Actor Ram charan : ಆರ್‌ಆರ್‌ಆರ್‌ ಸಿನಿಮಾ ಯಶಸ್ಸಿನ ಗುಂಗಿನಲ್ಲಿರುವ ನಟ ರಾಮ್‌ಚರಣ್‌ ಭವಿಷ್ಯವೇನು? - Vistara News

South Cinema

Actor Ram charan : ಆರ್‌ಆರ್‌ಆರ್‌ ಸಿನಿಮಾ ಯಶಸ್ಸಿನ ಗುಂಗಿನಲ್ಲಿರುವ ನಟ ರಾಮ್‌ಚರಣ್‌ ಭವಿಷ್ಯವೇನು?

ರಾಮ್‌ಚರಣ್‌ (Actor Ram charan) ಅವರಿಗೆ ಆರ್‌ಆರ್‌ಆರ್‌ ಸಿನಿಮಾ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿದೆ. ಅವರಿಗೆ ಈ ಸಿನಿಮಾದಿಂದ ಆದ ಲಾಭ, ಮುಂದಿನ ಹೆಜ್ಜೆಗಳ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ. ಆಸ್ಕರ್‌ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದುಕೊಟ್ಟಿದೆ. ಸಿನಿಮಾದ ನಟರಾದ ರಾಮ್‌ಚರಣ್‌ ಮತ್ತು ಜೂ.ಎನ್‌ಟಿಆರ್‌ ಕೂಡ ವಿಶ್ವಾದ್ಯಂತ ಸುದ್ದಿಯಲ್ಲಿದ್ದಾರೆ. ಹೀಗಿರುವಾಗ ನಟ ರಾಮ್‌ಚರಣ್‌ (Actor Ram charan) ಅವರ ಮುಂದಿನ ಭವಿಷ್ಯ ಹೇಗಿರಬೇಕಿದೆ? ಅವರಿಗೆ ಈ ಸಿನಿಮಾದಿಂದ ಆದ ಲಾಭ ಏನು ಎನ್ನುವ ಬಗ್ಗೆ ಇಲ್ಲಿದೆ ವಿಶ್ಲೇಷಣೆ.

ಇದನ್ನೂ ಓದಿ: Viral Video: ಜಪಾನ್‌ನಲ್ಲಿ ಮಗನಿಗಾಗಿ ಆರ್‌ಆರ್‌ಆರ್‌ ಸಿನಿಮಾ ಕಥೆಯನ್ನೇ ಪುಸ್ತಕ ಮಾಡಿಕೊಟ್ಟ ತಾಯಿ
ರಾಮ್‌ಚರಣ್‌ ಅವರು 2007ರಲ್ಲಿ ಚಿರುಥ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಅದಾದ ಮೇಲೆ ಅವರ ಮಗಧೀರ ಸಿನಿಮಾ ಹಿಟ್‌ ಲಿಸ್ಟ್‌ ಸೇರಿಕೊಂಡಿತು. ಅದರ ನಂತರ ಬಂದ ರಂಗಸ್ಥಳಂ ಸಿನಿಮಾ ಕೂಡ ಭಾರೀ ಮೆಚ್ಚುಗೆ ಪಡೆದುಕೊಂಡಿತು. ಆದರೆ ಇದೀಗ ಆರ್‌ಆರ್‌ಆರ್‌ ಸಿನಿಮಾ ರಾಮ್‌ಚರಣ್‌ ಅವರಿಗೆ ಬೇರೆಯದ್ದೇ ಬೆಲೆ ತಂದುಕೊಟ್ಟಿದೆ. ರಾಮ್‌ಚರಣ್‌ ಕೇವಲ ತೆಲುಗು ನಟ ಅಲ್ಲ ಭಾರತೀಯ ನಟ ಎಂದು ಗುರುತಿಸುವಂತಾಗಿದೆ.

ಆರ್‌ಆರ್‌ಆರ್‌ಗೂ ಮೊದಲು ರಾಮ್‌ಚರಣ್‌ ಅವರು ಜಾಹೀರಾತುಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೆ ಆರ್‌ಆರ್‌ಆರ್‌ ಗೆದ್ದಿದ್ದೇ ತಡ, ಹಲವಾರು ಕಂಪನಿಗಳು ನಟನನ್ನು ಹುಡುಕಿಕೊಂಡು ಹೋಗಿದ್ದಾವೆ. ಇದೀಗ ರಾಮ್‌ಚರಣ್‌ ಪಾರ್ಲೆ ಆಗ್ರೊ, ಹೀರೋ ಮೋಟಾರ್‌, ಮೀಶೋ, ಡಿಸ್ನೇ ಪ್ಲಸ್‌ ಹಾಟ್‌ಸ್ಟಾರ್‌ ಸೇರಿ ಒಟ್ಟು ಆರು ಬ್ರ್ಯಾಂಡ್‌ಗಳ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಚಿತ್ರಗಳಿಗೆ ಕಡಿಮೆ ಸಂಭಾವನೆ ಪಡೆಯುತ್ತಿದ್ದ ನಟ ಈಗ ತಮ್ಮ ಸಂಭಾವನೆ ಮೊತ್ತವನ್ನೂ ಕೂಡ ನೂರು ಕೋಟಿ ರೂಪಾಯಿಗೆ ಏರಿಕೆ ಮಾಡಿದ್ದಾರೆ ಎಂದು ವರದಿಯಿದೆ.

ನಿರ್ಮಾಪಕ ಗುರು ಸತೀಶ್‌ ಪಾಂಡೆ ಅವರು ರಾಮ್‌ಚರಣ್‌ ಅವರ ಬಗ್ಗೆ ಮಾತನಾಡಿದ್ದಾರೆ. “ರಾಮ್‌ಚರಣ್‌ ಅವರು ಈಗ ಖ್ಯಾತಿಯಲ್ಲಿದ್ದಾರೆ ಎನ್ನುವ ಕಾರಣಕ್ಕೆ ಅವರಿಗೆ ಜಾಹೀರಾತು ಅವಕಾಶಗಳು ಬರುತ್ತಿಲ್ಲ. ಅವರಿಗೆ ಇದಲ್ಲದೆ ಹಲವು ಬಾರಿ ಪ್ರಸಿದ್ಧತೆ ಸಿಕ್ಕಿದೆ. ಈಗ ಆರ್‌ಆರ್‌ಆರ್‌ ಸುದ್ದಿಯಲ್ಲಿದೆ. ವಿಶ್ವದಲ್ಲೆಡೆ ಆರ್‌ಆರ್‌ಆರ್‌ ಹೆಸರು ಕೇಳಿಬಂದಿದೆ. ಆ ಕಾರಣಕ್ಕೆ ನಟನ ದೃಷ್ಟಿಕೋನವೂ ಬದಲಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಸಿನಿಮಾ ವಿಮರ್ಶಕ ಜೀವಿ ಕೂಡ ಮಾತನಾಡಿದ್ದು, “ರಾಮ್‌ಚರಣ್‌ ಅವರ ಮೊದಲ ಸಿನಿಮಾ ಅವರ ತಂದೆ ಚಿರಂಜೀವಿ ಅವರದ್ದೇ ಆದಂತಿತ್ತು. ರಾಮ್‌ಚರಣ್‌ ನಟನೆ ಆರಂಭಿಸುವುದಕ್ಕೂ ಮೊದಲು ಚಿರಂಜೀವಿ ಅವರು 149 ಸಿನಿಮಾ ಮಾಡಿದ್ದರು. ರಾಮ್‌ಚರಣ್‌ ಅವರ ಮೊದಲನೇ ಸಿನಿಮಾವನ್ನು ಚಿರಂಜೀವಿ ಅವರ 150ನೇ ಸಿನಿಮಾ ಎಂದೇ ಪ್ರಚಾರ ಮಾಡಲಾಯಿತು. ಅದಾದ ಮೇಲೆ ಅವರು ಮಾಡಿದ ಸಿನಿಮಾಗಳು ಕೂಡ ಹಿಟ್‌ ಆದವು. ಹಾಗಾಗಿ ರಾಮ್‌ಚರಣ್‌ ಆರ್‌ಆರ್‌ಆರ್‌ಗೂ ಮೊದಲೇ ಎಲ್ಲರಿಗೂ ಗೊತ್ತಿದ್ದವರೇ. ಆದರೆ ಈಗ ಅವರ ಪ್ರಸಿದ್ಧತೆ ಮತ್ತೊಂದು ಮಟ್ಟ ಏರಿಕೆಯಾಗಿದೆಯಷ್ಟೇ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Actor Ramcharan: RC15 ಟೈಟಲ್‌ ರಿವೀಲ್‌: ಜನುಮದಿನದಂದೇ ಗುಡ್‌ನ್ಯೂಸ್‌ ಕೊಟ್ಟ ರಾಮ್‌ಚರಣ್‌
ಹಾಗೆಯೇ ಮಾತು ಮುಂದುವರಿಸಿರುವ ಅವರು, “ಈಗ ರಾಮ್‌ಚರಣ್‌ ಅವರ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಮುಂದಿನ ಅವರ ಸಿನಿಮಾಗಳು ಕನಿಷ್ಠ 300 ಕೋಟಿ ರೂ. ಗಳಿಸುವಂತಿರಬೇಕು. ಈಗ ಅವರ ಬಳಿ ಎರಡು ಆಯ್ಕೆಯಿದೆ. ಒಂದು ಅವರು ಯಾವುದಾದರೂ ದೊಡ್ಡ ಸಿನಿ ತಂಡದೊಂದಿಗೆ ಸಿನಿಮಾ ಮಾಡಬೇಕು ಅಥವಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಮಾಡುವುದಕ್ಕೆ ಯತ್ನಿಸಬೇಕು” ಎಂದು ನುಡಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

Actor Darshan: ಇದೀಗ ದರ್ಶನ್ ಆಪ್ತ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಅಚಾನಕ್ಕಾಗಿ ಕಾಣೆಯಾದ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ. 2018ರ ಫೆಬ್ರವರಿ ತಿಂಗಳು 9ನೇ ತಾರೀಕು ತೆರೆಕಂಡ “ಪ್ರೇಮ ಬರಹʼದ ಕಲೆಕ್ಷನ್ ಅಮೌಂಟ್ ಮಲ್ಲಿಕಾರ್ಜುನ್ ಕೊಟ್ಟಿರಲಿಲ್ಲ. 2018 ಫೆಬ್ರವರಿ ತಿಂಗಳ ನಂತರ ಮುಂದಿನ ಆರೇಳು ತಿಂಗಳು ಅರ್ಜುನ್ ಸರ್ಜಾ ಅವರು ಮಲ್ಲಿಕಾರ್ಜುನ್ ಅವರಲ್ಲಿ ವಿತರಣೆಯ ಹಣವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮಲ್ಲಿಕಾರ್ಜುನ್ ನಾಪತ್ತೆ ಆಗಿಬಿಟ್ಟರು.

VISTARANEWS.COM


on

Actor Darshan Assistant Malli missing case
Koo

ಬೆಂಗಳೂರು: ನಟ ದರ್ಶನ್ (Actor Darshan) ಅವರ ಮಾಜಿ ಪಿ.ಎ ಮಲ್ಲಿಕಾರ್ಜುನ್ ವಿರುದ್ಧ ಹಲವು ಆರೋಪಗಳು ಈ ಹಿಂದೆ ಕೇಳಿ ಬಂದಿದ್ದವು. ನಟ ಅರ್ಜುನ್ ಸರ್ಜಾ (Arjun Sarja) ಅವರು ʻಪ್ರೇಮ ಬರಹ’ (Prema Baraha) ಚಿತ್ರದ ವಿತರಣೆ ಹಣದ ವಿಚಾರವಾಗಿ ಮಲ್ಲಿಕಾರ್ಜುನ್ ವಿರುದ್ಧ ಕೇಸ್ ದಾಖಲಿಸಿದ್ದರು. ಮಲ್ಲಿಕಾರ್ಜುನ್ ವಿರುದ್ಧ 1 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಆದರೆ, ಮಲ್ಲಿ ಕಳೆದ 7 ವರ್ಷಗಳಿಂದ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ ಅರ್ಜುನ್ ಸರ್ಜಾ. ಇದೀಗ ದರ್ಶನ್ ಆಪ್ತ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಅಚಾನಕ್ಕಾಗಿ ಕಾಣೆಯಾದ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿದೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಶ್ರೀ ಕಾಲಕಾಲೇಶ್ವರ ಎಂಟರ್​ಪ್ರೈಸಸ್ ಕಂಪನಿ ಒಡೆಯರಾಗಿದ್ದ ಮಲ್ಲಿಕಾರ್ಜುನ್, ಗಾಂಧಿನಗರದಲ್ಲಿ ಹಲವರಿಗೆ 11 ಕೋಟಿ ರೂ. ಮೋಸ ಮಾಡಿರುವುದಾಗಿ ತಿಳಿದು ಬಂದಿತ್ತು. ಮಾತ್ರವಲ್ಲ ನಟ ದರ್ಶನ್‌ಗೆ 2 ಕೋಟಿ ರೂ. ಮೋಸ ಮಾಡಿ ನಾಪತ್ತೆಯಾಗಿದ್ದಾರೆ ಎಂಬ ದೂರಿತ್ತು. ಮಲ್ಲಿಕಾರ್ಜುನ್ ವಿಚಾರವಾಗಿ ಅರ್ಜುನ್ ಸರ್ಜಾ ಅವರು ಮತ್ತು ಅವರ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಮಲ್ಲಿಕಾರ್ಜುನ್‌ ಹಾಜರಾಗದೇ ಇದ್ದರೆ ವಾರಂಟ್ ಜಾರಿ ಮಾಡಬಹುದು ಎಂದು ಕೋರ್ಟ್‌ ಆದೇಶ ನೀಡಿತ್ತು.

ಪ್ರೇಮ ಬರಹ ಸಿನಿಮಾ ಪ್ರಕರಣ

ಅರ್ಜುನ್ ಸರ್ಜಾ (Arjun Sarja) ನಿರ್ದೇಶನ ಮತ್ತು ನಿರ್ಮಾಣದ ಚಿತ್ರ ʻಪ್ರೇಮ ಬರಹʼ ಚಿತ್ರವನ್ನು ಮಲ್ಲಿಕಾರ್ಜುನ್ (ಮಲ್ಲಿ) ರಾಜ್ಯಾದ್ಯಂತ ವಿತರಣೆ ಮಾಡಿದ್ದರು. 2018 ಫೆಬ್ರವರಿ 9ನೇ ತಾರೀಖು ರಾಜ್ಯಾದ್ಯಂತ ʻಪ್ರೇಮ ಬರಹʼ ಸಿನಿಮಾ ರಿಲೀಸ್ ಆಗಿತ್ತು. ಚಂದನ್ ಕುಮಾರ್ ಹಾಗೂ ಅರ್ಜುನ್ ಸರ್ಜಾ ಅವರ ಮೊದಲ ಪುತ್ರಿ ಐಶ್ವರ್ಯ ಅರ್ಜುನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ದಿವಂಗತ ಚಿರು ಸರ್ಜಾ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. 2018ರ ಶುರುವಿನಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಪ್ರೇಮ ಬರಹ ಸಿನಿಮಾದ ವಿತರಣೆಯ ಹಣದ ವಿಚಾರದಲ್ಲಿ ದರ್ಶನ್ ಮಾಜಿ ಪಿ.ಎ ಮಲ್ಲಿಕಾರ್ಜುನ್ ಮತ್ತು ನಟ-ನಿರ್ಮಾಪಕ-ನಿರ್ದೇಶಕ ಅರ್ಜುನ್ ಸರ್ಜಾರಲ್ಲಿ ವೈ ಮನಸ್ಸು ಶುರುವಾಯ್ತು. ಅರ್ಜುನ್ ಸರ್ಜಾ ಮತ್ತು ಮಲ್ಲಿಕಾರ್ಜುನ್ ನಡುವೆ ʻಪ್ರೇಮ ಬರಹʼ ಸಿನಿಮಾದ ವಿತರಣೆಯ ವಿಚಾರವಾಗಿ ಬರೋಬ್ಬರಿ 1 ಕೋಟಿ ರೂ. ಕೊಡುವ ಒಪ್ಪಂದ ಆಗಿತ್ತು. ಈ ವಿಚಾರವಾಗಿ ಸ್ವತಃ ಮಲ್ಲಿಕಾರ್ಜುನ್ ಅವರೇ ಅವರದ್ದೇ ಆದ ಶ್ರೀ ಕಾಲಕಾಲೇಶ್ವರ ಎಂಟರ್​ಪ್ರೈಸಸ್ ಬುಕ್​ಲೆಟ್‌​ನಲ್ಲಿ ವಿತರಣೆಯ ಹಣದ ವಿಚಾರವನ್ನು ಬರೆದುಕೊಟ್ಟಿದ್ದರು.

ಇದನ್ನೂ ಓದಿ: Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

ಪ್ರೇಮ ಬರಹದ ಕಲೆಕ್ಷನ್ ಅಮೌಂಟ್ ಕೊಡಲೇ ಇಲ್ಲ

2018ರ ಫೆಬ್ರವರಿ ತಿಂಗಳು 9ನೇ ತಾರೀಕು ತೆರೆಕಂಡ “ಪ್ರೇಮ ಬರಹʼದ ಕಲೆಕ್ಷನ್ ಅಮೌಂಟ್ ಮಲ್ಲಿಕಾರ್ಜುನ್ ಕೊಟ್ಟಿರಲಿಲ್ಲ. 2018 ಫೆಬ್ರವರಿ ತಿಂಗಳ ನಂತರ ಮುಂದಿನ ಆರೇಳು ತಿಂಗಳು ಅರ್ಜುನ್ ಸರ್ಜಾ ಅವರು ಮಲ್ಲಿಕಾರ್ಜುನ್ ಅವರಲ್ಲಿ ವಿತರಣೆಯ ಹಣವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮಲ್ಲಿಕಾರ್ಜುನ್ ನಾಪತ್ತೆ ಆಗಿಬಿಟ್ಟರು. ಒಟ್ಟು ಸುಮಾರು 11 ಕೋಟಿ ರೂ. ಮೋಸ ಮಾಡಿ ಓಡಿಹೋಗಿದ್ದಾರೆ ಎಂದು ಆಗ ಗಾಂಧಿನಗರದಲ್ಲಿ ಮಾತುಗಳು ಕೇಳಿಬರುತ್ತಿತ್ತು. ಈ ವಿಚಾರವನ್ನ ನಟ ದರ್ಶನ್ ಅವರಲ್ಲಿ ಕೇಳಿದಾಗ ‘‘ನನಗೆ 2 ಕೋಟಿ ಕೊಡಬೇಕಿತ್ತು ಮಲ್ಲಿ‘. ನನ್ನ ಹೆಸರಿನಲ್ಲಿ ಅನೇಕರಿಗೆ ಮೋಸ ಮಾಡಿದ್ದಾನೆ ಎನ್ನುವ ವಿಚಾರ ಕೇಳಿದ್ದೇನೆ. ಆತ ಎಲ್ಲಿಗೆ ಹೋಗಿದ್ದಾನೆ ಎಂದು ನನಗೆ ಗೊತ್ತಿಲ್ಲ ಎಂದಿದ್ದರುʼʼ ದರ್ಶನ್.

ಮುಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾಗಿದ್ದ ಮಲ್ಲಿಕಾರ್ಜುನ್ ಏಳು ವರ್ಷದಿಂದ ಯಾರಿಗೂ ಸಿಕ್ಕಿಲ್ಲ. 2018ರಲ್ಲಿ ಮಲ್ಲಿಕಾರ್ಜುನ್ ನಾಪತ್ತೆಯಾದಾಗ ಅರ್ಜುನ್ ಸರ್ಜಾ ಟೀಮ್ ಅವರ ಊರಿನ ಕಡೆ ಹೊರಟಿತ್ತು. ಮಲ್ಲಿ ಅವರ ಪತ್ನಿ ಕೊಪ್ಪಳ ಮೂಲದವರು. ಆಗ ಅವರ ಮನೆಗೆ ಹುಡುಕಿಕೊಂಡು ಹೋದಾಗ ಮಲ್ಲಿಕಾರ್ಜುನ್ ಪತ್ನಿ ತೇಜಸ್ವಿನಿ ”ನಮ್ಮ ಮನೆಗೂ ನನ್ನ ಗಂಡ ಬಂದಿಲ್ಲ. ಇದೊಂದು ಪತ್ರ ಬರೆದು ಹೊರಟು ಹೋಗಿದ್ದಾರೆʼʼ ಎಂದು ಹೇಳಿದ್ದರು.

ಪತ್ರದಲ್ಲಿ ಏನಿದೆ?

ಪ್ರೀತಿಯ ತೇಜಸ್ವಿನಿಗೆ, ಮೊದಲನೆದಾಗಿ ದಯವಿಟ್ಟು ನನ್ನನ್ನು ಕ್ಷಮಿಸು. ನಾನು ನನ್ನ ವೈಯಕ್ತಿಕ ವ್ಯವಹಾರಕ್ಕಾಗಿ ತುಂಬಾ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದ ಪರಿಸ್ಥಿತಿಗೆ ಬಂದು ತಲುಪಿದ್ದೇನೆ. ನನ್ನ ಈ ಕೆಲಸದಿಂದ ನಾನು ಯಾರಿಗೂ ಮುಖ ತೋರಿಸಲಾಗದ ಪರಿಸ್ಥಿತಿಯಲ್ಲಿದ್ದೇನೆ. ಆದ ಕಾರಣ ನಾನು ಎಲ್ಲೋ ಕಷ್ಟಪಟ್ಟು ದುಡಿದು ವಾಪಸ್ಸು ಬಂದು ಸಾಲ ತೀರಿಸಿ, ನನಗಂಟಿರುವ ಕಳಂಕ ಹೋಗಲಾಡಿಸಿ ಮತ್ತೆ ಧೈರ್ಯವಾಗಿ ತಲೆಯತ್ತಿ ಎಲ್ಲರ ಮುಂದೆ ಜೀವನ ನಡೆಸಬೇಕೆಂದುಕೊಂಡಿದ್ದೇನೆ. ಅಲ್ಲಿಯವರಿಗೆ ನಿಮ್ಮ ಎದುರಿಗೆ ಬರುವ ಶಕ್ತಿ ನನಗಿಲ್ಲ. ನನ್ನನ್ನು ಯಾವುದೇ ಕಾರಣಕ್ಕೂ ಹುಡುಕುವ ಪ್ರಯತ್ನ ಮಾಡಬೇಡಿ. ನನ್ನ ಸಮಸ್ಯೆಯಿಂದ ನಿನ್ನನ್ನು, ಮಗನನ್ನು ಹಾಗೂ ಮನೆಯವರನ್ನೂ ಬಿಟ್ಟು ಹೋಗುವ ಪರಿಸ್ಥಿತಿ ಬಂದೊದಗಿದೆ. ದಯವಿಟ್ಟು ನನ್ನನ್ನು ಕ್ಷಮಿಸುʼʼ ಎಂದು ಬರೆದಿದ್ದರು.

ಇದೀಗ ರೇಣುಕಾ ಸ್ವಾಮಿ ಪ್ರಕರಣ ಹೊರಬಂದ ಬಳಿಕ ಮಲ್ಲಿ ಕುರಿತು ಸಹ ಪ್ರಶ್ನೆಗಳು ಎದ್ದಿವೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿವೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.2018ರ ಬಳಿಕ ಮಲ್ಲಿ ಅಚಾನಕ್ಕಾಗಿ ಕಾಣೆಯಾದರು. ಅಂದಿನಿಂದ ಈ ವರೆಗೆ ಮಲ್ಲಿ ಎಲ್ಲಿದ್ದಾರೆಂಬುದು ಯಾರಿಗೂ ಗೊತ್ತಿಲ್ಲ.

Continue Reading

ಸ್ಯಾಂಡಲ್ ವುಡ್

Duniya Vijay: ಗಂಡ ಕೈಬಿಟ್ರೂ, ನಂಬಿದ ದೇವರು ಕೈ ಬಿಡಲಿಲ್ಲ: ದುನಿಯಾ ವಿಜಯ್ ಪತ್ನಿ ನಾಗರತ್ನ

Duniya Vijay: ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.ದೀಗ ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ʻಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲʼಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Duniya Vijay wife Nagarathna Facebook Post After Court Order
Koo

ಬೆಂಗಳೂರು: ನಟ ದುನಿಯಾ ವಿಜಯ್ (Duniya Vijay) ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದರು. 2018ರಲ್ಲಿಯೇ ಅರ್ಜಿ ಸಲ್ಲಿಸಲಾಗಿದ್ದು, ಈಗ ವಜಾ ಆಗಿದೆ. ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್‌ ದೂರವಾಗಿದ್ದಾರೆ. ಇದೀಗ ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ʻಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲʼಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಾಗರತ್ನ ಪೋಸ್ಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ. ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ. ನನ್ನ ಪತಿ ವಿಜಯ್ ಅವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ. ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ. ಇದು ನನ್ನ ಜಯ ಎನ್ನುವುದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋದು ನಿಜ. ಏಕೆಂದರೆ ನನಗೆ, ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ. ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು. ಅವರೇ ನಿನಗೆ ಎಲ್ಲಾ ಎಂದಿದ್ದರು. ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು. ಅದನ್ನೇ ಪಾಲಿಸಿಕೊಂಡು ಹೋಗುವಳು. ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ. ನನ್ನ ಜೀವ ಇರುವವರೆಗೂ ಅವರ ಜತೆಯಲ್ಲೇ ಇದ್ದು ಸಾಯುತ್ತೇನೆ. ನಮ್ಮ ಕಾನೂನಿನ ಪ್ರಕಾರ ವಿಚ್ಛೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು. ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ. ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ. ದಯವಿಟ್ಟು ಮಾದ್ಯಮ ಮಿತ್ರರಿಗೆ ಕೇಳಿಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿ ಅವರನ್ನು ಎರಡನೇ ಹೆಂಡತಿ ಎಂದು ದಯವಿಟ್ಟು ಪ್ರಸಾರ ಮಾಡಬೇಡಿ. ನಮ್ಮ ಸಂಸಾರ ಚೆನ್ನಾಗಿರಲಿ ಎಂದು ಹಾರೈಸಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

ಈಗಾಗಲೇ ದುನಿಯಾ ವಿಜಯ್ ಪರ ವಕೀಲೆ ರಾಜ ರಾಜೇಶ್ವರಿ ಮಾಧ್ಯಮದ ಮುಂದೆ ಈ ಬಗ್ಗೆ ಮಾತನಾಡಿ ʻʻಅರ್ಜಿ ವಜಾ ಆಗಿದೆ. ವಿಜಯ್ ಅವರನ್ನು ಸಂಪರ್ಕ ಮಾಡಿ ಮುಂದೆ ಏನು ಮಾಡಬೇಕು ಎಂದು ಹೇಳುತ್ತೇವೆ. ವಿಜಯ್ ಅವರು ಶೂಟಿಂಗ್‌ನಲ್ಲಿ ಇದ್ದಾರೆ. ವಿಜಯ್ ಅವರಿಗೆ ಈ ಬಗ್ಗೆ ಇನ್ನೂ ಹೇಳಿಲ್ಲ. ಮಕ್ಕಳ ಫ್ಯೂಚರ್ ದೃಷ್ಟಿಯಿಂದ ಮಾತಾಡಿ ಹೇಳುತ್ತೇವೆ. ಇದು ಇಲ್ಲಿಗೆ ಮುಗಿದಿಲ್ಲ. ಹೈಕೋರ್ಟ್‌ಗೆ ಹೋಗಬೇಕಾ ಎನ್ನುವುದರ ಬಗ್ಗೆ ವಿಜಯ್ ಅವರ ಜತೆ ಚರ್ಚೆ ಮಾಡಿ ಹೇಳುತ್ತೇವೆʼʼಎಂದಿದ್ದರು.

ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.

2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್‌ ಅವರು ‘ನಾಗರತ್ನ ಜತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಜತೆಗೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದಿದ್ದರು. ಆದರೆ ನಾಗರತ್ನ ಮಾತ್ರ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ಹೇಳುತ್ತಿದ್ದರಂತೆ.

ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ

ಎಲ್ಲರಿಗೂ ತಿಳಿದಿರುವಂತೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಮಧ್ಯೆ ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿ, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದರು. ಆದರೆ , ಅಂತಿಮ ಕ್ಷಣದಲ್ಲಿ ಇಬ್ಬರು ಒಪ್ಪಂದ ಮಾಡಿಕೊಂಡು ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan : Boss ನಿಮ್ಮನ್ನ ಈ ರೀತಿ ನೋಡೊಕೆ ಆಗ್ತಿಲ್ಲ; ಬಿಕ್ಕಿ ಬಿಕ್ಕಿ ಅತ್ತ ದರ್ಶನ್​ ಮಹಿಳಾ ಅಭಿಮಾನಿ!

VISTARANEWS.COM


on

Actor Darshan case support by women fan and she cry
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಬಗ್ಗೆ ದರ್ಶನ್ (Darshan) ನನಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ ದರ್ಶನ್‌ (Actor Darshan ) . ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದಾರೆ. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಹಾಗೂ ದರ್ಶನ್ ಎ2 ಆರೋಪಿ ಆಗಿದ್ದು. 17 ಮಂದಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಪ್ರಕರಣ ಬಯಲಾದ ನಂತರ ದರ್ಶನ್​ ಕ್ರಿಮಿನಲ್ ಬುದ್ಧಿಯ ಪ್ರಕರಣಗಳು ಒಂದೊಂದಾಗಿ ಹೊರಕ್ಕೆ ಬರುತ್ತಿದೆ. ಹೀಗಿದ್ದರೂ ದಚ್ಚು ಅಭಿಮಾನಿಗಳು ʻʻದರ್ಶನ್‌ ಕಂಡರೆ ಆಗದವರು ಮಾಡಿರುವ ಕೆಲಸ, ಅವರ ಏಳಿಗೆ ಸಹಿಸದವರು ಮಾಡುತ್ತಿರುವ ಈ ರೀತಿ ಅವರಿಗೆ ತೊಂದರೆ ನೀಡುತ್ತಿದ್ದಾರೆ. ಬಾಸ್‌ ಜತೆ ನಾವಿದ್ದೇವೆʼʼಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ ʻದಾಸʼನ ಕಷ್ಟ ಕಂಡು ಕಣ್ಣೀರಿಡುತ್ತಿದ್ದಾರೆ.

ಇದೀಗ ಮಹಿಳಾ ಅಭಿಮಾನಿ ಒಬ್ಬರು ವಿಡಿಯೊ ಮೂಲಕ ಕಣ್ಣಿರು ಹಾಕಿರುವ ವಿಡಿಯೊ ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ಮಹಿಳಾ ಅಭಿಮಾನಿ ʻʻನೀವು ಅಪರಾಧಿನೋ, ನಿರಾಪರಾಧಿನೋ ಗೊತ್ತಿಲ್ಲ. ಆದರೆ ನಿಮ್ಮನ್ನು ಈ ಸ್ಥಿತಿಯಲ್ಲಿ ನೋಡೊದು ತುಂಬ ಕಷ್ಟ ಆಗ್ತಿದೆ. ಆದರೆ ನಿಮ್ಗೆ ಯಾವುದೆ ಕಷ್ಟ ಬಂದ್ರು ನಿಮ್ಮ ಜತೆ ಯಾವಗ್ಲೂ ಇರುತ್ತೇವೆʼʼಎಂದು ಬಿಕ್ಕಿ ಬಿಕ್ಕಿ ಅತ್ತು ಹೇಳಿಕೊಂಡಿದ್ದಾರೆ. ಇನ್ನು ಕೆಲವರು ಸೋಷಿಯಲ್‌ ಮೀಡಿಯಾ ಮೂಲಕ ದರ್ಶನ್‌ ಅವರಿಗೆ ಕ್ಲಾಸ್‌ ತೆಗದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ಸೋದರ ಮಾವಂದಿರನ್ನೇ ಬೀದಿಪಾಲು ಮಾಡಿದ್ದ ದರ್ಶನ್​, ಒಂದೊಂದಾಗಿ ಹೊರಬರುತ್ತಿದೆ ‘ದಾಸ’ನ ದುರ್ಬುದ್ಧಿ !

https://twitter.com/ShSandeepa/status/1801435837898625429
https://twitter.com/AmruthBe/status/1800872567982751908

ದರ್ಶನ್ ಅವರು ಕೊಲೆ ಕೇಸ್​​ನಲ್ಲಿ ಜೈಲು ಸೇರಿದ್ದಾರೆ. ಈಗಾಗಲೇ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಳ್ಳುವ ಹಂತ ತಲುಪಿದೆ. ದರ್ಶನ್ ತಮಗೆ ಇರುವ ಪ್ರಭಾವ ಬಳಸಿಕೊಂಡು ಹೊರಗೆ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದ ಅವರು ಕಂಗಾಲಾಗಿದ್ದಾರೆ.

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ ಸ್ಥಿತಿ ಗಂಭೀರವಾಗಿತ್ತು. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ರೇಣುಕಾಸ್ವಾಮಿಗೆ ಒದ್ದಿರುವುದು ನಿಜ ಎಂಬುದಾಗಿ ವಿಚಾರಣೆ ವೇಳೆ ದರ್ಶನ್‌ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಸೋದರ ಮಾವಂದಿರನ್ನೇ ಬೀದಿಪಾಲು ಮಾಡಿದ್ದ ದರ್ಶನ್​, ಒಂದೊಂದಾಗಿ ಹೊರಬರುತ್ತಿದೆ ‘ದಾಸ’ನ ದುರ್ಬುದ್ಧಿ !

VISTARANEWS.COM


on

Actor Darshan his brother-in-law homeless
Koo

ಬೆಂಗಳೂರು: ನಟ ದರ್ಶನ್‌ (Actor Darshan) ರೇಣುಕಾಸ್ವಾಮಿ ಹತ್ಯೆ ಸಂಬಂಧ ಕಂಬಿ ಎಣಿಸುತ್ತಿದ್ದಾರೆ. ಇದಾದ ಬಳಿಕ ದರ್ಶನ್‌ ಅವರ ಹಲವು ಕೃತ್ಯಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತಿದೆ. ಇದೀಗ ದರ್ಶನ್‌ ತಾನು ಹುಟ್ಟಿ ಬೆಳದ ಊರಿನಲ್ಲಿ ತಮ್ಮ ಸಂಬಂಧಿಕರನ್ನೇ ಬೀದಿಪಾಲು ಮಾಡಿದ ಕೃತ್ಯ ರಿವೀಲ್‌ ಆಗಿದೆ. ಮಾಧ್ಯಮದವೊಂದು ವರದಿ ಮಾಡಿದಂತೆ ದರ್ಶನ್‌ ಹುಟ್ಟಿ ಬೆಳೆದ ತವರು ಮನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ. ಅಜ್ಜಿ-ತಾತನ ಮನೆಯನ್ನು ಸ್ವತಃ ದರ್ಶನ್ ಮತ್ತು ತಾಯಿ ಮೀನಾ ಕೆಡವಿ ನೆಲಸಮಗೊಳಿಸಿ ಸೋದರ ಮಾವಂದಿರನ್ನು ಬೀದಿಪಾಲು ಮಾಡಿದ್ದಾರಂತೆ. ಆಸ್ತಿ ವಿಚಾರವಾಗಿ ಸೋದರ ಮಾವಂದಿರ ಜೊತೆ ಗಲಾಟೆ ಮಾಡಿಕೊಂಡಿದ್ದ ದರ್ಶನ್ ಮತ್ತು ತಾಯಿ ಮೀನಾ ಸೇರಿ ನೆಲಸಮ ಮಾಡಿದ್ದಾರೆ. ಈ ಪ್ರಕರಣದ ಕಳೆದ 10 ವರ್ಷಗಳ ಹಿಂದೆ ನಡೆದಿದ್ದು, ಈಗಲೂ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.

ದರ್ಶನ್‌ ವಿರುದ್ಧ ಹತ್ತು ಹಲವು ಕೇಸ್‌ಗಳು ಇವೆ ಎನ್ನಲಾಗುತ್ತಿದೆ. ಕೇವಲ ಹೊರಗೆ ಮಾತ್ರವಲ್ಲ ಸಂಬಂಧಿಕರಿಗೂ ವಿಕೃತಿ ಮೆರೆದಿದ್ದಾರೆ ದಾಸ.

ತಂದೆ , ತಾಯಿ ಊರಿನಲ್ಲಿಯೂ ವಿಲನ್‌ ಆಗಿಯೇ ಅಬ್ಬರಿಸಿದ್ದಾರೆ ಅವರು. ಇದೀಗ ಹೊಸ ಮಾಹಿತಿ ಪ್ರಕಾರ ದರ್ಶನ್‌ ಅವರು ಆಸ್ತಿ ವಿಚಾರಕ್ಕಾಗಿ ಸೋದರ ಮಾವಂದಿರನ್ನು ಬೀದಿಪಾಲು ಮಾಡಿದ್ದಾರಂತೆ.. ಈ ಬಗ್ಗೆ ದರ್ಶನ್ ವಿರುದ್ಧ ಸ್ವತಃ ಅವರ ಸೋದರ ಮಾವ ಟಿ.ಎಲ್. ಶ್ರೀನಿವಾಸ್ ಮಾಧ್ಯಮವೊಂದಕ್ಕೆ ಮಾತನಾಡಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Actor Darshan: ಇದು ರೌಡಿಸಂ ಸೆಂಟರ್‌ ಅಲ್ಲ; ನಿಜ ಆಗ್ತಾ ಇದೆಯಾ ಅಂದು ಜಗ್ಗೇಶ್‌ ನುಡಿದಿದ್ದ ಭವಿಷ್ಯ?

ʻʻದರ್ಶನ್‌ ಅವರನ್ನು ನಾವು ಎತ್ತಿ ಆಡಿಸಿದವರು. ಆದರೆ ಈಗ ಜೈಲು ಸೇರಿದ್ದಾನೆ. ಕೊಲೆ ಕೇಸ್‌ನಲ್ಲಿ ಭಾಗಿಯಾಗಿರುವುದು ಬೇಸರ ಆಗಿದೆ. ಈ ಹಿಂದೆ ನಮ್ಮ ಮನೆಯ ಆಸ್ತಿ ವಿಚಾರಕ್ಕೂ ಗಲಾಟೆ ಮಾಡಿದ್ದ. ಮಾತುಕತೆಯಲ್ಲಿ ಬಗೆಹರಿಸಿಕೊಳ್ಳಬೇಕಾದ ವಿಚಾರವನ್ನು ದೊಡ್ಡದ್ದು ಮಾಡಿ ನಮ್ಮನ್ನು ಬೀದಿ ಪಾಲು ಮಾಡಿದರು. ಮನಯನ್ನೇ ಕೊನೆಗೆ ನೆಲಸಮ ಮಾಡಿದರು. ನಾವು ಆ ಬಳಿಕ ದರ್ಶನ್‌ ಜತೆ ಸಂಪರ್ಕದಲ್ಲಿ ಇರಲಿಲ್ಲ. ಯಾವಾಗ ಪತ್ನಿ ಜತೆ ಜಗಳವಾಡಿ ಕೇಸ್‌ ದಾಖಲಾಯ್ತೋ ಹೋಗಿ ಸಂಧಾನ ಮಾಡಿ ಬಂದೆವು. ಇದಾದ ನಂತರ ಅವರ ಬಳಿ ಹೋಗಿರಲಿಲ್ಲ. ಈಗ ರೇಣುಕಾಸ್ವಾಮಿ ಎನ್ನುವವರನ್ನು ಕೊಲೆ ಮಾಡಿ ಜೈಲು ಸೇರಿರುವುದು ನೋವಿನ ಸಂಗತಿಯಾಗಿದೆ. ಇನ್ನು ದರ್ಶನ್‌ ತಾಯಿ ಜತೆ ಕೂಡ ಸರಿಯಾಗಿ ಮಾತನಾಡುತ್ತಿರಲಿಲ್ಲ. ದರ್ಶನ್ ನಿರಪರಾಧಿ ಎಂದು ಸಾಬೀತಾಗಿ ಹೊರ ಬರುತ್ತಾರೆ ಎಂಬ ನಂಬಿಕೆಯಿದೆ. ಮುಂದೆ ಆದರೂ ಒಳ್ಳೆಯ ದಾರಿಯಲ್ಲಿ ಸಾಗಲಿʼʼಎಂದು ಹೇಳಿದರು.

ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

ರೇಣುಕಾ ಸ್ವಾಮಿ ಕೊಲೆ ವಿಚಾರದಲ್ಲಿ ದರ್ಶನ್‌ ಹಾಗೂ ಗ್ಯಾಂಗ್‌ ಈಗಾಗಲೇ ಅರೆಸ್ಟ್‌ ಆಗಿದೆ. ಇದೀಗ ನಟ ದರ್ಶನ್ (Actor Darshan) ಮತ್ತು ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಬಯಲಾಗಿದೆ. 10 ವರ್ಷಗಳ ಹಿಂದೆ, ಪರಿಹಾರ ಕೇಳಲು ಹೋಗಿದ್ದ ಕೂಲಿ ಕೆಲಸಗಾರನ ಮೇಲೆ ನಾಯಿ ಛೂ ಬಿಟ್ಟು ವಿಕೃತಿ ಮೆರೆದಿದ್ದರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಎಂಬುವರು 10 ವರ್ಷಗಳ ಹಿಂದೆ ಪರಿಹಾರ ಕೇಳಲು ಹೋಗಿ ಕಣ್ಣು ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಈ ರೀತಿ ವಿಕೃತಿ ತೋರಿಸಲಾಗಿತ್ತು ಎನ್ನಲಾಗಿದೆ.

ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ

ಮತ್ತೊಂದು ಪ್ರಕರಣದಲ್ಲಿ ಕೊಡಗಿನ ಹೋಂ ಸ್ಟೇ ಒಂದರಲ್ಲಿ ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಕೊಡಗು ಜಿಲ್ಲೆಯ ಹೊಂ ಸ್ಟೇ ಯಲ್ಲಿ ಕೆಲವು ವರ್ಷಗಳ ಹಿಂದೆ ಘಟನೆ ನಡೆದಿತ್ತು. ನಟ ದರ್ಶನ್ ಸ್ನೇಹಿತರ ಜತೆ ಹೋಂ ಸ್ಟೇ ಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಹೋಂ ಸ್ಟೇಯಲ್ಲಿ ಕೆಲಸ ಮಾಡುವ ಮಹಿಳೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.

Continue Reading
Advertisement
NEET UG 2024
ಶಿಕ್ಷಣ4 mins ago

NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

Union Food and Consumer Affairs Minister Pralhad Joshi latest statement
ಕರ್ನಾಟಕ5 mins ago

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Aliens
ವಿಜ್ಞಾನ15 mins ago

Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

Actress Siri marriage to actor prabhakar
ಬಿಗ್ ಬಾಸ್16 mins ago

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Yusuf Pathan
ಕ್ರೀಡೆ29 mins ago

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Pradeep Eshwar
ಪ್ರಮುಖ ಸುದ್ದಿ32 mins ago

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

OTT Release
Latest34 mins ago

OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

Actor Darshan Assistant Malli missing case
ಸ್ಯಾಂಡಲ್ ವುಡ್40 mins ago

Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

V Somanna
ಪ್ರಮುಖ ಸುದ್ದಿ52 mins ago

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Self Harming
ಉತ್ತರ ಕನ್ನಡ55 mins ago

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌