Actor Rajinikanth first look as Moideen Bhai in ‘Laal Salaam’ Actor Rajinikanth: ʻಲಾಲ್ ಸಲಾಮ್ʼ ಚಿತ್ರದ ಮೂಲಕ ಹೊಸ ಲುಕ್‌ನಲ್ಲಿ ಬಂದ ರಜನಿಕಾಂತ್‌; ಪುತ್ರಿ ಆ್ಯಕ್ಷನ್ ಕಟ್‌! - Vistara News

South Cinema

Actor Rajinikanth: ʻಲಾಲ್ ಸಲಾಮ್ʼ ಚಿತ್ರದ ಮೂಲಕ ಹೊಸ ಲುಕ್‌ನಲ್ಲಿ ಬಂದ ರಜನಿಕಾಂತ್‌; ಪುತ್ರಿ ಆ್ಯಕ್ಷನ್ ಕಟ್‌!

ಲಾಲ್ ಸಲಾಮ್‌ ಸಿನಿಮಾ ಮೂಲಕ ಐಶ್ವರ್ಯಾ ರಜನಿಕಾಂತ್‌ (Actor Rajinikanth) ಏಳು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಐಶ್ವರ್ಯಾ ಅವರ ಕೊನೆಯ ನಿರ್ದೇಶನದ ಪ್ರಾಜೆಕ್ಟ್ ತಮಿಳು ಆ್ಯಕ್ಷನ್-ಥ್ರಿಲ್ಲರ್ ʻವೈ ರಾಜಾ ವೈʼ. ಇದರಲ್ಲಿ ಧನುಷ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

Actor Rajinikanth first look as Moideen Bhai in ‘Laal Salaam’
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ರಜನಿಕಾಂತ್ (Actor Rajinikanth) `ಜೈಲರ್‌’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ಇದೀಗ ವಾರಾಂತ್ಯದಲ್ಲಿ ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ನಿರ್ದೇಶನದ ʻಲಾಲ್ ಸಲಾಮ್ʼ (Lal Salaam) ಚಿತ್ರದ ಸೆಟ್‌ಗೆ ಮರಳಿದ್ದಾರೆ. ಮೇ 7ರಂದು ರಜನಿಕಾಂತ್ ಪಾತ್ರದ ʻಮೊಯಿದ್ದೀನ್ ಭಾಯಿʼ ಹೆಸರಿನ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಂಡಿದೆ. ಈ ಪೋಸ್ಟರ್‌ ರಜನಿಕಾಂತ್‌ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಯನ್ನು ಗಳಿಸಿದೆ.

ರಜನಿಕಾಂತ್‌ ಈ ಸಿನಿಮಾದಲ್ಲಿ ಮುಖ್ಯ ಅತಿಥಿ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ ಮೊಯಿದ್ದೀನ್ ಭಾಯಿ ಪಾತ್ರ ಮಾಡುತ್ತಿದ್ದಾರೆ. ರಜನಿಕಾಂತ್ ಅವರು ತಲೆಗೆ ಟೋಪಿ ಧರಿಸಿದ್ದಾರೆ. ಹಿಂಭಾಗದಲ್ಲಿ ತಳ್ಳುವ ಗಾಡಿಗಳಿಗೆ ಬೆಂಕಿ ಇಡಲಾಗಿದೆ. ಅಷ್ಟೇ ಅಲ್ಲ ಪತ್ರಿಕೆ ಒಂದನ್ನು ತೋರಿಸಲಾಗಿದ್ದು, ‘ಮುಂಬೈ ನಿಯಂತ್ರಣದಲ್ಲಿದೆ’ ಎಂದು ಬರೆಯಲಾಗಿದೆ. ಜತೆಗೆ ‘ಮೊಯಿದ್ದೀನ್ ಭಾಯಿ​ ಬಂದಾಗಿದೆ’ ಎನ್ನುವ ಕ್ಯಾಪ್ಷನ್‌ ಇದೆ.

ಲಾಲ್ ಸಲಾಮ್‌ ಸಿನಿಮಾ ಮೂಲಕ ಐಶ್ವರ್ಯಾ ರಜನಿಕಾಂತ್‌ ಏಳು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಐಶ್ವರ್ಯಾ ಅವರ ಕೊನೆಯ ನಿರ್ದೇಶನದ ಪ್ರಾಜೆಕ್ಟ್ ತಮಿಳು ಆ್ಯಕ್ಷನ್-ಥ್ರಿಲ್ಲರ್ ʻವೈ ರಾಜಾ ವೈʼ. ಇದರಲ್ಲಿ ಧನುಷ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Jailer Movie: ಶೂಟಿಂಗ್‌ ಸೆಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಜನಿಕಾಂತ್‌-ಮೋಹನ್‌ಲಾಲ್‌

ರಜನಿಕಾಂತ್‌ ಮಾಸ್‌ ಲುಕ್‌

ಲಾಲ್ ಸಲಾಮ್ʼ ಕ್ರಿಕೆಟ್ ಮತ್ತು ಕಮ್ಯುನಿಸಂ ಕಥಾ ಹಿನ್ನೆಲೆಯಲ್ಲಿ ಸೆಟ್ಟೇರಲಿದೆ ಎಂಬ ಮಾತು ಕೇಳಿಬರುತ್ತಿದೆ. ಇದರಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್ ಅವರ ಭಾಗದ ಸಂಪೂರ್ಣ ಚಿತ್ರೀಕರಣ ಮುಂಬೈನಲ್ಲಿ ನಡೆಯಲಿದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತವಿದೆ. ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿಷ್ಣು ರಂಗಸ್ವಾಮಿ ಅವರ ಛಾಯಾಗ್ರಹಣ ಇದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

Lok Sabha Election 2024:  ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು . ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ.

VISTARANEWS.COM


on

Lok Sabha Election 2024 Ganesh vote by que prakash raj Cast His Vote
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು.

ಗೋಲ್ಡನ್ ಸ್ಟಾರ್ ಗಣೇಶ್‌ ಮಾತನಾಡಿ ʻʻನನ್ನ ಹಕ್ಕು ಇದು. ಎಷ್ಟೇ ಹೊತ್ತಾದರೂ ನನ್ನ ಹಕ್ಕನ್ನು ಚಲಾಯಿಸಬೇಕು. ಯಾರೆಲ್ಲ ಮನೆಯಲ್ಲಿ ಇದ್ದೀರಾ ಬಂದು ವೋಟ್‌ ಮಾಡಿ. ಯಾರು ನಿಮಗೆ ಇಷ್ಟ, ಯಾರು ಸಮಾಜಕ್ಕೆ ಒಳ್ಳೆಯದನ್ನು ಮಾಡುತ್ತಾರೆ, ಅವರಿಗೆ ವೋಟ್‌ ಹಾಕಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ. ಹಿರಿಯ ನಾಗರಿಕರೇ ಕ್ಯೂ ನಿಂತು ವೋಟ್‌ ಹಾಕ್ತಾ ಇದ್ದರು. ಯುವಕರು ಮೊದಲು ಬಂದು ವೋಟ್‌ ಮಾಡಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

ಈ ವೇಳೆ ಪ್ರಕಾಶ್‌ ರಾಜ್‌ ಮಾತನಾಡಿ ʻʻವೋಟ್‌ ಮಾಡುವುದು ಬಹಳ ಮುಖ್ಯ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೋಟ್‌ ಮಾಡಿ ಬದಲಾವಣೆ ತನ್ನಿ ಎಂದು ಮನವಿ ಮಾಡಿದರು.

ಈಗಾಗಲೇ ವೋಟ್‌ ಮಾಡಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಬಂದಿದ್ದಾರೆ.

ಪತ್ನಿ ಸಮೇತ ಹಕ್ಕು ಚಲಾಯಿಸಲು ರವಿಶಂಕರ್ ಕೂಡ ಆಗಮಿಸಿದ್ದರು. ಹೊಸಕೆರೆ ಹಳ್ಳಿ ಮತದಾನ‌ ಕೇಂದ್ರಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ. ಪ್ಲಾನ್ ಪ್ರಕಾರ ಇಂದು ಬೆಳಗ್ಗೆ 8:30ಕ್ಕೆ ಯಶ್‌ ಮತಚಲಾಯಿಸಬೇಕಿತ್ತು. ಕಾರಣಾಂತರಗಳಿಂದ 11 ಗಂಟೆ ನಂತರ ವೋಟ್ ಮಾಡಲು ಹೊಸಕೆರೆಹಳ್ಳಿಗೆ ಆಗಮಿಸಲಿದ್ದಾರೆ. ಈಗಾಗಲೇ ಹೊಸಕೆರೆ ಹಳ್ಳಿ ಮತಗಟ್ಟೆಯಲ್ಲಿ ಖಾಕಿ ಕಣ್ಗಾವಲು ಇಟ್ಟಿದೆ. ಯಾವುದೇ ರೀತಿಯ ಗೊಂದಲ, ಜನಜಂಗುಳಿ ಆಗದಂತೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿ ನಟ ರವಿಶಂಕರ್ ದಂಪತಿ ವೋಟ್‌ ,ಮಾಡಿದರು. ರವಿಶಂಕರ್ ಮಾತನಾಡಿ ʻಇದು ಖುಷಿಗಿಂತ ಹೆಚ್ಚಾಗಿ ಇದು ನಮ್ಮ ಕರ್ತವ್ಯ. 140 ಕೋಟಿ ಜನರನ್ನ ಕಾಯೋ ನಾಯಕನ ಆಯ್ಕೆ ಮಾಡೋ ದಿನ. ಯಾರಿಗೆ ವೋಟ್ ಮಾಡಬೇಕು, ಯಾಕೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡಿಕೊಂಡು ಬನ್ನಿ. ಮತ ಗಟ್ಟಗೆ ಬಂದು ಕನ್ ಪ್ಯೂಸ್ ಆಗಬೇಡಿʼʼಎಂದರು.

Continue Reading

ಸ್ಯಾಂಡಲ್ ವುಡ್

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Kiran Raj : ‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

VISTARANEWS.COM


on

Kiran Raj Met Jon Abraham
Koo

ಬೆಂಗಳೂರು: ‘777 ಚಾರ್ಲಿ’ ಸಿನಿಮಾ ಮೂಲಕ ಖ್ಯಾತಿ ಗಳಿಸಿದವರು ನಿರ್ದೇಶಕ ಕಿರಣ್ ರಾಜ್. ಇದೀಗ ಕಿರಣ್‌ ರಾಜ್‌ ಅವರ ಮುಂಬರುವ ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಕಾದಿದ್ದಾರೆ. ಏಕಾಏಕಿ ಕಿರಣ್‌ ರಾಜ್‌ ಅವರು ಖ್ಯಾತ ನಟ ಜಾನ್ ಅಬ್ರಾಹಂ (Jon Abraham) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಿರಣ್‌ ರಾಜ್‌ “ಎಂತಹ ಅದ್ಭುತ ದಿನ” ಎಂದು ಬರೆದುಕೊಂಡಿದ್ದಾರೆ. ಫೋಟೊ ನೋಡಿ ಸಿನಿರಸಿಕರು ಥ್ರಿಲ್‌ ಆಗಿದ್ದಾರೆ.

‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

ಕಿರಣ್‌ ರಾಜ್‌ ಸದ್ಯ ಜಾನ್‌ ಅಬ್ರಾಹಂ ಜತೆ ಫೋಟೊ ಶೇರ್‌ ಮಾಡಿ ʻʻ”ಎಂತಹ ಅದ್ಭುತ ದಿನ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777ಚಾರ್ಲಿ ಬಿಡುಗಡೆಯ ಸಮಯದಲ್ಲಿ ನಾವು ಮೊದಲು ಫೋನ್‌ ಮೂಲಕ ಮಾತನಾಡಿದ್ದೇವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ, ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು! ಜಾನ್ ಅಬ್ರಾಹಂ ತೋರಿದ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ. ಈ ದಿನಕ್ಕೆ ಕೃತಜ್ಞʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiran Raj: ನಟ ಕಿರಣ್ ರಾಜ್‌ ಮತ್ತೊಂದು ಸಾಹಸ; ಅತಿ ಎತ್ತರದಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿ Ronny ದಾಖಲೆ!

777 ಚಾರ್ಲಿ ಬಳಿಕ ಕಿರಣ್‌ ರಾಜ್‌ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್‌ ಮಾಡಿರಲಿಲ್ಲ. ಈಗ ದಿಢೀರನೇ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿದ ಖುಷಿಯ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಬ್ರಹಾಂ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು.

Continue Reading

ರಾಜಕೀಯ

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

Lok Sabha Election 2024: ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ.

VISTARANEWS.COM


on

Lok Sabha Election 2024 sandalwood celebs where do cast their votes
Koo

ಬೆಂಗಳೂರು: ಕರ್ನಾಟಕ ಸೇರಿದಂತೆ (Lok Sabha Election 2024) ದೇಶದ ಒಟ್ಟು 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಹಬ್ಬ (Voting) ರಂಗೇರಿದೆ. ಎರಡನೇ ಹಂತದಲ್ಲಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ (Lok sabha election 2024) ಇಂದು ಮತದಾನಕ್ಕೆ ಮತದಾರ ಸಜ್ಜಾಗಿದ್ದು, ಕೇರಳ (Kerala) ದ ಎಲ್ಲಾ 20 ಕ್ಷೇತ್ರಗಳು, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 8 ಕ್ಷೇತ್ರಗಳು, ಅಸ್ಸಾಂ ಮತ್ತು ಬಿಹಾರಗಳ 5 ಕ್ಷೇತ್ರಗಳು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 2, ಜಮ್ಮು-ಕಾಶ್ಮೀರ, ಮಣಿಪುರ, ತ್ರಿಪುರಗಳಲ್ಲಿ ತಲಾ 1 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ಕಲಾ ದಂಪತಿಗಳದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಬೆಂಗಳೂರು ಉತ್ತರ, ಯಶವಂತಪುರ ಕ್ಷೇತ್ರದಲ್ಲಿ ವೋಟ್‌ ಹಾಕಿದರು. ಚಂದನ್ ಶೆಟ್ಟಿ ನಾಗರಾಬಾವಿಯಲ್ಲಿ ಮತದಾನ ಮಾಡಿದ್ದಾರೆ.

ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ. ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ವೋಟ್ ಮಾಡಲಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಮತ ಚಲಾಯಿಸಲು ಕತ್ರಿಗುಪ್ಪೆ BTL ವಿದ್ಯಾವಾಹಿನಿ ಶಾಲೆಯ ಮತಗಟ್ಟೆಗೆ ತೆರಳಲಿದ್ದಾರೆ.

ಇದನ್ನೂ ಓದಿ: Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

ಗಣೇಶ್, ದಿಗಂತ್, ಪ್ರೇಮ್ ದಂಪತಿ ಆರ್‌ ಆರ್ ನಗರ, ಕುಂದಾಪುರದ ಕೆರಾಡಿ ಶಾಲೆಯಲ್ಲಿ ರಿಷಬ್ ಶೆಟ್ಟಿ, ಉಡುಪಿಯಲ್ಲಿ ರಕ್ಷಿತ್ ಶೆಟ್ಟಿ, ಅರಸೀಕೆರೆಯಲ್ಲಿ ಧನಂಜಯ್ ಮತ ಚಲಾಯಿಸಲಿದ್ದಾರೆ.
ಮಾಳವಿಕಾ ಅವಿನಾಶ್,ವಸಿಷ್ಠ ಸಿಂಹ, ಹರಿಪ್ರಿಯಾ, ಅಮೂಲ್ಯ, ಅವಿನಾಶ್‌ ಆರ್‌ ಆರ್‌​ನಗರದಲ್ಲಿ,
ಸೃಜನ್ ಲೋಕೇಶ್, ಪೂಜಾ ಗಾಂಧಿ, ದುನಿಯಾ ವಿಜಯ್ ಕತ್ರಿಗುಪ್ಪೆ.

ಅನಂತ್ ನಾಗ್: ಮಲ್ಲೇಶ್ವರಂ, ​ಧ್ರುವ ಸರ್ಜಾ: ತ್ಯಾಗರಾಜನಗರ (ಕೆಆರ್​.ರೋಡ್​, ಶಾಸ್ತ್ರಿ ನಗರ) ಶ್ರೀಮುರುಳಿ: ವಸಂತ ನಗರ ಪ್ರಶಾಂತ್​ನೀಲ್​: ವಸಂತ ನಗರ, ಮಾಲಾಶ್ರೀ: ಶಿವಾಜಿನಗರ ರಾಜ್ ಬಿ.ಶೆಟ್ಟಿ: ಉಡುಪಿ ನಿಖಿಲ್ ಕುಮಾರಸ್ವಾಮಿ: ಕೇತಮಾರನಹಳ್ಳಿ (ಬಿಡದಿ) ಆಶಿಕಾ ರಂಗನಾಥ್: ತುಮಕೂರು ಚಿಕ್ಕಣ್ಣ: ಮೈಸೂರು ವಿನೋದ್ ರಾಜ್: ಸೋಲದೇವನ ಹಳ್ಳಿ ದೊಡ್ಡಣ್ಣ: ಬಿದರುಕಲ್ಲು ಮತ ಚಲಾಯಿಸಲಿದ್ದಾರೆ.

Continue Reading

ಸ್ಯಾಂಡಲ್ ವುಡ್

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Shakhahaari Movie: ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ ಪಕ್ಕಾ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿದೆ. ವಿಮರ್ಶಕರ ಮೆಚ್ಚುಗೆ ಪಡೆದುಕೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾವ ಒಟಿಟಿಗೆ ಲಗ್ಗೆ ಇಡುತ್ತಿದೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Shakhahaari Movie In OTT amzon Prime
Koo

ಬೆಂಗಳೂರು: ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ (Shakhahaari Movie) ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿತ್ತು. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. ಪಕ್ಕಾ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿರುವ ಶಾಖಾಹಾರಿ ರೋಚಕ ತಿರುವು, ಭಾವನಾತ್ಮಕ ಸಂಬಂಧ, ಪ್ರೀತಿ, ಸ್ನೇಹ, ನಂಬಿಕೆ ಇವೆಲ್ಲವುದರ ಬಗ್ಗೆ ಬಹಳ ಸೂಕ್ಷ್ಮವಾಗಿ ಪ್ರೇಕ್ಷಕರಿಗೆ ಮುಟ್ಟಿಸಿ ಎಲ್ಲಾ ರೀತಿಯ ರಸಾನುಭವ ನೀಡಿತ್ತು. ವಿಮರ್ಶಕರ ಮೆಚ್ಚುಗೆ ಪಡೆದುಕೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾವ ಒಟಿಟಿಗೆ ಲಗ್ಗೆ ಇಡುತ್ತಿದೆ. ಮೂಲಗಳ ಪ್ರಕಾರ ʻಶಾಖಾಹಾರಿʼ ಸಿನಿಮಾ (Shakhahaari Movie OTT) ಡಿಜಿಟಲ್‌ ರೈಟ್ಸ್‌ ಅಮೆಜಾನ್‌ ಪ್ರೈಂ (Amazon Prime) ಪಾಲಾಗಿದೆ. ಮುಂದಿನ ವಾರ ಒಟಿಟಿಗೆ ಕಾಲಿಡಿದೆ ಎಂದು ವರದಿಯಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿನ ಒಂದು ಪುಟ್ಟ ಗ್ರಾಮದಲ್ಲಿ ನಡೆಯುವ ಬಲು ರೋಚಕವಾದ ಕಥೆ ‘ಶಾಖಾಹಾರಿ’ . ಈ ಸಿನಿಮಾದ ಕಥಾನಾಯಕ ಸುಬ್ಬಣ್ಣ ಭಟ್‌ ರಂಗಾಯಣ ರಘು ಒಂದು ವೆಜಿಟೇರಿಯನ್ ಹೋಟೆಲ್ ನಡೆಸುತ್ತಾನೆ. ಆದರೆ ಅಲ್ಲಿ ನಡೆಯುವ ಕೆಲವು ಘಟನೆಗಳಿಂದಾಗಿ ಶಾಕಾಹಾರಿ ಹೋಟೆಲ್‌ನ ಇಮೇಜ್ ‘ಶಾಖಾಹಾರಿ’ಯಾಗಿ ಬದಲಾಗುತ್ತದೆ. ಇಂಥ ಒಗಟಿನಂತಹ ಟೈಟಲ್‌ ಹಿಂದಿರುವ ಕಥೆ ಏನು ಎಂಬುದು ಸಿನಿಮಾದ ತಿರುಳು.

ಇದನ್ನೂ ಓದಿ: Shakhahaari Movie: ಬೆಂಗಳೂರಿನಲ್ಲೇ ಕನ್ನಡದ “ಶಾಖಾಹಾರಿʼಯನ್ನು ಕೊಂದ ಮಲಯಾಳಂ ಸಿನಿಮಾ! ಕನ್ನಡಿಗರಿಗೇ ಸವಾಲ್‌!

ಶಾಖಾಹಾರಿ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳಿದ್ದಾರೆ. ವಿಶ್ವಜಿತ್ ರಾವ್ ಕ್ಯಾಮೆರಾ. ಶಶಾಂಕ್ ನಾರಾಯಣ್ ಸಂಕಲನ, ಮಯೂರ್ ಅಂಬೇಕಲ್ಲು ಸಂಗೀತ ಚಿತ್ರಕ್ಕೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ.ನ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading
Advertisement
Lok Sabha Election 2024 Ganesh vote by que prakash raj Cast His Vote
Lok Sabha Election 20242 mins ago

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

IPL 2024
ಐಪಿಎಲ್ 20248 mins ago

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

ರಾಜಕೀಯ8 mins ago

Lok sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರೋ ಅತ್ಯಂತ ಸಿರಿವಂತ, ಬಡ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?

Kiran Raj Met Jon Abraham
ಸ್ಯಾಂಡಲ್ ವುಡ್31 mins ago

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Tech Mahindra
ದೇಶ31 mins ago

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Pune Police 60 Hours Operation; Drugs worth more than Rs 1300 crore seized
ಕ್ರೈಂ1 hour ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ1 hour ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ1 hour ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ2 hours ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ2 hours ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ17 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ18 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ21 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202422 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌