ದಾರೆ. ಅವರು ಆರಂಭದಲ್ಲಿ ಅರವಿಂದ್ ಮತ್ತು ಬನ್ನಿ ವಾಸ್ ಅವರಿಗೆ ಕಥೆಯನ್ನು ಹೇಳಿದರು. ಕಥೆ ಕೇಳಿದಾಗ ಎಕ್ಸೈಟ್ ಆದೆ. ನಾವು ಕಳೆದ 2 ವರ್ಷಗಳಿಂದ ಸ್ಕ್ರಿಪ್ಟ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ. ಇದೀಗ ಸ್ಕ್ರಿಪ್ಟ್ ಸಿದ್ಧವಾಗಿದ್ದು, ಚೆನ್ನಾಗಿ ಬಂದಿದೆ. ಚೈತನ್ಯ ಕಥೆಯಿಂದ ಸಂತಸಗೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿಯೇ ಸಿನಿಮಾದ ಪ್ರಿ-ಪ್ರೊಡಕ್ಷನ್‌ ಆರಂಭಿಸಲು ನಾವು ಬಯಸಿದ್ದೇವೆʼʼ ಎಂದು ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: Naga Chaitanya: ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್; 2ನೇ ಮದುವೆ ಫಿಕ್ಸ್?

ಲವ್ ಸ್ಟೋರಿ ಸಿನಿಮಾದಲ್ಲಿ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿಯ ಕೆಮಿಸ್ಟ್ರಿ ಸಖತ್ ವರ್ಕೌಟ್ ಆಗಿತ್ತು. ತೆರೆಮೇಲೆ ಮ್ಯಾಜಿಕ್ ಮಾಡಿದ್ದ ಈ ಜೋಡಿ ಮತ್ತೊಮ್ಮೆ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಬಹಳ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಶೀಘ್ರದಲ್ಲಿಯೇ ಅಪ್ ಡೇಟ್ ನೀಡಲಿದೆ ಚಿತ್ರತಂಡ.

Continue Reading

South Cinema

Actor Navdeep: ಡ್ರಗ್ಸ್ ಕೇಸ್‌ನಲ್ಲಿ ಜನಪ್ರಿಯ ಟಾಲಿವುಡ್ ನಟ ನವದೀಪ್‌; ಪೊಲೀಸರಿಂದ ಶೋಧ!

Actor Navdeep: ನ್ಯಾಯಾಲಯವು ನಿಗದಿಪಡಿಸಿದ ಗಡುವು ಇಂದು ಕೊನೆಗೊಂಡಿದ್ದರಿಂದ, ಪೊಲೀಸರು ಅವರ ಮನೆಯ ಮೇಲೆ ದಾಳಿ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Edited by

Actor Navdeep
Koo

ಬೆಂಗಳೂರು: ಜನಪ್ರಿಯ ಟಾಲಿವುಡ್ ನಟ ನವದೀಪ್ ( Actor Navdeep) ಅವರು ಮಾದಾಪುರ ಡ್ರಗ್​ ಕೇಸ್​ನಲ್ಲಿ ( drugs from peddlers) 37ನೇ ಆರೋಪಿ ಆಗಿದ್ದಾರೆ. ಅವರ ವಿಚಾರಣೆಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದಾಗ ನಟ (Navdeep is named Accused No. 37) ತನ್ನ ನಿವಾಸದಲ್ಲಿ ಇರಲಿಲ್ಲ. ತನಗೂ ಈ ಡ್ರಗ್ಸ್ ಕೇಸಿಗೂ ಸಂಬಂಧವೇ ಇಲ್ಲ ಎಂದು ಹೇಳಿಕೊಂಡು ಬಂದಿರುವ ನಟ ಸದ್ಯ ತಲೆಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ನ್ಯಾಯಾಲಯವು ನಿಗದಿಪಡಿಸಿದ ಗಡುವು ಇಂದು ಕೊನೆಗೊಂಡಿದ್ದರಿಂದ, ಪೊಲೀಸರು ಅವರ ಮನೆಯ ಮೇಲೆ ದಾಳಿ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೀಪ್ ಅವರು ಮಾದಾಪುರ ಡ್ರಗ್​ ಕೇಸ್​ನಲ್ಲಿ 37ನೇ ಆರೋಪಿ ಆಗಿದ್ದಾರೆ. ಅವರ ವಿಚಾರಣೆಗೆ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಅವರ ಸುಳಿವು ಸಿಗುತ್ತಿಲ್ಲ. ಬಂಧಿತರಲ್ಲಿ ಮಾಜಿ ಸಂಸದ ಡಿ ವಿಠಲ್ ರಾವ್ ಅವರ ಪುತ್ರ ದೇವರಕೊಂಡ ಸುರೇಶ್ ರಾವ್, ಚಲನಚಿತ್ರ ನಿರ್ದೇಶಕ ಅನುಗು ಸುಶಾಂತ್ ರೆಡ್ಡಿ ಮತ್ತು ನೈಜೀರಿಯಾದ ಪೆಡ್ಲರ್‌ಗಳಾದ ಅಮೋಬಿ ಚುಕ್ವುಡಿ ಮೂನಾಗೊಲು (Chukwudi Muonagolu), ಇಗ್ಬಾವ್ರೆ ಮೈಕೆಲ್ ಮತ್ತು ಥಾಮಸ್ ಅನಗಾ (Thomas Anaga Kalu) ಕಾಲು ಕೂಡ ಇದ್ದಾರೆ.

ಇದನ್ನೂ ಓದಿ: Hostel Hudugaru Bekagiddare: ಕನ್ನಡದಲ್ಲಿ ಗೆದ್ದ ಹಾಸ್ಟೆಲ್‌ ಹುಡುಗ್ರು ಟಾಲಿವುಡ್‌ಗೆ ಎಂಟ್ರಿ!

ಈ ಪ್ರಕರಣದಲ್ಲಿ ನಟ ನವದೀಪ್ ಮತ್ತು ಚಿತ್ರ ನಿರ್ಮಾಪಕ ರವಿ ಉಪ್ಪಲಪಾಟಿ ತಲೆಮರೆಸಿಕೊಂಡಿದ್ದಾರೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ರೀತಿಯ ಪ್ರಕರಣ ಹೆಚ್ಚಾಗುತ್ತಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು. ನವದೀಪ್ ಅವರು 2004ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಧಾರಾವಾಹಿಗಳಲ್ಲೂ ಅವರು ಅಭಿನಯಿಸಿದ್ದಾರೆ. ಆ ಬಳಿಕ ಹಲವು ತೆಲುಗು ಸಿನಿಮಾಗಳಲ್ಲಿ ಅವರು ನಟಿಸಿದರು.

Continue Reading

South Cinema

Samantha Ruth Prabhu: ಮತ್ತೆ ಒಂದಾಗ್ತಾರಾ ಸಮಂತಾ-ನಾಗಚೈತನ್ಯ? ಫೋಟೊ ವೈರಲ್‌!

Samantha Ruth Prabhu: ನಾಗ ಚೈತನ್ಯ ಜತೆ ಬೇರ್ಪಟ್ಟ ಬಳಿಕ ಸಮಂತಾ ರುತ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಳೆಯ ಫೋಟೊಗಳನ್ನು ತೆಗೆದು ಹಾಕಿದ್ದರು. ಆದರೀಗ ಮಾಜಿ ದಂಪತಿ ಮತ್ತೆ ಒಂದಾಗಬಹುದು ಎಂದು ಕೆಲವರು ಕಮೆಂಟ್‌ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Edited by

Samantha Ruth Prabhu with Naga Chaitanya
Koo

ಬೆಂಗಳೂರು: ಈಗಾಗಲೇ ಸಮಂತಾ-ನಾಗಚೈತನ್ಯ (Samantha Ruth Prabhu) ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾಗಿದೆ. ಕೆಲವು ದಿನಗಳ ಹಿಂದೆ ನಾಗಚೈತನ್ಯ ಎರಡನೇ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂತಲೂ ವರದಿಯಾಗಿದೆ. ಆದರೀಗ ಸಮಂತಾ ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮದುವೆಯ ಫೋಟೊ ಮತ್ತೆ ಕಾಣಿಸಲು ಆರಂಭಿಸಿದೆ. ನಾಗ ಚೈತನ್ಯ ಜತೆ ಬೇರ್ಪಟ್ಟ ಬಳಿಕ ಸಮಂತಾ ರುತ್​ ಪ್ರಭು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಳೆಯ ಫೋಟೊಗಳನ್ನು ತೆಗೆದು ಹಾಕಿದ್ದರು. ಆದರೀಗ ಮಾಜಿ ದಂಪತಿ ಮತ್ತೆ ಒಂದಾಗಬಹುದು ಎಂದು ಕೆಲವರು ಕಮೆಂಟ್‌ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷ ತಮ್ಮ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್‌ ಇಡುತ್ತಿದ್ದಂತೆ ಸಮಂತಾ ಅವರು ನಾಗ ಚೈತನ್ಯ ಅವರೊಂದಿಗಿನ ಬಹುತೇಕ ಎಲ್ಲಾ ಚಿತ್ರಗಳನ್ನು ತೆಗೆದುಹಾಕಿದ್ದರು. ಆದರೀಗ ಮದುವೆಯ ಫೋಟೊವೊಂದು ಏಕಾಏಕಿ ಖಾತೆಯಲ್ಲಿ ಕಾಣಿಸತೊಡಗಿದೆ. ಈ ಸುದ್ದಿ ವೈರಲ್‌ ಆಗುತ್ತಿದ್ದಂತೆ ಬಹುತೇಕರು ʻʻಆದಷ್ಟು ಬೇಗ ಇಬ್ಬರೂ ಒಂದಾಗಿʼʼಎಂದು ಕಮೆಂಟ್‌ ಮಾಡಿದ್ದಾರೆ. ವರದಿಯ ಪ್ರಕಾರ ಈಗಾಗಲೇ ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಲ್‌ ಜತೆ ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಮಂತಾ ತಮ್ಮ ವೈಯಕ್ತಿಕ ಜೀವನದ ಕಹಿ ಘಟನೆಗಳನ್ನು ಮರೆತು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸುವ ಮುಂಬರುವ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಮತ್ತು ಸಲ್ಮಾನ್ ಖಾನ್ ರೊಮ್ಯಾನ್ಸ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.ಈ ಚಿತ್ರಕ್ಕಾಗಿ ನಿರ್ದೇಶಕ ವಿಷ್ಣುವರ್ಧನ್ ಅವರೊಂದಿಗೆ ಸಮಂತಾ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಈ ಸಿನಿಮಾಗೆ ಸಮಂತಾ ಜತೆಗೆ ತ್ರಿಶಾ ಮತ್ತು ಅನುಷ್ಕಾ ಶೆಟ್ಟಿ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: Samantha Ruth Prabhu: ನಿಜ ಜೀವನದಲ್ಲಿಯೂ ಒಂದಾಗಿ ಅಂದ್ರು ಫ್ಯಾನ್ಸ್‌; ಹೇಗಿತ್ತು ಸಮಂತಾ ʻಖುಷಿʼ?

ಸಲ್ಮಾನ್ ಖಾನ್ ಮತ್ತು ಕರಣ್ ಜೋಹರ್ ಒಟ್ಟಿಗೆ ಮತ್ತೆ ಸಿನಿಮಾ ಮಾಡಲಿದ್ದಾರೆ ಎಂದು ಈ ಮುಂಚೆಯೇ ಗಾಸಿಪ್‌ಗಳು ಹಬ್ಬಿತ್ತು. 1998ರಲ್ಲಿ ಕುಚ್ ಕುಚ್ ಹೋತಾ ಹೈನಲ್ಲಿ ಸಲ್ಮಾನ್ ಕಾಣಿಸಿಕೊಂಡ ನಂತರ ಬರೋಬ್ಬರಿ 25 ವರ್ಷಗಳ ಬಳಿಕ ಕರಣ್‌ ಜತೆ ಕೈ ಜೋಡಿಸುತ್ತಿದ್ದಾರೆ ಸಲ್ಮಾನ್‌. 2023ರ ನವೆಂಬರ್‌ನಲ್ಲಿ ಈ ಸಿನಿಮಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಪ್ರಿ-ಪ್ರೊಡಕ್ಷನ್ ಕೆಲಸವು ಆಗಸ್ಟ್ 2023ರಿಂದ ಶುರುವಾಗಲಿದೆ ಎಂದೂ ವರದಿಯಾಗಿದೆ.

ಸಮಂತಾ ಇತ್ತೀಚೆಗೆ ವಿಜಯ್ ದೇವರಕೊಂಡ ಜತೆ ʼಖುಷಿʼ ಚಿತ್ರದಲ್ಲಿ ಕಾಣಿಸಿಕೊಂಡರು. ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಂಡಿತು. ಸಮಂತಾ ಅವರಿಗೆ ವಿಜಯ್‌ ದೇವರಕೊಂಡ ಅವರ ಜತೆ ಇದು ಎರಡನೇ ಸಿನಿಮಾವಾಗಿದೆ. ಈ ಹಿಂದೆ 2018ರಲ್ಲಿ ನಟಿ ವಿಜಯ್‌ ಅವರೊಂದಿಗೆ ‘ಮಹಾನಟಿ’ ಸಿನಿಮಾದಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು. ಶೀಘ್ರದಲ್ಲೇ ಸಿಟಾಡೆಲ್‌ನ ಭಾರತೀಯ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ವರುಣ್ ಧವನ್ ಸಹ ನಟಿಸಿದ್ದಾರೆ.

Continue Reading
Advertisement
cauvery protest
ಕರ್ನಾಟಕ5 mins ago

Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್‌ ಫಿಕ್ಸ್‌?

Chaitra Gagan kadur and Halashri Swameeji
ಉಡುಪಿ16 mins ago

Chaitra Kundapura : ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್‌ ಆಗಿದ್ದು 3.67 ಕೋಟಿ, ಹಾಲಶ್ರೀಯ ಐಷಾರಾಮಿ ಕಾರು ನೋಡಿದ್ರಾ?

Kamal Haasan And Udhayanidhi Stalin
ದೇಶ35 mins ago

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

mandya bundh
ಕರ್ನಾಟಕ49 mins ago

Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

Sanjay and Halashri
ಕರ್ನಾಟಕ1 hour ago

Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!

narendra modi justi Trudeau
ದೇಶ1 hour ago

India Canada Row: ನಿಜ್ಜರ್‌ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ

Hardeep Singh Nijjar
ದೇಶ2 hours ago

India Canada Row: ನಿಜ್ಜರ್‌ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ

holehonnur tension
ಶಿವಮೊಗ್ಗ2 hours ago

Communal Tension: ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಪ್ರತಿಭಟನೆ

Team india Record
ಕ್ರಿಕೆಟ್2 hours ago

ind vs aus : 21ನೇ ಶತಮಾನದಲ್ಲಿ ಭಾರತ ಕ್ರಿಕೆಟ್​ ತಂಡದ ವಿಶೇಷ ದಾಖಲೆ, ಮೊಹಾಲಿ ಕ್ರೀಡಾಂಗಣವೇ ಸಾಕ್ಷಿ

life tips
ಲೈಫ್‌ಸ್ಟೈಲ್2 hours ago

Life Tips: ಹೇಗೇ ಇದ್ದರೂ ಬದುಕು ಸುಂದರವಾಗಿ ಕಾಣಬೇಕೆಂದರೆ ಇಲ್ಲಿದೆ ಕೀಲಿಕೈ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ5 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌