Actor Rajanikanth: ʻಲಾಲ್ ಸಲಾಮ್ʼ ಚಿತ್ರದಲ್ಲಿ ಕಪಿಲ್ ದೇವ್? ರಜನಿಕಾಂತ್ ಟ್ವೀಟ್‌ನಲ್ಲಿ ಹೇಳಿದ್ದೇನು? - Vistara News

South Cinema

Actor Rajanikanth: ʻಲಾಲ್ ಸಲಾಮ್ʼ ಚಿತ್ರದಲ್ಲಿ ಕಪಿಲ್ ದೇವ್? ರಜನಿಕಾಂತ್ ಟ್ವೀಟ್‌ನಲ್ಲಿ ಹೇಳಿದ್ದೇನು?

Actor Rajanikanth: ಇದೀಗ ರಜನಿಕಾಂತ್‌ ಟೀಮ್‌ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರೊಂದಿಗೆ ಇರುವ ಚಿತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Actor Rajinikanth REVEALS Kapil Dev Will PlayLal Salaam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ `ಜೈಲರ್‌’ ಸಿನಿಮಾದಲ್ಲಿ ನಟ ರಜನಿಕಾಂತ್ (Actor Rajanikanth) ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಕೊನೆಯ ಹಂತದ ಶೂಟಿಂಗ್‌ ಮಾತ್ರ ಬಾಕಿ ಇದೆ ಎಂದು ವರದಿಯಾಗಿದೆ. ಜೈಲರ್ ಪೋಸ್ಟರ್‌ಗಳು, ಲೊಕೇಶನ್ ಸ್ಟಿಲ್‌ಗಳು ಪ್ರೇಕ್ಷಕರ ಗಮನ ಸೆಳೆದಿದೆ. ಮಗಳು ಐಶ್ವರ್ಯಾ ರಜನಿಕಾಂತ್ ಅವರ ʻಲಾಲ್ ಸಲಾಮ್ʼ ಚಿತ್ರದಲ್ಲಿಯೂ ರಜನಿಕಾಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. `ಲಾಲ್ ಸಲಾಮ್ʼ ಕ್ರಿಕೆಟ್ ಮತ್ತು ಕಮ್ಯುನಿಸಂ ಕಥಾ ಹಿನ್ನೆಲೆಯಲ್ಲಿ ಸೆಟ್ಟೇರಲಿದೆ ಎಂಬ ಗಾಸಿಪ್‌ಗಳು ಹರಿದಾಡಿತ್ತು. ಇದೀಗ ರಜನಿಕಾಂತ್‌ ಟೀಮ್‌ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರೊಂದಿಗೆ ಇರುವ ಚಿತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಪಿಲ್ ದೇವ್ ಈ ಸಿನಿಮಾದ ಭಾಗವಾಗಿದ್ದಾರೆ ಎನ್ನಲಾಗಿದೆ

1983ರ ವಿಶ್ವಕಪ್‌ನಲ್ಲಿ ದೇಶವನ್ನು ಗೆಲುವಿನತ್ತ ಮುನ್ನಡೆಸಿದ್ದ ಮಾಜಿ ನಾಯಕ ಕಪಿಲ್ ದೇವ್ ಅವರೊಂದಿಗೆ ರಜನಿಕಾಂತ್‌ ಫೋಟೊ ಹಂಚಿಕೊಂಡರು. ರಜನಿಕಾಂತ್ ಮತ್ತು ಕಪಿಲ್ ದೇವ್ ಸೆಟ್‌ಗಳಲ್ಲಿ ಪರಸ್ಪರ ಮಾತುಕತೆ ನಡೆಸುವುದನ್ನು ಕಾಣಬಹುದು. ರಜನಿಕಾಂತ್‌ ಟ್ವೀಟ್‌ನಲ್ಲಿ ʻʻಭಾರತವನ್ನು ಮೊದಲ ಬಾರಿಗೆ ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಮೂಲಕ ಹೆಮ್ಮೆಪಡುವಂತೆ ಮಾಡಿದ ಲೆಜೆಂಡರಿ, ಅತ್ಯಂತ ಗೌರವಾನ್ವಿತ ಕಪಿಲ್‌ದೇವ್‌ಜಿ ಅವರೊಂದಿಗೆ ಕೆಲಸ ಮಾಡುವುದು ನನಗೆ ಹೆಮ್ಮೆ #ಲಾಲಸಲಾಮ್ʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Rajinikanth: ʻಲಾಲ್ ಸಲಾಮ್ʼ ಚಿತ್ರದ ಮೂಲಕ ಹೊಸ ಲುಕ್‌ನಲ್ಲಿ ಬಂದ ರಜನಿಕಾಂತ್‌; ಪುತ್ರಿ ಆ್ಯಕ್ಷನ್ ಕಟ್‌!

ರಜನಿಕಾಂತ್‌ ಟ್ವೀಟ್‌

ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ `ಲಾಲ್ ಸಲಾಮ್ʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಅಲ್ಲದೆ, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಲು ಚಿತ್ರತಂಡ ರಜನಿಕಾಂತ್ ಅವರ ಫಸ್ಟ್ ಲುಕ್ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ʻಮೊಯಿದ್ದೀನ್ ಭಾಯಿʼ ಹೆಸರಿನ ʻಲಾಲ್ ಸಲಾಮ್ʼ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣ

ಮೇ 7ರಂದು ರಜನಿಕಾಂತ್ ಪಾತ್ರದ ʻಮೊಯಿದ್ದೀನ್ ಭಾಯಿʼ ಹೆಸರಿನ ʻಲಾಲ್ ಸಲಾಮ್ʼ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಂಡಿತ್ತು. ರಜನಿಕಾಂತ್ ಅವರು ‘ಲಾಲ್ ಸಲಾಮ್’ ಸಿನಿಮಾದಲ್ಲಿ ಮೊಯಿದ್ದೀನ್ ಭಾಯಿ ಪಾತ್ರ ಮಾಡುತ್ತಿದ್ದಾರೆ. ರಜನಿಕಾಂತ್ ಅವರು ತಲೆಗೆ ಟೋಪಿ ಧರಿಸಿದ್ದಾರೆ. ಹಿಂಭಾಗದಲ್ಲಿ ತಳ್ಳುವ ಗಾಡಿಗಳಿಗೆ ಬೆಂಕಿ ಇಡಲಾಗಿದೆ. ಅಷ್ಟೇ ಅಲ್ಲ ಪತ್ರಿಕೆ ಒಂದನ್ನು ತೋರಿಸಲಾಗಿದ್ದು, ‘ಮುಂಬೈ ನಿಯಂತ್ರಣದಲ್ಲಿದೆ’ ಎಂದು ಬರೆಯಲಾಗಿತ್ತು. ಜತೆಗೆ ‘ಮೊಯಿದ್ದೀನ್ ಭಾಯಿ​ ಬಂದಾಗಿದೆ’ ಎನ್ನುವ ಕ್ಯಾಪ್ಷನ್‌ ಇದೆ. ಲಾಲ್ ಸಲಾಮ್ʼ ಕ್ರಿಕೆಟ್ ಮತ್ತು ಕಮ್ಯುನಿಸಂ ಕಥಾ ಹಿನ್ನೆಲೆಯಲ್ಲಿ ಸೆಟ್ಟೇರಲಿದೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ: Hombale Films: ಲೋಕೇಶ್ ಕನಕರಾಜ್‌-ರಜನಿಕಾಂತ್‌ ಜತೆ ಸಿನಿಮಾ ಮಾಡಲು ಸಜ್ಜಾಗಿದ್ಯಾ ಹೊಂಬಾಳೆ?

ಇದರಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್ ಅವರ ಭಾಗದ ಸಂಪೂರ್ಣ ಚಿತ್ರೀಕರಣ ಮುಂಬೈನಲ್ಲಿ ನಡೆಯಲಿದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತವಿದೆ. ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿಷ್ಣು ರಂಗಸ್ವಾಮಿ ಅವರ ಛಾಯಾಗ್ರಹಣ ಇದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Naveen Polishetty: ಹಿಂದಿಯ ʼಚಿಚೋರೆʼ ಮತ್ತು ತೆಲುಗಿನ ʼಮಿಸ್‌ ಶೆಟ್ಟಿ ಮಿಸ್ಟರ್‌ ಪೊಲಿಶೆಟ್ಟಿʼ ಸಿನಿಮಾಗಳಲ್ಲಿ ಗಹನ ಸೆಳೆದಿದ್ದ ಯುವ ನಟ ನವೀನ್‌ ಪೊಲಿಶೆಟ್ಟಿ ಅವರಿಗೆ ಅಪಘಾತವಾಗಿದೆ. ಅಮೆರಿಕದಲ್ಲಿ ನಡೆದ ಅವಘಡ ಸಂಭವಿಸಿದ್ದು, ಕಥಗೆ ಗಾಯವಾಗಿದೆ.

VISTARANEWS.COM


on

Naveen Polishetty
Koo

ವಾಷಿಂಗ್ಟನ್‌: ʼಚಿಚೋರೆʼ (Chhichhore), ʼಮಿಸ್‌ ಶೆಟ್ಟಿ ಮಿಸ್ಟರ್‌ ಪೊಲಿಶೆಟ್ಟಿʼ (Miss Shetty Mr Polishetty) ಮುಂತಾದ ಚಿತ್ರಗಳಲ್ಲಿ ನಟಿಸಿದ ತೆಲುಗಿನ ಜನಪ್ರಿಯ ನಾಯಕ ನವೀನ್ ಪೊಲಿಶೆಟ್ಟಿ (Naveen Polishetty) ಇತ್ತೀಚೆಗೆ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರ ಕೈ ಮುರಿದಿದೆ ಮತ್ತು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಾಗಿತ್ತು?

ʼʼನವೀನ್‌ ಅಮೆರಿಕದಲ್ಲಿ ಚಿತ್ರವೊಂದರ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ ಡಲ್ಲಾಸ್‌ನಲ್ಲಿ ಬೈಕ್‌ ರೈಡ್‌ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡಿದ್ದರು. ಬೈಕ್‌ ಸ್ಕಿಡ್ ಆದ ಪರಿಣಾಮ ಅವರ ತೋಳಿಗೆ ಗಾಯವಾಗಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಅವರ ಕೈ ಮುರಿದಿದ್ದು, ಅಮೆರಿಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಅವರ ಚಿತ್ರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ. ನವೀನ್ ಈ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಅಮೆರಿಕ ನಿವಾಸಿ

ನವೀನ್‌ ತಮ್ಮ ಪಾಲಕರೊಂದಿಗೆ ಅಮೆರಿಕದಲ್ಲಿ ನೆಲೆಸಿದ್ದಾರೆ. ಸಿನಿಮಾಗಳಲ್ಲಿನ ಕೆಲಸಕ್ಕಾಗಿ ಅವರು ಆಗಾಗ ಭಾರತಕ್ಕೆ ಬರುತ್ತಿರುತ್ತಾರೆ. ಸದ್ಯ ವೈದ್ಯರು ಅವರಿಗೆ ಎಂಟು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಜೂನ್‌ ವೇಳೆಗೆ ಅವರು ಭಾರತಕ್ಕೆ ಬರುವ ನಿರೀಕ್ಷೆ ಇದೆ.

2012ರಲ್ಲಿ ತೆರೆಕಂಡ ʼಲೈಫ್‌ ಈಸ್‌ ಬ್ಯೂಟಿಫುಲ್‌ʼ ಎನ್ನುವ ತೆಲುಗು ಚಿತ್ರ ಮೂಲಕ ನವೀನ್‌ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆದರೆ ಅವರು ನಾಯಕನಾಗಿ ಕಾಣಿಸಿಕೊಂಡ ಮೊದಲ ಚಿತ್ರ ತೆಲುಗಿನ ʼಏಜೆಂಟ್‌ ಸಾಯಿ ಶ್ರೀನಿವಾಸ ಅತ್ರೇಯʼ. 2019ರಲ್ಲಿ ತೆರೆಕಂಡ ಈ ಸಿನಿಮಾದ ಚಿತ್ರಕಥೆಯನ್ನೂ ನವೀನ್‌ ರಚಿಸಿದ್ದರು. ಈ ಚಿತ್ರ ಸಾಕಷ್ಟು ಸದ್ದು ಮಾಡಿತ್ತು. ಆ ಮೂಲಕ ಟಾಲಿವುಡ್‌ಗೆ ಹೊಸ ನಾಯಕನ ಪರಿಚಯವಾಗಿತ್ತು.

ಸುಶಾಂತ್‌ ಸಿಂಗ್‌ ಜತೆ ಅಭಿನಯ

ಇನ್ನು ಅದೇ ವರ್ಷ ತೆರೆಕಂಡ ಬಾಲಿವುಡ್‌ನ ʼಚಿಚೋರೆʼ ಚಿತ್ರದಲ್ಲಿಯೂ ನವೀನ್‌ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ಸುಶಾಂತ್‌ ಸಿಂಗ್‌ ರಾಜಪೂತ್‌-ಶ್ರದ್ಧಾ ಕಪೂರ್‌ ನಾಯಕ-ನಾಯಕಿರಾಗಿದ್ದ ಈ ಚಿತ್ರವನ್ನು ನಿತೇಶ್‌ ತಿವಾರಿ ನಿರ್ದೇಶಿಸಿದ್ದರು. ಮಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿಯೂ ಮ್ಯಾಜಿಕ್‌ ಮಾಡಿತ್ತು. ಹಿಮಾಂಶು ಆ್ಯಸಿಡ್‌ ದೇಶ್‌ಮುಖ್‌ ಪಾತ್ರದಲ್ಲಿ ನವೀನ್‌ ಮೋಡಿ ಮಾಡಿದ್ದರು.

2021ರಲ್ಲಿ ನವೀನ್‌ ಅಭಿನಯದ ʼಜಾತಿ ರತ್ನುಲುʼ ತೆಲುಗು ಸಿನಿಮಾ ತೆರೆಕಂಡು ಭರ್ಜರಿ ಹಿಟ್‌ ಆಗಿತ್ತು. ಅನುದೀಪ್‌ ಕೆ.ವಿ. ಆ್ಯಕ್ಷನ್‌ ಕಟ್‌ ಹೇಳಿದ್ದ ಈ ಚಿತ್ರ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿ ಬರೋಬ್ಬರಿ 70 ರೂ. ಬಾಚಿಕೊಂಡಿತ್ತು. ಈ ಚಿತ್ರದಲ್ಲಿನ ನವೀನ್‌ ಪಾತ್ರವೂ ಸಾಕಷ್ಟು ಗಮನ ಸೆಳೆದಿತ್ತು.

ಅನುಷ್ಕಾ ಶೆಟ್ಟಿ ಚಿತ್ರದಲ್ಲಿ ನವೀನ್‌

ಇನ್ನು ಕಳೆದ ವರ್ಷ ತೆರೆಕಂಡ ಕನ್ನಡತಿ ಅನುಷ್ಕಾ ಶೆಟ್ಟಿ ಅಭಿನಯದ ʼಮಿಸ್‌ ಶೆಟ್ಟಿ ಮಿಸ್ಟರ್‌ ಪೊಲಿಶೆಟ್ಟಿʼ ಚಿತ್ರದಲ್ಲಿ ನವೀನ್‌ ನಾಯಕನಾಗಿ ನಟಿಸಿದ್ದರು. ಮಹೇಶ್‌ ಬಾಬು ಪಚಿಗೋಳ ನಿರ್ದೇಶನದ ಈ ಸಿನಿಮಾ ಕೂಡ ಸಾಕಷ್ಟು ಸದ್ದು ಮಾಡಿತ್ತು. ಅನುಷ್ಕಾ ಶೆಟ್ಟಿ ಮತ್ತು ನವೀನ್‌ ಅಭಿನಯಕ್ಕೆ ಪ್ರೇಕ್ಷಕರು ಜೈ ಅಂದಿದ್ದರು. ಅಳೆದು ತೂಗಿ ಸಿನಿಮಾವನ್ನು ಆಯ್ಕೆ ಮಾಡುವ ನವೀನ್‌ ಕೆಲವು ವೆಬ್‌ ಸೀರಿಸ್‌ಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸದ್ಯ ಅವರು ʼಅನಗನಗ ಒಕ ರಾಜುʼ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇದನ್ನೂ ಓದಿ: Miss Shetty Mr Polishetty: ʻನವೀನ್ ಪೋಲಿಶೆಟ್ಟಿʼ ಅಭಿನಯಕ್ಕೆ ಮನಸೋತ ಪ್ರೇಕ್ಷಕರು!

Continue Reading

ಸಿನಿಮಾ

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Prithviraj Sukumaran: ಇದೀಗ ಸಿನಿಮಾ ಕಂಡು ಪ್ರೇಕ್ಷಕರು ಹಾಡಿ ಹೊಗಳಿದ್ದಾರೆ. ಮುಖ್ಯವಾಗಿ ಪೃಥ್ವಿರಾಜ್ ಸುಕುಮಾರನ್‌ ಅವರ ನಟನೆಯನ್ನು ಮೆಚ್ಚಿಕೊಂಡಾಡಿದ್ದಾರೆ.

VISTARANEWS.COM


on

Prithviraj Sukumaran
Koo

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್‌ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ ಇಂದು (ಮಾ.28) ರಿಲೀಸ್‌ ಆಗಿದೆ.

ಇದೀಗ ಸಿನಿಮಾ ಕಂಡು ಪ್ರೇಕ್ಷಕರು ಹಾಡಿ ಹೊಗಳಿದ್ದಾರೆ. ಮುಖ್ಯವಾಗಿ ಪೃಥ್ವಿರಾಜ್ ಸುಕುಮಾರನ್‌ ಅವರ ನಟನೆಯನ್ನು ಮೆಚ್ಚಿಕೊಂಡಾಡಿದ್ದಾರೆ.

ಒಬ್ಬ ಅಭಿಮಾನಿ, “ಸುಂದರವಾದ ಹಿನ್ನೆಲೆ ಧ್ವನಿ, ಹೃದಯ ಸ್ಪರ್ಶಿಸುವ ಹಾಡುಗಳು, ಪೃಥ್ವಿರಾಜ್ ಅವರ ಸುಂದರ ನಟನೆ, ಮೂರರಿಂದ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯುವುದು ಖಚಿತ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Prithviraj Sukumaran: ಹೀಗಿದೆ ನೋಡಿ ʼಆಡು ಜೀವಿತಂʼ ಟ್ರೈಲರ್‌: ಮಾ. 28ಕ್ಕೆ ತೆರೆಗೆ

ಮತ್ತೊಬ್ಬರು ʻʻಮೊದಲಾರ್ಧ ಚೆನ್ನಾಗಿದೆ. ಪೃಥ್ವಿರಾಜ್ ಸುಕುಮಾರನ್‌ ಅವರ ಅಭಿನಯ ಸಖತ್‌ʼʼಎಂದು ಬರೆದಿದ್ದಾರೆ.

ಇಂಗ್ಲಿಷ್ ಸಬ್‌ಟೈಟಲ್‌ ಸ್ವಲ್ಪ ಸರಿಯಿರಲಿಲ್ಲ. ಡಬ್ಬಿಂಗ್ ಆವೃತ್ತಿಯಿದ್ದರೂ, ಹೆಚ್ಚಿನ ಪ್ರೇಕ್ಷಕರು ಇಂಗ್ಲಿಷ್ ಸಬ್‌ಟೈಟಲ್‌ಗೆ ಪ್ರಾಮುಖ್ಯತೆ ನೀಡುತ್ತಾರೆ ʼʼಎಂದು ಬರೆದುಕೊಂಡಿದ್ದಾರೆ.

ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ.

Continue Reading

ಟಾಲಿವುಡ್

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Aditi Rao Hydari: ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ (Siddharth) ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಜೋಡಿಗೆ ಫ್ಯಾನ್ಸ್‌ ಶುಭಹಾರೈಸುತ್ತಿದ್ದಾರೆ.

VISTARANEWS.COM


on

Aditi Rao Hydari engaged to Siddharth
Koo

ಬೆಂಗಳೂರು:  ಅದಿತಿ ರಾವ್ ಹೈದರಿ (Aditi Rao Hydari) ಮತ್ತು ಸಿದ್ಧಾರ್ಥ್ (Siddharth) ಅಧಿಕೃತವಾಗಿ ಎಂಗೇಜ್‌ ಆಗಿದ್ದಾರೆ. ಎಂಗೇಜ್ಡ್ ಎಂದು ಜೋಡಿ ಉಂಗುರ ತೋರಿಸಿ ಇನ್‌ಸ್ಟಾ ಪೋಸ್ಟ್‌ ಮಾಡಿದೆ. ತೆಲಂಗಾಣದ ಶ್ರೀರಂಗಾಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ವಿವಾಹವಾದರು ಎಂದು ತೆಲುಗು ಮಾಧ್ಯಮಗಳು ಮಾ.27ರಂದು ವರದಿ ಮಾಡಿದ್ದವು. ಇದೀಗ ಅದಿತಿ ಪೋಸ್ಟ್ ನೋಡಿ ಮದುವೆ ಅಲ್ಲ ಎಂಗೇಜ್‌ಮೆಂಟ್‌ ಆಗಿದ್ದಾರೆ ಎಂದು ಮೂಲ ತಿಳಿಸಿದೆ.

ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ. ಈ ಮೊದಲು ಅದಿತಿ ರಾವ್​ ಹೈದರಿ ಅವರು ನಟ ಸತ್ಯದೀಪ್​ ಮಿಶ್ರಾ ಜತೆ ಮದುವೆ ಆಗಿದ್ದರು. ಆದರೆ 2013ರಲ್ಲಿ ಅವರು ವಿಚ್ಛೇದನ ಪಡೆದರು. ಅದೇ ರೀತಿ, ಸಿದ್ಧಾರ್ಥ್​ ಕೂಡ ಮೇಘನಾ ನಾರಾಯಣ್​ ಜತೆ 2003ರಲ್ಲಿ ಮದುವೆಯಾಗಿ 2007ರಲ್ಲಿ ಡಿವೋರ್ಸ್​ ಪಡೆದರು.

ಅರುಣ್ ಕುಮಾರ್ ನಿರ್ದೇಶನದ “ಚಿತ್ತಾʼ ಚಿತ್ರದಲ್ಲಿ ಸಿದ್ಧಾರ್ಥ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಿಮಿಷಾ ಸಜಯನ್, ಅಂಜಲಿ ನಾಯರ್ ಮತ್ತು ಸಹಸ್ರ ಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಟಕಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿದ್ಧಾರ್ಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮುಂದೆ ನಟ ಎಸ್ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಕಾಣಿಸಿಕೊಳ್ಳಲು ಸಹ ಸಿದ್ಧರಾಗಿದ್ದಾರೆ.

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇದನ್ನೂ ಓದಿ: Aditi Rao Hydari: ʻಹೀರಾಮಂಡಿʼ ಕಾರ್ಯಕ್ರಮದಲ್ಲಿ ನಟಿ ಗೈರು; ಸಿದ್ಧಾರ್ಥ್ ಜತೆ ಮದುವೆ ಕನ್ಫರ್ಮ್‌!

ಮತ್ತೊಂದೆಡೆ, ಅದಿತಿ ರಾವ್ ಹೈದರಿ ಕೊನೆಯದಾಗಿ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಿದ ಜುಬಿಲಿ ವೆಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಅಪರಶಕ್ತಿ ಖುರಾನಾ, ವಾಮಿಕಾ ಗಬ್ಬಿ, ಸಿದ್ದಾಂತ್ ಗುಪ್ತಾ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಮುಂದಿನ ಸಂಜಯ್ ಲೀಲಾ ಬನ್ಸಾಲಿಯವರ ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿಯಲ್ಲಿ ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ ಮತ್ತು ಇನ್ನೂ ಅನೇಕರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಕಜ್ರಿ ಬಬ್ಬರ್ ನಿರ್ದೇಶನದ ಲಯನೆಸ್ ಎಂಬ ಇಂಗ್ಲಿಷ್ ಚಲನಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

Mudhol Movie: ‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ.

VISTARANEWS.COM


on

Mudhol Movie Sanjana
Koo

ಬೆಂಗಳೂರು: ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್‌ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ (Mudhol Movie) ಬಳಗ ಸೇರಿಕೊಂಡಿದ್ದಾರೆ. ‌ʻಕೆಮಿಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೊ ಜತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ʻಸಲಗ‌ʼ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜತೆಗೆ ತೆಲುಗುವಿಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜತೆ ರೊಮ್ಯಾನ್ಸ್ ಮಾಡಲು ಓಕೆ ಎಂದಿದ್ದಾರೆ.

‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ʻಮುಧೋಳ್ʼ ಮೂಲಕ ಸಖತ್‌ ಮಾಸ್ ಅವತಾರ ತಾಳಿರುವ ವಿಕ್ರಮ್‌ ಅವರಿಗೆ ನಾಯಕಿಯಾಗಿ ಸಂಜನಾ ನಟಿಸುತ್ತಿದ್ದಾರೆ.‌ ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷಯ ಹರಿದಾಡಿತ್ತು. ಆದರೆ ಚಿತ್ರತಂಡ ಮಾತ್ರ ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಸಲಗ ಸುಂದರಿ ಹುಟ್ಟುಹಬ್ಬದ ವಿಶೇಷವಾಗಿ‌‌ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.

ವಿಕ್ರಮ್ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ.‌ ಇಲ್ಲಿವರೆಗೂ ಅವರು ನಟಿಸಿದ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೇ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

ಸಂಜನಾ ಆನಂದ್ ʻಮುಧೋಳ್ʼ ಸಿನಿಮಾ ಜತೆಗೆ ದಿನಕರ್ ತೂಗುದೀಪ ನಿರ್ದೇಶನದ ʻರಾಯಲ್ʼ ಹಾಗೂ ತೆಲುಗಿನ ʻಫುಲ್ ಬಾಟೆಲ್ʼ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ʻಹಯಗ್ರೀವ್ʼ ಗೂ ನಾಯಕಿಯಾಗಿದ್ದಾರೆ ಸಂಜನಾ.

Continue Reading
Advertisement
crime news
ಕ್ರೈಂ6 mins ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ10 mins ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ23 mins ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Xiaomi Car in China
ಪ್ರಮುಖ ಸುದ್ದಿ1 hour ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್1 hour ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು1 hour ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20241 hour ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ1 hour ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು2 hours ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ2 hours ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20249 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202410 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ18 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌