Actor Ram Charan : ದಿಲ್ಲಿ ಏರ್‌ಪೋರ್ಟ್‌ನಲ್ಲಿ ಪತ್ನಿಯೊಂದಿಗೆ ಕಾಣಿಸಿಕೊಂಡ ನಟ ರಾಮ್‌ ಚರಣ್‌, ಅಭಿಮಾನಿಗಳ ಮುತ್ತಿಗೆ - Vistara News

ಸಿನಿಮಾ

Actor Ram Charan : ದಿಲ್ಲಿ ಏರ್‌ಪೋರ್ಟ್‌ನಲ್ಲಿ ಪತ್ನಿಯೊಂದಿಗೆ ಕಾಣಿಸಿಕೊಂಡ ನಟ ರಾಮ್‌ ಚರಣ್‌, ಅಭಿಮಾನಿಗಳ ಮುತ್ತಿಗೆ

ಆಸ್ಕರ್‌ ಪ್ರಶಸ್ತಿ ಪಡೆದ ಆರ್‌ಆರ್‌ಆರ್‌ ಸಿನಿಮಾದ ನಟ ರಾಮ್‌ ಚರಣ್‌ (Actor Ram charan) ಅವರು ಶುಕ್ರವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಪತ್ನಿಯೊಂದಿಗೆ ಬಂದಿಳಿದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಟ ರಾಮ್‌ ಚರಣ್‌ (Actor Ram charan) ಮತ್ತು ಜೂ. ಎನ್‌ಟಿಆರ್‌ ಅಭಿನಯದ ಆರ್‌ಆರ್‌ಆರ್‌(RRR Movie) ಸಿನಿಮಾದ ನಾಟು ನಾಟು ಹಾಡು ಆಸ್ಕರ್‌(Oscars 2023) ಪ್ರಶಸ್ತಿ ಬಾಚಿಕೊಂಡಿದೆ. ಅದೇ ಸಂಭ್ರಮದಲ್ಲಿ ರಾಮ್‌ ಚರಣ್‌ ಹಾಗೂ ಅವರ ಗರ್ಭಿಣಿ ಪತ್ನಿ ಉಪಾಸನಾ ಅವರು ಶುಕ್ರವಾರ ಭಾರತಕ್ಕೆ ಹಿಂದಿರುಗಿದ್ದಾರೆ. ದೆಹಲಿಯ ಏರ್‌ಪೋರ್ಟ್‌ನಲ್ಲಿ ಅವರಿಗೆ ಭರ್ಜರಿ ಸ್ವಾಗತ ದೊರೆಯಿತಲ್ಲದೇ, ಅಭಿಮಾನಿಗಳು ಅವರನ್ನು ಮುತ್ತಿಕೊಂಡಿರು.

ಇದನ್ನೂ ಓದಿ: MM Keeravani : ಆಸ್ಕರ್‌ ಗೆದ್ದ ಕೀರವಾಣಿಗೆ ಶುಭ ಹಾರೈಸಿದ ಖ್ಯಾತ ಪಿಯಾನಿಸ್ಟ್ ಕಾರ್ಪೆಂಟರ್; ಕಣ್ಣೀರಿಟ್ಟ ಸಂಗೀತ ನಿರ್ದೇಶಕ
ರಾಮ್‌ಚರಣ್‌ ಅವರು ಗರ್ಭಿಣಿ ಪತ್ನಿ ಉಪಾಸನಾ ಅವರೊಂದಿಗೆ ದೆಹಲಿಗೆ ಬಂದಿಳಿದಿದ್ದಾರೆ. ಅಲ್ಲಿ ಅವರು ಕಾನ್‌ಕ್ಲೇವ್‌ ಒಂದರಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಅವರನ್ನೂ ಭೇಟಿಯಾಗಲಿದ್ದಾರೆ ಎಂದು ವರದಿಯಿದೆ. ರಾಮ್‌ಚರಣ್‌ ದಂಪತಿಯನ್ನು ಕಂಡೊಡನೆ ಅಭಿಮಾನಿಗಳು ಅವರನ್ನು ಸುತ್ತುವರಿದಿದ್ದು, ರಾಮ್‌ಚರಣ್‌ ಪತ್ನಿಯನ್ನು ಜೋಪಾನವಾಗಿ ಕಾರಿಗೆ ಹತ್ತಿಸಿ, ತಾವು ಕಾರಿಗೆ ಹತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.


ಆಸ್ಕರ್ ಪ್ರಶಸ್ತಿ ಪಡೆದ ಬಗ್ಗೆ ಮಾತನಾಡಿರುವ ರಾಮ್‌ ಚರಣ್‌, “ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ರಾಜಮೌಳಿ ಸರ್‌, ಕೀರವಾಣಿ ಮತ್ತು ಚಂದ್ರಬೋಸ್‌ ಸರ್‌ ಅವರ ಬಗ್ಗೆ ನಮಗೆ ಹೆಮ್ಮೆಯಿದೆ. ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಹೀಗೆ ಭಾರತದ ಎಲ್ಲ ಭಾಗದ ಜನರು ಆರ್‌ಆರ್‌ಆರ್‌ ಸಿನಿಮಾ ನೋಡಿ ಹರಸಿದ್ದಾರೆ. ನಾಟು ನಾಟು ಹಾಡು ನಮ್ಮದಲ್ಲ ಬದಲಾಗಿ ಭಾರತೀಯರದ್ದು” ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

Mudhol Movie: ‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ.

VISTARANEWS.COM


on

Mudhol Movie Sanjana
Koo

ಬೆಂಗಳೂರು: ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್‌ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ (Mudhol Movie) ಬಳಗ ಸೇರಿಕೊಂಡಿದ್ದಾರೆ. ‌ʻಕೆಮಿಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೊ ಜತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ʻಸಲಗ‌ʼ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜತೆಗೆ ತೆಲುಗುವಿಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜತೆ ರೊಮ್ಯಾನ್ಸ್ ಮಾಡಲು ಓಕೆ ಎಂದಿದ್ದಾರೆ.

‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ʻಮುಧೋಳ್ʼ ಮೂಲಕ ಸಖತ್‌ ಮಾಸ್ ಅವತಾರ ತಾಳಿರುವ ವಿಕ್ರಮ್‌ ಅವರಿಗೆ ನಾಯಕಿಯಾಗಿ ಸಂಜನಾ ನಟಿಸುತ್ತಿದ್ದಾರೆ.‌ ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷಯ ಹರಿದಾಡಿತ್ತು. ಆದರೆ ಚಿತ್ರತಂಡ ಮಾತ್ರ ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಸಲಗ ಸುಂದರಿ ಹುಟ್ಟುಹಬ್ಬದ ವಿಶೇಷವಾಗಿ‌‌ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.

ವಿಕ್ರಮ್ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ.‌ ಇಲ್ಲಿವರೆಗೂ ಅವರು ನಟಿಸಿದ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೇ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

ಸಂಜನಾ ಆನಂದ್ ʻಮುಧೋಳ್ʼ ಸಿನಿಮಾ ಜತೆಗೆ ದಿನಕರ್ ತೂಗುದೀಪ ನಿರ್ದೇಶನದ ʻರಾಯಲ್ʼ ಹಾಗೂ ತೆಲುಗಿನ ʻಫುಲ್ ಬಾಟೆಲ್ʼ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ʻಹಯಗ್ರೀವ್ʼ ಗೂ ನಾಯಕಿಯಾಗಿದ್ದಾರೆ ಸಂಜನಾ.

Continue Reading

ಸ್ಯಾಂಡಲ್ ವುಡ್

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

ಸತೀಶ್ ನಿನಾಸಂ ಹಾಗೂ ರಚಿತಾ ರಾಮ್‌ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ʻಮ್ಯಾಟ್ನಿʼ ಸಿನಿಮಾದ (Matinee Movie Kannada) ಟ್ರೈಲರ್ ಲಾಂಚ್ ಮಾಡಿದರು.

VISTARANEWS.COM


on

Actor Darshan at Matinee Movie Team
Koo

ಬೆಂಗಳೂರು: ಸತೀಶ್ ನೀನಾಸಂ (Sathish ninasam) ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅಭಿನಯದ ʻಮ್ಯಾಟ್ನಿʼ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ʻಮ್ಯಾಟ್ನಿʼ ಸಿನಿಮಾದ (Matinee Movie Kannada) ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದರು.

ಇಷ್ಟು ದಿನಗಳ ಕಾಲ ತೆರೆ ಮೇಲೆ ಕ್ಯೂಟ್ ಹಾಗೂ ರೊಮ್ಯಾಂಟಿಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಸತೀಶ್ ನಿನಾಸಂ ಕೂಡ ಇದೆ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು ಸಿನಿಮಾದಲ್ಲಿ ಯಾರು ಡೆವಿಲ್ ಎನ್ನುವುದು ಕುತೂಹಲ ಮೂಡಿಸಿದೆ.

ಯಾರೆಲ್ಲ ಇದ್ದಾರೆ?

ಚಿತ್ರದಲ್ಲಿ ಸತೀಶ್, ರಚಿತಾ ರಾಮ್ ಸೇರಿದಂತೆ ಅದಿತಿ ಪ್ರಭುದೇವ, ಶಿವರಾಜ್ ಕೆಆರ್ ಪೇಟೆ, ನಾಗಭೂಷಣ್, ಪೂರ್ಣ ಮೈಸೂರು, ದಿಗಂತ್ ದಿವಾಕರ್, ತುಳಸಿ ಶಿವರಾಮ್, ತಬಲ ನಾಣಿ ಹೀಗೆ ಸಾಕಷ್ಟು ಕಲಾವಿದರು ಅಭಿನಯ ಮಾಡಿದ್ದಾರೆ. ಇನ್ನು ಮ್ಯಾಟ್ನಿ ಸಿನಿಮಾವನ್ನು ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು, ಪಾರ್ವತಿ ಗೌಡ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ , ಸುಧಾಕರ್ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಾಹಣವಿದೆ.

ಇದನ್ನೂ ಓದಿ: Uttara Kannada News: ನಾನು ಉತ್ತರಕನ್ನಡದವಳಲ್ಲ ಎನ್ನುವ ಬಿಜೆಪಿಗರೂ ಪ್ರಚಾರಕ್ಕಾಗಿ ನನ್ನ ಕ್ಷೇತ್ರಕ್ಕೇ ಬರಬೇಕು: ನಿಂಬಾಳ್ಕರ್

ಮ್ಯಾಟ್ನಿಗೆ ದೊಡ್ಡ ಶಕ್ತಿ ಸಿಕ್ಕಿದೆ

ನೀನಾಸಂ ಸತೀಶ್ ಅವರು ಮಾತನಾಡಿ, ʻʻಯಾಕೋ ಮ್ಯಾಟ್ನಿ ಸಿನಿಮಾ ಇನ್ನು ರಿಲೀಸ್ ಮಾಡಿಲ್ಲ ಮೊದಲು ರಿಲೀಸ್ ಮಾಡಿ ಎಂದು ದರ್ಶನ್ ಹೇಳಿದ್ದರು. ಆಗ ಟ್ರೈಲರ್ ಲಾಂಚ್‌ಗೆ ಬರಲೇಬೇಕು ಎಂದು ಕೇಳಿಕೊಂಡಿದ್ದೆ. ಮೊದಲು ಸಿನಿಮಾ ಲಾಂಚ್ ಮಾಡಿ ಬರುತ್ತೇನೆ ಅಂದಿದ್ದರು. ರಚಿತಾ ಅವರು ಆಗಲೇ ಮಾತನಾಡಿದ್ದರು. ನಿಮಗಾಗಿ ಹಾಗೂ ರಚಿತಾ ಇದ್ದಾರೆ ಖಂಡಿತ ಬರುತ್ತೇನೆ ಅಂದಿದ್ದರು. ಹಾಗೂ ಗೆಳೆಯ ಡಾಲಿ ಕೂಡ ಇದ್ದಾರೆ. ಮ್ಯಾಟ್ನಿಗೆ ದೊಡ್ಡ ಶಕ್ತಿ ಸಿಕ್ಕಿದೆ. ದೊಡ್ಡ ಮಟ್ಟದಲ್ಲಿ ರೀಚ್ ಆಗಿದೆ’ ಎಂದರು.

ಮ್ಯಾಟ್ನಿ ಟ್ರೈಲರ್‌ ಲಾಂಚ್ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಡಾಲಿ ಧನಂಜಯ್ ಭಾಗಿಯಾಗಿದ್ದರು. ಸಿನಿಮಾದಲ್ಲಿ ರಚಿತಾ ಡೆವಿಲ್ ಲುಕ್ ನೋಡಿ ಡಾಲಿ ಹಾಗೂ ದರ್ಶನ್ ಫಿದಾ ಆಗಿದ್ದಾರೆ.

ವೇದಿಕೆ ಮೇಲೆ ಮಾತನಾಡಿದ ರಚಿತಾ, ‘ನನ್ನ ಸಿನಿಮಾದ ಟ್ರೈಲರ್ ಅನ್ನು ಮೊದಲ ಬಾರಿಗೆ ದರ್ಶನ್ ಸರ್ ಲಾಂಚ್ ಮಾಡುತ್ತ ಇದ್ದಾರೆ. ತುಂಬಾ ಖುಷಿ ಹಾಗೂ ತುಂಬಾ ಹೆಮ್ಮೆಯಾಗುತ್ತೆ. ನಾನು ತೂಗುದೀಪ ಬ್ಯಾನರ್‌ನಿಂದ ಲಾಂಚ್ ಆದವಳು. ಹತ್ತು ವರ್ಷದ ಬಳಿಕ ನನ್ನ ಸಿನಿಮಾದ ಟ್ರೈಲರ್ ಲಾಂಚ್‌ಗೆ ಬಂದಿದ್ದು ತುಂಬಾ ಖುಷಿಯಾಗುತ್ತೆ. ವೇದಿಕೆ ಮೇಲೆ ಇರುವ ಡಾಲಿ, ಸತೀಶ್, ದರ್ಶನ್ ಸರ್ ಈ ಮೂವರು ಕಲಾವಿದರ ಜತೆ ನಾನು ಕೆಲಸ ಮಾಡಿದ್ದೇನೆ. ತುಂಬಾ ಖುಷಿಯಾಗುತ್ತೆ. ʻಮ್ಯಾಟ್ನಿʼ ಸಿನಿಮಾ ನೋಡಿ ಎಂದು ಕೇಳಿಕೊಂಡರು.

ಮ್ಯಾಟ್ನಿ ಟೈಮಲ್ಲಿ ಹೋಗ್ಬೇಡಿ

ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ʻʻʻಮ್ಯಾಟ್ನಿʼ ಸಿನಿಮಾ ಇದೇ 5ನೇ ತಾರೀಖು ಎಲ್ಲಾ ಚಿತ್ರಮಂದಿರಗಳಲ್ಲಿ ಬರುತ್ತಿದೆ. ʻಮ್ಯಾಟ್ನಿʼ ಸಿನಿಮಾ ಎಂದ ಮಾತ್ರಕ್ಕೆ ಮ್ಯಾಟ್ನಿ ಟೈಮಲ್ಲಿ ಹೋಗ್ಬೇಡಿ, ಮಾರ್ನಿಂಗ್ ಶೋಗೆ ಹೋಗಿ’ ಎಂದರು. ಇನ್ನು ಸತೀಶ್ ಅವರ ಬಗ್ಗೆ ಮಾತನಾಡಿದ ದರ್ಶನ್, ‘ನೀನಾಸಂನಿಂದ ಬಂದು ಸಿನಿಮಾ ರಂಗದಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಇಲ್ಲಿವರೆಗೂ ಬಂದಿದ್ದಾರೆ. ಈ ಜರ್ನಿ ತುಂಬಾ ದೊಡ್ಡದು. ಇನ್ನು ನಾಯಕಿಯಾಗಿ ಹತ್ತು ವರ್ಷಗಳು ಸಿನಿಮಾರಂಗದಲ್ಲಿ ಇದ್ದು ಜಹಿಸುವುದು ಅಂದ್ರೆ ಸುಮ್ಮನೆ ಅಲ್ಲ. ಶ್ರಮ ಕಾಣುತ್ತಿದೆ’ ಎಂದು ರಚಿತಾ ಅವರ ಬಗ್ಗೆಯೂ ಹೇಳಿದರು.

ಇದನ್ನೂ ಓದಿ: Ramayana Movie: ರಾಮಾಯಣದಲ್ಲಿ ಯಶ್‌ ಪತ್ನಿಯ ಪಾತ್ರಕ್ಕೆ ʻದಂಗಲ್‌ʼ ಸಿನಿಮಾ ನಟಿ!

ಚಿತ್ರದ ಹಾಡುಗಳು ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು ಟ್ರೈಲರ್‌ ಕೂಡ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚು ಮಾಡಿದೆ. ಏಪ್ರಿಲ್ 5ಕ್ಕೆ ʻಮ್ಯಾಟ್ನಿʼ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading

ಬಾಲಿವುಡ್

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Kangana Ranaut : ನಟಿ ಕಂಗನಾ ರಣಾವತ್ ಹಿಟ್‌ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಮಾತ್ರವಲ್ಲ ತಮ್ಮನ್ನು ಹಾಗೂ ಶಾರುಖ್ ಅವರನ್ನು ʻ ಈ ಯುಗದ ಕೊನೆಯ ತಲೆಮಾರಿನ ಸ್ಟಾರ್ಸ್‌ಗಳು’ ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ನಟಿ ಕಂಗನಾ ರಣಾವತ್ (Kangana Ranaut) ಹಿಟ್ ಸಿನಿಮಾ ನೀಡದೇ ವರ್ಷಗಳೇ ಕಳೆದಿವೆ. ಆದರೆ, ಅವರ ಅಭಿಪ್ರಾಯದಲ್ಲಿ ಇದು ಮುಖ್ಯವಲ್ಲ. ಏಕೆಂದರೆ, ‘ಪಠಾಣ್’ ಮೊದಲು, ಬಾಲಿವುಡ್‌ನ ಸೂಪರ್‌ಸ್ಟಾರ್, ಶಾರುಖ್ ಖಾನ್ (Shah Rukh Khan) ಸಹ ಹತ್ತು ವರ್ಷಗಳ ಕಾಲ ಫ್ಲಾಪ್‌ ಸಿನಿಮಾಗಳನ್ನೇ ನೀಡಿದ್ದರು ಎಂದು ಹೇಳಿಕೊಂಡಿದ್ದಾರೆ. ಮಾತ್ರವಲ್ಲ ತಮ್ಮನ್ನು ಹಾಗೂ ಶಾರುಖ್ ಅವರನ್ನು ʻ ಈ ಯುಗದ ಕೊನೆಯ ತಲೆಮಾರಿನ ಸ್ಟಾರ್ಸ್‌ಗಳು’ ಎಂದು ಹೇಳಿಕೊಂಡಿದ್ದಾರೆ.

ಟೈಮ್ಸ್ ನೌ ಶೃಂಗಸಭೆ 2024ರಲ್ಲಿ ಮಾತನಾಡಿದ ಕಂಗನಾ, ನಾನು ಮತ್ತು ಶಾರುಖ್ “ಈ ಯುಗದ ಕೊನೆಯ ತಲೆಮಾರಿನ ಸ್ಟಾರ್ಸ್‌ಗಳುʼʼ ಎಂದಿದ್ದಾರೆ. ʻʻಒಟಿಟಿ ವೇದಿಕೆ ಸ್ಟಾರ್‌ಗಳನ್ನು ನಿರ್ಮಾಣ ಮಾಡುವುದಿಲ್ಲ. ದೇವರ ದಯೆಯಿಂದ ನಮಗೆ ತುಂಬಾ ಬೇಡಿಕೆಯಿದೆʼʼ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಂಗನಾ ಅವರು ಅಭಿನಯಿಸಿದ “ತೇಜಸ್‌ʼ ಕೊನೆಯದಾಗಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಅವರ ‘ಜಡ್ಜ್‌ಮೆಂಟಲ್ ಹೈ ಕ್ಯಾ’, ‘ತಲೈವಿ’, ‘ಧಕಡ್’ ಮತ್ತು ‘ಚಂದ್ರಮುಖಿ 2’ ಚಿತ್ರಗಳು ಅಷ್ಟಾಗಿ ಯಶಸ್ಸು ಕಂಡಿಲ್ಲ. ಶಾರುಖ್ ಅವರ ಉದಾಹರಣೆಯನ್ನು ಉಲ್ಲೇಖಿಸಿ ಸಿನಿಮಾಗಳ ವೈಫಲ್ಯದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: Kangana Ranaut: ಊರ್ಮಿಳಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸನ್ನಿ ಲಿಯೋನ್‌ ಹೆಸರು ಎಳೆದು ತಂದ ಕಂಗನಾ!

“ಜಗತ್ತಿನ ಯಾವುದೇ ನಟನಿಗೆ ಹಿಟ್‌ಗಳು ಮಾತ್ರ ಸಾಲದು. ಶಾರುಖ್ ಖಾನ್ ಅವರ ಚಿತ್ರಗಳು ಹತ್ತು ವರ್ಷಗಳ ಕಾಲ ಹಿಟ್‌ ಕಂಡೇ ಇಲ್ಲ. ಬಳಿಕ ʻಪಠಾಣ್ʼ ಸಕ್ಸೆಸ್‌ ಆಯಿತು. ನನ್ನ ಚಿತ್ರಗಳು ಏಳೆಂಟು ವರ್ಷಗಳ ಕಾಲ ಯಶಸ್ಸು ಕಾಣಲೇ ಇಲ್ಲ. ನಂತರ ‘ಕ್ವೀನ್’ ಸಿನಿಮಾ ಗೆದ್ದಿತು. 3-4 ವರ್ಷಗಳ ನಂತರ, ʻಮಣಿಕರ್ಣಿಕಾʼ ಕೆಲಸ ಮಾಡಿದೆ. ಈಗ, ʻ ಎಮರ್ಜೆನ್ಸಿʼ ಸಿನಿಮಾ ಬರುತ್ತಿದೆ. ಬಹುಶಃ ಅದು ಹಿಟ್ ಆಗಬಹುದುʼʼ ಎಂದು ಹೇಳಿಕೊಂಡಿದ್ದಾರೆ

ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದ ಕಾಲದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಕುರಿತಾಗಿನ ಕಥೆ ʻಎಮರ್ಜೆನ್ಸಿʼ ಸಿನಿಮಾದಲ್ಲಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಕಂಗನಾ ನಟಿಯಾಗಿ ನಟಿಸಿರುವುದಷ್ಟೇ ಅಲ್ಲದೆ ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಇದನ್ನೂ ಓದಿ: Kangana Ranaut: 37ನೇ ವಸಂತಕ್ಕೆ ಕಾಲಿಟ್ಟ ಕಂಗನಾ ರಣಾವತ್‌!

ಈ ಹಿಂದೆ ನಟಿ “ತಲೈವಿʼ ಸಿನಿಮಾದಲ್ಲಿ ತಮಿಳುನಾಡಿನ ಪ್ರಸಿದ್ಧ ರಾಜಕಾರಣಿ, ಜೆ. ಜಯಲಲಿತಾ ಅವರಾಗಿಯೂ ಕಾಣಿಸಿಕೊಂಡಿದ್ದರು. ಆ ಸಿನಿಮಾ ಕೂಡ ಸಾಕಷ್ಟು ಜನರ ಮೆಚ್ಚುಗೆಯನ್ನು ಪಡೆದುಕೊಂಡಿತ್ತು. 2024ರ ಜೂನ್‌ 14ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

Continue Reading
Advertisement
CM Siddaramaiah hugs DK Suresh in Bangalore Rural Lok Sabha constituency election campaign
Lok Sabha Election 20246 mins ago

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Mudhol Movie Sanjana
ಸ್ಯಾಂಡಲ್ ವುಡ್9 mins ago

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

narendra modi
ದೇಶ22 mins ago

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Varun Gandhi
ಪ್ರಮುಖ ಸುದ್ದಿ45 mins ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ53 mins ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

40 per cent commission advertisement against BJP and Summons to CM Siddaramaiah and DCM DK Shivakumar
ರಾಜಕೀಯ57 mins ago

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

Murder case Family Dispute
ಬೆಂಗಳೂರು ಗ್ರಾಮಾಂತರ1 hour ago

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Bengaluru News air pressure pipe
ಬೆಂಗಳೂರು2 hours ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್2 hours ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20243 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌