Actor Nani: ‘ಹಾಯ್​ ನಾನ್ನʼ ಚಿತ್ರತಂಡದಿಂದ ವಿಜಯ್‌-ರಶ್ಮಿಕಾ ಖಾಸಗಿ ಫೋಟೊ ಬಳಕೆ; ನಾನಿ ಹೇಳಿದ್ದೇನು? - Vistara News

South Cinema

Actor Nani: ‘ಹಾಯ್​ ನಾನ್ನʼ ಚಿತ್ರತಂಡದಿಂದ ವಿಜಯ್‌-ರಶ್ಮಿಕಾ ಖಾಸಗಿ ಫೋಟೊ ಬಳಕೆ; ನಾನಿ ಹೇಳಿದ್ದೇನು?

Actor Nani: ‘ಹಾಯ್​ ನಾನ್ನʼ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಫೋಟೋ ಬಿತ್ತರವಾಗಿತ್ತು. ಈ ಬಗ್ಗೆ ಇದೀಗ ನಟ ನಾನಿ ವಿಷಾಧ ವ್ಯಕ್ತಪಡಿಸಿದ್ದಾರೆ.

VISTARANEWS.COM


on

actor nani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಟಾಲಿವುಡ್‌ನ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ‘ಹಾಯ್​ ನಾನ್ನ’ (Hi Nanna) ಕೂಡ ಒಂದು. ನ್ಯಾಚುರಲ್‌ ಸ್ಟಾರ್‌ ಖ್ಯಾತಿಯ ನಾನಿ (Actor Nani) ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇದೇ ಶುಕ್ರವಾರ (ಡಿಸೆಂಬರ್‌ 7ರಂದು) ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ, 5 ಭಾಷೆಗಳಲ್ಲಿ ತೆರೆ ಕಾಣಲಿದೆ. ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ನಡೆದ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ವಿಜಯ್​ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ಫೋಟೋವನ್ನು ಬಿತ್ತರ ಮಾಡಲಾಗಿತ್ತು. ಇದಕ್ಕೆ ಈಗ ನಟ ನಾನಿ ಪ್ರತಿಕ್ರಿಯೆ ನೀಡಿ ಚಿತ್ರತಂಡದಿಂದ ಆದ ಪ್ರಮಾದಕ್ಕೆ ಕ್ಷಮೆ ಕೇಳಿದ್ದಾರೆ.

‘ಹಾಯ್​ ನಾನ್ನ’ ಚಿತ್ರಕ್ಕೆ ಮತ್ತು ರಶ್ಮಿಕಾ-ವಿಜಯ್​ ದೇವರಕೊಂಡ ಅವರಿಗೆ ಯಾವುದೇ ಸಂಬಂಧ ಇಲ್ಲ. ಹಾಗಿದ್ದರೂ ಕೂಡ ವೇದಿಕೆಯ ಎಲ್​ಇಡಿ ಪರದೆಯಲ್ಲಿ ಇಬ್ಬರ ವೈಯಕ್ತಿಕ ಫೋಟೋ ಬಿತ್ತರ ಆಗಿತ್ತು. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪ್ರವಾಸದಲ್ಲಿರುವ ಫೋಟೊವನ್ನು ಸ್ಕ್ರೀನ್‌ನಲ್ಲಿ ಪ್ರತ್ಯಕ್ಷವಾಗಿತ್ತು. ಬಳಿಕ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿಮಾನಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸಿ ಚಿತ್ರತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು.

ನಾನಿ ಹೇಳಿದ್ದೇನು?

‘ʼಆ ರೀತಿ ಆಗಿದ್ದು ದುರದೃಷ್ಟಕರ. ಏನಾಯಿತು ಎಂಬುದು ಗೊತ್ತಾಗುವುದರೊಳಗೆ ಫೋಟೋ ಕಣ್ಮರೆ ಆಯಿತು. ನಾವೆಲ್ಲರೂ ಆಪ್ತ ಸ್ನೇಹಿತರು. ಹೀಗೆಲ್ಲ ಆಗುವುದು ಸಹಜ ಎಂಬುದನ್ನು ರಶ್ಮಿಕಾ ಮತ್ತು ವಿಜಯ್​ ದೇವರಕೊಂಡ ಅರ್ಥ ಮಾಡಿಕೊಳ್ಳಲಿದ್ದಾರೆ. ಒಂದು ವೇಳೆ ಯಾರಿಗಾದರೂ ನೋವಾಗಿದ್ದರೆ ನಾನು ಮತ್ತು ನನ್ನ ತಂಡದವರು ಕ್ಷಮೆ ಕೇಳುತ್ತೇವೆʼʼ ಎಂದು ನಾನಿ ಹೇಳಿದ್ದಾರೆ. ಈ ವಿವಾದ ಕುರಿತು ರಶ್ಮಿಕಾ ಆಗಲಿ, ವುಜತ್‌ ದೇವರಕೊಂಡ ಆಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ʼಹಾಯ್​ ನಾನ್ನ’ ಸಿನಿಮಾದಲ್ಲಿ ನಾನಿ ಮತ್ತು ಮೃಣಾಲ್​ ಠಾಕೂರ್​ ನಟಿಸಿದ್ದಾರೆ. ಪ್ರಚಾರದ ಹುಚ್ಚಿನಿಂದ ‘ಹಾಯ್​ ನಾನ್ನ’ ತಂಡ ಸಂಬಂಧವೇ ಇಲ್ಲದ ರಶ್ಮಿಕಾ-ವಿಜಯ್‌ ಅವರ ವೈಯಕ್ತಿಕ ಫೋಟೊ ಬಳಿಸಿ ಗಿಮಿಕ್​ ಮಾಡಿರಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಆ ಘಟನೆ ಬಗ್ಗೆ ನಾನಿ ವಿಷಾದ ವ್ಯಕ್ತಪಡಿಸಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: Rashmika Mandanna: ನಾನಿ ಸಿನಿಮಾ ಈವೆಂಟ್‌ನಲ್ಲಿ ವಿಜಯ್-ರಶ್ಮಿಕಾ ಮಾಲ್ಡೀವ್ಸ್ ಫೋಟೊ; ತಬ್ಬಿಬ್ಬಾದ ಮೃಣಾಲ್‌!

ತಂದೆ ಮತ್ತು ಮಗಳ ಬಾಂಧವ್ಯದ ಜತೆಗೆ ಪ್ರೀತಿ ಕಥಾಹಂದರವೇ ‘ಹಾಯ್ ನಾನ್ನ’ ಚಿತ್ರದ ಹೈಲೆಟ್. ಈ ಚಿತ್ರಕ್ಕೆ ಯುವ ನಿರ್ದೇಶಕ ಶೌರ್ಯುವ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮೊದಲ ಬಾರಿ ನಾನಿ ಮತ್ತು ಮೃಣಾಲ್​ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಮೃಣಾಲ್​ ಠಾಕೂರ್ ಅಭಿನಯದ ʼಸೀತಾ ರಾಮಂʼ ತೆಲುಗು ಚಿತ್ರ ಕಳೆದ ವರ್ಷ ತೆರೆಕಂಡು ಸೂಪರ್‌ ಹಿಟ್‌ ಆಗಿತ್ತು. ಈ ವರ್ಷ ಬಿಡುಗಡೆಯಾದ ನಾನಿ-ಕೀರ್ತಿ ಸುರೇಶ್‌ ಅಭಿನಯದ ʼದಸರಾʼ ಚಿತ್ರ ಹಿಟ್‌ ಆಗಿತ್ತು. ಹೀಗಾಗಿ ಈ ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಅದಕ್ಕೆ ತಕ್ಕಂತೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Pushpa 2: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಚಿತ್ರದ ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್‌ ಆಗಿದೆ. ಈಗಾಗಲೇ ರಿಲೀಸ್‌ ಆಗಿರುವ ಮೊದಲ ಹಾಡು ಸೂಪರ್‌ ಹಿಟ್‌ ಆಗಿದ್ದು, ಎರಡನೇ ಹಾಡಿನ ಬಗ್ಗೆ ಕುತೂಹಲ ಮೂಡಿದೆ. ಹಾಗಾದರೆ ಎರಡನೇ ಹಾಡು ಯಾವಾಗ ರಿಲೀಸ್‌ ಆಗಲಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Pushpa 2
Koo

ಹೈದರಾಬಾದ್‌: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡಿನ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ.

ʻಪುಷ್ಪ ಪುಷ್ಪʼ ಅಲ್ಲು ಅರ್ಜುನ್‌ ಪಾತ್ರವನ್ನು ಪರಿಚಯಿಸುವ ಹಾಡಾದರೆ ಇದೀಗ ರಿಲೀಸ್‌ ಆಗಲಿರುವ ಎರಡನೇ ಹಾಡಿನಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಇರಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಹಾಡು ರಿಲೀಸ್‌ ಯಾವಾಗ?

ʼಪುಷ್ಪ 2ʼ ಚಿತ್ರದ ಎರಡನೇ ಹಾಡು ನಾಳೆ (ಮೇ 29) ಬೆಳಿಗ್ಗೆ 11.07ಕ್ಕೆ ರಿಲೀಸ್‌ ಆಗಲಿದೆ ಎಂದು ರಶ್ಮಿಕಾ ತಿಳಿಸಿದ್ದಾರೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್‌ ಫೋಸ್‌ ಕೊಡುತ್ತಿರುವ ಪೋಸ್ಟರ್‌ ಈಗಾಗಲೇ ಗಮನ ಸೆಳೆದಿದೆ. ಗುಲಾಬಿ ಬಣ್ಣ, ಹಲವು ಡ್ಯಾನ್ಸರ್‌ಗಳ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ನಗುತ್ತಾ ಪೋಸ್‌ ನೀಡಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬರಲಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Continue Reading

South Cinema

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

Rashmika Mandanna: ಟಾಲಿವುಡ್‌ನ ಕ್ಯೂಟ್‌ ಜೋಡಿ ಎಂದೇ ಕರೆಯಲ್ಪಡುವ ವಿಜಯ್‌ ದೇವರಕೊಂಡ ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿದ್ದಾರಾ? ಇವರಿಬ್ಬರು ಈ ಬಗ್ಗೆ ಬಾಯಿ ಬಿಡದಿದ್ದರೂ ಹೌದು ಎನ್ನುವುದಕ್ಕೆ ಅನೇಕ ಕಾರಣ ಸಿಗುತ್ತವೆ. ಸದ್ಯ ವಿಜಯ್‌ ದೇವರಕೊಂಡ ಅವರ ಸಹೋದರ, ʼಬೇಬಿʼ ಖ್ಯಾತಿನ ನಟ ಆನಂದ್‌ ದೇವರಕೊಂಡ ಇದೇ ರೀತಿಯ ಪ್ರಶ್ನೆ ಕೇಳಿದ್ದು, ರಶ್ಮಿಕಾ ನಾಚಿ ನೀರಾಗಿದ್ದಾರೆ. ಇಲ್ಲಿದೆ ಆ ವಿಡಿಯೊ.

VISTARANEWS.COM


on

Rashmika Mandanna
Koo

ಹೈದರಾಬಾದ್‌: ಕನ್ನಡತಿ, ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ (Vijay Deverakonda) ಮಧ್ಯೆ ಒಂದೊಳ್ಳೆ ಬಾಂಧವ್ಯವಿದೆ. ಇಬ್ಬರು ಪರಸ್ಪರ ಡೇಟಿಂಗ್‌ ಮಾಡುತ್ತಿರುವ ವಿಚಾರವನ್ನು ಬಾಯಿ ಬಿಟ್ಟು ಹೇಳಿಕೊಳ್ಳದಿದ್ದರೂ ಆಗಾಗ ಜತೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು, ವಿಜಯ್‌ ಮನೆಗೆ ರಶ್ಮಿಕಾ ಭೇಟಿ ನೀಡುತ್ತಿರುವುದು ಮುಂತಾದ ಕಾರಣಕ್ಕೆ ಇಬ್ಬರು ಸದ್ಯದಲ್ಲೇ ಮದುವೆಯಾಗುತ್ತಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಗಾಸಿಪ್‌ ಕಾಲಂಗಳಲ್ಲಿಯೂ ಇಬ್ಬರು ಆಗಾಗ ಕಾಣಿಸಿಕೊಳ್ಳುತ್ತಾರೆ. ಇದೀಗ ಇದೇ ವಿಚಾರವಾಗಿ ವಿಜಯ್‌ ದೇವರಕೊಂಡ ಅವರ ಸಹೋದರ, ನಟ ಆನಂದ್‌ ದೇವರಕೊಂಡ (Anand Deverakonda) ಜತೆ ರಶ್ಮಿಕಾ ಮಾತನಾಡಿದ್ದು, ವಿಡಿಯೊ ವೈರಲ್‌ ಆಗಿದೆ.

ಸೋಮವಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮವೊಂದರಲ್ಲಿ ಆನಂದ್‌ ದೇವರಕೊಂಡ ಮತ್ತು ರಶ್ಮಿಕಾ ಜತೆಯಾಗಿ ಭಾವಹಿಸಿದ್ದರು. ಆ ವೇಳೆ ರಶ್ಮಿಕಾ ಬಳಿ ಆನಂದ್‌ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ನಿಮ್ಮ ನೆಚ್ಚಿನ ಸಹ ಕಲಾವಿದ ಯಾರು ಎಂದೂ ಪ್ರಶ್ನಿಸಿದ್ದರು. ಆನಂದ್‌ ಅವರು ವಿಜಯ್‌ ದೇವರಕೊಂಡ ಅವರನ್ನು ಉದ್ದೇಶಿಸಿಯೇ ಈ ಪ್ರಶ್ನೆ ಕೇಳಿದ್ದರು. ಇದನ್ನು ಅರಿತ ರಶ್ಮಿಕಾ ನಾಚಿ ನೀರಾಗಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇಲ್ಲಿದೆ ಕ್ಯೂಟ್‌ ವಿಡಿಯೊ

ʼʼನಿಮ್ಮ ನೆಚ್ಚಿನ ಕೋಸ್ಟಾರ್‌ ಯಾರು?ʼʼ ಎಂದು ಆನಂದ್‌ ಕೇಳುತ್ತಿದ್ದಂತೆ ನೆರೆದಿದ್ದ ಜನರೆಲ್ಲ ವಿಜಯ್‌ ದೇವರಕೊಂಡ ಎಂದು ಕೋಗಲು ಆರಂಭಿಸಿದರು. “ಆನಂದ್, ನನ್ನನ್ನು ಯಾಕೆ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದೀರಿ?” ಎಂದು ನಗುತ್ತಲೇ ರಶ್ಮಿಕಾ ಪ್ರಶ್ನಿಸಿದರು. ನಂತರ ಅವರು “ರೌಡಿ ಬಾಯ್” ಎಂದು ವಿಜಯ್ ಹೆಸರನ್ನು ಸುತ್ತುಬಳಸಿ ಹೇಳಿ ಅಭಿಮಾನಿಗಳಿಗೆ ಇನ್ನಷ್ಟು ಸುಳಿವು ನೀಡಿದರು. ಸದ್ಯ ವಿಜಯ್‌-ರಶ್ಮಿಕಾ ಅಭಿಮಾನಿಗಳು ಈ ಕುರಿತು ಚರ್ಚೆ ನಡೆಸಲು ಆರಂಭಿಸಿದ್ದಾರೆ. ಶೀಘ್ರದಲ್ಲಿಯೇ ಇವರು ತಮ್ಮ ಸಂಬಂಧವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದೆಲ್ಲ ಮಾತನಾಡಲು ಆರಂಭಿಸಿದ್ದಾರೆ.

ಯಾಕಾಗಿ ಗಾಸಿಪ್‌?

ವಿಜಯ್‌ ಮತ್ತು ರಶ್ಮಿಕಾ ಜತೆಯಾಗಿ ಅಭಿನಯಿಸಿದ ತೆಲುಗು ಚಿತ್ರ ʼಗೀತಾ ಗೋವಿಂದಮ್‌ʼ 2018ರಲ್ಲಿ ತೆರೆಕಂಡಿತ್ತು. ಮೊದಲ ಬಾರಿ ಜತೆಯಾಗಿ ಅಭಿನಯಿಸಿದ್ದ ಈ ಕ್ಯೂಟ್‌ ಜೋಡಿಯನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದರು. ತೆರೆಮೇಲೆ ಇವರ ಕೆಮೆಷ್ಟ್ರಿ ಮ್ಯಾಜಿಕ್‌ ಮಾಡಿತ್ತು. ಅಂದಿನಿಂದ ಇವರು ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನುವ ಗಾಸಿಪ್‌ ಹಬ್ಬಿದೆ. ಬಳಿಕ 2019ರಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಂಡ ʼಡಿಯರ್‌ ಕಾಮ್ರೇಡ್‌ʼ ತೆಲುಗು ಸಿನಿಮಾ ರಿಲೀಸ್‌ ಆಗಿತ್ತು. ಇದು ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡದಿದ್ದರೂ ಈ ಜೋಡಿ ಮತ್ತೊಮ್ಮೆ ಗಮನ ಸೆಳೆದಿತ್ತು. ಆದರೆ ಇವರು ಸಾವರ್ಜನಿಕವಾಗಿ ತನ್ನ ಸಂಬಂಧವನ್ನು ಇದುವರೆಗೆ ಒಪ್ಪಿಕೊಂಡಿಲ್ಲ ಜತೆಗೆ ನಿರಾಕರಿಸಿಲ್ಲ.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

ಈ ವರ್ಷದ ಏಪ್ರಿಲ್‌ನಲ್ಲಿ ರಶ್ಮಿಕಾ ಹುಟ್ಟುಹಬ್ಬವನ್ನು ಇಬ್ಬರು ಅಬುದಾಬಿಯಲ್ಲಿ ಆಚರಿಸಿಕೊಂಡಿದ್ದರು. ಇವರು ಇದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ನೋಡಿದ ಅಭಿಮಾನಿಗಳು ಇಬ್ಬರು ಒಂದೇ ಸ್ಥಳದಲ್ಲಿ ಇದ್ದುದನ್ನು ಗುರುತಿಸಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್‌ನಲ್ಲಿ ಬ್ಯುಸಿ ಇದ್ದಾರೆ. ರಶ್ಮಿಕಾ ದಕ್ಷಿಣ ಭಾರತದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ಛಾಪು ಮೂಡಿಸಿದ್ದು, ಉತ್ತಮ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಸದ್ಯ ಒಪ್ಪಿಕೊಂಡ ಸಿನಿಮಾ ಮುಗಿಸಿ ಇಬ್ಬರು ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Continue Reading

ಕಾಲಿವುಡ್

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Surya Prakash: ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Surya Prakash Maayi director dies
Koo

ಬೆಂಗಳೂರು: ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಸೋಮವಾರ (ಮೇ 27) ಹೃದಯಾಘಾತದಿಂದ ನಿಧನರಾದರು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ‘ಮಾಣಿಕ್ಕಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾಅವರಿಗೆ ‘ಮಾಯಿ’ ಸಿನಿಮಾಗಾಗಿ ನಿರ್ದೇಶನ ಮಾಡಿದರು. ಇದು ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ತೆಲುಗಿನಲ್ಲಿ ‘ಸಿಂಹರಸಿ’ ಮತ್ತು ಕನ್ನಡದಲ್ಲಿ ‘ನರಸಿಂಹ’ ಎಂದು ಸಿನಿಮಾ ರಿಮೇಕ್ ಆಗಿತ್ತು.

ರಾಜಶೇಖರ್ ಅಭಿನಯದ ‘ಭರತಸಿಂಹ ರೆಡ್ಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಶರತ್‌ಕುಮಾರ್ ಅವರ ‘ದಿವಾನ್’ ಮತ್ತು ಜೀವನ್ ಅವರ ‘ಅಧಿಬರ್’ ಮೂಲಕ ತಮಿಳಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದರು.

Continue Reading

ಸ್ಯಾಂಡಲ್ ವುಡ್

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Kiccha Sudeep: ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಇದೀಗ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ.27) ಬೆಳಗ್ಗೆ ಭೇಟಿ ನೀಡಿದ್ದಾರೆ.

VISTARANEWS.COM


on

Kiccha Sudeep visit chamundeshwari temple
Koo

ಮೈಸೂರು: ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ 27) ಬೆಳಗ್ಗೆ ಭೇಟಿ ನೀಡಿದ್ದಾರೆ. ನಾಡ ಅದಿದೇವತೆ ದರ್ಶನ ಪಡೆದಿದ್ದಾರೆ ಕಿಚ್ಚ ಸುದೀಪ್. ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ (Kiccha Sudeep visit chamundeshwari temple) ಫ್ಯಾನ್ಸ್‌ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರೆಸ್ಟ್ ಆಯೋಜಿಸಿದ್ದ, ಯಕ್ಷ ಧ್ರುವ ಪಟ್ಲ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾಡುತ್ತಿದ್ದ ಕಿಚ್ಚ ಸುದೀಪ್ ತಮಗಿರುವ ತುಳುನಾಡಿನ ಕನೆಕ್ಷನ್ ಬಗ್ಗೆ ಮಾತಾಡಿದ್ದರು. ಅವರ ತಾಯಿ ತುಳುನಾಡಿನವರಾಗಿದ್ದು, ಅವರು ತುಂಬಾ ಚೆನ್ನಾಗಿ ತುಳು ಮಾತಾಡುತ್ತಾರೆ. ಆದರೆ, ತಮಗೆ ಮಾತ್ರ ಎರಡೇ ಎರಡು ತುಳು ಪದಗಳನ್ನು ಹೇಳಿಕೊಟ್ಟಿದ್ದಾರಷ್ಟೇ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼ ಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷಿಯನ್‌ಗಳೂ ಇದ್ದಾರೆ. ಹಾಗೆಯೇ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್‌ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading
Advertisement
Mandya News
ಕರ್ನಾಟಕ2 seconds ago

Mandya News: ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

Mysore Vasudevacharya Memorial Music utsav Vidwat Sabha and award ceremony
ಮೈಸೂರು22 mins ago

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

swati Maliwal assault case:
ದೇಶ22 mins ago

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

Gautam Gambhir
ಪ್ರಮುಖ ಸುದ್ದಿ38 mins ago

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Namaz on Road
ದಕ್ಷಿಣ ಕನ್ನಡ41 mins ago

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

Credit Card Safety Tips
ಮನಿ ಗೈಡ್50 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ54 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ1 hour ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್2 hours ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ54 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌