Actor Ramcharan Game Changer First Look Actor Ramcharan: `ಗೇಮ್ ಚೇಂಜರ್‌' ಸಿನಿಮಾದಲ್ಲಿ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡ ರಾಮ್‌ಚರಣ್‌ - Vistara News

South Cinema

Actor Ramcharan: `ಗೇಮ್ ಚೇಂಜರ್‌’ ಸಿನಿಮಾದಲ್ಲಿ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡ ರಾಮ್‌ಚರಣ್‌

ರಾಮ್‌ಚರಣ್‌ (Actor Ramcharan) ಅವರ ಜನುಮದಿನದಂದು ಸಿನಿಮಾ ಟೈಟಲ್‌ ಅನೌನ್ಸ್‌ ಮಾಡಿದ ಬೆನ್ನಲ್ಲೇ ಇದೀಗ ಫಸ್ಟ್‌ ಲುಕ್‌ ಹಂಚಿಕೊಂಡಿದೆ. ಪೋಸ್ಟ್‌ರ್‌ನಲ್ಲಿ ನಟ ಬೈಕ್‌ನಲ್ಲಿ ಕುಳಿತುಕೊಂಡಿದ್ದು, ಸ್ಟೈಲಿಶ್‌ ಜತೆ ರಗಡ್‌ ಲುಕ್‌ನಲ್ಲಿ ಮಿಂಚಿದ್ದಾರೆ.

VISTARANEWS.COM


on

Actor Ramcharan Game Changer First Look
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಗೇಮ್ ಚೇಂಜರ್‌ʼ ಚಿತ್ರತಂಡ ರಾಮ್‌ಚರಣ್‌ (Actor Ramcharan) ಅವರ ಜನುಮದಿನದಂದು ಸಿನಿಮಾ ಟೈಟಲ್‌ ಅನೌನ್ಸ್‌ ಮಾಡಿದ ಬೆನ್ನಲ್ಲೇ ಇದೀಗ ಫಸ್ಟ್‌ ಲುಕ್‌ ಹಂಚಿಕೊಂಡಿದೆ. ಪೋಸ್ಟ್‌ರ್‌ನಲ್ಲಿ ನಟ ಬೈಕ್‌ನಲ್ಲಿ ಕುಳಿತುಕೊಂಡಿದ್ದು, ಸ್ಟೈಲಿಶ್‌ ಜತೆ ರಗಡ್‌ ಲುಕ್‌ನಲ್ಲಿ ಮಿಂಚಿದ್ದಾರೆ.

ರಾಮ್‌ಚರಣ್‌ ತಮ್ಮ ಮುಂಬರುವ ಚಿತ್ರ ಗೇಮ್ ಚೇಂಜರ್‌ ಫಸ್ಟ್‌ ಲುಕ್‌ ಹಂಚಿಕೊಂಡು ʻʻನಾನು ಇದಕ್ಕಿಂತ ಉತ್ತಮವಾದ ಹುಟ್ಟುಹಬ್ಬದ ಉಡುಗೊರೆಯನ್ನು ಕೇಳಲು ಸಾಧ್ಯವಾಗಲಿಲ್ಲ. ಗೇಮ್‌ ಚೇಂಜರ್ ಚಿತ್ರತಂಡಕ್ಕೆ. ಧನ್ಯವಾದಗಳು, ಶಂಕರ್‌ ಅವರಿಗು ಕೂಡʼʼಎಂದು ಬರೆದುಕೊಂಡಿದ್ದಾರೆ.

ರಾಮ್‌ಚರಣ್‌ ಟ್ವೀಟ್‌

ಮಾರ್ಚ್‌ 27ರ ಬೆಳಗ್ಗೆ RC 15 ಗೇಮ್ ಚೇಂಜರ್‌ ಎಂದು ಶಿರ್ಷಿಕೆ ಅನಾವರಣ ಮಾಡಿದೆ. ಚಿತ್ರತಂಡ ಟೈಟಲ್‌ ಟೀಸರ್‌ ಕೂಡ ಹಂಚಿಕೊಂಡಿದೆ. 2019 ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ : Actor Ramcharan: RC15 ಟೈಟಲ್‌ ರಿವೀಲ್‌: ಜನುಮದಿನದಂದೇ ಗುಡ್‌ನ್ಯೂಸ್‌ ಕೊಟ್ಟ ರಾಮ್‌ಚರಣ್‌

ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

VISTARANEWS.COM


on

Actor Darshan devil 22 crore taken by producer
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್‌ ಅವರನ್ನು (Actor Darshan) ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.  ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ. ಇದೀಗ ದರ್ಶನ್‌ ಡೆವಿಲ್‌ ಸಿನಿಮಾಗಾಗಿ 22 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು. ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾಗೆ ದರ್ಶನ್‌ ಬರೋಬ್ಬರಿ 22 ಕೋಟಿ ರೂ. ಪಡೆದುಕೊಂಡಿದ್ದರು.

ಟೀಸರ್ ನಿಂದಲೇ ಕೌತುಕ ಹುಟ್ಟಿಸಿದ ಡೆವಿಲ್ ಸಿನಿಮಾ ಕೇವಲ 25 ದಿನ ಶೂಟಿಂಗ್ ಆಗಿದೆ. ಮೊದಲ ಶೆಡ್ಯೂಲ್ ಚಿತ್ರೀಕರಣದ ವೇಳೆ ದರ್ಶನ್ ಆಕ್ಷನ್ ಸಿಕ್ವೇನ್ಸ್ ಮಾಡೋದಿಕ್ಕೆ ಹೋಗಿ ಎಡಗೈಯಿ ಮುರಿದುಕೊಂಡರು. ಹೀಗಾಗಿ ದಾಸ ಶಸ್ತ್ರ ಚಿಕಿತ್ಸೆಗೆ ಒಳಗಾದ ಕಾರಣ ಈ ಸಿನಿಮಾ ಶೂಟಿಂಗ್ ಮುಂದಕ್ಕೆ ಹಾಕಲಾಗಿತ್ತು. ಈ ಘಟನೆ ನಡೆಯುವ ಎರಡು ದಿನದ ಹಿಂದೆ ಡೆವಿಲ್ ಚಿತ್ರದ ಎರಡನೇ ಹಂತದ ಶೂಟಿಂಗ್ ಆರಂಭವಾಗಿತ್ತು. ನಿನ್ನೆ ದರ್ಶನ್ ಭಾಗವಹಿಸಬೇಕಿತ್ತು ಅಷ್ಟರಲ್ಲಿ ಡಿ ಬಾಸ್ ಪೊಲೀಸರ ಅತಿಥಿಯಾಗಿದ್ದರು.

ಇದನ್ನೂ ಓದಿ: Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

ಈ ಕಡೆ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂಬ ಸುದ್ದಿ ಕೇಳಿದ ತಕ್ಷಣ ನಿರ್ದೇಶಕ ಪ್ರಕಾಶ್ ಶಾಕ್‌ಗೆ ಒಳಗಾಗಿ ನಿನ್ನೆ ಶೂಟಿಂಗ್‌ವನ್ನು ಸ್ಟಾಪ್ ಮಾಡಿದ್ದಾರೆ ಎನ್ನಲಾಗಿದೆ. ಡೆವಿಲ್ ಚಿತ್ರವನ್ನ ಡಿಸೆಂಬರ್ 25ಕ್ಕೆ ಬಿಡುಗಡೆ ಮಾಡುತ್ತೇವೆ ಎಂದ ನಿರ್ದೇಶಕ ಪ್ರಕಾಶ್ ಕಂಗಾಲು ಆಗಿದ್ದಾರೆ. ಕಾರಣ ದರ್ಶನ್ ಹೊರಗಡೆ ಬರುವರೆಗೆ ಡೆವಿಲ್ ಹೀರೋ ಸಿನಿಮಾ ಶೂಟಿಂಗ್ ಶುರುವಾಗೋದಿಲ್ಲ. ಹಾಗೇ ಡಿಸೆಂಬರ್ ನಲ್ಲಿ ಡೆವಿಲ್ ಚಿತ್ರ ಬಿಡುಗಡೆ ಇಲ್ಲದೆ ಮುಂದಿನ ವರ್ಷಕ್ಕೆ ಹೋಗುತ್ತೆ. ಅಷ್ಟಕ್ಕೂ ದರ್ಶನ್ ಸಿನಿಮಾಗೆ ತೆಗೆದುಕೊಂಡಿರುವ ಸಂಭಾವನೆ ಬರೋಬ್ಬರಿ 22 ಕೋಟಿ ರೂ. ಎನ್ನಲಾಗಿದೆ ಡೆವಿಲ್ ಚಿತ್ರದ ಬಳಿಕ ದರ್ಶನ್ ನಟಿಸಲು ಒಪ್ಪಿಕೊಂಡ ಚಿತ್ರ ಸಿಂಧೂರ ಲಕ್ಷ್ಮಣ.

ಕ್ರಾಂತಿ ಸಿನಿಮಾ ಮಾಡಿದ್ದ ನಿರ್ಮಾಪಕ ಬಿ ಸುರೇಶ್ ನಿರ್ಮಾಣದ ಹಾಗು ತರುಣ್ ಸುಧೀರ್ ನಿರ್ದೇಶನದ ಸಿಂಧೂರು ಲಕ್ಷ್ನಣ ಸಿನಿಮಾ ಶುರುವಾಗಬೇಕಿತ್ತು. ಆದರೆ ದರ್ಶನ್ ಎಡವಟ್ಟಿನಿಂದ ಸಿಂಧೂರ ಲಕ್ಷ್ಮಣ ಸಿನಿಮಾ ಶೂಟಿಂಗ್ ಕೂಡ ಮುಂದಿನ ವರ್ಷಕ್ಕೆ ಹೋಗಲಿದೆ. ಈ ಸಿನಿಮಾ ದರ್ಶನ್ ಪಡೆದಿರೋ ಅಡ್ವಾನ್ಸ್ 3 ಕೋಟಿ ರೂ. ಯಂತೆ.

ಈ ಚಿತ್ರದ ಮಧ್ಯೆ ದರ್ಶನ್ ಮತ್ತೊಂದು ಬಿಗ್ ಬಜೆಟ್ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದರು. ಅದು ಜೋಗಿ ಪ್ರೇಮ್ ನಿರ್ದೇಶನದ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೋಡಕ್ಷನ್ ದರ್ಶನ್ ಬಹುಕೋಟೆ ವೆಚ್ಚದ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಡ್ವಾನ್ಸ್ ಹಣ ಎಂದು ದರ್ಶನ್ 3 ರಿಂದ 5 ಕೋಟಿ ಪಡೆದಿದ್ದಾರೆ ಎನ್ನುವುದು ಗಾಂಧಿನಗರದ ಮಾತು.

ಈ ಪ್ರಾಜೆಕ್ಟ್ ಮುಗಿದ ಮೇಲೆ ದರ್ಶನ್ ಮತ್ತೆ ಜಗ್ಗುದಾದ ಸಿನಿಮಾ ನಿರ್ದೇಶಕರಾದ ರಾಘವೇಂದ್ರ ಹೆಗ್ಡೆ ಜೊತೆ ಸಿನಿಮಾ ಮಾಡ್ತಾ ಇದ್ದಾರೆ.‌ ಸಿಂಧೂರ ಲಕ್ಷ್ಮಣ ಚಿತ್ರ ಶೂಟಿಂಗ್ ಮುಗಿದ ಬಳಿಕ ಈ ಚಿತ್ರದ ಸ್ಟಾರ್ ಆಗೋದು ಬಹುಶಃ 2025ನೇ ವರ್ಷದ ಅಂತ್ಯದಲ್ಲಿ. ಈ ಚಿತ್ರಕ್ಕೆ ದರ್ಶನ್ ಮುಂಗಡ ಹಣ ಎಂದು 5 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಈ ಚಿತ್ರಗಳ ಬಳಿಕ ದರ್ಶನ್ ತೆಲುಗಿನ ಅತ್ತಾರಿಂಟಿಕಿ ದಾರೇದಿ ಚಿತ್ರದ ನಿರ್ಮಾಪಕರಾದ ಬಿ.ವಿ.ಎಸ್. ಎನ್ ಪ್ರಸಾದ್ ಜೊತೆ ಸಿನಿಮಾ ಮಾತಕಥೆ ಆಗಿ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ಈ ಸಿನಿಮಾ ಶುರುವಾಗೋದಿಕ್ಕೆ ಇನ್ನು ಒಂದು ವರ್ಷ ಆಗುತ್ತೆ. ಇದರ ಜತೆಗೆ ತಮಿಳು ನಿರ್ಮಾಪಕ ರಮೇಶ್ ಪಿಳ್ಳೈ ಜೊತೆ ಚಿತ್ರ ಮಾಡುವುದಾಗಿ ದರ್ಶನ್ ಮಾತುಕತೆ ಆಗಿತ್ತು. ಈ ಸಿನಿಮಾ ಮಾಡುವುದಾಗಿ ಅಡ್ವಾನ್ಸ್ ಹಣ ಅಂತಾ 25 ಲಕ್ಷ ಪಡೆದಿದ್ದರಂತೆ‌. ಹಾಗೇ ಮತ್ತೊಬ್ಬ ಹೈದರಾಬಾದ್ ನಿರ್ಮಾಪಕ ರಘುನಾಥ್ ಎಂಬುವರ ಜತೆ ಸಿನಿಮಾ ಮಾತುಕತೆ ಆಗಿದೆ‌. ಈ ಚಿತ್ರಕ್ಕೂ ದರ್ಶನ್ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ಇದೀಗ ದರ್ಶನ್‌ ಅವರನ್ನು ನಂಬಿಕೊಂಡು ಸಿನಿಮಾಗಳಿಗೆ ಈಗಾಗಲೇ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿರುವ ನಿರ್ಮಾಪಕರ ಗತಿ ಏನು? ಹಾಗೇ ಸಿನಿಮಾಗಳೆ ಬರುತ್ತಿಲ್ಲ ಎಂಬ ಗಾಸಿಪ್‌ಗಳ ಮಧ್ಯೆ ವರ್ಷಕ್ಕೆ ಒಂದೆರಡು ಸಿನಿಮಾ ಮಾಡುತ್ತಿದ್ದ ದರ್ಶನ್‌ ಜೈಲು ಪಾಲಾದರೆ ಏನು ಕಥೆ? ಎಂದು ಫ್ಯಾನ್ಸ್‌ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Duniya Vijay: ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ.ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

VISTARANEWS.COM


on

Duniya Vijay divorce filed was dismissed
Koo

ಬೆಂಗಳೂರು: ನಟ ದುನಿಯಾ ವಿಜಯ್ (Duniya Vijay) ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದರು. 2018ರಲ್ಲಿಯೇ ಅರ್ಜಿ ಸಲ್ಲಿಸಲಾಗಿದ್ದು, ಈಗ ವಜಾ ಆಗಿದೆ. ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್‌ ದೂರವಾಗಿದ್ದಾರೆ. ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

ದುನಿಯಾ ವಿಜಯ್ ಪರ ವಕೀಲೆ ರಾಜ ರಾಜೇಶ್ವರಿ ಮಾಧ್ಯಮದ ಮುಂದೆ ಈ ಬಗ್ಗೆ ಮಾತನಾಡಿ ʻʻಅರ್ಜಿ ವಜಾ ಆಗಿದೆ. ವಿಜಯ್ ಅವರನ್ನು ಸಂಪರ್ಕ ಮಾಡಿ ಮುಂದೆ ಏನು ಮಾಡಬೇಕು ಎಂದು ಹೇಳುತ್ತೇವೆ. ವಿಜಯ್ ಅವರು ಶೂಟಿಂಗ್‌ನಲ್ಲಿ ಇದ್ದಾರೆ. ವಿಜಯ್ ಅವರಿಗೆ ಈ ಬಗ್ಗೆ ಇನ್ನೂ ಹೇಳಿಲ್ಲ. ಮಕ್ಕಳ ಫ್ಯೂಚರ್ ದೃಷ್ಟಿಯಿಂದ ಮಾತಾಡಿ ಹೇಳುತ್ತೇವೆ. ಇದು ಇಲ್ಲಿಗೆ ಮುಗಿದಿಲ್ಲ. ಹೈಕೋರ್ಟ್‌ಗೆ ಹೋಗಬೇಕಾ ಎನ್ನುವುದರ ಬಗ್ಗೆ ವಿಜಯ್ ಅವರ ಜತೆ ಚರ್ಚೆ ಮಾಡಿ ಹೇಳುತ್ತೇವೆʼʼಎಂದರು.

ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.

ಇದನ್ನೂ ಓದಿ: Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್‌ ಅವರು ‘ನಾಗರತ್ನ ಜತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಜತೆಗೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದಿದ್ದರು. ಆದರೆ ನಾಗರತ್ನ ಮಾತ್ರ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ಹೇಳುತ್ತಿದ್ದರಂತೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ವಿರುದ್ಧ ಎಫ್‍ಐಆರ್

ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ

ಎಲ್ಲರಿಗೂ ತಿಳಿದಿರುವಂತೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಮಧ್ಯೆ ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿ, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದರು. ಆದರೆ , ಅಂತಿಮ ಕ್ಷಣದಲ್ಲಿ ಇಬ್ಬರು ಒಪ್ಪಂದ ಮಾಡಿಕೊಂಡು ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರು

ಅಂದು ಕೋರ್ಟ್ ನಲ್ಲಿ, ವಕೀಲರ ಮುಂದೆ ದುನಿಯಾ ವಿಜಿ ಮತ್ತು ನಾಗರತ್ನ ಅವರು ಒಪ್ಪಂದ ಮಾಡಿಕೊಂಡಿದ್ದರಂತೆ. ಅದನ್ನ ಸ್ವತಃ ವಿಜಯ್‌ ಅವರೇ ಹೇಳಿದ್ದಾರೆ. ತಂದೆ-ತಾಯಿಯನ್ನು ಚೆನ್ನಾಗಿ ನೋಡ್ಕೋಬೇಕು. ಮನೆಯಲ್ಲಿ ನೆಮ್ಮದಿಯಾಗಿರಬೇಕು ಎಂದು ಷರತ್ತು ವಿಧಿಸಿ ರಾಜಿಯಾಗಿದ್ದೆ. ಆದರೆ, ಅಲ್ಲಿಂದ ಬಂದ ಮೇಲೂ ನಮ್ಮ ಮಧ್ಯೆ ಬಾಂಧವ್ಯ ಸರಿಯಾಗಿಲ್ಲ. ಹಾಗಾಗಿ ಬೇರೆ ಹೋಗಲು ನಿರ್ಧರಿಸಿದೆ” ಎಂದು ನಟ ವಿಜಯ್‌ ಈ ಮುಂಚೆ ತಿಳಿಸಿದ್ದರು. ಆದರೆ ಡಿವೋರ್ಸ್‌ ನೀಡಲು ವಜಯ್‌ ಮುಂದಾಗಿರಲಿಲ್ಲ. ಬೇರೆ ಮದುವೆ ಆಗುವುದಾಗಿ ಹೇಳಿ, ಕೀರ್ತಿ ಗೌಡ ಅವರನ್ನ ವಿವಾಹ ಮಾಡಿಕೊಂಡು ವಿಜಯ್‌ ಜೀವನ ನಡೆಸುತ್ತಿದ್ದರು.

Continue Reading

ಸ್ಯಾಂಡಲ್ ವುಡ್

Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

Duniya Vijay: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

VISTARANEWS.COM


on

Duniya Vijay nagaratna Divorce case verdict to be announced
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಈಗ ಸಿನಿಮಾಕ್ಕಿಂತ ಡಿವೋರ್ಸ್‌ ಸುದ್ದಿಗಳೇ ಹೆಚ್ಚು. ಅಂತೆಯೇ ಇದೀಗ ನಟ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ವಿಚ್ಛೇದನ ತೀರ್ಪಿನ ಕುರಿತು ಕಾತರ ಹೆಚ್ಚಾಗಿದೆ. 2018ರಲ್ಲಿ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ (Duniya Vijay) ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದು ಗುರುವಾರ ಮಧ್ಯಾಹ್ಮ ಅಂತಿಮ ತೀರ್ಪು ಹೊರ ಬರಲಿದೆ ಎನ್ನಲಾಗಿದೆ. ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್‌ ದೂರವಾಗಿದ್ದಾರೆ. ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್‌ ಅವರು ‘ನಾಗರತ್ನ ಜತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಜತೆಗೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದಿದ್ದರು. ಆದರೆ ನಾಗರತ್ನ ಮಾತ್ರ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ಹೇಳುತ್ತಿದ್ದರಂತೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ವಿರುದ್ಧ ಎಫ್‍ಐಆರ್

ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

ಇದನ್ನೂ ಓದಿ: Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ

ಎಲ್ಲರಿಗೂ ತಿಳಿದಿರುವಂತೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಮಧ್ಯೆ ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿ, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದರು. ಆದರೆ , ಅಂತಿಮ ಕ್ಷಣದಲ್ಲಿ ಇಬ್ಬರು ಒಪ್ಪಂದ ಮಾಡಿಕೊಂಡು ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರು

ಅಂದು ಕೋರ್ಟ್ ನಲ್ಲಿ, ವಕೀಲರ ಮುಂದೆ ದುನಿಯಾ ವಿಜಿ ಮತ್ತು ನಾಗರತ್ನ ಅವರು ಒಪ್ಪಂದ ಮಾಡಿಕೊಂಡಿದ್ದರಂತೆ. ಅದನ್ನ ಸ್ವತಃ ವಿಜಯ್‌ ಅವರೇ ಹೇಳಿದ್ದಾರೆ. ತಂದೆ-ತಾಯಿಯನ್ನು ಚೆನ್ನಾಗಿ ನೋಡ್ಕೋಬೇಕು. ಮನೆಯಲ್ಲಿ ನೆಮ್ಮದಿಯಾಗಿರಬೇಕು ಎಂದು ಷರತ್ತು ವಿಧಿಸಿ ರಾಜಿಯಾಗಿದ್ದೆ. ಆದರೆ, ಅಲ್ಲಿಂದ ಬಂದ ಮೇಲೂ ನಮ್ಮ ಮಧ್ಯೆ ಬಾಂಧವ್ಯ ಸರಿಯಾಗಿಲ್ಲ. ಹಾಗಾಗಿ ಬೇರೆ ಹೋಗಲು ನಿರ್ಧರಿಸಿದೆ” ಎಂದು ನಟ ವಿಜಯ್‌ ಈ ಮುಂಚೆ ತಿಳಿಸಿದ್ದರು. ಆದರೆ ಡಿವೋರ್ಸ್‌ ನೀಡಲು ವಜಯ್‌ ಮುಂದಾಗಿರಲಿಲ್ಲ. ಬೇರೆ ಮದುವೆ ಆಗುವುದಾಗಿ ಹೇಳಿ, ಕೀರ್ತಿ ಗೌಡ ಅವರನ್ನ ವಿವಾಹ ಮಾಡಿಕೊಂಡು ವಿಜಯ್‌ ಜೀವನ ನಡೆಸುತ್ತಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

Actor Darshan: ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ನಿನ್ನೆಯಷ್ಟೇ ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

VISTARANEWS.COM


on

Actor Darshan Another Sandalwood actor arrested for supporting Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ (Actor Darshan). ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಗಾಬರಿಗೊಂಡ ದರ್ಶನ್‌ 30 ಲಕ್ಷ ರೂ. ನೀಡಿ ಬಾಡಿಯನ್ನು ಎಲ್ಲಾದರು ಬಿಸಾಕುವಂತೆ ಹೇಳುತ್ತಾರೆ. ಆಗ ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್‌ ದರ್ಶನ್‌ ಹೇಳಿದಾಗ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.

ಯಾರು ಈ ಪ್ರದೋಶ್‌?

ʻಬೃಂದಾವನʼ, ʻಬುಲ್ ಬುಲ್ʼ ಚಿತ್ರಗಳಲ್ಲಿ ಪ್ರದೋಶ್ ನಟಿಸಿದ್ದಾನೆ. ಇದಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದು, ಮಾತ್ರವಲ್ಲದೇ ಬಿಜೆಪಿ ಐಟಿ ವಿಭಾಗದಲ್ಲಿಯೂ ಕೆಲಸ ಮಾಡಿದ್ದ ಎಂದು ವರದಿಯಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?

ನಿನ್ನೆಯಷ್ಟೇ ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಭಾಗಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಮಹಿಳೆ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿ ಅನು ಎಂಬ ಮಹಿಳೆ ಎಸ್ಕೇಪ್‌ ಆಗಿದ್ದಾಳೆ. ಜಗದೀಶ್ @ ಜಗ್ಗ, ಅನು, ರವಿ, ರಾಜು ಎಂಬುವವರು ಸದ್ಯ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

Continue Reading
Advertisement
Maruti Suzuki
ಆಟೋಮೊಬೈಲ್38 mins ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ1 hour ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ1 hour ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು1 hour ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Joshimath Teshil Now Jyotirmath
ದೇಶ1 hour ago

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ATM Cash Withdrawal Fee
ವಾಣಿಜ್ಯ2 hours ago

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

Siddaramaiah
ಕರ್ನಾಟಕ2 hours ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

NEET UG Result 2024
ಶಿಕ್ಷಣ2 hours ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ3 hours ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್3 hours ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌