Actor Nani: ರಾಮ್ ಚರಣ್ ಜತೆ ತನ್ನನ್ನು ತಾನು ಹೋಲಿಸಿಕೊಂಡ ಟಾಲಿವುಡ್‌ ನಾನಿ: ನೆಪೋಟಿಸಂ ಬಗ್ಗೆ ನಟ ಹೇಳಿದ್ದೇನು? - Vistara News

ಟಾಲಿವುಡ್

Actor Nani: ರಾಮ್ ಚರಣ್ ಜತೆ ತನ್ನನ್ನು ತಾನು ಹೋಲಿಸಿಕೊಂಡ ಟಾಲಿವುಡ್‌ ನಾನಿ: ನೆಪೋಟಿಸಂ ಬಗ್ಗೆ ನಟ ಹೇಳಿದ್ದೇನು?

ನಾನಿ (Actor Nani) ಮತ್ತು ರಾಣಾ ಇಬ್ಬರೂ ನಿಜಮ್ ವಿತ್ ಸ್ಮಿತಾ ಎಂಬ ಚಾಟ್ ಶೋನಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಗಾಯಕಿ ಸ್ಮಿತಾ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗಷ್ಟೇ ನಾನಿ ಹಾಗೂ ರಾಣಾ ನೆಪೋಟಿಸಂ (ಸ್ವಜನಪಕ್ಷಪಾತ)ದ ಬಗ್ಗೆ ಮಾತನಾಡಿರುವ ಪ್ರೊಮೊ ವೈರಲ್‌ ಆಗಿದೆ.

VISTARANEWS.COM


on

Actor Nani opens up on nepotism, compares himself with Ram Charan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟ ನಾನಿ (Actor Nani) ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿದ್ದಾರೆ. ಇತ್ತೀಚೆಗೆ ರಾಣಾ ದಗ್ಗುಬಾಟಿ ಜತೆಗೆ ತೆಲುಗು ಸೆಲೆಬ್ರಿಟಿ ಟಾಕ್ ಶೋಗಾಗಿ ಆಗಮಿಸಿದ್ದರು. ಸಿನಿಮಾ ಹಿನ್ನೆಲೆಯಿಂದ ಬಂದಿರದ ನಾನಿ ಇಂಡಸ್ಟ್ರಿಯಲ್ಲಿ ತನ್ನದೇ ಆದ ದಾರಿಯನ್ನು ರೂಪಿಸಿಕೊಂಡಿದ್ದು, ನೆಪೋಟಿಸಂ ಕುರಿತ ಪ್ರಶ್ನೆಗೆ ಉತ್ತರಿಸುವಾಗ ರಾಮ್ ಚರಣ್ ಜತೆ ತನ್ನನ್ನು ತಾನು ಹೋಲಿಸಿಕೊಂಡಿದ್ದಾರೆ.

ನಾನಿ ಮತ್ತು ರಾಣಾ ಇಬ್ಬರೂ ನಿಜಮ್ ವಿತ್ ಸ್ಮಿತಾ ಎಂಬ ಚಾಟ್ ಶೋನಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಗಾಯಕಿ ಸ್ಮಿತಾ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗಷ್ಟೇ ನಾನಿ ಹಾಗೂ ರಾಣಾ ನೆಪೋಟಿಸಂ (ಸ್ವಜನಪಕ್ಷಪಾತ) ಬಗ್ಗೆ ಮಾತನಾಡಿರುವ ಪ್ರೊಮೊ ವೈರಲ್‌ ಆಗಿದೆ.

ನೆಪೋಟಿಸಂ ಬಗ್ಗೆ ನಾನಿ ಮಾತನಾಡುವಾಗ ʻʻನನ್ನ (ನಾನಿ) ಮೊದಲ ಚಿತ್ರವನ್ನು ಒಂದು ಲಕ್ಷ ಜನರು ವೀಕ್ಷಿಸುತ್ತಾರೆ, ಆದರೆ ರಾಮ್‌ ಚರಣ್ ಅವರ ಮೊದಲ ಚಿತ್ರವನ್ನು ಒಂದು ಕೋಟಿ ಜನರು ವೀಕ್ಷಿಸುತ್ತಾರೆ. ಜನರು ಯಾವಾಗಲೂ ತಮ್ಮ ಆರಾಧ್ಯದೈವನ ಪುತ್ರ ಹಾಗೂ ಮತ್ತು ಪುತ್ರಿಯರನ್ನು ಹಿರಿತೆರೆಯಲ್ಲಿ ನೋಡಲು ಬಯಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವ ಜವಾಬ್ದಾರಿ ಪ್ರೇಕ್ಷಕರದ್ದೇ ಆಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Nani | ಫ್ರೆಂಡ್‌ಶಿಪ್‌ ಡೇಗೆ ನಾನಿ ನಟನೆಯ ದಸರಾ ಸಿನಿಮಾ ಪೋಸ್ಟರ್‌ ರಿವೀಲ್‌: ನಾನಿ ಜತೆ ಮಿಂಚಿದ ಕನ್ನಡದ ನಟ

ಅದೇ ಪ್ರೋಮೊದಲ್ಲಿ ರಾಣಾ ಕೂಡ ನೆಪೋಟಿಸಂ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಪರಂಪರೆಯನ್ನು ಸಾಗಿಸುವುದು ಪ್ರೇಕ್ಷಕರ ಹೆಮ್ಮೆ ಎಂದರು. “ನಿಮ್ಮ ಪೋಷಕರ ಸಾಧನೆಗಳು ಮತ್ತು ಪರಂಪರೆಯನ್ನು ನೀವು ಮುಂದುವರಿಸಲು ಸಾಧ್ಯವಾಗದಿದ್ದರೆ, ನೀವು ನಿಮ್ಮ ಕುಟುಂಬಕ್ಕೆ ಅಪಚಾರ ಮಾಡುತ್ತಿದ್ದೀರಿ ಎಂದು ಅರ್ಥ ಎಂದು” ರಾಣಾ ಹೇಳಿದ್ದಾರೆ. ಈ ಪ್ರೋಮೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಪ್ರೊಮೊ

ನಾನಿ ತಮ್ಮ ಮೊದಲ ಪ್ಯಾನ್-ಇಂಡಿಯಾ ಸಿನಿಮಾ ʻದಸರಾʼ ಬಿಡುಗಡೆಗೆ ಸಿದ್ಧವಾಗುತ್ತಿದ್ದಾರೆ. ಮೂಲತಃ ತೆಲುಗಿನಲ್ಲಿ ಚಿತ್ರೀಕರಣಗೊಂಡ ಈ ಚಿತ್ರವು ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಮಾರ್ಚ್ 30 ರಂದು ಬಿಡುಗಡೆಯಾಗಲಿದೆ.

ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಾನಿ,ʻʻಕಳೆದ ವರ್ಷ ತೆಲುಗು ಚಿತ್ರರಂಗದಿಂದ RRR ಬಂದಿತ್ತು. ಕೆಜಿಎಫ್ ಮತ್ತು ಕಾಂತಾರ ಕನ್ನಡ ಚಿತ್ರರಂಗದಿಂದ ಬಂದವು. 2023ರಲ್ಲಿ ತೆಲುಗು ಚಿತ್ರರಂಗದಿಂದ ದಸರಾ ಬರಲಿದೆʼʼ ಎಂದು ಆತ್ಮವಿಶ್ವಾಸದಿಂದ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Actor Nani: ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡ ನ್ಯಾಚುರಲ್ ಸ್ಟಾರ್ ನಾನಿ: ‘ದಸರಾ’ ಟೀಸರ್‌ ಔಟ್‌!

ದಸರಾ ಚಿತ್ರವನ್ನು ಶ್ರೀಕಾಂತ್ ಒಡೆಲ್ಲ ನಿರ್ದೇಶಿಸಿದ್ದಾರೆ. ಇದರಲ್ಲಿ ಕೀರ್ತಿ ಸುರೇಶ್, ಸಾಯಿ ಕುಮಾರ್ ಮತ್ತು ಶೈನ್ ಟಾಮ್ ಚಾಕೊ ಮುಂತಾದವರು ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಟಾಲಿವುಡ್

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

Anupama Parameswaran: ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ.

VISTARANEWS.COM


on

Anupama Parameswaran Paradha next
Koo

ಬೆಂಗಳೂರು: ನಟ ಸಾರ್ವಭೌಮʼ ಚಿತ್ರದ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅಭಿನಯದ ʻಟಿಲ್ಲು ಸ್ಕ್ವೇರ್’ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿದ್ದು ಗೊತ್ತೇ ಇದೆ. 2002ರಲ್ಲಿ ಬಂದಿದ್ದ ʻಡಿಜೆ ಟಿಲ್ಲು’ ಚಿತ್ರದ ಮುಂದುವರಿದ ಭಾಗ ಈ `ಟಿಲ್ಲು ಸ್ಕ್ವೇರ್’. ಸಿದ್ದು ಜೊನ್ನಲಗಡ್ಡ ( Siddhu Jonnalagadda ) ಈ ಚಿತ್ರದ ನಾಯಕ. ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಕೊಂಡಿತ್ತು. ಸಿನಿಮಾ ಒಟಿಟಿಗೆ ಲಗ್ಗೆ ಈಗಾಗಲೇ ಇಟ್ಟಿದೆ. ಇದರ ಬೆನ್ನಲ್ಲೇ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಹೊಸ ಅವತಾರದಲ್ಲಿ ಕಂಡಿದ್ದಾರೆ ಅನುಪಮಾ ಪರಮೇಶ್ವರನ್.

‘ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಅನುಪಮಾ ಕಂಡಿದ್ದಾರೆ. ಸೆರಗನ್ನು ತಲೆ ಮೇಲೆ ಹೊತ್ತು, ಮಹಿಳೆಯರ ಸಮ್ಮುಖದಲ್ಲಿ ನಿಂತಿದ್ದಾರೆ.

ಇದನ್ನೂ ಓದಿ: Anupama Parameswaran: ಅನುಪಮಾ ಪರಮೇಶ್ವರನ್‌ಗೆ ಜ್ಯೂ.ಎನ್‌ಟಿಆರ್‌ ಫ್ಯಾನ್ಸ್‌ನಿಂದ ಅವಮಾನ!

`ಬಂಡಿ’ ಸಿನಿಮಾ ಖ್ಯಾತಿಯ ಪ್ರವೀಣ್ ಕಂಡ್ರೇಗುಲಾ ನಿರ್ದೇಶನ ಪರಧಾ ಚಿತ್ರಕ್ಕಿದೆ. ಮಲಯಾಳಂ ನಟ ಹೃದಯಂನ ʻದರ್ಶನಾ ರಾಜೇಂದ್ರನ್ʼ ಮತ್ತು ಸಂಗೀತಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಆನಂದ ಮೀಡಿಯಾ ಅಡಿಯಲ್ಲಿ ವಿಜಯ್ ಡೊಂಕದ, ಶ್ರೀನಿವಾಸಲು ಪಿವಿ ಮತ್ತು ಶ್ರೀಧರ್ ಮಕ್ಕುವ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಗೋಪಿ ಸುಂದರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ದೆಹಲಿ, ಹಿಮಾಚಲ ಪ್ರದೇಶ ಮತ್ತು ಕೆಲವು ಹಳ್ಳಿಗಳಲ್ಲಿ ಪರಧಾ ಚಿತ್ರೀಕರಣ ಮಾಡಲಾಗಿದೆ.

ಅನುಪಮಾ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಶೇರ್‌ ಮಾಡಿಕೊಂಡಿದ್ದಾರೆ, “ ಬ್ಲಾಕ್‌ಬಸ್ಟರ್ ಟಿಲ್ಲು ಸ್ಕ್ವೇರ್ ನಂತರ, ಈಗ ಪರಧಾ ಜೊತೆ ಬರುತ್ತಿದ್ದೇನೆ! ಹಿಂದೆಂದೂ ಕಾಣದಂತಹ ಅನುಭವವನ್ನು ನಿಮಗೆ ಈ ಸಿನಿಮಾ ಮೂಲಕ ಸಿಗಲಿದೆ ಎಂದು ಭರವಸೆ ನೀಡುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಟಿಲ್ಲು ಸ್ಕ್ವೇರ್’ 2024, ಮಾರ್ಚ್ 29ರಂದು ರಿಲೀಸ್ ಆಗಿತ್ತು. ‘ಡಿಜೆ ಟಿಲ್ಲು’ 30 ಕೋಟಿ ರೂಪಾಯಿ ಲೂಟಿ ಮಾಡಿದ್ದರೆ, ‘ಟಿಲ್ಲು ಸ್ಕ್ವೇರ್’ ಬಾಕ್ಸಾಫೀಸ್‌ನಲ್ಲಿ ಬರೋಬ್ಬರು 125 ಕೋಟಿ ರೂಪಾಯಿ ದೋಚಿದೆ. ಈ ವರ್ಷದ ಟಾಲಿವುಡ್‌ನ ಮೋಸ್ಟ್ ಸಕ್ಸೆಸ್‌ಫುಲ್‌ ಸಿನಿಮಾ ಎನಿಸಿಕೊಂಡಿದೆ. ನೆಟ್‌ಫ್ಲಿಕ್ಸ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಖರೀದಿ ಮಾಡಿದೆ.

`ಟಿಲ್ಲು ಸ್ಕ್ವೇರ್’ ಒಳ್ಳೆಯ ಕಥಾಹಂದರ ಮತ್ತು ಆಕರ್ಷಕ ಪ್ರದರ್ಶನ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.
ಟಿಲ್ಲು ಸ್ಕ್ವೇರ್‌ನ ನಿರ್ಮಾಪಕರ ಇತ್ತೀಚಿನ ವರದಿಗಳ ಪ್ರಕಾರ, ಚಿತ್ರವು ಈಗಾಗಲೇ ಕೇವಲ 9 ದಿನಗಳಲ್ಲಿ ವಿಶ್ವಾದ್ಯಂತ 100 ಕೋಟಿ ರೂಪಾಯಿಗಳನ್ನು ದಾಟಿದೆ. ತೆಲುಗು ಚಿತ್ರ ಟಿಲ್ಲು ಸ್ಕ್ವೇರ್ 100 ಕೋಟಿ ಗಳಿಸಿದ ಮೊದಲ ಹಾಸ್ಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ʻಜಾತಿ ರತ್ನಲುʼ ಸಿನಿಮಾ ಈ ಮುಂಚೆ ದಾಖಲೆ ಮಾಡಿತ್ತು.

ಟಿಲ್ಲು ಸ್ಕ್ವೇರ್ ಚಿತ್ರವನ್ನ ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸೂರ್ಯದೇವರ ನಾಗ ವಂಶಿ ಹಾಗೂ ಸಾಯಿ ಸೌಜನ್ಯ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇವೆ.

Continue Reading

ಟಾಲಿವುಡ್

Kalki 2898 AD: ಪ್ರಭಾಸ್, ದೀಪಿಕಾ, ಅಮಿತಾಭ್‌ ಮುಖ್ಯಭೂಮಿಕೆಯ ʻಕಲ್ಕಿ 2898 ADʼ ರಿಲೀಸ್‌ ಡೇಟ್‌ ಅನೌನ್ಸ್‌!

Kalki 2898 AD: ಪ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.ಇತ್ತೀಚಿನ ವರದಿ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್‌ ಮಾಡುವುದಾಗಿ ವರದಿಯಾಗಿದೆ. ಜೂನ್ 27 ರಂದು ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರ ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು.

VISTARANEWS.COM


on

Kalki 2898 AD to release on this date
Koo

ಬೆಂಗಳೂರು: ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ಕಲ್ಕಿ (Kalki 2898 AD) ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಅಮಿತಾಭ್ ಬಚ್ಚನ್ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ತಂಡ ರಿವೀಲ್ ಮಾಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಿನಿಮಾ ರಿಲೀಸ್‌ ಡೇಟ್‌ ಬಗ್ಗೆ ಸಖತ್‌ ಚರ್ಚೆಗಳು ಆಗುತ್ತಿವೆ. ಚಿತ್ರತಂಡ ಜೂನ್ 27ರಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ ಎಂದು ವರದಿಯಾಗಿದೆ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kalki 2898 AD: ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್‌: ಬಿಗ್‌ಬಿ ಲುಕ್ ಹೇಗಿದೆ?

ಏ.21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿತ್ತು. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅಮಿತಾಭ್‌ ಬಚ್ಚನ್ ಹಳದಿ ಬಟ್ಟೆಯನ್ನು ಧರಿಸಿದ್ದರು. ಗುಹೆಯಂತೆ ಕಾಣುವ ಶಿವಲಿಂಗದ ಮುಂದೆ ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು. ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ, ನಾನು ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೆ. ನಾನು ಗುರು ದ್ರೋಣರ ಮಗ. ಅಶ್ವತ್ಥಾಮ.”ಎಂದು ಹೇಳುತ್ತಾರೆ. ಈ ಮೂಲಕ ಅಮಿತಾಭ್‌ ಪಾತ್ರ ರಿವೀಲ್‌ ಆಗಿತ್ತು.

ಇತ್ತೀಚಿನ ವರದಿ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್‌ ಮಾಡುವುದಾಗಿ ವರದಿಯಾಗಿದೆ. ಜೂನ್ 27 ರಂದು ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರ ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಯಿತು.

ಇದನ್ನೂ ಓದಿ: Kalki 2898 AD: ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್‌: ಬಿಗ್‌ಬಿ ಲುಕ್ ಹೇಗಿದೆ?

ಇದನ್ನೂ ಓದಿ: Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು. ಇದು ಚಿತ್ರಪ್ರೇಮಿಗಳ ಗಮನ ಸೆಳೆದಿತ್ತು. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಪಾತ್ರ ಹೆಸರನ್ನೂ ರಿವೀಲ್‌ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ದುಬಾರಿ ಸಿನಿಮಾ

ʼಕಲ್ಕಿ 2898 ಎಡಿʼ ಈ ವರ್ಷದ ಅತೀ ಹೆಚ್ಚಿನ ಬಜೆಟ್‌ ಹೊಂದಿರುವ ಚಿತ್ರ ಎನಿಸಿಕೊಳ್ಳಲಿದೆ. ಈ ಚಿತ್ರದ ಬಜೆಟ್‌ ಬರೋಬ್ಬರಿ 600 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅಂದರೆ ಇತ್ತೀಚಿನ ಬಹು ಕೋಟಿ ರೂ. ಬಜೆಟ್‌ನ ʼಸಲಾರ್‌ʼ (270 ಕೋಟಿ ರೂ.), ʼಅನಿಮಲ್‌ʼ (100 ಕೋಟಿ ರೂ.) ಮತ್ತು ʼಡಂಕಿʼ (140 ಕೋಟಿ ರೂ.) ಈ ಮೂರು ಚಿತ್ರಗಳ ಒಟ್ಟು ಬಜೆಟ್‌ಗಿಂತ ಜಾಸ್ತಿ. ಅಲ್ಲದೆ 2022ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ʼಬಹ್ಮಾಸ್ತ್ರʼಕ್ಕಿಂತಲೂ (400 ಕೋಟಿ ರೂ.) ʼಕಲ್ಕಿʼಯ ಬಜೆಟ್‌ ಅಧಿಕ. ಹೀಗಾಗಿಯೇ ಈ ಚಿತ್ರದ ಮೇಲೆ ನಿರೀಕ್ಷೆ ಗರಿಗೆದರಿದೆ.

ಯಾವುದೇ ತೆಲುಗು ಸಿನಿಮಾ ರಿಲೀಸ್ ಆದರೂ, ಒಂದು ದಿನ ಮುಂಚಿತವಾಗಿ ಅಮೆರಿಕದಲ್ಲಿ ಪ್ರೀಮಿಯರ್ ನಡೆಯುತ್ತೆ. ‘ಕಲ್ಕಿ 2828 AD’ ಬಹುಕೋಟಿ ವೆಚ್ಚದ ಸಿನಿಮಾ ಆಗಿರುವುದರಿಂದ ಒಂದು ದಿನ ಮುಂಚಿತವಾಗಿ, ಅಂದರೆ, ಜೂನ್ 26ರಂದು ಅಮೆರಿಕದಲ್ಲಿ ತೆರೆಕಾಣಲಿದೆ ಎನ್ನಲಾಗಿದೆ.

Continue Reading

ಟಾಲಿವುಡ್

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Samantha Ruth Prabhu: ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

VISTARANEWS.COM


on

Samantha Ruth Prabhu repurposes her wedding gown
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಲ ಜತೆ ವೆಕೇಶನ್‌ ಮೂಡ್‌ನಲ್ಲಿರುವ ಫೋಟೊ ವೈರಲ್‌ ಆಗಿತ್ತು. ಇದೀಗ ಸಮಂತಾ ಅವರು ತಮ್ಮ ಮದುವೆಯ ಗೌನ್‌ ಹರಿದು ಕಪ್ಪು ಕಾಕ್ಟೈಲ್ ಗೌನ್ ಆಗಿ ( black strapless outfit) ಪರಿವರ್ತಿಸಿ ಧರಿಸಿದ್ದಾರೆ. ಮಾತ್ರವಲ್ಲ ಹೊಸ ಫೋಟೊ ( black cocktail gown ) ಹಂಚಿಕೊಂಡು ‘ಪ್ರೀತಿಯ ಗೌನ್’ ಎಂದು ಕ್ಯಾಪ್ಷನ್‌ ಕೂಡ ಕೊಟ್ಟಿದ್ದಾರೆ. ಈ ಹೊಸ ಗೌನ್‌ವನ್ನು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ.

ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಈ ಹೊಸ ಉಡುಪನ್ನು ಧರಿಸಿ ಪೋಸ್‌ ಕೊಟ್ಟಿದ್ದಾರೆ ಸಮಂತಾ. ಇನ್‌ಸ್ಟಾದಲ್ಲಿ ಫೋಟೊಗಳನ್ನು ಹಂಚಿಕೊಂಡು ʻನನ್ನ ಪ್ರೀತಿಯ ಗೌನ್’ ಎಂದು ಸಮಂತಾ ಉಲ್ಲೇಖಿಸಿದ್ದಾರೆ.

ನಾಗ ಚೈತನ್ಯ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ (Christian wedding ceremony) ಮದುವೆಯಾಗುವಾಗ ಸಮಂತಾ ಈ ಬಿಳಿ ಗೌನ್ ಧರಿಸಿದ್ದರು. 2017 ರಲ್ಲಿ ಗೋವಾದಲ್ಲಿ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು. ನಾಲ್ಕು ವರ್ಷಗಳ ನಂತರ, ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್‌ ಪಡೆದುಕೊಂಡರು. ಇದೀಗ ಅದೇ ಬಿಳಿ ಗೌನ್‌ ಅನ್ನು ಹೊಸ ರೂಪದಲ್ಲಿ ಮರು ಬಳಕೆ ಮಾಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಫಾಲೋವರ್ಸ್‌ಗಳನ್ನು ದಾರಿ ತಪ್ಪಿಸಿದ್ರಾ ಸಮಂತಾ? ವೈದ್ಯರಿಂದ ಸಖತ್‌ ಕ್ಲಾಸ್‌!

ಫೋಟೊ ಹಂಚಿಕೊಂಡ ಸಮಂತಾ ʻʻನಾನು ಇಂದು ಧರಿಸಿರುವ ಉಡುಗೆ ನನ್ನ ಪ್ರೀತಿಯ ಗೌನ್ ಆಗಿದೆ. ನನ್ನ ಹಳೆಯ ಬಟ್ಟೆಗಳನ್ನು ಮರುಬಳಕೆ ಮಾಡುವುದು ಮೊದಲಿಂದಲೂ ನನಗಿರುವ ಅಭ್ಯಾಸʼʼಎಂದು ಬರೆದುಕೊಂಡಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ, ಸಮಂತಾ ರುತ್ ಪ್ರಭು ‘ಸಿಟಾಡೆಲ್: ಹನಿ ಬನ್ನಿ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ರಾಜ್ ಮತ್ತು ಡಿಕೆ ನಿರ್ದೇಶನದ ಈ ಸಿರೀಸ್‌ನಲ್ಲಿ ವರುಣ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಇದೀಗ ನಟನೆಗೆ ವಿರಾಮ ನೀಡಿ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ.

Continue Reading
Advertisement
ವೈರಲ್ ನ್ಯೂಸ್17 mins ago

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Lok sabaha election
ದೇಶ27 mins ago

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

PM Narendra Modi Live in Sirsi campaign meeting here
Lok Sabha Election 202430 mins ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್34 mins ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 202457 mins ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ1 hour ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್1 hour ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ1 hour ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ5 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202422 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌