Actor Nagabhushana: ಡ್ರಿಂಕ್ ಆ್ಯಂಡ್‌ ಡ್ರೈವ್ ಅಲ್ಲ; ಬಂಧನದ ಬಳಿಕ ನಟ ನಾಗಭೂಷಣ ಹೇಳಿದ್ದೇನು? - Vistara News

South Cinema

Actor Nagabhushana: ಡ್ರಿಂಕ್ ಆ್ಯಂಡ್‌ ಡ್ರೈವ್ ಅಲ್ಲ; ಬಂಧನದ ಬಳಿಕ ನಟ ನಾಗಭೂಷಣ ಹೇಳಿದ್ದೇನು?

Actor Nagabhushana: ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಇದೀಗ ನಟನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಈ ಘಟನೆ ಬಗ್ಗೆ ನಟ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Actor Nagabhushana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಹಾಸ್ಯನಟ ನಾಗಭೂಷಣ ಅವರ (Actor Nagabhushana) ಕಾರು ಅಪಘಾತಕ್ಕೆ ಒಳಗಾಗಿದೆ. ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಇದೀಗ ನಟನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಈ ಘಟನೆ ಬಗ್ಗೆ ನಟ ಪ್ರತಿಕ್ರಿಯಿಸಿದ್ದಾರೆ.

ಅಪಘಾತದ ಕುರಿತು ನಟ ನಾಗಭೂಷಣ ಮಾತನಾಡಿ ‘ಅಕ್ಟೋಬರ್​ 30ರಂದು ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ, ಸ್ನೇಹಿತರನ್ನು ಭೇಟಿ ಮಾಡಿಕೊಂಡು ವಾಪಸ್ ಜೆ.ಪಿ. ನಗರದಲ್ಲಿರುವ ನಮ್ಮ ಮನೆಗೆ ನನ್ನ ಕಾರಿನಲ್ಲಿ ಹೋದೆ. ಸುಮಾರು 9.45 ಗಂಟೆಯ ಸಮಯದಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಒಬ್ಬ ಹೆಂಗಸು ಮತ್ತು ಒಬ್ಬರು ಗಂಡಸು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ನಾನು ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ ನಂತರ ಮುಂದೆ ಹೋಗಿ ಪುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು. ತಕ್ಷಣ ನಾನು ಆಸ್ಪತ್ರೆಗೆ ಸೇರಿಸಬೇಕೆಂದು ಕಾರು ಸ್ಟಾರ್ಟ್‌ ಮಾಡಿದೆ. ಆದರೆ ಕಾರು ಸ್ಟಾರ್ಟ್‌ ಆಗಿಲ್ಲ. ಆಟೋರಿಕ್ಷಾದಲ್ಲಿ ಅಲ್ಲಿದ್ದ ಜನರ ಜತೆ ಸೇರಿಕೊಂಡು ಗಾಯಾಳುಗಳನ್ನು ಕೂರಿಸಿಕೊಂಡು ಅಸ್ಟ್ರಾ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿದಾಗ ವೈದ್ಯರು‌ ಬರುವ ದಾರಿಯ ಮಧ್ಯದಲ್ಲಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ನಾಗಭೂಷಣ್​ ಹೇಳಿಕೆ ನೀಡಿದ್ದಾರೆ. ರಾತ್ರಿಯೇ ನಾಗಭೂಷಣ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಿಂಕ್ಸ್ ಮಾಡಿಲ್ಲ ಎಂದು ಪತ್ತೆಯಾಗಿದೆ. ಇದು ಡ್ರಿಂಕ್ ಆ್ಯಂಡ್‌ ಡ್ರೈವ್ ಕೇಸ್ ಅಲ್ಲʼʼ ಎಂದು ಕೂಡ ಮಾಹಿತಿ ಬಹಿರಂಗಗೊಂಡಿದೆ.

ಇದನ್ನೂ ಓದಿ: Actor Nagabhushana: ದಂಪತಿಗೆ ನಟ ನಾಗಭೂಷಣ ಕಾರು ಡಿಕ್ಕಿ, ಮಹಿಳೆ ಸಾವು; ಹಿಟ್‌ ಆ್ಯಂಡ್‌ ರನ್?

ಈ ಅಪಘಾತದಲ್ಲಿ (Road Accident) 48 ವರ್ಷದ ಪ್ರೇಮಾ​ ಎಸ್​. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟಲದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್‌ ಬಳಿಯ ಫುಟ್‌ಪಾತ್‌ ಮೇಲೆ ವಾಕಿಂಗ್‌ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

Rishab Shetty: ಸದ್ಯ ʼಕಲ್ಕಿ 2898 ಎಡಿʼ ಚಿತ್ರ ದೇಶದ ಗಮನ ಸೆಳೆದಿದೆ. ಜತೆಗೆ ಚಿತ್ರದ ಪ್ರಮುಖ ಪಾತ್ರವಾಗಿರುವ ಬುಜ್ಜಿ ಹೆಸರಿನ ಕಾರು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಇದೀಗ ಬುಜ್ಜಿ ನಮ್ಮ ಕರುನಾಡಿಗೆ ಅದರಲ್ಲಿಯೂ ಕುಂದಾಪುರಕ್ಕೆ ಆಗಮಿಸಿದ್ದು, ರಿಷಬ್‌ ಶೆಟ್ಟಿ ರೈಡ್‌ ಮಾಡಿದ್ದಾರೆ. ʼಕಾಂತಾರʼ ಚಿತ್ರದ ಮೂಲಕ ದೇಶದ ಗಮನ ಸೆಳೆದ ರಿಷಬ್‌ ಶೆಟ್ಟಿ ಅವರು ಸದ್ಯ ʼಕಾಂತಾರ ಚಾಪ್ಟರ್‌ 1ʼ ಸಿನಿಮಾದ ಶೂಟಿಂಗ್‌ಗಾಗಿ ತಮ್ಮ ಊರಾದ ಕುಂದಾಪುರದಲ್ಲಿ ಬೀಡುಬಿಟ್ಟಿದ್ದಾರೆ. ಅವರನ್ನು ಭೇಟಿಯಾಗಲು ʼಕಲ್ಕಿʼ ಬುಜ್ಜಿ ಕುಂದಾಪುರಕ್ಕೆ ಆಗಮಿಸಿದೆ.

VISTARANEWS.COM


on

Rishab Shetty
Koo

ಬೆಂಗಳೂರು: ಸದ್ಯ ʼಕಲ್ಕಿ 2898 ಎಡಿʼ (Kalki 2898 AD) ಚಿತ್ರ ದೇಶದ ಗಮನ ಸೆಳೆದಿದೆ. ಈ ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಚಿತ್ರ ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಕೆರಳಿಸಿದ್ದು, ಜೂನ್‌ 27ಕ್ಕೆ ತೆರೆಗೆ ಬರಲಿದೆ. ಟಾಲಿವುಡ್‌ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ (Nag Ashwin) ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಟಾಲಿವುಡ್‌ ಸೂಪರ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮತ್ತಿತರರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಕಮಲ್‌ ಹಾಸನ್‌ ಮತ್ತು ಶೋಭನಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರು ಟ್ರೈಲರ್‌ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಅದರ ಜತೆಗೆ ಚಿತ್ರದ ಪ್ರಮುಖ ಪಾತ್ರವಾಗಿರುವ ಬುಜ್ಜಿ (Bujji) ಕೂಡ ಪ್ರೇಕ್ಷಕರ ಗಮನ ಸೆಳೆದಿದೆ. ಬುಜ್ಜಿ ಎಂದರೆ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಪ್ರಭಾಸ್‌ ಅವರ ಕಾರು. ಚಿತ್ರಕ್ಕಾಗಿಯೇ ಇದನ್ನು ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಇದೀಗ ಬುಜ್ಜಿ ನಮ್ಮ ಕರುನಾಡಿಗೆ ಅದರಲ್ಲಿಯೂ ಕುಂದಾಪುರಕ್ಕೆ ಬಂದು ರಿಷಬ್‌ ಶೆಟ್ಟಿ (Rishab Shetty) ಅವರನ್ನು ಭೇಟಿಯಾಗಿದೆ.

ʼಕಾಂತಾರʼ ಚಿತ್ರದ ಮೂಲಕ ದೇಶದ ಗಮನ ಸೆಳೆದ ರಿಷಬ್‌ ಶೆಟ್ಟಿ ಅವರು ಸದ್ಯ ʼಕಾಂತಾರ ಚಾಪ್ಟರ್‌ 1ʼ ಸಿನಿಮಾದ ಶೂಟಿಂಗ್‌ಗಾಗಿ ತಮ್ಮ ಊರಾದ ಕುಂದಾಪುರದಲ್ಲಿ ಬೀಡುಬಿಟ್ಟಿದ್ದಾರೆ. ಅವರನ್ನು ಭೇಟಿಯಾಗಲು ʼಕಲ್ಕಿʼ ಬುಜ್ಜಿ ಕುಂದಾಪುರಕ್ಕೆ ಆಗಮಿಸಿದೆ. ರಿಷಬ್‌ ಶೆಟ್ಟಿ ಬುಜ್ಜಿಯನ್ನು ಓಡಿಸಿ ಥ್ರಿಲ್‌ ಆಗಿದ್ದಾರೆ.

ʼಕಲ್ಕಿ 2898 ಎಡಿʼ ಸಿನಿಮಾದ ಪ್ರಚಾರದ ಭಾಗವಾಗಿ ಬುಜ್ಜಿ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲೆಲ್ಲ ಸುತ್ತಿ ಇದೀಗ ಕರ್ನಾಟಕ್ಕೆ ಆಗಮಿಸಿದೆ. ಅದರಲ್ಲಿಯೂ ಡಿವೈನ್‌ ಸ್ಟಾರ್‌ ಅವರನ್ನು ಭೇಟಿಯಾಗಲು ಕುಂದಾಪುರಕ್ಕೆ ಬಂದಿಳಿದ ಬುಜ್ಜಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ರಿಷಬ್‌ ಶೆಟ್ಟಿ ಬುಜ್ಜಿಯನ್ನು ಓಡಿಸುತ್ತಿರುವ ವಿಡಿಯೊವನ್ನು ಚಿತ್ರ ತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು ವೈರಲ್‌ ಆಗಿದೆ.

ಈಗಾಗಲೇ ಅಕ್ಕಿನೇನಿ ನಾಗಚೈತನ್ಯ, ಮಾಜಿ ಫಾರ್ಮುಲಾ ಒನ್ ರೇಸರ್ ನಾರಾಯಣ್ ಕಾರ್ತಿಕೇಯನ್, ಆನಂದ್ ಮಹೀಂದ್ರ ಸೇರಿದಂತೆ ಹಲವರ ಬುಜ್ಜಿಯಲ್ಲಿ ಒಂದು ರೌಂಡ್‌ ಹೊಡೆದಿದ್ದು, ಇದೀಗ ಈ ಅವಕಾಶ ರಿಷಬ್‌ ಶೆಟ್ಟಿ ಅವರಿಗೂ ಲಭಿಸಿದೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. “ಟೀಸರ್‌ನಲ್ಲೇ ಗೊತ್ತಾಗುತ್ತೆ. ಯಾವ ರೇಂಜ್‌ನಲ್ಲಿ ಬುಜ್ಜಿ ಹವಾ ಇದೆ ಅನ್ನೋದು. ಡ್ರೈವ್ ಮಾಡಿದ್ದು ಒಂದು ಅದ್ಭುತ ಅನುಭವ. ಆಲ್‌ ದಿ ಬೆಸ್ಟ್ ಭೈರವ ಮತ್ತು ಬುಜ್ಜಿ. ಕಲ್ಕಿ ಜೂನ್ 27ಕ್ಕೆ ರಿಲೀಸ್ ಆಗುತ್ತಿದೆ. ಎಲ್ಲರೂ ಥಿಯೇಟರ್‌ಗೆ ಬಂದು ಸಿನಿಮಾ ನೋಡಿ” ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಹೊಸದೊಂದು ಲೋಕ ತೆರೆದಿಡಲಿದೆ ʼಕಲ್ಕಿʼ

ಸೈನ್ಸ್‌ ಫಿಕ್ಷನ್‌ ಚಿತ್ರ ʼಕಲ್ಕಿ 2898 ಎಡಿʼ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿದ್ದು, ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಈ ಸಿನಿಮಾದಲ್ಲಿ ನೀವು ನಾಗ್‌ ಅಶ್ವಿನ್‌ ಕಟ್ಟಿಕೊಟ್ಟ ಬೇರೆಯದೇ ಪ್ರಪಂಚವನ್ನು ಕಣ್ತುಂಬಿಕೊಳ್ಳಬಹುದು. ಸುಮಾರು 6,000 ವರ್ಷಗಳ ಕಥೆ ತೆರೆ ಮೇಲೆ ಮೂಡಲಿದೆ. ವೈಜಯಂತಿ ಮೂವೀಸ್‌ ಬ್ಯಾನರ್‌ನಲ್ಲಿ ನಿರ್ಮಾಣದವಾದ ಈ ಸಿನಿಮಾ ತೆಲುಗು, ಕನ್ನಡ, ತಮಿಳು, ಹಿಂದಿ, ಮಕಯಾಳಂನಲ್ಲಿ ತೆರೆಗೆ ಬರಲಿದೆ.

Continue Reading

ಟಾಲಿವುಡ್

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

Kamal Haasan: ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

VISTARANEWS.COM


on

Kamal Haasan predicts Deepika Padukone baby choose cinema career
Koo

ಬೆಂಗಳೂರು: : ನಾಗ್ ಅಶ್ವಿನ್ ಅವರ ಕಲ್ಕಿ 2898 ADಯ (Kalki 2898 AD) ಪ್ರೀ-ರಿಲೀಸ್ ಈವೆಂಟ್ ಮುಂಬೈನಲ್ಲಿ ಇತ್ತೀಚೆಗೆ ನಡೆದಿತ್ತು. ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ತಂಡದಲ್ಲಿ ಕಲ್ಕಿ ಕ್ರಾನಿಕಲ್ಸ್ ಎಂಬ ಶೀರ್ಷಿಕೆಯ ಚರ್ಚೆಯ (Kamal Haasan) ಸಂದರ್ಭದಲ್ಲಿ, ಕಮಲ್ ಹಾಸನ್ ಅವರು ದೀಪಿಕಾ ಅವರ ಮಗು ಮುಂದೊಂದು ದಿನ ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದರು.

ನಿರ್ದೇಶಕ ನಾಗ್ ಅಶ್ವಿನ್ ಅವರು ಮಗುವಿನಂತೆ ಎಂದು ದೀಪಿಕಾ ಚರ್ಚೆ ನಡೆಯುತ್ತಿರುವಾಗ ಹೇಳಿದರು. ಈ ಬಗ್ಗೆ ದೀಪಿಕಾ ಮಾತನಾಡಿ ʻʻನಾಗ್ ಅಶ್ವಿನ್ ಅವರು ಕಾಲ್‌ ಮಾಡಿದ್ದಾಗ, ನಾನು ಬಾಂಬೆಯಲ್ಲಿದ್ದೆ. ಬೇರೆ ಬೇರೆ ಶೆಡ್ಯೂಲ್‌ಗಳಲ್ಲಿ ಚಿತ್ರೀಕರಣ ನಡೆಸುತ್ತಿದ್ದರಿಂದ ಸಿನಿಮಾಗೆ ಲಾಂಗ್‌ ಬ್ರೇಕ್‌ ಹಾಕಿದ್ದೆ. ಹೀಗಾಗಿ ಒಂದು ದಿನ ನಾಗ್ ಅಶ್ವಿನ್ ಅವರು ನನಗೆ ಕರೆ ಮಾಡಿದ್ದು. ಅವರಿಂದ ತುಂಬ ಮಿಸ್ಡ್ ಕಾಲ್ ಇತ್ತು. ಹೀಗಾಗಿ ನಾನು ಏನಾಯಿತು ಎಂದು ಕೇಳಿದಾಗ, ‘ನಾವು ಕಮಲ್ ಸರ್ ಜೊತೆಗೆ ನಮ್ಮ ಮೊದಲ ದಿನವನ್ನು ಶೂಟ್ ಮಾಡಿದ್ದೇವೆ ಎಂದು ಹೇಳಲು ನಾನು ನಿಮಗೆ ಕರೆ ಮಾಡಿದ್ದೇನೆ.’ ಎಂದು ಮಗುವಿನಂತೆ ಹೇಳಿದರುʼʼಎಂದರು. ಈ ವೇಳೆ ಕಮಲ್‌ ಅವರು ನಟಿಯ ಬೇಬಿ ಬಂಪ್‌ ಕಡೆ ತೋರಿಸಿ ʻʻಮುಂದೊಂದು ದಿನ ಈ ಮಗು ಕೂಡ ಸಿನಿಮಾ ಮಾಡಲಿ ಎಂದು ಆಶಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

Continue Reading

ಸಿನಿಮಾ

Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

Actor Darshan: ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು. ಮುಂಚೆ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case om prakash say darshan life villion Nikhita
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಲ್ಲಿ ಇರುವುದು ಗೊತ್ತೇ ಇದೆ. ದರ್ಶನ್ (Darshan) ಜೊತೆ ಹಲವಾರು ಹಿಟ್ ಸಿನಿಮಾಗಳನ್ನು ಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ ಓಂ ಪ್ರಕಾಶ್ ರಾವ್ (Om Prakash Rao) ಅವರು 10 ವರ್ಷಗಳಿಂದ ದರ್ಶನ್ ಅವರನ್ನು ಮಾತನಾಡಿಸಿಲ್ಲ. ಈಗ ಮಾಧ್ಯಮದ ಮುಂದೆ ದರ್ಶನ್‌ ಕುರಿತಾಗಿ ಹಲವು ವಿಚಾರಗಳನ್ನು ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ದರ್ಶನ್‌ ದಾಂಪತ್ಯದಲ್ಲಿ ನಟಿ ನಿಖಿತಾ ತುಕ್ರಾಲ್ ಹುಳಿ ಹಿಂಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ ಮಾತನಾಡಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು.ಒಂದ್ಕಾಲದಲ್ಲಿ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಓಂ ಪ್ರಕಾಶ್ ರಾವ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿ ʻʻದರ್ಶನ್‌ ತುಂಬ ಒಳ್ಳೆಯ ವ್ಯಕ್ತಿ. ವಿಜಯಲಕ್ಷ್ಮಿ ಕೂಡ ಅಪ್ಪಟ ಚಿನ್ನ. ಇವರಿಬ್ಬರ ಸಂಸಾರದಲ್ಲಿ ಹುಳಿ ಹಿಂಡಬೇಡ , ಹೋಗಬೇಡಿ ಎಂದು ನಿಖಿತಾಗೆ ನಾನು ಹೇಳಿದ್ದೆ. ನೀವು ಜಾಸ್ತಿ ಮುನ್ನುಗ್ಗುತ್ತಿದ್ದೀರ ಹೋಗ್ಬೇಡಿ ಎಂದಿದ್ದೆ. ಇದೇ ತಪ್ಪಾಯ್ತು. ಇವತ್ತಿನ ಪರಿಸ್ಥಿತಿಯಲ್ಲಿ ವಿಜಯಲಕ್ಷ್ಮಿ ಮೇಡಂ, ಅವರ ಮಗ ವಿನೀಶ್ ಇದನ್ನೆಲ್ಲಾ ಹೇಗೆ ಫೇಸ್ ಮಾಡ್ತಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ ಅವರ ಸಂಸಾರ ಚೆನ್ನಾಗಿ ಆಗಬೇಕುʼʼಎಂದರು. ʻʻನನಗೆ ಪವಿತ್ರಾ ಬಗ್ಗೆ ಗೊತ್ತಿಲ್ಲ. ದರ್ಶನ್‌ ಜೀವನದಲ್ಲಿ ಬಂದಿರೋದು ಗೊತ್ತಿಲ್ಲ. ಗೊತ್ತಿಲ್ಲದೇ ವಿಚಾರವನ್ನು ಮಾತನಾಡುವುದು ತಪ್ಪುʼʼಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಹೇಳಿದ್ದನ್ನ ತಿರುಚಿ ನನ್ನ, ದರ್ಶನ್ ಮಧ್ಯೆ ನಿಖಿತಾ ಮನಸ್ತಾಪ ತಂದ್ರು!

ʻʻಮುಂಚೆ ದರ್ಶನ್‌ ಹಾಗೂ ನನ್ನ ಸ್ನೇಹ ಚೆನ್ನಾಗಿಯೇ ಇತ್ತು. ನಮಗೆ ಒಂದು ಜ್ಞಾನ ಇರುತ್ತೆ. ಸಡನ್‌ ಆಗಿ ಯಾರೋ ಹೇಳಿದ್ದು ಕೇಳೋದು ತಪ್ಪು. ಆದರೆ ದರ್ಶನ್‌ ಯಾರೋ ಹೇಳಿದ್ದನ್ನು ಬೇಗ ಕೇಳುತ್ತಿದ್ದ. ನನ್ನ ದರ್ಶನ್‌ ಮಧ್ಯೆ ಮನಸ್ತಾಪ ತಂದಿಟ್ಟಿದ್ದು ನಿಖಿತಾ ಎಂಬ ಕಲಾವಿದೆ. ಯಾವುದೋ ಒಂದು ವಿಷಯವನ್ನು ತಿರುಚಿ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರೂ ಅವರ ಅವರ ಸೇಫ್ಟಿ ನೋಡ್ಕೋತ್ತಾರೆ ಅನ್ಸತ್ತೆ. ಹಾಗೇ ನನ್ನ ದರ್ಶನ್‌ ಜತೆ ವೈಮನಸ್ಸು ಆಯ್ತು. ಆ ಬಗ್ಗೆ ತುಂಬ ಸಲ ಬೇಜಾರು ಮಾಡಿಕೊಂಡಿದ್ದು ಇದೆʼʼಎಂದರು.

ಇಂದು ಜಾಮೀನು ಅರ್ಜಿ ಸಲ್ಲಿಕೆ

ದರ್ಶನ್‌ ಸೇರಿದತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳು ಜಾಮೀನು‌ ಕೋರಿ ಇಂದು ಎಸಿಎಂಎಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿದರೆ ದರ್ಶನ್ ಪರ ವಾದ ಮಂಡನೆಯನ್ನು ಹಿರಿಯ ವಕೀಲ ಸಿ.ವಿ ನಾಗೇಶ್ ಮಾಡಲಿದ್ದಾರೆ.

ದರ್ಶನ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಒಂದು ವೇಳೆ ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗಿದೆ.

Continue Reading

ಟಾಲಿವುಡ್

Actor Nagarjuna: ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ನಾಗಾರ್ಜುನ ಬಾಡಿಗಾರ್ಡ್‌; ಕ್ಷಮೆ ಕೇಳಿದ ನಟ!

Actor Nagarjuna: ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ.

VISTARANEWS.COM


on

Nagarjuna apologises after bodyguard pushes differently abled fan
Koo

ಬೆಂಗಳೂರು: ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದಾರೆ. ವೈರಲ್‌ ಆದ ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ. ಆದರೆ ನಾಗಾರ್ಜುನ ಈ ಘಟನೆಯನ್ನು ಗಮನಿಸಿರಲಿಲ್ಲ. ಇದೀಗ ನಟ ಕ್ಷಮೆ ಕೇಳಿದ್ದಾರೆ.

“ಇದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಗೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಾಗಾರ್ಜುನ ಅವರಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೋಗೆ ಪ್ರತಿಕ್ರಿಯಿಸಿದ ವ್ಯಕ್ತಿಯೊಬ್ಬರು, “ಆ ವ್ಯಕ್ತಿ ವಿಶೇಷ ಚೇತನ. ಅವರು ಎಷ್ಟು ಅವಮಾನ ಅನುಭವಿಸಿರಬೇಕು” ಎಂದು ಬರೆದಿದ್ದಾರೆ. ಇನ್ನೊಬ್ಬರು”ಸೆಲೆಬ್ರಿಟಿಗೆ ತುಂಬಾ ಹತ್ತಿರ ಬರುವ ಅಭಿಮಾನಿಗಳನ್ನು ನಿಭಾಯಿಸುವ ಕಲೆ ಗೊತ್ತಿರಬೇಕುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ಸಿನಿಮಾ ವಿಚಾರಕ್ಕೆ ಬಂದರೆ ಈ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಸಿನಿಮಾ ತೆರೆಗೆ ಬಂದಿತ್ತು. ಮೊದಲಿನಂತೆ ಈಗ ನಾಗ್ ಸಿನಿಮಾಗಳು ಸದ್ದು ಮಾಡುತ್ತಿಲ್ಲ. ಇದೀಗ ನಟ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಧನುಷ್ ಜೊತೆ ‘ಕುಬೇರ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ಸಿನಿಮಾ ಇದು.

Continue Reading
Advertisement
Rashid Khan
ಕ್ರಿಕೆಟ್12 mins ago

Rashid Khan: ರನ್​ ಓಡದ ಸಿಟ್ಟಿನಲ್ಲಿ ಸಹ ಆಟಗಾರನ್ನತ್ತ ಬ್ಯಾಟ್​ ಎಸೆದ ರಶೀದ್​ ಖಾನ್​; ವಿಡಿಯೊ ವೈರಲ್​

Amarnath Yatra
ದೇಶ13 mins ago

Amarnath Yatra: ಆಗಸ್ಟ್‌ನಲ್ಲಿ ಪಾಕ್‌ ನಡೆಸುತ್ತಾ ಡೆಡ್ಲಿ ಅಟ್ಯಾಕ್‌? ಎರಡೆರಡು ಉಗ್ರ ಸಂಘಟನೆಗಳಿಂದ ದೊಡ್ಡ ಪ್ಲ್ಯಾನ್‌!

Gold Rate Today
ಚಿನ್ನದ ದರ28 mins ago

Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

milk price hike
ಪ್ರಮುಖ ಸುದ್ದಿ46 mins ago

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Viral News
ಕ್ರೈಂ55 mins ago

ಜಮೀನಿನಲ್ಲಿ ಕೆಲಸ ಮಾಡಲು ನಿರಾಕರಿಸಿದ ಮಹಿಳೆಯ ಮೇಲೆ ಹಲ್ಲೆ; ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತಿ ಮೆರೆದ ಸಂಬಂಧಿಕರು

AFG vs BAN
ಕ್ರೀಡೆ56 mins ago

AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

cm siddaramaiah DK Shivakumar power fight
ಪ್ರಮುಖ ಸುದ್ದಿ1 hour ago

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

Viral Video
Latest1 hour ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ2 hours ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ2 hours ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌