South Cinema
Actor Prabhas: ವಿಚಿತ್ರ ಆಕಾರದಲ್ಲಿ ಪ್ರಭಾಸ್: ಫೋಟೊ ಹಿಂದಿನ ಕಾರಣವೇನು?
ಇತ್ತೀಚೆಗೆ ನಟ ಶಿವ ರಾಜ್ಕುಮಾರ್ ಹಾಗೂ ರಜನಿಕಾಂತ್ ಜತೆಗಿನ ಪೋಟೊ ನೋಡಿ ಪ್ರಭಾಸ್ (Actor Prabhas) ಅಭಿಮಾನಿಗಳು ಬೆಚ್ಚಿ ಬಿದ್ದಿದ್ದಾರೆ. ಸಿಕ್ಕಾಪಟ್ಟೆ ದಪ್ಪ ವಿಚಿತ್ರ ಆಕಾರದಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಫೋಟೊ ನೋಡಿ ಪ್ರಭಾಸ್ ಯಾಕೆ ಹೀಗಾದರು ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಬಾಹುಬಲಿ ಸಿನಿಮಾ ಬಳಿಕ ನಟ ಪ್ರಭಾಸ್ (Actor Prabhas) ಆಗಾಗ ತಮ್ಮ ಫೋಟೊ ಮೂಲಕ ಟ್ರೋಲ್ಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗೆ ನಟ ಶಿವ ರಾಜ್ಕುಮಾರ್ ಹಾಗೂ ರಜನಿಕಾಂತ್ ಜತೆಗಿನ ಪೋಟೊ ನೋಡಿ ಪ್ರಭಾಸ್ ಅಭಿಮಾನಿಗಳು ಬೆಚ್ಚಿ ಬಿದ್ದಿದ್ದಾರೆ. ಸಿಕ್ಕಾಪಟ್ಟೆ ದಪ್ಪ ವಿಚಿತ್ರ ಆಕಾರದಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಫೋಟೊ ನೋಡಿ ಪ್ರಭಾಸ್ ಯಾಕೆ ಹೀಗಾದರು ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೀಗ ಅಸಲಿ ಸತ್ಯ ಬಹಿರಂಗಗೊಂಡಿದೆ.
ಪ್ರಭಾಸ್ ಅವರ ಫೋಟೊವೊಂದು ಅವರ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಫೋಟೊದಲ್ಲಿ ರಜನಿಕಾಂತ್ ಮತ್ತು ಕನ್ನಡ ನಟ ಶಿವ ರಾಜ್ಕುಮಾರ್ ಅವರೊಂದಿಗೆ ಪೋಸ್ ನೀಡುತ್ತಿರುವಾಗ ಪ್ರಭಾಸ್ ಗುರುತಿಸಲಾಗದಂತೆ ಕಾಣುತ್ತಿದ್ದರು. ಪ್ರಭಾಸ್ ಅಭಿಮಾನಿಗಳಿಗೆ ಕೆರಳಿಸುವಂತಿತ್ತು ಎಡಿಟ್ ಫೋಟೊ. ಇದು ಜೈಲರ್ ಸಿನಿಮಾ ಶೂಟ್ನ ವೇಳೆ ಸೆರೆ ಹಿಡಿದಿರುವ ಚಿತ್ರ. ಆದರೆ ಅದು ಪ್ರಭಾಸ್ ಅಲ್ಲ. ಜೈಲರ್ ಚಿತ್ರೀಕರಣದ ವೇಳೆ ಸೆಟ್ಗೆ ಆಗಮಿಸಿದ ಅತಿಥಿಗಳನ್ನು ಭೇಟಿ ಮಾಡಿ ಅವರೊಟ್ಟಿಗೆ ಕ್ಲಿಕ್ ಮಾಡಿಕೊಂಡಿರುವ ಚಿತ್ರವಿದು. ಹೀಗಾಗಿ ಇದು ಎಡಿಟ್ ಮಾಡಿರುವ ಪೋಟೊ ಆಗಿದ್ದು, ಪ್ರಭಾಸ್ ಅಲ್ಲ ಎಂಬುದು ಪಕ್ಕಾ ಆಗಿದೆ.
ಎಡಿಟ್ ಫೋಟೊ ಹಾಗೂ ರಿಯಲ್ ಫೋಟೊ
ಭರದಿಂದ ಸಾಗುತ್ತಿದೆ ಜೈಲರ್ ಶೂಟಿಂಗ್
ಮಾಲಿವುಡ್ ನಟ ಮೋಹನ್ಲಾಲ್ ಕೂಡ ಚಿತ್ರದಲ್ಲಿ ಇದ್ದಾರೆ ಎಂದು ವರದಿಯಾಗಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಸೂಪರ್ಸ್ಟಾರ್ ರಜನಿಕಾಂತ್ ಅವರ ಜೈಲರ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ʻಪೆಟ್ಟಾʼ, ʻದರ್ಬಾರ್ʼ ಬಳಿಕ ಮೂರನೇ ಬಾರಿಗೆ ರಜನಿಕಾಂತ್ ಸಿನಿಮಾಕ್ಕೆ ಸಂಗೀತ ನೀಡುವ ಅವಕಾಶವನ್ನು ಅನಿರುದ್ಧ್ ಗಿಟ್ಟಿಸಿಕೊಂಡಿದ್ದಾರೆ.
ರಜನಿಕಾಂತ್ ಮತ್ತು ಶಿವರಾಜಕುಮಾರ್ ಅವರ ಭಾಗವಾಗಿ, ಜೈಲರ್ ಸಿನಿಮಾದಲ್ಲಿ ತಮನ್ನಾ ನಾಯಕಿಯಾಗಿ ನಟಿಸಲಿದ್ದಾರೆ. ವಸಂತ ರವಿ, ಯೋಗಿ ಬಾಬು, ರಮ್ಯಾ ಕೃಷ್ಣನ್ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ರಜಿನಿಕಾಂತ್ ಸದ್ಯ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಚಿತ್ರ ʻಲಾಲ್ ಸಲಾಮ್ʼ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರಜನಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.
South Cinema
Actress Samantha: ಮನೆಯವರ ವಿರೋಧ ಕಟ್ಟಿಕೊಂಡು ‘ಊ ಅಂಟಾವಾ’ ಹಾಡಿಗೆ ಕುಣಿದಿದ್ದ ನಟಿ ಸಮಂತಾ
Actor Samantha: ನಟಿ ಸಮಂತಾ ಅವರು ಪುಷ್ಪ ಸಿನಿಮಾದ ಊ ಅಂಟಾವಾ ಹಾಡಿಗೆ ನೃತ್ಯ ಮಾಡುವುದಕ್ಕೆ ಕುಟುಂಬದ ವಿರೋಧ ಕಟ್ಟಿಕೊಂಡ ಬಗ್ಗೆ ಮಾತನಾಡಿದ್ದಾರೆ.
ಹೈದರಾಬಾದ್: ದಕ್ಷಿಣ ಭಾರತದ ನಟಿ ಸಮಂತಾ (Actress Samantha) ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದವರು. ಅಲ್ಲು ಅರ್ಜುನ್ ಅವರ ಪುಷ್ಪ ಸಿನಿಮಾದಲ್ಲಿ ʼಊ ಅಂಟಾವಾʼ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಐಟಂ ಸಾಂಗ್ಗೂ ಸೈ ಎಂದು ತೋರಿಸಿಕೊಟ್ಟವರು. ಆದರೆ ನಟಿ ಈ ಹಾಡಿಗೆ ನೃತ್ಯ ಮಾಡುವ ಮುನ್ನ ಕೆಲವು ಅಗ್ನಿಪರೀಕ್ಷೆಗಳನ್ನು ಎದುರಿಸಬೇಕಾಯಿತಂತೆ. ಈ ವಿಚಾರವನ್ನು ನಟಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Actress Samantha : ಯಾರನ್ನಾದರೂ ಪ್ರೀತಿಸಿ ಎಂದ ಅಭಿಮಾನಿಗೆ ಸರಿಯಾದ ಉತ್ತರ ನೀಡಿದ ಸಮಂತಾ
ತಮ್ಮ ಮುಂಬರುವ ಚಿತ್ರ ಶಾಕುಂತಲಂನ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ʼಊ ಅಂಟಾವಾʼ ಹಾಡಿನ ಹಿಂದಿನ ಕಥೆಯನ್ನು ತೆರೆದಿಟ್ಟಿದ್ದಾರೆ. “ನನ್ನ ಮದುವೆ ಮುರಿದುಬಿದ್ದ ವಿಚಾರವನ್ನು ನಾವು ಸಮಾಜಕ್ಕೆ ಹೇಳಿಕೊಳ್ಳಬೇಕು ಎನ್ನುವ ಸಮಯದಲ್ಲೇ ಈ ಹಾಡಿನ ಆಫರ್ ನನಗೆ ಬಂದಿತು. ಆಗ ನನ್ನ ಕುಟುಂಬ ನಾನು ಮನೆಯಲ್ಲೇ ಇರಬೇಕು ಎಂದು ಬಯಸುತ್ತಿತ್ತು. ಈ ಹಾಡಿಗೆ ನೃತ್ಯ ಮಾಡುವುದಕ್ಕೆ ನನ್ನ ಕುಟುಂಬದಿಂದ ವಿರೋಧ ಬಂದಿತ್ತು” ಎಂದು ನಟಿ ಹೇಳಿದ್ದಾರೆ.
“ಅಷ್ಟೇ ಅಲ್ಲ, ನನ್ನ ಸ್ನೇಹಿತರೂ ಕೂಡ ಈ ಹಾಡಿನ ವಿಚಾರದಲ್ಲಿ ನನಗೆ ಬೆಂಬಲ ನೀಡಲಿಲ್ಲ. ʼಸೂಪರ್ ಡಿಲಕ್ಸ್ʼ ಸಿನಿಮಾದಲ್ಲಿ ನಟಿಸುವುದಕ್ಕೂ ಒಕೆ ಎಂದಿದ್ದ ಸ್ನೇಹಿತರು ಈ ಹಾಡಿನ ವಿಚಾರದಲ್ಲಿ ಹಿಂದೆ ಬಿದ್ದರು. ಆಗ ನಾನು ಎಲ್ಲವನ್ನೂ ಮೀರಿ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ನಾನೇಕೆ ಬದುಕನ್ನು ಮರೆಮಾಚಿಕೊಂಡು ಬದುಕಬೇಕೆಂದು ನನ್ನದೇ ಆದ ನಿರ್ಧಾರ ತೆಗೆದುಕೊಂಡೆ” ಎಂದು ಸಮಂತಾ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Samantha Ruth Prabhu: `ಶಾಕುಂತಲಂ’ ಸಿನಿಮಾವನ್ನು ರಿಜೆಕ್ಟ್ ಮಾಡಬೇಕಂತಿದ್ದ ಸಮಂತಾ: ಕಾರಣವೇನು?
“ಮದುವೆ ವಿಚಾರದಲ್ಲಿ ನಾನು ಸಂಬಂಧವನ್ನು ಉಳಿಸಿಕೊಳ್ಳುವುದಕ್ಕೆ ಶೇ.100 ಪ್ರಯತ್ನ ಮಾಡಿದ್ದೇನೆ. ಆದರೆ ಅದು ಸಫಲವಾಗಲಿಲ್ಲ. ಆ ವಿಚಾರದಲ್ಲಿ ನನ್ನನ್ನು ನಾನು ತಪ್ಪಿತಸ್ಥೆ ರೀತಿಯಲ್ಲಿ ನೋಡಿಕೊಳ್ಳುವುದಕ್ಕೂ ಇಷ್ಟಪಡುವುದಿಲ್ಲ” ಎಂದು ನಟಿ ತಮ್ಮ ಮದುವೆ ಮುರಿದುಬಿದ್ದ ವಿಚಾರವನ್ನೂ ಹೇಳಿಕೊಂಡಿದ್ದಾರೆ.
South Cinema
Naga Chaitanya: ಶೋಭಿತಾ-ನಾಗಚೈತನ್ಯ ಡೇಟಿಂಗ್ ಮಾಡಿರುವ ಫೋಟೊ ಇದ್ದಕ್ಕಿದ್ದಂತೆ ಮಾಯಾ!
ಲಂಡನ್ (Naga Chaitanya) ರೆಸ್ಟೋರೆಂಟ್ನಲ್ಲಿ ದಂಪತಿ ಊಟ ಮಾಡುತ್ತಿರುವ ಹೊಸ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಫೋಟೊ ವೈರಲ್ ಆಗುತ್ತಿದ್ದಂತೆ ಬಾಣಸಿಗ ಸುರೇಂದರ್ ಮೋಹನ್ ಈಗ ಡಿಲೀಟ್ ಮಾಡಿದ್ದಾರೆ.
ಬೆಂಗಳೂರು: ತೆಲುಗು ಸ್ಟಾರ್ ನಾಗ ಚೈತನ್ಯ (Naga Chaitanya) ಮತ್ತು ಬಾಲಿವುಡ್ ನಟಿ ಶೋಭಿತಾ ಧೂಲಿಪಾಲ (Sobhita Dhulipala ) ಅವರ ಡೇಟಿಂಗ್ ವದಂತಿಗಳು ಮತ್ತೊಮ್ಮೆ ಗಮನ ಸೆಳೆದಿವೆ. ಇದೀಗ ಜೋಡಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊ ವೈರಲ್ ಆಗಿದೆ. ಲಂಡನ್ ರೆಸ್ಟೋರೆಂಟ್ನಲ್ಲಿ ದಂಪತಿ ಊಟ ಮಾಡುತ್ತಿರುವ ಹೊಸ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಫೋಟೊ ವೈರಲ್ ಆಗುತ್ತಿದ್ದಂತೆ ಬಾಣಸಿಗ ಸುರೇಂದರ್ ಮೋಹನ್ ಈಗ ಡಿಲೀಟ್ ಮಾಡಿದ್ದಾರೆ. ಈ ಕಾರಣದಿಂದಾಗಿ ಅನುಮಾನ ಹೆಚ್ಚಾಗುತ್ತಿದ್ದು ನೆಟ್ಟಿಗರು ಇಬ್ಬರ ಡೇಟಿಂಗ್ ಸುದ್ದಿ ಪಕ್ಕಾ ಎಂದು ಕಮೆಂಟ್ ಮಾಡಿದ್ದಾರೆ.
ಇಬ್ಬರು ಸಿಕ್ಕಿಬಿದ್ದಿದ್ದು ಆ ಹೋಟೆಲ್ನ ಬಾಣಸಿಗ ಸುರೇಂದರ್ ಮೋಹನ್ ಶೇರ್ ಮಾಡಿದ ಫೋಟೊದಿಂದ. ಶೋಭಿತಾ ಧೂಲಿಪಾಲ ಮೇಜಿನ ಮೇಲೆ ಹಿಂಭಾಗದಲ್ಲಿ ಕುಳಿತಿರುವುದನ್ನು ಕಾಣಬಹುದು. ಚಿತ್ರ ಫೆಬ್ರವರಿ 1ರಂದು ಹಂಚಿಕೊಳ್ಳಲಾಗಿದೆ. ಆದರೆ ಇದೀಗ ಅಭಿಮಾನಿಗಳು ಶೋಭಿತಾ ಅವರನ್ನು ಚಿತ್ರದಲ್ಲಿ ಗುರುತಿಸಿದ್ದಾರೆ.
ಚಿತ್ರದ ಜತೆಗೆ, ಬಾಣಸಿಗರು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ನಾಗಚೈತನ್ಯ ನಮ್ಮೊಂದಿಗೆ ಭೋಜನ ಮಾಡುವುದು ನಮಗೆ ಸಂತೋಷವಾಗಿದೆ. ನೀವು ಊಟವನ್ನು ಆನಂದಿಸಿದ್ದೀರಿʼ ಎಂದು ಬರೆದುಕೊಂಡಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿಯೂ ನಾಗಚೈತನ್ಯ ಮತ್ತು ಶೋಭಿತಾ ಲಂಡಲ್ನಲ್ಲಿರುವ ಫೋಟೊ ವೈರಲ್ ಆಗಿತ್ತು. ಆ ಫೋಟೊಗಳು ಡೇಟಿಂಗ್ ವದಂತಿಗೆ ಪುಷ್ಟಿ ನೀಡಿತ್ತು. ಆದರೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇಬ್ಬರ ಫೋಟೊಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದೆ, ಇದು ಫೇಕ್ ಎನ್ನುವ ಮಾತು ಕೇಳಿ ಬಂದಿತ್ತು.
ಇದನ್ನೂ ಓದಿ: Samantha Ruth Prabhu: ನಿಮ್ಮ ಕೆಲಸ ನೀವು ನೋಡಿಕೊಳ್ಳಿ ಎಂದು ಸಮಂತಾ ಹೇಳಿದ್ದು ಯಾಕೆ?
ಶೋಭಿತಾ ಧೂಲಿಪಾಲ ಯಾರು?
ಆಂಧ್ರ ಪ್ರದೇಶದ ಶೋಭಿತಾ ಧೂಲಿಪಾಲ ಅವರು ಮಾಡೆಲ್ ಆಗಿದ್ದವರು. ಇಲ್ಲಿಯವರೆಗೆ ತೆಲುಗು, ತಮಿಳು, ಹಿಂದಿ ಚಿತ್ರಗಳಲ್ಲಿ ನಟಿಸಿರುವ ಶೋಭಿತಾ 2016ರಲ್ಲಿ ರಮನ್ ರಾಘವ್ 2.0 ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಗೂಢಚಾರಿ, ದಿ ಬಾಡಿ, ಘೋಸ್ಟ್ ಸ್ಟೋರೀಸ್, ಕುರುಪ್, ಮೇಜರ್ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಧೂಲಿಪಾಲ ನಟಿಸಿದ್ದಾರೆ. ಪೊನ್ನಿಯಿನ್ ಸೆಲ್ವನ್: 1, ಸಿತಾರಾ, ಮಂಕಿ ಮ್ಯಾನ್ ಸಿನಿಮಾಗಳಲ್ಲಿಯೂ ಶೋಭಿತಾ ನಟಿಸಿದ್ದು, ಅವುಗಳು ರಿಲೀಸ್ ಆಗಬೇಕಿವೆ. 2013ರಲ್ಲಿ ಫೇಮಿನಾ ಮಿಸ್ ಇಂಡಿಯಾ ಅವಾರ್ಡ್ ಕೂಡ ಪಡೆದಿದ್ದಾರೆ.
South Cinema
Actor Upendra: ನನಗೆ ಗೊತ್ತಿಲ್ಲ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ, ಅತಿ ಬುದ್ವಂತ್ರು! ಹೀಗೆ ಅಂದಿದ್ಯಾಕೆ ಉಪ್ಪಿ?
ನಟ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ (Actor Upendra) ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯೊಂದನ್ನು ಎತ್ತಿ ಸಂಚಲನ ಮೂಡಿಸಿದ್ದರು. ಈ ಬಗ್ಗೆ ಭಾರಿ ಪರ ಮತ್ತು ವಿರೋಧ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ನಡೆದಿದ್ದು, ಇದೀಗ ಮತ್ತೆ ಉಪ್ಪಿ ಖಡಕ್ ಆಗಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ರಿಯಲ್ ಸ್ಟಾರ್ ಉಪೇಂದ್ರ (Actor Upendra) ಅವರು ಸಖತ್ ಸುದ್ದಿಯಲ್ಲಿದ್ದಾರೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ನಟ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯೊಂದನ್ನು ಎತ್ತಿ ಸಂಚಲನ ಮೂಡಿಸಿದ್ದರು. ಈ ಬಗ್ಗೆ ಭಾರಿ ಪರ ಮತ್ತು ವಿರೋಧ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ನಡೆದಿದ್ದು, ಇದೀಗ ಮತ್ತೆ ಉಪ್ಪಿ ಖಡಕ್ ಆಗಿ ಟ್ವೀಟ್ ಮಾಡಿದ್ದಾರೆ.
ಉಪ್ಪಿ ಮೊದಲಿಗೆ ಟ್ವೀಟ್ ಮಾಡಿದ್ದೇನು?
“ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು
ಮೇ 13, ಶನಿವಾರ ಫಲಿತಾಂಶ ಪ್ರಕಟ. ಮತ ಎಣಿಕೆಗೆ ಎರಡು ದಿನ ಬೇಕೆ ?!
ಏಕೆಂದು ಬಲ್ಲವರು ತಿಳಿಸುತ್ತೀರಾ?ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಸಾರ್ವಜನಿಕರು ಉಪ್ಪಿಗೆ ತಲೆ ಕೆಟ್ಟಿದೆಯಾ ಎಂದು ಕಮೆಂಟ್ ಮೂಲಕ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ಒಬ್ಬರು ʻʻಸ್ವಲ್ಪ ಅರ್ಥ ಮಾಡ್ಕೊಳಿ ಸ್ವಾಮಿ. ಮತಯಂತ್ರಗಳನ್ನು ಮತಗಟ್ಟೆಗಳಿಂದ ಎಣಿಕೆ ಕೇಂದ್ರಗಳಿಗೆ ಕೊಂಡೊಯ್ಯಬೇಕು, ಅದರ ಜತೆಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳು ಇತ್ಯಾದಿ ಇರುತ್ತೆ ಅಲ್ವಾ? ಇಷ್ಟೆಲ್ಲಾ ಮಾಡೋಕ್ಕೆ 2 ದಿನ ಬೇಕಲ್ವಾ ಸ್ವಾಮಿ?ʼʼಎಂದು ಕಮೆಂಟ್ ಮಾಡಿದರೆ, ಇನ್ನೊಬ್ಬರು ʻʻನಿಮ್ಮ ಸಿನಿಮಾ ಶೂಟಿಂಗ್ ಮುಗಿದ ದಿನವೇ ರಿಲೀಸ್ ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ?ʼʼಎಂದು ಕಮೆಂಟ್ ಮಾಡಿದ್ದಾರೆ.
ʻʻತಾಂತ್ರಿಕ ದೋಷದಿಂದ ಮತ್ತು ಬೇರೆ ಕಾರಣಗಳಿಂದ ಮತದಾನ ನಿಂತರೆ ಮರುಮತದಾನ ಮಾಡಲಿಕ್ಕೆ ಸಮಯ ಬೇಕಲ್ಲವೇ?ʼʼಎಂದು ಕಮೆಂಟ್ ಮಾಡಿದ್ದಾರೆ. ಹೀಗೆ ಪೋಸ್ಟ್ ಹಾಕಿದ ಬೆನ್ನಲ್ಲೇ ನಟ ಉಪ್ಪಿಗೆ ಸಾವರ್ಜನಿಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಾದ ನಂತರ ಮತ್ತೆ ಉಪ್ಪಿ ತಮ್ಮ ಟ್ವೀಟ್ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.
ಉಪೇಂದ್ರ ಅವರ ಎರಡನೇ ಟ್ವೀಟ್
ಉಪ್ಪಿ ತಮ್ಮ ಟ್ವೀಟ್ನಲ್ಲಿ ʻʻಡಿಜಿಟಲ್ ವೋಟಿಂಗ್ ಅಲ್ವಾ ? ಮತ ಎಣಿಕೆಗೆ 2 ದಿನಾ ಬೇಕಾ ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ….ಅಬ್ಬಬ್ಬಾ ಏನು ಕಾಮೆಂಟ್ಸ್ಗಳು ?!ವಾರೆ ವಾಹ್! ವ್ಯಾಪಾರಿ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಮೆಂಟ್ ಮಾಡಿ ನೋಡೋಣ. ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂ ಬಾಲಕರು….!ʼʼಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Priyanka Upendra | ʻಪ್ರಜೆಯೇ ಪ್ರಭು’ ಎಂದು ಪ್ರಜಾಕೀಯಕ್ಕೆ ಸಾಥ್ ಕೊಟ್ರಾ ಪ್ರಿಯಾಂಕಾ ಉಪೇಂದ್ರ?
ಈ ಬಗ್ಗೆ ನೆಟ್ಟಿಗರು ಕೂಡ ಖಡಕ್ ಪ್ರತಿಕ್ರಿಯೆ ನೀಡಿದ್ದು ಒಬ್ಬರು ʻನಿಮ್ಮದೂ ರಾಜಕೀಯ ಪಕ್ಷನೇ, ಪ್ರಜಾಕೀಯ ಅಂತ ಹೆಸರು ಹೇಳಿದ್ದು ಕೂಡಲೇ ಅದು ಚೇಂಜ್ ಆಗಲ್ಲ.. ಡಿಜಿಟಲ್ ಕ್ಯಾಮೆರಾ, ಹೈ ಟೆಕ್ನಾಲಜಿ ಮಾಡಿ ಮಾಡುವ ಸಿನೆಮಾ ಆಗಿದ್ರೆ ಯಾಕೆ ಟೈಂ ತಗೊಂಡು ರಿಲೀಸ್ ಮಾಡ್ತೀರಾʼʼ ಎಂದು ಕಮೆಂಟ್ ಮಾಡಿದ್ದಾರೆ.
ಇನ್ನೊಬ್ಬರು ʻʻಮೊದಲು ಚುನಾವಣೆ ವ್ಯವಸ್ಥೆ ಅರ್ಥ ಮಾಡಿಕೊಳ್ಳಿ. ಎಲ್ಲಿಯಾದರೂ ಮತದಾನಕ್ಕೆ ತೊಂದರೆ ಆದರೆ ಎರಡು ದಿನ ಬಿಟ್ಟು ಮರು ಮತದಾನ ನಡೆಸಬೇಕು. ಇದುವೇ ಮುಖ್ಯ ಕಾರಣʼʼಎಂದು ಸಲಹೆ ನೀಡಿದ್ದಾರೆ.
South Cinema
Kareena Kapoor: ಉರ್ಫಿ ತುಂಬ ಧೈರ್ಯಶಾಲಿ ಎಂದು ಹಾಡಿ ಹೊಗಳಿದ ಕರೀನಾ ಕಪೂರ್
ಕರೀನಾ ಕಪೂರ್ (Kareena Kapoor) ಸಂದರ್ಶನವೊಂದರಲ್ಲಿ ಉರ್ಫಿಯನ್ನು ಹೊಗಳಿದ್ದಾರೆ. ನಟಿ ಮಾತನಾಡಿ ʻನಾನು ಉರ್ಫಿ ಜಾವೇದ್ ಅವರಷ್ಟು ಧೈರ್ಯಶಾಲಿಯಲ್ಲ ಎಂದಿದ್ದಾರೆ. ಸದಾ ಉಡುಪಿನ ಮೂಲಕವೇ ಕೆಂಗಣ್ಣಿಗೆ ಗುರಿಯಾಗುತ್ತಿರುವ ನಟಿಯ ಬಗ್ಗೆ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ನಟಿಯ ಫ್ಯಾಶನ್ ಸೆನ್ಸ್ ಕುರಿತು ಶ್ಲಾಘಿಸಿದ ಸಂದರ್ಭಗಳಿವೆ.
ಬೆಂಗಳೂರು: ಫ್ಯಾಷನ್ ಐಕಾನ್ ಅಂತಯೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (urfi javed) ಬಿಗ್ ಬಾಸ್ ಒಟಿಟಿ ಮೂಲಕ ಖ್ಯಾತಿಯನ್ನು ಗಳಿಸಿದರು. ಸದಾ ಉಡುಪಿನ ಮೂಲಕವೇ ಕೆಂಗಣ್ಣಿಗೆ ಗುರಿಯಾಗುತ್ತಿರುವ ನಟಿಯ ಬಗ್ಗೆ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ನಟಿಯ ಫ್ಯಾಶನ್ ಸೆನ್ಸ್ ಕುರಿತು ಶ್ಲಾಘಿಸಿದ ಸಂದರ್ಭಗಳಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಬಾಲಿವುಡ್ ತಾರೆ ಕರೀನಾ ಕಪೂರ್ (Kareena Kapoor) ಅವರು ಉರ್ಫಿ ಜಾವೇದ್ ಅವರನ್ನು ಹೊಗಳಿದ್ದಾರೆ. ʻʻಉರ್ಫಿ ತುಂಬ ‘ಧೈರ್ಯಶಾಲಿ’ ಎಂದು ಹೇಳಿದ್ದಾರೆ.
ಕರೀನಾ ಕಪೂರ್ ಸಂದರ್ಶನವೊಂದರಲ್ಲಿ ಉರ್ಫಿಯನ್ನು ಹೊಗಳಿದ್ದಾರೆ. ನಟಿ ಮಾತನಾಡಿ ʻನಾನು ಉರ್ಫಿ ಜಾವೇದ್ ಅವರಷ್ಟು ಧೈರ್ಯಶಾಲಿಯಲ್ಲ. ಫ್ಯಾಷನ್ ಎನ್ನುವುದು ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ. ಅವರ ಒಂದು ಈ ಆತ್ಮವಿಶ್ವಾಸ ಇಂದು ಇಲ್ಲಿಗೆ ತಂದಿದೆ. ಉರ್ಫಿ ಅದ್ಭುತವಾಗಿ ಕಾಣುತ್ತಾರೆ ಎಂದು ನಾನು ಭಾವಿಸುತ್ತೇನೆʼʼಎಂದರು.
ಮಾತು ಮುಂದುವರಿಸಿ ʻʻತನಗೆ ಬೇಕಾದಂತಹ ಫ್ಯಾಷನ್ ಅನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ. ಅದು ಫ್ಯಾಷನ್ ಅಂದರೆ. ನಿಮ್ಮ ಸ್ಕಿನ್ಗೆ ಯಾವುದು ಆರಾಮದಾಯಕವಾಗಿರುತ್ತದೆಯೋ ಅದನ್ನು ನೀವು ಮುಂದುವರಿಸಿ. ಉರ್ಫಿ ಅವರ ನಾನು ಆತ್ಮವಿಶ್ವಾಸವನ್ನು ಪ್ರೀತಿಸುತ್ತೇನೆ. ನಾನು ಆತ್ಮವಿಶ್ವಾಸದ ಹುಡುಗಿ. ಉರ್ಫಿ ಅವರು ನಡೆದುಕೊಳ್ಳುವ ರೀತಿಯನ್ನು ಪ್ರೀತಿಸುತ್ತೇನೆ. ಹ್ಯಾಟ್ಸ್ ಆಫ್ ಉರ್ಫಿ.”ಎಂದಿದ್ದಾರೆ.
ಇದನ್ನೂ ಓದಿ: Urfi Javed: ಇದು ಡಬಲ್ ಧಮಾಕಾ! ಒಟ್ಟಿಗೆ ಕಾಣಿಸಿಕೊಂಡ ಉರ್ಫಿ ಜಾವೇದ್ ಮತ್ತು ಸನ್ನಿ ಲಿಯೋನ್!
ಕೆಲಸದ ಮುಂಭಾಗದಲ್ಲಿ, ಕರೀನಾ ಕೊನೆಯದಾಗಿ ಅಮೀರ್ ಖಾನ್ ಅವರೊಂದಿಗೆ ಲಾಲ್ ಸಿಂಗ್ ಚಡ್ಡಾದಲ್ಲಿ ಕಾಣಿಸಿಕೊಂಡರು. ಮುಂದೆ ದಿ ಡಿವೋಷನ್ ಆಫ್ ಸಸ್ಪೆಕ್ಟ್ ಎಕ್ಸ್, ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಮತ್ತು ದಿ ಕ್ರ್ಯೂನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
-
ಕರ್ನಾಟಕ13 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ14 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ17 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ12 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ8 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್9 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ11 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ15 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?